Author: News Desk Benkiyabale

ತುಮಕೂರು ಸಿದ್ದರಾಮೇಶ್ವರರ ಯಾವ ಜಾತಿಗೂ ಸೀಮಿತರಲ್ಲ, ಸಾಮಾಜಿಕ ಕ್ರಾಂತಿಯಲ್ಲಿ ಭಾಗವಹಿಸಿ ವಚನ ಕ್ರಾಂತಿಯನ್ನು ಮನೆಮನೆಗೆ ತಲುಪಿಸಿದ ಆದ್ಯ ಶರಣರು ಎಂದು ಶಾಸಕ ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು. ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಗುರು ಸಿದ್ದರಾಮೇಶ್ವರರು ನೀಡಿದ ಸಂದೇಶ ಇಂದಿನ ಸಮಾಜಕ್ಕೂ ಅವಶ್ಯಕವಾಗಿದೆ ಎಂದರು. ವಚನ ಕ್ರಾಂತಿಯೊಂದಿಗೆ ಸಮಾಜದ ಪರಿವರ್ತನೆಗೆ ಶ್ರಮಿಸಿ, ನಾಡಿನೆಲ್ಲೆಡೆ ಕೆರೆ ಕಟ್ಟಿ ನೀರಿನ ಮಹತ್ವವನ್ನು 12ನೇ ಶತಮಾನದಲ್ಲಿಯೇ ತಿಳಿಸಿದ ಗುರು ಸಿದ್ದರಾಮೇಶ್ವರರ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಭೋವಿ ಸಮುದಾಯ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ, ಸಮುದಾಯದಲ್ಲಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಸಮುದಾಯದ ಯುವಕ-ಯುವತಿಯರಿಗೆ ವಿದ್ಯಾಭ್ಯಾಸಕ್ಕೆ ಪೂರಕವಾದಂತಹ ವಾತಾವರಣವನ್ನು ನಿರ್ಮಿಸಬೇಕೆಂದು ಕರೆ ನೀಡಿದರು. ಸಮುದಾಯದ ಹಿತವನ್ನು ಕಾಯುವ ನಿಟ್ಟಿನಲ್ಲಿ ಸಮುದಾಯದ ಎಲ್ಲರು ಒಗ್ಗಟ್ಟಾಗಬೇಕಿದೆ, ಸಮಾಜದಲ್ಲಿ ಆಗುತ್ತಿರುವ ಬದಲಾವಣೆಯನ್ನು ಗಮನಿಸಿ ಒಟ್ಟಾಗಿ ವಿರೋಧಿಸಬೇಕಿದೆ, ಇಲ್ಲದೆಹೋದಲ್ಲಿ ಸಮುದಾಯ ಹಿಂದುಳಿಯುವುದರಲ್ಲಿ…

Read More

ಕೊರಟಗೆರೆ ನಿಮ್ಮ ಆಧಾರ್ ಕಾರ್ಡು ಮನೆಗೆ ಇನ್ನೂ ಬಂದಿಲ್ವಾ.. ಬ್ಯಾಂಕು ಚೇಕ್ ಬುಕ್ ನಿಮ್ಮ ಕೈಗೆ ಇನ್ನೂ ಸೇರಿಲ್ವಾ.. ರಿಜಿಸ್ಟರ್ ಪೋಸ್ಟ್-ಸ್ಪೀಡ್ ಪೋಸ್ಟ್ ಮನೆಗೆ ಬರ್ತಾ ಇಲ್ವಾ.. ಕೆಲಸದ ಆಹ್ವಾನದ ತುರ್ತುಕರೆ ನಿಮಗೇ ಬರೋದೇ ಇಲ್ಲ ಬೀಡಿ.. ಯಾಕೆ ಗೋತ್ತಾ ಮಲ್ಲೇಕಾವು ಅಂಚೆ ಕಚೇರಿಯ ಅಂಚೆ ಪಾಲಕ ಕಳೆದ 45ದಿನಗಳಿಂದ ಕಚೇರಿಗೆ ಬಂದೇ ಇಲ್ವಂತೆ..!! ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮಲ್ಲೇಕಾವು ಗ್ರಾಮದ ಅಂಚೆ ಕಚೇರಿಯ ಅಂಚೆ ಪಾಲಕ ನಾಗೇಂದ್ರ ಎಂಬಾತ ಕಳೆದ 45ದಿನಗಳಿಂದ ಕತ್ಯವ್ಯಕ್ಕೆ ಗೈರುಹಾಜರಿ. ಹತ್ತಾರು ಗ್ರಾಮಗಳಿಗೆ ತುರ್ತುಸೇವೆ ನೀಡಬೇಕಾದ ಅಂಚೆ ಪಾಲಕ ನಾಗೇಂದ್ರ ಕರ್ತವ್ಯಕ್ಕೆ ಗೈರಾಗಿ ನೂರಾರು ಸಮಸ್ಯೆಗಳು ಸೃಷ್ಟಿಯಾಗಿವೆ. ಬ್ಯಾಂಕು ಚೇಕ್, ಆಧಾರ್ ಕಾರ್ಡು, ಕೋರ್ಟ್ ನೊಟೀಸ್, ಎಟಿಎಂ ಕಾರ್ಡು, ರೇಷನ್‍ಕಾರ್ಡು, ಎಲ್‍ಐಸಿ ಬಾಂಡ್, ರಿಜೀಸ್ಟರ್ ಪೊಸ್ಟ್, ಸ್ಪೀಡ್ ಪೋಸ್ಟ್, ಜಾಬ್ ನೊಟೀಸ್, ಕೂರೀಯರ್, ಪಾರ್ಸಲ್‍ಗಳು ಹತ್ತಾರು ಗ್ರಾಮದ ನೂರಾರು ಜನ ಗ್ರಾಹಕರ ಕೈಸೇರದೇ ಕಳೆದ 45ದಿನಗಳಿಂದ ಮಲ್ಲೇಕಾವು ಅಂಚೆ ಕಚೇರಿಯಲ್ಲಿ…

