ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಅಭಿವೃದ್ಧಿಗೆ ಆರ್ಥಿಕ ಶಕ್ತಿಯನ್ನು ನೀಡಲಾಗುವುದು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿ ವತಿಯಿಂದ ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ‘ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ’ದ ಉದ್ಘಾಟನೆಯನ್ನು ನೆರವೇರಿಸಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಗೊಂದು ವಿಶ್ವವಿದ್ಯಾಲಯ ಎಂಬ ಪರಿಕಲ್ಪನೆ ಇಟ್ಟುಕೊಂಡು ದೇಶದಲ್ಲೇ ಮೊದಲ ಬಾರಿಗೆ ತುಮಕೂರು ವಿಶ್ವದ್ಯಾಲಯ ಸ್ಥಾಪಿಸಲಾಯಿತು. ಆಧುನಿಕ ವಿಜ್ಞಾನ ವಿಶ್ವವಿದ್ಯಾಲಯವಾಗಬೇಕು ಎಂಬ ಚಿಂತನೆ ಇಟ್ಟುಕೊಂಡು ಸ್ಥಾಪಿಸಲಾಯಿತು. ರಾಜ್ಯ ಮತ್ತು ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬAಧಪಟ್ಟ ವಿವಿ ಆಗಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಆದರೆ, ಸಾಮಾನ್ಯ ವಿಶ್ವವಿದ್ಯಾಲಯವಾಗಿದೆ. ತುಮಕೂರು ವಿಶ್ವವಿದ್ಯಾನಿಲಯ ನಗರದಿಂದ ದೂರ ಆಗಿದೆ ಎಂಬುದನ್ನು ಹೊರತುಪಡಿಸಿದರೆ, ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ. ಇದನ್ನು ಬೆಳೆಸುವುದು ನಮ್ಮೆಲ್ಲರ ಹೊಣೆ ಎಂದು ಅವರು…
Author: News Desk Benkiyabale
ತುಮಕೂರು: ಜಿಲ್ಲಾ ಪಂಚಾಯತ್ನಲ್ಲಿ ಭ್ರಷ್ಟಾಚಾರ ಸಂಪೂರ್ಣ ಹಬ್ಬಿ, ಗುತ್ತಿಗೆದಾರರು ಬೀದಿಗಿಳಿದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವ ಸ್ಥಿತಿ ಉಂಟಾಗಿದೆ. ಪ್ರತಿ ವರ್ಷವೂ ನಿಯಮಾನೂಸಾರ ಮಾರ್ಚ ಕೊನೆಯಲ್ಲಿ ಪೂರ್ಣಗೊಂಡ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುತ್ತಿರುವುದು ಸಹಜ ಪ್ರಕ್ರಿಯೆ, ಆದರೇ ಈ ಬಾರಿ ಗುತ್ತಿಗೆದಾರರು ಬೀದಿಗಿಲಿದು ಪ್ರತಿಭಟನೆ ಮಾಡುತ್ತಿರುವುದು ಶೋಚನಿಯ ಸಂಗತಿಯಾಗಿದೆ. ಮಾರ್ಚ ಕೊನೆಯಲ್ಲಿ ಕಾವಗಾರಿಗಳನ್ನು ಕ್ರಮಬದ್ದವಾಗಿ ಪಾರದರ್ಶಕವಾಗಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡುವ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಪ್ರತಿ ಬಾರಿಯು ತಮ್ಮ ಮನಸ್ಸಿಗೆ ಬಂದಹಾಗೆ ಮತ್ತು ತಮಗೆ ಮನಸೊಇಚ್ಛೆಯಂತೆ ತಾರ ತಮ್ಯ ಎಸಗುತ್ತಿರುವುದು ಗುತ್ತಿಗೆ ದಾರರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ ಎಂದು ದೂರು ಕೆಳಿಬಂದಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಸಾಕಷ್ಟು ವ್ಯಾಪಕವಾಗಿ ದೂರುಗಳು ಕೇಳಿ ಬಂದಿದ್ದವು. ಈ ಬಗ್ಗೆ ಹಲವು ಬಾರಿ ವಿಧಾನಸಭೆಯಲ್ಲಿ, ಪತ್ರಿಕಾಗೋಷ್ಠಿಗಳಲ್ಲಿಗಳಲ್ಲಿಯೂ ಈ ತೀವ್ರ ಭ್ರಷ್ಟಾಚಾರದ ಬಗ್ಗೆ…
ಹುಳಿಯಾರು: ಮುಂಬರುವ ರಂಜಾನ್ ಹಾಗೂ ಯುಗಾದಿ ಹಬ್ಬದ ನಿಮಿತ್ತ ಪಟ್ಟಣದ ಪೋಲಿಸ್ ಠಾಣೆಯಲ್ಲಿ ಪಿಎಸೈ ಧರ್ಮಾಂಜಿ ಹಾಗೂ ಪಿಎಸ್ಐ ಜಗದೀಶ್ ರವರು ಸಮುದಾಯಗಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳ ಸಾರ್ವಜನಿಕರ ಶಾಂತಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಿಎಸೈ ಧರ್ಮಾಂಜಿ ಹಬ್ಬದ ಆಚರಣೆಗಳಲ್ಲಿ ಯಾರೊಬ್ಬರಿಗೂ ತೊಂದರೆಯಾಗದAತೆ ಜಾಗ್ರತೆ ವಹಿಸಬೇಕು, ರಂಜಾನ್ ಹಬ್ಬದ ಅಚರಣೆಗೆ ಎಲ್ಲರೂ ಸಹಕರಿಸಿ ಸೌಹಾರ್ದಯುತವಾಗಿ ನಡೆಯುವಂತೆ ನೋಡಿಕೊಳ್ಳಬೇಕು.ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು. ಎಲ್ಲರೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ, ಸಂಚಾರಕ್ಕೆ ಅಡಚಣೆ ಯಾಗದಂತೆ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಬ್ಬದ ಸಮಯದಲ್ಲಿ ಹಿಂದೂ ಮುಸ್ಲಿಂ ಬಾಂಧವರಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೆ ಪರಸ್ಪರ ಸೌಹಾರ್ದತೆಯಿಂದ ಆಚರಣೆ ಮಾಡುತ್ತ ಬಂದಿರುವುದು ಸಂತಸದ ವಿಷಯವಾಗಿದೆ ಎಂದರು.ಹಬ್ಬಗಳಲ್ಲಿ ಮೆರವಣಿಗೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ ಠಾಣೆಯ ಗಮನಕ್ಕೆ ತರಬೇಕು, ಎರಡು ಸಮಾಜದವರು ಶಾಂತಿಯುತವಾಗಿ ಹಬ್ಬವನ್ನು ಯಾವುದೇ ಗಲಭೆಗಳಿಗೆ ಅವಕಾಶವಾಗದಂತೆ ಆಚರಿಸಿಬೇಕು ಎಂದು…
ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ತೆಂಗು ಬೆಳೆಯಲ್ಲಿ ಭಾದಿಸುತ್ತಿರುವ ಅತಿಕ್ರಮಣಕಾರಿ ಬಿಳನೊಣಗಳ ನಿಯಂತ್ರಣಕ್ಕೆ ಶಾಸಕರಾದಂತಹ ಸಿ.ಬಿ.ಸುರೇಶ್ ಬಾಬು ರವರು ಹಾಗೂ ತೋಟಗಾರಿಕೆ, ಕೃಷಿ ಇಲಾಖೆಗಳ ಜೊತೆಗೂಡಿ ರೈತರಿಗೆ ಆಸರೆಯಾಗುವಂತಹ ಕ್ರಮ ಕೈಗೊಳ್ಳಲಾಯಿತು. ಕಳೆದೆರಡು ವರ್ಷಗಳಿಂದ ರೈತರನ್ನು ನಿದ್ದೆಗೆಡಿಸಿರುವ ತಾಳೆ ಮುತ್ತಿಕೊಳ್ಳುವ ಬಿಳಿನೊಣಗಳು ತೆಂಗಿನ ತೋಟಗಳನ್ನು ಆಕ್ರಮಣ ಮಾಡಿವೆ. ಇವು ರೂಗೂಸ್ ಜಾತೆಗೆ ಸೇರಿದ್ದು, ಸುರುಳಿ ಬಿಳಿನೊಣಗಳನ್ನೆಲಾಗಿದೆ. ಇವು ಹೆಚ್ಚು ಪ್ರಬಲ, ಅಕ್ರಮಣಕಾರಿ, ಹೊಟ್ಟೆಬಾಕತನ ರಸ ಹೀರುವ ಕೀಟವಾಗಿದೆ. ಮರಿಗಳು ಹಾಗೂ ಪ್ರೌಢ ಕೀಟಗಳು ಸತತವಾಗಿ ಗರಿಗಳ ಕೆಳಭಾಗದಲ್ಲಿ ಕುಳಿತು ರಸ ಹೀರುವಿಕೆಯಿಂದ ಗಿಡಗಳ ಗರಿಗಳು ಹಳದಿಯಾಗಿ ಒಣಗಿ ನಾಶವಾಗುತ್ತದೆ. ಮರಿ ಹಂತಗಳು ಸಿಹಿಯಾದ ಜೇನಿನ ತರಹದ ದ್ರಾವಣವನ್ನು ವಿಸರ್ಜನೆ ಮಾಡುವುದರಿಂದ ಎಲೆಯ ಮೇಲ್ಬಾಗದ ಮೇಲೆ ಕಪ್ಪು ಬಣ್ಣದ ಶಿಲೀಂದ್ರ ಬೆಳೆದು ಎಲೆಗಳು ಕಪ್ಪು ಬಣ್ಣಕ್ಕೆ ತಿರುಗುವುದರಿಂದ ಎಲೆಗಳಲ್ಲಿ ದ್ಯುತಿ ಸಂಶ್ಲೇಷಣೆ ಕ್ರಿಯೆ ಕಡಿಮೆಯಾಗುತ್ತದೆ ಮತ್ತು ಅದರ ಪರಿಣಾಮ ತೆಂಗಿನ ಇಳುವರಿ ಮೇಲೆ ಉಂಟಾಗುತ್ತದೆ. ವಿಶಿಷ್ಟ ಕೇಂದ್ರೀಕೃತ ಮೇಣದ ಸುರುಳಿಯಾಕಾರದ ಲಕ್ಷಣಗಳನ್ನು ಎಲೆಗಳ ಮೇಲೆ…
ಚಿಕ್ಕನಾಯಕನಹಳ್ಳಿ: ಪಟ್ಟಣದ ೨೩ವಾರ್ಡ್ಗಳ ಸಮಗ್ರ ಅಭಿವೃದ್ದಿಗೆ ಅದ್ಯತೆಯ ಮೇಲೆ ಅವಕಾಶ ಮಾಡಿಕೊಂಡು ಕೆಲಸ ಮಾಡಿ ಶಾಶ್ವತವಾಗಿ ಉಳಿಯುವಂತಹ ಕೆಲಸಗಳನ್ನು ಮಾಡಿ ಎಲ್ಲಾ ಸದಸ್ಯರು ಒಮ್ಮತದಿಂದ ಕೈಜೊಡಿಸಿ ಹಾಗೂ ನೂತನ ಪುರಸಭಾ ಕಚೇರಿ ನಿರ್ಮಾಣಕ್ಕೆ ಸರ್ಕಾ ರದಿಂದ ೫ಕೋಟಿ ಹಣದ ಮಂಜೂರಾತಿ ಈಗಾ ಗಲೇ ಮನವಿ ಮಾಡಿದ್ದೇನೆ ಎಂದು ಶಾಸಕ ಸಿ.ಬಿ. ಸುರೇಶ್ಬಾಬು ತಿಳಿಸಿದರು., ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಮಂಗಳವಾರ ನಡೆದ ೨೦೨೫-೨೬ನೇ ಸಾಲಿನ ಬಜೆಟ್ಮಂಡನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪಟ್ಟಣದ ೨೩ವಾರ್ಡ್ಗಳ ಸಮಗ್ರ ಸಿಸಿ ರಸ್ತೆ ಸೇರಿದಂತೆ ಇತರೆ ಅಭಿವೃದ್ದಿ ಕೆಲಸಗಳಿಗಾಗಿ ಗಣಿಬಾದಿತ ಪ್ರದೇಶಾಭಿವೃದ್ದಿ ಅನುದಾನದಲ್ಲಿ ೩೫ಕೋಟಿ ಹಣವನ್ನು ಮೀಸಲಾ ಗಿಟ್ಟಿದ್ದು ಇದರೊಂದಿಗೆ ಈಗಿರುವಂತಹ ಪುರಸಭಾ ಕಚೇರಿ ಕಟ್ಟಡವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿ ಕೊಂಡು ತೀನಂಶ್ರೀಭವನದ ಪಕ್ಕದಲ್ಲಿ ೫ಕೋಟಿ ವೆಚ್ಚದಲ್ಲಿ ನೂತನ ಕಚೇರಿಯನ್ನು ನಿರ್ಮಾಣ ಮಾಡಲು ಈಗಾಗಲೇ ಪೌರಾಡಳಿತ ಸಚಿವರಾದ ಬೈರತಿಸುರೇಶ್ ಇವರನ್ನು ಬೇಟಿ ಮಾಡಿ ಮನವಿ ಮಾಡಲಾಗಿದೆ ಎಂದ ಅವರು ಎಲ್ಲಾ ವಾರ್ಡ್ನ ಸದಸ್ಯರು ಒಗ್ಗಟ್ಟಿನಿಂದ ಸಮಗ್ರ ಶಾಶ್ವತ…
ಕೊರಟಗೆರೆ: ಯಾದಗಿರಿಯ ಸೆಂಟ್ ಮೇರಿಸ್ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೮೯ ವಿದ್ಯಾರ್ಥಿಗಳ ಪೈಕಿ ೪೦ಜನ ವಿದ್ಯಾರ್ಥಿಗಳು ಶಾಲೆಯ ಶುಲ್ಕ ಪೂರ್ಣ ಪಾವತಿ ಮಾಡಿಲ್ಲ ಎಂದು ಕನ್ನಡ ಮತ್ತು ಇಂಗ್ಲಿಷ್ ಪರೀಕ್ಷೆಗೆ ಅವಕಾಶ ನೀಡದೆ ಶಾಲೆಯ ಹೊರಗಡೆ ನಿಲ್ಲಿಸಿ ಮಕ್ಕಳಿಗೆ ಅವಮಾನ ಮಾಡಿರುವ ಘಟನೆ ಸೋಮವಾರ ಮತ್ತು ಮಂಗಳವಾರ ನಡೆದಿದೆ. ಕೊರಟಗೆರೆ ತಾಲೂಕು ಕಸಬಾ ಹೋಬಳಿ ವಡ್ಡಗೆರೆ ಗ್ರಾಪಂ ವ್ಯಾಪ್ತಿಯ ಯಾದಗೆರೆಯ ಸೇಂಟ್ ಮೇರಿಸ್ ಪಬ್ಲಿಕ್ ಶಾಲೆಯಲ್ಲಿ ಘಟನೆ ಜರುಗಿದೆ. ೪೦ಜನ ವಿದ್ಯಾರ್ಥಿಗಳ ಪೋಷಕರು ಶಾಲೆಯ ಶುಲ್ಕ ಕಟ್ಟದಿರುವ ಪರಿಣಾಮ ಮಕ್ಕಳ ಪರೀಕ್ಷೆಯ ಭವಿಷ್ಯವನ್ನೇ ಮರೆತು ಶಿಕ್ಷಣ ಇಲಾಖೆಯ ನಿಯಮವನ್ನು ಗಾಳಿಗೆ ತೂರಿ ಮುಖ್ಯಶಿಕ್ಷಕಿ ತಮ್ಮ ಅಧಿಕಾರ ದುರುಪಯೋಗ ಆಗಿದೆ. ಗಂಡು ಮಕ್ಕಳಿಗೆ ತೋಟವೇ ಶೌಚಾಲಯ.. ೮೯ಜನ ವಿದ್ಯಾರ್ಥಿಗಳು ಇರೋದು ೪ಶೌಚಾಲಯ ಮಾತ್ರ. ಗಂಡು ಮಕ್ಕಳಿಗೆ ಜರೂರು ಆದರೇ ತೆಂಗಿನ ತೋಟಕ್ಕೆ ಹೋಗಬೇಕಂತೆ. ಇದನ್ನು ಶಾಲೆಯ ಮುಖ್ಯಶಿಕ್ಷಕಿಯೇ ಹೇಳುವ ಮಾತು. ಇನ್ನೂ ಶುದ್ದ ಕುಡಿಯುವ ನೀರು ಸಂಪೂರ್ಣ ಮರೀಚಿಕೆ ಆಗಿದೆ. ಕಟ್ಟಡದ…
ಚಿಕ್ಕನಾಯಕನಹಳ್ಳಿ: ಇಂದು ವೃತ್ತಿನಿರತರಾಗಿದ್ದುಕೊಂಡು ತಮ್ಮ ಜೀವನಕ್ಕಾಗಿ ಪೋಟೊ ಮತ್ತು ವಿಡಿಯೋ ಗ್ರಾಫರ್ ಕೆಲಸವನ್ನು ತಮ್ಮ ಕಸುಬನ್ನಾಗಿಸಿಕೊಂಡಿರುವವರ ಬದುಕು ಮೂರಾಬಟ್ಟೆಯಾಗುತ್ತಿದೆ ಕಾರಣ ಹವ್ಯಾಸಿ ಪೋಟೊ ಗ್ರಾಫರ್ಗಳು, ಇವೆಂಟ್ಸ್ ಆರ್ಗನೈಸರ್ಗಳು, ಸಾಮಾಜಿಕ ಜಾಲತಾಣಗಳಿಂದ ನಮ್ಮನ್ನು ಗ್ರಾಹಕರೇ ರಕ್ಷಿಸಬೇಕಾಗಿದೆ ಅನಧಿಕೃತರಿಂದ ದೂರಿವಿದ್ದು