Author: News Desk Benkiyabale

ತುಮಕೂರು ಬಗರ್ ಹುಕುಂ ಸಾಗುವಳಿ ಸಕ್ರಮ ಕೊರಿ ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇರುವಾಗ ಅರಣ್ಯ ಇಲಾಖೆ ಸೇರಿದಂತೆ ಯಾರು ಕೂಡ ರೈತರ ಸಾಗುವಳಿ ಸ್ವಾಧೀನಕ್ಕೆ ಅಡ್ಡಿ ಮಾಡದಂತೆ ರಕ್ಷಣೆ ನೀಡಲು ಒತ್ತಯಾಸಿ ಸೋಮವಾರ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು. ತುಮುಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಮಂಚಲದೊರೆ ಹಾಗೂ ಅಂಕಸಂದ್ರ ಗ್ರಾಮ ಪಂಚಾಯತಿ ಯ ಸುಮಾರು 35 ಗ್ರಾಮಗಳ ಸುಮಾರು ಎರಡು ಸಾವಿರಕ್ಕಿಂತಲೂ ಅಧಿಕ ಬಡ ಸಾಗುವಳಿದಾರರನ್ನು ಅವರು ಹಕ್ಕುಪತ್ರಕ್ಕಾಗಿ ಸಲ್ಲಿಸಲಾದ ಅರ್ಜಿಗಳನ್ನು ವಿಲೇವಾರಿ ಮಾಡದೇ ಅವರನ್ನು, ಪೆÇೀಲೀಸ್ ಹಾಗೂ ಅರಣ್ಯ ಇಲಾಖೆಯ ಮೂಲಕ ದೌರ್ಜನ್ಯ ನಡೆಸಿ, ಬೆದರಿಸಿ ಒಕ್ಕಲೆಬ್ಬಿಸಿ, ಬೀದಿಗೆ ತಳ್ಳುವ ಹೇಯ ಕುತಂತ್ರವನ್ನು, ನಿಲ್ಲಿಸಲುವಂತೆ ಕರ್ನಾಟಕ ಪ್ರಾಂತ ರೈತ ಸಂಘ ತುಮಕೂರು ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ. ತಕ್ಷಣವೇ ರೈತರ ಮೇಲಿನ ದೌರ್ಜನ್ಯ ಮತ್ತು ಒಕ್ಕಲೆಬ್ಬಿಸುವ ಕುತಂತ್ರಗಳನ್ನು ನಿಲ್ಲಿಸುವಂತೆ ಜಿಲ್ಲಾಡಳಿತ ಕ್ರಮ ವಹಿಸಲು ಒತ್ತಾಯಿಸುತ್ತದೆ. ಸರಕಾರಗಳು ಫಾರಂ,50,51,53,57 ಸಲ್ಲಿಸಲು ಅವಕಾಶ ನೀಡಿದ್ದವು . ಅದರಂತೆ ಚೇಳೂರು…

Read More

ತುಮಕೂರು ಕಾನೂನಿನ ಅರಿವಿನಿಂದ ಸಮಾಜದ ಏಳಿಗೆ ಸಾಧ್ಯ. ಭಾರತದ ಸಂವಿಧಾನದಲ್ಲಿನ ಮೂಲಭೂತ ಹಕ್ಕುಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ನಮ್ಮ ಮೇಲಿರುವ ಜವಾಬ್ದಾರಿಗಳನ್ನು ಅರಿತು ನಡೆಯಬೇಕು ಎಂದು ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಡಾ. ನಾಗರತ್ನ ಎ. ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಆಂಗ್ಲ ಸಾಹಿತ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಶುಕ್ರವಾರ ಆಯೋಜಿಸಿದ್ದ ‘ಸಾಂವಿಧಾನಿಕ ಅರಿವು’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದ ಪ್ರಜೆಗಳಾದ ನಮ್ಮೆಲ್ಲರ ಮೇಲೆ ಭಾರತೀಯ ಸಂವಿಧಾನ, ಮೂಲಭೂತ ಹಕ್ಕುಗಳು ಹಾಗೂ ಮೂಲಭೂತ ಜವಾಬ್ದಾರಿಗಳನ್ನು ಅರಿತು ನಡೆಯುವ ಮಹತ್ವದ ಹೊಣೆಯಿದೆ. ಕೇವಲ ಹಕ್ಕುಗಳ ಅರಿವು ಇದ್ದರೆ ಸಾಲುವುದಿಲ್ಲ, ನಮ್ಮ ಜವಾಬ್ದಾರಿಗಳನ್ನು ಕೂಡ ಅರಿತು ಪಾಲಿಸಬೇಕು ಎಂದರು. ಮೂಲಭೂತ ಹಕ್ಕುಗಳಾದ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ, ಧಾರ್ಮಿಕ ಮತ್ತು ಸಾಂಸ್ಕøತಿಕ ಸ್ವಾತಂತ್ರ್ಯಗಳ್ಳನ್ನು ಒಳಗೊಂಡು ಮಹಿಳಾ ಹಕ್ಕುಗಳ ಕುರಿತು ಅನೇಕ ನೈಜ ಉದಾಹರಣೆಗಳ ಮೂಲಕ ಜಾಗೃತಿ ಮೂಡಿಸಿದರು. ಸಮಾನತೆಯ ಹಕ್ಕು ಎಲ್ಲಾ ನಾಗರಿಕರ…

