ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹೆಬ್ಬೂರು ಗ್ರಾಮ ಪಂಚಾಯತಿಯ ಮತಗಟ್ಟೆ ಕೇಂದ್ರದಲ್ಲಿ ಧ್ವಜಾರೋಹಣ ನೆರೆವೇರಿಸಿ ‘ನಮ್ಮ ನಡೆ ಮತಗಟ್ಟೆ ತೋರಿಸುವ ಕಡೆ’ ಎಂಬ ಅಭಿಯಾನದ ಮುಖಾಂತರ ಮತದಾನದ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮನೆ ಮನೆ ಭೇಟಿ ವೇಳೆಯಲ್ಲಿ ವಿಶೇಷಚೇತನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಗಟ್ಟಿಗೊಳ್ಳಲು ಎಲ್ಲರ ಸಹಕಾರ ಅತ್ಯಗತ್ಯ, ವಯೋವೃದ್ದರು, ವಿಕಲಚೇತನ ಮತದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು. ಮತದಾನವು ಪ್ರಜಾಪ್ರಭುತ್ವದ ಶ್ರೇಷ್ಠ ದಾನವಾಗಿದ್ದು, ಪ್ರತಿಯೊಬ್ಬರು ತಮ್ಮ ಮತವನ್ನು ಚಲಾಯಿಸುವ ಮುಖಾಂತರ ಮತದಾನ ಹಬ್ಬಕ್ಕೆ ಎಲ್ಲರೂ ಕೈ ಜೋಡಿಸಬೇಕು ಹಾಗೂ ಯಾವುದೇ ಹಣ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಬೇಕು, ‘ಪ್ರತಿ ಶತ ಮತದಾನ ತುಮಕೂರು ಜಿಲ್ಲೆಯ ವಾಗ್ದಾನ’ ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲರೂ…
Author: News Desk Benkiyabale
ಗುಬ್ಬಿ ಗುಬ್ಬಿಯಲ್ಲಿ ಎಸ್ ಡಿ ದಿಲೀಪ್ ಕುಮಾರ್ ಶಾಸಕರಾಗುವ ಮೂಲಕ ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ತಿಳಿಸಿದರು. ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಬಸ್ ನಿಲ್ದಾಣದವರೆಗೆ ಬಿಜೆಪಿ ಅಭ್ಯರ್ಥಿ ಎಸ್ ಡಿ ದಿಲೀಪ್ ಕುಮಾರ್ ಪರವಾಗಿ ರೋಡ್ ಶೋ ಮಾಡಿ ಮತಯಾಚನೆ ಮಾಡಿ ಮಾತನಾಡಿದರು. ಮುಸ್ಲಿಮರಿಗಿದಂತಹ ಶೇ4 ಮೀಸಲಾತಿಯನ್ನು ಒಕ್ಕಲಿಗ ದಲಿತ,ಲಿಂಗಾಯುತ ಸೇರಿದಂತೆ ಇನ್ನಿತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಹೆಚ್ಚಿಸಿದೆ. ನರೇಂದ್ರ ಮೋದಿ ಅವರ ಆಡಳಿತದಿಂದಾಗಿ ದೇಶ ಸುರಕ್ಷಿತವಾಗಿದೆ ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ಈ ಬಾರಿಯೂ ಬಿಜೆಪಿಯ ಕಮಲ ಅರಳುವುದು ಸತ್ಯ ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ರೈತರ ಪರವಾಗಿದ್ದು ರೈತರು ಬೆಳೆಯುವಂತಹ ಎಲ್ಲ ಬೆಳೆ ಗಳಿಗೆ ಬೆಂಬಲ ಬೆಲೆ ನೀಡಲು ಸಹ ನಮ್ಮ ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು. ಬಿಜೆಪಿ ಅಭ್ಯರ್ಥಿ…
