ತುಮಕೂರು ನಗರದ ರೇವತಿ ನೃತ್ಯ ಕಲಾಮಂದಿರ(ರಿ) ತುಮಕೂರು ಇದರ ೧೪ನೇ ವರ್ಷದ ಆಚಾರ್ಯ ನೃತ್ಯೋತ್ಸವ ಕಾರ್ಯಕ್ರಮ ಆಗಸ್ಟ್ ೦೫ರ ಸಂಜೆ ೪:೩೦ಕ್ಕೆ ಬಾಳನಕಟ್ಟೆಯ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ರೇವತಿ ನೃತ್ಯ ಕಲಾಮಂದಿರದ ಕಾರ್ಯದರ್ಶಿ ಸಹನಾ ಒಹಿಲೇಶ್ವರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೧೪ ವರ್ಷಗಳಿಂದ ತುಮಕೂರು ನಗರದ ಶಿರಾಗೇಟ್ ಮತ್ತು ವಿದ್ಯಾನಗರ,ಗುಬ್ಬಿಯಲ್ಲಿ ಶಾಖೆಗಳನ್ನು ತೆರದು ಭರತನಾಟ್ಯ ಮತ್ತು ಶಾಸ್ತಿçÃಯ ಸಂಗೀತವನ್ನು ಕಲಿಸುತ್ತಿರುವ ರೇವತಿ ನೃತ್ಯ ಕಲಾಮಂದಿ,ಪ್ರತಿವರ್ಷ ಪೌರಾಣಿಕ ಹಿನ್ನೆಲೆಯುಳ್ಳು ಕಥಾವಸ್ತುಗಳನ್ನು ಆಯ್ಕೆ ಮಾಡಿಕೊಂಡು ಮಕ್ಕಳಿಂದ ಆಚಾರ್ಯ ನೃತ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಿಕೊಂಡು ಬರಲಾಗುತ್ತಿದೆ.ಕಳೆದ ವರ್ಷ ಸರ್ವಂ ಶಿವಂಮಯ ಎಂಬ ನೃತ್ಯ ರೂಪಕ ಪ್ರಸ್ತುತ ಪಡಿಸಲಾಗಿತ್ತು.ಈ ವರ್ಷ ಶ್ರೀನಿವಾಸ ಕಲ್ಯಾಣ ಎಂಬ ಕಥಾವಸ್ತುವನ್ನು ಒಳಗೊಂಡ ಸುಮಾರು ೧;೩೦ ಗಂಟೆಗಳ ಕಾಲದ ನೃತ್ಯ ಕಾರ್ಯಕ್ರಮಗಳ ನಡೆಯಲಿದೆ ಎಂದರು. ಆಗಸ್ಟ್ ೦೫ರ ಸಂಜೆ ೪:೩೦ಕ್ಕೆ ರೇವತಿ ನೃತ್ಯ ಕಲಾಮಂದಿರದ ನಾಲ್ಕುವರೆ ವರ್ಷದಿಂದ ನಲವತ್ತು ವರ್ಷದ ವರೆಗಿನ ಸುಮಾರು ೨೫೦ ಮಕ್ಕಳಿಂದ ನಟರಾಜ ಪೂಜೆಯೊಂದಿಗೆ ಆರಂಭವಾಗುವ…
Author: News Desk Benkiyabale
ತುಮಕೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ “ಕರಾಮುವಿ ಶೈಕ್ಷಣಿಕ ಜಾಗೃತಿ ಪ್ರಚಾರ ಆಂದೋಲನ ವಾಹನಕ್ಕೆ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ನಗರದ ಸಿದ್ದಗಂಗಾ ಮಠದಲ್ಲಿ ಚಾಲನೆ ನೀಡಿದರು. ಉನ್ನತ ಶಿಕ್ಷಣ ಮನೆ ಬಾಗಿಲಿಗೆ ನೀಡಲು ಕರಾಮುವಿಯ ಕುಲಪತಿ ಪ್ರೊ. ಶರಣಪ್ಪ.ವಿ. ಹಲಸೆ ಹಾಗೂ ಕುಲಸಚಿವರಾದ ಪ್ರೊ.ಕೆ.ಎಲ್.ಎನ್. ಮೂರ್ತಿ ರವರ ಮಾರ್ಗದರ್ಶನದಲ್ಲಿ ರಾಜ್ಯದಾದ್ಯಂತ ಕರಾಮುವಿಯು ಉನ್ನತ ಶಿಕ್ಷಣದ ಅವಕಾಶಗಳ ಬಗ್ಗೆ ಅರಿವು ಮೂಡಿಸುತ್ತಿರುವ ಕರಾಮುವಿ ಶೈಕ್ಷಣಿಕ ಜಾಗೃತಿ ಪ್ರಚಾರ ಆಂದೋಲನ ವಾಹನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಶ್ರೀಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿವಿಧ ಕಾರಣಗಳಿಂದ ಉನ್ನತ ಶಿಕ್ಷಣದಿಂದ ವಂಚಿತರಾದ ಸಮಾಜದ ವಿವಿಧ ವರ್ಗದ ಜನರಿಗೆ ವಿದ್ಯಾಭ್ಯಾಸ ಮುಂದುವರಿಸಲು, ಉದ್ಯೋಗಸ್ಥ ಜನರಿಗೆ, ಅಂಗವಿಕಲರಿಗೆ, ಮಹಿಳೆಯರಿಗೆ, ಜ್ಞಾನಾರ್ಜನೆ ಬಯಸುವ ಜನರಿಗೆ ಮನೆ ಬಾಗಿಲಿಗೆ ಕಡಿಮೆ ಶೈಕ್ಷಣಿಕ ವೆಚ್ಚದಲ್ಲಿ ಉತ್ತಮ ಶಿಕ್ಷಣ ನೀಡಲು ಶ್ರಮಿಸುತ್ತಿದ್ದು, ಈ ಸುವರ್ಣಾವಕಾಶವನ್ನು ತುಮಕೂರು ಜಿಲ್ಲಾ ವ್ಯಾಪ್ತಿಯ ಉದ್ಯೋಗಾಕಾಂಕ್ಷಿಗಳು ಮತ್ತು ವಿದ್ಯಾಸಕ್ತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.…
ಹುಳಿಯಾರು ಹುಟ್ಟಿದ ಮಗುವಿಗೆ ತಾಯಿಯ ಎದೆಹಾಲು ಮುಖ್ಯವಾಗಿದೆ, ಮೊದಲು ಬರುವ ಹಳದಿ ವರ್ಣದ ಗಟ್ಟಿಹಾಲು ಮಗುವಿಗೆ ಮೊದಲ ಲಸಿಕೆ ಇದ್ದಂತೆ. ಕೊಲೊಸ್ಟೊçÃಮ್ನಲ್ಲಿ ಪೌಷ್ಟಿಕಾಂಶ ಉತ್ಕöÈಷ್ಟವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೊಂದಿರುತ್ತದೆ. ಮುಂಬರುವ ದೀರ್ಘಕಾಲಿನ ಕಾಯಿಲೆಗಳನ್ನು ತಡೆಗಟ್ಟುತ್ತದೆ. ಮಗುವಿನ ಜಠರ ಸ್ವಚ್ಛವಾಗುತ್ತದೆ. ೬ ತಿಂಗಳು ತುಂಬುವವರೆಗೂ ಕೇವಲ ಎದೆಹಾಲನ್ನೇ ಕೊಡಬೇಕು. ಎದೆಹಾಲನ್ನು ಹೊರತುಪಡಿಸಿ ಹರಳೆಣ್ಣೆ, ಜೇನುತುಪ್ಪ, ಪೌಡರ್ ಹಾಲು ಕೊಡಬಾರದು ಎಂದು ಹುಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಚಂದನಾ ಅವರು ತಿಳಿಸಿದರು. ಹುಳಿಯಾರು ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಗುವಿಗೆ ಎದೆ ಹಾಲು ನೀಡುವುದು ಪ್ರತಿಯೊಬ್ಬ ತಾಯಿಯ ಕರ್ತವ್ಯವಾಗಿದೆ. ಕೆಲವೊಬ್ಬರು ತಮ್ಮ ಸೌಂದರ್ಯ ಹಾಳಾಗುತ್ತದೆ ಎಂದು ಎದೆ ಹಾಲು ಕುಡಿಸುವುದನ್ನು ಬಿಡುತ್ತಾರೆ. ಆದರೆ ಹಾಗೆ ಮಾಡುವುದು ಸರಿಯಾದ ಕ್ರಮವಲ್ಲ. ಹೆರಿಗೆಯಾದ ಒಂದು ಗಂಟೆಯೊಳಗೆ ಮಗುವಿಗೆ ತಾಯಿಯ ಎದೆ ಹಾಲುಣಿಸಬೇಕು. ತಾಯಿಯು ೬…
