Author: News Desk Benkiyabale

ತುಮಕೂರು ಮುಂಬರುವ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ಕರಪತ್ರ, ಪೋಸ್ಟರ್ ಇತ್ಯಾದಿಗಳನ್ನು ಮುದ್ರಿಸುವಾಗ ಕಡ್ಡಾಯವಾಗಿ ಪ್ರಕಾಶಕರ ಹೆಸರು, ವಿಳಾಸವನ್ನು ಮುದ್ರಿಸತಕ್ಕದ್ದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧವಾಗಿ ಇಂದು ನಡೆದ ಜಿಲ್ಲೆಯ ಪ್ರಿಂಟರ್ಸ್ ಮತ್ತು ಕೇಬಲ್ ಅಪರೇಟರ್ ಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 1951 ಸೆಕ್ಷನ್ 127ಎ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣವೇ ಈ ಮೇಲಿನಂತೆ  ಕ್ರಮ ವಹಿಸತಕ್ಕದು ಎಂದು ತಿಳಿಸಿದರು. ಅಲ್ಲದೆ, ಕರಪತ್ರ, ಪೋಸ್ಟರ್‍ಗಳ ಮೇಲೆ ಕಡ್ಡಾಯವಾಗಿ ಪ್ರತಿಗಳ ಸಂಖ್ಯೆ ಮುದ್ರಿಸ ತಕ್ಕದ್ದು. ಒಮ್ಮೆ ಮುದ್ರಿಸಿದ ಪ್ರತಿಗಳನ್ನು ಜೆರಾಕ್ಸ್ ಮಾಡಲು ಅನುಮತಿ ಇರುವುದಿಲ್ಲ. ಈ ರೀತಿ ಪ್ರಕರಣಗಳು ಕಂಡುಬಂದಲ್ಲಿ ಚುನಾವನಾಧಿಕಾರಿಗಳಿಗೆ  ದೂರು ಸಲ್ಲಿಸತಕ್ಕದ್ದು ಎಂದು ಸೂಚಿಸಿದರು.  ಅಂತೆಯೇ ಜಿಲ್ಲೆಯಲ್ಲಿರುವ ಕೇಬಲ್ ಅಪರೇಟರ್‍ಗಳು ಕಡ್ಡಾಯವಾಗಿ ಜಿಲ್ಲಾ ಹಾಗು ತಾಲ್ಲೂಕು ಮಟ್ಟದ ಎಂ.ಸಿ.ಎಂ.ಸಿ ಸಮಿತಿಗೆ ತಮ್ಮ ಕೇಬಲ್ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು, ತಮ್ಮ ಕೇಬಲ್‍ಗಳ…