ತುರುವೆಕೆರೆ ಭಾರತೀಯ ಜನತಾ ಪಾರ್ಟಿಯವರಿಗೆ 40 ಎನ್ನುವ ನಂಬರ್ ಮೇಲೆ ಬಹಳ ಪ್ರೀತಿ. ಹಾಗಾಗಿ ಈ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 40 ಸೀಟುಗಳನ್ನು ಮಾತ್ರ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಕರೆ ನೀಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು 150 ಸ್ಥಾನಗಳ ಗೆಲ್ಲಿಸುವ ಮೂಲಕ ಅಧಿಕಾರಕ್ಕೆ ತರಬೇಕು ಎಂದು ಅವರು ಮನವಿ ಮಾಡಿದರು. ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರತಿ ಕಾಮಗಾರಿ, ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀಷನ್ ಪಡೆದಿರುವ ಬಿಜೆಪಿಯನ್ನು ಈ ಬಾರಿಯ ಚುನಾವಣೆಯಲ್ಲಿ ಕೇವಲ 40 ಸೀಟುಗಳಿಗೆ ಮಾತ್ರ ಸೀಮಿತಗೊಳಿಸಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 150 ಸ್ಥಾನ ನೀಡಿದರೆ ಬಿಜೆಪಿಯವರು ನಮ್ಮ ಶಾಸಕರನ್ನು ಕದಿಯಲು ಆಗುವುದಿಲ್ಲ. ಆದ್ದರಿಂದ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು. ಬಿಜೆಪಿ ಕಾಂಗ್ರೆಸ್ ಶಾಸಕರಿಗೆ ಹಣ ಕೊಟ್ಟು ಖರೀದಿ ಮಾಡಿ ಸರ್ಕಾರವನ್ನು ರಚನೆ ಮಾಡಿದೆ. ಕಳೆದ 3 ವರ್ಷಗಳಿಂದ ಬಿಜೆಪಿ ಕರ್ನಾಟಕದಲ್ಲಿ ಕೇವಲ…
ತುಮಕೂರು- ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ 80 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಇಂದಿನಿಂದ 80 ವರ್ಷ ಮೇಲ್ಪಟ್ಟ ಮತದಾರರು ಮನೆಯಲ್ಲಿ ಮತದಾನ ಮಾಡುವ ಕಾರ್ಯಕ್ಕೆ ಚಾಲನೆ ದೊರೆಯಿತು. 80 ವರ್ಷ ಮೇಲ್ಪಟ್ಟ ಮತದಾರರಿಗೆ ಅನುಕೂಲವಾಗುವಂತೆ ಆಯೋಗ ನಮೂನೆ-12ಡಿ ಮೂಲಕ ಅರ್ಜಿ ಸಲ್ಲಿಸಿ ಅಂಚೆ ಮತಪತ್ರಗಳನ್ನು ಪಡೆದು ಮತದಾನ ಮಾಡಲು ಮೊದಲ ಬಾರಿಗೆ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಎಲ್ಓಗಳು, ಪಿಡಬ್ಲ್ಯೂಡಿ ಮತ್ತು 80 ವರ್ಷ ಮೇಲ್ಪಟ್ಟ ಮತದಾರರ ಮನೆಗಳಿಗೆ ತೆರಳಿ ನಮೂನೆ-12 