ತುಮಕೂರು ಭಾರತದಲ್ಲಿ ಋತುಮಾನದ ಇನ್ಪ್ಲೂಎನ್ಜಾ ಪ್ಲೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್ಪ್ಲೂಎನ್ಜಾ ನಿಯಂತ್ರಣ ಹಾಗೂ ತಡೆಗಟ್ಟುವ ಚಟುವಟಿಕೆಗಳನ್ನು ಹೆಚ್ಚಿಸುವಂತೆ ಹಾಗೂ ಜಿಲ್ಲೆಯ ಸಾರ್ವಜನಿಕರಲ್ಲಿ ಫ್ಲೂ ಕುರಿತ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ತುಮಕೂರು ಡಿಹೆಚ್ಓ ಮತ್ತು ಟಿಹೆಚ್ಓ ಅವರಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ ರಾಜ್ಯಗಳಲ್ಲಿ ಈ ರೋಗವು ಹರಡುತ್ತಿದ್ದು, ಈ ಸಾಂಕ್ರಾಮಿಕ ರೋಗ ಭಾದಿತ ವ್ಯಕ್ತಿಯು ಕೆಮ್ಮುವಾಗ ಅಥವಾ ಸೀನುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ರೋಗ ಹರಡಬಹುದಾಗಿದ್ದು, ಅದರಲ್ಲೂ 15 ವರ್ಷ ಒಳಗಿನ ಹಾಗೂ 65 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ಪ್ಲೂ ಬರುವ ಸಾಧ್ಯತೆ ಹೆಚ್ಚಿದ್ದು, ಕೆಮ್ಮು, ನೆಗಡಿ ಇದ್ದವರು ಮಾಸ್ಕ್ ಧರಿಸುಕೊಂಡು, ಸ್ವಚ್ಚತೆ ಕಾಪಾಡಿಕೊಳ್ಳಬೇಕು, ಮುನ್ನೆಚ್ಚರಿಕೆ ವಹಿಸಬೇಕು, ಆರೋಗ್ಯ ಕಾರ್ಯಕರ್ತೆಯರು ಪ್ಲೂ ಲಸಿಕೆಯನ್ನು ಪಡೆಯುವುದನ್ನು ಕಡ್ಡಾಯ ಮಾಡಬೇಕೆಂದು ತಿಳಿಸಿದರು. ಚುನಾವಣಾ ಸಮೀಪಿಸಿದಂತೆ…
Author: News Desk Benkiyabale
ತುಮಕೂರು: ಡಬಲ್ ಎಂಜಿನ್ ಸರಕಾರ ಮಹಿಳಾ ಸಬಲೀಕರಣ ಮತ್ತು ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಿ,ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ತಾಲೂಕಿನ ಬಳ್ಳಗೆರೆ ಬಳಿ ನಡೆದ ಬಿಜೆಪಿ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಭೇಟಿ ಬಜಾವೋ, ಭೇಟಿ ಪಡಾವೋ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ನಾರಿಶಕ್ತಿಯ ಅಭ್ಯುದಯಕ್ಕೆ ಕಂಕಣ ಬದ್ದರಾಗಿ ನರೇಂದ್ರಮೊದಿ ನೇತೃತ್ವದ ಸರಕಾರ ದುಡಿಯುತ್ತಿದೆ ಎಂದರು. ರಾಜ್ಯದಲ್ಲಿ ಹೆಣ್ಣುಮಕ್ಕಳು ಕಡಿಮೆ ಆಗುತ್ತಿದ್ದಾರೆ ಎನ್ನುವುದನ್ನು ಗಮನಿಸಿ 2008 ರಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದರು.ಹೆಣ್ಣುಮಕ್ಕಳ ಬಗ್ಗೆ ಚಿಂತಿಸುವ ಸರಕಾರ ಎಂದರೆ ಅದು ಬಿಜೆಪಿ ಮಾತ್ರ, ಮೋದಿ ಸರಕಾರ ಉದ್ಯೋಗಸ್ಥ ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ಮಾಡಿದ್ದಾರೆ, ಆರೋಗ್ಯಕ್ಕಾಗಿ ಆಯುμÁ್ಮನ್ ಕಾರ್ಡ್ ಅನ್ನು ಜಾರಿಗೆ ತಂದಿದೆ.ಇಲ್ಲಿರುವ ಶಾಸಕರಿಗೆ ಜನರ ಆರೋಗ್ಯದ ಕಾಳಜಿ ಇದೆಯೋ ಇಲ್ಲವೋ ಗೊತ್ತಿಲ್ಲ, ಸುರೇಶ್ ಗೌಡರು ಶಾಸಕರಾಗಿದ್ದರೆ ಮನೆ ಮನೆಗೆ ಯೋಜನೆ ತಲುಪಿಸುತ್ತಿದ್ದರು,ದೇಶದ ಎಲ್ಲ…
ತುಮಕೂರು ಅಧ್ಯಯನಗಳ ಮೂಲಕ ಅನೇಕ ಬಿಕ್ಕಟ್ಟುಗಳು ಮತ್ತು ಸಾಮಾಜಿಕ ತೊಂದರೆಗಳನ್ನು ಸವಾಲಿನಂತೆ ಎದುರಿಸಿ ದೂರಮಾಡಬೇಕು ಎಂದು ವಿಮರ್ಶಕ ಪ್ರೊ. ಕೇಶವಶರ್ಮ ಕೆ. ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಕನ್ನಡ ವಿಭಾಗ, ಮಹಿಳಾ ಸಬಲೀಕರಣ ಘಟಕ ಹಾಗೂ ಸಾಂಸ್ಕøತಿಕ ಚಟುವಟಿಕೆಗಳ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ‘ಸಮಕಾಲೀನ ಮಹಿಳೆ: ಸವಾಲು ಮತ್ತು ಸಾಧ್ಯತೆಗಳು’ ವಿಷಯದ ಕುರಿತು ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನಿಂದಲೂ ನಮ್ಮ ಮನಸ್ಸು ಮತ್ತು ಪ್ರಜ್ಞೆಯನ್ನು ನಿಯಂತ್ರಿಸಲಾಗಿದೆ. ಚರಿತ್ರೆಯ ಉದ್ದಗಲಕ್ಕೂ ಹೆಣ್ಣು ಗಂಡು ಎಂಬ ಮನೋಭಾವವನ್ನು ಒಂದು ಅಚ್ಚಿನ ಎರಕದಲ್ಲಿ ಹೊಯ್ದು ಇಡಲಾಗಿದೆ. ಲಿಂಗತಾರತಮ್ಯ ನಮ್ಮನ್ನು ಆವರಿಸಿಕೊಂಡಿದೆ. ನಮಗೆ ಸಾಮಾನ್ಯ ಜ್ಞಾನದ ಅವಶ್ಯಕತೆ ಇದೆ ಎಂದರು. ಪ್ರತಿ ಗಂಡು ಮತ್ತು ಹೆಣ್ಣಿನ ಸಂಬಂಧದ ನಡುವೆ ಮೌನ ಪ್ರಭಲವಾಗಿ ಆವರಿಸದೆ. ಅನೇಕ ಸಾಮಾಜಿಕ ಸವಾಲುಗಳನ್ನು ಸಕಾರಾತ್ಮಕ ಮನೋಭಾವನೆಯಿಂದ ಚರ್ಚಿಸಿ ದೂರಮಾಡಬೇಕಾಗಿದೆ ಎಂದು ಹೇಳಿದರು. ತುಮಕೂರು ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ಮಾತನಾಡಿ, ಇಂದಿನ…
ತುಮಕೂರು ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಠಿ ಕದಿಯುವ ಗ್ಲಾಕೋಮಾ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ.ಎಂ. ಶ್ರೀದೇವಿ ಚಂದ್ರಿಕಾ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆಡಿಟೋರಿಯಂನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ “ವಿಶ್ವ ಗ್ಲಾಕೋಮಾ ಸಪ್ತಾಹ ದಿನಾಚರಣೆ” ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದ ಅವರು, ಪ್ರಸಕ್ತ ಸಾಲಿನ “ಅದೃಶ್ಯ ಗ್ಲಾಕೋಮಾವನ್ನು ಸೋಲಿಸೋಣ” ಘೋಷವಾಕ್ಯದ ಉದ್ದೇಶಗಳನ್ನು ಕುರಿತು ವಿವರಿಸಿದರಲ್ಲದೆ ತಲೆನೋವು ಹಾಗೂ ಕಣ್ಣಿನಲ್ಲಿ ನೋವು ಇದ್ದರೆ ಕೂಡಲೇ ವೈದ್ಯರಿಂದ ಪರೀಕ್ಷಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ ವೀಣಾ ಮಾತನಾಡಿದರು. ಹಿರಿಯ ನೇತ್ರತಜ್ಞ ಡಾ. ಕೆ.ಆರ್ ಮಂಜುನಾಥ್ ಕಣ್ಣಿನ ಖಾಯಿಲೆಗಳನ್ನು ತಡೆಗಟ್ಟುವ ವಿಧಾನ, ನೇತ್ರದಾನದ ಪ್ರಕ್ರಿಯೆ ಕುರಿತು ಉಪನ್ಯಾಸ ನೀಡಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಕಚೇರಿಯ ಸಿಬ್ಬಂದಿಗಳಾದ ವಿರೂಪಾಕ್ಷಪ್ಪ, ನಾಗರಾಜು, ಜ್ಯೋತಿ, ಗೀತಾ, ಸ್ಪೂರ್ತಿ,…
ಚಿಕ್ಕನಾಯಕನಹಳ್ಳಿ ಸ್ಥಳೀಯ ರೈತರ ಬೆಳೆದ ಬೆಳೆಗೆ ಸ್ಥಿರ ಬೆಲೆ ಸಿಗುವಂತೆ ಮಾಡುವಲ್ಲಿ ಜೆಡಿಎಸ್ ಪಕ್ಷ ಎಲ್ಲಾ ರೈತರಹಿತ ಕಾಯುತ್ತದೆ ರಾಜ್ಯದ ಮತದಾರರು ಕೂಡ ಜೆಡಿಎಸ್ ಪಕ್ಷದ ಮೇಲೆ ನಂಬಿಕೆ ಇಟ್ಟು ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲು ಅವಕಾಶ ಕಲ್ಪಿಸಿಕೊಡಿ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಅವರು ತಾಲೂಕಿನ ಹಂದನಕೆರೆ ಹೋಬಳಿ ನಿರುವಗಲ್ಲು ದುರ್ಗಮ್ಮನ ಬೆಟ್ಟದ ತಪ್ಪಲಿನಲ್ಲಿ ಭಗೀರಥ ಸಮಾಜದ ಸಮಾವೇಶ ಹಾಗೂ ಯುವ ಜನತಾಳದಳದ ಸಮಾವೇಶವನ್ನು ಉದ್ಘಾಟಿಸಿ ನಟ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡುತ್ತಾ ರಾಜ್ಯದಲ್ಲಿ ಸ್ಥಳೀಯ ಪ್ರದೇಶಕ್ಕೆ ಅನುಗುಣವಾಗಿ ನಾನಾ ಸಮಸ್ಯೆಗಳು ಜ್ವಲಂತ ಸಮಸ್ಯೆಗಳಾಗಿ ಉಳಿದಿವೆ ಅವುಗಳ ಮೂಲಭೂತ ಸೌಕರ್ಯಗಳನ್ನು ಅನುಷ್ಠಾನಗೊಳಿಸಲು ಶೈಕ್ಷಣಿಕವಾಗಿ ಆರ್ಥಿಕವಾಗಿ ಎಲ್ಲಾ ಸಮುದಾಯಗಳಿಗೆ ನ್ಯಾಯಯುತ ಯೋಜನೆ ತರಬೇಕೆಂದೇ ಎಚ್ ಡಿ ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆಯನ್ನು ಅನುಷ್ಠಾನಗೊಳಿಸುವುದು ನನ್ನ ಕರ್ತವ್ಯ ಎಂದು ಏಕಾಂಗಿಯಾಗಿ ರಾಜ್ಯದ ತುಂಬೆಲ್ಲ ಓಡಾಡುತ್ತಿದ್ದಾರೆ. ಮೊನ್ನೆ ನಡೆದ ಎರಡೂವರೆ…
ತುಮಕೂರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಸಂಬಂಧ ಬಿಜೆಪಿಯು ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆಯನ್ನು ನಡೆಸುತ್ತಿದ್ದು, ಚುನಾವಣೆಯಲ್ಲಿ ಜನಾಶೀರ್ವಾದ ಪಡೆಯಲು ಇದೇ ಮಾರ್ಚ್ 18ರ ಶನಿವಾರ ತಿಪಟೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಗಳು ನಡೆಯಲಿದೆ. ಈ ಸಂಬಂಧ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರುಗಳ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆಯು ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಗುಬ್ಬಿಯ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರುಗಳ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆಯು ಮುಂದುವರೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದರು. ಇವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮತನಾಡುತ್ತಾ, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಅಭಿವೃದ್ಧಿಯ ಮಂತ್ರ ಹಾಗೂ ಕೇಂದ್ರ ಮತ್ತು ರಾಜ್ಯ ಡಬ್ಬಲ್ ಇಂಜಿನ್ ಸರ್ಕಾರಗಳ ಸಾಧನೆ-ಯೋಜನೆ-ಕಾರ್ಯಕ್ರಮಗಳನ್ನು ವಿಜಯ ಸಂಕಲ್ಪ ಯಾತ್ರೆಯಲ್ಲಿ ತಿಳಿಸಲಾಗುವುದು ಎಂದರು. ತಿಪಟೂರು, ಚಿಕ್ಕನಾಯಕನಹಳ್ಳಿ ಕಾರ್ಯಕ್ರಮ ತಿಪಟೂರು ವಿಧಾನಸಭಾ ಕ್ಷೇತ್ರಕ್ಕೆ ಬೆಳಿಗ್ಗೆ 10.30ಕ್ಕೆ ತಿಪಟೂರು…
ತುಮಕೂರು ಮಹಾನಗರಪಾಲಿಕೆಯಿಂದ ನಗರದ ಜನಸಾಮಾನ್ಯರಿಗೆ ಯಾವುದೇ ತೆರಿಗೆ ಹೆಚ್ಚಳವಿಲ್ಲದೆ 227.53 ಕೋಟಿ ಮೊತ್ತದ ಬಜೆಟ್ ಅನ್ನು ಮಂಗಳವಾರ ಮಂಡಿಸಲಾಯಿತು. ಮುಂಗಡಪತ್ರದಲ್ಲಿ 227 ಕೋಟಿ 73 ಲಕ್ಷ 30 ಸಾವಿರ ಆದಾಯ ಸಂಗ್ರಹ ನಿರೀಕ್ಷೆ ಹೊಂದಲಾಗಿದ್ದು, 223 ಕೋಟಿ 15ಲಕ್ಷ 60 ಸಾವಿರ ವೆಚ್ಚದ ನಿರೀಕ್ಷೆಯೊಂದಿಗೆ 4 ಕೋಟಿ 57 ಲಕ್ಷ 70 ಸಾವಿರ ಉಳಿತಾಯ ನಿರೀಕ್ಷೆಯನ್ನು ತೋರಿಸಲಾಗಿದೆ. ಹಣಕಾಸು ತೆರಿಗೆ ನಿರ್ಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷೆ ನೂರುನ್ನೀಸಾ ಬಾನು ಮಂಡನೆ ಮಾಡಿದ ಬಜೆಟ್ ಅನ್ನು ಅವರಿಗೆ ಅನಾರೋಗ್ಯದ ಕಾರಣ ಸಭೆಯ ಅಧ್ಯಕ್ಷತೆ ವಹಿಸಿದ್ದ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್ ವಿಸ್ತೃತವಾಗಿ ಓದಿದರು. ಪ್ರಮುಖ ಆದಾಯ ಅಂಶಗಳು : ಬಜೆಟ್ನಲ್ಲಿ ಪಾಲಿಕೆಯ ಸ್ವಂತ ಆದಾಯ ಮೂಲದಿಂದ 78.63 ಕೋಟಿ ಆದಾಯ ನಿರೀಕ್ಷಿಸಲಾಗಿದ್ದು, ಸರ್ಕಾರದಿಂದ 125.46 ಲಕ್ಷ ವಿವಿಧ ಯೋಜನಾ ಅನುದಾನ ನಿರೀಕ್ಷಿಸಲಾಗಿದೆ. ಆಸ್ತಿ ತೆರಿಗೆಯಲ್ಲಿ 45 ಕೋಟಿ, ತೆರಿಗೆ ದಂಡ 3 ಕೋಟಿ, ಘನ ತ್ಯಾಜ್ಯ ಉಪಕರದಿಂದ 2 ಕೋಟಿ, ನೀರಿನ ಕಂದಾಯ…
