Author: News Desk Benkiyabale

ತುಮಕೂರು ನಗರದಲ್ಲಿರುವ ಅಕ್ಕಿ ಗಿರಣಿದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್.ಎಲ್.ರಮೇಶ್ ಬಾಬುರವರು ಪ್ರಸ್ತುತ ದಿನಗಳಲ್ಲಿ ವಿದ್ಯುತ್ ದರಗಳ ಹೆಚ್ಚಳದಿಂದ ಈಗಾಗಲೇ ಅಕ್ಕಿ ಗಿರಣಿದಾರರಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಈ ಹೆಚ್ಚಳದಿಂದ ಗಿರಣಿಗಳನ್ನು ನಡೆಸುವುದು ಕಷ್ಟಕರವಾಗಿದ್ದು, ಅಕ್ಕಿ ಗಿರಣಿಧಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಆದಷ್ಟು ಶೀಘ್ರವಾಗಿ ವಿದ್ಯುತ್ ದರಗಳ ಹೆಚ್ಚಳವನ್ನು ಹಿಂಪಡೆಯಬೇಕೆAದು ಒತ್ತಾಯಿಸಿದರು. ಜೊತೆಗೆ ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ನಿರ್ಧಾರದಂತೆ ಎ.ಪಿ.ಎಂ.ಸಿ. ಕಾಯ್ದೆಯನ್ನು ಪುನಃ ಹಿಂದಿನ ರೀತಿಯಂತೆ ತಿದ್ದುಪಡಿ ಮಾಡಲು ಹೊರಟಿರುವ ಸರ್ಕಾರದ ನಿರ್ಧಾರದಿಂದ ಅಕ್ಕಿಗಿರಣಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ ಇದರಿಂದ ಅಕ್ಕಿ ಗಿರಣಿ ಉದ್ಯಮಗಳು ತೀವ್ರತರವಾದ ತೊಂದರೆಗೆ ಸಿಲುಕುತ್ತದೆಂದರು. ಅಕ್ಕಿಗಿರಣಿದಾರರು ಕೃಷಿ ಮಾರುಕಟ್ಟೆಯ ಯಾವುದೇ ಸೌಕರ್ಯದ ಬಳಕೆ ಮಾಡುತ್ತಿಲ್ಲವಾದ್ದರಿಂದ ಅಕ್ಕಿಗಿರಣಿದಾರರನ್ನು ಸದರಿ ಕಾಯ್ದೆಯ ವ್ಯಾಪ್ತಿಯಿಂದ ಹೊರತುಪಡಿಸಬೇಕೆಂದು ಒತ್ತಾಯ ಮಾಡುತ್ತಿದ್ದೇವೆಂದರು. ಮುAದುವರೆದು ನಿಯಮಾನುಸಾರ ರೈತರು ಬೆಳೆದ ಭತ್ತವನ್ನು ರಾಜ್ಯದ ಯಾವುದೆ ಮಾರುಕಟ್ಟೆಗೆ ಕೊಂಡೊಯ್ಯಲು…

Read More

ತುಮಕೂರು ಕಂದಾಯ ನೌಕರರು, ಅಧಿಕಾರಿಗಳು ರೈತರ ಸಮೀಪ ಹೋಗಿ, ಕಚೇರಿಗೆ ಬರುವ ರೈತರನ್ನು ಗೌರವದಿಂದ ಕಂಡು ಅವರ ಕೆಲಸ ಮಾಡಿಕೊಡಿ. ರೈತರ ಸೇವೆ ಮಾಡುವ ಇಂತಹುದೊAದು ಅವಕಾಶವನ್ನು ಸರ್ಕಾರ ಕಲ್ಪಿಸಿದೆ ಎಂಬ ಭಾವನೆಯಿಂದ ಸೇವೆ ಮಾಡಿ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಹೇಳಿದರು. ಜಿಲ್ಲಾ ಕಂದಾಯ ಇಲಾಖಾ ನೌಕರರ ಸಂಘ ಹಾಗೂ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಶನಿವಾರ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕಂದಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಇತರೆ ಇಲಾಖೆಗಳಿಗೆ ಕಂದಾಯ ಇಲಾಖೆ ಮಾತೃ ಇಲಾಖೆ. ಸರ್ಕಾರದ ಬಹುತೇಕ ಯೋಜನೆಗಳ ಅನುಷ್ಠಾನ ಕಂದಾಯ ಇಲಾಖೆ ಮೂಲಕವೇ ಆಗಬೇಕಾಗಿದೆ. ಇಂತಹ ಮಹತ್ವದ ಇಲಾಖೆಯಲ್ಲಿ ಸಾರ್ವಜನಿಕರೊಂದಿಗೆ ಬೆರೆತು ಕೆಲಸ ಮಾಡಿ ಎಂದು ಹೇಳಿದರು. ಭೂಮಿ ಮತ್ತು ಭೂಮಿ ಆಡಳಿತ ನಿರ್ವಹಿಸುವ ಕಂದಾಯ ಇಲಾಖೆಯಲ್ಲಿ ಸಮಸ್ಯೆಗಳೂ ಜಾಸ್ತಿ ಇವೆ, ಇವುಗಳನ್ನು ನಿಭಾಯಿಸಿ ನಿರ್ವಹಿಸುವುದು ಅಧಿಕಾರಿಗಳು, ನೌಕರರಿಗೆ ಸವಾಲಿನ ಕೆಲಸ. ಕಾರ್ಯ ಒತ್ತಡ ಸಹಜವಾಗಿರುತ್ತದೆ. ತಪ್ಪುಗಳಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು…

