Author: News Desk Benkiyabale

ತುಮಕೂರು ಕೊರಳಿಗೆ ಎರಡು ಗೋಣಿಚೀಲ ನೇತು ಹಾಕಿಕೊಂಡು ಮತ ಭಿಕ್ಷೆ ಕೇಳುವ ಮೂಲಕ ಸುದ್ದಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿ ಜತೆಗಿನ ನಾಲ್ಕು ದಶಕಗಳ ಸಂಬಂಧ ಕಡಿದುಕೊಳ್ಳಲು ಮುಂದಾಗಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಏಪ್ರಿಲ್ 17 ರಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸೊಗಡು ಶಿವಣ್ಣ ತಯಾರಿ ನಡೆಸಿದ್ದಾರೆ. ಪಕ್ಷ ನನ್ನನ್ನು ಕಾಪಾಡುತ್ತದೆ ಎಂದುಕೊಂಡಿದ್ದೆ ಆದರೆ ನನಗೆ ನಂಬಿಕೆ ದ್ರೋಹ ಮಾಡಿದೆ. ಬಿಜೆಪಿಯ ಎಲ್ಲಾ ಸಾಮಗ್ರಿಗಳನ್ನು ನನ್ನ ಮನೆ ಹಾಗೂ ಕಚೇರಿಯ ಹೊರಗೆ ಎಸೆಯುತ್ತೇನೆ ಎಂದು ಬುಧವಾರ ನಡೆದ ಬೆಂಬಲಿಗರ ಸಭೆಯಲ್ಲಿ ಹೇಳಿದರು. 74 ವರ್ಷ ವಯಸ್ಸಿನ ಆರ್‍ಎಸ್‍ಎಸ್ ನಾಯಕ ತುಮಕೂರಿನಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಸಂಸದ ಜಿ ಎಸ್ ಬಸವರಾಜು ಅವರ ಪುತ್ರ ಹಾಲಿ ಶಾಸಕ ಜಿ ಬಿ ಜ್ಯೋತಿಗಣೇಶ್ ಅವರಿಗಾಗಿ ಟಿಕೆಟ್ ತ್ಯಾಗ ಮಾಡಿದ್ದರು. ಇಬ್ಬರೂ ಮೂಲತಃ ಕಾಂಗ್ರೆಸ್ಸಿನವರು, ಆರಂಭದಿಂದದೂ ಕಷ್ಟ ಪಟ್ಟು ನಾವು ಕಟ್ಟಿದ…

