Author: News Desk Benkiyabale

ತುಮಕೂರು 2023-34 ರಾಜ್ಯ ಬಜೆಟ್ಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ಸಾಮಾಜಿಕ ನ್ಯಾಯ, ಮತ್ತು ಸಂವಿಧಾನದ ಅಶಯಗಳಂತೆ ತಾರತಮ್ಯ ಮಾಡದೆ ಅನುಧಾನ ನೀಡಲು ಅಗ್ರಹಿಸಿ ಭಾರತ ಕಮ್ಯೂನಿಷ್ಟ ಪಕ್ಷ(ಮಾಕ್ರ್ಸವಾದಿ) ಬುಧವಾರು ಜಿಲ್ಲಾಧಿಕಾರಿಗಳ ಕಛೇರಿ ಎದರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮತಾನಾಡಿದ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ದೇಶದ ಸಂವಿಧಾನವು ನಾಗರಿಕರಿಗೆ ಯಾವುದೆ ತಾರತಮ್ಯವಿಲ್ಲದೆ ಸಮಾನವಾಗಿ ನಡೆಸಿಕೊಳ್ಳುವ ಕರ್ತವ್ಯವನ್ನು ಸರ್ಕಾರಕ್ಕೆ ನೀಡಿದೆ . ಸರ್ವರಿಗೂ ಸಮಭಾವದಿಂದ ಅವರ ಅವರ ಪಾಲನ್ನು ನೀಡಬೇಕಾಗಿದೆ.. ಅದರೆ ರಾಜ್ಯ ಸರ್ಕಾರವು ಅಲ್ವ ಸಂಖ್ಯಾತರ ಜೋತೆಯಲ್ಲಿ ತಾರತಮ್ಯದಿಂದ ನಡೆದು ಕೊಳ್ಳುತ್ತಿರುವುದನ್ನು ಇತ್ತಿಚೆಗೆ ನಾಗರಿಕ ಸಮಾಜವು ಚಿಂತಿಸುವಂತೆ ಮಾಡಿದೆ. ಈ ಹಿಂದೆ ಭಾರತ ಸರ್ಕಾರವು ಅಲ್ವಸಂಖ್ಯಾತರ ಸ್ಥಿತಿ-ಗತಿಗಳನ್ನು ಅಧ್ಯಾಯನ ಮಾಡಲು ರೂಪಿಸಿದ ಡಾ; ರಾಜೆಂದ್ರ ಸಿಂಗ್ ಸಾಚರ್, ಹಾಗು ನ್ಯಾ; ರಂಗನಾಥ ಮಿಶ್ರ ಸಮಿತಿಗಳ ಶಿಪಾರಸ್ಸುಗಳನ್ನು ನೋಡಿದರೆ ಭಾರತ / ಕರ್ನಾಟಕದ ಅಲ್ವ ಸಂಖ್ಯಾತ ಸಮುದಾಯಗಳ ಸ್ಥಿತಿ- ಗತಿಗಳ ಚಿತ್ರಣವು ಸ್ವಷ್ಟವಾಗುತ್ತದೆ. ಮಾನವ ಅಭಿವೃದ್ದಿ ಸೂಚ್ಯಂಕದ ಮಾನದಂಡಗಳಲ್ಲಿ ಸಹ ಹಿಂದೆ ಬಿದ್ದಿರುವುದನ್ನು…

Read More

ತುಮಕೂರು : ತುಮಕೂರಿನ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‍ನಲ್ಲಿ ಭಾರತದ ಅತೀ ದೊಡ್ಡ ಎಚ್‍ಎಎಲ್ ಹೆಲಿಕಾಪ್ಟರ್ ಘಟಕ ಹಾಗೂ ಜಲ ಜೀವನ್ ಮಿಷನ್‍ನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕದ ಯುವಕರಿಗೆ ಉದ್ಯೋಗ ನೀಡಲು ಕೋಟ್ಯಂತರ ವೆಚ್ಚದ ಘಟಕ ಲೋಕಾರ್ಪಣೆ ಮಾಡಲಾಗಿದೆ. ಕರ್ನಾಟಕ ಅತಿ ಹೆಚ್ಚು ಯುವಕರ ಟ್ಯಾಲೆಂಟ್ ಹೊಂದಿರುವ ರಾಜ್ಯ. ಡಬಲ್‍ಇಂಜಿನ್ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದು ಕೇಳುತ್ತಾರೆ. ಇದಕ್ಕೆ ಇಂದು ಉದ್ಘಾಟನೆಗೊಂಡ ಹೆಚ್?ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಉದಾಹರಣೆಯಾಗಿದೆ ಎಂದರು. ಭಾರತೀಯರ ರಕ್ಷಣೆಗೆ ವಿದೇಶಿಯರ ಮೇಲಿನ ಅವಲಂಬನೆ ಕಡಿಮೆ ಆಗಿದೆ. ನಮ್ಮ ಸಾಮಥ್ರ್ಯವನ್ನು ಇಡೀ ವಿಶ್ವವೇ ಗಮನಿಸುತ್ತಿದೆ. ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯತ್ತ ಭಾರತ ಮುನ್ನುಗ್ಗುತ್ತಿದೆ. ಆತ್ಮನಿರ್ಭರ್ ಭಾರತ ಮೂಲಕ ಹೆಲಿಕಾಪ್ಟರ್??ಗಳ ತಯಾರಿಸಲಾಗುತ್ತದೆ ಎಂದರು. ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರಿನಲ್ಲಿ ಜಲಜೀವನ್ ಅಭಿಯಾನದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದರು. 430 ಕೋಟಿ ರೂಪಾಯಿ…

Read More

ತುಮಕೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾದ ಮಾಜಿ ಶಾಸಕ ರಫಿಕ್ ಅಹ್ಮದ್‍ಗೆ ಸೋಲಿನ ಭೀತಿ ಮತ್ತೆ ಕಾಡ್ತಾ ಇದ್ಯಾ? ಹಣ ಇಲ್ಲ ಎಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಗುಮಾನಿ ಹುಟ್ಟಿಕೊಂಡಿದೆ. ಕಾಂಗ್ರೆಸ್‍ನ ಇನ್ನೊಬ್ಬ ಟಿಕೆಟ್ ಆಕಾಂಕ್ಷಿ ಡಾ. ಬೊಮ್ಮನಹಳ್ಳಿ ಬಾಬು @ ಅಟ್ಟಿಕಾ ಬಾಬು ಮಾತು ಈ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಕೆಲದಿನಗಳ ಹಿಂದೆ ಮಸೀದಿಗಳಿಗೆ ಭೇಟಿ ಕೊಟ್ಟು ಆಡಿದ ಮಾತುಗಳ ರಫಿಕ್ ಅಹ್ಮದ್ ಸ್ಪರ್ಧೆ ಮಾಡಲ್ಲ ಎನ್ನುವುದಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ. ರಫಿಕ್ ಅಹ್ಮದ್ ನನಗೆ ಸಹಾಯ ಮಾಡುತ್ತಾರೆ. ಅವರ ಬಳಿ ಹಣ ಇಲ್ಲ. ಹಾಗಾಗಿ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅಟ್ಟಿಕಾ ಬಾಬು ಮಸೀದಿಯಲ್ಲಿ ಹೇಳಿದ್ದಾರೆ. ಅಟ್ಟಿಕಾ ಬಾಬು ಕೂಡ ಮುಸ್ಲಿಂ ಸಮುದಾಯದವನಾಗಿದ್ದು, ನನ್ನ ಹೆಸರು ಅಯೂಬ್ ನನ್ನ ತಂದೆ ಪಾಷ ಸಾಬ್ ಎಂದು ಹೇಳಿಕೊಂಡಿದ್ದಾರೆ. ಈ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಮಾಜಿ…