Read More

ತುಮಕೂರು ಗುಬ್ಬಿ ತಾಲ್ಲೂಕು ನಿಟ್ಟೂರು ಬೆಸ್ಕಾಂ ಉಪವಿಭಾಗದಲ್ಲಿ ಸಹಾಯಕ ಕಾರ್ಯ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅನಿಲ್ ಕುಮಾರ್ ರೈತರಿಗೆ ಮತ್ತು ಸ್ಥಳೀಯ ಗುತ್ತಿಗೆದಾರರಿಗೆ ವಿನಾಃ ಕಾರಣ ತೊಂದರೆ ನೀಡುತ್ತಿದ್ದು, ಕೂಡಲೇ ಇವರನ್ನು ವರ್ಗಾವಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಗುಬ್ಬಿ ತಾಲ್ಲೂಕು ಅಧ್ಯಕ್ಷ ನಂಜೇಗೌಡ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಘ್ರ ಸಂಪರ್ಕ ಯೋಜನೆಯಡಿ ರೈತರಿಗೆ 25ಕೆವಿಎ ಟಿಸಿ ನೀಡಿಲ್ಲ, ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ಮೂಲಭೂತ ಸೌಕರ್ಯ ಒದಗಿಸಲು 25ಕೆವಿಎ ಟಿಸಿ ಅಳವಡಿಸುವ ಹಾಗೂ ವಿದ್ಯುತ್ ಸಂಪರ್ಕ ಪಡೆಯಲು ಅಡಿಕೆ ತಟ್ಟೆ ತಯಾರಿಕ ಯಂತ್ರ, ಆಡಿಕೆ ಸುಲಿಯುವ ಯಂತ್ರ, ಸಣ್ಣ ಗುಡಿ ಕೈಗಾರಿಕೆಗಳಿಗೆ ವಿದ್ಯುತ್ ಸಂಪರ್ಕ ಪಡೆಯುವ ಸಮಯದಲ್ಲಿ ಮಂಡಳಿಯ ನಿಯಮಗಳನ್ನು ಗಾಳಿಗೆ ತೂರಿ, ತಮ್ಮ ಸೇಚ್ಛಾರದಿಂದ ವಿದ್ಯುತ್ ಸಂಪರ್ಕಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಮಂಡಳಿಯು ಕಾಮಗಾರಿಗಳಾದ ಲಿಂಕ್ ಲೈನ್, ಹಳೆಯ ವೈರು ಬದಲಾವಣೆ ಮಾಡುವುದು, ಇತ್ಯಾದಿ ಟೆಂಡರ್ ಗುತ್ತಿಗೆ…

