Author: News Desk Benkiyabale

ತುಮಕೂರು ರಾಜ್ಯದಲ್ಲಿ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಎತ್ತಿನಹೊಳೆ ಯೋಜನೆಯನ್ನು ಜಾರಿಗೆ ತಂದಿರುವುದು. ರಾಜ್ಯದ ಜನರಿಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸುವುದು ಜಿ. ಎಸ್. ಪರಮಶಿವಯ್ಯ ಅವರ ಕನಸಾಗಿತ್ತು. ಎಲ್ಲರ ಒಳಿತಿಗಾಗಿ ಸಿದ್ಧವಾದ ಯೋಜನೆಯಿದು ಎಂದು ಜಲ ಸಂಪನ್ಮೂಲ ಇಲಾಖೆಯ ಎತ್ತಿನಹೊಳೆ ಯೋಜನೆ ವಲಯದ ಮುಖ್ಯ ಅಭಿಯಂತರ ಮಾಧವ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಜಿ. ಎಸ್. ಪರಮಶಿವಯ್ಯ ಅಧ್ಯಯನ ಪೀಠ ಮತ್ತು ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಂಗಳವಾರ ಆಯೋಜಿಸಿದ್ದ ‘ಕರ್ನಾಟಕದಲ್ಲಿ ನೀರಾವರಿ ಯೋಜನೆಗಳು: ಅವಕಾಶಗಳು ಮತ್ತು ಸವಾಲುಗಳು’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಈ ಎತ್ತಿನಹೊಳೆ ಯೋಜನೆಯನ್ನು ನಿರ್ಮಿಸಿದ್ದೇವೆ. ಇದರಲ್ಲಿ ಕಲುಷಿತ ನೀರನ್ನು ಶುದ್ಧಿಕರಿಸಿ ಬಳಸಲು ಮತ್ತು ನೀರನ್ನು ನೀರಾವರಿಯಲ್ಲಿ ಡ್ರಿಪ್ ಇರಿಗೆಷನ್ ಮೂಲಕ ಬಳಸಲು ಸೌಲಭ್ಯ ಒದಗಿಸುತ್ತಿದ್ದೇವೆ. ನೀರಾವರಿ ವ್ಯವಸ್ಥೆಯಲ್ಲಿ ಸ್ಪ್ರಿಂಕ್ಲರ್ ನೀರಾವರಿ ವ್ಯವಸ್ಥೆ, ಡ್ರಿಪ್ ನೀರಾವರಿ ವ್ಯವಸ್ಥೆ, ಟ್ಯಾಂಕ್ ವ್ಯವಸ್ಥೆ,…

Read More

ಚಿಕ್ಕನಾಯಕನಹಳ್ಳಿ ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನವದಂಪತಿಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹುಳಿಯಾರುಗೇಟ್ ಬಳಿ ಶನಿವಾರ ನಡೆದಿದೆ. ಪಟ್ಟಣದ ಅಂಬೇಡ್ಕರ್ ನಗರದಬಳಿಯ ಹೆದ್ದಾರಿಯಲ್ಲಿ ಹುಳಿಯಾರು ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿ ಮುಂದೆ ಹೋಗುತ್ತಿದ್ದ ಸರ್ಕಾರಿ ಬಸ್‍ನ್ನು ಹಿಂದಿಕ್ಕುವ ಧಾವಂತದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿಗಳು ಸ್ಥಳದಲ್ಲಿಯೇ ಮೃತಪಟ್ಟರು, ಕಾರಿನ ಚಾಲಕನಿಗೆ ತೀವ್ರ ಗಾಯಗಳಾಗಿದ್ದು ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮೃತಪಟ್ಟ ದಂಪತಿಗಳಾದ ಮಧು ಹಾಗೂ ಅನುಷ ತಿಪಟೂರು ಬಳಿಯ ಮಾದಿಹಳ್ಳಿ ಗ್ರಾಮದವರಾಗಿದ್ದು, ಕೆಲ ತಿಂಗಳ ಹಿಂದೆ ವಿವಾಹವಾಗಿದ್ದರೆನ್ನಲಾಗಿದೆ. ಮದುವೆ ಕಾರ್ಯಕ್ರಮಕ್ಕಾಗಿ ಬಳ್ಳಾರಿಗೆ ತರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಲಾರಿ ಚಾಲಕ ತಪ್ಪಿಸಿಕೊಂಡಿದ್ದು, ಪ್ರಕರಣ ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ದಾಖಲಾಗಿದೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದ್ದು, ಮೃತ ದೇಹಗಳನ್ನು ಕಾರಿನಿಂದ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕರಿಸಿದರು. ಚಿತ್ರ; 11ಸಿಎನ್‍ಎಚ್1ಇಪಿ. ಶೀರ್ಷಿಕೆ: ಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಮಧು ಹಾಗೂ…

