Author: News Desk Benkiyabale

ಗುಬ್ಬಿ ರೈತರಿಗೆ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ಎಲ್ಲಾ ರೀತಿಯ ಸೌಲಭ್ಯವುಳ್ಳ ನೂತನ ಕಟ್ಟಡ ನಿರ್ಮಾಣವಾಗುತ್ತಿರುವುದು ಈ ಭಾಗದ ರೈತರಿಗೆ ಸಂತೋಷ ತಂದಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಾಲಕೃಷ್ಣ ತಿಳಿಸಿದರು. ತಾಲೂಕಿನ ಕಡಬ ಗ್ರಾಮದಲ್ಲಿ ನೂತನ ಕೃಷಿ ಕಚೇರಿ ಕಟ್ಟಡದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಕಡಬ ಸುತ್ತ ಮುತ್ತನೂರಾರು ಗ್ರಾಮಗಳಿದ್ದು ಸಾವಿರಾರು ರೈತರು ಕೃಷಿಯನ್ನು ನಂಬಿ ಜೀವನ ಸಾಗಿಸುತ್ತಿದ್ದಾರೆ ನಮ್ಮ ಭಾಗದಲ್ಲಿ ರೈತ ಕಚೇರಿ ಆಧುನಿಕವಾಗಿ ನಿರ್ಮಾಣವಾಗುವುದರಿಂದ ರೈತರಿಗೆ ಸಹಾಯವಾಗುತ್ತದೆ ರೈತರಿಗೆ ಅನುಕೂಲವಾಗುವ ಯಾವುದೇ ಕೆಲಸವನ್ನು ಮಾಡಲು ಗುಬ್ಬಿ ನಗರಕ್ಕೆ ಹೋಗುವ ಸಮಸ್ಯೆ ತಪ್ಪುತ್ತದೆ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು. ಕಡಬದ ಕೃಷಿ ಅಧಿಕಾರಿ ದರ್ಶನ್ ಮಾತನಾಡಿ ಸುಸಜ್ಜಿತವಾದ ಕಟ್ಟಡವನ್ನು ನಿರ್ಮಾಣ ಮಾಡುತ್ತಿರುವುದರಿಂದ ರೈತರಿಗೆ ಅನುಕೂಲವಾಗುವ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳು ಇಲ್ಲಿ ಸಿಗುತ್ತವೆ ಮತ್ತು ರೈತರಿಗೆ ಅವಶ್ಯಕತೆ ಇರುವ ಎಲ್ಲಾ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ನೀಡಲು ಸಹ ಸ್ಥಳ ಅವಕಾಶ ಮಾಡಲಾಗುತ್ತದೆ ಎಂದು ತಿಳಿಸಿದರು.…

