Author: News Desk Benkiyabale

ಕೊರಟಗೆರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಅವರು ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರುಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಗೆಲುವಿಗೆ ಶುಭ ಸೂಚನೆಯಾಗಿದೆ. ರಾಜ್ಯದಲ್ಲಿ ಈಗ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಅವರು ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದರು. ದಲಿತ ಮುಖ್ಯಮಂತ್ರಿ ಕೂಗಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಏಕೈಕ ಗುರಿಯಾಗಿದೆ. ಪಕ್ಷ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಮುಖ್ಯಮಂತ್ರಿ ವಿಚಾರ ಮುನ್ನೆಲೆಗೆ ಬರಲಿದೆ ಎಂದರು. ಪರಮೇಶ್ವರ್…

Read More

ಗುಬ್ಬಿ ಬಿಜೆಪಿ ಪಕ್ಷದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ ಶೇ 40 ಪರ್ಸೆಂಟ್ ಸರ್ಕಾರ ಬಿಜೆಪಿಯದ್ದು ಎಂದು ಗುಬ್ಬಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಆರ್ ಶ್ರೀನಿವಾಸ್ ಕಿಡಿ ಕಾರಿದರು. ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಮೆರವಣಿಗೆಯಲ್ಲಿ ಸಾಗಿ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿ ಮಾತನಾಡಿದ ಅವರು ಜೆಡಿಎಸ್ ಪಕ್ಷವನ್ನು ನಾನು ಬಿಟ್ಟು ಬಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದು ಇಂದಿನ ಜನಸ್ತೋಮ ನೋಡಿದಾಗ ಸಂತೋಷವಾಗುತ್ತದೆ ನನ್ನ ಪ್ರತಿ ಚುನಾವಣೆಯಲ್ಲೂ ಇದೆ ಉತ್ಸಾಹದಿಂದ ನನ್ನ ಕಾರ್ಯಕರ್ತರು ನನ್ನ ಜೊತೆಯಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವು ಹಲವು ಯೋಜನೆಗಳನ್ನು ಮಾಡಿದ್ದು ಉಚಿತ ವಿದ್ಯುತ್, ಮಹಿಳೆಯರಿಗೆ 2000 ರೂಪಾಯಿ ಸೇರಿದಂತೆ ಹಲವು ಯೋಜನೆಯನ್ನುಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಿಂದುಳಿದವರ ಕಲ್ಯಾಣ ಸೇರಿದಂತೆ ರಾಜ್ಯದ ಕಲ್ಯಾಣವನ್ನೇ ಮಾಡಿದ್ದರು ಈ ಬಾರಿ ಸಹ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ ಇನ್ನೂ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ನಾನು ಮೂರನೇ ಪ್ಲೇಸ್ ಗೆ ಹೋಗುತ್ತೇನೆಂದು…

