Author: News Desk Benkiyabale

ಹುಳಿಯಾರು: ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸುತ್ತವೆ. ರಾಜಕೀಯ ಭೇದವಿಲ್ಲದೆ, ಎಲ್ಲರೂ ಒಗ್ಗಟ್ಟಾಗಿ ಸಹಕಾರ ರಂಗದ ಮೂಲಕ ಅಭಿವೃದ್ಧಿಯತ್ತ ಸಾಗಬೇಕು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜಕುಮಾರ್ ಕರೆ ನೀಡಿದರು. ಬೆಳಗುಲಿ ಗ್ರಾಮದಲ್ಲಿ ಸಹಕಾರ ಇಲಾಖೆ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಮತ್ತು ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಹಕಾರ ಕುರಿತ ಅರಿವು ಮತ್ತು ಪ್ರಚಾರ ಶಿಬಿರದಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಹಕಾರ ಸಂಘಗಳು ಯಾವುದೇ ಜಾತಿ, ಪಕ್ಷದ ತಾರತಮ್ಯವಿಲ್ಲದೆ ಸಮಾನತೆಯನ್ನು ಬಿಂಬಿಸುತ್ತವೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪಿಡಿಒ ರಮೇಶ್ ಯಾವುದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಸಹಕಾರ ಸಂಘಗಳ ಕೊಡುಗೆ ಅಪಾರ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಸೋಮಶೇಖರ್,…

Read More

ತುಮಕೂರು: ದೇಶದಲ್ಲಿ ೧,೫೦೦ಕ್ಕೂ ಹೆಚ್ಚು ಕಾನೂನು ಕಾಲೇಜುಗಳಿದ್ದು, ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದಾರೆ.ಆದರೂ ನ್ಯಾಯಾಲಯಗಳಲ್ಲಿ ಲಕ್ಷಾಂತರ ಪ್ರಕರಣಗಳು ಬಾಕಿ ಉಳಿದಿರುವುದು ಕಳವಳಕಾರಿ. ಪ್ರಕರಣಗಳ ತ್ವರಿತ ವಿಲೇವಾರಿಗೆ ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಶೆಟ್ಟಿಹಳ್ಳಿಯ ಸುಫಿಯಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ ಇಂದು ಅಂತರರಾಷ್ಟಿçÃಯ ಮಟ್ಟದಲ್ಲಿ ಕಾನೂನು ಕ್ಷೇತ್ರದಲ್ಲಿ ತನ್ನ ಪ್ರಭಾವವನ್ನು ವಿಸ್ತರಿಸುತ್ತಿದ್ದು, ಭಾರತೀಯ ಕಾನೂನು ತಜ್ಞರು ಜಾಗತಿಕ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ. ಇದೇ ವೇಳೆ, ದೇಶದಲ್ಲಿ ಸೈಬರ್ ಅಪರಾಧ ದೊಡ್ಡ ಸವಾಲಾಗಿದ್ದು,ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕಾನೂನುಗಳನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದರು. ಸAವಿಧಾನದ ಪೂರ್ವ ಪೀಠಿಕೆಯಲ್ಲಿ ಸಮಾನತೆಗೆ ಮಹತ್ವ ನೀಡಲಾಗಿದ್ದರೂ, ಕಾನೂನು ಮತ್ತು ಸಮಾಜದ ದೃಷ್ಟಿಯಲ್ಲಿ ಅದು ಎಷ್ಟರ ಮಟ್ಟಿಗೆ ಜಾರಿಯಾಗಿದೆ ಎಂಬ ಬಗ್ಗೆ ಗಂಭೀರ ವಿಶ್ಲೇಷಣೆ ಅಗತ್ಯವಿದೆ. ಸ್ವಾತಂತ್ರ?ಯದ ಸಮಯದಲ್ಲಿ ದೇಶದ ಸಾಕ್ಷರತೆ ಪ್ರಮಾಣ ಕೇವಲ ೧೨ ಶೇಕಡಾ ಇದ್ದರೆ, ಈಗ ಅದು…