Read More

ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಶ್ರೀ ಗಂಗಾಕ್ಷೇತ್ರದಲ್ಲಿ ಇನ್ನೂರಕ್ಕೂ ಹೆಚ್ಚು ಜನ ರೈತರು ಸಭೆ ಸೇರಿ ಈ ಭಾಗಕ್ಕೆ ಎಂವಿಎಸ್‍ಎಸ್ ಮಾಡಿಕೊಡಲೇಬೇಕು ಎಂದು ಆಗ್ರಹಿಸಿ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ರೈತ ತಾತಯ್ಯ ಇಈ ಭಾಗದ ನಂದಿಹಳ್ಳಿ, ದೊಣ್ಣೆರೆ, ಡಿ.ರಾಂಪುರ, ಅತ್ತಿಕಟ್ಟೆ, ಬಿ ಕೋಡಿಹಳ್ಳಿ, ಬೆಣ್ಣೂರು, ಗಂಗಸಂದ್ರ, ಸೇರಿದಂತೆ ಸುಮಾರು 20 ಗ್ರಾಮಗಳ ರೈತರಿಗೆ ಅನುಕೂಲ ವಾಗುವಂತಹ ಕೆಇಬಿ ಸ್ಟೇಷನ್ ಮಂಜೂರಾಗಿದೆ ಇಲಾಖೆಯವರು ಸಹ ಕೆಲಸವನ್ನು ಪ್ರಾರಂಭಿಸಲು ಸಿದ್ಧತೆಯನ್ನು ಮಾಡಿದ್ದಾರೆ ಆದರೆ ಸ್ಥಳೀಯ ರೈತರೊಬ್ಬರೂ ನಿಗದಿ ಮಾಡಿರುವ ಜಾಗ ನಮ್ಮದು ಎಂದು ಉಚ್ಚ ನ್ಯಾಯಾಲಯಕ್ಕೆ ಹೋಗಿರುವ ಕಾರಣದಿಂದಾಗಿ ಹಲವು ªಷರ್Àಗಳಿಂದ ನೆನಗುದಿಗೆ ಬಿದ್ದಿದೆ ಹಾಗಾಗಿ ಈ ಭಾಗದ ರೈತರೆಲ್ಲರು ಸೇರಿಕೊಂಡು ಕೂಡಲೇ ನ್ಯಾಯಾಲಯದಲ್ಲಿರುವಂತಹ ಪ್ರಕರಣವನ್ನು ತೆರವು ಗೊಳಿಸಿ ನಮಗೆ ಇಲ್ಲಿಗೆ ಸ್ಟೇಷÀನ್ ಮಾಡಿ ಕೊಡಬೇಕು ಹಾಗಾಗಿ ಸರ್ಕಾರ ಈ ವಿಚಾರದಲ್ಲಿ ಸಹಕಾರ ಮಾಡಿ ಕೊಡಬೇಕು ಎಂದು ಅಗ್ರಹ ಮಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಮುರುಳಿಧರ್ ಹಾಲಪ್ಪ ಮಾತನಾಡಿ ಕೆಪಿಟಿಸಿಎಲ್ ನಿಂದ 10…

Read More

ಚಿಕ್ಕನಾಯಕನಹಳ್ಳಿ ಆಶ್ರಯ ಯೋಜನೆ ಮತ್ತು ನಗರ ಹಂತ ನಾಲ್ಕರ ಕಾಮಗಾರಿಗಳ ಗುದ್ದಲಿ ಪೂಜೆಗೆ ಬಂದ ಸಚಿವರಿಗೆ ಜನರು ಇಲ್ಲದೆ ನಿರಾಶರಾಗಿ ಕೆಲವು ಕಾಮಗಾರಿಗಳನ್ನು ಉದ್ಘಾಟನೆ ಮಾಡದೆ ಹೋದ ಘಟನೆ ಚಿಕ್ಕನಾಯಕನಹಳ್ಳಿಯ ಪುರಸಭಾ ವ್ಯಾಪ್ತಿಯಲ್ಲಿ ನಡೆದಿದೆ ಕಾನೂನು ಸಂಸದೀಯ ಮತ್ತು ಸಣ್ಣ ನೀರಾವರಿ ಸಚಿವ ಜೆಸಿ ಮಾಧುಸ್ವಾಮಿಯವರು ಪಟ್ಟಣದಲ್ಲಿ ಅಮೃತ ನಗರ ಯೋಜನೆ ಒಳಚರಂಡಿ ಕಾಮಗಾರಿ ಆಶ್ರಯ ಯೋಜನೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಪುರಸಭಾ ಕಟ್ಟಡದ ಮೇಲಿನ ಮೀಟಿಂಗ್ ಹಾಲನ್ನು ಉದ್ಘಾಟಿಸಿ ಪುರಸಭಾ ಕಚೇರಿಯ ಆವರಣದಲ್ಲಿ ಆಶ್ರಯ ಹಕ್ಕುಪತ್ರ ನೀಡಲು ಆಯೋಜಿಸಿದ್ದ ಕಾರ್ಯಕ್ರಮ ನಿರೀಕ್ಷಿತ ಜನರು ಆಗಮಿಸದೆ ಇದ್ದ ಕಾರಣ ಕೆಲವೇ ಕೆಲವು ಕಾಮಗಾರಿಗಳನ್ನು ಉದ್ಘಾಟಿಸಿ ಬೇರೆ ಕಾರ್ಯಕ್ರಮ ಇದೆ ಎಂದು ಹೋದ ಘಟನೆ ಪಟ್ಟಣದಲ್ಲಿ ನಡೆಯಿತು ಕಾನೂನು ಸಂಸದೀಯ ಸಚಿವರಿಂದ ಉದ್ಘಾಟನೆಗೆ ಸಿದ್ಧಗೊಂಡಿದ್ದ ಪುರಸಭಾ ಸದಸ್ಯರ ಸಭಾ ನಿಲಯ ಮೀಟಿಂಗಲ್ ಸಚಿವರು ಇತರ ಉದ್ಘಾಟನೆಗೆ ಬಾರದೆ ಹೋದ ಪ್ರಸಂಗ ನಡೆಯಿತು ಪಟ್ಟಣದ ಪುರಸಭಾ ಆವರಣದಲ್ಲಿ ಆಶ್ರಯ ನಿವೇಶನದ ಹಕ್ಕು ಪತ್ರ…

