ತುಮಕೂರು ಅಣ್ಣ ಬಸವಣ್ಣನವರು 12ನೇ ಶತಮಾನದಲ್ಲಿ ಕಾಯಕ ಜನರಲ್ಲಿ ವಚನದ ಮೂಲಕ ತಮ್ಮ ಕಸುಬುಗಳಿಗೆ ಮನ್ನಣೆ ನೀಡಿ ಸಮಾಜದ ಮುಖ್ಯವಾಹಿನಿಗೆ ತಂದು ಸಾಮಾಜಿಕ ಕ್ರಾಂತಿ ಮಾಡಿದ ಮಾದರಿಯೇ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಸ್ಲಂ ಜನರನ್ನು ಸಂಘಟಿಸಿ ಸಮಾಜ ಬದಲಾವಣೆ ಮಾಡುವುದಕ್ಕೆ ಸ್ಪೂರ್ತಿಯಾಗಿದೆ ಎಂದು ಎಸ್.ಜೆ,ಕೆ ರಾಜ್ಯ ಸಂಚಾಲಕ ಎ,ನರಸಿಂಹಮೂರ್ತಿಯವರು ಹೇಳಿದ್ದರು, ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಪಿ.ಕೆ.ಎಸ್ ಕಾಲೋನಿಯ ಸಂಪನ್ಮೂಲ ಕೇಂದ್ರದಲ್ಲಿ 890ನೇ ಬಸವೇಶ್ವರರ ಜಯಂತಿಯನ್ನು ಆಯೋಜಿಸಲಾಗಿತ್ತು. ಬಸವಣ್ಣನವರ ಭಾವಚಿತ್ರ ಮತ್ತು ವಚನಗಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಎ.ನರಸಿಂಹಮೂರ್ತಿ ಕಾಯಕದ ಮಾತು ಹೇಳಿದ ಅರ್ಥಶಾಸ್ತ್ರಜ್ಞ ಜಗತ್ತಿನಲ್ಲಿಯೇ ಮೊಟ್ಟ ಮೊದಲು ಅನುಭವ ಮಂಟಪದ ಮೂಲಕ ಸಂಸತ್ ನಿರ್ಮಿಸಿದ ರಾಜಕೀಯ ತಜ್ಞ, ಅಂತರ್ಜಾತಿ ವಿವಾಹ ಮಾಡಿದ ಸಮಾಜತಜ್ಞ ಮಹಿಳೆಯರಿಗೆ ಸಮಾನ ಅಧಿಕಾರ ಕೊಟ್ಟ ಸಮಾನತಾವಾದಿಯಾಗಿ ಎಲ್ಲಾ ಜಾತಿಯ ಶರಣರನ್ನು ಸಮಾನಾಗಿ ಕಂಡು ಸಾವಿರಾರು ವಚನಗಳ ಮೂಲಕ ಮಾನವೀಯತೆ ಸಾರಿದ ಮಹಾನ್ ಸಮಾಜ ಸುಧಾರಕ ಬಸವಣ್ಣ 12ನೇ ಶತಮಾನದಲ್ಲಿ ಕೆಳಜಾತಿಯ…
Author: News Desk Benkiyabale
ತುಮಕೂರು ಸಿದ್ಧ ಗಂಗಾ ಮಠಕ್ಕೆ ಬಸವ ಜಯಂತಿ ಯ ಶುಭ ದಿನದಂದು ನೂತನ ಉತ್ತರಾಧಿಕಾರಿ ನಿಯುಕ್ತಿ ಗೊಳಿಸಿದ್ದು, ನೆಲಮಂಗಲ ತಾಲೂಕು ಮೈಲನಹಳ್ಳಿ ಮೂಲದ ವಟು ಮನೋಜ್ ಕುಮಾರ್ ಅವರಿಗೆ ಶ್ರೀಶಿವಸಿದ್ದೇಶ್ವರ ಸ್ವಾಮೀಜಿ ಯೆಂಬ ಹೊಸ ಅಬಿಧಾನದೊಂದಿಗೆ ನಿರಂಜನ ಪಟ್ಟಾಧಿಕಾರ ನೆರವೇರಿಸಲಾಯಿತು. ಇವರೊಂದಿಗೆ ಕಂಚಗಲ್ ಬಂಡೆಮಠಕ್ಕೆ ಕಾಳೇನಹಳ್ಳಿ ಮೂಲದ ಹರ್ಷ ಅವರಿಗೆ ಮಹಾಲಿಂಗ ಸ್ವಾಮೀಜಿ ಎಂಬ ಅಭಿದಾನದೊಂದಿಗೆ ವಿರಕ್ತಾಶ್ರಮ ದೀಕ್ಷೆ ನೀಡಲಾಗಿದ್ದು ದೇವನಹಳ್ಳಿ ಮಠಕ್ಕೂ ಸದಾಶಿವ ಸ್ವಾಮೀಜಿ ಅವರನ್ನು ನೂತನ ಉತ್ತರಾಧಿಕಾರಿಯಾಗಿ ಶಾಸ್ತ್ರೋಕ್ತವಾಗಿ ಪಟ್ಟಕಟ್ಟಲಾಯಿತು. ಕಾರ್ಯಕ್ರಮದ ನಿಮಿತ್ತ ಶನಿವಾರ ರಾತ್ರಿ ಯಿಂದಲೇ ಧಾರ್ಮಿಕ ಕಾರ್ಯ ಕ್ರಮಗಳು ನೆರವೇರುದ್ದು ಸಿದ್ಧಗಂಗಾ. ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಮಠದ ನೂತನ ಉತ್ತರಾಧಿಕಾರಿಗೆ ದೀಕ್ಷಾ ಸಂಸ್ಕಾರಇಷ್ಟಲಿಮಗ ಪೂಜೆ ಮಾಡಿಸಿದರು. ಮೂವರು ವಟುಗಳ ನಿರಂಜನ ಪಟ್ಟಾಧಿಕಾರ ಸಮಾರಂಭಕ್ಕೆ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕನಕಪುರ ದೇಗುಲ ಮಠದ ಶ್ರೀ ಗಳು, ಹಿರೇಮಠ ಶ್ರೀ ಗಳುಸೇರಿ ಹರಗುರುಚರಮೂರ್ತಿಗಳು, ಸಂಸದ ಜಿ. ಎಸ್. ಬಸವರಾಜ್ ಸೇರಿ ಮಾಜಿ ಎಂಎಲ್ಸಿ ಡಾಹುಲಿನಾಯ್ಕರ್,…
ಕೊರಟಗೆರೆ 15ವರ್ಷಗಳಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಅವಕಾಶ ನೀಡಿದ್ದೀರಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಈ ಬಾರಿ ಬಿಜೆಪಿ ಬೆಂಬಲಿಸಿ ಕ್ಷೇತ್ರದಲ್ಲಿನ ಕುಂದುಕೊರತೆಗಳನ್ನು ಸರಿಪಡಿಸಲು ಸಹಕರಿಸಿ ಎಂದು ಬಿಜೆಪಿ ಅಭ್ಯರ್ಥಿ ಬಿ.ಎಚ್ ಅನಿಲ್ ಕುಮಾರ್ ಕೋರ ಹೋಬಳಿಯ ಗೊಲ್ಲಹಳ್ಳಿ ಸುಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದು ಮತಯಾಚನೆ ಪ್ರಾರಂಭಿಸಿದ ಬಿ.ಹೆಚ್ ಅನಿಲ್ ಕುಮಾರ್ ಮತದಾರರನ್ನು ಉದ್ದೇಶಿ ಮಾತನಾಡಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿಯ ಗೊಲ್ಲಹಳ್ಳಿ ಗ್ರಾಮದ ಮನೆ ಮನೆಗೆ ತೆರಳಿ ಬಿಜೆಪಿ ಯೋಜನೆಗಳನ್ನು ಜನರಿಗೆ ತಿಳಿಸಿ ಈ ಬಾರಿ ಬಿಜೆಪಿ ಪಕ್ಷಕ್ಕೆ ಮತನೀಡುವಂತೆ ಅಭ್ಯರ್ಥಿ ಬಿ.