Read More

ತುಮಕೂರು ಗ್ರಾಮಾಂತರದ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ಬಿಜೆಪಿಗೆ ಮತಹಾಕಿದರೆ ಗ್ರಾಮಾಂತರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಮಾಜಿ ಶಾಸಕ ಬಿ.ಸುರೇಶ್ ಗೌಡ ಭರವಸೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಬಳಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು ನಕಲಿ ಬಾಂಡ್ ಹಂಚಿ ಹೈಕೋರ್ಟ್ ನಿಂದ ಅಸಿಂಧುಗೊಂಡಿರುವ ಶಾಸಕರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ, ಚುನಾವಣೆಯಲ್ಲಿ ಗೆದ್ದರು ಸಹ ಮುಖ್ಯಮಂತ್ರಿ ಆಯ್ಕೆ ಮಾಡಲು ಮತ ಹಾಕದಂತೆ ನಿರ್ಬಂಧಿಸಿದೆ ಅದ್ಯಾವ ಮುಖ ಇಟ್ಕಂಡು ಮತ ಕೇಳೋಕೆ ಬರ್ತಾರೆ ಗೊತ್ತಿಲ್ಲ ಎಂದು ಟೀಕಿಸಿದರು. ಗ್ರಾಮಾಂತರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿಗೆ ಮತ ಹಾಕಿ, ಬಿಜೆಪಿ ಗೆಲ್ಲಬೇಕೆಂದರೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಕ್ರಿಯರಾಗಿ ಕೆಲಸ ಮಾಡಬೇಕು, ಬೂತ್ ಗೆದ್ದರೆ ಕ್ಷೇತ್ರ ಗೆದ್ದಂತೆ, 226 ಬೂತ್ ಗಳಲ್ಲಿ ಕಾರ್ಯಕರ್ತರು ಬಿಜೆಪಿಯನ್ನು ಗೆಲ್ಲಿಸಿದರೆ, ಗ್ರಾಮಾಂತರದಲ್ಲಿ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲ್ಲಲಿದೆ ಎಂದರು. ಗ್ರಾಮಾಂತರ ಕ್ಷೇತ್ರದಲ್ಲಿದ್ದ 18 ಶಾಲೆಗಳನ್ನು ನಿರ್ವಹಣೆ ಮಾಡಲಾಗದೇ ಹಾಳು ಮಾಡಿದ…

Read More

ತುಮಕೂರು 2023ರ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್. ಅಭ್ಯರ್ಥಿಯಾದ ಎನ್.ಗೋವಿಂದರಾಜುರವರು ತಮ್ಮ ಕುಟುಂಬ ಸದಸ್ಯರೊಂದಿಗೆ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಮಪತ್ರವನ್ನು ಇಂದು ಶುಭದಿನವಾಗಿದ್ದರಿಂದ ಸಲ್ಲಿಸಿದ್ದು, ಹಲವಾರು ಹಿತೈಷಿಗಳು ಮತ್ತು ಸ್ನೇಹಿತರು ಇಂದು ಶುಭ ದಿನವಿರುವುದರ ಪ್ರಯುಕ್ತ ಇಂದೇ ನಾಮಪತ್ರ ಸಲ್ಲಿಸಿ ಎಂದು ಕಿವಿ ಮಾತು ಹೇಳಿದ್ದರು, ಹಾಗಾಗಿ ಇಂದು ಆತುರವಾಗಿ ನಾಮಪತ್ರವನ್ನು ಸಲ್ಲಿಸಿದ್ದು. ತಮ್ಮ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ದಿನಾಂಕ 19-04-2023ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ನಾಮಪತ್ರವನ್ನು ಸಲ್ಲಿಸುವಾಗ ತಮ್ಮ ಮಗ, ಸೊಸೆ, ಮೊಮ್ಮಗು ಹಾಗೂ ಪಾಲಿಕೆ ಸದಸ್ಯರಾದ ಧರಣೇಂದ್ರ ಕುಮಾರ್ ರಾಜು ಅವರೊಂದಿಗೆ ನಾಮಪತ್ರವನ್ನು ಸಲ್ಲಿಸಿದ್ದು, ಜೆಡಿಎಸ್ ಅಭ್ಯರ್ಥಿ ನಾನೇ ಇದರಲ್ಲಿ ಯಾರೂ ಗೊಂದಲ ಪಡೆಬೇಕಾಗಿಲ್ಲವೆಂದರು.

Read More

ತುಮಕೂರು : 2023ರ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿಯಾದ ಜಿ.ಬಿ.ಜ್ಯೋತಿಗಣೇಶ್ ರವರು ತಮ್ಮ ಆಪ್ತರೊಂದಿಗೆ ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಾಮಪತ್ರವನ್ನು ಸೋಮವಾರ ಶುಭದಿನವಾಗಿದ್ದರಿಂದ ಸಲ್ಲಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ದಿನಾಂಕ 18-04-2023ರಂದು ಮತ್ತೊಮ್ಮೆ ನಾಮಪತ್ರವನ್ನು ಸಲ್ಲಿಸಲಾಗುವುದೆಂದು ತಿಳಿಸಿದರು. ಇನ್ನುಳಿದಂತ ಇಷ್ಟು ದಿನ ಹಲವಾರು ಕಾರ್ಯಕರ್ತರಲ್ಲಿ ಬಿಜೆಪಿ ಟಿಕೇಟ್ ಸೊಗಡು ಶಿವಣ್ಣರವರಿಗೆ ಆಗುತ್ತದೆಂದು ಗೊಂದಲ ಉಂಟಾಗಿತ್ತು, ಆದರೆ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನವನ್ನು ನೀಡುವ ಕಾರ್ಯವಿತ್ತು, ಆದರೆ ಅವರು ಆತುರದಿಂದ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ ಹಾಗಾಗಿ ನಾನು ಅವರ ಬಗ್ಗೆ ಏನೂ ಮಾತನಾಡುವುದಿಲ್ಲವೆಂದು ನಾಮಪತ್ರ ಸಲ್ಲಿಸಿದ ನಂತರ ಹೇಳಿದರು. ನಾಮಪತ್ರವನ್ನು ಸಲ್ಲಿಸುವಾಗ ತಮ್ಮ ಕೆಲವೇ ಕೆಲವು ಆಪ್ತರೊಂದಿಗೆ ಮಾತ್ರ ಉಮೇದುವಾರಿಕೆಯನ್ನು ಸಲ್ಲಿಸಿದ್ದೇನೆ ಎಂದರು.

Read More

ತುಮಕೂರು 2023-24ನೇ ಸಾಲಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದ್ದು, ಯಾವುದೇ ರಾಜಕೀಯ ಪಕ್ಷದವರು ಚುನಾವಣಾ ಮತ್ತು ಪ್ರಚಾರ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ವೈ.ಎಸ್. ಪಾಟೀಲ ಅವರು ಮನವಿ ಮಾಡಿದ್ದಾರೆ. ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರನ್ವಯ ಯಾವುದೇ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ನಿಷೇಧಿಸಿದೆ ಹಾಗೂ 14-18 ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಎಲ್ಲಾ ತಾಲ್ಲೂಕಿನ ತಹಶೀಲ್ದಾರರುಗಳು ಮಕ್ಕಳ ರಕ್ಷಣಾ ಸಮಿತಿ ಹಾಗೂ ಬಾಲ ಕಾರ್ಮಿಕ ಯೋಜನೆಯ ಅಧ್ಯಕ್ಷರುಗಳು ಆಗಿರುವುದರಿಂದ ತಮ್ಮ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಪಕ್ಷಗಳು 18 ವರ್ಷದ…

