ತುಮಕೂರು: ಕೃಷಿ ಇಲಾಖೆ ಮತ್ತು ರೇಡಿಯೋ ಸಿದ್ಧಾರ್ಥ ೯೦.೮ ಎಫ್.ಎಂ. ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ಸಹಯೋಗದಲ್ಲಿ “ಕೃಷಿ ಕಣಜ” ಬಾನುಲಿ ಸರಣಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಅವರು ಚಾಲನೆ ಬುಧುವಾರದಂದು ನೀಡಿದರು. ನಗರದ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಿದ್ದಾರ್ಥ ರೇಡಿಯೋ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಕೃಷಿ ಇಲಾಖೆಯ ಯೋಜನೆಗಳು ಮತ್ತು ತಾಂತ್ರಿಕ ಮಾಹಿತಿ ಸರಣಿ ಸಂವಹನ ಕಾರ್ಯಕ್ರಮ ‘ಕೃಷಿ ಕಣಜ’ ಬಾನುಲಿ ಸರಣಿಗೆ ಗಿಡಕ್ಕೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಶುಭ ಕಲ್ಯಾಣ್ ಅವರು ೩೦ ದಿನಗಳ ಸರಣಿ ಕಾರ್ಯಕ್ರಮಕ್ಕೆ ಕೃಷಿ ಇಲಾಖೆಯ ವಿವಿಧ ಅಧಿಕಾರಿಗಳನ್ನು ಕರೆಸಿ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ ಎಂದರು. ರೈತರಿಗೆ ಕೃಷಿ ಉಪಕರಣಗಳನ್ನು ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ವತಿಯಿಂದ ಈಗಾಗಲೇ ವಿತರಣೆ ಮಾಡಲಾಗಿದೆ ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದರು ಕೂಡ ರೈತರು ನೀರಾವರಿ ಪದ್ಧತಿ ಹಾಗೂ ಹನಿ ನೀರಾವರಿ…
Author: News Desk Benkiyabale
ಕೊರಟಗೆರೆ: ಕೊರಟಗೆರೆ ತಾಲೂಕಿನಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ೮,೫೮೯ ಮಂದಿ ಫಲಾನುಭವಿಗಳಿಗೆ ಕಳೆದ ಕೆಲ ದಿನಗಳಿಂದ ಪಿಂಚಣಿ ಜಮೆಯಾಗದೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ವೃದ್ಧರು, ವಿಧವೆಯರು ಹಾಗೂ ವಿಕಲಚೇತನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ತಹಶೀಲ್ದಾರ್ ಮಂಜುನಾಥ್, ತಾಲೂಕಿನಲ್ಲಿ ಒಟ್ಟು ೪೫,೨೮೭ ಮಂದಿ ವಿವಿಧ ಪಿಂಚಣಿ ಯೋಜನೆಗಳ ಫಲಾನುಭವಿಗಳಿದ್ದಾರೆ. ಅದರಲ್ಲಿ ೮,೫೮೯ ಪ್ರಕರಣಗಳು ಮೇಲ್ನೋಟಕ್ಕೆ ಅನರ್ಹ ಅಥವಾ ದಾಖಲೆಗಳ ಪರಿಶೀಲನೆಗೆ ಒಳಪಟ್ಟಿವೆ ಎಂದು ತಿಳಿಸಿದರು. ಏಕೆ ಸ್ಥಗಿತ?: ಪಿಂಚಣಿ ಸ್ಥಗಿತಕ್ಕೆ ಪ್ರಮುಖ ಕಾರಣಗಳನ್ನು ವಿವರಿಸಿದ ತಹಶೀಲ್ದಾರ್, “ನಿಗದಿತ ಅರ್ಹ ವಯಸ್ಸು ಪೂರ್ಣಗೊಳ್ಳದಿರುವುದು, ಅಗತ್ಯ ದಾಖಲೆಗಳನ್ನು ಸಲ್ಲಿಸದಿರುವುದು, ಆಧಾರ್-ರೇಷನ್ ಕಾರ್ಡ್ನಲ್ಲಿ ಹೆಸರು-ವಯಸ್ಸು ವ್ಯತ್ಯಾಸ, ಮರುಪರಿಶೀಲನೆಯಲ್ಲಿ ಅನರ್ಹತೆ ಕಂಡುಬAದಿರುವುದು ಸೇರಿದಂತೆ ವಿವಿಧ ಆಡಳಿತಾತ್ಮಕ ಕಾರಣಗಳಿವೆ ಎಂದರು. ರೂ.೪,೦೦೦ಕ್ಕೂ ಹೆಚ್ಚು ಪಿಂಚಣಿ ದರದ ಮಾಹಿತಿ ಪಡೆದ ಪ್ರಕರಣಗಳನ್ನು ಈಗಾಗಲೇ ಸರಿಪಡಿಸಲಾಗಿದೆ. ಇನ್ನುಳಿದ ಪ್ರಕರಣಗಳು ತಾತ್ಕಾಲಿಕವಾಗಿ ಮಾತ್ರ ಸ್ಥಗಿತಗೊಂಡಿವೆ, ಶಾಶ್ವತವಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪರಿಹಾರ ಏನು? ತಹಶೀಲ್ದಾರ್ ಸೂಚನೆ:…