ಡಿ ಅರ್ಜಿಗಳನ್ನು ಹಂಚಿಕೆ ಮಾಡಿದ್ದು, ಮತಗಟ್ಟೆಗಳಿಗೆ ಬರಲು ಇಚ್ಛಿಸದ 80 ವರ್ಷ ಮೇಲ್ಪಟ್ಟ ಮತದಾರರು ಅಂಚೆ ಮತಪತ್ರಗಳ ಮೂಲಕ ಮನೆಯಲ್ಲೆ ಮತ ಚಲಾಯಿಸಿದರು. ನಗರದ ಚಿಕ್ಕಪೇಟೆಯಲ್ಲಿರುವ 80 ವರ್ಷ ಮೇಲ್ಪಟ್ಟ ಸುಗಂಧರಾಜು ಮತ್ತು ಅವರ ಪತ್ನಿ ವಸಂತಮ್ಮ ಅವರು ತಮ್ಮ ಮನೆಯಲ್ಲೇ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಏಜೆಂಟರ್…
ತುಮಕೂರು ಪ್ರಾಣಿಗಳ ಜೀವ ಉಳಿಸುವಂತಹ ಪುಣ್ಯದ ಕೆಲಸ ಮಾಡುತ್ತಿರುವ ನಿಮ್ಮಗಳ ಸೇವೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹಳ್ಳಿಗಳನ್ನು ತಲುಪುವಂತಾಗಲಿ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಡಾ.ಕೆ.ವಿದ್ಯಾಕುಮಾರಿ ಆಶಯ ವ್ಯಕ್ತಪಡಿಸಿದ್ದಾರೆ. ನಗರದ ಅರ್ಬನ್ ರೆಸ್ಟಾಟ್ನಲ್ಲಿ ಪಶುವೈದ್ಯಕೀಯ ಸಂಘ(ರಿ) ತುಮಕೂರು, ಪಶುಪಾಲನೆ ಮತ್ತ ಪಶುವೈದ್ಯಕೀಯ ಸೇವಾ ಇಲಾಖೆ ಜಂಟಿಯಾಗಿ ಆಯೋಜಸಿದ್ದ ವಿಶ್ವ ಪಶುವೈದ್ಯಕೀಯ ದಿನಾಚರಣೆ ಹಾಗೂ ತಾಂತ್ರಿಕ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ನಮ್ಮ ಇತಿಮಿತಿಗಳ ನಡುವೆಯೂ ಹೆಚ್ಚು ಗ್ರಾಮಗಳನ್ನು ನಿಗಧಿತ ಅವಧಿಯೊಳಗೆ ತಲುಪುವಂತಾಗದರೆ, ಅದರಿಂದ ಮೂಕ ಪ್ರಾಣಿಗಳಿಗೆ ಜೊತೆಗೆ,ಅವುಗಳ ಮಾಲೀಕರಿಗೆ ಹೆಚ್ಚಿನ ಲಾಭ ಉಂಟಾಗುತ್ತದೆ ಎಂದರು ಇಂತಹ ದಿನಾಚರಣೆಗಳ ನಾವು ಹೇಗೆ ಕಾರ್ಯನಿರ್ವಹಿಸುತ್ತಿದೇವೆ.ನಮ್ಮ ಜವಾಬ್ದಾರಿಗಳೇನು,ನಮ್ಮಗಳ ಕರ್ತವ್ಯ ಸಮರ್ಪಕವಾಗಿದೆಯೆ ಎಂದು ಪುನರ್ ಮನನ ಮಾಡಿಕೊಳ್ಳಲು ಇರುವ ಒಂದು ಅವಕಾಶ ಎಂದೇ ಭಾವಿಸಬೇಕಾಗುತ್ತದೆ. ಪ್ರಕೃತಿಯ ಒಂದು ಭಾಗವಾದ ಪ್ರಾಣಿಗಳ ಸೇವೆಯ ಉದ್ದೇಶ ನಿಮ್ಮ ಉದ್ದೇಶವಾಗಿದೆ.ಪಶುಪಾಲನೆ ಗ್ರಾಮೀಣ ಜನರ ಒಂದು ಅಂಗವಾಗಿದೆ.ಪ್ರಾಣಿಗಳಿಗೆ ರೋಗ, ರುಜೀನಗಳು ಕಾಣಿಸಿಕೊಂಡಾಗ ಅವರ ಯಾತನೆ ಹೇಳತೀರದು.ಈ ಬಾರಿಯ ಘೋಷ್ಯವಾಕ್ಯ ಎಲ್ಲರನ್ನು ಒಳಗೊಳ್ಳುವಿಕೆ…