Read More

ತುಮಕೂರು ಮುಂಬರುವ ವಿಧಾನಸಭಾ ಚುನಾವಣೆ-2023 ಹಿನ್ನೆಲೆಯಲ್ಲಿ ತಮ್ಮ ಕಾರ್ಯವ್ಯಾಪ್ತಿಯ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳ ಸಂಪೂರ್ಣ ಮಾಹಿತಿ ಅಧಿಕಾರಿಗಳಿಗೆ ಇರಬೇಕು ಎಂದು ಆರ್.ಓ ಮತ್ತು ಎ.ಆರ್.ಓ.ಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಇಂದು ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಯಾ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳನ್ನು ಬೇಗ ತಲುಪುವ ರೀತಿಯಲ್ಲಿ ಸೆಕ್ಟರ್ ಮ್ಯಾಪ್ ಮತ್ತು ರೂಟ್ ಮ್ಯಾಪ್‍ಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕು, ತಮ್ಮ ಹಂತದಲ್ಲಿ ಸ್ಟ್ರಾಂಗ್ ಟೀಮ್ ರಚಿಸಬೇಕು, ಚುನಾವಣೆಯ ದಿನ ಬೇಕಾಗುವ ವಾಹನಗಳ ಪಟ್ಟಿಯನ್ನು ಸಲ್ಲಿಸಬೇಕು, ಸೆಕ್ಟರ್‍ವೈಸ್ ಪ್ರಕಾರ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ವ್ಯವಸ್ಥೆ ರೂಪಿಸಬೇಕು ಎಂದು ಸೂಚಿಸಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಮತದಾರರಿಗೆ ಉಡು ಗೊರೆಗಳನ್ನು ನೀಡಿ ಆಮಿಷೊಡ್ಡುವುದಕ್ಕೆ ಅವಕಾಶವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಉಡುಗೊರೆಗಳನ್ನು ಅನಧಿಕೃತವಾಗಿ ಅಥ ವಾ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿರುವ ಪ್ರಕರಣಗಳು ಕಂಡುಬಂದಲ್ಲಿ ಆರ್.ಓ ಮತ್ತು ಎ.ಆರ್.ಓಗಳು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ವಿಧಾನಸಭಾ ಕ್ಷೇತ್ರವಾರು,…