ಕೊರಟಗೆರೆ: ಗಡಿ ಭಾಗಗಳ ಕನಸಿನ ಕೂಸಾದ ರೈಲು ಸಂಚಾರಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಭಾಗದ ಸಾರ್ವಜನಿಕರ ಕನಸು ನನಸಾಗುವ ದಿನಗಳು ಬಂದAತೆ ಕಾಣಿಸುತ್ತದೆ. ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಯೋಜನೆಯನ್ನ ೨೦೧೨ರಲ್ಲಿ ಆರಂಭಿಸಲಾಯಿತ್ತು. ಒಟ್ಟು ೨೦೬ ಕಿ.ಮೀ. ಉದ್ದದ ಲೈನ್ ಆಗಬೇಕಿದೆ. ಸುಮಾರು ೧೮೫೦ ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ಘೋಷಿಸಿದ್ದರೂ, ಆ ನಂತರ ೨೫೦೦ ಕೋಟಿಗೆ ಏರಿಸಲಾಗಿದೆ. ನೆರೆಯ ಆಂಧ್ರ ಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ೧೨೫ ಕಿ.ಮೀ ವರೆಗೂ ಈಗಾಗಲೇ ಕಾಮಗಾರಿ ಪೂರ್ಣಗೊಂಡು ಕೆ.ರಾಮಪುರ ರೈಲ್ವೆ ನಿಲ್ದಾಣದವರೆಗೆ ಹಳಿ ಜೋಡಣೆ ಹಾಗೂ ಪ್ರಾಯೋಗಿಕವಾಗಿ ರೈಲು ಸಂಚಾರ ಮಾಡಲಾಗಿದೆ. ಕೆ.ರಾಮಪುರ ನಿಲ್ದಾಣದಿಂದ ಮಧುಗಿರಿ, ಕೊರಟಗೆರೆ, ತುಮಕೂರುವರೆಗೆ ೮೧ ಕಿ.ಮೀ ವರೆಗೂ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಲ್ಲಲ್ಲಿ ಕಾಮಗಾರಿ ಪ್ರಾರಂಭ ಮಾಡಲು ಈಗಾಗಲೇ ಮಾರ್ಗದ ಮಧ್ಯೆ ಇರುವ ಗಿಡ, ಮರ ಸೇರಿದಂತೆ ಪೆಟ್ಟಿಗೆ ಅಂಗಡಿಗಳನ್ನ ತೆರವು ಮಾಡಲಾಗುತ್ತಿದೆ. ಹಲವು…
ತುಮಕೂರು: ಬರುವ ಅಕ್ಟೋಬರ್ ವೇಳೆಗೆ ತುಮಕೂರುವರೆಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಹತ್ವದ ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ಸಂಬAಧ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪ್ಯಾಕೇಜ್ ೧೧ ಕಂಚಿಗಾನಹಳ್ಳಿ, ಮಾರಶೆಟ್ಟಿಹಳ್ಳಿ ಅರಣ್ಯ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಹತ್ವದ ಎತ್ತಿನಹೊಳೆ ಯೋಜನೆ ಕಾಮಗಾರಿ ಒಟ್ಟು ೨೫೨ ಕಿ.ಮೀ.ಇದ್ದು, ಈಗಾಗಲೇ ೨೨೦ ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ೨೩ ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಬಾಕಿ ೯ ಕಿ.ಮೀ. ಕಾಮಗಾರಿ ಆಗಬೇಕಿದೆ. ಈ ವ್ಯಾಪ್ತಿಯಲ್ಲಿ ೬ ಕಿ.ಮೀ. ಅರಣ್ಯ ಪ್ರದೇಶ ಇದ್ದುದರಿಂದ ಕಾಮಗಾರಿ ವಿಳಂಬಕ್ಕೆ ಕಾರಣವಾಯಿತು. ಇದೀಗ ಕೇಂದ್ರ ಸರ್ಕಾರ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದು, ಕಾಮಗಾರಿ ಪೂರ್ಣಗೊಂಡು ಅಕ್ಟೋಬರ್ ವೇಳೆಗೆ ತುಮಕೂರಿನವರೆಗೆ ಎತ್ತಿನಹೊಳೆ ನೀರು ಹರಿಸುವ ಎಲ್ಲಾ ಸಾಧ್ಯತೆಗಳಿವೆ ಎಂದರು. ಮಾರಶೆಟ್ಟಿಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ೧.೯ ಕಿ.ಮೀ. ಕಾಲುವೆ ಹಾದು ಹೋಗಲಿದ್ದು, ಕಾಮಗಾರಿ ವಿಳಂಬವಾಗಿತ್ತು. ಇದೀಗ ಎಲ್ಲಾ ತೊಡಕುಗಳು ಇತ್ಯರ್ಥವಾಗಿದ್ದು, ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಅವರು…