Read More

ತುಮಕೂರು ಭಾರತ್ ಸರಕಾರದ ಖೇಲೋ ಇಂಡಿಯಾ ಯೋಜನೆಯಡಿಯಲ್ಲಿ ಮುಂದಿನ 2028ರಲ್ಲಿ ನಡೆಯಲಿರುವ ಒಲಂಪಿಕ್ ತರಬೇತಿ ಕೇಂದ್ರಕ್ಕೆ ತುಮಕೂರಿನ ವಿವೇಕಾನಂದ ರೈಫಲ್ ಶೂಟಿಂಗ್ ಸಂಸ್ಥೆಯ ಐವರು ಉದಯೋನ್ಮುಖ ಶೂಟರ್‍ಗಳು ಆಯ್ಕೆಯಾಗಿದ್ದಾರೆ. ಭಾರತದ ಸರಕಾರದ ಖೇಲೋ ಇಂಡಿಯಾ ಯೋಜನೆಯಡಿ 2028ರಲ್ಲಿ ಲಾಸ್ ಎಂಜಲಿಸ್‍ನಲ್ಲಿ ನಡೆಯುವ ಒಲಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅಗತ್ಯ ತರಬೇತಿ ನೀಡುವ ಸಲುವಾಗಿ ರೈಫಲ್ ಶೂಟಿಂಗ್, ಸುಮ್ಮಿಂಗ್ ಹಾಗೂ ಅಥ್ಲೇಟಿಕ್ ಕ್ರೀಡಾಪಟುಗಳನ್ನು ಆಯ್ಕೆ ಪ್ರಕ್ರಿಯೆ ನಡೆದಿದ್ದು,ತುಮಕೂರು ವಿವೇಕಾನಂದ ರೈಫಲ್ ಶೂಟಿಂಗ್ ಆಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಸಿದ್ದಗಂಗಾ ಮಹಿಳಾ ಕಾಲೇಜಿನ ಕಿರಣ್‍ನಂದನ್,ವಿದ್ಯಾವಾಹಿನಿ ಕಾಲೇಜಿನ ಧ್ಯಾನ್ ಪಿ.ಎಂ.,ಬಿಷಪ್ ಸಾರ್ಜೇಂಟ್ ಶಾಲೆಯ ಪೂರ್ಣ ಚಂದ್ರ,ಬಟವಾಡಿಯ ಸೆಂಟ್ ಮೇರಿಸ್ ಶಾಲೆಯ ಸಾಧಿಕ್ ಸುಲ್ತಾನ್ ಹಾಗೂ ಸರ್ವೋದಯ ಶಿಕ್ಷಣ ಸಂಸ್ಥೆಯ ವಿಜೇತ ಶೆಟ್ಟಿ ಅವರುಗಳು ಆಯ್ಕೆಯಾಗಿದ್ದಾರೆ. ಒಲಂಪಿಕ್ ತರಬೇತಿ ಕ್ಯಾಂಪ್‍ಗೆ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ಬೆಂಗಳೂರಿನ ವಿದ್ಯಾನಗರದಲ್ಲಿ ಸುಮಾರು 82 ಕೋಟಿ ರೂ ವೆಚ್ಚದಲ್ಲಿ ಸಿದ್ದಗೊಂಡಿರುವ ಖೇಲೋ ಇಂಡಿಯಾ ಕ್ರೀಡಾ ಹಾಸ್ಟಲ್ ನಲ್ಲಿ ಉಚಿತ ಊಟ, ವಸತಿ, ಶಿಕ್ಷಣದೊಂದಿಗೆ ತರಬೇತಿ ನೀಡಿ,…

Read More

ತುಮಕೂರು ಮಧುಗಿರಿ ಕ್ಷೇತ್ರದಿಂದ ಹಿಂದುಳಿದ ವರ್ಗದ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಎನ್.ರಾಜಣ್ಣ ಅವರ ವಿರುದ್ದ ನಾಯಕ ಸಮುದಾಯದ ಎಲ್.ಸಿ.ನಾಗರಾಜು ಅವರಿಗೆ ಟಿಕೇಟ್ ನೀಡುವ ಮೂಲಕ ಕೆ.ಎನ್.ಆರ್.ಅವರನ್ನು ಸೋಲಿಸುವುದರ ಜೊತೆಗೆ, ನಾಯಕ ಸಮುದಾಯವನ್ನು ಒಡೆಯುವ ಕೆಲಸವನ್ನು ಕಾಣದ ಕೈಗಳು ಮಾಡುತ್ತಿದ್ದು, ನಾಯಕ ಸಮುದಾಯದವರು ಜಾಗೃತರಾಗಿ ಮತದಾನ ಮಾಡುವಂತೆ ವಾಲ್ಮೀಕಿ ಸಮಾಜದ ಯುವ ಮುಖಂಡ ಕುಪ್ಪೂರು ಶ್ರೀಧರನಾಯಕ್ ಮನವಿ ಮಾಡಿದ್ದಾರೆ. ಖಾಸಗಿ ಹೊಟೇಲ್‍ನಲ್ಲಿ ಆಯೋಜಿಸಿದ್ದ ನಾಯಕ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮಧುಗಿರಿ ಕ್ಷೇತ್ರದಿಂದ ಎಲ್.ಸಿ.ನಾಗರಾಜು ಸ್ಪರ್ಧೆ ಸಮಾಜ ಒಡೆಯುವ ಕುತಂತ್ರವಷ್ಟೇ. ಹಾಗಾಗಿ ಮಧುಗಿರಿ ಕ್ಷೇತ್ರದ ನಾಯಕ ಸಮುದಾಯಕ್ಕೆ ಸೇರಿದ ಪ್ರತಿಯೊಬ್ಬ ಮತದಾರರು ಬಹಳ ಎಚ್ಚರಿಕೆಯಿಂದ ಮತ ಚಲಾಯಿಸಬೇಕೆಂಬುದು ನಮ್ಮ ಮನವಿಯಾಗಿದೆ ಎಂದರು. ಕ್ಷೇತ್ರದಲ್ಲಿ ಪ್ರಚಾರ ನಡೆಸುವ ವೇಳೆ ಬಿಜೆಪಿ ಅಭ್ಯರ್ಥಿಯಾಗಿರುವ ಎಲ್.ಸಿ.ನಾಗರಾಜು ಅವರ ಮಕ್ಕಳು ನಮ್ಮ ತಾಯಿಯ ಸಾವಿಗೆ ಕೆ.ಎನ್.ರಾಜಣ್ಣ ಅವರ ಕಾರಣ ಎಂಬ ಸುಳ್ಳು ಸುದ್ದಿಯನ್ನು ಹರಡುತ್ತಾ,ಜನರಲ್ಲಿ ಕೆ.ಎನ್.ರಾಜಣ್ಣ ಅವರ ವಿರುದ್ದ ಅಕ್ರೋಶ ಉಂಟಾಗುವಂತೆ ಮಾಡಲು ಪ್ರಯತ್ನಿಸುತಿದ್ದಾರೆ. ಬಿಜೆಪಿ…

