ತುಮಕೂರು ಜೀವನದಲ್ಲಿ ಕಣ್ಣಿನ ದೃಷ್ಟಿ ಬಹಳ ಮುಖ್ಯ. ಬದುಕು ಕಾಣಲು, ಜಗತ್ತಿನ ಬೆಳಕು ನೋಡಲು ಕಣ್ಣಿನ ಆರೋಗ್ಯ ಪ್ರತಿಯೊಬ್ಬರಿಗೂ ಅವಶ್ಯಕ. ಪೌಷ್ಠಿಕ ಆಹಾರ ಕಣ್ಣಿನ ಆರೋಗ್ಯದ ಕಾಳಜಿಗೆ ಪೂರಕವಾಗಲಿದೆ. ಕಣ್ಣಿನ ಆರೋಗ್ಯ ಕಾಪಾಡಿಕೊಂಡರೆ ಬದುಕು ಸುಂದರ ಎಂದು ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ ಡಾ. ಗಿರೀಶ್ ರೆಡ್ಡಿ ಜಿ. ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ್ದ ಎರಡು ದಿನದ ‘ಉಚಿತ ನೇತ್ರ ತಪಾಸಣಾ ಶಿಬಿರ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಡಿಜಿಟಲ್ ಯುಗದಲ್ಲಿ ತಾಂತ್ರಿಕ ಕೆಲಸಗಳಿಂದಾಗಿ ಸದಾ ಕಂಪ್ಯೂಟರ್, ಮೊಬೈಲ್ ಫೋನ್ ಬಳಕೆಯಿಂದಾಗಿ ಯುವಕರಲ್ಲಿ ಕಣ್ಣಿನ ಸಮಸ್ಯೆ ಬಹಳವಾಗಿ ಕಾಡುತ್ತಿದೆ. ಕತ್ತಲೆಯಲ್ಲಿ ಡಿಜಿಟಲ್ ಸ್ಕ್ರೀನ್ ಬಳಕೆಯಿಂದಾಗಿ ಕಣ್ಣಿನ ಆರೋಗ್ಯ ಹದಗೆಟ್ಟಿದೆ. ಕಣ್ಣಿನ ಆರೋಗ್ಯ ಕಾಪಾಡಲು ಆಹಾರ, ಚಟುವಟಿಕೆ ಹಾಗೂ ನಮ್ಮ ಅಭ್ಯಾಸಗಳಿಂದಷ್ಟೇ ಸಾಧ್ಯ ಎಂದರು. ತುಮಕೂರು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವ ಪೆÇ್ರ. ಪ್ರಸನ್ನ ಕುಮಾರ್ ಮಾತನಾಡಿ, ಒಂದು…
Author: News Desk Benkiyabale
ತುಮಕೂರು ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಪರಮ ಪೂಜ್ಯ ಡಾ. ಶ್ರೀ. ಶ್ರೀ. ಶಿವಕುಮಾರಮಹಾಶಿವಯೋಗಿಗಳವರ 4ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ವನ್ನು ಶ್ರೀ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿಂದಿನ 2ವರ್ಷಗಳಲ್ಲಿ ಕೋವಿಡ್-19ನಿಂದಾಗಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗಿತ್ತು. ಪ್ರಸಕ್ತ ವರ್ಷ ಪೂಜ್ಯರ ಸಂಸ್ಮರಣೋತ್ಸವವನ್ನು ದೊಡ್ಡಮಟ್ಟದಲ್ಲಿ ಆಚರಿಸಲಾಗುತ್ತಿದೆ. ಸರ್ಕಾರವು ಹಿಂದಿನ ವರ್ಷ ಈ ದಿನವನ್ನು ದಾಸೋಹ ದಿನವನ್ನಾಗಿ ಘೋಷಿಸಿತ್ತು. ಸದ್ಭಕ್ತರು, ಅಭಿಮಾನಿಗಳು, ಹಳೆ ವಿದ್ಯಾರ್ಥಿಗಳು ನಾಡಿನಾದ್ಯಂತ ಈ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸುತ್ತಿದ್ದಾರೆ. ದಿನಾಂಕ:21.01.2023ರ ಶನಿವಾರ ಬೆಳಿಗ್ಗೆ 10.30ಗಂಟೆಗೆ ಸಮಾರಂಭವನ್ನು ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರು, ಮಾಜಿಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಇವರು ಉದ್ಘಾಟಿಸಲಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಘನ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗಮಹಾಸಾಮೀಜಿಯವರ ದಿವ್ಯನೇತೃತ್ವ, ಬೆಂಗಳೂರು ಬೇಲಿಮಠದ ಅಧ್ಯಕ್ಷರಾದ ಶಿವಾನುಭವ ಚರಮೂರ್ತಿ ಪರಮಪೂಜ್ಯ ಶ್ರೀ ಶ್ರೀ ಶಿವರುದ್ರಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದೆ. ಈ ಭವ್ಯ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಚಿವರುಗಳಾದ ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಅರಗ…
ತುಮಕೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗ್ರಾಮೀಣ ಭಾಗದಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಅವರ ನಿಯೋಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಗೆ ಗುರುವಾರ ವಿವಿಧ ಕಾಂಗ್ರೆಸ್ ಮುಖಂಡರೊಂದಿಗೆ ಭೇಟಿ ನೀಡಿ ಸಿಇಒ ಅವರೊಂದಿಗೆ ಚರ್ಚಿಸಿದ ಮುರಳೀಧರ ಹಾಲಪ್ಪ ಅವರು, ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳ ಕೊಠಡಿಗಳನ್ನು ದುರಸ್ಥಿಗೊಳಿಸಿ ಶಾಲೆಗಳ ಸುತ್ತ ಕಾಂಪೌಂಡ್ ನಿರ್ಮಿಸಬೇಕು ಹಾಗೂ ಹೆಣ್ಣುಮಕ್ಕಳ ಶೌಚಾಲಯಗಳ ಬಗ್ಗೆ ತಕ್ಷಣ ಗಮನ ಹರಿಸಿ ಶೌಚಾಲಯಗಳಿಲ್ಲದ ಶಾಲೆಗಳಿಗೆ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಯಾವುದೇ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿಚಾರಿಸಿದರೆ ಚುನಾವಣೆಯತ್ತ ಬೆರಳು ಮಾಡಿ ತೋರಿಸದೆ, ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಚಾಚೂ ತಪ್ಪದೇ ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯತ್ ಅಡಿಯಲ್ಲಿ ಬರುವಂತಹ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಪಂಚಾಯಿತಿಗೆ ಬರುವ ಯಾವುದಾದರೂ ಯೋಜನೆಗಳಿಗೆ ಬಳಸದೆ ವಾಪಸ್ ಹೋಗುವಂತಹ…
ತುಮಕೂರು ಸಮಾಜಕ್ಕಾಗಿ ದುಡಿದವರನ್ನು ಈ ಜಗತ್ತು ಎಂದಿಗೂ ಮರೆಯುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿಗತ ಬೆಳವಣಿಗೆಯ ಜೊತೆಗೆ, ಈ ಸಮಾಜದ ಅಭಿವೃದ್ದಿಗೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ. ನಗರದ ಏಂಪ್ರೆಸ್ ಮಹಿಳಾ ಪದವಿಪೂರ್ವ ಕಾಲೇಜಿನ ಸಾಂಸ್ಕøತಿಕ, ಕ್ರೀಡೆ,ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಮತ್ತು ಗೈಡ್ಸ್,ಎನ್.ಎಸ್.ಎಸ್.ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡುತಿದ್ದ ಅವರು,ಸಮಾಜದ ಏಳಿಗೆಗಾಗಿ ದುಡಿದಂತಹ ಮಹಾತ್ಮಗಾಂಧಿ, ಬುದ್ದ,ಬಸವ,ಅಂಬೇಡ್ಕರ್, ಅಬ್ದುಲ್ ಕಲಾಂ ಇಂತಹವರನ್ನು ನಾಡಿನ ಜನತೆ ಇಂದಿಗೂ ಸ್ಮರಿಸುತ್ತಿದ್ದಾರೆ. ಹಾಗಾಗಿ ಮಕ್ಕಳು ಇವರುಗಳನ್ನು ಆದರ್ಶವಾಗಿಟ್ಟುಕೊಂಡು ಸಮಾಜಸೇವೆಯಲ್ಲಿ ತೊಡಗುವಂತೆ ಸಲಹೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳು ಉತ್ತಮ ಅಂಕದ ಜೊತೆಗೆ, ಒಳ್ಳೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕಿದೆ. ಆಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ.ಉತ್ತಮ ಅಂಕಗಳು ನಿಮಗೆ ಒಳ್ಳೆಯ ಉದ್ಯೋಗ, ಕೈತುಂಬ ವೇತನ ದೊರಕಿಸಬಹುದು. ಹಾಗೂ ಒಳ್ಳೆಯ ವ್ಯಕ್ತಿತ್ವ ನೀವು ಮಾಡುವ ಕೆಲಸದಲ್ಲಿ ಉನ್ನತ್ತಿಗೆ ಹೋಗಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳು ಅಂಕಗಳ ಜೊತೆಗೆ, ಒಳ್ಳೆಯ ವ್ಯಕ್ತಿತ್ವ…
ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿ ರಂಗಾಪುರ ಗ್ರಾಮ ಪಂಚಾಯಿತಿಯು 2021-22ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಗ್ರಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಉತ್ತೇಜಿಸುವ ಉದ್ದೇಶದಿಂದ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿದೆ. ರಂಗಾಪುರ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಈ ಪಂಚಾಯತಿಯಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಡಿಜಿಟಲ್ ಗ್ರಂಥಾಲಯ, ಸುಸಜ್ಜಿತ ಸಭಾಭವನ ನಿರ್ಮಾಣ ವಾಗಿದ್ದು, ಕರೋನ ಸಂಕಷ್ಟ ಕಾಲದಲ್ಲಿ ಉತ್ತಮ ನಿರ್ವಹಣೆ ತೋರಿದ್ದಾರೆ. ಗ್ರಾಮಪಂಚಾಯತಿ ಮಟ್ಟದಲ್ಲಿ ಕೆ.ಡಿ.ಪಿ ಸಭೆ ನಡೆಸಿ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ವಿವಿಧ ಇಲಾಖೆಗಳ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಗಿದೆ. ನರೇಗಾ ಯೋಜನೆಯಡಿಯಲ್ಲಿ ಎಲ್ಲಾ ಗ್ರಾಮಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ, 15 ನೇ ಹಣಕಾಸು ಯೋಜನೆಯಡಿಯಲ್ಲಿ ಗ್ರಾಮಗಳಲ್ಲಿ ಹೈಮಾಸ್ಟ್ ದೀಪಗಳ ನಿರ್ಮಾಣ, ಕೃಷಿ ಹೊಂಡ, ಗೋಕಟ್ಟೆ, ಸೋಕ್ ಪಿಟ್, ಕುರಿಶೆಡ್ ಗಳು, ದನದ ಕೊಟ್ಟಿಗೆ ಗಳನ್ನು ನಿರ್ಮಾಣ ಮಾಡಿ ಸಾರ್ವಜನಿಕ ರಿಗೆ ಅನುಕೂಲ ಕಲ್ಪಿಸಲಾಗಿದೆ. ಹಣಕಾಸು ಮತ್ತು ಕಡತಗಳನ್ನು ಸಮರ್ಪಕವಾಗಿ ನಿರ್ವಹಣೆ…
ತುಮಕೂರು ಅನವಶ್ಯಕ ಭಾವನೆಗಳನ್ನು ನಿಗ್ರಹಿಸಿ, ಚಂಚಲತೆಯನ್ನು ಹೋಗಲಾಡಿಸಿಕೊಂಡು, ಮಾನಸಿಕ ಆರೋಗ್ಯ, ನಿರ್ಮಲ ಮನಸ್ಥಿತಿ ಮತ್ತು ಏಕಾಗ್ರತೆ ಕಾಪಾಡಿಕೊಂಡವರು ಸಾಧಕರಾಗುತ್ತಾರೆ. ಮನಸಿನ ಚಿಂತನೆಗಳು ನಡವಳಿಕೆಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ನಮ್ಮ ಆಲೋಚನೆಗಳ ಮೇಲೆ ನಿಗಾವಹಿಸಬೇಕು ಎಂದು ಸ್ನೇಹ ಮನೋವಿಕಾಸ ಕೇಂದ್ರದ ಮನೋವೈದ್ಯ ಡಾ. ಲೋಕೇಶ್ ಬಾಬು ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಲೈಂಗಿಕ ದೌರ್ಜನ್ಯ ತಡೆ ಘಟಕ, ಆಪ್ತ ಸಮಾಲೋಚನ ಘಟಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ ಹಾಗೂ ಮಹಿಳಾ ಸಬಲೀಕರಣ ಘಟಕ ಬುಧವಾರ ಆಯೋಜಿಸಿದ್ದ ‘ಮಾನಸಿಕ ಆರೋಗ್ಯ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಮಾನಸಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂಥ ಸಂಶೋಧನಾ ಕ್ಷಮತೆಯನ್ನು ರೂಢಿಸಿಕೊಳ್ಳಬೇಕು. ವೈಜ್ಞಾನಿಕ ಅರಿವು ಮತ್ತು ಚಿಂತನೆಯ ಮೂಲಕ ಅನಾಹುತಗಳನ್ನು ತಡೆಯಬಹುದು ಎಂದು ತಿಳಿಸಿದರು. ನಮ್ಮ ದೇಹದ ಎಲ್ಲಾ ಅಂಗಗಳು ನಮ್ಮ ಆರೋಗ್ಯ ಮತ್ತು ಪ್ರಾಣರಕ್ಷಣೆ ಮಾಡಲು ಪ್ರತಿಕ್ಷಣವೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತವೆ. ನಾವು ಭಾವನೆಗಳನ್ನು ಹತೋಟಿಯಲ್ಲಿರಿಸಿಕೊಳ್ಳಲು ಸಾಧ್ಯವಿಲ್ಲ. ಬದಲಾಗಿ, ಅವನ್ನು ಗಮನಿಸಿ, ಸಕಾರಾತ್ಮಕ ಚಿಂತನೆಗಳ ಮೂಲಕ…
ತುಮಕೂರು ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿಯ ಡಬಲ್ ಇಂಜಿನ್ ಸರಕಾರದ ದುರಾಡಳಿತ ಮತ್ತು ಜನವಿರೋಧಿ ನೀತಿಗಳನ್ನು ಮನೆ ಮನೆಗೆ ತಿಳಿಸುವ ನಿಟ್ಟಿನಲ್ಲಿ ಕೆಪಿಸಿಸಿ ವತಿಯಿಂದ ಕೈಗೊಂಡಿರುವ ಪ್ರಜಾಧ್ವನಿ ಬಸ್ಯಾತ್ರೆ ಜನವರಿ 24 ರಂದು ತುಮಕೂರಿನಲ್ಲಿ ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಗೆಲುವು ಸಾಧಿಸಲಿದೆ ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕೆಂದು ಮಾಜಿ ಉಪಮುಖ್ಯ ಮಂತ್ರಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಎಲ್ಲಾ ಮುಖಂಡರ ತೀರ್ಮಾನದಂತೆ ಹಮ್ಮಿಕೊಂಡಿರುವ ಪ್ರಜಾಧ್ವನಿ ಬಸ್ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡುತಿದ್ದ ಅವರು, ಈಗಾಗಲೇ ಚಿತ್ರದುರ್ಗದಲ್ಲಿ ನಡೆದ ಐಕ್ಯತಾ ಸಮಾವೇಶ ಮತ್ತು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಇಡೀ ರಾಜ್ಯಕ್ಕೆ ಸ್ಪಷ್ಟ ಸಂದೇಶವನ್ನು ನೀಡಿದ್ದೇವೆ.ಅದೇ ರೀತಿಯಲ್ಲಿ ಪ್ರಜಾಧ್ವನಿ…
ಕೊರಟಗೆರೆ ರೈತರ ಬೆಳೆಯ ರಕ್ಷಣೆಗೆ ಬೆಳೆವಿಮೆ ಮತ್ತು ಕೃಷಿಬೆಳೆ ವಹಿವಾಟಿಗೆ ರಾಗಿ ಖರೀದಿಕೇಂದ್ರ ಅವಶ್ಯಕತೆ ಇದೆ. ಕೊರಟಗೆರೆ ಕ್ಷೇತ್ರದ ರೈತರ ಮನವಿಗೆ ಮಾಜಿ ಸಿಎಂ ಕುಮಾರಣ್ಣ ಉತ್ತರ ನೀಡಿದ್ದಾರೆ. ಕೊರಟಗೆರೆಯಲ್ಲಿ ರೈತಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮವು ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು. ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ರೈತನಾಯಕ ಕುಮಾರಣ್ಣನ ಜೊತೆ ರೈತಚೈತನ್ಯ ಮತ್ತು ರೈತ ಸಂಕ್ರಾಂತಿಯ ವಿಡೀಯೊ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕದ 224ಕ್ಷೇತ್ರದ ರೈತರ ಸಂಕಷ್ಟವನ್ನು ತಿಳಿಯುವ ಉದ್ದೇಶದಿಂದ ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮ ನಡೆದಿದೆ. ರೈತನ ಪರವಾಗಿ ಸದಾ ಚಿಂತಿಸುವ ರೈತನಾಯಕ ಕುಮಾರಣ್ಣ ಮುಖ್ಯಮಂತ್ರಿ ಆದರೇ ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿ ಆಗಲಿದೆ. ಕೊರಟಗೆರೆಯ ರೈತರು ಮುಸುಕಿನ ಜೋಳ ಮತ್ತು ರಾಗಿಬೆಳೆಯ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ ಎಂದು ಹೇಳಿದರು. ತೋವಿನಕೆರೆ ರೈತ ಭೀಮರಾಜು ಮಾತನಾಡಿ ಕೊರಟಗೆರೆ ಕ್ಷೇತ್ರದಲ್ಲಿ ಮಳೆಯಿಂದ ರಾಗಿಬೆಳೆಯು…
ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ಕೆಂಚಗಾನಹಳ್ಳಿ ಗ್ರಾಮದ ಸ.ಕಿ.ಪ್ರಾ.ಪಾಠಶಾಲೆಯಲ್ಲಿ ಸೋಮವಾರದಂದು ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಲೆಯ ಸಹಶಿಕ್ಷಕಿ ಹಾಗೂ ಕವಯಿತ್ರಿ ಅಶ್ವಿನಿ ಡಿ.ಎನ್. ಮಾತಾನಾಡಿ ಶಾಲೆಗಳಲ್ಲಿ ಹಬ್ಬಗಳನ್ನು ಆಚರಿಸುವ ಮೂಲಕ ಹಬ್ಬದ ಮಹತ್ವ ಹಾಗೂ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ಹೇಳಬೇಕು ಹಾಗೆಯೇ ಪ್ರತಿದಿನವೂ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸುವುದರಿಂದ ಹಾಗೂ ವಿಶೇಷ ಚಟುವಟಿಕೆಗಳನ್ನು ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಕಲಿಕಾಶಕ್ತಿಯನ್ನು ಹೆಚ್ಚಿಸಲು ಸಹಾಯಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ. ಟಿ.ವೈ, ಅಡುಗೆ ಸಿಬ್ಬಂದಿ ಭವ್ಯ ಉಪಸ್ಥಿತರಿದ್ದರು.
ತುಮಕೂರು ತುಮಕೂರು ನಗರದ ಹೆಗಡೆ ಕಾಲೋನಿ ಬಳಿ ಇರುವ ರೈಲ್ವೆ ಅಂಡರ್ ಪಾಸ್ ನಿಂದಾಗಿ ಹಲವು ಸಮಸ್ಯೆ ಆಗುತ್ತಿದ್ದು ಇದರಿಂದ ಪಾದಚಾರಿಗಳು ಈ ಭಾಗದಲ್ಲಿ ಸಂಚರಿಸಲು ಆಗುತ್ತಿಲ್ಲ ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶಸಿ ಸಾರ್ವಜನಿಕರು ಹಾಗೂ ವಾಹನ ಸವಾರರ ಸಮಸ್ಯೆ ಬಗೆಹರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು ಕಳೆದ ಮೂರು ತಿಂಗಳ ಹಿಂದೆ ಆಟೋ ಚಾಲಕ ಅಮ್ಜದ್ ಖಾನ್ ಇದೆ ಜಾಗದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿ ಅಮೃತಪಟ್ಟಿದ್ದ ಘಟನೆ ಮಾಸುವ ಮುನ್ನಡೆ ಹಲವು ಅಪಘಾತಗಳು ನಡೆದಿದ್ದು ಇದರಿಂದ ಸಾರ್ವಜನಿಕರು ಪಾದಾಚಾರಿಗಳು ಮಕ್ಕಳು ಹಾಗೂ ಮಹಿಳೆಯರು ಈ ಭಾಗದಲ್ಲಿ ಸಂಚರಿಸಲು ಸಾಕಷ್ಟು ತೊಂದರೆ ಉಂಟಾಗುತ್ತಿದೆ ಎಂದ ಅವರು ಇನ್ನು ರೈಲ್ವೆ ಇಲಾಖೆಯಿಂದ ನಿರ್ಮಿಸಿರುವ ರೈಲ್ವೆ ಅಂಡರ್ ಪಾಸ್ ನಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಿದೆ ಹಾಗೂ ಪ್ರತಿನಿತ್ಯ 20,000ಕ್ಕೂ ಹೆಚ್ಚು ಸಾರ್ವಜನಿಕರು ಸಂಚರಿಸುವ ಜನ ದಟ್ಟಣೆ ಪ್ರದೇಶವಾಗಿದ್ದು ಯಾವುದೇ ಸುರಕ್ಷತಾ…











