ತುಮಕೂರು ಕಲ್ಪತರುನಾಡಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿಯ ದೇವಾಲಯಗಳಲ್ಲಿ ಶ್ರೀರಾಮನವಮಿಯನ್ನು ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರೀರಾಮ ಮತ್ತು ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಇಂದು ಮುಂಜಾನೆಯಿಂದಲೇ ಶ್ರೀರಾಮನಾಮ ಸ್ಮರಣೆ ಮೊಳಗಿದವು. ನಗರದ ಬಾರ್ಲೈನ್ ರಸ್ತೆಯಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಶ್ರೀರಾಮನಮವಿ ಅಂಗವಾಗಿ ಶ್ರೀಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ಅದೇ ರೀತಿ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ, ಶೆಟ್ಟಿಹಳ್ಳಿ ಗೇಟ್ನಲ್ಲಿರುವ ಅಭಯ ಆಂಜನೇಯಸ್ವಾಮಿ ದೇವಾಲಯ, ಸೀತಾರಾಮ ದೇವಾಲಯ, ಕೋಟೆ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ವಿವಿಧೆಡೆ ಇರುವ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ್ದು, ಶ್ರೀರಾಮನಮಮಿಯನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಶ್ರೀರಾಮನಮವಿ ಅಂಗವಾಗಿ ದೇವಾಲಯಗಳಲ್ಲಿ ಪೂಜೆಯ ನಂತರ ಭಕ್ತಾದಿಗಳಿಗೆ ಪಾನಕ, ಮಜ್ಜಿ, ಹೆಸರುಬೇಳೆ ಹಂಚಲಾಯಿತು. ಕೆಲವು…
Author: News Desk Benkiyabale
ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಪೊನ್ನಸಮುದ್ರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕನಿಕಲಬಂಡೆ ಗ್ರಾಮದ ಕೆರೆಯ ಕಟ್ಟೆಯಲ್ಲಿ ಬೇಳೆದಿರುವ ಸೀಮೆಜಾಲಿ ಗಿಡಗಳನ್ನು ಕಿತ್ತು ಹಣ ಸಂಪಾದಿಸುವ ಉದ್ದೇಶದಿಂದ ಇಬ್ಬರು ವ್ಯಕ್ತಿಗಳು ಜೆ.ಸಿ.ಬಿ.ಯಿಂದ ಸುಮಾರು 1 ಕೀಲೋಮೀಟರ್ ದೂರದವರೆಗೂ ರಾತ್ರಿಗೆ ರಾತ್ರಿ ದ್ವಂಸ ಮಾಡಿರುವುದರಿಂದ ಕೆರೆಯ ನೀರೆಲ್ಲಾ ಖಾಲಿಯಾಗುತ್ತಿರುವ ಘಟನೆ ನಡೆದಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಕೃತ್ಯ ದಲ್ಲಿ ಬಳಸಿದ್ದ ಜೆ.ಸಿ.ಬಿ. ಚಾಲಕನನ್ನು ಹಿಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಈ ಕೃತ್ಯವನ್ನು ಕನಿಕಲಬಂಡೆ ಗ್ರಾಮಸ್ಥರು ಖಂಡಿಸಿದ್ದು ಸಂಬಂದಪಟ್ಟ ತಹಶೀಲ್ದಾರ್, ಕಾರ್ಯಾಲಯ ಹಾಗೂ ಜಿಲ್ಲಾಪಂಚಾಯಿತಿ ಕಛೇರಿ ಹಾಗೂ ಪೊನ್ನಸಮುದ್ರ ಗ್ರಾಮಪಂಚಾಯಿತಿಗಳಿಗೆ ದೂರು ಸಲ್ಲಿಸಿದ್ದು ಇಲ್ಲಿಯವರೆಗೂ ಯಾವೊಬ್ಬ ಅಧಿಕಾರಿಯೂ ಸಹ ಸ್ಥಳಕ್ಕೆ ಬೇಟಿ ನೀಡದೆ ನಿರ್ಲಕ್ಷವಹಿಸಿದ್ದಾರೆ ಎಂದು ಗ್ರಾಮಸ್ಥರು ಅಲವತ್ತುಕೊಳ್ಳುತ್ತಿದ್ದಾರೆ. ಏನಿದು ಘಟನೆ ಬಿ. ಅಚ್ಚಮ್ಮನಹಳ್ಳಿ ಗ್ರಾಮದಿಂದ ಕನಿಕಲಬಂಡೆಗೆ ಹೋಗುವ ಮಾರ್ಗ ಮದ್ಯೆ ಸರ್ವೇ ನಂ 28 ರಲ್ಲಿ ನೂರಾರು ಎಕರೆಯ ಬ್ರಹ್ಮಯ್ಯನ ಕೆರೆ ಇದ್ದು, ಕಳೆದ 40 ವರ್ಷಗಳಿಂದ ಭತ್ತಿಹೋಗಿದ್ದ ಕೆರೆ, ಕಳೆದ ಸಾಲಿನಲ್ಲಿ ಮಳೆಯಿಂದ ಕೆರೆ ತುಂಬಿತ್ತು,…
ತುಮಕೂರು ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮಾದರಿ ನೀತಿ ಸಂಹಿತೆ ಸಮರ್ಪಕ ಅನುಷ್ಠಾನಕ್ಕಾಗಿ ಮುಂದಿನ 45 ದಿನಗಳು ಎಲ್ಲಿಯೂ ಯಾವುದೇ ರೀತಿ ಚುನಾವಣಾ ಆಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಲೀಡ್ ಬ್ಯಾಂಕ್ ಮ್ಯಾನೇಜರ್, ಸಹಕಾರ ಸಂಘಗಳ ಉಪನಿಬಂಧಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮತ್ತು ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾನ್ ಬ್ರೋಕರ್ಗಳು ಮತ್ತು ಇತರೆ ಲೇವಾದೇವಿದಾರರಿಗೆ ಚುನಾವಣಾ ನೀತಿ ಸಂಹಿತೆ ಕುರಿತು ಮಾಹಿತಿ ನೀಡುವುದು. ಅವರ ದಿನನಿತ್ಯದ ವಹಿವಾಟುಗಳ ಬಗ್ಗೆ ಗಮನವಹಿಸಿ ಅಕ್ರಮ ಹಣ ವರ್ಗಾವಣೆಯಾಗದಂತೆ ತಡೆಯುವುದು ಎಂದು ತಿಳಿಸಿದರು. ಪೆಟ್ರೋಲ್ ಬಂಕ್ಗಳಲ್ಲಿ ಜಮೆಯಾಗಿರುವ ಹಣ ಹಾಗೂ ಪ್ರತಿ ದಿನ ಲಭ್ಯವಿರುವ ದಾಸ್ತಾನಿನ ಮಾಹಿತಿಯನ್ನು ಪ್ರತಿ…
ತುಮಕೂರು ಗುಬ್ಬಿಯ ಮಾಜಿ ಶಾಸಕ ವಾಸು ಅವರು, ಗೃಹ ಮಂಡಳಿಯ ಮಾಜಿ ಅಧ್ಯಕ್ಷರು, ಮೂಡಿಗೆರೆ ಪುರಸಭೆ ಮಾಜಿ ಅಧ್ಯಕ್ಷರಾದ ಹಾಲಪ್ಪ ಅವರು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ. ಮಂಡ್ಯದ ಸತ್ಯಾನಂದ ಅವರು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರುತ್ತಿದ್ದಾರೆ. ಗುಬ್ಬಿ ಹಾಗೂ ತುಮಕೂರು ಜಿಲ್ಲೆಯಿಂದ ಅನೇಕರು ಪಕ್ಷಕ್ಕೆ ಸೇರುತ್ತಿದ್ದು ಎಲ್ಲರಿಗೂ ಹೃದಯಪೂರ್ವಕ ಸ್ವಾಗತವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋರಿದರು. ಸತತ ನಾಲ್ಕು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ ಪ್ರಮುಖ ನಾಯಕರು ವಾಸು ಅವರು. ನಾನು ಅನೇಕ ವರ್ಷಗಳಿಂದ ಅವರಿಗೆ ಗಾಳ ಹಾಕುತ್ತಿದ್ದೆ. ಅದಕ್ಕೆ ಬಿದ್ದಿರಲಿಲ್ಲ. ಆದರೆ ಈಗ ರಾಜ್ಯದ ಮತದಾರರ ಚಿತ್ತ ಯಾವ ಕಡೆ ಇದೆ ಎಂದು ತಿಳಿದು ಮತದಾರರ ಗಾಳಕ್ಕೆ ಅವರು ಬಿದ್ದಿದ್ದಾರೆ. ಮತದಾರರಿಗೆ ಬದಲಾವಣೆ, ರಾಷ್ಟ್ರೀಯ ಪಕ್ಷ ಬೇಕಾಗಿದೆ. ಅವರ ಆಗಮನ ತುಮಕೂರು ಜಿಲ್ಲೆ ಮಾತ್ರವಲ್ಲ ಹಳೇ ಮೈಸೂರು ಭಾಗಕ್ಕೆ ಶಕ್ತಿ ತುಂಬಲಿದೆ. ಮುಂದಿನ ಕೆಲ ದಿನಗಳಲ್ಲಿ ಅರಸಿಕೆರೆ ಶಾಸಕ ಶಿವಲಿಂಗೇಗೌಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ…
ತುಮಕೂರು ಚುನಾವಣಾ ಅಕ್ರಮಗಳ ಆರೋಪದಡಿ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಈ ಕುರಿತಂತೆ ಮಹತ್ವದ ತೀರ್ಪನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಕಲಬುರ್ಗಿ ಪೀಠದಿಂದ ಪ್ರಕಟಿಸಿದೆ. ಚುನಾವಣೆ ವೇಳೆ ಮತದಾರರಿಗೆ ಇನ್ಸೂರೆನ್ಸ್ ಪಾಲಿಸಿಯ ಆಮಿಷ ನೀಡಿ ಜಯಗಳಿಸಿದ್ದ ಆರೋಪ ಗೌರಿಶಂಕರ್ ಮೇಲಿತ್ತು. ಗೌರಿಶಂಕರ್ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಅರ್ಜಿ ಸಲ್ಲಿಸಿದ್ದರು. 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ. 2018ರ ಚುನಾವಣೆಯಲ್ಲಿ ನಕಲಿ ಬಾಂಡ್ ಆಮಿಷ ಒಡ್ಡಿ ಅಕ್ರಮವಾಗಿ ಗೆದ್ದಿದ್ದಾರೆ ಎಂದು ಅರ್ಜಿ ಸಲ್ಲಿಸಲಾಗಿತ್ತು. ಬಿ.ಸುರೇಶ್ ಗೌಡ ಪರ ಹಿರಿಯ ವಕೀಲೆ ನಳಿನಾ ಮಾಯೇಗೌಡ ಸುದೀರ್ಘ ವಾದ ಮಂಡಿಸಿದ್ದರು. ಇನ್ನು ತೀರ್ಪು ಹೊರಬೀಳುತ್ತಲೇ ಗೌರಿಶಂಕರ್ ಪರ ವಕೀಲ ಆರ್.ಹೇಮಂತ್ ರಾಜ್, ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ತೀರ್ಪಿಗೆ ತಡೆ ನೀಡಬೇಕು ಎಂದು ಮಧ್ಯಂತರ ಅರ್ಜಿಯನ್ನು…