Read More

. ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಸ್ಥೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಗ್ರೀನ್ ಪಾತ್ ಹೋಟೆಲ್ ಮಲ್ಲೇಶ್ವರಂ ಬೆಂಗಳೂರು ಇಲ್ಲಿ ಆಯೋಜಿಸಿದ   ಕರುನಾಡ ಕಲೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ  ಶ್ರೀಮತಿ  ಹೆಚ್. ಎಸ್. ಪ್ರತಿಮಾ ಹಾಸನ್. ರವರಿಗೆ ಹೆಮ್ಮೆಯ ಕನ್ನಡತಿ ಪ್ರಶಸ್ತಿಯನ್ನು ಶಿಕ್ಷಣ, ಸಾಮಾಜಿಕ ಕ್ಷೇತ್ರಕ್ಕೆ ಗುರುತಿಸಿ ಪ್ರಶಸ್ತಿ ನೀಡಿ ಗೌರವ ಪೂರ್ವಕವಾಗಿ ಸನ್ಮಾನಿಸಿ ಗೌರವಿಸಲಾಯಿತು. ಹೆಚ್. ಎಸ್. ಪ್ರತಿಮಾ ಹಾಸನ್. ರವರ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಸಾಹಿತಿಕ ಎಲ್ಲಾ ಕ್ಷೇತ್ರದ ಸಾಧನೆಯನ್ನು ಗಣನೆಗೆ ತೆಗೆದುಕೊಂಡು ಇವರಿಗೆ  9/03/2023ರಂದು ಗ್ರೀನ್ ಪಾತ್ ಹೋಟೆಲ್ ಬೆಂಗಳೂರು ಇಲ್ಲಿ  ನಡೆದ ಕಾರ್ಯಕ್ರಮದಲ್ಲಿ ಹೆಮ್ಮೆಯ ಕನ್ನಡತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸುಜ್ಞಾನ ಜ್ಞಾನಪೀಠದಿಂದ ಇತ್ತೀಚಿಗೆ ಇವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇವರು ಹಲವಾರು ರಾಜ್ಯ ಪ್ರಶಸ್ತಿ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಚಲನಚಿತ್ರ ಹಿರಿಯ ನಟಿ. ಮಾಲತಿ ಶ್ರೀ ರವರು  ಮತ್ತು…