Read More

ತುಮಕೂರು ಕಾರ್ಪೋರೇಟ್ ಬಂಡವಾಳದಾರರ ಪರವಾದ ಉದಾರವಾದಿ ನೀತಿಗಳು ದುಡಿಯುವ ಜನರನ್ನು ಅತ್ಯಂತ ನಿಕೃಷ್ಟ ಸ್ಥಿತಿಗೆ ತಳ್ಳಿವೆ. ಉದ್ಯೋಗದಿಂದ ಹೊರದೂಡಲ್ಪಡುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ನಿರುದ್ಯೋಗವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿ, ವಿದ್ಯಾವಂತ ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೋದಿ ಸರ್ಕಾರ ಕಾರ್ಪೊರೇಟ್ ಧಣಿಗಳ ತುಷ್ಟೀಕರಣಕ್ಕಾಗಿ 29 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ, ನಾಲ್ಕು ಸಂಹಿತೆಗಳನ್ನಾಗಿಸಿದೆ. ಈ ಸಂಹಿತೆಗಳು ಕಾರ್ಮಿಕರಿಗೆ ಇದುವರೆಗೂ ಇದ್ದ ಹಕ್ಕುಗಳನ್ನು ನುಂಗಿಹಾಕಿವೆ. ಈ ಸಂಹಿತೆಗಳು ಕಾರ್ಮಿಕರ ಪ್ರತಿಭಟನೆಯ ಹಕ್ಕನ್ನು ಕಸಿದುಕೊಂಡು, ಶೋಷಣೆಯನ್ನು ತೀವ್ರಗೊಳಿಸಿವೆ. ಖಾಯಂ ಕೆಲಸಗಳಿಗೆ ತಿಲಾಂಜಲಿ ಇಡಲಾಗಿದೆ. ಬದಲಿಗೆ ನಿಗದಿತ ಅವಧಿ, ಓಜೆಟಿ, ನೀಮ್, ನೆಟಾಫ್ ಕಾರ್ಮಿಕರ ನೇಮಕಕ್ಕೆ ಕಾನೂನಿನ ರಕ್ಷಣೆ ಒದಗೀಸಲಾಗಿದೆ. ಕನಿಷ್ಟವೂ ಅಲ್ಲದ ಕೂಲಿ ಕೊಟ್ಟು ಗರಿಷ್ಟ ದುಡಿಮೆಗೆ ಹಚ್ಚಿ, ಲೂಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಸಂಪತ್ತು ಕೆಲವೇ ವ್ಯಕ್ತಿಗಳ ಕೈಯಲ್ಲಿ ಕೇಂದ್ರೀಕರಣಗೊಳ್ಳುತ್ತಿದೆ. ಪರಿಣಾಮ ಬಡತನ, ಹಸಿವು, ಅನಾರೋಗ್ಯ, ಅಪೌಷ್ಠಿಕತೆ ಹೆಚ್ಚುತ್ತಿದೆ. ಉಳ್ಳವರು ಮತ್ತು ಇಲ್ಲದವರ ನಡುವೆ ಭಾರಿ ಕಂದಕ ಸೃಷ್ಟಿಯಾಗುತ್ತಿದೆ.…

