Author: News Desk Benkiyabale

ಗುಬ್ಬಿ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ನನಗೆ ಯಾವುದೇ ರೀತಿಯ ನೋಟೀಸ್ ಆಗಲಿ ಮಾಹಿತಿ ಆಗಲಿ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಜಿಎಸ್ ಪ್ರಸನ್ನ ಕುಮಾರ್ ಮಾಹಿತಿ ನೀಡಿದರು. ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು ನಾವು ಸಹ ಇಂದಿನಿಂದ ಕಾಂಗ್ರೆಸ್ ಪಕ್ಷದ ಪರವಾಗಿಪ್ರಚಾರ ಆರಂಭಿಸಿದ್ದೇವೆ ಇದುವರೆಗೂ ಯಾರಿಗೂ ಸಹ ಕಾಂಗ್ರೆಸ್ ಅಭ್ಯರ್ಥಿ ಯನ್ನು ಘೋಷಣೆ ಮಾಡಿಲ್ಲ ಹಾಗಾಗಿ ನಮ್ಮ ಪಕ್ಷದ ಸಂಘಟನೆ ಮಾಡುತ್ತಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಪಕ್ಷದಿಂದ ತೆಗೆದು ಹಾಕಿದ್ದೇವೆ ಎಂಬ ವದಂತಿ ಹರಡಿದೆ ಇದರ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ ಪರಮೇಶ್ವರ್ ಅವರು ಬಂದಮೇಲೆ ಸ್ಪಷ್ಟನೆ ಸಿಗಲಿದೆ ಎಂದು ತಿಳಿಸಿದರು. ಇನ್ನೂ ಎರಡು ಲಕ್ಷ ಕಟ್ಟಿ ಅರ್ಜಿಯನ್ನೇ ಹಾಕದಂತಹ ವರಿಗೆ ಮನ್ನಣೆ ನೀಡುತ್ತೀರಾ ಎಂದರೆ ಅದಕ್ಕೆ ಕಾಂಗ್ರೆಸ್ ಪಕ್ಷದ ಬಗ್ಗೆ ಜನರೇ ಬೇಸರ ವ್ಯಕ್ತ ಪಡಿಸುತ್ತಾರೆ ನನ್ನನ್ನು ತೆಗೆದು ಹಾಕಲು ದೊಡ್ಡ ಪಿತೂರಿ ನಡೆಯುತ್ತಿದೆ ನಾನು ಮತ್ತು ಹೊನ್ನಗಿರಿ ಗೌಡರು ಆಕಾಂಕ್ಷಿಗಳಾಗಿದ್ದೇವೆ…

Read More

ತುಮಕೂರು ಸರ್ವರಲ್ಲೂ ಸಮಾನತೆಯ ಧ್ಯೇಯ ಇಟ್ಟುಕೊಂಡ ಮೇರು ವ್ಯಕ್ತಿತ್ವ ಡಾ. ಬಾಬು ಜಗಜೀವನ ರಾಮ್ ಅವರದು. ಬಾಬೂಜಿ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎಂದು ಸಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹೊನ್ನಾಂಜಿನಯ್ಯ ಡಿ. ಆರ್. ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಾಬು ಜಗಜೀವನ ರಾಮ್ ಅಧ್ಯಯನ ಪೀಠವು ಬುಧವಾರ ಆಯೋಜಿಸಿದ್ದ ಡಾ. ಬಾಬು ಜಗಜೀವನ ರಾಮ್ ಅವರ 116ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಹಸಿರು ಕ್ರಾಂತಿಯ ಹರಿಕಾರನಾಗಿ ಹಸಿವು ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಪಣತೊಟ್ಟ ಧೀಮಂತ ವ್ಯಕ್ತಿತ್ವ ಬಾಬೂಜಿಯವರದು. ರಾಜಕೀಯ ಜೀವನದಲ್ಲಿ ಯಾವುದೇ ಖಾತೆ ಕೊಟ್ಟರೂ ನಿμÁ್ಠವಂತ ನಾಯಕನಾಗಿ ಕಾರ್ಯಸಾಧನೆ ಮಾಡಿ ತಮ್ಮ ಆದರ್ಶಯುತ ಬದುಕನ್ನು ಇಂದಿನ ಸಮೃದ್ಧ ಭಾರತಕ್ಕಾಗಿ ಮುಡಿಪಾಗಿಟ್ಟವರು ಬಾಬೂಜಿ ಎಂದು ತಿಳಿಸಿದರು. ಭಾರತದ ಭವಿಷ್ಯ ಯುವಪೀಳಿಗೆಯಲ್ಲಿದೆ. ಹೋರಾಟ ಎಂದಿಗೂ ದುರ್ಬಲರ ಪರವಾಗಿರಬೇಕು. ನಮ್ಮ ಬದುಕು ಇನ್ನೊಬ್ಬರ ಬೆಳವಣಿಗೆಗೆ ಮಾದರಿಯಾಗಬೇಕು. ಬಲಿಷ್ಠ ರಾಷ್ಟ್ರ ಕಟ್ಟಲು, ಹೋರಾಡಲು ಹಿಂಜರಿಯಬಾರದು. ನಮ್ಮ ಕಾರ್ಯಗಳೇ…