Read More

ಪಾವಗಡ ತಾಲ್ಲೂಕಿನಲ್ಲಿ ಕೂನೆಯ ಹಂತದಲ್ಲಿ ಇನ್ನೇನು ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವಂತಹ ವೇಳೆಯಲ್ಲಿ ಚಿತ್ರದುರ್ಗ ಮಾಜಿ ಸಂಸದ ಜನಾರ್ದನ ಸ್ವಾಮೀಯವರು ಈ ಭಾಗದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದೆನೆ ಎಂಬುದಾಗಿ ಈ ಭಾಗದಲ್ಲಿ ಈಗಾಗಲೇ ಹಲವು ವರ್ಷಗಳ ಕಾಲ ಆಕಾಂಕ್ಷಿ ಅಭ್ಯರ್ಥಿ ಯಾಗಿ ಸೇವೆ ಮಾಡಿಕೊಂಡು ಬರುತ್ತಿರುವ ಆಕಾಂಕ್ಷಿ ಅಭ್ಯರ್ಥಿ ಗಳಿಗೆ ಶಾಕ್ ನೀಡಿದ್ದಾರೆ. ಭಾನುವಾರ ಏಕ ಏಕಿ ಪಾವಗಡಕ್ಕೆ ಬೇಟಿ ನೀಡಿದ ಚಿತ್ರದುರ್ಗ ಮಾಜಿ ಸಂಸದ ಜನರ್ಧನಸ್ವಾಮಿ ಯವರು ಶನಿ ಮಹಾತ್ಮ ದೇವಾಲಯಕ್ಕೆ ಬೇಟಿ ನೀಡಿ ನಂತರ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಬಳಿ ಸಭೆ ನಡೆಸಿ ನಂತರ ಮಾದ್ಯಮ ಬಳಿ ಮಾತನಾಡಿದ ಅವರು ಪಾವಗಡ ನನ್ನಗೆ ಹಳೆಯದು ಈ ಭಾಗದ ಸಂಸದ ನಾಗಿದ್ದ ವೇಳೆಯಲ್ಲಿ ಜನಪರ ಕೆಲಸಗಳು ಮಾಡಿದ್ದೆನೆ. ಈ ಭಾಗದ 40ಕೆರೆ ಗಳಿಗೆ ನೀರು ತುಂಬಿಸುವ ಯೋಜನೆಗೆ ಹೆಚ್ಚು ಹೊತ್ತು ನೀಡಿದು ನನ್ನ ಅವಧಿಯಲ್ಲಿ. ತುಂಗಭದ್ರಾ ಯೋಜನೆಗೆ ಚಾಲನೆ ನೀಡಿದ್ದು ನನ್ನ ಅವಧಿಯಲ್ಲಿ. ನಾನು ಸಂಸದ…

Read More

ಕೊರಟಗೆರೆ ಸಾದರು ಎಂದರೆ ಸಜ್ಜನರು, ಒಳ್ಳೆಯ ಜನ ಎಂಬ ಉಲ್ಲೇಖಗಳಿವೆ ನಾನು ನಿಮ್ಮ ಸಹೋದರನಾಗಿ ಸಮುದಾಯಕ್ಕೆ ದ್ವನಿಯಾಗಿ ನಿಲ್ಲುತ್ತೇನೆ ಎಂದು ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ ತಿಳಿಸಿದರು. ಪಟ್ಟಣದ ಹಿಂದೂ ಸಾದರ ಸಮುದಾಯ ಭವದಲ್ಲಿ ಆಯೋಜಿಸಲಾಗಿದ್ದ ಹಿಂದೂ ಸಾದರ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಮೂಲತಃ ಜೈನಾ ಸಮುದಾಯಕ್ಕೆ ಸೇರಿದವರು ನೀವು ಜೈನರು ಹಿಂಸೆಯನ್ನು ಮಾಡಿದವರಲ್ಲ. ನೀವು ಆ ಸಮುದಾಯದಿಂದ ಬಂದವರು. ಪರಿವರ್ತನೆಯಲ್ಲಿ ನೀವು ಹಿಂದೂ ಧರ್ಮಕ್ಕೆ ಬಂದದಂತಹ ಸಮುದಾಯ ನಿಮ್ಮದು ಎಂದು ಹೇಳಿದರು. ಜೈನರು, ಹಿಂದೂ, ಲಿಂಗಾಯತ ಮೂರು ಕಡೆ ನಿಮ್ಮ ಗುರುತುಗಳಿಗೆ ಶಾಂತಿಯುತ ಜೀವನ ನಡೆಸುವ ಸಮುದಾಯ ನಿಮ್ಮದಾಗಿದೆ. 1916ರಲ್ಲಿ ಮಂಡಿ ಹರಿಯಣ್ಣಯ್ಯ ಅಸೆಂಬ್ಲಿ ಮೈಸೂರಿನ ರಾಜ್ಯದಲ್ಲಿ ಸಚಿವರಾಗುತ್ತಾರೆ. ಪ್ರತಿನಿಧಿ ಸಭೆಗೆ ಸದಸ್ಯರನ್ನು ಮಾಡುತ್ತಾರೆ. ರಾಜಕೀಯದಲ್ಲಿ ಅಷ್ಟೋಂದು ಗುರುತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಮುಂದಿನ ದಿನಗಳಲ್ಲಿ ಅದು ಸಾಧ್ಯವಾಗಲಿದೆ. ಜಾಗೃತಿ ಮೂಡಿಸುವ ಸಲುವಾಗಿ ರಾಜಕೀಯ ಜಾಗೃತಿಯನ್ನು ಮೂಡಿಸಬೇಕು. ನಮಗೆ ಯಾರು ಶಕ್ತಿಯನ್ನು ನೀಡುತ್ತಾರೆ ಯಾರು ನಮ್ಮವರು ಎಂದು ಗುರುತಿಸುತ್ತಾರೆ ಅವರನ್ನು…