Read More

ತುಮಕೂರು ಕೇಂದ್ರ ಸರ್ಕಾರವು ಬೀಡಿ ಕಾರ್ಮಿಕರ ನಿಜವಾದ ಬೇಡಿಕೆಗಳನ್ನು ಪರಿಹರಿಸಬೇಕು ಮತ್ತು ಸರ್ಕಾರದ ನಿಲುವುಗಳನ್ನು ಬಹಿರಂಗಗೊಳಿಸಬೇಕು. ಉದ್ಯೋಗ ಕಳೆದುಕೊಳ್ಳುವವರಿಗೆ ಆರ್ಥಿಕನೆರವು ನೀಡುವ, ಪರ್ಯಾಯ ಉದ್ಯೋಗದ ಯೋಜನೆಯನ್ನು ಪ್ರಕಟಿಸಬೇಕು. ನೋಂದಣಿಯಾಗದ/ಅಕ್ರಮ ಬೀಡಿ ಉತ್ಪಾದನೆಯನ್ನು ತಕ್ಷಣವೇ ನಿಲ್ಲಿಸಬೇಕು. ಬೀಡಿ ಕಾರ್ಮಿಕರಿಗೆ ಏಕರೂಪದ ರಾಷ್ಟೀಯ ಕನಿಷ್ಠ ವೇತನವನ್ನು ಪ್ರತಿ ಸಾವಿರ ಬೀಡಿ ಸುತ್ತಲು ರೂ.395/-, ತುಟ್ಟಿಭತ್ಯೆ @ 0.5 ಪೈಸೆ ಪ್ರತಿ ಪಾಯಿಂಟ್‍ಗೆ ನೀಡಬೇಕು ,ಬೀಡಿ ರೋಲರ್ಗಳನ್ನು ಹೊರತುಪಡಿಸಿ ಉಳಿದ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಠ 21,000/- ರೂ.ವೇತನ ನಿಗಧಿ ಮಾಡಬೇಕು,ಮಾರುವ ಮತ್ತು ಕೊಳ್ಳುವ ,ಉಪ-ಗುತ್ತಿಗೆ ವ್ಯವಸ್ಥೆಯನ್ನು ರದ್ದುಪಡಿಸಬೇಕು ಕಾರ್ಮಿಕರನ್ನು ನೇರವಾಗಿ ಪ್ರಧಾನ ಉದ್ಯೋಗ ದಾತರು ಮತ್ತು ಖಾತೆ ಸಂಖ್ಯೆಗಳು ನಿಜವಾದ ಕಾರ್ಮಿಕರ ಹೆಸರಿನಲ್ಲಿರಬೇಕು. ಬೀಡಿ ಕಾರ್ಮಿಕರ ಕಲ್ಯಾಣ ಯೋಜನೆಗಳಿಗೆ ಹಣ ನೀಡುತ್ತಿರುವ ಬೀಡಿ ಉದ್ಯಮದಲ್ಲಿ ಸೆಸ್ ಅನ್ನು ಮರುಸ್ಥಾಪಿಸಿಬೇಕು. ಸರ್ಕಾರ/ ಮಾಲಕರು ಎಲ್ಲ ಬೀಡಿ ಕಾರ್ಮಿಕರಾಗಿ ಆರೋಗ್ಯ ಬಗ್ಗೆ ವಿಶೇಷ ಜವಾಬ್ದಾರಿಯನು ತೆಗೆದುಕೊಳ್ಳಬೇಕು.ಎಲ್ಲಾ ಬೀಡಿ ಕಾರ್ಮಿಕರಿಗೆ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಬೇಕು ಹಾಗೂ ಎಲ್ಲಾರಿಗೆ ಆರೋಗ್ಯ…

Read More

ಕೊರಟಗೆರೆ ನೂತನ ಗ್ರಾಪಂ ಕಾರ್ಯಾಲಯವು ಸುಂದರವಾಗಿ ನಿರ್ಮಾಣವಾಗಿದೆ, ಆ ಸುಂದರತೆ ಹಾಗೇ ಉಳಿಯಬೇಕಾದರೆ ಗ್ರಾಮೀಣ ಭಾಗದ ಸಾಮಾನ್ಯ ಜನರಿಗೆ ಪ್ರಮಾಣಿಕವಾಗಿ ಸ್ಫಂದಿಸಿ ಉತ್ತಮ ಸೇವೆ ಸಲ್ಲಿಸಿದ್ದರೆ ಇದಕ್ಕೊಂದು ಸಾರ್ಥಕತೆ ಸಿಗಲಿದೆ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದಲ್ಲಿ ನೂತನ ಗ್ರಾಮಪಂಚಾಯಿತಿ ಕಾರ್ಯಾಲಯ ಕಟ್ಟಡ ಉದ್ಘಾಟನೆ ಮಾಡಿ ಮಾತನಾಡಿದರು. ಈ ಗ್ರಾ.ಪಂ ಕಾರ್ಯಾಲಯ ಸುಮಾರು 1ಕೋಟಿ 15ಲಕ್ಷ ರೂ ವೆಚ್ಚÀದಲ್ಲಿ ನಿರ್ಮಿಸಲಾಗಿದೆ, ಅಂದೇ ಇಂದಿರಾ ಗಾಂಧಿಯವರ ಸರ್ಕಾರದಲ್ಲಿ ನಡೆದಂತಹ ಬೇಲೂರು ಘೋಷಣೆ ಎಂಬ ಕಾರ್ಯಕ್ರಮದಲ್ಲಿ ಗ್ರಾಪಂ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದರು. ನಾನು ಶಾಸಕನಾದ ಮೇಲೆ ಕ್ಷೇತ್ರದಲ್ಲಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಸುಮಾರು 6ಕೋಟಿ 40ಲಕ್ಷ ರೂ.ಗಳನ್ನು ಅನುದಾನ ಮಂಜೂರಾಗಿ ಕಾರ್ಯರೂಪಕ್ಕೆ ತಂದಿದ್ದೇನೆ ಅವೆಲ್ಲವೂ ನಿಮ್ಮಗಳ ಕಣ್ಮುಂದೆಯೇ ಇದೆ ಎಂದು ಹೇಳಿದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಮಾತನಾಡಿ, ನಾನು ಹುಟ್ಟಿದ ಗ್ರಾಮ ಅಕ್ಕಿರಾಂಪುರ, ಈ ಹುದ್ದೆಯಲ್ಲಿ 4ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದೇವೆ…