ಎಚ್ ಅನಿಲ್ ಕುಮಾರ್ ಮನವಿ ಮಾಡಿದರು. ಕೋರಾ ಹೋಬಳಿ ಸುಮಾರು 80 ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಕಮಲ ಗುರುತಿಗೆ ಮತನೀಡಿ ಎಂದು ಮನವಿ ಮಾಡಿದರು. ಎಲ್ಲಾ ಗ್ರಾಮಗಳಲ್ಲಿಯೂ ಅಭೂತಪೂರ್ವ ಬೆಂಬಲ ದೊರೆಯುತ್ತಿದ್ದು, ಈ ಬಾರಿ ಸುಮಾರು 25ಸಾವಿರ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಕ್ಷೇತ್ರದ…
ಪಾವಗಡ ತಾಲ್ಲೂಕಿನ ಹಿಂದುಳಿದ ಹಾಗೂ ಗಡಿ ಪ್ರದೇಶ, ಪಾವಗಡದಿಂದ 35 ಕಿ.ಮೀ. ದೂರವಿರುವ ವಡ್ರೇವು ಎಂಬ ಕುಗ್ರಾಮಕ್ಕೆ ಪೂಜ್ಯ ಸ್ವಾಮೀಜಿಯವರು ಅಲ್ಲಿಯ ಗೋಪಾಲಕರ ವಿನಂತಿಯ ಮೇರೆಗೆ ಹುಲ್ಲನ್ನು ವಿತರಿಸಲು ಸ್ವತಃ ತಾವೇ ಅಲ್ಲಿಗೆ ತೆರಳಿದ್ದರು. ಸುಮಾರು 150 ಹಸುಗಳಿಗೆ ಶುಭ್ರವಾದ ಹಾಗೂ ತಾಜಾ ಮೇವನ್ನು ವಿತರಿಸಿದ ದೃಶ್ಯ ನಿಜಕ್ಕೂ ಪೂಜ್ಯ ಸ್ವಾಮೀಜಿಯವರ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ. ಇಡೀ ರಾಜ್ಯ ಚುನಾವಣಾ ರಣಾಂಗಣದಲ್ಲಿ ತೊಡಗಿರುವಾಗ ದೂರದೂರದ ಮೂಕ ಪ್ರಾಣಿಗಳ ಮೂಕ ವೇದನೆ ಸ್ವಾಮೀಜಿಯವರ ಹೃದಯಕ್ಕೆ ತಟ್ಟಿದೆ. ಪ್ರತಿ ನಿತ್ಯ ಇಷ್ಟು ಜನರಿಗೆ ಹುಲ್ಲನ್ನು ನೀಡುವುದರ ಜೊತೆಗೆ ದೂರದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮೂರು, ನಾಯಕನಹಟ್ಟಿಗಳಿಗೆ ಹುಲ್ಲನ್ನು ವಿತರಿಸುತ್ತಿರುವುದು ಸ್ವಾಮೀಜಿಯವರ ಹೃದಯಾಂತರಾಳದ ವೇದನೆಯನ್ನು ಕಾಣಬಹುದಾಗಿದೆ. ಗೋಮಾತೆಯ ಸೇವೆಯನ್ನು ಕಳೆದ 30 ವರ್ಷಗಳಿಂದ ನಡೆಸುತ್ತಿರುವುದು ಯಾವುದೇ ಸರ್ಕಾರಿ ಸಹಾಯವಿಲ್ಲದೆ ಕೇವಲ ಇನ್ಫೋಸಿಸ್ ಫೌಂಡೇಷನ್ ಹಾಗೂ ಶ್ರೀಮತಿ ಸುಧಾಮೂರ್ತಿ ರವರ ಮೆ.ಮೂರ್ತಿ ಫೌಂಡೇಷನ್ ಇವರ ನೆರವಿನಿಂದ ಮುಂಗಾರು ಮಳೆ ಬರುವವರೆಗೆ ನಡೆಯುತ್ತದೆ ಎಂದು ಪೂಜ್ಯ ಸ್ವಾಮೀಜಿಯವರು ತಿಳಿಸಿರುತ್ತಾರೆ.