Read More

ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ, ಭಾರತೀಯ ವಿಜ್ಞಾನ ಸಂಸ್ಥೆಯ ಎಂಎಸ್‍ಎಂಇ ಸೆಂಟರ್ ಆಫ್ ಎಕ್ಸಲೆನ್ಸ್‍ನ ಎಲೆಕ್ಟ್ರಾನಿಕ್ಸ್ ಸಿಸ್ಟಂ ಎಂಜಿನಿಯರಿಂಗ್ ವಿಭಾಗ, ಲಘು ಉದ್ಯೋಗ ಭಾರತಿ ಮತ್ತು ಅಖಿಲ ಭಾರತ ನಿರ್ವಹಣಾ ಸಂಸ್ಥೆ ಜಂಟಿಯಾಗಿ ಎಂಎಸ್‍ಎಂಇ (ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮ ಅಭಿವೃದ್ಧಿ) ಮತ್ತು ವಿದ್ಯಾರ್ಥಿಗಳಿಗೆ ಹೊಸ ಆವಿಷ್ಕಾರದ ಯೋಜನೆಗಳ ಒಂದು ದಿನದ ಅರಿವು ಕಾರ್ಯಕ್ರಮ ನಗರದ ಎಸ್‍ಎಸ್‍ಐಟಿ ಕ್ಯಾಂಪಸ್‍ನ ಪಿಜಿ ಸೆಮಿನಾರ್ ಹಾಲ್‍ನಲ್ಲಿ ಆಯೋಜಿಸಿತ್ತು. ತುಮಕೂರಿನಲ್ಲಯೇ ಹಲವಾರು ಹೊಸ ಆವಿಷ್ಕಾರ ಉದ್ಯಮ ಸೃಷ್ಟಿಗೆ ಅವಕಾಶಗಳು ಇದ್ದು, ವಿದ್ಯಾರ್ಥಿಗಳು ಸ್ಮಾರ್ಟ್ ಸ್ವಿಚ್‍ಗಳಿಂದ ಹಿಡಿದು ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸ್ಮಾರ್ಟ್ ಮಾಡುವ ಅವಕಾಶಗಳು ಮುಂದಿವೆ ಅವುಗಳಿಗಾಗಿ ಕೇಂದ್ರ ಸರ್ಕಾರ ಎಂಎಸ್‍ಎಂಇ ಯೋಜನೆಗಳಿಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಎಂಎಸ್‍ಎಂಇ ಸಂಯೋಜಕರಾದ ಡಾ. ಟಿ.ವಿ. ಪ್ರಭಾಕರ್ ವಿದ್ಯಾರ್ಥಿಗಳಿಗೆ ಹೊಸ ಉದ್ಯಮ ಸೃಷ್ಟಿಸಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ತುಮಕೂರಿನಲ್ಲಿಯೇ ಡ್ರೋನ್ ಮತ್ತು ತೇಜಸ್ ಏರ್‍ಕ್ರಾಫ್ಟ್…

Read More

ತುಮಕೂರು ಒಂದು ಬಡಾವಣೆ ಅಥವಾ ವಾರ್ಡು ಅಭಿವೃದ್ದಿಯಾಗಬೇಕೆಂದರೆ ಅಲ್ಲಿನ ನಾಗರಿಕರ ಹಿತರಕ್ಷಣಾ ಸಮಿತಿಗಳು ಹೆಚ್ಚು ಕ್ರಿಯಾಶೀಲದ ಜೊತೆಗೆ, ಗಟ್ಟಿತನದಿಂದ ಕೂಡಿದ್ದರೆ ಮಾತ್ರ ಸಾಧ್ಯ. ಇದಕ್ಕೆ 26ನೇ ವಾರ್ಡಿಗೆ ಸೇರಿದ ಎಸ್.ಎಸ್.ಐ.ಟಿ. ಬಡಾವಣೆ, ಎಸ್.ಎಸ್.ಪುರಂ ಬಡಾವಣೆಗಳ ನಾಗರಿಕ ಹಿತರಕ್ಷಣಾ ಸಮಿತಿಗಳೇ ಸಾಕ್ಷಿ ಎಂದು ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯಪಟ್ಟಿದ್ದಾರೆ. ನಗರದ 26ನೇ ವಾರ್ಡಿನ ದೋಬಿ ಘಾಟ್ ಪಕ್ಕದ ಸಾರ್ವಜನಿಕ ಸ್ಮಶಾನಕ್ಕೆ ಹೊಂದಿಕೊಂಡಂತೆ ಸ್ಮಾರ್ಟ್‍ಸಿಟಿಯಿಂದ ನಿರ್ಮಿಸಿರುವ ಶ್ರೀಸಿದ್ದಗಂಗಾ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡುತಿದ್ದ ಅವರು, ಶ್ರೀಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿಯವರು ಈ ಭಾಗದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಿದ ಸಂದರ್ಭದಲ್ಲಿ ವಾರ್ಡಿನ ಕಾರ್ಪೋರೇಟರ್ ಮಲ್ಲಿಕಾರ್ಜುನಯ್ಯ ಅವರ ಕೋರಿಕೆಯಂತೆ ಬೀದಿ ಬದಿ ವ್ಯಾಪಾರಿಗಳಿಗೆ ಮಾರುಕಟ್ಟೆ ನಿರ್ಮಿಸುವ ಪ್ರಸ್ತಾವನೆಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಈ ಬಡಾವಣೆಯ ಶೇ90ಕ್ಕು ಹೆಚ್ಚು ನಾಗರಿಕರು ಮಾರುಕಟ್ಟೆಯ ಪರವಾಗಿ ನಿಂತಿದ್ದರಿಂದ ಇಂದು ಇಷ್ಟು ಸುಂದರ ಮಾರುಕಟ್ಟೆ ನಿರ್ಮಾಣವಾಗಿದೆ.ಇದರಿಂದ ಎಸ್.ಎಸ್.ಪುರಂ,ಎಸ್.ಐ.ಟಿ,ಗಂಗೋತ್ರಿ ನಗರ, ಅಶೋಕನಗರದ ನಾಗರಿಕರಿಗೆ ಮನೆ ಬಾಗಿಲಿನಲ್ಲಿ ತಾಜಾ ತರಕಾರಿ…