Read More

ತುಮಕೂರು ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದ ಆರಾಧ್ಯ ದೈವ  ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ದನಗಳ ಜಾತ್ರೆ ನಡೆಯುತ್ತಿದ್ದು, ರಾಜ್ಯದ ವಿವಿಧೆಡೆಯಿಂದ ರೈತರು ಜಾನುವಾರುಗಳೊಂದಿಗೆ ಸಿದ್ದಗಂಗೆಗೆ ಬಂದು ಭರ್ಜರಿ ವ್ಯಾಪಾರದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಜಾನುವಾರುಗಳಿಗೆ ಕಾಣಿಸಿಕೊಂಡಿರುವ ಚರ್ಮಗಂಟು ರೋಗದ ಹಿನ್ನೆಲೆಯಲ್ಲಿ ಜಾನುವಾರು ಜಾತ್ರೆ ನಡೆಸದಂತೆ ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀಮಠದ ವತಿಯಿಂದ ಈ ಬಾರಿ ಜಾನುವಾರು ಜಾತ್ರೆಯಲ್ಲಿ ರದ್ದುಪಡಿಸಲಾಗಿತ್ತು. ಈ ಸಂಬಂಧ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಸಹ ಮಠದ ವತಿಯಿಂದ ಜಾನುವಾರು ಜಾತ್ರೆ ನಡೆಯುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದರು. ಆದರೂ ಸಹ ಸ್ವತಃ ರೈತರೇ ರಾಸುಗಳೊಂದಿಗೆ ಸಿದ್ದಗಂಗೆಗೆ ಬಂದು ರಾಸುಗಳ ಮಾರಾಟ ಮತ್ತು ಖರೀದಿಯಲ್ಲಿ ತೊಡಗಿದ್ದಾರೆ.  ಈ ಬಾರಿ ರಾಸುಗಳ ಜಾತ್ರೆಗೆ ಸುಮಾರು 80 ಸಾವಿರ, 1 ಲಕ್ಷ ರೂ.ಗಳಿಂದ ಹಿಡಿದು 7 ರಿಂದ 8 ಲಕ್ಷ ರೂ. ಬೆಲೆಯ ರಾಸುಗಳು ಬಂದಿದ್ದು, ಎಂದಿನಂತೆ ಜಾನುವಾರುಗಳ ಖರೀದಿ ಮತ್ತು…