Read More

ತುಮಕೂರು ಇತಿಹಾಸ ಪ್ರಸಿದ್ದ ಶ್ರೀಸಿದ್ದಗಂಗಾ ಮಠದ ಶ್ರೀಚನ್ನಬಸವೇಶ್ವರ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಫೆ.08ರಿಂದ 22ರವರೆಗೆ ನಡೆಯಲಿದೆ ಎಂದು ವಸ್ತುಪ್ರದರ್ಶನ ಸಮಿತಿಯ ಕಾರ್ಯದರ್ಶಿ ಬಿ.ಗಂಗಾಧರಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಕೃಷಿ, ಅರಣ್ಯ, ತೋಟಗಾರಿಕೆ, ರೇಷ್ಮೆ ಸೇರಿದಂತೆ ಸರಕಾರದ 16, ಖಾಸಗಿಯ 5 ಮಳಿಗೆಗಳು ಸೇರಿ ಒಟ್ಟು 197ಮಳಿಗೆಗಳನ್ನು ತೆರೆಯಲಾಗಿದ್ದು,15 ದಿನಗಳ ಕಾಲ ನಡೆಯುವ ಈ ವಸ್ತುಪ್ರದರ್ಶನಕ್ಕೆ ಒಂದು ಲಕ್ಷಕ್ಕೂ ಅಧಿಕ ಜನರು ಭೇಟಿ ನೀಡುವ ನಿರೀಕ್ಷೆ ಇದೆ ಎಂದರು. ಕಳೆದ 59 ವರ್ಷಗಳಿಂದ ಈ ಭಾಗದ ಕೃಷಿಕರು, ಕೈಗಾರಿಕೋದ್ಯಮಿಗಳು ಹಾಗೂ ಜನಸಾಮಾನ್ಯರಿಗೆ ಆಯಾಯ ಕ್ಷೇತ್ರದ ಹೊಸ ಅವಿಷ್ಕಾರಗಳ ತಿಳುವಳಿಕೆ ನೀಡುವ ಉದ್ದೇಶದಿಂದ ನಡೆದಾಡುವ ದೇವರು ಎಂದೇ ಪ್ರಸಿದ್ದರಾಗಿದ್ದ ಡಾ.ಶ್ರೀಶಿವಕುಮಾರ ಸ್ವಾಮೀಜೀಗಳು ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನವನ್ನು 1964ರಲ್ಲಿ ಆರಂಭಿಸಿದರು.ಇಂದು ಇಷ್ಟು ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಏಕೈಕ ವಸ್ತು ಪ್ರದರ್ಶನ ಇದಾಗಿದೆ ಎಂದು ಗಂಗಾಧರಯ್ಯ ತಿಳಿಸಿದರು. ಜಾನುವಾರುಗಳ ಜಾತ್ರೆ ಇಲ್ಲ:ಸಿದ್ದಗಂಗಾ ಜಾತ್ರೆಯ ಸಂಬಂಧ ನಡೆಯುವ ಈ ವಸ್ತು ಪ್ರದರ್ಶನದ ಸಂದರ್ಭದಲ್ಲಿ ಜಾನುವಾರು…