Read More

ತುಮಕೂರು ಮಳೆ ಕೊರತೆ ಹಿನ್ನಲೆಯಲ್ಲಿ, ಕುಡಿಯುವ ನೀರಿನ ಅಭಾವ ಇರುವ ಹಳ್ಳಿಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ತಕ್ಷಣವೇ ಟಾಸ್ಕ್ಪೋರ್ಸ್ ಸಭೆ ನಡೆಸಿ, ಶಾಸಕರೊಂದಿಗೆ ಚರ್ಚಿಸಿ, ಕುಡಿಯುವ ನೀರು ಪೂರೈಕೆ ಸಂಬAಧ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ: ಜಿ. ಪರಮೇಶ್ವರ್ ಅವರು ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರಿಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ೨೦೨೨-೨೩ನೇ ಸಾಲಿನ ೪ನೇ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಾ, ಕೊಳವೆ ಬಾವಿ ಕೊರೆಸುವಿಕೆ, ಟ್ಯಾಂಕರ್ ಮೂಲಕ ನೀರು ಪೂರೈಸುವಿಕೆ ಮುಂತಾದ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದರು. ನಮ್ಮ ಸರ್ಕಾರ ಅಭಿವೃದ್ಧಿಯ ನಿಟ್ಟಿನಲ್ಲಿ ದೂರದೃಷ್ಟಿಯನ್ನು ಇಟ್ಟುಕೊಂಡಿದ್ದು, ಈ ಹಿನ್ನಲೆಯಲ್ಲಿ ನಿರ್ಲಕ್ಷತೆಗೆ ಅವಕಾಶವಿರುವುದಿಲ್ಲ. ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸರ್ಕಾರಿ ಕಾರ್ಯಕ್ರಮ ಅನುಷ್ಟಾನ ಮಾಡಬೇಕು. ಸಬೂಬು ಹೇಳುವ ಅಧಿಕಾರಿಗಳ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು. ಕಚೇರಿಗಳಲ್ಲಿ ಅಧಿಕಾರಿಗಳು ಇರುವಿಕೆ…

Read More

ತುಮಕೂರು   ಮುಸ್ಲಿಂ ಬಾಂಧವರ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿAದ ಆಚರಿಸಲಾಯಿತು. ಜಿಲ್ಲೆಯ ಕುಣಿಗಲ್, ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಮಧುಗಿರಿ, ಸಿರಾ, ಪಾವಗಡ ಹಾಗೂ ತುಮಕೂರು ತಾಲ್ಲೂಕಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿ, ಹೊಸ ಉಡುಪುಗಳನ್ನು ಧರಿಸಿ ಆಯಾ ತಾಲ್ಲೂಕು ಕೇಂದ್ರಗಳ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ ೯.೩೦ಕ್ಕೆ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಮಕ್ಕಾ ಮಸೀದಿ, ಈದ್ಗಾ ಮೊಹಲ್ಲಾ ಪಕ್ಕದಲ್ಲಿರುವ ಕೌಸರ್ ಮಸೀದಿ ಸೇರಿದಂತೆ ನಗರದ ವಿವಿಧ ಮಸೀದಿಗಳಲ್ಲೂ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಈದ್ಗಾ ಮೈದಾನಕ್ಕೆ ಡಿವೈಎಸ್ಪಿ ಶ್ರೀನಿವಾಸ್, ಇನ್ಸ್ಪೆಕ್ಟರ್‌ಗಳಾದ ನವೀನ್, ಕುಮಾರ್, ಡಾ. ನವೀನ್‌ಕುಮಾರ್ ಅವರು ಭೇಟಿ ನೀಡಿ ಮುಸ್ಲಿಂ ಸಮುದಾಯದ ಮುಖಂಡರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು. ಮುಖಂಡರಾದ ಇಕ್ಬಾಲ್…