Read More

ತುಮಕೂರು ದೇಶವನ್ನು ಹಿಂದೂ, ಮುಸ್ಲಿಂ ಎಂದು ವಿಭಾಗ ಮಾಡಿದ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಹಾಗು ಪ್ರಜಾಧÀ್ವನಿ ಕಾರ್ಯಕ್ರಮ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪರಿಶಿಷ್ಟ ಜಾತಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಎಸ್ಸಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು,ಸುರೇಶ್ ಗೌಡ ಎರಡು ಬಾರಿ ಶಾಸಕರಾಗಿ ಜನರಿಗೆ ಸ್ಪಂದಿಸಿ ದೀನ ದಲಿತರ ಪರ ಕೆಲಸ ಮಾಡುತ್ತಿದ್ದಾರೆ. ಬೇರೆ ಪಕ್ಷದವರು ಈಗ ಪಂಚತಂತ್ರ ಯಾತ್ರೆ ಹೆಸರಿನಲ್ಲಿ ಜನರನ್ನು ಮರುಳು ಮಾಡಲು ಹೊರಟಿದ್ದಾರೆ. ಆದರೆ ದೇಶದ ಜನರಿಗೆ ಗೊತ್ತಿದೆ. ಹಾಗಾಗಿ ಜನರ ನಾಡಿಮಿಡಿತ ಅರಿತು ಕೆಲಸ ಮಾಡುತ್ತಿರುವ ಬಿಜೆಪಿ ಯನ್ನು ರಾಜ್ಯದಲ್ಲಿ ಜನರು ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ 09 ವರ್ಷಗಳಲ್ಲಿ ಅತ್ಯಂತ ನಿಕೃಷ್ಟಕ್ಕೆ ಒಳಗಾದ ಸಮುದಾಯಗಳಲ್ಲಿರುವ ಸಾಧಕರನ್ನು ಗುರುತಿಸಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸುವ ಕೆಲಸ ಮಾಡಿದೆ. ಜಿಲ್ಲೆಯ ಡಾ.ಸೂಲಗಿತ್ತಿ…

Read More

ತುಮಕೂರು ಅನಾದಿಕಾಲದಿಂದಲೂ ಶ್ರೇಷ್ಠ ಜಂಗಮರೆ ಜೈನ ಮುನಿಗಳಾಗಿದ್ದಾರೆ ಎಂದು ಚಿಕ್ಕತೊಟ್ಲುಕೆರೆಯ ಆಟವೀ ಜಂಗಮ ಸುಕ್ಷೇತ್ರದ ಶ್ರೀ ಆಟವೀ ಶಿವಲಿಂಗ ಮಹಾಸ್ವಾಮೀಜಿ ಹೇಳಿದರು. ಮಂದಾರಗಿರಿ (ಬಸ್ತಿಬೆಟ್ಟ)ಯಲ್ಲಿ ನಡೆಯುತ್ತಿರುವ ಶ್ರೀ ದಿವ್ಯಾಕಾಶ ಸಮವಸರಣ ಪಂಚ ಕಲ್ಯಾಣ ಪ್ರತಿಷ್ಠಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಿಗಂಬರ ಜೈನ ಮುನಿಗಳು ಎಲ್ಲೆಲ್ಲಿ ಕುಳಿತು ಧರ್ಮೋ ಪದೇಶ ಮಾಡುತ್ತಾರೆಯೋ ಅದೇ ಮಠ ವಾಗಿ ಪರಿವರ್ತನೆಗೊಳ್ಳುತ್ತದೆ. ಅವರು ಎಲ್ಲೆಲ್ಲಿ ಪಾದಸ್ಪರ್ಶ ಮಾಡುತ್ತಾರೆಯೋ ಅದೇ ಒಂದು ಪುಣ್ಯಕ್ಷೇತ್ರವಾಗಿ ರೂಪಾಂತರಗೊಳ್ಳುತ್ತದೆ ಎಂದು ವಿಶ್ಲೇಷಣೆ ಮಾಡಿದರು. ನಾವು ಯಾರೂ ಕೈಲಾಸವನ್ನೂ ಇದುವರೆಗೂ ನೋಡಿಲ್ಲ ಆದ್ರೆ ಇಂದು ಮಂದಾರಗಿರಿಯಲ್ಲಿ ನೋಡಬಹುದಾಗಿದೆ. ಪರ್ವತದ ಮೇಲೆ ಇರುವ ಮಹಾವೀರ ತೀರ್ಥಂಕರ ದಿವ್ಯಾಕಾಶ ಸಮವಸರಣದಲ್ಲಿ ಕಾಣಬಹುದಾಗಿದೆ. ಸಮವಸರಣದಲ್ಲಿ ಸರಸ್ವತಿ ಹಾಗೂ ಲಕ್ಷ್ಮಿ ಪೂಜೆಯನ್ನು ಸಹ ನೋಡಬಹುದಾಗಿದೆ ಎಂದು ಹೇಳಿದರು. ಭೂಮಿಯ ಮೇಲೆ ಸಲ್ಲುವವರು ಭೂಲೋಕದಿಂದ ಹೊರಗೆ ಹೋದವರು ಅಲ್ಲಿಯೂ ಕೂಡ ಸಲ್ಲುವವರು ಎಂದು ಹೇಳಿದರು. ಮಂದಾರ ಗಿರಿಯು ನಿಸರ್ಗದ ಕೈಲಾಸದಂತೆ ಭಾಸವಾಗುತ್ತದೆ. ಈ ದೇಹವು ಆತ್ಮದ ದೇವಾಲಯವಾಗಿದೆ. ಅದನ್ನು ಶ್ರದ್ದಾ…