ಅಧಿಕೃತ ಪೋಟೊ ಗ್ರಾಫರ್ಗಳಿಗೆ ಕೆಲಸ ನೀಡಬೇಕೆಂದು ವಿಡಿಯೋ ಮತ್ತು ಪೋಟೊ ಗ್ರಾಫರ್ಗಳಸಂಘದ ಜಿಲ್ಲಾಧ್ಯಕ್ಷ ಸುನೀಲ್ಕುಮಾರ್ ತಿಳಿಸಿದರು. ಪಟ್ಟಣ ಪ್ರವಾಸಿ ಮಂದಿರದಲ್ಲಿ ತಾಲ್ಲೂಕಿನ ವಿಡಿಯೋ ಮತ್ತು ಪೋಟೊ ಗ್ರಾಫರ್ಗಳ ಸಭೆಯಲ್ಲಿ ಮಾತನಾಡಿದ ಅವರು ಪೋಟೊ ಹಾಗೂ ವಿಡಿಯೋ ಗ್ರಾಫರ್ಗಳಿಗೆ ಕಲ್ಯಾಣಮಂಟಪಗಳು, ಸಮುಧಾಯಭವನಗಳು, ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳೇ ಜೀವನ ನಿರ್ವಹಣೆಗೆ ಅಧಾರ ಅದರೆ ಇತ್ತೀಚಿನ ದಿನಗಳಲ್ಲಿ ಕಲ್ಯಾಣಮಂಟಪದ ಮಾಲೀಕರೇ ಎಲ್ಇಡಿ ಸ್ಕಿçÃನ್ ಅಳವಡಿಸುತ್ತಿರುವ ಕಾರಣ ಇದು ವೃತ್ತಿನಿರತ ವಿಡಿಯೋ ಮತ್ತು ಪೋಟೊ ಗ್ರಾಫರ್ಗಳ ಕೆಲಸ ಕುಸಿಯುತ್ತಿದೆ ಮಾನವೀಯ ಹಿನ್ನೇಲೆಯಲ್ಲಿ ಕಲ್ಯಾಣ ಮಂಟಪಗಳಲ್ಲಿ ಎಲ್ಇಡಿ ಸ್ಕಿçÃನ್ ಆಳವಡಿಸಬೇಡಿ ಎಂದು ಈ ಮೂಲಕ ಮನವಿ ಮಾಡುತ್ತಿದ್ದು ಇದರೊಂದಿಗೆ ಇತ್ತಿಚೇಗೆ ಕೆಲವರು ಸಾಮಾಜಿ ಜಾಲತಾಣಗಳಲ್ಲಿ ಕಾರ್ಯಕ್ರಮಗಳ ಅರ್ಡ್ಗಳನ್ನು ಹಿಡಿಯುತ್ತಿದ್ದು…
ತುರುವೇಕೆರೆ: ವಿಧಾನ ಪರಿಷತ್ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ನೇತೃತ್ವದಲ್ಲಿ ಮುಂಬರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾ ಯಿತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು. ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ವಿಧಾನ ಪರಿಷತ್ ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಕಛೇರಿಯಲ್ಲಿ ಇತ್ತಿಚೀಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಜನರ ಮನಸ್ಸನ್ನು ಸೂರೆಗೊಂಡಿದೆ. ಕಾಂಗ್ರೆಸ್ ಬಡವರ ಪರವಾದ ಪಕ್ಷ ಎಂಬ ಮಾತು ಎಲ್ಲೆಡೆ ಇದೆ. ಈಗಾಗಲೇ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ನಲ್ಲಿ ಪುನಃ ಗ್ಯಾರಂಟಿಗಳನ್ನು ಮುಂದು ವರೆಸಿದ್ದಾರೆ. ಇವೆಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾಗಿದೆ. ಮುಂಬರುವ ಯಾವುದೇ ಚುನಾ ವಣೆಯಲ್ಲಿ ಕಾಂಗ್ರೆಸ್ ಪಕ್ಷ ಜನರ ಆಶೀರ್ವಾದ ಗಳಿಸಲಿದೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಧೃಢವಾಗಿದೆ. ಹಾಗೆಯೇ ತುರುವೇಕೆರೆ ವಿಧಾನಸಭಾ ಕ್ಷೇತ್ರ ದಲ್ಲೂ ಸಹ…