Read More

ತುಮಕೂರು ನಗರದ ಶ್ರೀ ಸಿದ್ಧಿವಿನಾಯಕ ಸಮುದಾಯ ಭವನದಲ್ಲಿ ಮಂಗಳವಾರ ಗೋ ಆಧಾರಿತ ಕೃಷಿ ಹಾಗೂ ಸಾವಯವ ಕೃಷಿಯಿಂದ ರೈತರ ಅಭಿವೃದ್ಧಿ ಮತ್ತು ಪಂಚ ಮಹಾಭೂತಗಳ ಅರಿವು ಕಾರ್ಯಕ್ರಮ ನಡೆಯಿತು. ಗೋ ಆಧಾರಿತ ಕೃಷಿ ಕುರಿತು ಜಿಲ್ಲೆಯ ರೈತರೊಂದಿಗೆ ಮಹಾ ರಾಷ್ಟçದ ಕೊಲ್ಲಾಪುರ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಸಂವಾದ ನಡೆಸಿ ಮಾತನಾಡಿ ತಂತ್ರಜ್ಞಾನದ ಹೆಸರಿನಲ್ಲಿ ನಮ್ಮ ಮೂಲ ಕೃಷಿ ಪದ್ದತಿ ಕಡಿಮೆಯಾಗಿ ಇಂದು ನಾವು ತಿನ್ನುವ ಆಹಾರಗಳು ವಿಷಪೂರಿತ ವಾಗಿದೆ ಎಂದು ನುಡಿದರು. ನಮ್ಮ ದೇಶೀಯ ಸಂಸ್ಕೃತಿ ಪರಂಪರೆಗೆ ಹೆಚ್ಚಿನಒತ್ತು ನೀಡಬೇಕು, ಅನಾಧಿ ಕಾಲದಿಂದಲೂ ನಮ್ಮ ಪೂರ್ವಿಕರು ಗೋ ಆಧಾರಿತ ಕೃಷಿ ಪದ್ದತಿಗೆ ಹೆಚ್ಚಿನ ಒತ್ತು ನೀಡುತ್ತಿದ್ದರು, ಎಲ್ಲರಿಗೂ ಅನ್ನ ನೀಡುವ ರೈತ ಸಂಕಷ್ಟದಲ್ಲಿರುವ ಪರಿಸ್ಥಿತಿ ಬಂದಿದೆಎAದು ನುಡಿದರು. ರೈತರು ಕೃಷಿಗೆ ಒತ್ತು ನೀಡಬೇಕು, ಇಂದು ಕೃಷಿ ಮಾಡುವವರು ಕಡಿಮೆಯಾ ಗುತ್ತಿದ್ದಾರೆ, ಕೃಷಿ ಇಲ್ಲದೇ ಬದುಕುಇಲ್ಲ, ಕೃಷಿ ಯಲ್ಲಿರಾಸಾಯನಿಕ ಬಳಸದೇ ನಮ್ಮ ಸಾವಯವ ಕೃಷಿ ಮಾಡಬೇಕುರಾಸಾಯನಿಕ ಕೃಷಿಯಿಂದ ವಿಷಪೂರಿತ…