Read More

ತುಮಕೂರು ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಅಧಿಕಾರಿ / ಸಹಾಯಕ ಮತಗಟ್ಟೆ ಅಧಿಕಾರಿಗಳನ್ನಾಗಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿ/ಸಿಬ್ಬಂದಿಗಳು ನಕಲಿ ಆಹ್ವಾನ ಪತ್ರಿಕೆಗಳನ್ನು ಸಲ್ಲಿಸಿ ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದರು. ಎನ್.ಐ.ಸಿ. ಕಚೇರಿಯಲ್ಲಿಂದು ಪತ್ರಿಕಾ ಹೇಳಿಕೆ ನೀಡಿದ ಅವರು ಮದುವೆ, ಮತ್ತಿತರ ಸಮಾರಂಭಗಳಿರುವುದರಿಂದ ಚುನಾವಣಾ ಕರ್ತವ್ಯದಿಂದ ಬಿಡುಗಡೆ ಮಾಡಬೇಕೆಂದು ನಕಲಿ ಆಹ್ವಾನ ಪತ್ರಿಕೆಗಳನ್ನು ಸಲ್ಲಿಸುತ್ತಿರುವುದು ಕಂಡು ಬಂದಿದೆ. ಆಹ್ವಾನ ಪತ್ರಿಕೆಯನ್ನು ಮುದ್ರಣ ಮಾಡುವ ಮುದ್ರಕರು ಸೂಕ್ತ ದಾಖಲೆ ಪಡೆಯದೇ ಪತ್ರಿಕೆಗಳನ್ನು ಮುದ್ರಣ ಮಾಡಬಾರದು ಎಂದರಲ್ಲದೆ ಚುನಾವಣಾ ದಿನ ಹಾಗೂ ಹಿಂದಿನ ದಿನದಂದು ಸಮಾರಂಭವಿರುವ ಬಗ್ಗೆ ಸುಳ್ಳು ಆಹ್ವಾನ ಪತ್ರಿಕೆ ನೀಡಿದ ಚುನಾವಣಾ ಕರ್ತವ್ಯ ನಿಯೋಜಿತರನ್ನು ಆರ್.ಪಿ. ಕಾಯ್ದೆ 134ರನ್ವಯ ಅಮಾನತ್ತುಗೊಳಿಸಲಾಗುವುದೆಂದು ಎಚ್ಚರಿಕೆ ನೀಡಿದರು. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಪಿಆರ್‍ಓ ಹಾಗೂ ಎಪಿಆರ್‍ಓ ಸೇರಿದಂತೆ ಒಟ್ಟು 8622 ಅಧಿಕಾರಿ/ಸಿಬ್ಬಂದಿಗಳಿಗೆ ಏಪ್ರಿಲ್ 11ರಂದು ತರಬೇತಿಯನ್ನು…