ಚಿಕ್ಕನಾಯಕನಹಳ್ಳಿ ಗ್ರಾಮೀಣ ಭಾಗದ ಪ್ರತಿಯೊಬ್ಬ ವ್ಯಕ್ತಿಗೆ ಸರ್ಕಾರದಿಂದ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಜಲ ಜೀವನ್ ಮಿಷನ್ ( ಜೆಜೆಎಂ) ಮತ್ತು ಸ್ವಚ್ಛ ಭಾರತ್ ಮಿಷನ್ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮಾನ್ಯ ಶಾಸಕರಾದ ಸುರೇಶ್ ಬಾಬು ಅವರು ಸೂಚಿಸಿದರು. ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರದಂದು (೦೩-೦೮-೨೦೨೩) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ , ತುಮಕೂರು ವಿಭಾಗ, ಜಲ ಜೀವನ್ ಮಿಷನ್ (ಜೆಜೆಎಂ) ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆಯಾದ “ಸ್ನೇಹ ಜೀವನ ಫೌಂಡೇಷನ್ (ರಿ) ಸಹಯೋಗದೊಂದಿಗೆ “ ನೀರು ಮತ್ತು ನೈರ್ಮಲ್ಯ ಕುರಿತು ಕಾರ್ಯಗಾರ”ರ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಈ ಯೋಜನೆ ಅಂಶಗಳ ಅನುಗುಣವಾಗಿ ಸಂಬAಧಿಸಿದ ಅಧ್ಯಕ್ಷರು ಹಾಗೂ ಪಂಚಾಯತಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು. ತಾಲ್ಲೂಕು ಪಂಚಾಯತ್ , ಕಾರ್ಯನಿರ್ವಾಹಕ ಅಧಿಕಾರಿಗಳಾದ ವಸಂತ್ ಕುಮಾರ್ ಅವರು ಮಾತನಾಡಿ, ಜಲಜೀವನ್ ಮಿಷನ್ ಎಂಬುದು ಮಹತ್ವಾಕಾಂಕ್ಷೆ ಹೊಂದಿರುವ ಯೋಜನೆಯಾಗಿದೆ. ಮೊದಲ…
ಆರ್. ರೂಪಕಲಾ ವಾರ್ತಾ ಇಲಾಖೆ, ತುಮಕೂರು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಲು ಮಹಿಳಾ ಪ್ರಯಾಣಿಕರಿಗಾಗಿ ಜೂನ್ ೧೧ ರಿಂದ ಜಾರಿಗೆ ತಂದಿರುವ ಮಹತ್ವಪೂರ್ಣ ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ತುಮಕೂರು ವಿಭಾಗವು ೨೪.೪೨ ಕೋಟಿ ರೂ. ಆದಾಯವನ್ನು ಗಳಿಸಿದೆ. ೨ ತಿಂಗಳಲ್ಲಿ ೨೪ ಕೋಟಿ ರೂ. ಆದಾಯ ಯೋಜನೆ ಜಾರಿಗೊಂಡ ದಿನದಿಂದ ಜೂನ್ ಮಾಹೆಯಲ್ಲಿ ನಿರ್ವಾಹಕರು ವಿತರಿಸಿರುವ ಶೂನ್ಯ(೦) ಟಿಕೇಟ್ಗಳಿಂದ ತುಮಕೂರು ವಿಭಾಗದ ವಾಹನಗಳಲ್ಲಿ ೨೯.೭೩ ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಸುಮಾರು ೮,೩೨,೯೯,೪೬೪ ರೂ.ಗಳಷ್ಟು ಸಾರಿಗೆ ಆದಾಯ ಹಾಗೂ ಜುಲೈ ಮಾಹೆಯಲ್ಲಿ ೫೭.೯೭ ಲಕ್ಷ ಮಹಿಳೆಯರು ಪ್ರಯಾಣಿಸಿದ್ದು, ಸುಮಾರು ೧೬,೦೯,೫೯,೪೬೦ ರೂ.ಗಳಷ್ಟು ಸಾರಿಗೆ ಆದಾಯ ಬಂದಿದೆ. ಒಟ್ಟಾರೆ ಜೂನ್ ಮತ್ತು ಜುಲೈ ಮಾಹೆಯಲ್ಲಿ ೮೭.೭೧ ಲಕ್ಷ ಮಹಿಳೆಯರು ಬಸ್ಸುಗಳಲ್ಲಿ ಪ್ರಯಾಣಿಸಿ ನಿಗಮಕ್ಕೆ ೨೪,೪೨,೫೮,೯೨೪ ರೂ.ಗಳಷ್ಟು ಆದಾಯ ತಂದುಕೊಟ್ಟಿದ್ದಾರೆ. ಯೋಜನೆ ಜಾರಿಗೆ ಬರುವ ಮುನ್ನ ಪ್ರತಿ ಮಾಹೆ ನಿಗಮಕ್ಕೆ ಪ್ರತೀ…
ತುಮಕೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಜಿಲ್ಲೆಯಾದ್ಯಂತ ಸೆಪ್ಟಂಬರ್ ೧೧ ರಂದು ರಾಷ್ಟಿçÃಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ ಅವರು ತಿಳಿಸಿದರು. ಉಚ್ಚ ನ್ಯಾಯಾಲದ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ನ್ಯಾ.ಜಿ,ನರೇಂದರ್ ಇವರ ನಿರ್ದೇಶನಂತೆ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ರಾಷ್ಟೀಯ ಜನತಾ ನ್ಯಾಯಾಲಯದ ಪ್ರಯುಕ್ತ ಇಂದು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಪ್ರಾಚೀನ ಭಾರತ ಸಂಸ್ಕೃತಿಯಲ್ಲಿ ಲೋಕ ಆದಾಲತ್ ಪರಿಕಲ್ಪನೆ ಮೂಲ ಹುಡುಕಬಹುದಾಗಿದ್ದು, ಅಂದು ದೇಶದ ಎಲ್ಲಾ ಗ್ರಾಮಗಳಲ್ಲಿ ಪಂಚಾಯಿತಿ ವ್ಯವಸ್ಥೆ ಮೂಲಕ ಯಾವುದೇ ಶುಲ್ಕವಿಲ್ಲದೆ ತ್ವರಿತವಾಗಿ ತೀರ್ಪುಗಳನ್ನು ನೀಡಲಾಗುತ್ತಿತ್ತು, ಈ ವ್ಯವಸ್ಥೆ ಇಂದು ಕಾನೂನು ರೂಪ ಪಡೆದಿದೆ ಎಂದರು. ಸೆಪ್ಟಂಬರ್ ೧೧ ರಂದು ನಡೆಯುವ ಲೋಕ…
ತುಮಕೂರು ತುಮಕೂರು ಮೂಲಕ ಹಾದುಹೋಗುವ ಬೆಂಗಳೂರು-ಪುಣೆ ಮಾರ್ಗದ ನಡುವಿನ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಕಳೆದ ಒಂದು ವರ್ಷದಲ್ಲಿ ೭೫೦ಕ್ಕೂ ಹೆಚ್ಚು ಅಪಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ರಸ್ತೆ ವೀಕ್ಷಿಸಿದರು. ತುಮಕೂರು ಜಿಲ್ಲೆಯಲ್ಲಿ ಸಂಚಾರ ವ್ಯವಸ್ಥೆಯ ಬಗ್ಗೆ ಸಾಕಷ್ಟು ದೂರುಗಳಿರುವ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಗೆ ಭೇಟಿ ನೀಡಿರುವ ಅವರು, ಪೊಲೀಸರಿಗೆ ಮಾರ್ಗದರ್ಶನ ನೀಡಿದರು. ದಂಡ ವಸೂಲಿಯೇ ಪ್ರಮುಖ ಕರ್ತವ್ಯವಾಗದೆ ಅಪಘಾತ ಪ್ರಕರಣಗಳನ್ನು ಕಡಿಮೆಯಾಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಪೊಲೀಸ್ ಅಧೀಕ್ಷಕ ರಾಹುಲ್ಕುಮಾರ್ ಷಹಪುರವಾಡ್ ಇದ್ದರು.
ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪಣತೊಟ್ಟಿರುವ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ರವರು ಜಿಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಎಂ.ಜಿ.ರಸ್ತೆಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಬಾಳನಕಟ್ಟೆಯ ಹತ್ತಿರವಿರುವ ಬಾಬು ಜಗಜೀವನ ರಾಮ್ ಕಟ್ಟಡ ನಿವೇಶನಕ್ಕೆ ಸಂಬAಧಿಸಿದAತೆ ಸ್ಥಳ ಪರಿವೀಕ್ಷಣೆಗಾಗಿ ಖುದ್ದು ಭೇಟಿ ನೀಡಿ ಇಲ್ಲಿನ ವಾಸ್ತವ ಸ್ಥಿತಿಯನ್ನು ತಿಳಿದುಕೊಂಡರು. ಡಾ. ಬಾಬು ಜಗಜೀವನ್ ರಾಮ್ ಕಟ್ಟಡ ನಿವೇಶನಕ್ಕೆ ಸಂಬAಧಿಸಿದAತೆ ಪ್ರಸ್ತುತ ನ್ಯಾಯಾಲಯದಲ್ಲಿ ಹೂಡಿರುವ ಪ್ರಕರಣ ಸಂಬAಧ ಅಗತ್ಯ ಕ್ರಮವಹಿಸುವಂತೆ ಪಾಲಿಕೆಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರಲ್ಲದೇ ಕಳೆದ ಹತ್ತಾರು ವರ್ಷಗಳಿಂದ ಇಲ್ಲಿ ಕಸ ಹಾಕುತ್ತಾ ಬಂದಿದ್ದು ಇದೊಂದು ಡಂಪಿAಗ್ ಯಾರ್ಡ್ ರೀತಿ ಮಾರ್ಪಾಡು ಆಗಿದೆ, ಇದು ಸ್ಮಾರ್ಟ್ ಸಿಟಿಯೋ ಗಬ್ಬು ಸಿಟಿಯೋ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು ಅಲ್ಲದೇ ಇನ್ನು ಮುಂದೆ ಇಲ್ಲಿ ಯಾರೂ ಸಹ ಕಸವನ್ನು ಸುರಿಯಬಾರದು ಕಸ ಸುರಿಯುವವರಿಗೆ ದಂಡ ವಿಧಿಸುವುದಲ್ಲದೇ ಕ್ರಿಮಿನಲ್ ಕೇಸ್ನ್ನು ದಾಖಲಿಸುವಂತೆ ಸಲಹೆ ನೀಡಿದರು. ನಗರದ ಹೃದಯ ಭಾಗವಾದ ಈ ಸ್ಥಳದಲ್ಲಿ ಬಹಳ ವರ್ಷಗಳಿಂದಲೂ ರಾಶಿಯಾಗಿ ಬಿದ್ದಿರುವ…
ತುಮಕೂರು ಭಾರತದ ಒಟ್ಟು ಜನಸಂಖ್ಯೆಯಲ್ಲಿ ಹೆಚ್ಚಿನ ಜನರು ಗ್ರಾಮೀಣ ಭಾಗದಲ್ಲಿ ವಾಸಿಸುತ್ತಾರೆ. ಆದ್ದರಿಂದ ಗ್ರಾಮೀಣ ಭಾಗವು ಅಭಿವೃದ್ದಿ ಹೊಂದುವ ಮೂಲಕ ಅಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿದಾಗ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು. ಕೊರಟಗೆರೆ ತಾಲ್ಲೂಕು ಕೋಳಾಲ ಗ್ರಾಮದ ಬಸವೇಶ್ವರ ಕೇಂದ್ರೀಯ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿದ ಅವರು, ಪೋಷಕರು ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದಾಗ ಮಾತ್ರ ಅವರು ತಮ್ಮ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದರು. ರಾಜ್ಯದಲ್ಲಿರುವ ಎಲ್ಲಾ ಮಠಗಳ ಮಠಾಧೀಶರು ಮಠದೊಂದಿಗೆ ವಿದ್ಯಾ ಸಂಸ್ಥೆಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ತ್ರಿವಿಧ ದಾಸೋಹಕ್ಕೆ ಹೆಸರಾದ ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ, ವಸತಿ ಹಾಗೂ ಅನ್ನವನ್ನು…
ತುಮಕೂರು ಉಡುಪಿಯ ನೇತ್ರಾವತಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬೆತ್ತಲೆ ವಿಡಿಯೋ ಪ್ರಕರಣದ ಬಗ್ಗೆ ಸರಕಾರದಿಂದ ನ್ಯಾಯ ಕೇಳಿ ಟ್ವಿಟ್ ಮಾಡಿದ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ತುಮಕೂರು ನಗರ ಶಾಸಕ ಜೋತಿ ಗಣೇಶ್ ಆರೋಪಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ಐಟಿ ಸೇಲ್ ಸದಸ್ಯೆ ಶಕುಂತಲ ನಟರಾಜ್ ಅವರನ್ನು ಟ್ವೀಟರ್ ಕಾಮೆಂಟ್ ಗೋಸ್ಕರ್ ಬಂಧಿಸಿರುವ ಘಟನೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಹಾಗೂ ರಸ್ತೆ ತಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ನ್ಯಾಯ ಕೇಳಿದವರನ್ನು ಬಂಧಿಸುವ ಮೂಲಕ ವಿರೋಧಪಕ್ಷಗಳ ಬಾಯಿ ಮುಚ್ಚಿಸುವ ಕೆಲಸ ಮಾಡಲು ಹೊರಟಿದೆ.ಈ ನಡವಳಿಗೆ ಸರಿಯಲ್ಲ ಎಂದರು. ಉಡುಪಿ ನೇತ್ರಾವತಿ ನರ್ಸಿಂಗ್ ಕಾಲೇಜಿನ ಘಟನೆಯ ಹಿಂದೆ ದೊಡ್ಡ ಷಡ್ಯಂತ್ರವಿದೆ.ಕೇರಳ ಫೈಲ್ ಸಿನಿಮಾವೇ ಇದಕ್ಕೆ ಉದಾಹರಣೆ.ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ ಅವರು ತಪ್ಪು ಮಾಡಿದ್ದಾರೆ ಎಂದಾದರೆ ಪೊಲೀಸರು ಅರೆಸ್ಟ್ ವಾರೆಂಟ್ ತರದೆ,ಮುಪ್ತಿಯಲ್ಲಿ ಬಂಧಿಸುವ ಅಗತ್ಯವೆನಿತ್ತು ಎಂದು ಪ್ರಶ್ನಿಸಿದ ಜೋತಿಗಣೇಶ್,ಮುಖ್ಯಮಂತ್ರಿಗಳು…