Read More

ತುಮಕೂರು ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಹಂತದ 124 ಮಂದಿ ಅಭ್ಯರ್ಥಿ ಗಳ ಪಟ್ಟಿ ಬಿಡುಗಡೆ ಯಾಗಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ 8 ಕ್ಷೇತ್ರ ಕ್ಕೆ ಮಾತ್ರ ಅಭ್ಯರ್ಥಿ ಗಳ ಹೆಸರು ಘೋಷಣೆ ಯಾಗಿದೆ.ಟಿಕೆಟ್ ಗೊಂದಲವಿರುವ ತುಮಕೂರು ನಗರ ಸೇರಿ ತುಮಕೂರು ಗ್ರಾಮಾಂತರ ಹಾಗೂ ಗುಬ್ಬಿ ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ. ಎರಡನೇ ಪಟ್ಟಿಯಲ್ಲಿ ಬಿಡುಗಡೆ ಯಾಗುವ ನಿರೀಕ್ಷೆ ಯಿದೆ. ಪಾವಗಡದ ಹಾಲಿ ಶಾಸಕ ವೆಂಕಟರವಣಪ್ಪ ಬದಲಾಗಿ ಅವರ ಪುತ್ರ ಎಚ್. ವಿ. ವೆಂಕಟೇಶ್ ಅವರಿಗೆ ಈ ಬಾರಿ ಟಿಕೆಟ್ ಕೊಡಲಾಗಿದ್ದು, ಉಳಿದ ಕ್ಷೇತ್ರಗಳಲ್ಲಿ ಕಳೆದ ಬಾರಿ ಅಭ್ಯರ್ಥಿ ಯಾದವರು, ಶಾಸಕರಾದ ವರಿಗೆ ಟಿಕೆಟ್ ಹಂಚಿಕೆ ಯಲ್ಲಿ ಮನ್ನಣೆ ನೀಡಲಾಗಿದೆ. ಕ್ಷೇತ್ರ- ಟಿಕೆಟ್ ಪಡೆದ ಅಭ್ಯರ್ಥಿಗಳು ಕೊರಟಗೆರೆ (ಎಸ್ಸಿ ಮೀಸಲು) -ಡಾ. ಜಿ ಪರಮೇಶ್ವರ್, ಮಧುಗಿರಿ- ಕೆ. ಎನ್. ರಾಜಣ್ಣ, ಸಿರಾ-ಟಿ.ಬಿ.ಜಯಚಂದ್ರ, ತಿಪಟೂರು – ಷಡಾಕ್ಷರಿ, ಕುಣಿಗಲ್ – ಡಾ.ಎಚ್.ಡಿ.ರಂಗನಾಥ್, ಚಿಕ್ಕ ನಾಯಕನಹಳ್ಳಿ- ಕೆ.ಎಸ್.ಕಿರಣ್ ಕುಮಾರ್, ತುರುವೇಕೆರೆ ಬೆಮೆಲ್…