Read More

ತುಮಕೂರು ಅಜಾದಿ ಕಾ ಅಮೃತ ಮಹೋತ್ಸವದ ಕೊಡುಗೆಗಳಲ್ಲಿ ವಂದೇ ಭಾರತ್ ರೈಲು ಒಂದು. ಈ ರೈಲು ತುಮಕೂರು ಮೂಲಕ ಹಾದು ಹೋಗುತ್ತಿರುವುದು ನಮಗೆಲ್ಲಾ ಹೆಮ್ಮೆಯ ಸಂಗತಿ ಹಾಗೂ ವಂದೇಭಾರತ್ ರೈಲನ್ನು ಸ್ವಾಗತಿಸಲು ನಗರದ ಜನರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಸಿದ್ದಗಂಗಾ ಮಠದ ಅಧ್ಯಕ್ಷರಾದ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಹಿಂದಿನ ಕಾಲದಲ್ಲಿ ರೈಲುಗಳು ನಿಗಧಿತ ಸಮಯದಲ್ಲಿ ಬರುತ್ತಿರಲಿಲ್ಲ, ಆದರೇ ಇಂದು ರೈಲುಗಳು ಯಾವ ನಿಲ್ದಾಣಕ್ಕೆ ಎಸ್ಟು ಗಂಟೆಗೆ ತಲುಪುತ್ತವೆ ಎಂಬುವುದನ್ನು ಆ್ಯಪ್ ಮೂಲಕ ನೋಡಬಹುದಾಗಿದೆ ಎಂದರಲ್ಲದೇ ವಿಮಾನ ಪ್ರಯಾಣಕ್ಕಿಂತ ರೈಲು ಪ್ರಯಾಣ ಸುರಕ್ಷತೆ ಮತ್ತು ಸುಖಕರವಾಗಿರುತ್ತದೆ ಎಂದು ಹೇಳಿದರು. ಈ ಹಿಂದೆ ರೈಲಿನಲ್ಲಿ ಪ್ರಯಾಣ ಮಾಡಿ ನಿಲ್ದಾಣದಲ್ಲಿ ಸುಸಜ್ಜಿತವಾದ ಮೂಲಭುತ ಸೌಕರ್ಯಗಳು ಇರಲಿಲ್ಲ ಆದರೇ ಈ ಯಾವುದೇ ಸಮಸ್ಯೆಗಳು ರೈಲ್ವೇ ನಿಲ್ದಾಣಗಳಲ್ಲಿ ಇಲ್ಲ ಎಂದರು. ವಿಶ್ವಗುರು ಭಾರತ ಆಗುವ ಕನಸ್ಸನ್ನು ಮೋದಿಜಿ ಕಂಡಿದ್ದಾರೆ. ಅಮೆರಿಕಾದಲ್ಲಿ ದೇಶದ ಪ್ರಧಾನಿಗೆ ಸಿಕ್ಕ ಗೌರವವನ್ನು ಸ್ಮರಿಸಿದರು. ಜನಪ್ರತಿನಿಧಿಗಳ ಕರೆಗೆ ಒಗೂಟ್ಟು ಜನಪರ…

Read More

ತುಮಕೂರು ಗ್ರಾಮೀಣ ಸಹಭಾಗಿತ್ವ ಸಮೀಕ್ಷೆಯನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಹೆಚ್ಚು ಪ್ರಯೋಜನಕಾರಿ ಎಂದು ನಾಯಕತ್ವ ತರಬೇತುದಾರ ಸಿ. ಸಿ. ಪಾವಟೆ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜ ಕಾರ್ಯ ವಿಭಾಗವು ಬುಧವಾರ ಆಯೋಜಿಸಿದ್ದ ಗ್ರಾಮೀಣ ಸಮುದಾಯದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಹಾಗೂ ಇತರೆ ಕ್ಷೇತ್ರಗಳಲ್ಲಿ ಅಭಿವೃದ್ಧಿಗಾಗಿ ಪ್ರಾತ್ಯಕ್ಷಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಜನರ ಜ್ಞಾನ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಿ, ಅವಶ್ಯಕ ಮಾಹಿತಿಯನ್ನು ಕ್ರೋಢೀಕರಿಸುವ ಈ ವಿಧಾನ ಮಾರುಕಟ್ಟೆ ಕ್ಷೇತ್ರಕ್ಕೆ ಉಪಯೋಗವಾಗಿದೆ. ಇಲ್ಲಿ ಮಾಧ್ಯಮವು ಸಮಾಜ ಮತ್ತು ಉತ್ಪನ್ನಕಾರರ ನಡುವೆ ಸೇತುವೆಯಾಗಿ ಬಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಈ ಸಮೀಕ್ಷೆಯನ್ನು ಶೈಕ್ಷಣಿಕ ಮಟ್ಟದಲ್ಲೇ ಅಳವಡಿಸಿಕೊಂಡು, ಇದರ ಪ್ರಯೋಜನ ಪಡೆದರೆ ಪದವಿಯ ನಂತರ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಉಪಯುಕ್ತವಾಗಲಿದೆ ಎಂದರು. ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿಬಂತಿ ಪದ್ಮನಾಭ ಕೆ. ವಿ. ಮಾತನಾಡಿ, ಸಮಾಜಕಾರ್ಯ, ಸಮೂಹ ಮಾಧ್ಯಮ ಮತ್ತಿತರ ಮಾನವಿಕ ವಿಷಯಗಳು ಪರಸ್ಪರ ಸಂಬAಧವುಳ್ಳ ಕ್ಷೇತ್ರಗಳಾಗಿದ್ದು ಸಮಾಜದ ಅಭಿವೃದ್ಧಿಗೆ ಸಹಭಾಗಿತ್ವದಿಂದ ಕೆಲಸ…