ಗುಬ್ಬಿ ಶಾಸಕ ಶ್ರೀನಿವಾಸ್ ಎಲ್ಲ ಸಮುದಾಯಗಳ ನಾಯಕನಾಗಿದ್ದು ಅವರು ಎಲ್ಲಿಗೆ ಯಾವ ಪಕ್ಷಕ್ಕೆ ತೆರಳಿದರು ನಾವೆಲ್ಲರೂ ಜೊತೆಯಾಗಿ ನಿಲ್ಲುತ್ತೇವೆ ಎಂದು ಮುಖಂಡ ಹೊಸಕೆರೆ ಬಾಬು ತಿಳಿಸಿದರು. ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ಪರ್ವ ದಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿ ಮಾತನಾಡಿದ ಅವರು 20 ವರ್ಷಗಳ ಅವಧಿಯಲ್ಲಿ ನಮ್ಮ ಭಾಗಕ್ಕೆ ಎಲ್ಲ ರೀತಿಯ ಸಹಕಾರವನ್ನು ನೀಡಿದ್ದಾರೆ ಮುಂದೆ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತೋಷ ತಂದಿದ್ದು ಇಡೀ ತಾಲೂಕಿನ ಜನರ ಆಶೀರ್ವಾದ ಅವರ ಮೇಲಿದೆ ಎಂದು ತಿಳಿಸಿದರು.ಮುಖಂಡರಾಜು ಮಾತನಾಡಿ ಜಿಲ್ಲೆಯ ನಾಲ್ಕರಿಂದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕ ಶ್ರೀನಿವಾಸ್ ಅವರ ಶಕ್ತಿ ಏನೆಂಬುದು ಗೊತ್ತಿದೆ ಇಂದು ಜೆಡಿಎಸ್ ಪಕ್ಷ ಅವರನ್ನು ಕಳೆದುಕೊಳ್ಳುವ ಮೂಲಕ ಅನಾಥವಾಗಿದೆ ಎಂಬುದನ್ನು ಅವರೇ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು ಮುಖಂಡ ವೆಂಕಟೇಶ್ ಮಾತನಾಡಿ ಬಿಜೆಪಿ ಸರ್ಕಾರ ಜನಸಾಮಾನ್ಯರನ್ನು ಸಂಪೂರ್ಣವಾಗಿ ಹಾಳು ಮಾಡಿದೆ ಸರಕಾರ ಬಂದಾಗ ನಿಂದ ಇಲ್ಲಿಯವರೆಗೂ ಯಾರು ಸಹ ನೆಮ್ಮದಿಯಿಂದ ಜೀವನ ಮಾಡಲು…
ತಿಪಟೂರು ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಗಂಗಾಧರ್ ಕರಿಕೆರೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ನಗರದ ಗೊರಗೊಂಡನಹಳ್ಳಿ ಯಲ್ಲಿರುವ ಪಕ್ಷದ ಕಚೇರಿಯಲ್ಲಿ ತಿಪಟೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗಂಗಾಧರ್ಕÀರೀಕೆರೆ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರಣಾಳಿಕೆಯನ್ನು ತಿಳಿಸಿದರು. ಇದೇ ವೇಳೆ ಮಾತನಾಡಿದ ಅವರು ಕಳೆದ ಮೂರೂವರೆ ದಶಕಗಳಿಂದ ಆಳ್ವಿಕೆ ಮಾಡುತ್ತಿರುವ ಜೆ ಸಿ ಬಿ ಪಕ್ಷಗಳು ಕರ್ನಾಟಕ ರಾಜ್ಯವನ್ನು