ತುಮಕೂರು ಕುಮಾರವ್ಯಾಸನ ಕಾವ್ಯದಲ್ಲಿ ವೈಭವ, ಸೌಂದರ್ಯ, ಸ್ಫೂರ್ತಿ, ಭಾಷೆ, ಅಲಂಕಾರದ ಶೈಲಿ ಅದ್ಭುತ. ವ್ಯಾಕರಣವನ್ನು ಮೀರಿ ಭಾಷೆ ಕಟ್ಟಿ, ಕಾವ್ಯ ಹೊರಹೊಮ್ಮಿಸಿದವ ಕುಮಾರವ್ಯಾಸ ಎಂದು ಹಿರಿಯ ವಿದ್ವಾಂಸ ಡಾ. ಎ. ವಿ. ಪ್ರಸನ್ನ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯ ಕುಮಾರವ್ಯಾಸ ಅಧ್ಯಯನ ಪೀಠ, ಕರ್ನಾಟಕ ಗಮಕಕಲಾ ಪರಿಷತ್ತು, ತುಮಕೂರು ಜಿಲ್ಲಾ ಸಮಿತಿ, ಗಮಕ ಭಾರತೀ ಚಾರಿಟಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ ‘ಕುಮಾರವ್ಯಾಸ ಭಾರತ: ಸಾಂಸ್ಕøತಿಕ ಅನುಸಂಧಾನ’ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಕುಮಾರವ್ಯಾಸನ ಕಾವ್ಯದಲ್ಲಿ ಪಾತ್ರ ಸೃಷ್ಟಿ, ಪಾತ್ರಗಳ ಸಂಚಾರ, ಪಾತ್ರಗಳ ಚಿತ್ರಣ, ಗತಿ, ಲಯ, ಹೋಲಿಕೆ ಎಲ್ಲವೂ ಗತವೈಭವದ ಸೊಗಸನ್ನು ವರ್ಣಿಸುತ್ತದೆ. ಎಲ್ಲಕ್ಕೂ ಮೀರಿ ಗ್ರಾಮೀಣ ಉಪಮೇಯಗಳಲ್ಲಿ ಕಾವ್ಯದ ಸೊಬಗನ್ನು ಸೊಗಸಾಗಿ ವರ್ಣಿಸಿದವ ಕುಮಾರವ್ಯಾಸ ಎಂದರು. ತುಮಕೂರು ವಿವಿ ಸಿಂಡಿಕೇಟ್ ಹಾಗೂ ಕುಮಾರವ್ಯಾಸ ಅಧ್ಯಯನ ಪೀಠದ ಸದಸ್ಯ ಡಾ. ಕೆ. ರಾಜೀವಲೋಚನ ಮಾತನಾಡಿ, ಕುಮಾರವ್ಯಾಸ ಜನರ ಮಧ್ಯೆ ಇರುವ ಜನಪ್ರಿಯ ಕವಿ. ಅವನ ಕಾವ್ಯ ಶಕ್ತಿ…
ತುಮಕೂರು ಕ್ರಿಯಾಶೀಲ ಸಂಸದನಾಗಿದ್ದ ನನಗೆ ಟಿಕೆಟ್ ನಿರಾಕರಿಸಲಾಯಿತು, ಕಾಂಗ್ರೆಸ್ ನವರೇ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಹೇಳಿದರು, ನಾನೇನು ತಪ್ಪು ಮಾಡಿದ್ದೆ ಗೆಲ್ಲುತ್ತಾನೆ ಎಂಬ ಕಾರಣಕ್ಕೆ ಜೆಡಿಎಸ್ ನವರು ಬೇಡ ಅಂದ್ರು ಲೋಕಸಭಾ ಟಿಕೆಟ್ ಅನ್ನು ಒಪ್ಪಿಸಿ ಬಂದರು ಎಂದು ಮಾಜಿ ಸಂಸದ ಮುದ್ದಹನುಮೇಗೌಡ ಅಸಮಾಧಾನ ವ್ಯಕ್ತಪಡಿಸಿದರು. ಡಾ.ಜಿ.ಪರಮೇಶ್ವರ್ ಅವರು ನನ್ನ ಸಂಸದನಾಗಿ ಮಾಡಲು ಸಹಾಯ ಮಾಡಿದರು, 2018ರಲ್ಲಿ ಅವರು ಉಪಮುಖ್ಯಮಂತ್ರಿ ಯಾಗಲು, ಕೊರಟಗೆರೆಯಲ್ಲಿ ಶಾಸಕನಾಗಲು ನಾನು ಸಹಾಯ ಮಾಡಿಲ್ಲವೇ? ಅವರದ್ದು ದೊಡ್ಡ ಸಹಾಯ ಇರಬಹುದು, ನನ್ನದು ಸಣ್ಣ ಅಳಿಲು ಸೇವೆ ಇರಬಹುದು, ಕೊರಟಗೆರೆಯ ಜನನ್ನ ಕೇಳಿ, ನಾನೇನು ಮಾಡಿಲ್ಲ ಅಂತ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು. ಸಮ್ಮಿಶ್ರ ಸರ್ಕಾರದಲ್ಲಿದ್ದ ಜೆಡಿಎಸ್ ಗೆ ಸ್ಥಾನ ಕೇಳುವ ಹಕ್ಕಿತ್ತು, ಅವರು ಕೇಳದೇ ಇದ್ರು ಸಹ ನಮ್ಮವರೇ ಕೊಟ್ಟರು, ಜೆಡಿಎಸ್ ನವರು ಒಬ್ಬ ಕ್ರಿಯಾಶೀಲ ಸಂಸದನಿಗೆ ಅನ್ಯಾಯವಾಗಬಾರದು ಎನ್ನುವ ಹೃದಯ ವೈಶಾಲತೆಯನ್ನು ತೋರಲಿಲ್ಲ. ದೇವೇಗೌಡರು, ಕುಮಾರಣ್ಣ ಯಾರು ತುಮಕೂರು ಬಿಟ್ಟುಕೊಡಿ ಎಂದು ಕೇಳದಿದ್ದರು ಸಹ…