Read More

ತುಮಕೂರು: ಆರೋಗ್ಯಕರ ಬದುಕು ಹಾಗೂ ಸಮಾಜಕ್ಕೆ ಕಲೆ, ಕ್ರೀಡೆ, ಯೋಗ, ಲಲಿತಕಲೆಗಳಂತಹ ಹವ್ಯಾಸಗಳ ಅವಶ್ಯಕತೆ ಇರುತ್ತದೆ ಎಂದು ಹೆಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ತೇಜಸ್ವಿ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹೆಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಶುಕ್ರವಾರ ಹೆಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಯುವ ಸೌರಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ಓದುವುದರೊಂದಿಗೆ ಕಲೆಯಂತಹ ಹವ್ಯಾಸಗಳನ್ನು ಬೆಳೆಸಿಕೊಂಡಾಗ ಮಾತ್ರ ಸಮಾಜಕ್ಕೆ ದೊಡ್ಡ ಆಸ್ತಿಯಾಗುತ್ತಾರೆ ಎಂದು ತಿಳಿಸಿದರು. ಕಾರ್ಯಕ್ರಮದ ಗೌರವ ಉಪಸ್ಥಿತಿವಹಿಸಿದ್ದ ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕಿ ರಾಧಾ ಎಂ.ಎಸ್. ಅವರು ಮಾತನಾಡಿ, ಯುವ ಜನರು ಕಲೆ / ಕ್ರೀಡೆ ಮೊದಲಾದ ಆರೋಗ್ಯಕರ ಹವ್ಯಾಸಗಳ ಮುಖೇನ ಸ್ಪರ್ಧಾತ್ಮಕ ಬದುಕನ್ನು ಎದುರಿಸಬೇಕೆಂದು ಕರೆ ನೀಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ಮಾತನಾಡಿ, ಯುವ ಜನರಿಗೆ ಕಲೆ ಕೇವಲ ಮನರಂಜನೆ ಆದರೂ ಅವರಲ್ಲಿನ ಭಾವನೆಗಳ ಅಭಿವ್ಯಕ್ತಿಯಾಗಿರುತ್ತದೆ.…

