ತುಮಕೂರು ರಾಜ್ಯ ಕಾನೂನು ಮಂತ್ರಿ ಜೆ.ಸಿ.ಮಾಧುಸ್ವಾಮಿ 2011ರ ಜನಗಣತಿ ಆಧಾರದಲ್ಲಿ ಶೇ17 ರಷ್ಟು ಮೀಸಲಾತಿಯನ್ನು ಪರಿಶಿಷ್ಟ ಜಾತಿಯಲ್ಲಿ ಸ್ಪಷ್ಯ ಮತ್ತು ಅಸ್ಪøಷ್ಯ ಜಾತಿಗಳಿಗೆ ಹಂಚಿಕೆ ಮಾಡಿರುವುದು ಸಮಂಜಸವಾಗಿದೆ. ವಿನಾಕಾರಣ ಇದರಲ್ಲಿ ಕೆಲವರು ತಪ್ಪು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಟಿಕೇಟ್ ಆಕಾಂಕ್ಷಿ ಹಾಗೂ ವೈದ್ಯ ಡಾ.ಲಕ್ಷ್ಮಿಕಾಂತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ದೇಶದಲ್ಲಿ ಮೀಸಲಾತಿ ಎನ್ನುವುದು ಸಾಮಾಜಿಕ ನ್ಯಾಯದ ಭಾಗವಾಗಿದೆ. ಶ್ರೇಣಿಕೃತ ಜಾತಿ ವ್ಯವಸ್ಥೆಯಲ್ಲಿ ತುಳಿತಕ್ಕೆ ಒಳಗಾದ ಸಮುದಾಯಗಳನ್ನು ಇತರೆ ಸಮುದಾಯಗಳೊಂದಿಗೆ ಸ್ಪರ್ಧೆ ಮಾಡಲು ಅನುಕೂಲವಾಗುವಂತೆ ಮೀಸಲಾತಿಯನ್ನು ಸರಕಾರ ಕಲ್ಪಿಸಿದೆ.ಆದರೆ ಇದನ್ನು ಸರಿಯಾಗ ಅರ್ಥೈಸದ ಕೆಲ ಸ್ಪಷ್ಟ ಜಾತಿಗಳ ಜನರು ಇದರ ವಿರುದ್ದ ಪ್ರತಿಭಟನೆ ನಡೆಸುತ್ತಿರುವುದು ವಿಷಾದ ಸಂಗತಿ ಎಂದರು. ಪ್ರಸ್ತುತ ರಾಜ್ಯ ಸರಕಾರ ಮಾಡಿರುವ ಮೀಸಲಾತಿ ಹಂಚಿಕೆ ಮಾಡಿರುವುದು ಅತ್ಯಂತ ವೈಜ್ಞಾನಿಕವಾಗಿದೆ.ಇದರಿಂದ ಮೇಲ್ಜಾತಿಯ ಜನರು ಬೇಡ ಜಂಗಮ ಹೆಸರಿನಲ್ಲಿ ಪಡೆಯುತ್ತಿದ್ದ ಎಸ್ಸಿ ಮೀಸಲಾತಿ ಸೌಲಭ್ಯಕ್ಕೆ ಕಡಿವಾಣ ಬೀಳಲಿದೆ. ಇದುವರೆಗೂ ಪರಿಶಿಷ್ಟರಿಗೆ ಶೇ17 ಮೀಸಲಾತಿ ಇದೆ ಎಂದು ಸಾವಿರಾರು ಜನರು ನಕಲಿ…
Author: News Desk Benkiyabale
ತುಮಕೂರು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಬೆಂಬಲಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ಮುಖಂಡ ನರಸೆಗೌಡ ತಿಳಿಸಿದ್ದಾರೆ. ಎರಡು ದಶಕಗಳಿಂದ ಜೆ.ಡಿ.ಎಸ್. ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತಿರುವ ನನಗೆ ಜೆಡಿಎಸ್ ನ ಟಿಕೇಟ್ ಲಭಿಸದೇ ಇರುವುದರಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆಂದು ಸ್ಪಷ್ಟನೆಯನ್ನು ನರಸೇಗೌಡರವರು ನೀಡಿದ್ದಾರೆ. ನಾನು ಪ್ರೀತಿ, ವಿಶ್ವಾಸ, ಸಾಮಾಜಿಕ ಭದ್ರತೆಯಿಂದ ಚುನಾವಣಾ ಕಣಕ್ಕೆ ಇಳಿಯುತ್ತಿದ್ದು, ನಾನು ಕಳೆದ 2013ನೇ ಸಾಲಿನ ಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷದಿಂದ ಟಿಕೇಟ್ ಬಹುತೇಕ ಖಚಿತವಾಗಿತ್ತು, ಆದರೆ ಆ ಸಮಯದಲ್ಲಿ ಸನ್ಮಾನ್ಯ ದೇವೇಗೌಡರು