ತುರುವೇಕೆರೆ ತುರುವೇಕೆರೆ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ಮಸಾಲಜಯರಾಮ್ ಗೆಲುವಿಗೆ ಮತ ನೀಡುವಂತೆ ಅವರ ಪತ್ನಿ ಸುನಂದಾ ಜಯರಾಮ್ ಕ್ಷೇತ್ರದಲ್ಲಿ ಮನೆ ಮನೆ ಪ್ರಚಾರ ಮಾಡುತ್ತಿದ್ದಾರೆ. ತಾಲೂಕಿನ ಮಾಯಸಂದ್ರ ಹೋಬಳಿಯ ಜಡಿಂiÀi ಗ್ರಾಮದಲ್ಲಿ ಶುಕ್ರವಾರ ಮನೆ ಮನೆ ಪ್ರಚಾರ ಕೈಗೊಂಡು ಮಾತನಾಡಿದ ಅವರು ನಾಮಪತ್ರ ಸಲ್ಲಿಸಿದ ದಿನದಿಂದಲೂ ತಾಲೂಕಿನಾದ್ಯಂತ ಪ್ರತಿ ನಿತ್ಯ ನೂರಾರು ಮಹಿಳಾ ಕಾರ್ಯಕರ್ತರೊಂದಿಗೆ ಪ್ರಚಾರ ಮಾಡುತ್ತಿದ್ದು. ಈಗಾಗಲೇ ದಂಡಿನಶಿವರ ಹೋಬಳಿಯಲ್ಲಿ ಎಲ್ಲ ಪಂಚಾಯಿತಿಗಳಲ್ಲಿ ಪ್ರಚಾರ ಮುಗಿಸಿದ್ದು, ಇಂದಿನಿಂದ ಮಾಯಸಂದ್ರ ಹೋಬಳಿಯಲ್ಲಿ ಚುನಾವಣಾ ಪ್ರಚಾರ ಪ್ರಾರಂಬಿಸಿದ್ದು ಗ್ರಾಮಗಳ ಎಲ್ಲ ಮನೆ ಮನೆಗೆ ತೆರಳಿ ಕರಪತ್ರ ನೀಡಿ ತಮ್ಮ ಪತಿ ಬಿಜೆಪಿ ಅಭ್ಯರ್ರ್ಥಿಗೆ ಮತ ನೀಡುವಂತೆ ಕೈ ಮುಗಿದು ಕೇಳುತ್ತಿದ್ದೇನೆ. ಈಗಾಗಲೇ ಸುಮಾರು 5 ವರ್ಷಗಳ ಕಾಲ ಶಾಸಕರಾಗಿ ಕ್ಷೇತ್ರದಲ್ಲಿ ಅಭಿವೃದಿ ಕೆಲಸ ಮಾಡಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಪಕ್ಷದಿಂದ ಸ್ಪರ್ದಿಸಿದ್ದು ಸ್ಪರ್ದಿಸಿದ್ದು ಎಲ್ಲ ಕಡೆಗಳಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಚಾರದ ವೇಳೆ ಹಳ್ಳಿಗಳಲ್ಲಿ ನಮ್ಮನ್ನು…
ತುಮಕೂರು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮವನ್ನು ಏಪ್ರಿಲ್ 30ರಂದು ಬೆಳಿಗ್ಗೆ 8 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಅದರಂತೆ ತುಮಕೂರು ಜಿಲ್ಲೆಯಾದ್ಯಂತ ಸದರಿ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಆಯೋಜಿಸಲಾಗುವುದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದ್ದಾರೆ. ಪ್ರಸ್ತುತ ಚುನಾವಣೆಯ ಮತದಾನ ಮೇ 10ರಂದು ನಡೆಯಲಿದ್ದು, “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮವನ್ನು ಏಪ್ರಿಲ್ 30ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು. ಪ್ರಾಥಮಿಕವಾಗಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಓ ನೇತೃತ್ವದಲ್ಲಿ, ತಾಲ್ಲೂಕು ಮಟ್ಟದಲ್ಲಿ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ಒಂದೇ ರೀತಿಯ ‘ಪ್ರಜಾಪ್ರಭುತ್ವದ ಹಬ್ಬ ‘ಮೇ 10…