Read More

ಹುಳಿಯಾರು: ಹುಳಿಯಾರು-ಚಿಕ್ಕನಾಯಕನಹಳ್ಳಿ ೧೫೦ ಎ ರಾಷ್ಟಿçÃಯ ಹೆದ್ದಾರಿಯ ಬಳ್ಳೆಯಕಟ್ಟೆ ಬಳಿ ತಿಮ್ಮನಹಳ್ಳಿ ಸಿಸಿ ರಸ್ತೆ ಕಾಮಗಾರಿ ನೆಪದಲ್ಲಿ ನಿಯಮ ಬಾಹಿರವಾಗಿ ಸ್ಥಾಪಿಸಲಾಗಿದ್ದ ಆರ್.ಎಂ.ಸಿ (ರೆಡಿ ಮಿಕ್ಸ್ ಕಾಂಕ್ರೀಟ್) ಪ್ಲಾಂಟ್‌ನ ಅಕ್ರಮಗಳ ಕುರಿತು ಪತ್ರಿಕೆಯಲ್ಲಿ ಪ್ರಕಟಿಸಿದ್ದ ವಿಶೇಷ ವರದಿಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಎಚ್ಚೆತ್ತುಕೊಂಡಿದ್ದಾರೆ. ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ಘಟಕದ ನಿರ್ವಹಣಾಗಾರರು ಸಾರ್ವಜನಿಕರ ದೂರಿಗೆ ಸ್ಪಂದಿಸಿ, ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮುಂದಾಗಿದ್ದಾರೆ. ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ!: ಆರ್.ಎಂ.ಸಿ ಪ್ಲಾಂಟ್‌ನಿAದ ಏಳುತ್ತಿದ್ದ ಸಿಮೆಂಟ್ ಮಿಶ್ರಿತ ಧೂಳು ಹೆದ್ದಾರಿ ಪ್ರಯಾಣಿಕರ ಕಣ್ಣು ಕತ್ತಲಿಸಿ, ಉಸಿರಾಟದ ತೊಂದರೆ ಉಂಟುಮಾಡುತ್ತಿರುವ ಬಗ್ಗೆ ಪತ್ರಿಕೆ ಸವಿಸ್ತಾರವಾಗಿ ಬೆಳಕು ಚೆಲ್ಲಿತ್ತು. ಹಿಂದೆ ಹಾಕಲಾಗಿದ್ದ ಶೆಡ್ ನೆಟ್ ಮೆಸ್ ಹರಿದು ಹೋಗಿದ್ದನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದರ ಫಲಶ್ರುತಿಯಾಗಿ, ಈಗ ಗುತ್ತಿಗೆದಾರರು ಎಚ್ಚೆತ್ತುಕೊಂಡು ಧೂಳು ರಸ್ತೆಯ ಕಡೆಗೆ ಹರಡದಂತೆ ತಡೆಯಲು ರಸ್ತೆಯ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆಯನ್ನು ನಿರ್ಮಿಸಿದ್ದಾರೆ. ಇದರಿಂದಾಗಿ ಹೆದ್ದಾರಿಯಲ್ಲಿ ಓಡಾಡುವ ಬೈಕ್ ಸವಾರರು ಹಾಗೂ ಪಾದಚಾರಿಗಳು ನಿಟ್ಟುಸಿರು ಬಿಡುವಂತಾಗಿದೆ.…

Read More

ತುಮಕೂರು: ಜೆಡಿಎಸ್‌ನ ಮಹಿಳಾ ಕಾರ್ಯಕರ್ತೆಯರು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಪಕ್ಷ ಸಂಘಟನೆಗೆ ಕೆಲಸ ಮಾಡಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾಗವಹಿಸಿ ನಾಯಕತ್ವ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹೆಚ್. ನಿಂಗಪ್ಪ ಹೇಳಿದರು. ಶುಕ್ರವಾರ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಹಿಳಾ ಘಟಕದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿ ಮಾತನಾಡಿದರು. ಹೆಣ್ಣುಮಕ್ಕಳು ರಾಜಕೀಯ ಕ್ಷೇತ್ರದಲ್ಲಿ ಭಾಗವಹಿಸಿ ತಮ್ಮ ಸಂಘಟನಾಶಕ್ತಿ ಪ್ರದರ್ಶಿಸಬೇಕು. ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವುದರಿಂದ ಸಾಮಾಜಿಕವಾಗಿಯೂ ಗುರುತಿಸಿಕೊಳ್ಳಲು ಅವಕಾಶವಿದೆ ಎಂದರು. ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇಕಡ ೫೦ರಷ್ಟು ಸ್ಥಾನ ಮೀಸಲಾತಿ ಇದೆ. ಅವಕಾಶ ದೊರೆಯುವ ಅರ್ಹ ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಪಡೆದು ರಾಜಕೀಯ ಸ್ಥಾನ ಪಡೆಯಬೇಕು. ಅಂತಹ ಅರ್ಹತೆ ಪಡೆಯಲು ಪಕ್ಷ ಸಂಘಟನೆಯಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಬೇಕು. ಈ ಮೂಲಕ ಪಕ್ಷವನ್ನೂ ಬೆಳೆಸಿ ತಾವೂ ಬೆಳೆಯಲು ಅವಕಾಶವಿದೆ. ಮುಂಬರುವ ೨೦೨೮ರ ವಿಧಾನಸಭಾ ಚುನಾವಣೆ ನಮ್ಮೆಲ್ಲರ ಗುರಿಯಾಗಬೇಕು, ಆ ಚುನಾವಣೆಯಲ್ಲಿ ಜೆಡಿಎಸ್‌ಗೆ ಹೆಚ್ಚು…