ತಾವು ಈ ಭಾರಿ ಸ್ಪರ್ಧಿಸುವುದು ಬೇಡ ಕಾಂಗ್ರೆಸ್ ಪಕ್ಷದಿಂದ ಬಂದಿರುವ ಗೋವಿಂದರಾಜು ಅವರನ್ನು ಬೆಂಬಲಿಸಿ ಎಂದು ಹೇಳಿ ನನ್ನನ್ನು ಕಣದಿಂದ ದೂರ ಸರಿಯುವಂತೆ ಸೂಚಿಸಿದ್ದರು, ಅದರಂತೆಯೇ ನಾನು ನನ್ನ ಸ್ಥಾನವನ್ನು ಅವರಿಗೆ ಬಿಟ್ಟುಕೊಟ್ಟಿದ್ದೆ. ಸ್ವತಃ ಗೋವಿಂದರಾಜು ಅವರು ಅಂದಿನಿಂದ ಇಂದಿನವರೆವಿಗೂ ನನ್ನನ್ನು ಕಡೆಗಣಿಸುತ್ತಲೇ ಬರುತ್ತಿದ್ದರೂ, ನಾನು ಎಲ್ಲವನ್ನೂ ಸಹಿಸಿಕೊಂಡು ನಮ್ಮದೇ ಪಕ್ಷದ ಅಭ್ಯರ್ಥಿಯೆಂದು ನೋವನ್ನು ಸಹಿಸಿಕೊಂಡು ನಾನು…
ತುಮಕೂರು ಜಿಲ್ಲೆಯಲ್ಲಿ ಹನಿಟ್ರಾಪ್ ಪ್ರರಂಭವಾಗಿದ್ದು ಜೆಡಿಎಸ್ ಅಭ್ಯರ್ಥಿ ಸಿಲುಕಿಕೊಂಡಿರುವುದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗೆ ಕಾಡ್ತಿದೆ ಈ ರಾಸಲೀಲೆ ವಿಡಿಯೋ ಭಯ..? ಮಂಗಳೂರು ಮೂಲದ ಯುವತಿಯಿಂದ ಜೆಡಿಎಸ್ ಅಭ್ಯರ್ಥಿ ಹನಿಟ್ರಾಪ್ ಒಳಗಾಗಿದ್ದಾರೆ. ಚುನಾವಣಾ ಸಂಧರ್ಭದಲ್ಲಿ ಈ ವಿಡೀಯೋ ರಿಲೀಸ್ ಆದರೆ ಮುಂದೆ ಏನುಗತಿ ಎಂಬ ಭಯ ಆತನಲ್ಲಿ ಕಾಡುತ್ತಿದೆ. ಈ ಖಾಸಗಿ ವಿಡಿಯೋ ಮರೆಮಾಚಲು ಜೆಡಿಎಸ್ ಅಭ್ಯರ್ಥಿಗೆ ಬರೋಬ್ಬರಿ 6 ಕೋಟಿ ಗೆ ಡಿಮ್ಯಾಂಡ್..? ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ಆಭ್ಯರ್ಥಿಯೂ ಭಯದಲ್ಲೇ ಇದ್ದಾರೆ ಎಂಬ ಮಾಹಿತಿ ಇದೆ. ಎರಡು ಬಾರಿ ಸ್ಪರ್ಧೆ ಮಾಡಿ, ಈ ಬಾರಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗೆ ಶುರುವಾಯ್ತು ನಿಜವಾಗಿಯೂ ಆತಂಕ ಪ್ರರಂಭವಾಗಿದೆ. ಈ ವೀಡಿಯೋ ಏನಾದರು ಬಿಡುಗಡೆ ಯಾದರೆ ಈ ಭಾರಿಯೂ ಸೋಲು ಖಚಿತ ಎಂಬ ಭಯ ಅಭ್ಯರ್ಥಿಯನ್ನು ಕಾಡುತ್ತಿದೆ. ಈ ವಿಡಿಯೋ ಜಿಲ್ಲೆಯ ಕಾಂಗ್ರೆಸ್ ಮುಖಂಡನೊಬ್ಬನನ್ನ ಬಳಿ ಇದೆ ಎಂಬ ಮಾಹಿತಿಯಿದ್ದು, ಆತನನ್ನು ಮುಂದಿಟ್ಟು ಕೊಂಡು ಇನ್ನು ಹಲವರು ಜೆಡಿಎಸ್ ಅಭ್ಯರ್ಥಿಗೆ…
ತುಮಕೂರು ಅವಜ್ಞಾನಿಕ ಆದೇಶವನ್ನು ಹಿಂಪಡೆಯುವಂತೆ ಮೀಸಲಾತಿ ಸಂರಕ್ಷಣ ಒಕ್ಕೂಟದಿಂದ ಒತ್ತಾಯ ಬುಧವಾರ ಪಾವಗಡ ತಾಲ್ಲೂಕಿನ ಮೀಸಲಾತಿ ಸಂರಕ್ಷಣಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿಯು ಅವೈಜ್ಞಾನಿಕ, ನ್ಯಾಯ ಮೂರ್ತಿ ಸದಾಶಿವ ಆಯೋಗ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಿಂದ ಪ್ರಾರಂಭವಾದ ಪ್ರತಿಭಟನೆ ಸರ್ಕಲ್, ಟೋಲ್ ಗೇಟಲ್ಲಿ ಅಂಬೇಡ್ಕರ್ ಪುತಳಿಗೆ ಮಾಲಾರ್ಪಣೆ ಮಾಡಿ ನಂತರ ತಾಲ್ಲೂಕಿನ ದಂಡಾಧಿಕಾರಿಗಳಾದ ಕೆ ಎನ್ ಸುಜಾತ ರವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್ಸಾರ್ ಪಾಳ್ಯದನ್ಮಂತ್ರಾಯ ರವರು ಎಸಿ ರೂಂ ಅಲ್ಲಿ ಕುಳಿತಿ ಮಾಡಿರುವ ಸದಾಶಿವ ಆಯೋಗ ಅವೈಜ್ಞಾನಿಕ ಈ ಕೂಡಲೆ ರಾಜ್ಯ ಮತ್ತು ಕೇಂದ್ರ ಸರ್ಕಾರವು ಹಿಂಪಡೆಯಬೇಕು. ಇಷ್ಟು ದಿನ ಇದ್ದ ವೀಸಲಾತಿಯನ್ನೆ ಜಾರಿ ಮಾಡಬೇಕು, ಒಂದು ಪಕ್ಷ ಮಾಡದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದರು. ರಮೇಶ್ ರಾಥೋಡ್ ಮಾತನಾಡಿ ಈಗ ಮಾಡಿರುವ ವರ್ಗೀಕರಣ ಕಾನೂನು ಪ್ರಕಾರ ಎಲ್ಲಿಯೂ ಇಲ್ಲ, ಡಾ…
ತುಮಕೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶೇ.100ರಷ್ಟು ಮತದಾನವಾಗಬೇಕು. ಈ ಹಿನ್ನೆಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ಸಭಾಂಗಣದಲ್ಲಿ ಬುಧವಾರ ಜರುಗಿದ ಸ್ವೀಪ್ ಸಮಿತಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ವಾರ್ಡುಗಳಲ್ಲಿ ತಪ್ಪದೆ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಬೇಕು. ಹಿಂದಿನ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿರುವ ವಾರ್ಡುಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಅಧಿಕಾರಿಗಳು ಹಿಂದಿನ ಚುನಾವಣೆಯಲ್ಲಿ ಮತದಾನ ಕಡಿಮೆಯಾಗಲು ಕಾರಣವನ್ನು ಕಂಡುಕೊಳ್ಳಬೇಕು. ಮತದಾನ ಮಾಡುವ ಮತಗಟ್ಟೆಯ ಮಾಹಿತಿ ಕೊರತೆಯಿಂದ ಅಥವಾ ಮತಗಟ್ಟೆ ದೂರವಿದೆ ಎಂದು ಕೆಲವು ಮತದಾರರು ಮತದಾನದಿಂದ ತಪ್ಪಿ ಹೋಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಮತದಾರರ ಚೀಟಿಯನ್ನು ವಿತರಿಸಿ ಮತಗಟ್ಟೆಗಳ ಮಾಹಿತಿಯನ್ನು ಮತದಾರರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬೆಂಗಳೂರು ಮತ್ತಿತರ…
ತುಮಕೂರು ಇತ್ತೀಚಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವೆಟರನ್ ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ 42ನೇ ರಾಷ್ಟ್ರಮಟ್ಟದ ವೆಟರನ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತುಮಕೂರಿನ ಕ್ರೀಡಾಪಟುಗಳಾದ ತುಂಬಾಡಿ ಗ್ರಾಮದ ಚಿಕ್ಕತಿಮ್ಮಯ್ಯ ಭರ್ಜಿ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ, ಗುಂಡು ಎಸೆತ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ, ಪೆÇೀಲ್ ವಾಲ್ಟ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಹಾಗೂ 4100 ಮೀಟರ್ ರಿಲೆ ಓಟದಲ್ಲಿ ಕಂಚಿನ ಪದಕ ಪಡೆದರು. ಜಗದೀಶ್ 4400 ಮೀಟರ್ ರಿಲೇ ಓಟದಲ್ಲಿ ಚಿನ್ನದ ಪದಕ, 400 ಮೀ ಓಟದಲ್ಲಿ ಕಂಚಿನ ಪದಕ 800 ಮೀ ಓಟದಲ್ಲಿ ಕಂಚಿನ ಪದಕ 5 ಕಿ.ಮೀ ವೇಗದ ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕ, 4100 ಮೀಟರ್ ರಿಲೇ ಓಟದಲ್ಲಿ ಕಂಚಿನ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದರು. ಇದೇ ಸಂದರ್ಭದಲ್ಲಿ ರವಿ ಸಿ.ಎಂ 5 ಕಿ.ಮೀ ಓಟದಲ್ಲಿ ಕಂಚಿನ ಪದಕ ಪಡೆದ. ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಮುಂಜಾನೆ ಗೆಳೆಯರ ಬಳಗದ ವತಿಯಿಂದ ಅಂತರಾಷ್ಟ್ರೀಯ ಕ್ರೀಡಾಪಟು ಟಿ.ಕೆ ಆನಂದ್ ನೇತೃತ್ವದಲ್ಲಿ ಮಹಾತ್ಮ…
ತುಮಕೂರು ದೇವರಾಯನ ದುರ್ಗ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿ ಊರ್ಡಿಗೆರೆ ಹೋಬಳಿ ಸರ್ವತ್ತೋಮುಖ ಅಭಿವೃದ್ಧಿ ನನ್ನ ಮುಂದಿನ ಗುರಿಯಾಗಿದೆ. ಊರ್ಡಿಗೆರೆ ಪದವಿ ಕಾಲೇಜು ಹಾಗೂ ದೇವರಾಯನದುರ್ಗಕ್ಕೆ ರೋಪ್ ವೇ ಅಳವಡಿಸಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ ಪಡಿಸುವ ಭರವಸೆಯನ್ನು ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿ ಬಿ.ಸುರೇಶಗೌಡ ಭರವಸೆ ನೀಡಿದರು. ಊರ್ಡಿಗೆರೆ, ದೇವರಾಯನದುರ್ಗಕ್ಕೆ ಭೇಟಿ ನೀಡಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ಮತದಾರರೊಂದಿಗೆ ಮಾತನಾಡಿದ ಅವರು, ಊರ್ಡಿಗೆರೆಗೆ ಪದವಿ ಕಾಲೇಜಿನ ಅಗತ್ಯವಿದೆ. ಇಲ್ಲಿಗೆ ವಸಂತನರಾಸಪುರ, ದಾಬಸಪೇಟೆ ಕೈಗಾರಿಕಾ ಪ್ರದೇಶ ಎರಡೂ ಹತ್ತಿರದಲ್ಲಿವೆ. ಇವುಗಳ ಪ್ರಯೋಜನ ಪಡೆಯಬೇಕಾದರೆ ಇಲ್ಲಿನ ಮಕ್ಕಳಿಗೆ ಉನ್ನತ ಶಿಕ್ಷಣದ ಅಗತ್ಯವಿದೆ. ಹೆಣ್ಣು ಮಕ್ಕಳಿಗೆ ಮನೆ ಬಾಗಿಲಲ್ಲೇ ಶಿಕ್ಷಣ ಸಿಗುವಂತಾಗಬೇಕಾಗಿದೆ ಎಂದರು. ನಾನು ಶಾಸಕನಾಗಿ ಆಯ್ಕೆಯಾದರೆ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುತ್ತೇನೆ. ಹಳ್ಳಿ ಮಕ್ಕಳಿಗೆ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ಒದಗಿಸುತ್ತೇನೆ ಎಂದು ಪೆÇೀಷಕರಿಗೆ ಭರವಸೆ ನೀಡಿದರು. ದೇವರಾಯನದುರ್ಗ ಇತಿಹಾಸ ಪ್ರಸಿದ್ಧ ಸ್ಥಳವಾಗಿದೆ. ಬೆಟ್ಟಕ್ಕೆ ರೋಪ್ ವೇ ಅಳವಡಿಸಿ ಪ್ರವಾಸೋದ್ಯಮ…