ಭ್ರμÁ್ಟಚಾರದಲ್ಲಿ ನಂಬರ್ ಒನ್ ಮಾಡಿದ್ದಾರೆ. ಚುನಾವಣೆಗಳಲ್ಲಿ ಭ್ರμÁ್ಟಚಾರದಲ್ಲಿ ತೊಡಗಿ ಆಳು ಗೆಡವಿದ್ದಾರೆ 1974 ರಲ್ಲಿ ಭ್ರμÁ್ಟಚಾರ ಸಣ್ಣ ಸಸಿಯಾಗಿತ್ತು ಇಂದು ಹೆಮ್ಮರವಾಗಿ ಬೆಳೆದಿದೆ. ತಿಪಟೂರು ಅದರಿಂದ ಹೊರತಾಗಿಲ್ಲ ಯಾವುದೇ ಸರ್ಕಾರ ಯೋಜನೆಗಳು ಎಲ್ಲಾ ಕಚೇರಿಗಳು ಒಂದಲ್ಲ ಒಂದು ರೀತಿ ಭ್ರμÁ್ಟಚಾರದಿಂದ ತಾಂಡವ ಆಡುತ್ತಿದೆ ಹಾಗಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಕೃμÁ್ಣರೆಡ್ಡಿ ನೇತೃತ್ವದಲ್ಲಿ ಪರ್ಯಾಯ ರಾಜಕಾರಣ ಮಾಡುತ್ತಿದೆ ಸಾತ್ವಿಕ ರೀತಿಯಲ್ಲಿ ಚುನಾವಣೆ ನಡೆಸಲು ಯಾವುದೇ ಅಮಿಷ ವಡ್ಡದೆ ಚುನಾವಣೆ ನಡೆಸಬೇಕೆಂದು ಕರ್ನಾಟಕದ…
ಚಿಕ್ಕನಾಯಕನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಈಗಾಗಲೇ ಉದ್ಘಾಟನೆಗೊಂಡಿರುವ ಕೆಲವು ಕಾಮಗಾರಿಗಳು ಹಾಗೂ ನೂತನವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳಿಗೆ ಪೂರ್ಣಗೊಳ್ಳದೆ ಉದ್ಘಾಟನೆಗೆ ಸನ್ಮಾನ್ಯ ಮುಖ್ಯಮಂತ್ರಿ ಅವರು ಹಾಗೂ ಆಗಮಿಸುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ತಾಲೂಕಿನ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಸಾಸಲುನಲ್ಲಿ ನಿರ್ಮಾಣಗೊಂಡು ಉದ್ಘಾಟನೆ ಕೂಡ ಆಗಿರುವ ಕಟ್ಟಡ ಕಳೆದ ಬಾರಿ ಮಳೆಯ ಒತ್ತಡಕ್ಕೆ ತತ್ತರಿಸಿ ಶಿಥಿಲವಾಗಿದ್ದರೂ ಅಂತಹ ಕಟ್ಟಡವನ್ನು ಮತ್ತೆ ಮುಖ್ಯಮಂತ್ರಿ ಉದ್ಘಾಟನೆಗೆ ಕಾಮಗಾರಿಗಳ ಪಟ್ಟಿಯಲ್ಲಿ ಸೇರಿರುವುದು ಅಪಹಾಸ್ಯಕ್ಕೆ ದಾರಿ ಮಾಡಿಕೊಟ್ಟಿದೆ ಅಲ್ಲದೆ ಸುಮಾರು 15 ಕೋಟಿ ವೆಚ್ಚದ ನಿರ್ಮಾಣಗೊಳ್ಳುತ್ತಿರುವ ಆಡಳಿತ ಸೌಧ ಪೂರ್ಣ ಪ್ರಮಾಣದಲ್ಲಿ ಕಟ್ಟಡ ಕಾಮಗಾರಿ ಮುಗಿಯದೆ ಏಕಾ ಏಕೆ ಉದ್ಘಾಟನೆಗೆ ಮುಂದಾಗಿರುವುದು ಕೂಡ ಸಾರ್ವಜನಿಕ ಸ್ಥಳಗಳಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಕಾರಣ ಆಡಳಿತ ಸೌಧ ಇನ್ನೂ ಆರು ತಿಂಗಳಾದರೂ ಕಟ್ಟಡ ಪೂರ್ಣಗೊಳ್ಳಲು ಅವಧಿ ಬೇಕಾಗುತ್ತದೆ ಹೀಗಿರುವಾಗ ಚುನಾವಣೆ ಸಮೀಪಿಸುತ್ತಿದ್ದು ನೀತಿ ಸಂಹಿತೆ ಜರೂರು ಬರುವ ಕಾರಣದಿಂದ ಉದ್ಘಾಟನೆ ಮಾಡಲಾಗದು ಎಂಬ ಕಾರಣಕ್ಕಾಗಿ ಸಚಿವರ ನಾಮಫಲಕ ಬೀಳಬೇಕು ಎಂಬ ಕಾರಣಕ್ಕಾಗಿಯೇ ತುರ್ತಾಗಿ…