Read More

ತುಮಕೂರು ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಪಂಚಾಯತ್ ಮತ್ತು ಬೂತ್ ಮಟ್ಟದ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ತುಮಕೂರು ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಕೆಂಪಣ್ಣ,ಕಳೆದ ಮೂರು ಚುನಾವಣೆಗಳಿಗೆ ಹೊಲಿಕೆ ಮಾಡಿದರೆ ಕಾಂಗ್ರೆಸ್ ಪಕ್ಷ ಕುಸಿಯುತ್ತಿರುವುದು ಸ್ಪಷ್ಟವಾಗಿರುವ ಹಿನ್ನೇಲೆಯಲ್ಲಿ, ಅತಿ ಹೆಚ್ಚು ದಲಿತ, ಹಿಂದುಳಿದ ಮತದಾರರನ್ನು ಹೊಂದಿರುವ ಗ್ರಾಮಾಂತರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೆಲೆ ಕಲ್ಪಿಸುವ ನಿಟ್ಟಿನಲ್ಲಿ ಈ ಬಾರಿ ಹಿಂದುಳಿದ ವರ್ಗದ ಅಭ್ಯರ್ಥಿಯೊಬ್ಬರನ್ನು ಕಣಕ್ಕೆ ಇಳಿಸುವ ಚಿಂತನೆಯಲ್ಲಿ ಕಾಂಗ್ರೆಸ್ ಪಕ್ಷವಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು, ಮುಖಂಡರ ಸಭೆಯನ್ನು ಆಯೋಜಿಸಿದ್ದು, ಹಿಂದುಳಿದ ವರ್ಗದ ಕಾಡುಗೊಲ್ಲ ಸಮುದಾಯಕ್ಕೆ ಸೇರಿದ ನಿವೃತ್ತ ಎಇಇ ಜಿ.ಹೆಚ್.ಷಣ್ಮುಖಪ್ಪ, ಸೂರ್ಯಮುಕುಂದರಾಜ್, ಶ್ರೀನಿವಾಸ್, ಆರ್.ನಾರಾಯಣ್, ಹೆಚ್.ನಿಂಗಪ್ಪ, ನರಸಿಂಹರಾಜು ಅವರುಗಳು ಪ್ರಬಲ ಆಕಾಂಕ್ಷಿಗಳಿದ್ದು, ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಜಿ.ಹೆಚ್.ಷಣ್ಮುಖಪ್ಪ ಅವರು ಅಭ್ಯರ್ಥಿಯಾಗುವ ಎಲ್ಲಾ ನಿರೀಕ್ಷೆಗಳಿದ್ದು, ನಾವೆಲ್ಲರೂ ಅವರ ಗೆಲುವಿಗೆ ಶಕ್ತಿ ಮೀರಿ…