Read More

ತುಮಕೂರು ಸರಕಾರಿ ವೈದ್ಯರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ರೋಗಿಗಳನ್ನು ಮೇಲ್ಮಟ್ಟದ ಆಸ್ಪತ್ರೆಗೆ ರೇಪರ್ ಮಾಡುವ ಪೋಸ್ಟ್‍ಮನ್ ಕೆಲಸದ ಬದಲು, ತಮ್ಮ ಶಕ್ತಿಯನ್ನು ಅರಿತು, ಅದರ ಪೂರ್ಣ ಸದ್ವಿನಿಯೋಗಕ್ಕೆ ಮುಂದಾದರೆ, ದೇವರ ಮಕ್ಕಳಾದ ಬಡವರ ಕಣ್ಣಿಗೆ ನೀವೇ ದೇವರಾಗುತ್ತೀರಿ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಸಲಹೆ ನೀಡಿದ್ದಾರೆ. ನಗರದ ಶ್ರೀಸಿದ್ದಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿರುವ ಡಾ.ಹೆಚ್.ಎಂ.ಗಂಗಾಧರಯ್ಯ ಮೇಮೊರಿಯಲ್ ಹಾಲ್‍ನಲ್ಲಿ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ 30ನೇ ರಾಜ್ಯ ಮಟ್ಟದ ಸಮ್ಮೇಳನ ಕಲ್ಪತರು ವೈದ್ಯೋತ್ಸವಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ನೀವು ನಿಮ್ಮ ಕಲಿತ ವಿದ್ಯೆಯ ಸಂಪೂರ್ಣ ಬಳಕೆಗೆ ಮುಂದಾದರೆ ನಿಮ್ಮ ಪರವಾಗಿ ಕಾನೂನು ಮಂತ್ರಿಯಾಗಿ ನಾನು ನಿಲ್ಲಲ್ಲು ಸಿದ್ದ ಎಂದ ಅಭಯ ನೀಡಿದರು. ವೈದ್ಯರ ಕೆಲಸ ಅವಿರತ ಶ್ರಮವಿರುವ ಕೆಲಸ. ಕೋವಿಡ್ ಸಂದರ್ಭದಲ್ಲಿ ನಮ್ಮ ಸರಕಾರಿ ವೈದ್ಯರು ಹಾಗೂ ಅವರ ಸಿಬ್ಬಂದಿ ವರ್ಗ ತೆಗದುಕೊಂಡು ನಿರಂತರ ಪರಿಶ್ರಮದ ಫಲವಾಗಿ ಬಹುಬೇಗ ಸಾಂಕ್ರಾಮಿಕ ರೋಗವನ್ನು ಹತೋಟಿಗೆ ತರಲು ಸಾಧ್ಯವಾಯಿತು.ಇದಕ್ಕಾಗಿ ನಾನು ನಾಡಿನ ಎಲ್ಲ…

Read More

ತುಮಕೂರು ಡಾ. ಸಿದ್ಧಗಂಗಯ್ಯ ಹೊಲತಾಳು ನಾಡು ಸುತ್ತಿ ಕೋಶ ರಚಿಸುತ್ತಾ ಸಾಹಿತ್ಯಲೋಕಕ್ಕೆ ತಮ್ಮ ಬದುಕು ಸಮರ್ಪಿಸುತ್ತಿದ್ದಾರೆ. ಸಾವಯವ ಕೃಷಿಯಲ್ಲಿನ ವಿಶೇಷ ಆಸಕ್ತಿ ಹಾಗೂ ಕೃತಿರಚನೆಯಲ್ಲಿ ತೊಡಗಿರುವ ಅವರ ಹುರುಪು ಮತ್ತು ಉತ್ಸಾಹ ಪ್ರೇರಣಾಶೀಲವಾದದ್ದು ಎಂದು ಲೇಖಕ ಡಾ. ವಡ್ಡಗೆರೆ ನಾಗರಾಜಯ್ಯ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಅಧ್ಯಯನ ಕೇಂದ್ರವು ಆರೆಂಜ್ ಬುಕ್ಸ್ ಸಂಸ್ಥೆಯ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ. ಸಿದ್ಧಗಂಗಯ್ಯ ಹೊಲತಾಳು ಅವರ ‘ಒಳನಾಡಿನ ಒಡನಾಟ’ ಕೃತಿ ಲೋಕಾರ್ಪಣೆ-ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಕೃಷಿ ಕ್ಷೇತ್ರಕ್ಕೆ ತಂದೊಡ್ಡಿರುವ ವಿಪತ್ತು ಕೇವಲ ಕನ್ನಡ ನೆಲದ ಒಳನಾಡಿಗμÉ್ಟೀ ಅಲ್ಲದೆ ಇಡೀ ದೇಶವನ್ನೇ ವ್ಯಾಪಿಸಿದೆ. ಮುಂದಿನ ದಿನಗಳಲ್ಲಿ ಈ ಸ್ಥಿತ್ಯಂತರ ಯಾವ ಹಂತ ತಲುಪುವುದೋ ಎಂಬ ಆತಂಕವಿದೆ ಎಂದರು. ಕೃತಿ ಲೋಕಾರ್ಪಣೆ ನೆರವೇರಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ. ಎಂ. ವೆಂಕಟೇಶ್ವರಲು, ಮುಂದಿನ ದಿನಗಳಲ್ಲಿ ವಿವಿಯ ವಿದ್ಯಾರ್ಥಿಗಳೊಂದಿಗೆ ಸಿದ್ಧಗಂಗಯ್ಯ ಅವರ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡುವ ಚಿಂತನೆಯಿದೆ. ಅವರ…