ತುಮಕೂರು ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸದಲ್ಲಿ ಸುಡುವ ಬಿಸಿಲನ್ನು ಲೆಕ್ಕಿಸದೇ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಮರ್ಪಿಸಿದರು. ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೆರಿದ್ದು, ಮಧ್ಯಾಹ್ನ 1.15ಕ್ಕೆ ಗರುಡ ರಥದ ಸುತ್ತ ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವಕ್ಕೆ ಚಾಲನೆ ದೊರೆಯಿತು. ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಲು ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಹರಕೆ ಸಲ್ಲಿಸಿದರು. ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸವದ ಅಂಗವಾಗಿ ನಗರದಿಂದ ಶೆಟ್ಟಿಹಳ್ಳಿಗೆ ಹೋಗುವ ದಾರಿಯುದ್ಧಕ್ಕೂ ಹಾಗೂ ರಿಂಗ್ ರಸ್ತೆಯುದ್ದಕ್ಕೂ ಭಕ್ತಾದಿಗಳು ಪೆಂಡಾಲ್ಗಳನ್ನು ಹಾಕಿಕೊಂಡು ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಿದ್ದು ವಿಶೇಷವಾಗಿತ್ತು. ಹಾಗೆಯೇ ಹೆಚ್.ಎಂ.ಎಸ್. ಕಾಲೇಜು ಮುಂಭಾಗ ಮುಸ್ಲಿಂ ಬಾಂಧವರು ಸಹ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ, ನೀರು, ಕೋಸಂಬಿ ಹಂಚುತ್ತಿದ್ದ ದೃಶ್ಯ…
ತುಮಕೂರು ನಗರದ ಶ್ರೀ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯ ಮತ್ತು ತುಮಕೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿಕ್ಷಣ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಪಠ್ಯವಸ್ತು ಪುನರ್-ಮನನ ಕಾರ್ಯಾಗಾರವನ್ನು ತುಮಕೂರು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ಉದ್ಘಾಟಿಸಿ ಮಾತನಾಡಿದರು. ಸ್ನಾತಕ ಶಿಕ್ಷಣವು ಪದವಿ ಶಿಕ್ಷಣಕ್ಕಿಂತ ಭಿನ್ನವಾದ ಕೋರ್ಸ್ ಆಗಿದೆ. ಶಿಕ್ಷಣದ ಮಹತ್ವವನ್ನು ಅರಿಯಬೇಕು. ಪರೀಕ್ಷೆಗಳನ್ನು ಭಯಪಡದೇ ಧೈರ್ಯದಿಂದ ಎದುರಿಸಬೇಕು. ಶಿಕ್ಷಣದಲ್ಲಿ ಸಮಸ್ಯೆಗಳು ಬೇರೆ ಕಡೆಯಿಂದ ಹುಟ್ಟುವುದಿಲ್ಲ. ನಮ್ಮಿಂದ ಸಮಸ್ಯೆಗಳು ಹುಟ್ಟುತ್ತವೆ. ಆ ಸಮಸ್ಯೆಗಳಿಗೆ ನಮ್ಮಲ್ಲೇ ಪರಿಹಾರ ಕಂಡುಕೊಳ್ಳಬೇಕು. ಶಿಕ್ಷಣವನ್ನು ಬದುಕಿನ ಅಸ್ತ್ರವಾಗಿ ಬದಲಾಯಿಸಿಕೊಳ್ಳಬೇಕು ಎಂದರು. ಸ್ನಾತಕ ಶಿಕ್ಷಣ ಅಧ್ಯಯನ ಮಂಡಳಿಯ ಅಧ್ಯಕ್ಷರಾದ ಡಾ.