Read More

ತುಮಕೂರು: ದಿವ್ಯಾಂಗ ಮೈತ್ರಿ ಸ್ಪೋಟ್ರ್ಸ್ ಅಕಾಡೆಮಿ(ರಿ), ತುಮಕೂರು ಜಿಲ್ಲಾ ದಿವ್ಯಾಂಗ ಸ್ಪೋಟ್ರ್ಸ ಅಕಾಡೆಮಿ(ರಿ) ವತಿಯಿಂದ ವಿಕಲಚೇತರರಾಗಿ ಎರಡು ದಿನಗಳ ವ್ಹೀಲ್‍ಚೇರ್ ಕ್ರಿಕೆಟ್ ಟೂರ್ನಮೆಂಟ್‍ನ್ನು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. ಎರಡು ದಿನಗಳ ಈ ಟೂರ್ನಿಯಲ್ಲಿ ತುಮಕೂರು ಸುತ್ತಮುತ್ತಲಿನ ನಾಲ್ಕು ತಂಡಗಳು ಭಾಗವಹಿಸಿದ್ದು, ನಮ್ಮನಿಧಿ ಟ್ರಸ್ಟ್‍ನ ಸಹಯೋಗದಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.ತುಮಕೂರು, ಬಳ್ಳಾರಿ, ಬೆಂಗಳೂರು ಮತ್ತು ಬೆಳಗಾವಿಯ ಸುಮಾರು 70 ಜನ ದಿವ್ಯಾಂಗ ಕ್ರೀಡಾಪಟುಗಳು ಭಾಗವಹಿಸಿದ್ದಾರೆ.ಇವರಲ್ಲಿ ಅಂತರರಾಷ್ಟ್ರೀಯ ಟೂರ್ನಿಯಲ್ಲಿ ಆಟವಾಡಿರುವ ಕ್ರೀಡಾಪಟುಗಳು ಭಾಗವಹಿಸಿರುವುದು ಹೆಮ್ಮಪಡುವಂತಹದ್ದು.ಇವರಿಗೆ ಶ್ರೀಸಿದ್ದಗಂಗಾ ಮಠದಲ್ಲಿ ವಸತಿ ವ್ಯವಸ್ಥೆ ಮಾಡಿದ್ದು,ಊಟದ ವ್ಯವಸ್ಥೆಯನ್ನು ಸಹ ಸಮಮ್ ಸಮಿತಿವತಿಯಿಂದ ಮಾಡಲಾಗಿದೆ. ನಾಲ್ಕು ತಂಡಗಳು ಭಾಗವಹಿಸುವ ಈ ಟೂನಿಯ ಮೊದಲ ವಿಜೇತರಿಗೆ 20 ಸಾವಿರ ರೂ ನಗದು ಹಾಗೂ ಆಕರ್ಷಕ ಟ್ರೋಫಿ ಹಾಗೂ ಎರಡನೇ ಬಹುಮಾನವಾಗಿ 10 ಸಾವಿರ ರೂ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು.ವಿಕಲಾಂಗದಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ,ಪ್ರೋತ್ಸಾಹಿಸುವ ಸಲುವಾಗಿ ಈ ಟೂರ್ನಿಯನ್ನು ಆಯೋಜಿಸಲಾಗಿದೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಟೂರ್ನಿಯನ್ನು ಆಯೋಜಿಸುವ ಇಚ್ಚೆ ಇದೆ…

Read More

ತುಮಕೂರು ನಗರದ ಕಾಂಗ್ರೆಸ್ ಹಿರಿಯ ಧುರೀಣರಾದ ಎಸ್.ಶಫಿ ಅಹಮದ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ವಿರುದ್ಧ ಸಭೆ ತುಂಬೆಲ್ಲಾ ಹಾರಿಹಾಯ್ದರು. ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ನಮ್ಮ ಅಳಿಯ ಡಾ. ರಫೀಕ್ ಅಹಮದ್ ರವರಿಗೆ ಟಿಕೆಟ್ ನೀಡುವ ವಿಶ್ವಸವನ್ನು ನೀಡಿ ನಂತರ ಟಿಕೆಟ್ ಕೈತಪ್ಪುವಂತೆ ಚಾಣಾಕ್ಷತನ ತೋರಿ ಬೇರೆಯವರಿಗೆ ಟಿಕೆಟ್ ನೀಡುವ ಮೂಲಕ ನಮಗೆ ವಿಶ್ವಾಸ ಘಾತಕ ಕೆಲಸವನ್ನ ಮಾಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಫಿ ಅಹಮದ್ ರವರು ಡಾ.ಜಿ ಪರಮೇಶ್ವರ್ ರವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಶಫಿ ಅಹಮದ್ ಹಾಗೂ ರಫೀಕ್ ಅಹ್ಮದ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ತುಮಕೂರು ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಸಭೆ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ಜಿ ಪರಮೇಶ್ವರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಲಕ್ಕಪ್ಪ ರವರ ಕಾಲದಿಂದಲೂ ಪಕ್ಷಕ್ಕೆ ದುಡಿದಿದ್ದೇವೆ ಸುಮಾರು 50 ವರ್ಷಗಳ ಕಾಲ…

Read More