Read More

ತುಮಕೂರು ಡಿಜಿಟಲ್ ಸಾಕ್ಷರತೆಯ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಿ ಭಾರತದ ಭವಿಷ್ಯ ರೂಪಿಸುವುದೇ ನಮ್ಮ ಗುರಿ ಎಂದು ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯ ತರಬೇತುದಾರೆ ಸಹನಾ ಕುಮಾರಸ್ವಾಮಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಮಂಗಳವಾರ ಆಯೋಜಿಸಿದ್ದ ‘ಇನ್ಫೋಸಿಸ್ ಸ್ಪ್ರಿಂಗ್‍ಬೋರ್ಡ್’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ಪೀಳಿಗೆಯನ್ನು ಉತ್ಪಾದಕ ಮತ್ತು ಸ್ವಾವಲಂಬಿ ನಾಗರಿಕರನ್ನಾಗಿ ಮಾಡಿ, ಡಿಜಿಟಲ್ ಸಾಕ್ಷರತೆ ಮೂಲಕ ಡಿಜಿಟಲ್ ಸಾಮಥ್ರ್ಯವನ್ನು ಸಾಧಿಸಲು ಅಗತ್ಯವಿರುವ ಕಲಿಕೆ, ಕೌಶಲ್ಯ, ಸಂವಹನಕ್ಕಾಗಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಬಳಕೆಯ ರೂಪಗಳ ಅಡಿಪಾಯವನ್ನು ರೂಪಿಸುವ ಕೌಶಲ್ಯಗಳನ್ನು ವರ್ಧಿಸಲು ಇನ್ಫೋಸಿಸ್ ಸ್ಪ್ರಿಂಗ್‍ಬೋರ್ಡ್ ಸಹಕಾರಿಯಾಗುತ್ತದೆ ಎಂದರು. ತುಮಕೂರು ವಿವಿ ಪಿಎಂಇಬಿ ನಿರ್ದೇಶಕ ಪ್ರೊ. ಸಂಪತ್ ಕುಮಾರ್ ಬಿ. ಟಿ. ಮಾತನಾಡಿ, ಶೈಕ್ಷಣಿಕ ಮಟ್ಟದಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ವೃದ್ಧಿಸಲು ತುಮಕೂರು ವಿಶ್ವವಿದ್ಯಾನಿಲಯ ಶ್ರಮಿಸುತ್ತಿದೆ. ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳ ಜ್ಞಾನವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯಲೂ ಇನ್ಫೋಸಿಸ್ ಸಂಸ್ಥೆಯ ಸಹಯೋಗದಲ್ಲಿ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ತುಮಕೂರು…

Read More

ಚಿಕ್ಕನಾಯಕನಹಳ್ಳಿ ಸರ್ಕಾರದಿಂದ ಮಹಿಳೆಯರನ್ನು ಸಬಲರನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಸಂಜೀವಿನಿ ಸ್ವಸಹಾಯ ಸಂಘದ ಮೂಲಕ ಮಹಿಳೆಯರಿಗೆ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಅವರನ್ನು ಸ್ವ ಉದ್ಯೋಗ ಕಲ್ಪಿಸಿಕೊಟ್ಟಿರುವುದು ಸಂತೋಷದ ವಿಷಯ ಎಂದು ಕಾನೂನು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಇಲಾಖೆಯ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ತಿಳಿಸಿದರು. ನಗರದಲ್ಲಿ ಗುರುವಾರದಂದು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲಾಭಿವೃದ್ಧಿ ಉದ್ಯೋಗಶೀಲತೆ ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ತಾಲ್ಲೂಕಿನ ತೀನಂಶ್ರೀ ಭವನದಲ್ಲಿ “ವಿಶೇಷ ಕೇಂದ್ರೀಯ ನೆರವು ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಸ್ತ್ರೀ ಸಾಮಥ್ರ್ಯ ಯೋಜನೆಯ ಪಲಾನುಭವಿಗಳಿಗೆ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರದಲ್ಲಿ ಬರುವ ಹೆಚ್ಚು ಹೆಚ್ಚು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ನಿರ್ವಹಣೆಗೆ ಪಾತ್ರರಾಗಿ ಎಂದರು. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ವಸಂತ ಕುಮಾರ್ ಮಾತನಾಡಿ, ಸ್ತ್ರೀ ಸಾಮಥ್ರ್ಯ ಯೋಜನೆಯಡಿ ಸಂಘದ ಎಲ್ಲಾ ಮಹಿಳೆಯರಿಗೆ ಸಾಲ ಸೌಲಭ್ಯಗಳನ್ನು ಒದಗಿಸಿ ಕೊಡುವ ಮೂಲಕ ಮಹಿಳೆಯರನ್ನು ಸಬಲರನ್ನಾಗಿ ಹಾಗೂ ಸದೃಢರನ್ನಾಗಿ ಮಾಡಬೇಕು…