Read More

ತುಮಕೂರು ನಗರದ ವಾರ್ಡ್ ನಂಬರ್ ೩೪ ರ ಎಳ್ಳರಬಂಡೆ ಮತ್ತು ಸತ್ಯಮಂಗಲ ಕೊಳಚೆ ಪ್ರದೇಶಗಳು ಸೇರಿದಂತೆ ಶಿರಾ ನಗರದ ರಬ್‌ನಗರ, ಕೋಟೆ ಸ್ಲಂ, ಶಿವಾಜಿ ನಗರ ಭಾಗ-೨ ಸ್ಲಂಗಳನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾಯಿದೆ ೧೯೭೩ರ ಕಲಂ-೩ ರಡಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಈಗಾಗಲೇ ಕಲಂ-೩ ಪ್ರಾಥಮಿಕದಲ್ಲಿ ಘೋಷಣೆಯಾಗಿರುವ ಕೊಳಚೆ ಪ್ರದೇಶಗಳಾದ ಎಸ್,ಎನ್ ಪಾಳ್ಯ, ಮತ್ತು ಅರಳೀಮರದ ಪಾಳ್ಯ ಕಾಲೋನಿಯನ್ನು ಕಲಂ-೩ ಅಂತಿಮದಲ್ಲಿ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು. ಕೋಡಿಹಳ್ಳದಲ್ಲಿರುವ ೩೦ ಕುಟುಂಬಗಳನ್ನು ಮತ್ತು ಇಸ್ಮಾಯಿಲ್ ನಗರದ ಹಂದಿಜೋಗಿ ೩೫ ಕುಟುಂಬಗಳನ್ನು ಪುನರ್‌ವಸತಿಗೊಳಿಸಲಾಗುವುದು. ಹಾಗೂ ದಿಬ್ಬೂರು ದೇವರಾಜ್ ಅರಸು ಬಡಾವಣೆ, ಘೋಷಿತ ಕೊಳಚೆ ಪ್ರದೇಶಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನಗರಪಾಲಿಕೆಯಿಂದ ಕಲ್ಪಿಸಿಕೊಡಲು ಆಯುಕ್ತರು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಸ್ಲಂ ನಿವಾಸಿಗಳ ನಿರಂತರ ಹೋರಾಟದಿಂದ ೧೭ ಎಕರೆ ಭೂಮಿಯನ್ನು ನಿವೇಶನ ರಹಿತರಿಗೆ ನೀಡಬೇಕೆಂದು ಹಿಂದಿನ ಜಿಲ್ಲಾಧಿಕಾರಿಗಳು ತುಮಕೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದ್ದು ವಿಶೇಷ ಪ್ರವರ್ಗದಲ್ಲಿರುವ ೪೦೦ ಒಂಟಿ ಮಹಿಳೆಯರಿಗೆ ನಿವೇಶನ…

