ತಿಪಟೂರು: ಡಿ.೧೩ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ತುಮಕೂರಿನ ಸರಸ್ವತಿ ಪುರಂನಲ್ಲಿ,ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ತುಮಕೂರು ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘ ಸಂಘದ ಸಂಯುಕ್ತಾಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜಿಲ್ಲಾ ಬಂಜಾರ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘದ ಜಿಲ್ಲಾಧ್ಯಕ್ಷ ಡಿ. ನಾರಾಯಣ್ ನಾಯಕ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಯಲ್ಲಿ,ಉದ್ಘಾಟನಾ ಕಾರ್ಯಕ್ರಮದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಶ್ರೀ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಶ್ರೀ ಸೇವಾಲಾಲ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಭವನದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ನೆರವೇರಿಸಲಿದ್ದು, ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ತಾಂಡಾಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ ನಾಯಕ್ ಸಮಾರಂಭವನ್ನು ಉದ್ಘಾಟಿಸಲಿದ್ದು,ಉಪ ಸಭಾಪತಿ ರುದ್ರಪ್ಪ ಲಮಾಣಿ,…
Author: News Desk Benkiyabale
ತಿಪಟೂರು: ಪತ್ರಿಕಾ ವೃತ್ತಿಯಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಮಾತ್ರ ಸಮಾಜ ಗೌರವ ನೀಡುತ್ತದೆ. ವೃತ್ತಿ ಬದ್ದತೆಯೊಂದಿಗೆ ಕೆಲಮಾಡಿ ಆಡಳಿತದಲ್ಲಿ ತಪ್ಪುಗಳಾದಾಗ ಸರಿದಾರಿಗೆ ತರುವ ಕೆಲಸ ಮಾಡಬೇಕು ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ ಕಲ್ಪತರು ಕ್ರಾಂತಿ ಕನ್ನಡ ವಾರಪತ್ರಿಕೆ ೧೩ನೇ ವಾರ್ಷಿಕೋತ್ಸವ, ವಿಶೇಷ ಸಂಚಿಕೆ ಬಿಡುಗಡೆ, ಸಾಧಕರಿಗೆ ಸನ್ಮಾನ, ಭಾವಗೀತೆ ಗಾಯನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಂವಿಧಾನದಲ್ಲಿ ಶಾಸಕಾಂಗ ಕಾರ್ಯಾಂಗ ನ್ಯಾಯಾಂಗಗಳ ಜೊತೆ ಪತ್ರಿಕಾರಂಗವನ್ನು ನಾಲ್ಕು ಅಂಗವಾಗಿ ಭಾವಿಸಿದ್ದೇನೆ. ಸಮಾಜದಲ್ಲಿ ನೈಜ ನೈತಿಕ ಹೊಣೆ ಹೊತ್ತ ಪತ್ರಿಕಾ ಅಂಗ ಪಾರದರ್ಶಕವಾಗಿ ಸತ್ಯದ ಹಾದಿಯಲ್ಲಿ ಸಾಗಬೇಕು ಅಲ್ಲದೆ ಪತ್ರಕರ್ತರು ಯಾವುದೇ ಸುದ್ದಿಯನ್ನು ನಿಖರವಾಗಿ ಮಾಡಿಬೇಕು. ಸಕಾರತ್ಮಕ ವಿಚಾರಗಳಿರಲಿ, ನಕಾರಾತ್ಮಕ ವಿಚಾರಗಳಿರಲಿ ವಸ್ತು ನಿಷ್ಠವಾಗಿ ವರದಿಮಾಡಿ, ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾಗ ಪ್ರೋತ್ಸಹಿಸಿ ಬೆನ್ನು ತಟ್ಟುವ ಕೆಲಸ ಮಾಡಿ, ಯಾವುದೇ ಕಾರಣಕ್ಕೂ ತಾರತಮ್ಯ ಮಾಡ ಮಾಡಬಾರದು. ನಡೆಯುವ ಮನುಷ್ಯ ಎಡವುದು ಸಹಜ, ಹಾಗೆ ಆಡಳಿತ ಮಾಡುವವರು ತಪ್ಪುಗಳನ್ನು…
ತುಮಕೂರು: ಜಿಲ್ಲೆಯಲ್ಲಿ ಒಟ್ಟು ೩೨೫ ಬಾಲ ಗರ್ಭಿಣಿ ಪ್ರಕರಣಗಳು ನ್ಯಾಯಾಲಯ ಹಂತದಲ್ಲಿ ದಾಖಲಾಗಿದ್ದು, ಜಿಲ್ಲಾಸ್ಪತ್ರೆ ಮಟ್ಟದಲ್ಲಿ ೨೩೦ ಪ್ರಕರಣಗಳು ಅವಧಿ ಖಾತರಿ ಹಂತದಲ್ಲಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅವರು ಹೇಳಿದರು. ನಗರದ ವಿದ್ಯೋದಯ ಕಾನೂನು ಕಾಲೇಜು ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾಡಳಿತ, ಹಾಗೂ ವಿದ್ಯೋದಯ ಕಾನೂನು ಕಾಲೇಜು, ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ದಿನದಿನ ಕಾಯ್ದೆಗಳು ಬಾಲ ಗರ್ಭಿಣಿ ಪ್ರಕರಣಗಳು ಸೇರಿದಂತೆ ಬಾಲ ಮಕ್ಕಳ ಕಾಣೆ ಪ್ರಕರಣಗಳು ಗಡಿ ಭಾಗಗಳಲ್ಲಿ ಹೆಚ್ಚುತ್ತಿವೆ ಇದರಿಂದಾಗಿ ಕಾನೂನು ವಿದ್ಯಾರ್ಥಿಗಳು ಕಾಲೇಜು ಬಿಡುವಿನ ಸಮ ಯದಲ್ಲಿ ಶಾಲಾ ಕಾಲೇಜು ಹಾಗು ವಿವಿಧ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ನಾಗರಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು. ಪ್ರತಿಯೊಬ್ಬ ಪ್ರಜೆಯು ಮಾನವ ಹಕ್ಕುಗಳನ್ನು ರಕ್ಷಿಸುವುದು ರಾಜ್ಯ…
ತುಮಕೂರು: ಜನ ಐದು ವರ್ಷಕ್ಕೊಮ್ಮೆ ನಮ್ಮನ್ನು ಆರಿಸಿ ಕಳಿಸುತ್ತಾರೆ ನಾವು ಮಾಡಿದ ಕೆಲಸ ಅವರಿಗೆ ಇಷ್ಟವಾದರೆ ಮತ್ತೊಮ್ಮೆ ನಮ್ಮನ್ನು ರಿನಿವಲ್ ಮಾಡಿಕೊಳ್ಳುತ್ತಾರೆ ಇಲ್ಲದಿದ್ದರೆ ತಿರಸ್ಕರಿಸುತ್ತಾರೆ ಎಂದು ಶಾಸಕ ಸಿ ಬಿ ಸುರೇಶ್ ಬಾಬು ರವರು ಅಭಿಪ್ರಾಯಪಟ್ಟರು ಶಿರಾ ತಾಲೂಕು, ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬನ್ನಿ ನಗರದ ಬಳಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಿದ್ದ ವಾಣಿಜ್ಯ ಮಳಿಗೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು ಜನ ಕೊಟ್ಟ ಅಧಿಕಾರ ಶಾಶ್ವತವಲ್ಲ ಅಧಿಕಾರವಧಿಯಲ್ಲಿ ನಾವು ಮಾಡಿದ ಕೆಲಸಗಳೇ ಶಾಶ್ವತವಾಗಿ ನಮ್ಮ ಹೆಸರನ್ನು ಉಳಿಸುತ್ತವೆ. ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರು ಅಂತಹ ಒಂದು ಉತ್ತಮ ಕಾರ್ಯಕ್ಕೆ ಮುಂದಾಗಿದ್ದಾರೆ ತಮ್ಮ ಅನುದಾನದ ಅಡಿಯಲ್ಲಿ ನರೇಗಾ ಕಾಮಗಾರಿ ಅಡಿಯಲ್ಲಿ ಹಾಗೂ ೧೫ನೇ ಹಣಕಾಸು ಯೋಜನೆ ಅಡಿಯಲ್ಲಿ ಸಂಪನ್ಮೂಲಗಳನ್ನು ಬಳಸಿಕೊಂಡು ವಾಣಿಜ್ಯ ಮಳಿಗೆಗಳನ್ನು ನೂತನವಾಗಿ ನಿರ್ಮಿಸಿ ಪಂಚಾಯಿತಿಗೆ ಶಾಶ್ವತವಾಗಿ ಆದಾಯ ಬರುವಂತೆ ಮಾಡುವ ಉತ್ತಮ ಕಾರ್ಯ ಮಾಡಿದ್ದಾರೆ ಕಟ್ಟಡದ ಮೇಲ್ಭಾಗದಲ್ಲಿ ಮತ್ತಷ್ಟು ಮಳಿಗೆಗಳನ್ನು ನಿರ್ಮಿಸಲು…
ತುಮಕೂರು: ನಗರದ ಕ್ಯಾತ್ಸಂದ್ರ ಸಮೀಪ ಮೈದಾಳ ರಸ್ತೆಯಲ್ಲಿ ಪರಿಶಿಷ್ಟ ಪಂಗಡಗಳ ಹಾಗೂ ಇತರೆ ಸಮುದಾಯಗಳ ವಿದ್ಯಾರ್ಥಿನಿಲಯಗಳಲ್ಲಿ ಸುಮಾರು ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರು ನಿತ್ಯ ತುಮಕೂರಿಗೆ ಕಾಲೇಜಿಗೆ ಹೋಗಿ ಬರಲು ಸಾರಿಗೆ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿ ಸುತ್ತಿದ್ದಾರೆ. ಸಾರಿಗೆ ಸಂಸ್ಥೆ ಹಾಗೂ ಜಿಲ್ಲಾಡಳಿತ ತಕ್ಷಣ ಕ್ರಮ ತೆಗೆದುಕೊಂಡು ಈ ಮಾರ್ಗದಲ್ಲಿ ಬಸ್ ಸೇವೆ ಒದಗಿಸಬೇಕು ಎಂದು ಕ್ಯಾತ್ಸಂದ್ರದ ಡಾ. ಪುನಿತ್ ರಾಜ್ಕುಮಾರ್ ಬಡಾ ವಣೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪ್ರತಾಪ್ ಮದಕರಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಸಾರಿಗೆ ಸಂಸ್ಥೆಗೆ ಮನವಿ ಮಾಡಿದರೂ ಸ್ಪಂದಿಸಿ ಬಸ್ ವ್ಯವಸ್ಥೆ ಮಾಡಿಲ್ಲ. ನಿತ್ಯ ೩೦೦ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಿಬರಲು ದೂರದ ಕ್ಯಾತ್ಸಂದ್ರ ನಿಲ್ದಾಣಕ್ಕೆ ಬರುವಂತಾಗಿದೆ. ಕ್ಯಾತ್ಸಂದ್ರವರೆಗಿನ ನಗರ ಸಾರಿಗೆ ಬಸ್ ಸೇವೆಯನ್ನು ಡಾ.ಪುನಿತ್ ರಾಜ್ಕುಮಾರ್ ಬಡಾವಣೆವರೆಗೂ ವಿಸ್ತರಿಸಿದರೆ ಹಾಸ್ಟೆಲ್ ವಿದ್ಯಾ ರ್ಥಿಗಳಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳದಿದ್ದರೆ ವಿದ್ಯಾರ್ಥಿಗಳೊಂದಿಗೆ, ನಾಗರೀಕರು, ಕನ್ನಡಪರ ಸಂಘಟನೆಗಳು, ದಲಿ ತಪರ ಸಂಘಟನೆಗಳೊ0ದಿಗೆ ಉಗ್ರ ಹೋರಾಟ…