Read More

ತುರುವೇಕೆರೆ ಕಾಂಗ್ರೇಸ್ ಪಕ್ಷ ದೇಶದ ಎಲ್ಲ ಕಡೆಗಳಲ್ಲಿ ಠೇವಣಿ ಕಳೆದುಕೊಳ್ಳುತ್ತಿದ್ದು ದಿವಾಳಿ ಹಂತಕ್ಕೆ ಹೋಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಪಟ್ಟಣದ ಹಿರಣ್ಣಯ್ಯ ಬಯಲು ರಂಗ ಮಂದಿರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಬಿಜೆಪಿ ವಿಜೆಯ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೇಸ್ ಪಕ್ಷ ನಮಗೆ ಸರಿ ಸಾಟಿ ಅಲ್ಲ, ದೇಶದ ಹಲವು ಕಡೆಗಳಲ್ಲಿ ನೆಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮಕಾಡೆ ಮಲಗಿದೆ. ಕಾಂಗ್ರೆಸ್ ರಾಹುಲ್‍ಗಾಂದಿ ನಮ್ಮ ನಾಯಕ ಮೋದಿ ಮುಂದೆ ಯಾವ ಲೆಕ್ಕ, ದೇಶ ಭಕ್ತಯಾಗಿರುವ ಮೋದಿಜೀಯವರನ್ನು ಇಡೇ ಜಗತ್ತೇ ಕೊಂಡಾಡುತ್ತಿದೆ, 8 ವರ್ಷದಲ್ಲಿ ಅದಿಕಾರದ ಅವದಿಯಲ್ಲಿ 1 ದಿನ ವಿಶ್ರಾಂತಿ ಪಡೆಯದೆ ದೇಶದ ಅಬಿವೃದ್ದಿಗೆ ಕೆಲಸ ಮಾಡುತ್ತಿದ್ಧಾರೆ, ನಮಗೆ ಅವರೇ ಅದರ್ಶ ಅದನ್ನು ಕಾರ್ಯಕರ್ತರು ಮನದಲ್ಲಿ ಇಟ್ಟುಕೊಂಡು ದೇಶಕ್ಕೆ ಗೌರವ ಕೊಡುವಂತ ಕೆಲಸ ಮಾಡಬೇಕು ಎಂದು ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ ಮಸಾಲೆ ಇಲ್ಲದ ಮನೆಯಂತೆ ಎಲ್ಲ ಮನಸ್ಸಿನಲ್ಲಿಯೂ ಸಹ…