ಮಧುಗಿರಿ ಜೆಡಿಎಸ್ ಬಿಜೆಪಿಯ ಬಿ.ಟೀಮ್ ಎಂದು ಶಾಸಕ ಜಮೀರ್ ಅಹಮದ್ ಅರೋಪಿಸಿದ್ದಾರೆ. ಇದೆ ಅಲ್ಲದೆ ರಾಜ್ಯದಲ್ಲಿ ಬಿಜೆಪಿ ಸಂಘಟನೆ ಆಗುತ್ತಿರುವುದಕ್ಕೆ ಮುಖ್ಯ ಕಾರಣ ಜೆಡಿಎಸ್ ಪಕ್ಷ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದವರು ಜೆಡಿಎಸ್ ಪಕ್ಷದವರು ಎಂದು ವಾಗ್ದಾಳಿ ನಡೆಸಿದರು ಪಟ್ಟಣದ ದಂಡೂರ ಬಾಗಿಲ ಸಮೀಪ ಇರುವ ಆಶುಖಾನೆ ಬಳಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು 1993 ರಲ್ಲಿ ಮಾಜಿ ಸಿಎಂ ವೀರಪ್ಪಮೊಯ್ಲಿಯವರು ಅಲ್ಪ ಸಂಖ್ಯಾತರಿಗೆ ಶೇ. 6 ರಷ್ಟು ಮೀಸಲಾತಿ ನೀಡಬೇಕೆಂದು ಅಂದಿನ ಸರ್ಕಾರಕ್ಕೆ ವರದಿ ನೀಡಿದ್ದರು ಆದರೆ ಅದನ್ನು ಜಾರಿಗೊಳಿಸುವ ವೇಳೆಗೆ ಅನ್ಯ ಕಾರಣಗಳಿಂದ ಸರ್ಕಾರ ಬದಲಾದ ಹಿನ್ನೆಲೆಯಲ್ಲಿ ದೇವೇಗೌಡರು ಮುಖ್ಯಮಂತ್ರಿಯಾದರು. ಅವರದೇ ಸರ್ಕಾರವಿದ್ದರೂ ಶೇ. 6 ರಷ್ಟು ಮೀಸಲಾತಿಯನ್ನು ಶೇ. 4 ಕ್ಕೇ ಇಳಿಸಿ ಶೇ. 2 ರಷ್ಟು ಮೀಸಲಾತಿಯನ್ನು ಕಿತ್ತುಕೊಂಡು ಅಲ್ಪಸಂಖ್ಯಾತರ ಸಮುದಾಯಕ್ಕೆ ಅನ್ಯಾಯ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯನವರು ಅಲ್ಪ ಸಂಖ್ಯಾತ ಸಮುದಾಯಕ್ಕೆ 3150 ಕೋಟಿ ಅನುದಾನ ನೀಡಿದ್ದರು.…
ತುಮಕೂರು ಅಶ್ಲೀಲ ಮತ್ತು ಮಾರ್ಪಾಟು ಮಾಡಿರುವ ವಿಡಿಯೋಗೆ ಸಂಬಂಧಿಸಿದಂತೆ ಯಾವುದೇ ವರದಿಯನ್ನು ಪ್ರಕಟಿಸದಂತೆ ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ತುಮಕೂರು ಜಿಲ್ಲಾ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಮಾನಹಾನಿ ಮಾಡುವ ಉದ್ದೇಶದಿಂದ ಮಾರ್ಪಡಿಸಿರುವ ವಿಡಿಯೋ ಮತ್ತು ಪೆÇೀಟೋವನ್ನು ಪ್ರಕಟಿಸುವ ಸಾಧ್ಯತೆ ಇದ್ದು, ಇದರಿಂದ ನನಗೆ ಮಾನಹಾನಿ ಆಗುವ ಸಾಧ್ಯತೆ ಹೆಚ್ಚಿರುವುದರಿಂದ ಮಾನಹಾನಿ ಆಗುವಂತಹ ವರದಿಯನ್ನು ಪ್ರಕಟಿಸದಂತೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮಾನಹಾನಿ ವರದಿ ಪ್ರಕಟಿಸದಂತೆ 17 ಪತ್ರಿಕೆ | ಸುದ್ದಿಸಂಸ್ಥೆಗಳ ಸಂಪಾದಕರಿಗೆ ಸಮನ್ಸ್ ಜಾರಿಗೊಳಿಸಿ, ತಾತ್ಕಾಲಿಕ ತಡೆಯಾಜ್ಞೆಯನ್ನು ನೀಡಿ ಪ್ರಕರಣವನ್ನು ಜೂ.06ಕ್ಕೆ ಮುಂದೂಡಿ ಆದೇಶವನ್ನು ಹೊರಡಿಸಿದೆ.
