ತುಮಕೂರು ಬಿಜೆಪಿಯ ತುಮಕೂರು ಜಿಲ್ಲಾ ಒಬಿಸಿ ಮೋರ್ಚಾದ ಸಮಾವೇಶ ಗುಬ್ಬಿಯ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಮಾರ್ಚ್ 07ರ ಮಂಗಳವಾರ ನಡೆಯಲಿದೆ. ಈ ಸಮಾವೇಶಕ್ಕೆ ತುಮಕೂರು ಸಂಘಟನಾತ್ಮಕ ಜಿಲ್ಲೆಯ ಸುಮಾರು 25000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷ ಆಯರಹಳ್ಳಿ ಶಂಕರಪ್ಪ ತಿಳಿಸಿದರು. ಇವರು ತುಮಕೂರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಿದ ಜಿಲ್ಲಾ ಒಬಿಸಿ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳ ಸಮಾವೇಶದ ಪೂರ್ವಬಾವಿ ಸಭೆಯಲ್ಲಿ ಮಾತನಾಡುತ್ತಾ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಡಬ್ಬಲ್ ಇಂಜಿನ್ ಸರ್ಕಾರಗಳು ಹಿಂದುಳಿದ ವರ್ಗದ ಜನಾಂಗದ ಶ್ರೇಯಾಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ನೀಡಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಆದ್ಯ ಗಮನ ನೀಡಿದೆ. ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳ ಮೂಲಕ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಭಾರೀ ಕೊಡುಗೆ ನೀಡಿರುವ ಡಬ್ಬಲ್ ಇಂಜಿನ್ ಸರ್ಕಾರಗಳಿಗೆ ಅಭಿನಂದಿಸಲು ಮತ್ತು ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳ ಮತದಾರರು ಮತದಾನ ಮಾಡಲು ಪ್ರೇರೇಪಿಸಲು ಬೃಹತ್ ಸಮಾವೇಶವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರವರ ನೇತೃತ್ವದಲ್ಲಿ ಆಯೋಜಿಸಲಾಗಿದೆ ಎಂದರು.…
Author: News Desk Benkiyabale
ತುಮಕೂರು ಶ್ರಮಿಕ ವರ್ಗಕ್ಕೆ ಸೇರಿದ ಬೆಸ್ತರ(ಮೀನುಗಾರರ) ಸಮುದಾಯವನ್ನು ಗುರುತಿಸಿ, ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿರುವ ಪಕ್ಷವೇಂದರೆ ಆದು ಕಾಂಗ್ರೆಸ್ ಮಾತ್ರ ಎಂದು ಕೆಪಿಸಿಸಿ ಮೀನುಗಾರರ ಘಟಕದ ರಾಜ್ಯಾಧ್ಯಕ್ಷ ಮಂಜುನಾಥ್ ಬಿ.ಸುಣಗಾರ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಆಯೋಜಿಸಿದ್ದ ಡಿಸಿಸಿ ಮೀನುಗಾರರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು, ಕಾಂಗ್ರೆಸ್ ಪಕ್ಷ ಪ್ರತಿ ಬಾರಿಯ ಚುನಾವಣೆಯಲ್ಲಿಯೂ ಮೀನುಗಾರರು, ಮೊಗವೀರರು, ಬೆಸ್ತರು ಹೀಗೆ ಸುಮಾರು 39 ವಿವಿಧ ಹೆಸರಿನಲ್ಲಿ ಗುರುತಿಸಿಕೊಂಡಿರುವ ಸಮುದಾಯಗಳಿಗೆ 5-8 ಸೀಟುಗಳನ್ನು ನೀಡಿ, ನಮ್ಮಗಳ ರಾಜಕೀಯ ಅವಕಾಶ ಕಲ್ಪಿಸಿದೆ.