Read More

ತುಮಕೂರು ಆರೋಗ್ಯ ವರ್ಧಕ ಮತ್ತು ನೈಸರ್ಗಿಕ ಉಂಡೆ ಕೊಬ್ಬರಿ ಬೆಲೆ ತೀವ್ರ ಕುಸಿತದ ಹಿನ್ನೆಲಯಲ್ಲಿ ಕಳೆದ ಇಪ್ಪತ್ತೆಂಟು ದಿನಗಳಿಂದ ಕೊಬ್ಬರಿ ಬೆಳೆಗಾರರ ಹೋರಾಟ ಸಮಿತಿ, ತಿಪಟೂರು ಅಡಿಯಲ್ಲಿ ಕ್ವಿಂಟಾಲ್‍ಗೆ 20,000 ಕನಿಷ್ಟ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕು ಮತ್ತು ರಾಜ್ಯ ಸರ್ಕಾರ ರೂ.5,000 ಪ್ರೋತ್ಸಾಹ ಧನವನ್ನು ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಹಾಗೂ ಅನಿರ್ಧಿಷ್ಟಾವಧಿ ಧರಣಿಯನ್ನು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಎದುರು ನಡೆಸಲಾಗುತ್ತಿದೆ. ಆಡಳಿತ ಪಕ್ಷದ ಉಸ್ತುವಾರಿ ಸಚಿವರಾಗಲಿ, ಈ ನೆಲದಿಂದ ಆರಿಸಿ ಹೋಗಿ, ಮಂತ್ರಿಗಳಾಗಿರುವ ಬಿ.ಸಿ.ನಾಗೇಶ್ ಹಾಗೂ ಜೆ.ಸಿ. ಮಾಧುಸ್ವಾವಿಯವರಾಗಲೀ ಮಧ್ಯಪ್ರವೇಶ ಮಾಢಿ, ಹೋರಾಟ ಸ್ಥಳಕ್ಕೆ ಬಂದು ಅಧಿಕಾರದಲ್ಲಿ ಇರುವಾಗಲೇ ಸಮಸ್ಯೆ ಇತ್ಯರ್ಥ ಮಾಡಲು ಪ್ರಯತ್ನಿಸದೆ ಇರುವುದು ಜಿಲ್ಲೆಯ ರೈತರಿಗೆ ದೊಡ್ಡ ದ್ರೋಹ ಬಗೆದಂತಾಗಿದೆ. ಅಷ್ಟು ಮಾತ್ರವಲ್ಲ, ಆಡಳಿತ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವಾರು ರಾಜ್ಯ ಮುಖಂಡರನ್ನು ತಿಪಟೂರಿಗೆ ಚುನಾವಣಾ ಪ್ರಚಾರಕ್ಕೆ ಕರೆಸಿ ರೈತರ ಸಮಸ್ಯೆ ಆಲಿಸಬೇಕಾಗುತ್ತದೆ ಎಂದು ವಿಜಯ ಸಂಕಲ್ಪ…

Read More

ತುಮಕೂರು ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಭಯಪಡದೆ ಧೈರ್ಯವಾಗಿ ಪರೀಕ್ಷೆ ಎದುರಿಸುವಂತೆ ಮಾಜಿ ಶಿಕ್ಷಣ ಸಚಿವ ಹಾಗೂ ಶಾಸಕ ಎಸ್. ಸುರೇಶ್‍ಕುಮಾರ್ ಹೇಳಿದರು. ಮಾ. 31 ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ನಗರದ ಸಿದ್ದಗಂಗಾ ಮಠದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಸಿದ್ದಗಂಗಾ ಮಠ ಸ್ಫೂರ್ತಿಯ ಕೇಂದ್ರ. ಇಲ್ಲಿರುವ ಮಕ್ಕಳಿಗೆ ನಡೆದಾಡುವ ದೇವರ ಆಶೀರ್ವಾದ ಇದೆ. ಯಾವುದೇ ಕಾರಣಕ್ಕೂ ಪರೀಕ್ಷೆ ಬಗ್ಗೆ ಭಯ ಪಡಬಾರದು. ಧೈರ್ಯದಿಂದ ಪರೀಕ್ಷೆ ಬರೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇನ್ನು 10 ದಿನ ಬಾಕಿ ಇದೆ. ಈ 10 ದಿನ ಮಕ್ಕಳಿಗೆ ಅತ್ಯಮೂಲ್ಯ. ಈ ಸಮಯವನ್ನು ವ್ಯರ್ಥ ಮಾಡದೆ ಕಾಳಜಿಯಿಂದ ಚೆನ್ನಾಗಿ ಓದಬೇಕು. ಪರೀಕ್ಷೆ ಬಗ್ಗೆ ಭಯಪಟ್ಟರೆ ಓದಿರುವುದೂ ಸಹ ಮರೆತು ಹೋಗುತ್ತದೆ ಎಂದರು. ಸಹಜವಾಗಿ ವಿದ್ಯಾರ್ಥಿಗಳಲ್ಲಿ ನಾವು ಓದಿರುವುದು ಪರೀಕ್ಷೆಗೆ ಬರುತ್ತದೋ ಇಲ್ಲವೋ, ಓದಿರುವುದೆಲ್ಲ ಮರೆತು ಹೋಗುತ್ತದೆ ಎಂಬ ಭಯ ಇರುತ್ತದೆ. ನಾನು ಈಗಾಗಲೇ ಸುಮಾರು 36 ಶಾಲೆಗಳಿಗೆ…