Read More

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ದೀರ್ಘಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪ ಚೋಳನ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ವಿಪತ್ತು ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯಾದ್ಯಂತ ಮುಂಗಾರು ಮಳೆ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಯಿದೆ. ಒಂದೆರಡು ತಿಂಗಳವರೆಗೆ ನೀರಿನ ಸಮಸ್ಯೆ ಆಗದಿರಬಹುದು. ಆದರೆ ಮುಂದಿನ ದಿನಗಳಲ್ಲಿ ಮಳೆ ಅಭಾವ ತಲೆದೋರಿದಲ್ಲಿ ತೀವ್ರ ಸಮಸ್ಯೆ ಅನುಭವಿಸುವ ಸಾಧ್ಯತೆಯಿರುವುದರಿಂದ ಆರಂಭದಲ್ಲೇ ತಾತ್ಕಾಲಿಕ ಯೋಜನೆ ಬದಲು ದೀರ್ಘಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು. ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಮೂಲಗಳಾದ ಹೇಮಾವತಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು, ಜಲಜೀವನ್ ಮಿಷನ್ ಇತ್ಯಾದಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈವರೆಗೆ ಕಾಮಗಾರಿಗಳನ್ನು ಆರಂಭಿಸದಿರುವ ಯೋಜನೆಗಳನ್ನು ತಕ್ಷಣ ಆರಂಭಿಸಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಅವರು ಸೂಚಿಸಿದರು. ತುಮಕೂರು ಜಿಲ್ಲೆಯ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಲ್ಲಿ…

Read More

ತುಮಕೂರು: ಮಕ್ಕಳ ಯಶಸ್ಸಿಗೆ ಪೋಷಕರ ಸಹಕಾರ ಪ್ರಮುಖವಾದದ್ದು. ಕ್ರೀಡೆ ಕೇವಲ ಆಟಕ್ಕೆ ಅಷ್ಟೇ ಸೀಮಿತವಲ್ಲ, ಅದು ಉದ್ಯೋಗವನ್ನು ಪಡೆಯಲು ಕೂಡ ಸಹಕಾರಿಯಾಗಲಿದೆ ಎಂದು ಕರ್ನಾಟಕ ಕ್ರೀಡಾ ರತ್ನ ಹಾಗೂ ಖೋ-ಖೋ ವಿಶ್ವಕಪ್ ವಿಜೇತೆ ಚೈತ್ರ ಬಿ. ಅವರು ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಜು. ೨ ಗುರುವಾರದಂದು ಆಯೋಜಿಸಲಾಗಿದ್ದ ೨೦೨೫-೨೦೨೬ನೇ ಸಾಲಿನ ಸ್ನಾತಕೋತ್ತರ ಅಂತರ್ ವಿಭಾಗಗಳ ವಾರ್ಷಿಕ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವÀರಲು ಮಾತನಾಡಿ, ಚೈತ್ರ ಅವರು ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ನಾಣ್ಣುಡಿಯನ್ನು ಸಾಬೀತುಪಡಿಸಿದ್ದಾರೆ. ನಮ್ಮ ಸಾಧನೆ ಕೇವಲ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ಸಂಭ್ರಮ ತರುತ್ತದೆ ಎಂದರು. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಗ್ರಾಮೀಣ ಭಾಗದ ಮತ್ತು ಬಡತನದ ಹಿನ್ನೆಲೆಯುಳ್ಳ ವಿದ್ಯಾರ್ಥಿಗಳೇ ಕ್ರೀಡೆಯಲ್ಲಿ ಹೆಚ್ಚು ಸಾಧನೆ ಮಾಡುತ್ತಿದ್ದಾರೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯುವಲ್ಲಿ ಪೋಷಕರಿಗಿಂತ ಶಿಕ್ಷಕರ…