ತುಮಕೂರು : ಇಂದು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋಲನ ಕರ್ನಾಟಕದಿಂದ ನಗರದ ಕನ್ನಡ ಭವನದಲ್ಲಿ ೨೪ನೇ ವರ್ಷದ ಸ್ಲಂ ವಿದ್ಯಾರ್ಥಿಗಳ ಪುರಸ್ಕಾರ ಕಾರ್ಯಕ್ರಮವನ್ನು ತುಮಕೂರು ನಗರ ಶಾಸಕರಾದ ಶ್ರೀ ಜಿ.ಬಿಜ್ಯೋತಿಗಣೇಶ್ ಉದ್ಘಟಿಸಿ ಮಾತನಾಡಿದರು. ಕೊಳಚೆ ಪ್ರದೇಶಗಳಲ್ಲಿ ಯಾವುದೇ ಸೌಲಭ್ಯಗಳಿಲ್ಲದೆ ಕಷ್ಠದ ಪರಿಸ್ಥಿತಿಗಳಲ್ಲಿ ಪೋಷಕರು ತಮ್ಮ ಮಕ್ಕಳ ಓದನ್ನು ತಮ್ಮಗೆ ತೊಂದರೆಯಿದ್ದರೂ ಇತ್ತೀಚಿನ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಒತ್ತು ನೀಡುತ್ತಿರುವುದು ಶ್ಲಾಘನೀಯ ಕಳೆದ ೨೪ ವರ್ಷಗಳಿಂದ ತುಮಕೂರು ಸ್ಲಂ ಸಮಿತಿ ಜಾತ್ಯಾತೀತವಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತ ಬಂದಿರುವುದು ಅಭಿನಂದನೀಯವಾಗಿದೆ. ಭವಿಷ್ಯದಲ್ಲಿ ಮಕ್ಕಳು ಯಾರು ಯಾರು ಏನೇನಾಗುತ್ತಾರೋ ಗೊತ್ತಿಲ್ಲ ಹಾಗಾಗಿ ಸ್ಲಂ ವಿದ್ಯಾರ್ಥಿಗಳು ಭವಿಷ್ಯದ ದೃಷ್ಠಿಯಿಂದ ವಿದ್ಯಾವಂತರಾಗಿ ಕಷ್ಠದಿಂದ ಸುಖದದಾರಿಗೆ ಬರಬೇಕು. ಇಂದು ಶಿಕ್ಷಣ ದುಬಾರಿಯಾಗಿದೆ ಆದರೂ ಸರ್ಕಾರಿ ವ್ಯವಸ್ಥೆಯನ್ನು ಉಪಯೋಗಿಸಿಕೊಂಡು ಸ್ಲಂನಲ್ಲಿರುವ ಪ್ರತಿಭಾವಂತರು ಮುಂದೆ ಬರಬೇಕೆಂದರು. ಸ್ಲಂ ಎಂದು ಕರೆಯುವುದನ್ನು ನಿಲ್ಲಿಸಬೇಕು ಇದಕ್ಕಾಗಿ ಸರ್ಕಾರ ಪರ್ಯಾಯ ಪದವನ್ನು ನಾಮಕರಣ ಮಾಡಬೇಕೆಂದು ಸದನದಲ್ಲಿ ಒತಾಯಿಸುತ್ತೇನೆ ಎಂದರು. ದೇಶಕ್ಕೆ ಸ್ವಾತಂತ್ರö್ಯ ಬಂದು…
ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ಕೆ ಇಂದಿನಿAದ ಚಾಲನೆ ನೀಡಲಾಗಿದೆ. ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನ ಜುಲೈ ೨೯ಕ್ಕೆ ಮುಕ್ತಾಯವಾಗಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಒಟ್ಟು ೬ ಹೋಬಳಿ, ೩೮೬ ಗ್ರಾಮ, ೨,೦೯,೯೪೫ ಮತದಾರರು ಹಾಗೂ ೨೪೦ ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಗೆ ಒಬ್ಬರಂತೆ ಒಟ್ಟು ೨೪೦ ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಇಂದಿನಿ0ದ ತಾಲೂಕು ಮತ್ತು ಹೋಬಳಿ ನೋಡೆಲ್ ಅಧಿಕಾರಿಗಳು ಹಾಗೂ ಬಿಎಲ್ಒಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಹೆಸರು, ವಿಳಾಸ, ಫೋಟೋ ಸೇರಿದಂತೆ ಎಲ್ಲಾ ವಿವರಗಳನ್ನು ಪರಿಶೀಲಿಸಲಿದ್ದಾರೆ. ಹೊಸ ಮತದಾರರ ಸೇರ್ಪಡೆ, ಮೃತರಾದವರ ಹೆಸರು ತೆಗೆಯುವಿಕೆ, ತಿದ್ದುಪಡಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ನೋಂದಣಾಧಿಕಾರಿ ವಿಜಯಲಕ್ಷಿ ಡಿ.