Read More

ತುಮಕೂರು ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ಮಾಡಿದ ಅಭಿವೃದ್ಧಿ ಚಟುವಟಿಕೆಗಳ ಆಧಾರದಲ್ಲಿ ಮತದಾರರನ್ನು ಭೇಟಿ, ಸಂಪರ್ಕಗಳ ಮಾಡುವ ಮೂಲಕ ಭರ್ಜರಿ ಗೆಲುವಿಗೆ ಪ್ರಕೋಷ್ಠಗಳ ಪದಾಧಿಕಾರಿಗಳು, ಸದಸ್ಯರು ಕಾರ್ಯೋಮುಖರಾಗುವಂತೆ ಪ್ರಕೋಷ್ಠಗಳ ರಾಜ್ಯ ಸಹಪ್ರಮುಖರಾದ ಭೈರಣ್ಣ.ಜಿ ರವರು ಕರೆ ನೀಡಿದರು. ಇವರು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ದಾವಣಗೆರೆ ವಿಭಾಗದ ತುಮಕೂರು ಮತ್ತು ಮಧುಗಿರಿ ಜಿಲ್ಲೆಗಳ 24 ಪ್ರಕೋಷ್ಠಗಳ ಪ್ರಮುಖರ ಕಾರ್ಯಾಗಾರದಲ್ಲಿ ಮಾತನಾಡುತ್ತಾ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಡಬ್ಬಲ್ ಇಂಜಿನ್ ಸರ್ಕಾರದಿಂದ ಬಹುಮುಖವಾದ ಅಭಿವೃದ್ಧಿ ಕಾರ್ಯ ಮತ್ತು ಯೋಜನೆಗಳ ಮೂಲಕ ಜನರ ಮನ ಮುಟ್ಟುವ ಕಾರ್ಯವಾಗಿದೆ. ಆರೋಗ್ಯ, ಶಿಕ್ಷಣ, ಕೈಗಾರಿಕೆ, ರೈತರು, ಮಹಿಳೆಯರು, ಮಕ್ಕಳ ಶ್ರೇಯೋಭಿವೃದ್ಧಿ ಯೋಜನೆ, ಮೂಲಭೂತ ಸೌಕರ್ಯ, ಪರಿಶಿಷ್ಟ ಜಾತಿ/ವರ್ಗ, ಹಿಂದುಳಿದವರು ಮತ್ತು ಬಡವರ ಕಲ್ಯಾಣಕ್ಕೆ ಒತ್ತು ನೀಡಿರುವುದಲ್ಲದೆ, ಕೋವಿಡ್ ನಂತರದಲ್ಲಿ ದೇಶದ ಜನರಿಗೆ ಉಚಿತ ಕರೋನಾ ಲಸಿಕೆ, ಔಷದೋಪಚಾರ ಮಾಡಿರುವುದಲ್ಲದೆ ಬಡವರಿಗೆ ಅನ್ನ ಭಾಗ್ಯ ಯೋಜನೆಯಡಿ 80 ಕೋಟಿ ಜನರಿಗೆ ಉಚಿತ ಆಹಾರ ಪಡಿತರ, ರೈತರಿಗೆ ಕೃಷಿ ಸಮ್ಮಾನ್ ಯೋಜನೆಯಡಿ…