Read More

ತುಮಕೂರು ಮಹಿಳೆಯರು ಮತ್ತು ಮಕ್ಕಳು ಮೋಸದ ಬಲೆಗೆ ಸುಲಭವಾಗಿ ಬೀಳುವ ಸಾಧ್ಯತೆಯಿರುವುದರಿಂದ ಅವರನ್ನು ರಕ್ಷಿಸುವುದು ಅವಶ್ಯಕವಾಗಿರುತ್ತದೆ. ಮಹಿಳೆಯರು ಮತ್ತು ಮಕ್ಕಳನ್ನು ಅನೈತಿಕ ಸಾಗಾಣಿಕೆಯಿಂದ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನೂರುನ್ನೀಸ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ, ತುಮಕೂರು ಗ್ರಾಮಾಂತರ ಇವರ ಸಹಯೋಗದಲ್ಲಿ ಆಯೋಜಿಸಿದ್ದ “ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ” ಕುರಿತಂತೆ ಪುನಶ್ಚೇತನ ತರಬೇತ್ನಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಮಹಿಳೆಯರು ಮತ್ತು ಮಕ್ಕಳು ಸಾಗಾಣಿಕೆಯಾಗುತ್ತಿರುವುದು ಶೋಚನೀಯ ಸಂಗತಿ. ಮಹಿಳೆಯರು ತಮಗೆ ಅರಿವಿಲ್ಲದೆ ಇಂತಹ ಸಮಸ್ಯೆಗಳಿಗೆ ಸಿಲುಕುತ್ತಾರೆ ಹಾಗೂ ಬಡ ಕುಂಟುಂಬದ ಹೆಣ್ಣು ಮಕ್ಕಳು ಆಮಿಷಗಳಿಗೆ ಒಳಗಾಗುತ್ತಾರೆ. ಉದ್ಯೋಗದ ಭರವಸೆ ನೀಡಿ ಮಾರಾಟ ಮಾಡಿ ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಈ ಪಿಡುಗು ಮಕ್ಕಳು, ಅಪ್ರಾಪ್ತ…

Read More

ತುಮಕೂರು ನಗರದ ಸರಕಾರಿ ಜೂನಿಯರ್ ಕಾಲೇಜು ಮೈಧಾನದಲ್ಲಿ ಚಕ್ರವರ್ತಿ ಗೆಳೆಯರ ಬಳಗದಿಂದ ಆಯೋಜಿಸಿದ್ದ ಕರ್ನಾಟಕ ರತ್ನ ಡಾ.ಪುನಿತ್ ರಾಜ್‍ಕುಮಾರ್ ಅವರ ಸ್ಮರಣಾರ್ಥವಾಗಿ ಹೊಮ್ಮಿಕೊಂಡಿರುವ 5ನೇ ವರ್ಷದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಟೆನ್ನಿಸ್‍ಬಾಲ್ ಕ್ರಿಕೆಟ್‍ನ ಅಪ್ಪು ಚಾಂಪಿಯನ್ಸ್ ಟ್ರೋನಿ ಗುರುವಾರ ಸಂಜೆ ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಹುಲ್‍ಕುಮಾರ ಶಹಾಪೂರ್‍ವಾಡ್ ಅವರು ಜೋತಿ ಬೆಳೆಸಿ,ಟೇಫ್ ಕತ್ತರಿಸುವ ಮೂಲಕ ಹೊನಲು ಬೆಳಕಿನ ನೌಕೌಂಟ್ ಕಂ ಲೀಗ್ ಟೂರ್ನಿಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಇಂತಹ ಕ್ರೀಡಾಕೂಟಗಳು ಯುವಜನರು ತಮ್ಮಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯನ್ನು ಕಲ್ಪಿಸುತ್ತೇವೆ.ಕ್ರೀಡೆಯನ್ನು ಪ್ರೋತ್ಸಾಹಿಸುವ ಮೂಲಕ ಚಕ್ರವರ್ತಿ ಗೆಳೆಯರ ಬಳಗ ಒಳ್ಳೆಯ ಕೆಲಸ ಮಾಡುತ್ತಿದೆ. ಐದನೇ ವರ್ಷದ ಟೂರ್ನಿ 100ನೇ ವರ್ಷದ ಟೂರ್ನಿಯವರೆಗೆ ಮುಂದುವರೆಯುವಂತಾಗಲಿ ಎಂದು ಶುಭ ಹಾರೈಸಿದರು. ಜಾತ್ಯಾತೀತ ಮಾನವ ವೇದಿಕೆಯ ಟಿ.ಆರ್.ಆಂಜನಪ್ಪ ಮಾತನಾಡಿ,ಅಪ್ಪು ಚಾಂಪಿಯನ್ಸ್ ಟ್ರೋಫಿ ಹೆಸರಿನಲ್ಲಿ ಚಕ್ರವರ್ತಿ ಗೆಳೆಯರ ಬಳಗದ ಯುವಜನರಿಗೆ ಸ್ಪೂರ್ತಿದಾಯಕರಾಗಿರುವ ಡಾ.ಪುನಿತ್ ರಾಜಕುಮಾರ್ ಹೆಸರಿನಲ್ಲಿ ಆಯೋಜಿಸಿ ರುವುದು ಒಳ್ಳೆಯ ಬೆಳವಣಿಗೆ.ಆಟೋಟಗಳು…