ಆದರೆ ಬಿಜೆಪಿ ಅತಿ ಹೆಚ್ಚು ಜನಸಂಖ್ಯೆ ಇರುವ ಗುರುಮಿಠಕಲ್ ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಅವಕಾಶ ನೀಡುತ್ತಿದೆ. ಜೆಡಿಎಸ್ನಿಂದ ಇದುವರೆಗೂ ನಮ್ಮ ಸಮುದಾಯ ಒಬ್ಬರಿಗೂ ಟಿಕೇಟ್ ನೀಡಿಲ್ಲ. ಹಾಗಾಗಿ ಮೊಗವೀರ ಸಮುದಾಯ ಈ ಬಾರಿ ಕಾಂಗ್ರೆಸ್ ಪಕ್ಷದ ಕೈ ಬಲಪಡಿಸುವ ಕೆಲಸ ಮಾಡಬೇಕೆಂದರು. ರಾಜ್ಯದಲ್ಲಿ ಸುಮಾರು 85 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಮೋಗವೀರ ಸಮುದಾಯವನ್ನು ಗುರುತಿಸಿ ಮೊದಲ ಬಾರಿ…
ತುಮಕೂರು ಯಡಿಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಕ್ಷೇತ್ರದ 2023ನೇ ಸಾಲಿನ ಜಾತ್ರಾ ಕಾರ್ಯಕ್ರಮ ಮಾರ್ಚ್ 21, 2023ರಿಂದ ಪ್ರಾರಂಭಗೊಂಡು ಏಪ್ರಿಲ್ 6ರವರೆಗೆ ಜರುಗಲಿದ್ದು, ಜಾತ್ರಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖಾ ಕಾರ್ಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಾತ್ರಾ ಕಾರ್ಯಕ್ರಮದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಮುಖವಾಗಿ ಜಾತ್ರೆಗೆ ಬರುವ ಜಾನುವಾರುಗಳಿಗೆ ಸೋಂಕು ರೋಗ ಬಾರದಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾತ್ರೆಗೆ ಆಗಮಿಸುವ ರಾಸುಗಳಿಗೆ ಜಾತ್ರೆಗೆ ಮುನ್ನ 15 ದಿನಗಳ ಹಿಂದೆ ಲಸಿಕೆ ಹಾಕಿರುವ ಪ್ರಮಾಣ ಪತ್ರ ಪಡೆಯಬೇಕು ಮತ್ತು ಉತ್ತಮ ರಾಸುಗಳಿಗೆ ಬಹುಮಾನ ನೀಡುವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಆಯ್ಕೆ ಸಮಿತಿಯನ್ನು ರಚಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು. ಜಾತ್ರಾ ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಶಿಸ್ತು ಪರಿಪಾಲನೆಗೆ ಹೆಚ್ಚಿನ ಸಂಖ್ಯೆಯಲ್ಲಿ…
ತುಮಕೂರು ನಗರದ ಹೊರವಲಯದ ಶ್ರೀ ಅತಿಶಯ ಕ್ಷೇತ್ರ ಮಂದರಗಿರಿಯಲ್ಲಿ ಭಾರತದಲ್ಲೇ ಪ್ರಥಮವಾದ ವಿಶಿಷ್ಟ ವಾಸ್ತು ರಚನೆಯೊಂದಿಗೆ ಮಹಾವೀರ ತೀರ್ಥಂಕರರ ದಿವ್ಯಾ ಕಾಶ ಸಮವಶರಣವನ್ನು ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಸಮವಶರಣದ ಪಂಚಕಲ್ಯಾಣ ಪ್ರತಿಷ್ಠಾಪನಾ ಮಹೋತ್ಸವ ಸಮಾರಂಭ ಮಾ. 8 ರಿಂದ 13 ರವರೆಗೆ 6 ದಿನಗಳ ಕಾಲ ನಡೆಯಲಿದೆ. ಮಂದರಗಿರಿಯಲ್ಲಿ 6 ದಿನಗಳ ಕಾಲ ನಡೆಯುವ ಈ ಸಮಾರಂಭ ರಾಷ್ಟ್ರಮಟ್ಟದ್ದಾಗಿದ್ದು, ಸಹಸ್ರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜೈನ ಮುನಿಗಳು, ಮಾತಾಜಿಗಳು, ದಕ್ಷಿಣ ಭಾರತದ ವಿವಿಧ ಜೈನ ಮಠಗಳ ಪೀಠಾಧೀಶರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವನಾಥಸ್ವಾಮಿ ಜಿನ ಮಂದಿರ ಸಮಿತಿಯ ಅಧ್ಯಕ್ಷ ನಾಗರಾಜು ಎಸ್.ಜೆ. ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು. ಮಂದರಗಿರಿಯಲ್ಲಿ ದಿಗಂಬರ ಜೈನ ಮುನಿಗಳಾದ ಶ್ರೀ ಅಮೋಘ ಕೀರ್ತಿ ಮಹಾರಾಜ್ ಮತ್ತು ಅಮರಕೀರ್ತಿ ಮಹಾರಾಜ್ ಅವರ ನೇತೃತ್ವದಲ್ಲಿ ವಿಭಿನ್ನವಾದ ಶ್ರೀ ದಿವಾಕಾಶ ಸಮವಶರಣ ನಿರ್ಮಾಣಗೊಂಡಿದೆ. ಮೂರು ವರ್ಷಗಳಿಂದ ನಿರಂತರವಾಗಿ ಕಾಮಗಾರಿ ನಡೆಯುತ್ತಿದ್ದು, ನೂರಾರು ನುರಿತ…