Read More

ತುಮಕೂರು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅನ್ನ, ಅಕ್ಷರ, ಆಶ್ರಯ, ಆರೋಗ್ಯ ಮತ್ತು ಅಭಿವೃದ್ದಿ ಎಂಬ ಐದು ಅಂಶಗಳನ್ನು ಮುಂದಿಟ್ಟುಕೊಂಡು,ಕಾಂಗ್ರೆಸೇ ಪರಿಹಾರ ಎಂಬ ಘೋಷ ವಾಕ್ಯದೊಂದಿಗೆ ಚುನಾವಣೆ ಎದುರಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್ ತಿಳಿಸಿದ್ದಾರೆ. ಇಂದು ಖಾಸಗಿ ಹೊಟೇಲ್‍ನಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳು, ತಾಲೂಕು ಸಂಯೋಜಕರು ಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ಮೇ.10 ರಂದು ನಡೆಯುವ ಚುನಾವಣೆಯಲ್ಲಿ ಮೇಲಿನ ಪಂಚಮಂತ್ರಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಚುನಾವಣೆಯಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಲಿದ್ದೇವೆ ಎಂದರು. ರಾಜ್ಯದಲ್ಲಿ ಅಡಳಿತದಲ್ಲಿರುವ ಬಿಜೆಪಿಯ ಜನವಿರೋಧಿ ನೀತಿಗಳಿಂದಾಗಿ ದಿನ ನಿತ್ಯದ ವಸ್ತುಗಳ ಬೆಲೆಗಳು ಹೆಚ್ಚಾಗಿ ಜನಸಾಮಾನ್ಯರು ದಿನದೂಡುವುದೇ ಕಷ್ಟವಾಗಿದೆ.ಹಾಗಾಗಿ ಕಾಂಗ್ರೆಸ್ ಪ್ರತಿ ಮನೆಯ ಗೃಹಿಣಿಗೆ ಮಾಸಿಕ 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತದ ಗೃಹಜೋತಿ, ಪ್ರತಿ ಪಡಿತರದಾರರಿನಿಗೆ ತಲಾ 10 ಕೆ.ಜಿ.ಅನ್ನಭಾಗ್ಯ, ನಿರುದ್ಯೋಗಿ ಯುವಕರಿಗಾಗಿ…

Read More

ತುಮಕೂರು ಹಸಿರು ಕ್ರಾಂತಿ ಹರಿಕಾರ, ಶ್ರೇಷ್ಟ ರಾಜಕಾರಣಿ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿಯಾಗಿದ್ದರು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಭಿಪ್ರಾಯಪಟ್ಟರು. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಂಕೇತಿಕವಾಗಿ ಏರ್ಪಡಿಸಿದ್ದ ಡಾ: ಬಾಬು ಜಗಜೀವನರಾಮ್ ಅವರ 116ನೇ ಜನ್ಮ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ಅವರು, ದಲಿತರು, ನಿರ್ಗತಿಕರು, ಕಾರ್ಮಿಕರ ಅಭ್ಯುದಯಕ್ಕಾಗಿ ತಮ್ಮ ಬದುಕಿನುದ್ದಕ್ಕೂ ಶ್ರಮಿಸಿದರು. ಸಮಾಜದಲ್ಲಿ ಶೋಷಿತರಿಗಾಗಿ ಅವರು ಜಾರಿ ಮಾಡಿದ ಕಾನೂನು, ನೀತಿ, ನಿಯಮಗಳನ್ನು ಯಾರೂ ಮರೆಯುವಂತಿಲ್ಲ. ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದಲ್ಲಿಯೂ ಕೇಂದ್ರದ ಹಲವಾರು ಖಾತೆಗಳಿಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಬಾಬು ಜಗಜೀವನರಾಮ್ ಅವರಿಗೆ ಸಲ್ಲುತ್ತದೆ. ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ, ಕೈಗಾರಿಕಾ ಕಾಯ್ದೆ ಸೇರಿದಂತೆ ಹಲವಾರು ಕಾಯ್ದೆಗಳು ಜಾರಿಯಾಗಲು ಶ್ರಮಿಸಿದ್ದರು ಎಂದು ತಿಳಿಸಿದರಲ್ಲದೆ, ಇವರ ತತ್ವಾದರ್ಶಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸುವ ಅಗತ್ಯವಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ…

Read More

ಮತದಾನ ಕೇವಲ ಪ್ರತಿಯೋರ್ವ ನಾಗರೀಕನ ಹಕ್ಕು ಅಷ್ಟೇ ಅಲ್ಲ, ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವೂ ಕೂಡ. ಮತದಾನ ಭಾರತೀಯರಿಗೆ ನೀಡಿರುವ ಹಕ್ಕಾಗಿದ್ದು, ಭವ್ಯ ಭಾರತ ಹಾಗೂ ಸದೃಢ ಸಮಾಜ ಕಟ್ಟಲು ಪೂರಕ ವ್ಯವಸ್ಥೆಯಾಗಿದೆ. ನಮ್ಮ ದೇಶದಲ್ಲಿ ಸಾಮಾಜಿಕ ಅಂತಸ್ತು, ಜಾತಿಬೇಧ, ಲಿಂಗ ತಾರತಮ್ಯಗಳಾವುದನ್ನು ಲೆಕ್ಕಿಸದೇ ಎಲ್ಲರಿಗೂ ಸರ್ವಸಮಾನವಾಗಿ ನೀಡಿರುವ ಹಕ್ಕಾಗಿರುವುದೇ ಈ ಮತದಾನ. ಮತದಾನವು ಜನತೆಯು ಅಭ್ಯರ್ಥಿಗಳ ಆಯ್ಕೆ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸೂಚಿಸಲು ಅನುವು ಮಾಡಿಕೊಂಡಿರುವ ಒಂದು ಸುಲಭ ಪ್ರಕ್ರಿಯೆ ಎನ್ನಬಹುದು. ಈ ಹಿಂದಿನ ಕಾಲದಲ್ಲೆಲ್ಲಾ ರಾಜಮಹಾರಾಜರು ತಮ್ಮ ತಮ್ಮ ಪ್ರಾಂತ್ಯಗಳಲ್ಲಿ ಆಳುತ್ತಿದ್ದರು. ಆಗೆಲ್ಲಾ ಜನರು ರಾಜರನ್ನು ಆರಿಸುತ್ತಿರಲಿಲ್ಲ. ರಾಜರೇ ಅವರ ತೋಳ್ಬಲದಿಂದ, ವೀರತ್ವದಿಂದ, ಶೌರತ್ವದಿಂದ ಹೋರಾಡಿ ಗೆದ್ದು ಆಳುತ್ತಿದ್ದರು. ಕೆಲ ರಾಜರನ್ನು ನೋಡಿದ ಕೂಡಲೆ ಅವನು ನಮ್ಮನ್ನು ಆಳಲು ಸೂಕ್ತ ಎಂದು ಎನಿಸಿಬಿಡುತ್ತಿತ್ತಂತೆ. ಆದರೆ ಪ್ರಸ್ತುತ ದಿನಮಾನದಲ್ಲಿ ಒಬ್ಬ ವ್ಯಕ್ತಿಯ ಬಾಹ್ಯರೂಪದಿಂದ, ಮೈಕಟ್ಟಿನಿಂದ ಆತ ನಮ್ಮನ್ನು ಆಳಲು ಮತ್ತು ನಮಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಮರ್ಥನೋ? ಇಲ್ಲವೆ…

Read More

ಚಿಕ್ಕನಾಯಕನಹಳ್ಳಿ ಜೆ.ಸಿ.ಮಾದುಸ್ವಾಮಿ ರವರು ತಾಲ್ಲೂಕಿನ ವೀರಶೈವ ಲಿಂಗಾಯಿತರನ್ನು ಗುತ್ತಿಗೆ ತೆಗೆದುಕೊಂಡಿಲ್ಲ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಹಾಗೂ ತಾ ಪಂ ಮಾಜಿ ಅಧ್ಯಕ್ಷ ಶಶಿಧರ್ ಹೇಳಿದರು. ಅವರು ತಾಲ್ಲೂಕಿನ ಶಾವಿಗೆಹಳ್ಳಿ ಸಮುದಾಯ ಭವನದಲ್ಲಿ ವೀರಶೈವ ಲಿಂಗಾಯಿತರ ಜೆಡಿಎಸ್ ಸಮಾವೇಶದಲ್ಲಿ ಪರಮಪೂಜ್ಯ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ಅವರು ಮಾತನಾಡಿ, ನಾಲ್ಕು ಬಾರಿ ಗೆದ್ದು ಬಂದು ಸಚಿವರಾದರೂ ಇದುವರೆಗೆ ವೀರಶೈವರಿಗೆ ಏನೂ ಮಾಡಿಲ್ಲ, 20 ವರ್ಷಗಳಿಂದ ಅವರ ಹಿಂಬಾಲಕರಾಗಿ ಲಕ್ಷಾಂತರ ರುಪಾಯಿ ಕಳೆದುಕೊಂಡಿದ್ದೇನೆ, ತಾಲ್ಲೂಕಿನಲ್ಲಿ 40 ರಿಂದ 45 ಸಾವಿರ ವೀರಶೈವ ಲಿಂಗಾಯಿತರಿದ್ದರೂ ಇದುವರೆಗೂ ಒಂದು ಸಮುದಾಯವನ್ನಾಗಲಿ, ವೀರಶೈವ ಬ್ಯಾಂಕ್ ಆಗಲಿ ಮಾಡಿಲ್ಲ, ಕೇವಲ ಅಧಿಕಾರಕ್ಕೋಸ್ಕರ ಲಿಂಗಾಯಿತರನ್ನು ಉಪಯೋಗಿಸಿಕೊಂಡು ಶಾಸಕ, ಸಚಿವರಾಗಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ನೀಡುವ ಅನುದಾನದಿಂದ ಅಭಿವೃದ್ದಿ ಮಾಡಿದ್ದಾರೆ ಹೊರೆತು ಒಂದು ರೂಪಾಯಿ ಸಮಾಜಕ್ಕೆ ನೀಡಿಲ್ಲ, ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು ತಮ್ಮ ಅಧಿಕಾರಾವಧಿಯಲ್ಲಿ ಅನೇಕ ದೇವಾಲಯಗಳಿಗೆ ತಮ್ಮ ಸ್ವಂತ ಹಣವನ್ನು ನೀಡಿದ್ದಾರೆ, ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಮಾಡುವಾಗ…

Read More

ಕೊರಟಗೆರೆ ದೊಡ್ಡ ಕಾಯಪ್ಪ ದೇವಾಲಯದ ಅರ್ಚಕರ ನೇಮಕಾತಿಯ ವಿಚಾರದಲ್ಲಿ ಮುಜರಾಯಿ ಇಲಾಖೆ, ಸೇವಾಸಮಿತಿ, ಸ್ಥಳೀಯರು ಮತ್ತು ಪ್ರಸ್ತುತ ಅರ್ಚಕರ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಯಾಗಿ ಗರ್ಭಗುಡಿ ಮತ್ತು ದೇವಾಲಯಕ್ಕೆ ಜೀಗ ಜಡಿಯಲಾಗಿದೆ. ಪವಿತ್ರ ಪುಣ್ಯಕ್ಷೇತ್ರಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಭಕ್ತಾಧಿಗಳಿಗೆ ದೊಡ್ಡಕಾಯಪ್ಪನ ದರ್ಶನ ಸೀಗದೇ ನಿರಾಸೆಯಿಂದ ಹಿಂದಿರುಗುತ್ತೀರುವ ಘಟನೆ ಸೋಮವಾರ ನಡೆದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮದ ಸುಪ್ರಸಿದ್ದ ಪುಣ್ಯಕ್ಷೇತ್ರ ಶ್ರೀದೊಡ್ಡಕಾಯಪ್ಪ ಸ್ವಾಮಿ ದೇವಾಲಯದಲ್ಲಿ ಇತಿಹಾಸದ ಮೊದಲ ಸಲ ದುರ್ಘಟನೆ ನಡೆದಿದೆ. ಏ.2ರ ಭಾನುವಾರ ಮಧ್ಯಾಹ್ನ ದೊಡ್ಡಕಾಯಪ್ಪ ಸ್ವಾಮಿಯ ಪೂಜೆ ಕೈಂಕರ್ಯ ನಡೆಯುತ್ತೀರುವಾಗಲೇ ಸ್ಥಳೀಯರು, ಸೇವಾಸಮಿತಿ ಮತ್ತು ಅರ್ಚಕರ ನಡುವೆ ಜಗಳವಾಗಿ ಅರ್ಚಕ ಶ್ರೀನಿವಾಸಮೂರ್ತಿ ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಕುರಂಕೋಟೆಯ ದೊಡ್ಡಕಾಯಪ್ಪ ಸ್ವಾಮಿ ದೇವಾಲಯಕ್ಕೆ ಕರ್ನಾಟಕದ ವಿವಿಧ ಕಡೆಗಳಿಂದ ಪ್ರತಿನಿತ್ಯ ಸಾವಿರಾರು ಜನ ಭಕ್ತಾಧಿಗಳು ದರ್ಶನಕ್ಕೆ ಆಗಮಿಸುವ ಮತ್ತು ದೊಡ್ಡಕಾಯಪ್ಪ ಸ್ವಾಮಿಗೆ ಹರಕೆವೊತ್ತ 50ಕ್ಕೂ ಅಧಿಕ ಭಕ್ತರು ದೇವಾಲಯದಲ್ಲೇ ಉಳಿದುಕೊಂಡು ಪ್ರತಿನಿತ್ಯ ಮುಂಜಾನೇ ಸ್ವಾಮಿಗೆ…