Read More

ಚಿಕ್ಕನಾಯಕನಹಳ್ಳಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಳ ಮೀಸಲಾತಿ ಹೆಚ್ಚಿಸಿ 38 ವರ್ಷಗಳ ಸಮಸ್ಯೆಯನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದೆ ಲಂಬಾಣಿ ಜನಾಂಗಕ್ಕೆ ಶೇಕಡ ಮೂರರಿಂದ ನಾಲ್ಕುವರೆ ಹೆಚ್ಚಿಸಿದ್ದೇವೆ ಇದನ್ನು ಕಾಂಗ್ರೆಸ್ಸಿಗರು ರಾಜಕೀಯ ಬಂಡವಾಳವನ್ನಾಗಿ ಮಾಡಿಕೊಂಡು ಹೊರಟಿರುವುದು ಎಷ್ಟರಮಟ್ಟಿಗೆ ಸರಿ ಎಂದು ಬಿಜೆಪಿ ಅಭ್ಯರ್ಥಿ ಜೆಸಿ ಮಾಧುಸ್ವಾಮಿ ಪ್ರಶ್ನಿಸಿದರು. ಅವರು ಚಿಕ್ಕನಾಯಕನಹಳ್ಳಿ ಪಟ್ಟಣದ ತಾತಯ್ಯನಗೋರಿಗೆ ಹಾಗೂ ಹಳೆಯೂರು ಆಂಜನೇಯ ಸ್ವಾಮಿಗೆ ಭೇಟಿ ನೀಡಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿ ಎ ಇ ರಘು ಸಹಾಯಕ ಚುನಾವಣೆ ಅಧಿಕಾರಿ ತಹಶೀಲ್ದಾರ್ ಅರ್ಚನಾ ಭಟ್ ಇವರಿಗೆ ನಾಮಪತ್ರ ಸಲ್ಲಿಸಿದರು ನಂತರ ತಾಲೂಕು ಕಚೇರಿ ಎದುರು ಸಾರ್ವಜನಿಕರು ಉದ್ದೇಶಿಸಿ ಮಾತನಾಡುತ್ತಾ ನನ್ನ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯಗಳೇ ಅಭಿವೃದ್ಧಿಗೆ ಸಾಕ್ಷಿಯಾಗಿದೆ ಈಗ ತಾಲೂಕು ಯಾವ ರೀತಿ ಇದೆ ಎಂದು ಜನರನ್ನು ಪ್ರಶ್ನಿಸಿದರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರ್ಕಾರ ನೀಡಿದ ಮನೆಗಳನ್ನು ಬಿಟ್ಟು ವೆಸ್ಟ್ ಇಂಡಲ್ಲಿ…

Read More

ತುಮಕೂರು ನಗರದ ಸಿದ್ದಗಂಗಾ ಮಠಕ್ಕೆ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ. ಸುರೇಶ್‍ಗೌಡ ಅವರು ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಳಿಕ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಶ್ರೀಮಠ ಮಠ ಪವಿತ್ರವಾದ ಕ್ಷೇತ್ರ. ನಾನು ಮೊದಲಿನಿಂದಲೂ ಯಾವುದೇ ಶುಭ ಕಾರ್ಯವನ್ನು ಕೈಗೊಳ್ಳಬೇಕಾದರೆ ಶ್ರೀಮಠಕ್ಕೆ ಬಂದು ಸ್ವಾಮೀಜಿಯವರ ಆಶೀರ್ವಾದ ಪಡೆಯುವುದು ರೂಢಿ. ಹಾಗೆಯೇ ಇಂದು ಸಹ ಶ್ರೀಕ್ಷೇತ್ರಕ್ಕೆ ಬಂದು ಹಿರಿಯ ಶ್ರೀಗಳ ಗದ್ದುಗೆ ದರ್ಶನ ಮಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದೇನೆ ಎಂದರು. ನಾನು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಮುಖವಾದ ಕಾರ್ಯಗಳನ್ನು ಮಾಡಬೇಕಾದರೆ ಸ್ವಾಮೀಜಿಯವರ ಆಶೀರ್ವಾದ ಪಡೆಯುತ್ತಿದ್ದೆ. ಚುನಾವೆಯಲ್ಲಿ ಸ್ಪರ್ಧೆ ಮಾಡುವಾಗಲೂ ಶ್ರೀಗಳ ಆಶೀರ್ವಾದ ಪಡೆಯುತ್ತಿದ್ದೆ. ಅದೇ ರೀತಿ ಈಗಲೂ ಸಹ ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದೇನೆ. ಮಠಾಧ್ಯಕ್ಷರಾದ…