Read More

ಕೊರಟಗೆರೆ: ರಾಷ್ಟಿçÃಯ ವೈದ್ಯರ ದಿನಾಚರಣೆಯ ಅಂಗವಾಗಿ ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಅಕ್ಷಯ್ ಅವರಿಗೆ ಸಾರ್ವಜನಿಕರು, ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿ, ಅವರ ಜನಪರ ಸೇವೆಯನ್ನು ಮುಕ್ತಕಂಠದಿAದ ಶ್ಲಾಘಿಸಿದರು. ಕಳೆದ ಕೆಲವು ವರ್ಷಗಳಿಂದ ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಅಕ್ಷಯ್ ಅವರ ನೇತೃತ್ವದಲ್ಲಿ ಆರೋಗ್ಯ ಕೇಂದ್ರದಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬAದಿವೆ. ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ, ಅಗತ್ಯ ಔಷಧಿಗಳ ಲಭ್ಯತೆ, ಆಸ್ಪತ್ರೆಯ ಸ್ವಚ್ಛತೆ, ಸಿಬ್ಬಂದಿಯ ಸಮನ್ವಯ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳ ಮೂಲಕ ಈ ಆಸ್ಪತ್ರೆ ಸಾರ್ವಜನಿಕರ ವಿಶ್ವಾಸ ಗಳಿಸಿದೆ. ಲೈನ್‌ಮ್ಯಾನ್ ರಮೇಶ್ ಮಾತನಾಡಿ, “ಡಾ. ಅಕ್ಷಯ್ ಅವರು ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದ ನಂತರ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಸರ್ಕಾರದಿಂದ ದೊರೆಯುವ ಆರೋಗ್ಯ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ. ರೋಗಿಗಳಿಗೆ ಅಗತ್ಯ ಔಷಧಿಗಳನ್ನು ಲಭ್ಯವಾಗುವಂತೆ…

Read More

ತುಮಕೂರು/ಶಿವಮೊಗ್ಗ: ತುಮಕೂರಿನ ಇತಿಹಾಸ ಸಂಶೋಧಕರ ತಂಡ ಶಿವಮೊಗ್ಗ ತಾಲೂಕಿನ ಬಿದಿರಿ ಗ್ರಾಮದಲ್ಲಿ ವಿಜಯನಗರ ಕಾಲದ ಅತ್ಯಂತ ಮಹತ್ವದ ಹಾಗೂ ಇಂದಿನವರೆಗೂ ಅಪ್ರಕಟಿತವಾಗಿದ್ದ ಹೊಸ ಶಾಸನವೊಂದನ್ನು ಪತ್ತೆಹಚ್ಚಿದೆ. ಪ್ರೊ. ಎಂ. ಕೊಟ್ರೇಶ್ ಅವರ ನೇತೃತ್ವದ ತಂಡವು ಬಿದಿರಿ ಗ್ರಾಮದ ಸತೀಶ್ ಎಂಬುವವರ ಅಡಿಕೆ ತೋಟದಲ್ಲಿ ಈ ಅಪರೂಪದ ಇತಿಹಾಸದ ದಾಖಲೆಯನ್ನು ಶೋಧಿಸಿದೆ. ಶಾಸನದ ಸ್ವರೂಪ ಮತ್ತು ವೈಶಿಷ್ಟ÷್ಯಗಳು : ಸುಮಾರು ಆರು ಅಡಿ ಎತ್ತರ, ಎರಡೂವರೆ ಅಡಿ ಅಗಲ ಹಾಗೂ ಅರ್ಧ ಅಡಿ ದಪ್ಪನಾಗಿರುವ ಈ ಶಾಸನವನ್ನು ಕಪುö್ಪ ಮಿಶ್ರಿತ ನೀಲಿ ಛಾಯೆಯ ಬಳಪದ ಕಲ್ಲಿನಲ್ಲಿ ಕೆತ್ತಲಾಗಿದೆ. ಕನ್ನಡ ಲಿಪಿ ಮತ್ತು ಸಂಸ್ಕöÈತ ಭಾಷೆಯನ್ನು ಹೊಂದಿರುವ ಈ ಶಾಸನದಲ್ಲಿ ಒಟ್ಟು ೪೬ ಸಾಲುಗಳನ್ನು ಕಡೆಯಲಾಗಿದೆ. ವಿಜಯನಗರ ಸಾಮ್ರಾಜ್ಯದ ಇತಿಹಾಸ ಅಧ್ಯಯನ ಮಾಡುವವರಿಗೆ, ಅಧ್ಯಾಪಕರಿಗೆ, ಸಂಶೋಧಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಈ ಹೊಸ ಶಾಸನವು ಅತ್ಯಂತ ಉಪಯುಕ್ತ ಮಾಹಿತಿಗಳನ್ನು ಒದಗಿಸಲಿದೆ. ಈ ಶಾಸನವು ಐತಿಹಾಸಿಕವಾಗಿ ಅತ್ಯಂತ ಮಹತ್ವದ್ದಾಗಿದ್ದು, ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ಕಾರಣರಾದ ರಾಜಗುರುಗಳಾದ ಮಾಧವಾರ್ಯ…