Read More

ತುಮಕೂರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ನಮ್ಮ ಕ್ಲಿನಿಕ್‍ನ್ನು ನಗರದ ಜಯಪುರ ಹಾಗೂ ದಿಬ್ಬೂರಿನಲ್ಲಿಂದು ಶಾಸಕ ಜ್ಯೋತಿಗಣೇಶ್ ಉದ್ಘಾಟಿಸಿದರು. ಜಯಪುರ ಮತ್ತು ದಿಬ್ಬೂರಿನಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದ ನಂತರ ಮಾತನಾಡಿದ ಶಾಸಕ ಜ್ಯೋತಿಗಣೇಶ್ ಅವರು, ರಾಜ್ಯ ಸರ್ಕಾರ ಸಾಮಾನ್ಯ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ನಮ್ಮ ಕ್ಲಿನಿಕ್‍ಗಳನ್ನು ಘೋಷಣೆ ಮಾಡಿದ್ದು, ರಾಜ್ಯಾದ್ಯಂತ 400ಕ್ಕೂ ಹೆಚ್ಚಿನ ನಮ್ಮ ಕ್ಲಿನಿಕ್‍ಗಳನ್ನು ಆರಂಭಿಸುತ್ತಿದೆ. ಅದರಲ್ಲೂ ನಗರಕ್ಕೆ 7 ನಮ್ಮ ಕ್ಲಿನಿಕ್ ಕೊಟ್ಟಿರುವುದು ವಿಶೇಷವಾಗಿದೆ ಎಂದರು. ಮೊದಲನೆಯದು ಮೆಳೇಕೋಟೆಯಲ್ಲಿ, ನಂತರ ಮರಳೂರು ದಿಣ್ಣೆಯಲ್ಲಿ ಆರಂಭಿಸಿದ್ದು, ಇಂದು ಜಯಪುರ ಮತ್ತು ದಿಬ್ಬೂರಿನಲ್ಲಿ ಲೋಕಾರ್ಪಣೆ ಮಾಡಲಾಗಿದೆ ಎಂದರು. ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಹೊರತುಪಡಿಸಿ ಹೆಚ್ಚುವರಿಯಾಗಿ ನಮ್ಮ ಕ್ಲಿನಿಕ್‍ನ್ನು ನೀಡಲಾಗಿದೆ. ನಗರದ 35 ವಾರ್ಡ್‍ಗಳಿಗೆ ಒಟ್ಟು 14 ಆರೋಗ್ಯ ಕೇಂದ್ರಗಳು ಜನರ ಆರೋಗ್ಯ ಕಾಪಾಡಲು ಸದಾ ಕಾರ್ಯನಿರತವಾಗಿರುತ್ತವೆ ಎಂದರು. ಜನರಿಗೆ ಆರೋಗ್ಯ ಭಾಗ್ಯ ಕೊಡುವಂತಹ ಕಲ್ಪನೆ ಈ ನಮ್ಮ ಕ್ಲಿನಿಕ್ ನದ್ದಾಗಿದೆ. ಇದು ಕೇಂದ್ರ ಮತ್ತು ರಾಜ್ಯ…