ತುಮಕೂರು ಕೊರಟಗೆರೆ ಕ್ಷೇತ್ರದ ವಿದ್ಯಾವಂತ ನಿರುದ್ಯೋಗಿ ಯುವಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಮಾರ್ಚ್ 05ರ ಭಾನುವಾರ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಟಿಕೇಟ್ ಆಕಾಂಕ್ಷಿ ಹಾಗೂ ಸಮಾಜ ಸೇವಕ ಕೆ.ಎಂ.ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಸ್ಥಳೀಯ ಮತ್ತು ಬೆಂಗಳೂರಿನ ವಿವಿಧೆಡೆಗಳಿಂದ ಸುಮಾರು 50ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗಾರ್ಥಿಗಳನ್ನು ಅರಿಸಿ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುತಿದ್ದು,ಸ್ಕ್ರೀನಿಂಗ್ ನಂತರ ಆಯ್ಕೆಯಾಗುವ ಆರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ವಿತರಿಸಲಾಗುವುದು ಎಂದರು. ಕೊರಟಗೆರೆ ತಾಲೂಕು ಅಲ್ಲದೆ ಜಿಲ್ಲೆಯ ವಿವಿಧಡೆಗಳಿಂದ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸ ಬಹುದಾಗಿದೆ.ಐಟಿಐ,ಡಿಪ್ಲಮೋ,ಬಿ.ಎಸ್ಸಿ,ಬಿಕಾಂ,ಎಂಬಿಎ,ಎಂ.ಕಾಂ, ಐಐಟಿ ಮತ್ತು ಬಿಇ ಕಲಿತವರು ಮೇಳದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.ಮೇಳಕ್ಕೆ ಬರುವ ಸಂದರ್ಭದಲ್ಲಿ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳ ಜೊತೆಗೆ,ಆಧಾರ್ ಕಾರ್ಡು ಹಾಗೂ ಭಾವಚಿತ್ರದೊಂದಿಗೆ ಹಾಜರಿರಬೇಕು. ಮಾರ್ಚ್ 05ರ ಭಾನುವಾರ ನಡೆಯುವ ವೇಳವನ್ನು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟಿಸಲಿದ್ದು,ಮಾಜಿ ಶಾಸಕ…
ತುಮಕೂರು ನಗರದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಾರ್ಚ್ 5ರಂದು ಹಮ್ಮಿಕೊಂಡಿರುವ “ಫಲಾನುಭವಿಗಳ ಸಮ್ಮೇಳನ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ಸಂಜೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಜರುಗಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಮಾರ್ಚ್ 5ರ ಮುಖ್ಯಮಂತ್ರಿಗಳ ಕಾರ್ಯಕ್ರಮದ ಆಯೋಜನೆಯಲ್ಲಿ ಹಾಗೂ ಶಿಷ್ಟಾಚಾರದ ಪಾಲನೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಅಚ್ಚುಕಟ್ಟಾಗಿ ಏರ್ಪಡಿಸಲು ವಿವಿಧ ಅಧಿಕಾರಿಗಳನ್ನು ನಿಯೋಜಿಸಿ, ಕರ್ತವ್ಯಗಳನ್ನು ಸೂಚಿಸಲಾಗಿದೆ ಎಂದು ಸಚಿವರಿಗೆ ತಿಳಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ತಾಲ್ಲೂಕುಗಳಿಂದ ವಿವಿಧ ಯೋಜನೆಗಳ 25,000 ಫಲಾನುಭವಿಗಳು ಆಗಮಿಸಲಿದ್ದು, ಫಲಾನುಭವಿಗಳನ್ನು ಕರೆ ತರಲು ಕೆಎಸ್ಆರ್ಟಿಸಿ ಹಾಗೂ ಖಾಸಗಿ ಸೇರಿದಂತೆ 358 ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು. ನಂತರ ಜಿಲ್ಲಾಧಿಕಾರಿಗಳು ಮಾತನಾಡುತ್ತಾ,…
ತುಮಕೂರು ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 25 ಸಾವಿರ ರೂ ನೀಡಬೇಕು, ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಮಾರಾಟ ವಾಗುವುದನ್ನು ತಡೆಯಲು ನ್ಯಾಫೇಡ್ ಮೂಲಕ ಖರೀದಿಸಲು ಮುಂದಾಗಬೇಕು ಹಾಗು ವಿದೇಶಗಳಿಂದ ಅಮದಾಗುತ್ತಿರುವ ಕೊಬ್ಬರಿಗೆ ಹೆಚ್ಚಿನ ಸುಂಕ ವಿಧಿಸಿ, ಕೊಬ್ಬರಿ ಬೆಳೆಗಾರರನ್ನು ರಕ್ಷಿಸುವಂತೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು ರೈತ ಸಂಘ ಹಾಗು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದ ಪಟೇಲ್ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಧಿಕಾರಿ ಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಈ ವೇಳೆ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್, ಸರಕಾರವೇ ನಿಗಧಿಪಡಿಸಿದ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ರೈತರ ಉತ್ಪನ್ನಗಳನ್ನು ಖರೀದಿಸುವುದು ಕಾನೂನಿನ ಪ್ರಕಾರ ತಪ್ಪು ಆದರೆ ರಾಜ್ಯದಲ್ಲಿ ಸರಕಾರವೇ ನಿಗಧಿಪಡಿಸಿದ ಬೆಂಬಲ ಬೆಲೆ 11750 ಕ್ಕಿಂತ ಕಡಿಮೆ ಬೆಲೆಗೆ ಮುಕ್ತ ಮಾರುಕಟ್ಟೆಯಲ್ಲಿ ಕೊಬ್ಬರಿಯನ್ನು ಕೊಳ್ಳಲಾಗುತ್ತಿದೆ.ಇಂತಹ…
ತುಮಕೂರು ಭಾರತೀಯ ಜನತಾ ಪಾರ್ಟಿಯ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರವನ್ನು ಆರಂಭಿಸಿದರು. ಶ್ರೀಕ್ಷೇತ್ರದಲ್ಲಿ ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದ ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಮಾಜಿ ಸಚಿವ ಶಿವಣ್ಣ ಅವರು ಮತದಾರರ ಮನೆ ಮನೆಗೆ ತೆರಳಿ ಪಕ್ಷದ ಹಾಗೂ ತಮ್ಮ ಅಧಿಕಾರಾವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಡುವ ಕಾರ್ಯವನ್ನು ಕೈಗೊಂಡರು. ತಮ್ಮ ಅಭಿಮಾನಿಗಳು, ಹಿತೈಷಿಗಳೊಂದಿಗೆ ಪ್ರಚಾರ ಕಾರ್ಯವನ್ನು ಆರಂಭಿಸಿದ ಮಾಜಿ ಸಚಿವ ಎಸ್. ಶಿವಣ್ಣ ಅವರು ಮಾತನಾಡಿ, ಮಹಾತ್ಮರ ಸನ್ನಿಧಿಯಿಂದ ಒಳ್ಳೆಯ ಕೆಲಸ ಆರಂಭಿಸುವುದು ವಾಡಿಕೆ. ನಾನು ಶ್ರೀಕ್ಷೇತ್ರದ ಭಕ್ತ. ಹಾಗಾಗಿ ಯಾವುದೇ ಒಂದು ಒಳ್ಳೆಯ ಕೆಲಸ ಮಾಡುವಾಗ ಇಲ್ಲಿಂದಲೇ ಶುರು ಮಾಡುವುದು ನನ್ನ ಪದ್ದತಿ ಎಂದರು. 1994 ರಿಂದ ನಾನು ತುಮಕೂರು ನಗರ ಕ್ಷೇತ್ರದಲ್ಲಿ…