Read More

ತುಮಕೂರು ವಿಶ್ವ ಕ್ಷಯರೋಗ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದಲ್ಲಿ ಜನಜಾಗೃತಿ ಜಾಥಾ ನಡೆಸಲಾಯಿತು. ನಗರದ ಟೌನ್‍ಹಾಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ಮತ್ತು ಐಎಂಎ ಅಧ್ಯಕ್ಷ ಡಾ. ಚಂದ್ರಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಡಿಹೆಚ್‍ಓ ಡಾ. ಮಂಜುನಾಥ್ ಅವರು, 1882 ಮಾರ್ಚ್ 24 ರಂದು ವಿಜ್ಞಾನಿ ರಾಬರ್ಟ್ ಕಾಕ್ ಎಂಬುವರು ಕ್ಷಯ ರೋಗವನ್ನು ಕಂಡು ಹಿಡಿದರು. ಅಂದಿನಿಂದಲೂ ಪ್ರಪಂಚದಾದ್ಯಂತ ವಿಶ್ವಕ್ಷಯ ರೋಗ ದಿನವನ್ನು ಪ್ರತಿ ವರ್ಷವೂ ಒಂದೊಂದು ಘೋಷವಾಕ್ಯದಡಿ ಆಚರಿಸಲಾಗುತ್ತಿದೆ. ಈ ಬಾರಿ “ಕ್ಷಯ ರೋಗವನ್ನು ಕೊನೆಗಾಣಿಸಬಹುದು” ಎಂಬ ಘೋಷ ವಾಕ್ಯದಡಿ ವಿಶ್ವ ಕ್ಷಯ ರೋಗ ದಿನವನ್ನು ಆಚರಿಸಲಾಗುತ್ತಿದೆ ಎಂದರು. ಕ್ಷಯ ರೋಗ ನಿರ್ಮೂಲನೆ ಕಾರ್ಯಕ್ರಮದಡಿ ಇಡೀ ರಾಜ್ಯದಲ್ಲೇ ತುಮಕೂರು ಜಿಲ್ಲೆ 2ನೇ ಸ್ಥಾನದಲ್ಲಿ ಆಯ್ಕೆಯಾಗಿದ್ದು, ಈ ಬಾರಿ ಬೆಳ್ಳಿ…

Read More

ತುಮಕೂರು ಹೊಟೇಲ್ ಮ್ಯಾನೇಜ್‍ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ, ಕಳೆದ 12 ವರ್ಷಗಳಿಂದ ಕೆಲಸ ಮಾಡುತ್ತಿರುವ ಬೆಂಗಳೂರು ಮೂಲದ ಅಂತುರಾಜ್ ಎಂಬ ವ್ಯಕ್ತಿಗೆ ತುಮಕೂರಿನ ದ ಬೀವ್ ಹೈವ್‍ಗ್ರಾಂಡ್ ಹೊಟೇಲ್ ಮಾಲೀಕರು ಮತ್ತು ಕುಟುಂಬದವರು ಕಿರಿಕುಳು ನೀಡಿ, ಅರ್ಥಿಕವಾಗಿ ಮೋಸ ಮಾಡಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಒಂದು ವಾರದೊಳಗೆ ಸೂಕ್ತ ನ್ಯಾಯ ದೊರಕಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ದಲಿತ ಸಂರಕ್ಷ ಸಮಿತಿ ರಾಜ್ಯ ಅಧ್ಯಕ್ಷ ಲಯನ್ ಕೆ.ವಿ.ಬಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ ಬೀವ್ ಹೈವ್ ಗ್ರಾಂಡ್ ಹೊಟೇಲ್‍ನ ಮಾಲೀಕರಾದ ಬಸವರಾಜು ಮತ್ತು ಆತನ ಮಗ ದರ್ಶನ ಮತ್ತು ಜಿ.ಪಂ.ಮಾಜಿ ಸದಸ್ಯರಾದ ವೈ.ಸಿ.ಸಿದ್ದರಾಮಯ್ಯ ಅವರುಗಳು ಅಂತುರಾಜ್ ಕುಟುಂಬಕ್ಕೆ ಕಿರುಕುಳ ನೀಡಿ,ಇಡೀ ಕುಟುಂಬವೇ ಬೀದಿಗೆ ಬೀಳುವಂತೆ ಮಾಡಿದೆ.ಇದನ್ನು ವಿರೋಧಿಸಿ ಕಳೆದ 155 ದಿನದಿಂದಲೂ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ ಇದುವರೆಗು ಜಿಲ್ಲಾಡಳಿತ,ಜಿಲ್ಲಾ ಪೊಲೀಸ್ ಯಾರು ಸಹ ತಿರುಗಿ ನೋಡಿಲ್ಲ.ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಿಶ್ಚಿತ ಎಂದರು. ಸಾಹಿತಿ ಡಾ.ವಡ್ಡಗೆರೆ…