ತುಮಕೂರು ಒಂದು ಸಮುದಾಯದ ಹಿರಿಯರ ಜಯಂತಿ ಆಚರಿಸುವುದು ಸ್ವಾಭಿಮಾನದ ಸಂಕೇತ ಎಂದು ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಮಹಾನಗರಪಾಲಿಕೆ,ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕಸಾಪ ಹಾಗು ವಿವಿಧ ನೇಕಾರರ ಸಂಘಟನೆಗಳ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ಅದ್ಯ ವಚನಕಾರ ದೇವರ ದಾಸಿಮಯ್ಯ ಅವರ 1044ನೇ ಜನ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಜಯಂತಿಗಳನ್ನು ಆಚರಿಸುವ ಮೂಲಕ ಸಮುದಾಯವನ್ನು ಒಗ್ಗೂಡಿಸಿ, ಅವರ ಶಕ್ತಿಯನ್ನು ಹೆಚ್ಚಿಸಲು ಇದೊಂದು ವೇದಿಕೆಯಾಗಲಿವೆ ಎಂದರು. ಸರಕಾರದ ಯೋಜನೆಗಳ ಸದುಪಯೋಗವಾಗಬೇಕಾದರೆ ವಿದ್ಯಾವಂತರು,ತಿಳಿದಿವರು ಬೇಕು.ಹಾಗಾಗಿ ಶಿಕ್ಷಣಕ್ಕೆ ನೇಕಾರರ ಸಮುದಾಯ ಒತ್ತು ನೀಡಬೇಕಿದೆ.ಕುಲಕಸುಬು ಮುಂದುವರೆಸುವ ಜೊತೆಗೆ,ಶಿಕ್ಷಣಕ್ಕೂ ಹೆಚ್ಚಿನ ಅದ್ಯತೆ ನೀಡಿದರೆ ಸಮಾಜದ ಒಳ್ಳೆಯ ಗೌರವ ದೊರೆಯಲಿದೆ.ಸಮಾಜದ ಏಳಿಗೆಗಾಗಿ ನನ್ನ ಕೈಲಾದ ಸಹಾಯವನ್ನುಮಾಡಿದ್ದೇನೆ.ಶ್ರೀನೀಲಕಂಠೇಶ್ವರ ದೇವಾಲಯದ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದ್ದು,ಮುಂದಿನ ದಿನಗಳಲ್ಲಿ ಉಳಿದ ಸಮುದಾಯಗಳಿಗೆ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್,ನೇಕಾರರೆಂದು ಹೇಳಿಕೊಳ್ಳಲು ಹಿಂಜರಿಯುತ್ತಿದ್ದ ಕಾಲದಲ್ಲಿ ಪ್ರಧಾನಿ…
ಗುಬ್ಬಿ ಜಿಲ್ಲೆಯಲ್ಲಿ ಯಾವುದೇ ಪಕ್ಷದಿಂದ ಆದರೂ ಸಹ ಕಾಡುಗೊಲ್ಲ ಸಮುದಾಯಕ್ಕೆ ರಾಜಕೀಯ ಪಕ್ಷಗಳು ಟಿಕೆಟ್ ನೀಡಬೇಕು ಎಂದು ಕಾಡುಗೊಲ್ಲರ ಮುಖಂಡ ಗುಡ್ಡದಹಳ್ಳಿ ಶಿವಕುಮಾರ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2008 ರಲ್ಲಿ ಗುಬ್ಬಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ 28 ಸಾವಿರ ಮತಗಳನ್ನು ಪಡೆದಿದ್ದೇನು ಈಗ ಬಿಜೆಪಿ ಪಕ್ಷದಲ್ಲಿ ಕಳೆದ ಹಲವು ವರ್ಷಗಳಿಂದ ಸಕ್ರಿಯವಾಗಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದು 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಪಕ್ಷದ ಆಕಾಂಕ್ಷಿಯಾಗಿದ್ದು