Read More

ಪಾವಗಡ ಪಟ್ಟಣದ ಅಗಸರಕುಂಟೆ ಕೆರೆಯನ್ನು ವೀಕ್ಷಿಸಲು ಹೋಗಿ ಕಾಲು ಜಾರಿ ಬಿದ್ದು ೧೪ ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಪಟ್ಟಣದ ವಾಸಿ ರಮೇಶ್ ಮತ್ತು ಅಪರ್ಣಾ ದಂಪತಿಯ ಮಗ ಉಜ್ವಲ (೧೪) ಮೃತಪಟ್ಟ ದುದೈವಿಯಾಗಿದ್ದಾನೆ. ಆಟ ಆಡಲು ಹೋಗಿದ್ದಾರೆ ಎಂದು ತಿಳಿದ ಪೋಷಕರು ಮಕ್ಕಳು ಮನೆಗೆ ಬಾರದ ಕಾರಣ ಅಗಸರಕುಂಟೆ ಬಳಿ ಮಗಳು ಅಳುತ್ತಿದ್ದದ್ದು ಕಂಡು ಬಂದ ಹಿನ್ನಲೆ ಕೇಳಿದಾಗ ಉಜ್ವಲ್ ನೀರಿನಲ್ಲಿ ಬಿದ್ದಿರುವ ವಿಷಯ ತಿಳಿದುಬಂದಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಾಯದಿಂದ ಉಜ್ವಲ್ ಮೃತದೇಹ ಹೊರತೆಗೆದಿದ್ದಾರೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಇಂತಹ ಪ್ರಕರಣಗಳು ಸಂಭವಿಸಿದರು ಸಹ ಪುರಸಭೆ ಅಧಿಕಾರಿಗಳು ಗಾಡ ನಿದ್ರೆಗೆ ಜಾರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Read More

ಹರೀಶ್ ಬಾಬು ಬಿ. ಹೆಚ್  ಕೊರಟಗೆರೆ ಸಾರ್ವಜನಿಕ ದೂರಿನ ಮೇರೆಗೆ ಕಷ್ಟಕರ ಜೀವನ ಸಾಗಿಸುತ್ತಿದ್ದ ವೃದ್ಧೆಯ ಮನೆಗೆ ಭೇಟಿನೀಡಿ ತ್ವರಿತವಾಗಿ ಮೂಲಭೂತ ಸೌಕರ್ಯ ಹಾಗೂ ಮನೆ ಮಂಜೂರು ಮಾಡಲು ಸಂಬAದಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದ ತಹಶಿಲ್ದಾರ್. ಪಟ್ಟಣದ ೫ನೇ ವಾರ್ಡ್ ನ ನಿವಾಸಿಯಾದ ಯರಕ್ಕ ಎಂಬ ೮೦ವರ್ಷದ ವೃದ್ದೆ ಅಳಿವಿನಂಚಿನಲ್ಲಿರುವ ಮನೆಯಲ್ಲಿಯೇ ವಾಸ ಮಾಡಿಕೊಂಡು ಕಷ್ಟಕರವಾದ ಜೀವನ ಮಾಡುತ್ತಿದೆ ಎಂಬ ಮಾಹಿತಿ ತಿಳಿದ ತಕ್ಷಣ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ವೃದ್ದೆಗೆ ಮನೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪಂಚಾಯಿತಿ ಮುಖ್ಯಾಧಿಕಾರಿಗೆ ಸೂಚಿಸಿ ನಿರಾಶ್ರಿತರ ಅಜ್ಜಿಗೆ ಆಶ್ರಯ ನೀಡುವ ಭರವಸೆ ನೀಡಿದರು. ಸುಮಾರು ೮೦ವರ್ಷ ವಯಸ್ಸದ ವೃದ್ಧೆ ಯರಕ್ಕ ದುಸ್ಥಿತಿಯಲ್ಲಿದ್ದ ಮನೆಗೆ ಖುದ್ದು ತಹಶಿಲ್ದಾರ್ ಮುನಿಶಾಮಿರೆಡ್ಡಿ ಭೇಟಿನೀಡಿ ಅಜ್ಜಿಯ ಕಷ್ಟಗಳನ್ನು ಆಲಿಸಿ ಅವರಿಗೆ ವಿದ್ಯುತ್, ಕುಡಿಯುವನೀರು, ಸೇರಿದಂತೆ ಮನೆ ಮಂಜೂರು ಮಾಡಿಕೊಡಲು ಪ.ಪಂ ಅಧಿಕಾರಿಗೆ ಸೂಚಿಸಿ ನಂತರ ಪಡಿತರ ಚೀಟಿ ಕಳೆದು ಹೋಗಿದೆ ಎಂದು ಕಂಗಾಲಾಗಿದ್ದ ವೃದ್ಧೆಗೆ ದಿನಸಿ ಸಾಮಾಗ್ರಿಗಳನ್ನು ಒದಗಿಸಿ…

Read More