Read More

ತುಮಕೂರು ಭಾಷೆ ಬರೆವಣಿಗೆ, ಸೃಜನಶೀಲತೆಗೆ ಡಿಜಿಟಲ್ ಯುಗ ತೊಡಕಾಗಬಾರದು. ಪತ್ರಕರ್ತನಾಗುವವನಿಗೆ ತೆರೆದ ಕಣ್ಣುಗಳಿರಬೇಕು. ಸುದ್ದಿಯ ಆಳ ಅಗಲವನ್ನು ಸಂಶೋಧನೆ, ಗ್ರಹಿಕೆ, ಪ್ರಸ್ತುತಿಯ ಮುಖೇನ ಓದುಗರಿಗೆ ಉಣಬಡಿಸುವವನೇ ನಿಜವಾದ ಪತ್ರಕರ್ತ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ. ನಿರಂಜನ ವಾನಳ್ಳಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಗುರುವಾರ ಆಯೋಜಿಸಿದ್ದ ನೂತನ ಸ್ಟುಡಿಯೋ ಮತ್ತು ಪ್ರಯೋಗಾಲಯ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿ ‘ಡಿಜಿಟಲ್ ಕಾಲದಲ್ಲಿ ಭಾμÉ-ಬರೆವಣಿಗೆಯ ಪ್ರಾಮುಖ್ಯತೆ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಪಸ್ತುತ ವಿವಿಗಳಲ್ಲಿ ಪತ್ರಿಕೋದ್ಯಮ ವಿಭಾಗಗಳು ಪ್ರತಿಭಾವಂತ ಪತ್ರಕರ್ತರನ್ನು ಹೆರುವ ಸ್ಥಿತಿಯಲ್ಲಿಲ್ಲ. ಪತ್ರಿಕೋದ್ಯಮದಲ್ಲೇ ಬದುಕು ಕಟ್ಟಿಕೊಳ್ಳುವ ಹಠ, ಛಲ ಇರುವ ಸರ್ವಾಸಕ್ತರನ್ನು ತರಗತಿಗಳು ಉತ್ತಮ ಮಟ್ಟಕ್ಕೆ ಏರಿಸಬಹುದೇ ಹೊರತು, ಪತ್ರಿಕೋದ್ಯಮದ ಹಸಿವಿಲ್ಲದವರನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯುವುದು ಪ್ರಯೋಜನವಿಲ್ಲ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ. ಎಂ. ವೆಂಕಟೇಶ್ವರಲು, ವಿಶ್ವವಿದ್ಯಾನಿಲಯಗಳಲ್ಲೇ ಸಂಸ್ಥೆಯಾಗಿ ತಯಾರಾಗಿ ಹೋಗುವ ಯುವಪತ್ರಕರ್ತರೇ ಸಮಾಜದ ಬದಲಾವಣೆಗಾಗಿ ಶ್ರಮಿಸುವರು. ಪತ್ರಿಕೋದ್ಯಮ…