ತುಮಕೂರು ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ಮತ್ತು ಪ್ರಗತಿ ರಥಕ್ಕೆ ಸಿದ್ದಗಂಗಾ ಮಠದಲ್ಲಿಂದು ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಚಾಲನೆ ನೀಡಿದರು. ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ರಥಯಾತ್ರೆ ಹಾಗೂ ವಿಜಯರಥಯಾತ್ರೆ ಕುರಿತು ಮಾತನಾಡಿದ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ರಾಜ್ಯಾದ್ಯಂತ ಈ ವಿಜಯ ರಥಯಾತ್ರೆ ನಡೆಯುತ್ತಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸರ್ಕಾರದ ಸಾಧನಗಳ ಕುರಿತು ಜನರಿಗೆ ಮನದಟ್ಟು ಮಾಡಿಕೊಡುವ ನಿಟ್ಟಿನಲ್ಲಿ ದೊಡ್ಡ ಎಲ್.ಸಿ.ಡಿ. ಸ್ಕ್ರೀನ್ ಇರುವ ವಾಹನದ ಮೂಲಕ ಕಾರ್ಯಕರ್ತರು ಪ್ರತಿ ಬಡಾವಣೆ, ಮನಗೆ ತೆರಳಿ ಪಕ್ಷದ ಕರಪತ್ರ ಹಂಚುವ ಜತೆಗೆ, ಪ್ರಣಾಳಿಕೆಗೆ ಅಗತ್ಯ ಸಲಹೆ, ಸೂಚನೆಗಳನ್ನು ಪಡೆಯಲಿದ್ದಾರೆ ಎಂದರು. ಈಗಾಗಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಚಾಮರಾಜನಗರ ಜಿಲ್ಲೆ ಮಲೆಯ ಮಹದೇಶ್ವರ ದೇವಾಲಯದ ಆವರಣದಲ್ಲಿ ವಿಜಯ ಸಂಕಲ್ಪ ಮತ್ತು ವಿಜಯರಥಯಾತ್ರೆಗೆ ಚಾಲನೆ ನೀಡಿದ್ದಾರೆ. ನಾವು…
ತುರುವೇಕೆರೆ ತಾಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಲೋಕಮ್ಮನಹಳ್ಳಿ ಕಾಂತರಾಜ್ ಮಾತನಾಡಿ ಲೋಕಮ್ಮನಹಳ್ಳಿ ಪೀಡರ್ ವ್ಯಾಪ್ತಿಯ ಸುಮಾರು 15 ಕ್ಕೂ ಹೆಚ್ಚು ಗ್ರಾಮಗಳ ವ್ಯಾಪ್ತಿಯ ರೈತರುಗಳು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಪೋರೈಕೆ ಇಲ್ಲದೆ ಪರಿತಪಿಸುವಂತಾಗಿದೆ. ಹಗಲು 3 ಗಂಟೆ ಹಾಗೂ ರಾತ್ರಿ ವೇಳೆ 4 ಗಂಟೆ ಮೂರು ಪೇಸ್ ವಿದ್ಯುತ್ ನೀಡಬೇಕೆಂದು ಸರಕಾರದ ಆದೇಶವಿದೆ. ಕರ್ನಾಟಕ ವಿದ್ಯುತ್ಚಕ್ತಿ ಆಕ್ಟ್ ಉಲ್ಲಂಘಿಸುವ ಮೂಲಕ ಬೆಸ್ಕಾಂ ಅಧಿಕಾರಿಗಳು ರೈತರನ್ನು ವಂಚಿಸುತ್ತಿದ್ದಾರೆ ಎಂದು ದೂರಿದರು. ವಿದ್ಯುತ್ ಸಮಸ್ಯೆ ಬಗ್ಗೆ ಬೆಸ್ಕಾಂ ಅಧಿಕಾರಿಗಳನ್ನು ಕೇಳಿದರೇ ಉಡಾಫೆ ಉತ್ತರ ನೀಡುವ ಮೂಲಕ ರೈತರನ್ನು ಅಸಡ್ಡೆಯಿಂದ ಕಾಣುತ್ತಾರೆ. ಒಟ್ಟಾರೇ ಬೆಸ್ಕಾಂ ರೈತ ವಿರೋಧಿ ಅನುಸರಿಸುತ್ತಿದೆ .ಬೆಸ್ಕಾಂ ಕಚೇರಿ ಮುಂದೆ ಇಂದು ಕೆಲವೇ ರೈತರು ಸಾಂಕೇತಿಕ ಧರಣಿ ನಡೆಸಿ ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಇದಾಗಿದ್ದು ಅಧಿಕಾರಿಗಳು ತಕ್ಷಣ ಮೂರು ಪೇಸ್ ವಿದ್ಯುತ್ತನ್ನು ನೀಡಲು ಮುಂದಾಗಲಿ, ಇಲ್ಲವಾದಲ್ಲಿ ಶೀಘ್ರ ತಾಲೂಕಿನ ಎಲ್ಲಾ ರೈತರುಗಳನ್ನು ಒಟ್ಟಾಗಿ ಸೇರಿಸಿ ಬೆಸ್ಕಾಂ…