Read More

ಹುಳಿಯಾರು: ಮತದಾರರ ಪಟ್ಟಿಯನ್ನು ಅತ್ಯಂತ ನಿಖರ ಹಾಗೂ ನವೀಕೃತವಾಗಿಡುವ ಉದ್ದೇಶದಿಂದ, ಹುಳಿಯಾರು ಪಟ್ಟಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಇದರ ಅಂಗವಾಗಿ ನಿಯೋಜನೆಗೊಂಡಿರುವ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಪಟ್ಟಣದಾದ್ಯಂತ ಮನೆ ಮನೆಗೆ ಭೇಟಿ ನೀಡಿ, ಮತದಾರರಿಗೆ ಅಗತ್ಯವಿರುವ ಗಣತಿ ನಮೂನೆ ಅರ್ಜಿಗಳನ್ನು (ಎನ್ಯೂಮರೇಷನ್ ಫಾರಂ) ವಿತರಿಸುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅರ್ಜಿ ಸಲ್ಲಿಸಲು ಅಧಿಕಾರಿಗಳ ಮನವಿ: ಮನೆ ಮನೆಗೆ ತೆರಳುತ್ತಿರುವ ಅಧಿಕಾರಿಗಳು ಸಾರ್ವಜನಿಕರಲ್ಲಿ ಗಣತಿ ನಮೂನೆಗಳನ್ನು ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ, ನಿಖರವಾಗಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳು ಹಾಗೂ ಭಾವಚಿತ್ರವನ್ನು ಲಗತ್ತಿಸಿ ನಿಗದಿತ ಅವಧಿಯೊಳಗೆ ತಮಗೆ ಸಲ್ಲಿಸಬೇಕೆಂದು ಮನವಿ ಮಾಡುತ್ತಿದ್ದಾರೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? : ಈ ವಿಶೇಷ ಪರಿಷ್ಕರಣೆಯ ಕುರಿತು ಬಿಎಲ್‌ಒ ರಂಗನಾಥ್ ಅವರು ಮಾಹಿತಿ ನೀಡಿ, ೧೮ ವರ್ಷ ತುಂಬಿದ ಹೊಸ ಮತದಾರರ ಹೆಸರನ್ನು ಪಟ್ಟಿಗೆ ಸೇರ್ಪಡೆ ಮಾಡಲು, ನಿಧನರಾದ ಮತದಾರರ ಹೆಸರನ್ನು ಕೈಬಿಡಲು, ಮನೆ ಖಾಲಿ ಮಾಡಿ…

Read More