ಪಕ್ಷ ಟಿಕೆಟ್ ನೀಡಿದರೆ ಖಂಡಿತವಾಗಿಯೂ ಈ ಬಾರಿ ಬಿಜೆಪಿ ಪಕ್ಷಕ್ಕೆ ಗೆಲುವು ತಂದುಕೊಡುತ್ತೇನೆ ಕಾಡುಗೊಲ್ಲ ಸಮುದಾಯವು ತಾಲೂಕಿನಲ್ಲಿ ಸುಮಾರು 30,000 ಮತದಾರರಿದ್ದು ಅವರೆಲ್ಲರ ವಿಶ್ವಾಸ ಮತ್ತು ಎಲ್ಲ ಸಮುದಾಯಗಳ ಜೊತೆಯಲ್ಲಿ ಪ್ರೀತಿ ವಿಶ್ವಾಸದಿಂದ ಇದ್ದೇನೆ ಹಾಗಾಗಿ ಬಿಜೆಪಿ ಪಕ್ಷ ಹಿಂದುಳಿದ ಸಮುದಾಯದ ಕಾಡುಗೊಲ್ಲ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು. ಟಿಕೆಟ್ ನೀಡದೆ ಹೋದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ನಿಲ್ಲುವುದು ಗ್ಯಾರಂಟಿ…
ಪಾವಗಡ ಮಾರ್ಚ್27 ರಿಂದ ಮಾ 31 ರವರಿಗೆ ರಾಜಸ್ಥಾನ್ನ ಬಣಸ್ವಾರದಲ್ಲಿ ನಡೆಯಲಿರುವ 45 ನೇ ಜೂನಿಯರ್ ಬಾಲಕರ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ 1.ಕರ್ನಾಟಕ ತಂಡದ ನಾಯಕರಾಗಿ ದಿನೇಶ್ ಎಸ್.ಡಿ.ಎಂ ಕ್ರೀಡಾ ಹಾಸ್ಟೆಲ್ ಉಜಿರೆ, 2.ಉಪನಾಯಕರಾಗಿ ದಿಲೀಪ್ ರಾಣೆಬೆನೂರು, 3.ಮಂಜುನಾಥ್ ಬೆಂಗಳೂರು ಗ್ರಾಮಾಂತರ,4.ಬಸವರಾಜ್ಪರಸಣ್ಣನವರು ಹಾವೇರಿ,5.ಸಾವಂತ್ಹೇಮಗಿರಿ ಚಿತ್ರದುರ್ಗ,6.ಟಿ.ಚೈತನ್ಯಶ್ರೀಸುಶೀಲ್ ಕೊಪ್ಪಳ,7.ಮನೋಜ್ ಎಸ್.ಡಿ.ಎಂ ಕ್ರೀಡಾ ಹಾಸ್ಟೆಲ್ ಉಜಿರೆ, 8.ಕಿರಣ್ ಶಿವಮೊಗ್ಗ,9ಚೇತನ್ಸಂಟಿ ಬೆಳಗಾವಿ,10.ವಿಷ್ಣು ಎನ್.ವಿ ಚಿತ್ರದುರ್ಗ,11.ಹರ್ಷವರ್ದನ ಯು.ಎಸ್ ಶಿವಮೊಗ್ಗ,12 ಶರತ್ ಮತ್ತಿಹಳ್ಳಿ ಎಸ್.ಸಿ.ವಿ.ಪಿ ಹೊನ್ನಾಳಿ,13.ದುಶಾಂತ್ಟಿ ರಾಜ್ ಮೈಸೂರು,14 ಚರಣ್ ಹಾಸನ,15.ಯಶಸ್ ಚಿಕ್ಕಮಂಗಳೂರು,16.ಆಜಯ್.ಆರ್ ಪಾವಗಡ ತುಮಕೂರು, 17.ಸಾಯಿಕಿರಣ್ ಬುಕ್ಕಶೆಟ್ಟರ್ ಎಸ್.ಸಿ.ವಿ.ಪಿ ಹೊನ್ನಾಳಿ,18.ಆದಿತ್ಯ ಎಸ್.ಡಿ.ಎಂ ಕ್ರೀಡಾ ಹಾಸ್ಟೆಲ್ ಉಜಿರೆ ರವರು ಆಯ್ಕೆಯಾಗಿದ್ದು,ಮಾ.27 ರಿಂದ 31 ರ ತನಕ 5 ದಿನಗಳ ಕಾಲ 45 ನೇ ಜೂನಿಯರ್ ಬಾಲಕರ ರಾಷ್ಟ್ರಮಟ್ಟದ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿರು ಎಲ್ಲಾ ಆಟಗಾರಿಗೆ ಹಾಗೂ ತರಬೇತುದಾರರಿಗೆ ತುಮಕೂರು ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯನ್ನ ಆಧ್ಯಕ್ಷರಾದ ಅಲಕುಂದರಾಜ್,ಕಾರ್ಯಾದರ್ಶಿ ಡಾ.ಹರೀಶ್,ಪಾಧ್ಯಕ್ಷರಾದ ದಿನೇಶ್ಪಾಟೇಲ್…