Read More

ತುಮಕೂರು ಮಹಿಳಾ ದಿನದಂದು ಕೋಲಾರದ ಸಂಸದರು ಕುಂಕುಮವಿಡದ ಸುಜಾತಳಿಗೆ ಬೆದರಿಕೆ ಹಾಕಿರುವುದು ಅಜ್ಞಾನದ, ಸ್ತ್ರೀದ್ವೇಷದ ನಡೆಯಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಕುಂಕುಮ ಮದುವೆಯಾದ ಮೇಲೆ ಬರುವುದಲ್ಲ. ಅದೊಂದು ಅಲಂಕಾರ. ಮದುವೆಯಾದವರೂ, ಆಗದಿದ್ದವರೂ. ಹೆಣ್ಣುಗಳೂ ಗಂಡುಗಳೂ ತಮಗಿಷ್ಟದ ಆಕಾರ, ಬಣ್ಣಗಳ ಬೊಟ್ಟಿಡುತ್ತಾರೆ. ಅದು ಸಂಪೂರ್ಣ ಅವರವರ ಆಯ್ಕೆಗೆ ಬಿಟ್ಟದ್ದು. ಅದು ಅವರ ಹಕ್ಕು ಎಂದು ಒಕ್ಕೂಟ ಹೇಳಿದೆ. ಇನ್ನೊಂದೆಡೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಮಹಿಳಾ ಲೇಖಕರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಮಾಡದೇ ಇದ್ದುದಕ್ಕೆ ಪ್ರಶ್ನೆ ಮಾಡಿದ್ದ ನಿರ್ಮಲಾ ಎಲಿಗಾರ್ ಅವರ ಸದಸ್ಯತ್ಚವನ್ನು ಕ.ಸಾಪ. ಅಧ್ಯಕ್ಷರು ರದ್ದುಗೊಳಿಸಿದ್ದಾರೆ. ಇವೆರೆಡೂ ಮಹಿಳಾ ದೌರ್ಜನ್ಯದ ಬೀಜರೂಪಿ ಮನಃಸ್ಥಿತಿಯಾಗಿದೆ. ಸರ್ವಸಮಾನತೆ ಪ್ರತಿಪಾದಿಸುವ ಸಂವಿಧಾನಕ್ಕೆ ವಿರೋಧಿಯಾಗಿದೆ ಎಂದು ಒಕ್ಕೂಟ ಖಂಡಿಸಿದೆ. ಜನಪ್ರತಿನಿಧಿಗಳು ತಾವು ಜನಸೇವಕರೇ ಹೊರತು ಸರ್ವಾಧಿಕಾರಿಗಳಲ್ಲ ಎಂದರಿತು ಮೊದಲು ಸಂವಿಧಾನವನ್ನು, ಬಾಬಾಸಾಹೇಬರನ್ನು ಸರಿಯಾಗಿ ಓದಿಕೊಳ್ಳಲಿ. ತಕ್ಷಣವೇ ಸಮಾಜದ ಕ್ಷಮೆ ಕೋರಲಿ. ಇಲ್ಲದಿದ್ದಲ್ಲಿ ಸಮತೆಯನ್ನು ಬಯಸುವ ಸ್ತ್ರೀಪುರುಷರೆಲ್ಲರೂ…