Read More

ಬೆಂಗಳೂರು: ಈ ಬಾರಿ ಸರಕಾರದ ಅವಧಿಯ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳು ಮತ್ತು ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಮತ ಬ್ಯಾಂಕ್‍ನಲ್ಲಿ ಬಿರುಕು ಉಂಟಾಗದಂತೆ ಲಿಂಗಾಯತ ಸಮುದಾಯದ ಉಪಪಂಗಡ ಪಂಚಮಸಾಲಿ ವರ್ಗಕ್ಕೆ ಮೀಸಲಾತಿ ಘೋಷಿಸುವ ಬಗ್ಗೆಯೂ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದೆ ಮತ್ತು ಎಲ್ಲಾ ಸಚಿವರು ಹಾಜರಿರಲು ತಿಳಿಸಲಾಗಿದೆ. ಮಾದರಿ ನೀತಿ ಸಂಹಿತೆ ಯಾವುದೇ ಸಮಯದಲ್ಲಿ ಘೋಷಣೆಯಾಗುವ ನಿರೀಕ್ಷೆಯಿದ್ದು, ಬೊಮ್ಮಾಯಿ ಅವರು ಪ್ರಮುಖ ವಿಚಾರಗಳ ನಿರ್ಧಾರ ತೆಗೆದುಕೊಳ್ಳಲು ಇದು ಕೊನೆಯ ಅವಕಾಶವಾಗಿದೆ. ಲಿಂಗಾಯತ ಪಂಚಮಸಾಲಿಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್…

Read More

ತುಮಕೂರು ಇದೇ ಮಾರ್ಚ್ 26 ರಂದು ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಸಾಪ ಹಾಗೂ ತುಮಕೂರು ಜಿಲ್ಲೆಯ ನೇಕಾರರ ಸಮುದಾಯಗಳಾದ ದೇವಾಂಗ, ಕುರುಹೀನ ಶೆಟ್ಟಿ,ಪದ್ಮಶಾಲಿ ಹಾಗೂ ತೊಗಟವೀರ ಸಮುದಾಯಗಳ ವತಿಯಿಂದ ಅದ್ಯ ವಚನಕಾರ ದೇವರ ದಾಸಿಮಯ್ಯ ಅವರ 1044ನೇ ಜಯಂತಿ ಆಚರಣೆ ಆರಂಭವಾಗಿ ಹೊರಪೇಟೆಯಲ್ಲಿರುವ ಶ್ರೀನೀಲಕಂಠೇಶ್ವರ ದೇವಾಲಯದ ಅವರಣದಲ್ಲಿ ಜಿಲ್ಲಾ ನೇಕಾರರ ಒಕ್ಕೂಟದ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಧನಿಯಕುಮಾರ್,ಉಪಾಧ್ಯಕ್ಷ ಎನ್.ವೆಂಕಟೇಶ್,ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣಪ್ಪ,ಕಾರ್ಯದರ್ಶಿ ರೇವಣ್ಣಕುಮಾರ್,ನೇಕಾರರ ಮಹಿಳಾ ಒಕ್ಕೂಟದ ಜಿಲ್ಲಾಧ್ಯಕ್ಷ ಶ್ರೀಮತಿ ಚಂದ್ರಕಲಾ ದೇವರಾಜು,ಸಂಘಟನಾ ಕಾರ್ಯದರ್ಶಿ ಅನಿಲ್‍ಕುಮಾರ್,ನಿರ್ದೇಶಕರಾದ ರಂಗಸ್ವಾಮಿ, ಜೈರಂಗಶೆಟ್ಟಿ ಅವರುಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಧನಿಯಕುಮಾರ್ ಮಾತನಾಡಿ,ನೇಕಾರರ ಸಮುದಾಯ ತನ್ನದೇ ಆದ ಇತಿಹಾಸವನ್ನು ಹೊಂದಿರುವ ಸಮುದಾಯ.ಈ ಸಮುದಾಯಕ್ಕೆ ಸೇರಿದ ಅದ್ಯ ವಚನಕಾರ ದೇವರ ದಾಸಿಮಯ್ಯ ಅನುಭವ ಮಂಟಪದ ಪ್ರಮುಖರಲ್ಲಿ ಒಬ್ಬರಾಗಿದ್ದು, ಬಸವಣ್ಣನವರಿಗಿಂತಲೂ ಹಿರಿಯರು.ಸುಮಾರು 176ಕ್ಕೂ ಹೆಚ್ಚು ವಚನಗಳನ್ನು…

Read More