ಕೊರಟಗೆರೆ ಎತ್ತಿನಹೊಳೆ ಯೋಜನೆಯಡಿ ಬೈರಗೊಂಡ್ಲು ಬಳಿ ಬಫರ್ ಡ್ಯಾಂನಿಂದ 109ಕೆರೆಗಳಿಗೆ ನೀರು ಹರಿಯಲಿದೆ.. ಬಯಲುಸೀಮೆ ಪ್ರದೇಶದ ಸಾವಿರಾರು ರೈತಾಪಿವರ್ಗದ ನೀರಾವರಿಯ ಕನಸು ಇನ್ನೇರಡು ವರ್ಷದಲ್ಲಿ ನನಸಾಗಲಿದೆ.. 2023ಕ್ಕೆ ಕಾಂಗ್ರೆಸ್ ಸರಕಾರ ಮತ್ತೇ ಅಧಿಕಾರಕ್ಕೆ ಬರುತ್ತೇ.. ಕೊರಟಗೆರೆ ಕ್ಷೇತ್ರದಿಂದ ನಾನು ಶಾಸಕನಾಗಿ ಆಯ್ಕೆ ಆಗ್ತೀನಿ. ಕೊರಟಗೆರೆಯು ಮತ್ತಷ್ಟು ಅಭಿವೃದ್ದಿಯ ಪಥದತ್ತಾ ಸಾಗುವುದು ಖಚಿತ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಪಾತಗಾನಹಳ್ಳಿ ಮತ್ತು ವಜ್ಜನಕುರಿಕೆ ಗ್ರಾಪಂ ವ್ಯಾಪ್ತಿಯ 25ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಪ್ರಚಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕೊರಟಗೆರೆ ಕ್ಷೇತ್ರದಲ್ಲಿ 7ವಸತಿ ಶಾಲೆ ಮತ್ತು ಅತ್ಯುತ್ತಮ ಆಸ್ಪತ್ರೆಗಳನ್ನು ಕಟ್ಟಿಸಿದ್ದೇನೆ. 5ವರ್ಷದ ಅವಧಿಯಲ್ಲಿ 2500ಕೋಟಿ ಅನುಧಾನ ತಂದು ಕೊರಟಗೆರೆ ಕ್ಷೇತ್ರದ ಜನತೆಯ ಋಣ ತೀರಿಸುವ ಕೆಲಸ ಮಾಡಿದ್ದೇನೆ. 2023ಕ್ಕೆ ಮತ್ತೇ ನಾನು ಗೆದ್ದು 5ಸಾವಿರ ಕೋಟಿ ಅನುಧಾನ ತರುತ್ತೇನೆ. ನನಗೇ ರಾಜಕೀಯ ಶಕ್ತಿ ನೀಡಿದ ಕೊರಟಗೆರೆ ಕ್ಷೇತ್ರದ ಜನರ ಋಣವನ್ನು ತೀರಿಸುವ…