Read More

ತುಮಕೂರು ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಾವುದೇ ನೆಪ ಹೇಳಿ ಗೈರು ಹಾಜರಾಗದೆ, ಕಡ್ಡಾಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ವೀಕ್ಷಣಾ ತಂಡ, ಸ್ಟ್ಯಾಟಿಕ್ ತಂಡ, ಚುನಾವಣಾ ವೆಚ್ಚದ ತಂಡ, ಸೆಕ್ಟರ್ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗಾಗಿ ಸೋಮವಾರ ಏರ್ಪಡಿಸಿದ್ದ ‘ಚುನಾವಣಾ ತರಬೇತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ 11 ವಿಧಾನಸಭಾ ಕ್ಷೇತ್ರಗಳ ಪೈಕಿ 2683 ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಲ್ಲಿಯೂ ಶಾಂತಿಯುತ ಮತದಾನ ಜರುಗುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದಲ್ಲಿ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಅಕ್ರಮಗಳು ಕಂಡು ಬಂದಾಗ ವಾಸ್ತವಾಂಶ ಅರಿತು ಯಾರಿಗೂ ಹೆದರದೆ ಪ್ರಕರಣಗಳನ್ನು ದಾಖಲಿಸಬೇಕು. ಯಾರ ಪರವಾಗಿಯೂ/ ವಿರೋಧವಾಗಿಯೂ ಕೆಲಸ ಮಾಡದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪೊಲೀಸ್…

Read More

ತುಮಕೂರು ಜ್ಞಾನಾರ್ಜನೆಯ ಜೊತೆಗೆ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳ ಹಸಿವನ್ನು ನೀಗಿಸುವ ಯೋಜನೆ ತುಮಕೂರು ವಿಶ್ವವಿದ್ಯಾನಿಲಯವು ಕೈಗೊಂಡಿರುವುದು ದೇಶದ ಎಲ್ಲಾ ವಿಶ್ವವಿದ್ಯಾನಿಲಯಗಳು ಅಳವಡಿಸಿಕೊಳ್ಳುವ ಮಾದರಿಯಾಗಿದೆ ಎಂದು ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯವು ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡ ಮತ್ತು ಶ್ರೀ ಅನ್ನಪೂರ್ಣೇಶ್ವರಿ ಆಹಾರ ವಿತರಣಾ ಸಮಿತಿಯ ಸಹಯೋಗದೊಂದಿಗೆ ಸೋಮವಾರ ಆಯೋಜಿದ್ದ ‘ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಮಧ್ಯಾಹ್ನದ ಭೋಜನ ಯೋಜನೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢರಾಗಬೇಕಾದರೆ ವಿದ್ಯೆಯ ಜೊತೆಗೆ ಆರೋಗ್ಯವೂ ಮುಖ್ಯ. ಪೌಷ್ಠಿಕಾಂಶಯುತ ಆಹಾರ ಸೇವನೆ ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ಈ ಯೋಜನೆಯು ಸ್ಥಳೀಯ ಆಹಾರ ಪದ್ಧತಿಯನ್ನು ಬಳಸಿಕೊಂಡು ರೈತರನ್ನು ಪೆÇ್ರೀತ್ಸಾಹಿಸುವಂತಾಗಬೇಕು ಎಂದು ಹೇಳಿದರು. ತುಮಕೂರು ವಿವಿ ಕುಲಪತಿ ಪೆÇ್ರ. ಎಂ. ವೆಂಕಟೇಶ್ವರಲು ಸ್ವಾಗತನುಡಿಗಳನ್ನಾಡಿ, ವಿದ್ಯಾಭ್ಯಾಸದ ಜೊತೆಗೆ ಆಹಾರ ನೀಡುವಂಥ ಶಕ್ತಿ ನಮ್ಮ ವಿವಿಗೆ ದೊರೆತಿರುವುದು ಭಾಗ್ಯವೇ ಸರಿ. ಸಾವಿರದ ಐನೂರು ವಿಧ್ಯಾರ್ಥಿಗಳಿಗೆ ಸತ್ವಭರಿತ ಆಹಾರ ನೀಡುವುದಕ್ಕೆ ಕೈಜೋಡಿಸಿದ ಎಲ್ಲರಿಗೂ…

Read More