ಆರ್, ಕೃಷಿ ಇಲಾಖೆ ಉಪನಿರ್ದೇಶಕ ಡಾ. ಚಂದ್ರಕುಮಾರ್ ಹಾಗೂ ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯ ಅಧಿಕಾರಿ ಉಮೇಶ್, ಕಸಬಾ ಹೋಬಳಿ ಆರ್ ಐ ಬಸವರಾಜು, ವಿ.ಎ.ಪವನ್ ಅವರು ವಿವಿಧ ಗ್ರಾಮಗಳಿಗೆ…
ತುಮಕೂರು: ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂಭಾಗದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ, ಛತ್ರಪತಿ ಶಾಹು ಮಹಾರಾಜ್ ಜಯಂತಿ ಹಾಗೂ ಕ್ರಾಂತಿಕಾರಿ ಕುಂದ್ಮಲ್ ರಂಗರಾವ್ ರವರುಗಳ ಜಯಂತ್ಯೋತ್ಸವವನ್ನು ಒಟ್ಟಿಗೆ ಆಚರಣೆ ಮಾಡಲಾಯಿತು. ಮಹಾನ್ ನಾಯಕರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಿಹಿ ಹಂಚಿಕೆ ಮಾಡುವುದರ ಮೂಲಕ ಜನ್ಮ ದಿನಾಚರಣೆಯನ್ನು ವಿಶೇಷಪೂರ್ಣವಾಗಿ ಆಚರಣೆ ಮಾಡುವುದರ ಮೂಲಕ ವಿಶೇಷ ಸಂದೇಶವನ್ನು ರವಾನೆ ಮಾಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾ ಅಧ್ಯಕ್ಷರು ಎನ್. ಕೆ ನಿಧಿ ಕುಮಾರ್ ವಹಿಸಿಕೊಂಡು ಮಹಾನ್ ನಾಯಕರುಗಳ ಜೀವನದ ಚರಿತ್ರೆಯ ಬಗ್ಗೆ ವಿಶ್ಲೇಷಣೆ ನೀಡಿದರು. ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ನಿರ್ಮಾತರು, ಭರತ ಖಂಡದ ಇತಿಹಾಸದಲ್ಲಿ ಕೇವಲ ಯುದ್ಧಗಳನ್ನು ಗೆದ್ದು ರಕ್ತದ ಹಾದಿಯಲ್ಲಿ ಸಾಮ್ರಾಜ್ಯ…
ತುಮಕೂರು: ಭೂಮಿ, ವಸತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ,ವಿಶೇಷ ಘಟಕ ಯೋಜನೆಯ ಏಕಗವಾಕ್ಷಿ ನೀತಿ ಹಾಗೂ ಇನ್ನಿತರ ಬೇಡಿಕೆಗಳಿಗೆ ಒತ್ತಾಯಿಸಿ, ಜುಲೈ ೦೩ ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಸಮಿತಿಯಿಂದ ದಲಿತ ಜನಾಗ್ರಹ ಸಮಾವೇಶವನ್ನು ಬೆಂಗಳೂರಿನ ಪ್ರಿಡಂ ಪಾರ್ಕಿನಲ್ಲಿ ಹಮ್ಮಿಕೊಂಡಿರುವುದಾಗಿ ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದಲಿತರ ಭೂಮಿ ಹಕ್ಕಿಗಾಗಿ ದಸಂಸ ಹಲವಾರು ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದೆ.ನಮ್ಮ ಹೋರಾಟದ ಭಾಗವಾಗಿಯೇ ಪಿಟಿಸಿಎಲ್ ಕಾಯ್ದೆಜಾರಿಗೆ ಬಂದರೂ ಸಮರ್ಪಕವಾಗಿ ದಲಿತರ ಜಮೀನು ಅವರಿಗೆ ದೊರೆತ್ತಿಲ್ಲ. ಪ್ರಸ್ತುತ ಡಿಸಿಎಂ ಆಗಿರುವ ದಲಿತ ಸಮುದಾಯಕ್ಕೆ ಸೇರಿದ ಡಾ.ಜಿ.ಪರಮೇಶ್ವರ್ ಕಂದಾಯ ಮಂತ್ರಿಗಳು ಆಗಿದ್ದು, ಅದ್ಯತೆಯ ಮೇರೆಗೆ ದಲಿತರಿಗೆ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು. ದಲಿತರ ಹೋರಾಟದ ಫಲವಾಗಿ ಜಾರಿಗೆ ಬಂದ ಎಸ್.ಸಿ.ಪಿ ಮತ್ತು ಟಿ.ಎಸ್ಪಿ ಯೋಜನೆಯ ನಿಯಮಗಳನ್ನು ಮೀರಿ ಹಣಖರ್ಚು ಮಾಡಲಾಗಿದೆ. ಕಾಯ್ದೆ ಬಂದು ದಿನದಿಂದ ಇದುವರೆಗೂ ಸುಮಾರು ೩-೪.೫೦…
ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-೨೦೨೬ ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸುವ ಪ್ರಕ್ರಿಯೆ ನಡೆಯಿತು. ತುಮಕೂರು ನಗರದ ನಜûರಾಬಾದ್ ಪ್ರದೇಶದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಖುದ್ದು ಮನೆ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತದಾರರಿಗೆ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯ ಮಹತ್ವ ಮತ್ತು ಮತದಾರರು ಮಾಡಬೇಕಿರುವ ಜವಾಬ್ದಾರಿಯ ಬಗ್ಗೆ ವಿವರಣೆ ನೀಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ತುಮಕೂರು ಜಿಲ್ಲೆಯಾದ್ಯಂತ ಜೂನ್ ೩೦ ರಿಂದ ಜುಲೈ ೨೯ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸಲಿದ್ದಾರೆ ಎಂದರು. ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ-ಮನೆಗೆ ತೆರಳಿ ನಮೂನೆ ಭರ್ತಿ ಮಾಡಿಸಿಕೊಳ್ಳುವ ಪ್ರಕ್ರಿಯೆ ನಡೆಯುವುದರಿಂದ ಪ್ರತಿಯೊಬ್ಬ ಮತದಾರರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಮತಗಟ್ಟೆ ಅಧಿಕಾರಿಗಳು ೨-೩ ಬಾರಿ ಮನೆಗಳಿಗೆ…
ತುಮಕೂರು: ಪೌತಿ ಖಾತಾ ಆಂದೋಲನ-೨ರ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೋಮವಾರ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ವ್ಯಾಪ್ತಿಯ ಕೊಪ್ಪ ಹಾಗೂ ಹೊನ್ನಶೆಟ್ಟಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ, ಇ-ಪೌತಿ ಖಾತಾ ಆಂದೋಲನ, ಕಂದಾಯ ಅದಾಲತ್ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇ-ಪೌತಿ ಖಾತೆ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಸೇವೆಗಳು ಹಾಗೂ ದಾಖಲೆಗಳನ್ನು ಪಡೆಯುವ ವಿಧಾನಗಳ ಕುರಿತು ಸಾರ್ವಜನಿಕರಿಗೆ ವಿವರವಾಗಿ ಮಾಹಿತಿ ನೀಡಿದರು. ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಗಳಿಗೆ ಆಗಮಿಸಿರುವ ಈ ವಿಶೇಷ ಅವಕಾಶದ ಸದುಪಯೋಗ ಪಡೆದು ಅಗತ್ಯ ದಾಖಲೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ಕೊಪ್ಪ ಹಾಗೂ ಹೊನ್ನಶೆಟ್ಟಿಹಳ್ಳಿ ಗ್ರಾಮಗಳ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಸ್ವೀಕರಿಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಇ-ಪೌತಿ ಖಾತೆ, ಪಿಂಚಣಿ ಹಾಗೂ ಇತರೆ ಕಂದಾಯ ಸೇವೆಗಳಿಗೆ ಸಂಬAಧಿಸಿದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಿ, ಜನರಿಗೆ ಸಮಯೋಚಿತ…