Read More

ತುಮಕೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳು ಸಭೆ/ಸಮಾರಂಭಗಳನ್ನು ಏರ್ಪಡಿಸುವ ಮುನ್ನ ಕಡ್ಡಾಯವಾಗಿ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಸಭೆ/ಸಮಾರಂಭಗಳಲ್ಲಿ ಕುಡಿಯುವ ನೀರು/ಮಜ್ಜಿಗೆ ನೀಡಲು ಮಾತ್ರ ಅವಕಾಶವಿದೆ. ಆಹಾರ ನೀಡಿದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ನಂತರ ಅಭ್ಯರ್ಥಿಯು ಅನುಮತಿ ಪಡೆದು ಬಹಿರಂಗ ಸಭೆ, ಸಮಾರಂಭ ನಡೆಸಲು ಅವಕಾಶವಿದೆ. ನಾಮಪತ್ರಕ್ಕಿಂತ ಪೂರ್ವದಲ್ಲಿ ಕೇವಲ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳು ಚುನಾವಣಾಧಿಕಾರಿಗಳ ಅನುಮತಿ ಪಡೆದು ಪಕ್ಷದ ಪರವಾಗಿ ಪ್ರಚಾರ ಮಾಡಬಹುದಾಗಿದೆ. ಆದರೆ ಒಬ್ಬ ಅಭ್ಯರ್ಥಿ ಪರವಾಗಿ ಕಾರ್ಯಕ್ರಮ ಮಾಡಿದರೆ ಅದರ ಸಂಪೂರ್ಣ ವೆಚ್ಚವನ್ನು ಅಭ್ಯರ್ಥಿಯ ವೆಚ್ಚದ ಖಾತೆಗೆ ದಾಖಲು ಮಾಡಲಾಗುವುದು. ಸಭೆ/ಸಮಾರಂಭ/ರ್ಯಾಲಿಗಳನ್ನು…

Read More

ತುಮಕೂರು ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಭಗವಾನ್ ಮಹಾವೀರರ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಿಗಂಬರ ಜೈನ ಮತ್ತು ಶ್ವೇತಾಂಬರ ಜೈನ ಸಮುದಾಯದ ಬಾಂಧವರು, ಜಿಲ್ಲಾಡಳಿತ ಅಧಿಕಾರಿಗಳು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಸಾಹಿತಿ ಪದ್ಮಪ್ರಸಾದ್ ಮಾತನಾಡಿ, ಮಹಾವೀರರು ಜೈನ ಧರ್ಮದ 24ನೇ ತೀರ್ಥಂಕರರು. ಅವರು ಬೋಧಿಸಿದಂತಹ ಅಹಿಂಸಾ ಸಿದ್ದಾಂತ ಇಡೀ ಜಗತ್ತಿನಲ್ಲಿ ಹೊಸ ಅಲೆಯನ್ನು ಸೃಷ್ಠಿಸಿತು. ಇದರೊಂದಿಗೆ ಮಹಾವೀರರು ದೇಶಿ ಭಾಷೆಗಳಿಗೆ ಬಹಳ ಪ್ರಾಮುಖ್ಯತೆಯನ್ನು ಕೊಟ್ಟಿದ್ದರು ಎಂದರು. ಮಹಾವೀರರು ದಿನವಾಣಿ ಸರ್ವಭಾಷಾಮಯಿ ಎಂದು ಸದಾ ಹೇಳುತ್ತಿದ್ದರು. ಯಾರು ಏನೇ ವಿಚಾರ ಹೇಳಿದರೂ ಅದರಲ್ಲಿನ ಸತ್ಯಾಂಶವನ್ನು ಗ್ರಹಿಸಿಕೊಳ್ಳಬೇಕು. ನೀನು ಬದುಕು, ಬೇರೆಯವರನ್ನು ಬದುಕಲಿಕ್ಕೆ ಬಿಡು ಎನ್ನುವುದು ಮಹಾವೀರರ ಸಿದ್ದಾಂತವಾಗಿದೆ ಎಂದು ಅವರು ಹೇಳಿದರು. ಕೆಟ್ಟದಾರಿಯಲ್ಲಿ ಹೋಗುತ್ತಿರುವವರನ್ನು ಯಾವತ್ತೂ ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು. ಈ ಕೆಲಸವೂ ತಪ್ಪು…

Read More