ತುಮಕೂರು: ಭವಿಷ್ಯದಲ್ಲಿ ನೀವು ಏನಾಗಬೇಕು ಎಂಬು ದನ್ನು ಎಸ್ಎಸ್ಎಲ್ಸಿ ಪರೀಕ್ಷೆಗೆ ಮೊದಲೇ ನಿರ್ಧಾರ ಮಾಡಬೇಕು. ಶ್ರದ್ಧೆಯಿಂದ ಓದಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಬೇಕು. ಸಂಸ್ಕಾರ ರೂಢಿಸಿಕೊಂಡು ಶಿಸ್ತು, ಶ್ರದ್ಧೆ, ಆತ್ಮ ವಿಶ್ವಾಸ ಅಳವಡಿಸಿಕೊಂಡರೆ ಗುರಿ ಸಾಧನೆ ಮಾಡುವಲ್ಲಿ ಯಶಸ್ವಿಯಾಗಬಹುದು ಎಂದು ಶಾಸಕ ಬಿ.ಸುರೇಶ್ಗೌಡರು ವಿದ್ಯಾರ್ಥಿಗಳಿಗೆ ತಿಳಿಸಿದರು. ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿ ಕೆಪಿಎಸ್ ಶಾಲೆಯಲ್ಲಿ ವಿದ್ಯಾ ರ್ಥಿಗಳಿಗೆ ಶೂ ಹಾಗೂ ಸಾಕ್ಸ್ ವಿತರಣೆ ಮಾಡಿ ಮಾತನಾಡಿದ ಶಾಸಕರು, ಸರ್ಕಾರ ಸಮವಸ್ತç, ಬಿಸಿಯೂಟ, ಪಠ್ಯಪುಸ್ತಕ, ಉತ್ತ ಮವಾದ ಶಾಲಾ ಕ್ಯಾಂಪಸ್, ಉತ್ತಮ ಶಿಕ್ಷಕರು ಎಲ್ಲವನ್ನೂ ಕೊಟ್ಟಿದೆ. ಈಗಿನ ಶಿಕ್ಷಣ ಪದ್ದತಿಯೂ ಉತ್ತಮವಾಗಿದೆ. ಎಲ್ಲವ ನ್ನೂ ಬಳಸಿಕೊಂಡು ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉನ್ನತ ಸ್ಥಾನಕ್ಕೆ ಹೋಗಬೇಕು ಎಂದರು. ವಿದ್ಯಾರ್ಥಿಗಳ ಪಾಲಿಗೆ ಎಸ್ಎಸ್ಎಸ್ಸಿ ಪರೀಕ್ಷೆ ಪ್ರಮುಖ ಘಟ್ಟ. ಈ ಹಂತದಲ್ಲಿ ಒಳ್ಳೆಯ ಅಂಕ ಪಡೆಯಬೇಕು. ಶಿಕ್ಷಕರ ಮಾರ್ಗದರ್ಶನ ಪಡೆದು ಒಳ್ಳೆಯ ಸಾಧನೆ ಮಾಡಿ ಶಾಲೆಗೆ, ಪೋಷಕರಿಗೆ ಕೀರ್ತಿ ತರಬೇಕು. ಮಕ್ಕಳಲ್ಲಿ ಜ್ಞಾನವಿದೆ. ಅವರಿಗೆ ಮಾರ್ಗದರ್ಶನ ನೀಡಿ ಆತ್ಮವಿಶ್ವಾಸ…
ಶಿರಾ: ಮದಲೂರು ಕೆರೆಗೆ ನೀರು ಹರಿಸಲು ದಿ. ಮುಖ್ಯಮಂತ್ರಿ ದೇವರಾಜ್ ಅರಸು ಅವರೇ ಮೂಲ ಕಾರಣ. ಅಂದು ಅವರು ತುಮಕೂರಿಗೆ ಹೇಮಾವತಿ ನೀರು ಹರಿಸಲು ಬಾಗೂರು ನವಿಲೆ ಸುರಂಗದ ಶಂಕುಸ್ಥಾಪನೆಗೆ ಬಂದಾಗ ತುಮಕೂರು ಜಿಲ್ಲೆಗೆ ನೀರು ಬರುತ್ತದೆ, ನೀನು ಅಧಿಕಾರ ಪಡೆದುಕೋ ಆಗ ಅಲ್ಲಿಂದ ಎಲ್ಲಿಗೆ ಬೇಕಾದರೂ ನೀರು ತೆಗೆದುಕೊಂಡು ಹೋಗಬಹುದು ಎಂದು ತಿಳಿಸಿದ್ದರು.ಶಿರಾ ತಾಲೂಕಿನಾದ್ಯಂತ ಹೇಮಾವತಿ ನೀರನ್ನು ಹರಿಸಿ ನನ್ನ ಕನಸನ್ನು ನನಸು ಮಾಡಿಕೊಂಡಿದ್ದೇನೆ ಎಂದು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದರು. ಶಿರಾ ತಾಲೂಕಿನ ಮದಲೂರು ಕೆರೆಗೆ ದಂಪತಿ ಗಂಗಾ ಪೂಜೆಯೊಂದಿಗೆ , ಬಾಗಿನ ಅರ್ಪಿಸಿ ನಂತರ ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿಮಾನಿಗಳು ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿದ ಮಾತನಾಡಿದರು. ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ನೀರಾವರಿ ಮಂತ್ರಿಯಾಗಿದ್ದಾಗ ನಾನು ಕಳ್ಳಂಬೆಳ್ಳ ಕ್ಷೇತ್ರದ ಶಾಸಕನಾಗಿದ್ದೆ, ಹೇಮಾವತಿ ನೀರು ಹರಿಸಲು ಅವರು ಒಪ್ಪಿಗೆ ಸೂಚಿಸಿದಾಗ ಸಾಕಷ್ಟು ವಿರೋಧಗಳು ಕೇಳಿ…
ಹುಳಿಯಾರು: ಹುಳಿಯಾರಿನಲ್ಲಿ ಭಗೀರಥ ಭವನ ನಿರ್ಮಾಣಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ನೀಡಲಾಗಿದ್ದು PWD ಅಥವಾ ಜಿಪಂಗೆ ಕಟ್ಟಣ ನಿರ್ಮಾಣದ ಏಜೆನ್ಸಿ ಕೊಟ್ಟು ಶೀಘ್ರದಲ್ಲೇ ಶಂಕುಸ್ಥಾಪನೆ ಮಾಡಲಾಗುವುದು ಎಂದು ಶಾಸಕರಾದ ಸಿ.ಬಿ.ಸುರೇಶ್ಬಾಬು ತಿಳಿಸಿದರು. ಹುಳಿಯಾರು ಸಮೀಪದ ಕೋಡಿಪಾಳ್ಯದ ಶ್ರೀ ಸೇವಾಲಾಲ್ ಸಾಂಸ್ಕöತಿಕ ಸದನದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕು ಭಗೀರಥ ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ಶ್ರೀ ಭಗೀರಥ ವಿದ್ಯಾನಿಧಿ ಸೇವಾ ಚರಿಟಬಲ್ ಟ್ರಸ್ಟ್ ಹಾಗೂ ತಾಲೂಕು ಭಗೀರಥ ಉಪ್ಪಾರ ಸಂಘದ ಸಂಯುಕ್ತ ಆಶಯದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರು ಮತ್ತು ನೂತನ ನೌಕರರು ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪೋಷಕರು ತಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಬೆಳೆಸುವ ಜೊತೆಗೆ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು. ಸಾಹಿತ್ಯ, ಸಂಗೀತ, ಕ್ರೀಡೆ, ಯೋಗಧ್ಯಾನದಲ್ಲಿ ತೊಡಗಿಕೊಳ್ಳುವಂತೆ ಮಾಡಬೇಕು. ಗುರುಹಿರಿಯರಲ್ಲಿ ಗೌರವಭಾವನೆ, ಸೇವಾಗುಣ ರೂಢಿಸಬೇಕು. ಒಟ್ಟಾರೆ ದೊಡ್ಡವರಾದ ಮೇಲೆ ನಮ್ಮವರು. ನಮ್ಮೂರು ಎಂಬ ಭಾವನೆಯಿಂದ ನಡೆದುಕೊಳ್ಳುವಂತೆ ಮಾಡಬೇಕು ಎಂದು ಕಿವಿ ಮಾತು…
ತುಮಕೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಸಮಗ್ರವಾಗಿ ಅನುಷ್ಠಾನ ಮಾಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಕಲ್ಯಾಣ ಯೋಜನೆಗಳ ಬಗ್ಗೆ ಅಲ್ಪಸಂಖ್ಯಾತರಲ್ಲಿ ಹೆಚ್ಚಿನ ಅರಿವು ಮೂಡಿಸಿ, ಕನಿಷ್ಠ ಶೇ.೭೫ರಷ್ಟು ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪುವಂತೆ ಮಾಡಿ ಇಲಾಖೆಯ ಗುರಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಅನೇಕ ಉರ್ದು ಶಾಲೆಗಳು ಇನ್ನೂ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಳೆದ ಆರು ವರ್ಷಗಳಿಂದ ಬಾಡಿಗೆ ಪಾವತಿಸದಿರುವುದು ಮಕ್ಕಳಿಗೆ ತೊಂದರೆ ಉಂಟುಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವಂತ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಹೇಳಿದರು. ಕೇಂದ್ರ ಸರ್ಕಾರದ ಪಿ.ಎಂ.ಇ.ಜಿ.ಪಿ ಯೋಜನೆಯಡಿ ಕೈಗಾರಿಕೆ ಅಥವಾ ಉದ್ದಿಮೆ ಆರಂಭಿಸಲು ೫೦ ಲಕ್ಷ…
ತುಮಕೂರು: ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಗಳನ್ನು ರಾತ್ರಿ 8 ಗಂಟೆಯವರೆಗೂ ತೆರೆದಿರಲು ಕ್ರಮ ಕೈಗೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ ಅವರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು. ಜಿಲ್ಲೆಯ ಗುಬ್ಬಿ ತಾಲ್ಲೂಕು ಜಿ.ಹೊಸಹಳ್ಳಿ ಗ್ರಾಮದ ಸಮುದಾಯಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರ ಅದಾಲತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉದ್ಯೋಗಸ್ಥ ಮಹಿಳೆಯರು ಸಂಜೆ ೬ ಗಂಟೆಯೊಳಗೆ ಪಡಿತರ ಧಾನ್ಯವನ್ನು ಪಡೆಯಲು ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ರಾತ್ರಿ ೮ ಗಂಟೆಯವರೆಗೂ ತೆರೆದಿರಲು ಕ್ರಮ ಕೈಗೊಳ್ಳ ಲಾಗುವುದು ಎಂದು ತಿಳಿಸಿದರು. ಪಡಿತರ ಚೀಟಿ ಹೊಂದಿರುವ ಗ್ರಾಹಕರ ಕುಂದು-ಕೊರತೆಗಳನ್ನು ಬಗೆಹರಿಸಲು ಜಿಲ್ಲೆಯ ಎಲ್ಲಾ ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ಪಡಿತರ ಗ್ರಾಹಕರು ಕುಂದು-ಕೊರತೆಗಳನ್ನು ಸಕಾಲದಲ್ಲಿ ಬಗೆಹರಿಸಬೇಕು. ಪಡಿತರ ಚೀಟಿದಾ ರರು ಕುಂದು-ಕೊರತೆಗಳ ನಿವಾರಣೆಗಾಗಿ ಜಿಲ್ಲಾ ಕೇಂದ್ರ ತುಮಕೂರಿಗೆ ಬರುವುದನ್ನು ತಪ್ಪಿಸಲು ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಅನ್ನು…