ಕೆ.ಎಸ್.ಸಿದ್ದರಾಜುರವರು ಮಾತನಾಡಿದರು. ಶ್ರೀ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ.ಬಿ.ಎಸ್. ಲತಾ ರವರು ಮಾತನಾಡಿ, ವಿದ್ಯಾರ್ಥಿಗಳಿಗೆ ಒಂದೇ ರೀತಿಯ ಉತ್ತಮ ಶಿಕ್ಷಣ ನೀಡಬೇಕು. ನಾವೆಲ್ಲರೂ ಒಟ್ಟಾಗಿ ಶಿಕ್ಷಣದ ಗುನಮಟ್ಟವನ್ನು ಸುಧಾರಿಸಲು ಪ್ರಯತ್ನಿಸೋಣ ಎಂದರು. ಕಾರ್ಯಕ್ರಮದಲ್ಲಿ ಸ್ನಾತಕ ಶಿಕ್ಷಣ ಪರೀಕ್ಷಾ ಮಂಡಳಿ ಅಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮಿ ಎಸ್ ಹಾಗೂ ಜಿಲ್ಲೆಯ ಹದಿನಾರು ಸ್ನಾತಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲರು,…
ತುಮಕೂರು ಬಿಜೆಪಿಯು ಪ್ರಪಂಚದಲ್ಲೇ ಅತಿಹೆಚ್ಚು ಸದಸ್ಯರನ್ನು ಹೊಂದಿದ ರಾಜಕೀಯ ಪಕ್ಷವಾಗಿದ್ದು, ಭಾರತದ ಸರ್ವ ಜನರಲ್ಲಿ ಹಿತಾಶಕ್ತಿ, ರಾಷ್ಟ್ರಭಕ್ತಿ-ರಾಷ್ಟ್ರಪ್ರೇಮ ಮೂಡಿಸಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೇಳಿದರು. ಇವರು ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿಯ 43ನೇ ಸಂಸ್ಥಾಪನಾ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, 1980 ಏಪ್ರಿಲ್ 06ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಜನಸಂಘದ ಅಂದಿನ ಪ್ರಮುಖರಾದ ಅಟಲ್ಬಿಹಾರಿ ವಾಜಪೇಯಿ ಮತ್ತು ಎಲ್.ಕೆ.ಆಡ್ವಾನಿರವರ ನೇತೃತ್ವದಲ್ಲಿ ಆರಂಭಗೊಂಡು ಇಂದು ದೇಶ, ವಿದೇಶಗಳಲ್ಲಿ ಅತಿಹೆಚ್ಚು ಜನಮನ್ನಣೆ ಪಡೆದ ಪಕ್ಷವಾಗಿದೆ. ಕಾಂಗ್ರೆಸ್ ಹೇರಿದ ತುರ್ತುಪರಿಸ್ಥಿತಿ ವಿರುದ್ಧ ಒಂದಾದ ಪ್ರತಿಪಕ್ಷಗಳು ಜನತಾ ಪಕ್ಷದೊಂದಿಗೆ ಅಂದಿನ ಜನಸಂಘ ವಿಲೀನಗೊಂಡಿತ್ತು. ಜನತಾ ಪಕ್ಷದ ಆಂತರಿಕ ದ್ವಿಸದಸ್ಯತ್ವದ ಪ್ರಶ್ನೆಯಿಂದ ಹೊರಬಂದ ಜನಸಂಘದ ಪ್ರಮುಖರು, ಕಾರ್ಯಕರ್ತರು ಭಾರತೀಯ ಜನತಾ ಪಕ್ಷವು ದೇಶದ ಸಮಗ್ರ ವಿಕಾಸ-ಅಭಿವೃದ್ಧಿ ದೃಷ್ಠಿಯಿಂದ ಆರಂಭಗೊಂಡಿತು ಎಂದರು. ಜನಸಂಘ, ಬಿಜೆಪಿ ಪಕ್ಷದ ಬೆಳವಣಿಗೆ ಮತ್ತು ಸಂಘಟನೆಗೆ ಆಧಾರಸ್ತಂಭವಾಗಿದ್ದ ಹಿರಿಯ ಚೇತನಗಳಿಗೆ ಕೃತಜ್ಞತೆ ಸಲ್ಲಿಸಿದ ಹೆಚ್.ಎಸ್.ರವಿಶಂಕರ್ ಹೆಬ್ಬಾಕ,…