Read More

ತುಮಕೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಜಿಲ್ಲೆಯಾದ್ಯಂತ ನ್ಯಾಯಾಲಯಗಳಲ್ಲಿ ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ ಅವರು ತಿಳಿಸಿದರು. ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಪೆÇಲೀಸ್ ಇಲಾಖೆ ರಾಜ್ಯಾದ್ಯಂತ ಇ ಚಲನ್ ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿದ್ದು, ಸಂಚಾರಿ ದಂಡ ಪಾವತಿಗೆ 50 ಶೇಕಡಾ ರಿಯಾಯಿತಿ ನೀಡಿರುವುದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು,ಸಾರ್ವಜನಿಕರು ಸ್ವಯಂಪ್ರೇರಿತವಾಗಿ ದಂಡ ಪಾವತಿಸುತ್ತಿದ್ದು, ಪೆÇಲೀಸ್ ಠಾಣೆಯಲ್ಲಿ ದಂಡ ಪಾವತಿಗೆ ಅವಕಾಶ ನೀಡಲಾಗಿದ್ದು, ದಂಡ ವಿಧಿಸಿರುವುದರಲ್ಲಿ ಸಮಸ್ಯೆಗಳಿದ್ದರೆ ಸಂಚಾರ ನಿಯಂತ್ರಣ…

Read More

ತುಮಕೂರು ತಾಲೂಕಿನ ಕಸಬಾ ಹೋಬಳಿ ಅದಲಾಪುರ ಗ್ರಾಮದೇವತೆ ಶ್ರೀಮಾರಮ್ಮದೇವಿ ದೇವಾಲಯವು ಸರಕಾರದ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯವಾಗಿದೆ. ಸದರಿ ದೇವಾಲಯದ ಉತ್ಸವ ಮೂರ್ತಿಯನ್ನು ದೇವರ ಜಾತ್ರೆ ಸಂದರ್ಭದಲ್ಲಿ ಎಲ್ಲಾ ಕೇರಿಗಳಿಗೆ ತೆಗೆದುಕೊಂಡು ಹೋಗುವಂತೆ ದಲಿತರ ಕೇರಿಗೆ ತರುವಂತೆ ಕೇಳಿದ ದಲಿತರ ಮೇಲೆ ಸವರ್ಣೀಯರು ಹಲ್ಲೆ ನಡೆಸಿದ್ದು, ಇವರ ವಿರುದ್ದ ಕ್ರಮ ಕೈಗೊಳ್ಳುವಂತೆ ಗ್ರಾಮದ ಜನರು ಪೊಲೀಸರಿಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಗೂಳೂರು ಸಿದ್ದರಾಜು ನೇತೃತ್ವದಲ್ಲಿ ಅದಲಾಪುರ ಗ್ರಾಮದ ಹತ್ತಾರು ದಲಿತರು,ಜಿಲ್ಲಾಧಿಕಾರಿಗಳ ಕಚೇರಿಗೆ ಹಾಗೂ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಕಳೆದ ಜನವರಿ 30ರಂದು ಗ್ರಾಮದಲ್ಲಿ ಗ್ರಾಮದೇವತೆ ಶ್ರೀಮಾರಮ್ಮ(ಅದಲಾಪುರದಮ್ಮ)ದೇವಿ ಜಾತ್ರೆ ಇದ್ದು, ಜಾತ್ರೆಯ ಸಂದರ್ಭದಲ್ಲಿ ಎಲ್ಲಾ ಕೇರಿಗಳಿಗೆ ಉತ್ಸವ ಮೂರ್ತಿ ಹೋಗುವಂತೆ ತಮ್ಮ ಕೇರಿಗೂ ಉತ್ಸವ ಮೂರ್ತಿ ಕರೆದುಕೊಂಡು ಬಂದರೆ ಹರಕೆ ತೀರಿಸಲು ಅನುಕೂಲವಾಗುತ್ತದೆ ಎಂದು ಗ್ರಾಮದ ಹಿರಿಯರಿಗೆ ತಿಳಿಸಿ,ಅದಕ್ಕಾಗಿ ಶುಲ್ಕವನ್ನು ಪಾವತಿಸಲಾಗಿತ್ತು. ಅದಲಾಪುರ ಗ್ರಾಮದ ದಲಿತ ಕುಟುಂಬಕ್ಕೆ ಸೇರಿದ ಕುಮಾರಸ್ವಾಮಿ ಬಿನ್ ಹುಚ್ಚರಂಗಯ್ಯ,ಶ್ರೀನಿವಾಸ್ ಬಿನ್…

Read More