ತುಮಕೂರು ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಅಂಗವಾಗಿ ‘ನಮ್ಮ ನಡೆ ಮತದಾರರಿಗೆ ಮತಗಟ್ಟೆ ತೋರಿಸುವ ಕಡೆ’ ಎಂಬ ವಿನೂತನ ಬೂತ್ ವಾಕ್ ಕಾರ್ಯಕ್ರಮವನ್ನು ಏ.25, 26 ಹಾಗೂ ಮೇ 5, 6ರಂದು ಒಟ್ಟಾರೆ 4 ದಿನ ಆಯೋಜಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಇಂದು ನಡೆದ 11 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು, ಬಿಎಲ್ಒ, ಕಂದಾಯ ಲೆಕ್ಕಾಧಿಕಾರಿ ಮತ್ತು ಪಿಡಿಓಗಳನ್ನೊಳಗೊಂಡ ಹಾಗೂ ಪಟ್ಟಣ ಮತ್ತು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬಿಎಲ್ಓ, ಬಿಲ್ಕಲೆಕ್ಟರ್ ಮತ್ತು ಹೆಲ್ತ್ ಇನ್ಸ್ಪೆಕ್ಟರ್ಗಳನ್ನೊಳಗೊಂಡ ತಂಡಗಳು ಪ್ರತಿಯೊಂದು ಮತಗಟ್ಟೆ ವ್ಯಾಪ್ತಿಯಲ್ಲಿ ಒಂದು ನಿರ್ಧಿಷ್ಟ ಸ್ಥಳವನ್ನು ಗುರುತಿಸಿ ಆ ಸ್ಥಳಕ್ಕೆ ಮತಗಟ್ಟೆ ವ್ಯಾಪ್ತಿಯ ಎಲ್ಲಾ ಮತದಾರರು ಬರುವಂತೆ ಪ್ರೇರೇಪಿಸಿ ಆ ಸ್ಥಳದಿಂದ ಅವರನ್ನು ಮತಗಟ್ಟೆ ಕೇಂದ್ರಕ್ಕೆ ಕರೆತಂದು ಅವರಿಗೆ ಮತಗಟ್ಟೆ ಪರಿಚಯ ಮಾಡಿಕೊಡಬೇಕು ಹಾಗೂ ಮತದಾರರಿಗೆ…
ಪಾವಗಡ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಈಗಾಗಲೇ ರಾಷ್ರ್ಟೀಯ ಮತ್ತು ಪ್ರಾದೇಶಿಕ ಪಕ್ಷಗಳಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಮಾಧ್ಯಮದ ಪ್ರತಿನಿಧಿಗಳನ್ನು ಕಡೆಗಣಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಪತ್ರಕರ್ತರ ಪ್ರಶ್ನೆಗಳಿಗೆ ಅಭ್ಯರ್ಥಿಗಳ ಬಳಿ ಉತ್ತರ ಇಲ್ಲವೇ? ಅಥವಾ ಇವರ ಕಾರ್ಯವೈಖರಿ ಬಗ್ಗೆ ಜನತೆಯ ಮುಂದೆ ಇಡುತ್ತಾರೆ ಎಂಬ ಭಯವೇ? ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಹಲವು ಪ್ರಶ್ನೆಗಳು: ಪಾವಗಡ ವಿಧಾನಸಭಾ ಕ್ಷೇತ್ರದ ಜನತೆಗೆ ಕಳೆದ 75 ವರ್ಷಗಳಿಂದ ಆಳಿದ ನಾಯಕರೆಲ್ಲ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿ ಪಾವಗಡ ವಿಧಾನಸಭಾ ಕ್ಷೇತ್ರದ ಜನತೆಗೆ ಉಂಡೇ ನಾಮ ಹಾಕಿರುತ್ತಾರೆ. ಕ್ಷೇತ್ರದ ಜನತೆ ಮಾಧ್ಯಮದ ಮೂಲಕ ಕೇಳುತ್ತಿರುವ ಪ್ರಶ್ನೆಗಳು: ಪಾವಗಡ ತಾಲ್ಲೂಕಿಗೆ ಬೈಪಾಸ್ ರಸ್ತೆ ಇಲ್ಲದಿರುವುದೇಕೆ? ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಮಾಡುವಲ್ಲಿ ವಿಫಲ ಹಾಗೂ ತುಮಕೂರು ಜಿಲ್ಲೆಗೆ ಸೇರಿದ್ದ ಪಾವಗಡ ವಿಧಾನಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಡಿಪೋವನ್ನು…
ತುಮಕೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸ್ವೀಕೃತವಾಗಿದ್ದವು. ಸ್ವೀಕೃತವಾದ ನಾಮಪತ್ರಗಳನ್ನು ಏಪ್ರಿಲ್ 21ರಂದು ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪರಿಶೀಲನೆ ನಂತರ 154 ನಾಮನಿರ್ದೇಶಿತ ಉಮೇದುವಾರರ ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ 21 ನಾಮಪತ್ರಗಳು ತಿರಸ್ಕøತವಾಗಿವೆ. 128-ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೆ.ಎಸ್.ಕಿರಣ್ ಕುಮಾರ್, ಆಮ್ ಆದ್ಮಿ ಪಕ್ಷದ ನಿಂಗರಾಜು ಎಸ್.ಸಿ., ಭಾರತೀಯ ಜನತಾ ಪಕ್ಷದ ಜೆ.ಸಿ.ಮಾಧುಸ್ವಾಮಿ, ಜನತಾದಳ(ಜಾತ್ಯಾತೀತ) ಪಕ್ಷದ ಸಿ.ಬಿ.ಸುರೇಶ್ ಬಾಬು, ಉತ್ತಮ ಪ್ರಜಾಕೀಯ ಪಕ್ಷದ ಜಯರಾಮ್ ಹೆಚ್.ಆರ್., ಭಾರತೀಯ ಬಹುಜನ ಕ್ರಾಂತಿ ದಳದ ಹೆಚ್.ಟಿ.ನಾಗರಾಜು, ಆಲ್ ಇಂಡಿಯಾ ಮಹಿಳಾ ಎಂಪವರ್ಮೆಂಟ್ ಪಕ್ಷದ ಎಂ.ಕೆ.ಪಾಷ, ಕರ್ನಾಟಕ ರಾಷ್ಟ್ರ ಸಮಿತಿಯ ಮಲ್ಲಿಕಾರ್ಜುನಯ್ಯ ಬಿ.ಎಸ್., ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಹನುಮಂತ ರಾಮ ನಾಯ್ಕ ಎಂ.ಬಿ., ಪಕ್ಷೇತರರಾದ ಕ್ಯಾಪ್ಟನ್ ಸೋಮಶೇಖರ್, ಗಂಗಾಧರಯ್ಯ, ಗಿರೀಶ್ ಆರ್., ನಾಸೀರ್ ಬೇಗ್ ಎಂ. ಸೇರಿದಂತೆ…
ಮಧುಗಿರಿ ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ ಗುರುವಾರ ಸಹಸ್ರಾರು ಕಾರ್ಯಕರ್ತರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ರೋಡ್ ಶೋ ನಡೆಸಿ ನಂತರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಶಕ್ತಿ ಪ್ರದರ್ಶನ : ಕೆ.ಎನ್. ರಾಜಣ್ಣನವರು ಉಮೇದುವಾರಿಕೆ ಸಲ್ಲಿಸುವ ಸಂದರ್ಭದಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಸಹಸ್ರಾರು ಕಾರ್ಯಕರ್ತರು ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದರು. ಬಿರು ಬಿಸಿಲಿಗೂ ಜಗ್ಗದ ಕಾರ್ಯಕರ್ತರು ಉತ್ಸಾಹದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕೆ.ಎನ್. ರಾಜಣ್ಣನವರ ಜೊತೆ ಹೆಜ್ಜೆ ಹಾಕಿದರು. ಮೊದಲಿಗೆ ಶಿರಾ ಗೇಟ್ ನಿಂದ ಆರಂಭವಾದ ಯಾತ್ರೆಯು ದಂಡೂರ ಬಾಗಿಲು ಮುಖಾಂತರ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ರಸ್ತೆ, ಡೂಂ ಲೈಟ್ ಸರ್ಕಲ್, ಹೈಸ್ಕೂಲ್ ರಸ್ತೆಯ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಾಯಿತು. ಉಮೇದುವಾರಿಕೆ ಸಲ್ಲಿಸಿದ ನಂತರ ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ ಮಾತನಾಡಿ ಈ ಬಾರಿ ರಾಜ್ಯದಲ್ಲಿ ಜನತೆ ಕಾಂಗ್ರೆಸ್ ಗೆ ಆಶೀರ್ವಾದಿಸುವ ವಿಶ್ವಾಸವಿದ್ದು, ಜಿಲ್ಲೆಯ 11 ಕ್ಷೇತ್ರಗಳಲ್ಲಿ 9…