Read More

ತುಮಕೂರು ಪ್ರಧಾನಿ ನರೇಂದ್ರಮೋದಿರವರು ಗುಬ್ಬಿಯ ಬಿದರೆಹಳ್ಳಿ ಕಾವಲ್‍ನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್‍ನ ಲಘು ಹೆಲಿಕ್ಯಾಪ್ಟರ್ ಕಾರ್ಖಾನೆ ಉದ್ಘಾಟನೆ ಮತ್ತು ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ತಾಲ್ಲೂಕಿನ ವ್ಯಾಪ್ತಿಯ ಮನೆ ಮನೆಗೆ ಗಂಗೆ ಹರಿಸುವ “ಜಲ್ ಜೀವನ್ ಮಿಷನ್ ಯೋಜನೆ”ಗೆ ಶಂಕುಸ್ಥಾಪನೆಯ ಸಂಬಂಧ ಸರ್ಕಾರಿ ಪ್ರಯೋಜಿತ ಕಾರ್ಯಕ್ರಮ ನಡೆಸಲು ಇದೇ ಫೆಬ್ರವರಿ 6ರ ಸೋಮವಾರ ಪ್ರಧಾನಿ ನರೇಂದ್ರಮೋದಿರವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 80 ಸಾವಿರ ಜನರು ಸೇರುವ ಸಂಭವವಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದರು. ಇವರು ಇಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿರವರು ಗುಬ್ಬಿಗೆ ಮಧ್ಯಾಹ್ನ 3.30ಕ್ಕೆ ಆಗಮಿಸಿ, ಮಧ್ಯಾಹ್ನ 4.30ರವರೆಗೆ ಸುಮಾರು 60 ನಿಮಿಷಗಳ ಕಾÀರ್ಯಕ್ರಮದಲ್ಲಿ ಭಾಗವಹಿಸಿ, ದೇಶಕ್ಕೆ ಮಹತ್ತರ ಸಂದೇಶ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಕ್ಷಣಾ ಇಲಾಖೆಯ ಕೇಂದ್ರ ಮಂತ್ರಿಗಳಾದ ರಾಜನಾಥ್‍ಸಿಂಗ್ ಹಾಗೂ ರಾಜ್ಯ ಸಚಿವ ಅಜಯ್‍ಭಟ್, ರಕ್ಷಣಾ ಇಲಾಖೆ ಹಾಗೂ ಊಂಐ ಪ್ರಮುಖ ಅಧಿಕಾರಿಗಳು, ಕೇಂದ್ರ ಹಾಗೂ ರಾಜ್ಯದ…

Read More

ತುಮಕೂರು ಭಾರತವು ಇಂದು ವಿಶ್ವದ ಗಮನವನ್ನು ಸೆಲೆಯುತ್ತಿದ್ದು, ವಿಶ್ವಗುರುವಾಗುವ ನಿಟ್ಟಿನಲ್ಲಿ ಸಾಗುತ್ತಿದೆ. ಇದಕ್ಕೆ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನಿಕಟಪೂರ್ವ ರಾಷ್ಟ್ರೀಯ ಕಾರ್ಯದರ್ಶಿ ಹರ್ಷನಾರಾಯಣ್ ತಿಳಿಸಿದರು. ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಇಂದು ಎಬಿವಿಪಿ ಆಯೋಜಿಸಿದ್ದ ತುಮಕೂರು ಜಿಲ್ಲಾ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅವರು ಭಾರತವನ್ನು ಎಲ್ಲಾ ದೇಶಗಳು ಗೌರವದಿಂದ ನೋಡುತ್ತಿವೆ. ಇಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಪ್ರಗತಿ ಮತ್ತು ಶೈಕ್ಷಣಿಕ ಉನ್ನತಿಯನ್ನು ಸಾಧಿಸಲು ಈ ದೇಶದ ಯುವ ಸಮುದಾಯವಾದ ವಿದ್ಯಾರ್ಥಿ ಸಮುದಾಯದ ಕೊಡುಗೆ ಅತ್ಯವಶ್ಯಕ ಎಂದರು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರೀಯತೆ ಬೆಳೆಸುವ ಎಬಿವಿಪಿಯು ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ನಿರಂತರ ಹೋರಾಟ ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಯುವಕರಲ್ಲಿ ನಾಯಕತ್ವಗುಣ, ಹೋರಾಟದ ಮನೋಭಾವನೆಯನ್ನು ಬೆಳೆಸುತ್ತಿದೆ ಎಂದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ಬೆಳ್ಳಾವೆಯ ಶ್ರೀ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಮಹಾಸ್ವಾಮಿಗಳು ಮಾತನಾಡಿ ವಿದ್ಯಾರ್ಥಿಗಳು ಸುಂಸ್ಕøತರಾಗಿ ತಮ್ಮ ತಂದೆ ತಾಯಿಯರನ್ನು…