ತುರುವೇಕೆರೆ: ತಾಲೂಕಿನ ಮುನಿಯೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು. ಸುಮಾರು ೨೦ ಲಕ್ಷ ರೂ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲಾ ಪಂಚಾಯಿತಿ ವತಿಯಿಂದ ನಿರ್ಮಾಣ ಮಾಡ ಲಾಗುತ್ತಿರುವ ಈ ಕಟ್ಟಡವನ್ನು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಉತ್ತಮ ಗುಣ ಮಟ್ಟದಲ್ಲಿ ನಿರ್ಮಾಣ ಮಾಡಬೇಕೆಂದು ಶಾಸಕರು ಸೂಚಿಸಿದ ಅವರು ಅಂಗನವಾಡಿ ಮತ್ತು ಅಂಗನವಾಡಿ ಸಹಾಯಕಿಯರಿಗೆ ಗೌರವಯು ತವಾದ ಸಂಬಳ ನೀಡಿ ಎಂದು ಸರ್ಕಾರವನ್ನು ಒತ್ತಾಯಿಸಲಾಗಿದೆ. ಮಕ್ಕಳಲ್ಲಿ ಚುಟುವಟಿಕೆಗಳು ರೂಪುಗೊಳ್ಳಲು ಅಂಗನವಾಡಿ ಕೇಂದ್ರಗಳು ಸಹಾಯಕವಾಗಿವೆ. ಅಲ್ಲಿನ ಸಿಬ್ಬಂದಿ ಮಕ್ಕಳನ್ನು ತಮ್ಮ ಮಕ್ಕಳಂತೆಯೇ ಕಾಣಬೇಕೆಂದು ಶಾಸಕರು ಕಿವಿಮಾತು ಹೇಳಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕ ಎಂ.ಡಿ. ಲಕ್ಷಿ÷್ಮÃನಾರಾಯಣ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಟಿ.ಲಕ್ಷಿ÷್ಮÃ ವೆಂಕ ಟೇಶ್, ಸದಸ್ಯರಾದ ಮೋಹನ್, ವಿಶ್ವಮೂರ್ತಿ, ರೂಪ ಈಶ್ವರ್, ಕಾಂತರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಲೀಲಾ ವತಿ, ಮುಖಂಡರಾದ ಎಂ.ಡಿ.ಮೂರ್ತಿ, ಕೋಳಿ ವೆಂಕ ಟೇಶ್, ಲಿಂಗರಾಜು,…
ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು. ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ ೧೬೮ ಪರಿಶಿಷ್ಟ ಜಾತಿ ಹಾಗೂ ೩೨ ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ ಒಟ್ಟು ೨೦೦ ಜನ ಪತ್ರಕರ್ತರು ಈ ಯೋಜನೆಯಡಿ ಲ್ಯಾಪ್ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎಂ.ನರೇAದ್ರ ಸ್ವಾಮಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ, ಆಯುಕ್ತ ಹೇಮಂತ್ ಎಂ.ನಿAಬಾಳ್ಕರ್ ಸೇರಿದಂತೆ ಹಲವರು…