Read More

ತುಮಕೂರು ನಮ್ಮ ದೇಶದ ಅತ್ಯಂತ ಪವಿತ್ರವಾದ ಗ್ರಂಥ ಸಂವಿಧಾನ. ಇದಕ್ಕೆ ಮೂಲ ಕಾರಣಕರ್ತರಾಗಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಯಾವುದೇ ಜಾತಿ, ತತ್ವಗಳಿಗೆ ಭೇದ ಭಾವ ತೋರಿಸದೆ ಎಲ್ಲವನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಇದುವರೆಗೂ ಯಾರೇ ಪ್ರಯತ್ನ ಪಟ್ಟರೂ ಸಂವಿಧಾನವನ್ನು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ನಮ್ಮ ದೇಶದ ತಳಹದಿಯನ್ನು ಬದಲಾವಣೆ ಮಾಡಲು ಯಾರಾದರೂ ಕೈ ಹಾಕಿದರೆ ಅದರಿಂದ ದೇಶದ ಭದ್ರತೆ, ಅಖಂಡತೆಗೆ ಧಕ್ಕೆ ಬರುತ್ತದೆ ಎಂದು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಹಮ್ಮಿಕೊಂಡಿದ್ದ ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 132ನೇ ಜಯಂತಿಯಲ್ಲಿ ಅವರ ಭಾವಚಿತ್ರ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ನಂತರ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಅಂಬೇಡ್ಕರ್‍ರವರನ್ನು ಸಮಗ್ರವಾಗಿ ಅಭ್ಯಸಿಸಬೇಕು. ಅವರ ಬಗ್ಗೆ ಸಮಗ್ರವಾಗಿ ತಿಳುವಳಿಕೆ ಹೊಂದಬೇಕು. ಸಮಗ್ರವಾಗಿ ಅವರನ್ನು ತಿಳುವಳಿಕೆ ಹೊಂದಿದಾಗ ಅವರ ಬಗ್ಗೆ ಏನನ್ನೂ ಮಾತನಾಡಲು ಸಾಧ್ಯವಿಲ್ಲ. ಅಷ್ಟು ಪವಿತ್ರವಾಗಿ…

Read More

ತುಮಕೂರು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣಾ ಅಕ್ರಮಗಳನ್ನು ಆನ್‍ಲೈನ್ ಮೂಲಕ ದಾಖಲಿಸಲು ಚುನಾವಣಾ ಆಯೋಗವು ಛಿಗಿIಉIಐ ಅiಣizeಟಿ ಒobiಟe ಂಠಿಠಿ(ಸಿ-ವಿಜಿಲ್ ಆ್ಯಪ್) ತಂತ್ರಾಂಶವನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ಚುನಾವಣಾ ಅಕ್ರಮಗಳು ಕಂಡು ಬಂದರೆ ಕೂಡಲೇ ಸಿ-ವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದಾಗಿದೆ. 100 ನಿಮಿಷಗಳಲ್ಲಿ ದೂರುಗಳ ಇತ್ಯರ್ಥಃ ಸಿ-ವಿಜಿಲ್ ಆ್ಯಪ್ ಮೂಲಕ ದಾಖಲಾದ ಚುನಾವಣಾ ಅಕ್ರಮ ದೂರುಗಳನ್ನು ತ್ವರಿತಗತಿಯಲ್ಲಿ ಅಂದರೆ 100 ನಿಮಿಷಗಳ ಕಾಲಮಿತಿಯೊಳಗೆ ಇತ್ಯರ್ಥಪಡಿಸಲಾಗುವುದು. ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ನಿರ್ಧಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಚಲಾಯಿಸುವಂತೆ ವಿವಿಧ ರೀತಿಯ ಆಮಿಷಗಳನ್ನು ನೀಡಬಹುದಾದ ಹಣ ವಿತರಣೆ, ಉಡುಗೊರೆ, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್‍ಗಳು/ಬ್ಯಾನರ್‍ಗಳ ಅಳವಡಿಕೆ, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಅನುಮತಿ ಇಲ್ಲದ ವಾಹನ ಅಥವಾ ಬೆಂಗಾವಲುಗಳು, ಆಸ್ತಿ ವಿರೂಪ, ಮತದಾನದ ದಿನದಂದು ಮತದಾರರ ಸಾಗಣೆ, ಮತಗಟ್ಟೆಯ 200 ಮೀ. ವ್ಯಾಪ್ತಿಯಲ್ಲಿ ಪ್ರಚಾರ,…

Read More