ತುಮಕೂರು ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗೆ ಎಲ್ಲ ರಾಷ್ಟ್ರೀಯ ಪಕ್ಷಗಳು ಅನ್ಯಾಯ ಮಾಡಿದ್ದು, ಬಲಾಢ್ಯ ಸಮುದಾಯ ಓಲೈಸಲು 147 ಜಾತಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅವಕಾಶ ವಂಚಿತರಿಗೆ ಮೀಸಲಾತಿ ಕಲ್ಪಿಸಿದ್ದು, ಎಸ್ಸಿಎಸ್ಟಿ ಬುಡಕಟ್ಟು ಸಮುದಾಯವನ್ನು ನಿರ್ಲಕ್ಷಿಸಿದ್ದು, ಅಲೆಮಾರಿ ಸಮುದಾಯಗಳನ್ನು ರಾಜಕೀಯ ಅಧಿಕಾರದಿಂದ ದೂರ ಇಡಲಾಗಿದೆ ಎಂದರು. ಜಿಲ್ಲೆಯಲ್ಲಿ 85 ಸಾವಿರ ಅಲೆಮಾರಿ ಸಮುದಾಯದ ಮತಗಳಿದ್ದರು ಸಹ ಪ್ರಾತಿನಿಧ್ಯ ಸಿಗುತ್ತಿಲ್ಲ, ಸಂವಿಧಾನದ ತತ್ವಗಳನ್ನು ಗಾಳಿಗೆ ತೂರಲಾಗಿದೆ, ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳಿಗೆ ರಾಜಕೀಯ ಅಧಿಕಾರ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು. ಕಾರ್ಯಾಧ್ಯಕ್ಷ ಆದರ್ಶ್ ಚಿನ್ನಯಲ್ಲಪ್ಪ ಮಾತನಾಡಿ ಬಿಜೆಪಿ ಸರ್ಕಾರ ಕಲ್ಪಿಸಿರುವ ಒಳ ಮೀಸಲಾತಿ ಅಸಂವಿಧಾನವಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನವಿದ್ದರು ಸಹ ಪರಿಶಿಷ್ಟರಲ್ಲಿಯೇ ಒಳ ಮೀಸಲಾತಿ ವರ್ಗಿಕರಣ ಮಾಡಲು ಹೊರಟಿರುವುದು ಖಂಡನೀಯ ಎಂದು ಹೇಳಿದರು. ಸಮಾನ ಅವಕಾಶ ವಂಚಿತರಿಗೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದ ಮೀಸಲಾತಿಯನ್ನು ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಅವೈಜ್ಞಾನಿಕವಾಗಿ…
ತುಮಕೂರು ವೆಬ್ ಕಾಸ್ಟಿಂಗ್ ಸಂಬಂಧ ಗುರುತಿಸಲಾಗಿರುವ ಮತಗಟ್ಟೆಗಳಿಗೆ ಕಡ್ಡಾಯವಾಗಿ ಆರ್ಐ ಮತ್ತು ವಿಎಗಳು ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸಭೆ ಚುನಾವಣೆ-2023ರ ಸಂಬಂಧ 11 ವಿಧಾನಸಭಾ ಕ್ಷೇತ್ರಗಳ ಆರ್ಒ/ಎಆರ್ಓಗಳಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸದರಿ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅಗತ್ಯತೆ ಕುರಿತು ಸದರಿ ಅಧಿಕಾರಿಗಳು ಪುನರ್ ಪ್ರಮಾಣೀಕರಿಸಬೇಕು ಎಂದು ತಿಳಿಸಿದರು. 11 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಜಿಲ್ಲೆಗೆ ಆಗಮಿಸುವ ವೀಕ್ಷಕರಿಗೆ ಸಲ್ಲಿಸಲು ವಿಧಾನಸಭಾವಾರು ಬುಕ್ಲೆಟ್ಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು. ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ವೀಕ್ಷಕರಿಗೆ ಸಂಬಂಧಿಸಿದಂತೆ ಹ್ಯಾಂಡ್ ಬುಕ್ ಪರಿಶೀಲಿಸಿ ಚೆಕ್ಲೀಸ್ಟ್ ಮಾಹಿತಿಯನ್ನು ಪಡೆದು ಬುಕ್ಲೆಟ್ಗಳನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು. ಚುನಾವಣಾ ವೀಕ್ಷಕರುಗಳ ಲೈಸನ್ ಅಧಿಕಾರಿಗಳಾಗಿ ನೇಮಿಸಲ್ಪಟ್ಟಿರುವ ಅಧಿಕಾರಿಗಳು ಚುನಾವಣಾ ವೀಕ್ಷಕರುಗಳೊಂದಿಗೆ ಸಂಪೂರ್ಣ ಸಮ್ವನಯ ಸಾಧಿಸಿ ಅವರಿಗೆ…