Read More

ತುಮಕೂರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್ ಅವರಿಗೆ ಟಿಕೇಟ್ ನೀಡಬೇಕೆಂದು ಡಾ.ರಫೀಕ್ ಅಭಿಮಾನಿ ಬಳಗದ ಮುಖಂಡರು ಕಾಂಗ್ರೆಸ್ ಪಕ್ಷದ ಹೈಕಮಾಂಡ್‍ನನ್ನು ಒತ್ತಾಯಿಸಿದ್ದಾರೆ. ಹೊಸದಾಗಿ ತುಮಕೂರು ನಗರ ವಿಧಾನಸಭಾ ಕ್ಷೇತ್ರ ರಚನೆಯಾದ ನಂತರ 2008ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ರಫೀಕ್ ಅಹಮದ್,ಅತಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು.ಆದರೂ ಕ್ಷೇತ್ರದಲ್ಲಿಯೇ ನಿರಂತರವಾಗಿ ಜನಸಂಪರ್ಕದಲ್ಲಿದ್ದ ಪರಿಣಾಮ 2013ರ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. 2018ರಲ್ಲಿ ಅತಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದಾರೆ. ಹಾಗಾಗಿ 2023ರ ಮೇ ನಲ್ಲಿ ನಡೆಯುವ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸಲು ಡಾ.ರಫೀಕ್ ಅಹಮದ್ ಅವರಿಗೆ ಟಿಕೇಟ್ ನೀಡಬೇಕೆಂಬುದು ನಮ್ಮಗಳ ಆಗ್ರಹವಾಗಿದೆ. ಇಂದು ರಾಷ್ಟ್ರನಾಯಕರು,ರಾಜ್ಯ ನಾಯಕರು ತುಮಕೂರು ನಗರದಲ್ಲಿ ನಡೆದಿರುವ ಅಭಿವೃದ್ದಿ ಕಾಮಗಾರಿಗಳು, ಅದರಲ್ಲಿಯೂ ಸ್ಮಾರ್ಟ್‍ಸಿಟಿ ಯೋಜನೆಯನ್ನು ತಮ್ಮದೆಂದು ಬೀಗುತ್ತಿದ್ದಾರೆ.ಆದರೆ ಸ್ಮಾರ್ಟ್‍ಸಿಟಿ ಯೋಜನೆಯ ಮೂಲ ಕಾರಣಕರ್ತರು ಡಾ.ರಫೀಕ್ ಅಹಮದ್,ಅವರು ಶಾಸಕರಾಗಿದ್ದ ಕಾಲದಲ್ಲಿ ಸರಕಾರದ ನಿಗಧಿ ಪಡಿಸಿದ ಮಾನದಂಡಗಳನ್ನು ಅನುಸರಿಸಿ,ಸರಕಾರಕ್ಕೆ ಮನದಟ್ಟು ಮಾಡಿಕೊಟ್ಟ ಪರಿಣಾಮ…

Read More

ತುಮಕೂರು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನಾಂಕ ಘೋಷಣೆಗೆ ಮುನ್ನವೇ ರಂಗೇರಿದ್ದು, ಭಾರತೀಯ ಜನತಾ ಪಾರ್ಟಿ ಮಾ. 21 ರಂದು 3 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದೆ. ನಾಳೆ ಬೆಳಿಗ್ಗೆಯಿಂದ ಸಂಜೆವರೆಗೂ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಎಸ್. ರವಿಶಂಕರ್ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು.ಇಂದು ಬೆಳಿಗ್ಗೆ 11 ಗಂಟೆಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಯಾತ್ರೆ ಸಂಚರಿಸಲಿದೆ. ನಂತರ ರ್ಯಾಲಿ ಮತ್ತು ಸಾರ್ವಜನಿಕ ಸಭೆ ಸಹ ನಡೆಯಲಿದೆ. ಈ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಆರ್. ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ಮತ್ತಿತರ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದರು. ತುರುವೇಕೆರೆ ಕ್ಷೇತ್ರದಿಂದ ಮಧ್ಯಾಹ್ನ 1 ಗಂಟೆಗೆ ವಿಜಯ ಸಂಕಲ್ಪ ಯಾತ್ರೆಯು ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬೆಳ್ಳಾವಿಗೆ ಆಗಮಿಸಿ ಯಡಿಯೂರಪ್ಪನವರ ನೇತೃತ್ವದಲ್ಲಿ ಈ ಯಾತ್ರೆ…

Read More