Read More

ಕೊರಟಗೆರೆ ಪಟ್ಟಣದ ಮೂರನೇ ವಾರ್ಡಿನ ಕಾವಲಮ್ಮ ಎನ್ನುವ ವೃದ್ದೆಯನ್ನು ತನ್ನ ಮೊಮ್ಮಗನೇ ಮನೆಯಿಂದ ಹೊರ ಹಾಕಿದ್ದ ದಾರುಣ ಘಟನೆ ನಡೆದ ಹಿನ್ನೆಲೆ… ಮದುಗಿರಿ ಉಪ ವಿಭಾಗಾಧಿಕಾರಿಗಳ ಆದೇಶದಂತೆ ಕೊರಟಗೆರೆ ತಹಸಿಲ್ದಾರ್ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೆÇಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಿರಿಯ ನಾಗರಿಕರ ಹಕ್ಕು ಕಾಯ್ದೆ ಅಡಿಯಲ್ಲಿ ಸುಮಾರು 80 ವಯಸ್ಸಿನ ಕಾವಲಮ್ಮ ವೃದ್ದೆಗೆ ತಾನು ವಾಸಿಸುತ್ತಿದ್ದ ಮನೆಯನ್ನು ಅಜ್ಜಿಯ ಮೊಮ್ಮಗನೇ ಆದ ಮಾರುತಿ ಬಲವಂತವಾಗಿ ಮನೆಯಿಂದ ಅಜ್ಜಿಯನ್ನು ಹೊರ ಹಾಕಿದ್ದ ಇದನ್ನು ಗಮನಿಸಿದ ಅಧಿಕಾರಿಗಳು ಕಾನೂನಿನ ಪ್ರಕಾರ ಅಜ್ಜಿಗೆ ತನ್ನ ಮನೆಯನ್ನು ಹಿಂತಿರುಗಿಸಿ ಕೊಟ್ಟಿರುವ ಘಟನೆ ಕೊರಟಗೆರೆ ಪಟ್ಟಣದ ಮೂರನೇ ವಾರ್ಡಿನಲ್ಲಿ ನಡೆದಿದೆ.. ತಹಶೀಲ್ದಾರ್ ನರಸಿಂಮೂರ್ತಿ ಮಾತನಾಡಿ :- ಮಾನ್ಯ ಉಪವಿಭಾಗಾಧಿಕಾರಿಗಳ ಆದೇಶದಂತೆ ಪಟ್ಟಣದ ಮೂರನೇ ವಾರ್ಡಿನ ಕಾವಲಮ್ಮ ಲೇಟ್ ರಾಮಯ್ಯ ಎನ್ನುವವರನ್ನು ಮಾರುತಿ ಎನ್ನುವವರು ಬಲವಂತದಿಂದ ಮನೆಯಿಂದ ಹೊರ ಹಾಕಿದ್ದ ದೂರಿನ ಅನ್ವಯ ಮೇಲಾಧಿಕಾರಿಗಳ ಆದೇಶದಂತೆ ಸ್ಥಳಕ್ಕೆ ಭೇಟಿ ನೀಡಿ ವಯೋವೃದ್ದೆಯಾದ ಕಾವಲಮ್ಮನಿಗೆ ಇವರ…

Read More

ತುಮಕೂರು ಯಾವುದೋ ದಾಖಲೆ ಮಾಡಲು ಕೆಲಸ ಮಾಡುವುದು ಬೇಡ ನಾವು ಒಳ್ಳೆಯ ಉದ್ದೇಶಕ್ಕಾಗಿ ಮಾಡುವ ಕೆಲಸ ದಾಖಲೆ ಸೃಷ್ಟಿಸಲು ಎಂದು ಕಾರ್ಯಕ್ರಮದ ಅಧ್ಯಕ್ಷರಾದ ಎಈಒ ಜನಾರ್ಧನ್ ನುಡಿದರು. ತುಮಕೂರಿನಲ್ಲಿ ನಡೆದ ಏಷ್ಯಾ ಬುಕ್ ಆಪ್ ರೆಕಾರ್ಡ ಸರ್ಟಿಪಿಕೇಟ್ ವಿತರಣಾ ಸಮಾರಂಭದಲ್ಲಿ ಮಾಡನಾಡಿದ ಅವರು ಒಂದು ವರ್ಷದಿಂದ ಮಾಡಿದ ಆಯೋಚನೆ, ಯೋಜನೆಗಳ ಫಲವಾಗಿ ಕರ್ನಾಟಕದಾದ್ಯಂತ ಸುಮಾರು 253 ಶಾಲೆಗಳಲ್ಲಿ ಸುಮಾರು 60 ಸಾವಿರ ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ನಿರ್ಧಾರ ಕೈಗೊಳ್ಳುವುದು ಹೇಗೆ? ಎಂಬ ವಿಷಯದ ಬಗ್ಗೆ ತರಬೇತಿ ಕೊಡಿಸಲಾಗಿದ್ದು, ಇದು ಏಷ್ಯಾ ಬುಕ್ ಆಪ್ ರೆಕಾರ್ಡನಲ್ಲಿ ದಾಖಲೆಯಾಗಿರುವುದು ಅತ್ಯಂತ ಸಂತೋಷದ ವಿಷಯ, ಈ ಯೋಜನೆಯ ಮಾರ್ಗದರ್ಶಕರಾದ ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಟಿ.ವಿ.ಎನ್ ಮೂರ್ತಿ ರವರಿಗೆ ವಿಶೇಷ ವಂದನೆಗಳನ್ನು ಸಲ್ಲಿಸಿ ಈ ಯೋಜನೆಯು ಮುಂಬರುವ ಸಾವಿರಾರು ತರಬೇತಿಗಳಿಗೆ ಮಾದರಿಯಾಗುವುದು ಎಂಬ ಮಾತುಗಳನ್ನು ಆಡುತ್ತಾ “ಮನೋಬಲ” ತಂಡಕ್ಕೆ ಮತ್ತು ಭಾಗವಹಿಸಿದ ಎಲ್ಲಾ ತರಬೇತುದಾರರಿಗೆ ಮತ್ತು ಕೋ ಆರ್ಡಿನೇಟರ್ ಗಳಿಗೆ ಧನ್ಯವಾದಗಳನ್ನು ಅರ್ಪಿಸಿ, ಯೋಜನೆಯ ನಿರ್ದೇಶಕರಾದ ನಯನಾ ಜನಾರ್ಧನ್…

Read More

ತುಮಕೂರು ಪೋಲಿಸ್ಇಲಾಖೆ ಅತ್ಯಂತ ಜವಾಬ್ದಾರಿಯುತ ಇಲಾಖೆ. ಇಂತಹ ಪಾವಿತ್ರ್ಯತೆಯುಳ್ಳ ಇಲಾಖೆಯಲ್ಲಿ ಸದಾ ಕಾಲ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕೇಂದ್ರ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಪ್ರಶಿಕ್ಷಣಾರ್ಥಿಗಳಿಗೆ ಕರೆ ನೀಡಿದರು. ಇಲಾಖೆಯಲ್ಲಿ ಕಾರ್ಯನಿರ್ವಹಿಸುವಾಗ ಯಾವುದೇ ಟೀಕೆಗಳು ಬಂದರೂ ಅದನ್ನು ಋಣಾತ್ಮಕವಾಗಿ ತೆಗೆದುಕೊಳ್ಳದೇ ಸಕಾರಾತ್ಮಕವಾಗಿ ಪರಿಗಣಿಸಬೇಕು. ಬಡ, ಮಧ್ಯಮ ವರ್ಗದಿಂದ ಬಂದು ಪೆÇಲೀಸ್ ಇಲಾಖೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ ನಾವು ಪೆÇಲೀಸ್ ಠಾಣೆಗಳಿಗೆ ಸಾರ್ವಜನಿಕರು ಬಂದಾಗ ಸೌಜನ್ಯದಿಂದ ಜನಸ್ನೇಹಿಯಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಲಹೆ ಮಾಡಿದರು. ನಗರದ ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ನಡೆದ ನಾಗರೀಕ ಮಹಿಳಾ ಪೆÇಲೀಸ್ ಪ್ರಶಿಕ್ಷಣಾರ್ಥಿಗಳ 12ನೇ ತಂಡದ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೆÇಲೀಸ್ ಠಾಣೆಗಳಿಗೆ ದೂರುಗಳನ್ನು ಹೊತ್ತು ಬಡವರು, ದೀನ ದಲಿತರು ಬಂದಾಗ ಅವರ ಕಷ್ಟವನ್ನು ನಿವಾರಿಸುವ ಗಂಭೀರ ಪ್ರಯತ್ನ ಮಾಡಬೇಕು ಎಂದರು. ಮಹಿಳಾ ಸಬಲೀಕರಣ ಮಾಡಬೇಕಾದರೆ ನಮ್ಮನ್ನು ನಾವು ಸಶಕ್ತಗೊಳಿಸಬೇಕು, ವೃತ್ತಿ ಪರತೆಯಿಂದಲೇ ಮೆಚ್ಚುಗೆ ಗಳಿಸಬೇಕು. ಹಿರಿಯ ಅಧಿಕಾರಿಗಳು ಹಾಗೂ ಸಹದ್ಯೋಗಿಗಳ…

Read More

ಕೊರಟಗೆರೆ ದಕ್ಷಿಣ ಭಾರತದ ಐತಿಹಾಸಿಕ ಪವಿತ್ರ ಪುಣ್ಯಕ್ಷೇತ್ರ ಕ್ಯಾಮೇನಹಳ್ಳಿಯ ಶ್ರೀಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 25ಸಾವಿರಕ್ಕೂ ಅಧಿಕ ಆಂಜನೇಯ ಭಕ್ತರ ಸಮ್ಮುಖದಲ್ಲಿ ಶನಿವಾರ ಅದ್ದೂರಿಯಿಂದ ನಡೆಯಿತು. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಕ್ಯಾಮೇನಹಳ್ಳಿಯ ಶ್ರೀಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ ಕಾರ್ಯಕ್ರಮವು ಕಳೆದ 4ವರ್ಷಗಳ ನಂತರ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಆಂಜನೇಯ ಸ್ವಾಮಿ ಜಾತ್ರೆಗೆ ಆಗಮಿಸಿದ್ದ ಭಕ್ತರಿಗೆ ದಾನಿಗಳಿಂದ ಪ್ರಸಾದ ಮತ್ತು ಸಕಲ ಸೌಲಭ್ಯವನ್ನು ಕಲ್ಪಿಸಿದ್ದರು. ಆಂಜನೇಯ ದೇವಾಲಯದಲ್ಲಿ ಬ್ರಹ್ಮ ರಥೋತ್ಸವದ ಪ್ರಯುಕ್ತ ಜ.27ರಿಂದ ವಿಶೇಷ ಕಾರ್ಯಕ್ರಮ ಪ್ರಾರಂಭವಾಗಿ ಅಂಕುರಾರ್ಪಣೆ, ಗಜೇಂದ್ರ ಮೋಕ್ಷ, ಕಲ್ಯಾಣೋತ್ಸವ, ಬ್ರಹ್ಮ ರಥೋತ್ಸವ, ಮೈಲಿಗೆ ರಥೋತ್ಸವ, ಮಂಟಪೋತ್ಸವ, ವಸಂತೋತ್ಸವ, ಪಲ್ಲಕ್ಕಿ ಉತ್ಸವ, ಗರುಡೋತ್ಸವ, ಗಜವಾಹನ ಮತ್ತು ಮಹಾಭಿಷೇಕವು ಫೆ.6ಕ್ಕೆ ಮುಕ್ತಾಯವಾಗಿ ಸತತ 12ದಿನಗಳ ಕಾಲ ವಿಶೇಷವಾಗಿ ನಡೆಯಲಿವೆ. ಮಾಜಿ ಜಿಪಂ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಬ್ರಹ್ಮ ರಥೋತ್ಸವ-ದೇವಾಲಯಕ್ಕೆ ಹೂವಿನ ಅಲಂಕಾರ…

Read More