Read More

ತುಮಕೂರು ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಲುವಾಗಿ ಕಾಂಗ್ರೆಸ್ ಪಕ್ಷದ ಆಕಾಂಕ್ಷಿತ ಅಭ್ಯರ್ಥಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು ಹಿನ್ನೆಲೆಯಲ್ಲಿ ನಗರದ ಬಿಎಚ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ತುಮಕೂರು ಗ್ರಾಮಾಂತರ ತಾಲೂಕಿನ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಪಕ್ಷದ ಪದಾಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಸಂದರ್ಭದಲ್ಲಿ ಮಾತನಾಡಿದ ತುಮಕೂರು ಗ್ರಾಮಾಂತರ ಕಾಂಗ್ರೆಸ್ ಉಸ್ತುವಾರಿ ಕೆಂಪಣ್ಣ ಈ ಬಾರಿ ಗ್ರಾಮಾಂತರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಬೂತ್ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ತಾಲೂಕ ಪಂಚಾಯಿತಿ ಜಿಲ್ಲಾ ಪಂಚಾಯಿತಿ ಸದಸ್ಯರು ಅಧ್ಯಕ್ಷರುಗಳು ಶ್ರಮವಹಿಸಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷ ಸಂಘಟನೆಯನ್ನು ಕೈಗೊಳ್ಳಬೇಕು ರಾಜ್ಯದಲ್ಲಿರುವ ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆಯಲು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು ಅಲ್ಲದೇ ತುಮಕೂರು ಗ್ರಾಮಾಂತರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಮಣಿಸಲು ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿಕೊಂಡು…

Read More

ತುಮಕೂರು ಬೆಂಗಳೂರಿನಲ್ಲಿ ಜನವರಿ 16 ರಂದು ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕ ಆಯೋಜಿಸಿರುವ “ನಾನು ನಾಯಕಿ” ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕಗಳ ಸಕ್ರಿಯ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರಾಜಣ್ಣ ಮನವಿ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ನಾನು ನಾಯಕಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅದ್ಯತೆ ನೀಡಿರುವುದನ್ನು ನಾವು ಕಾಣಬಹುದಾಗಿದೆ.ಉಕ್ಕಿನ ಮಹಿಳೆ ಎಂದು ಕರೆಯಿಸಿಕೊಂಡಿರುವ ತನ್ನ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹೆಸರು ಕೇಳಿದರೆ ಇಂದಿಗೂ ಮೈ ನವಿರೇಳುತ್ತದೆ.ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಮಹಿಳೆಯರನ್ನು ಸಂಘಟಿಸುವ ನಿಟ್ಟಿನಲ್ಲಿ ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡುವ ನಿಟ್ಟಿನಲ್ಲಿ ಜನವರಿ 16ರ ಸೋಮವಾರ ನಾನು ನಾಯಕಿ ಕಾರ್ಯಕ್ರಮ ಆಯೋಜಿಸಿದ್ದು,ಇದರಲ್ಲಿ ಎಐಸಿಸಿಯ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಗಾಂಧಿ ಅವರು ಪಾಲ್ಗೊಳ್ಳ ಲಿದ್ದು,ಸಕ್ರಿಯ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ…

Read More

ಗುಬ್ಬಿ ನಾನೇ ಕಟ್ಟಿಕೊಟ್ಟ ಕೋಟೆಯಲ್ಲಿ 20 ವರ್ಷಗಳಿಂದ ತಾಲೂಕಿನ ಚುಕ್ಕಾಣಿ ಹಿಡಿದ ಶಾಸಕನ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ತಾಕತ್ತಿದ್ದರೆ ಉಚ್ಚಾಟಿತ ಶಾಸಕ ರಾಜೀನಾಮೆ ನೀಡಿ ಮತದಾರ ಪ್ರಭುಗಳಲ್ಲಿ ಬರಲಿ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಜಿ ಎನ್ ಬೆಟ್ಟಸ್ವಾಮಿ ಶಾಸಕರಿಗೆ ಸವಾಲು ಹಾಕಿದರು. ಪಟ್ಟಣದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕೇವಲ ಬಿಜೆಪಿಯ ಸದಸ್ಯರುಗಳ ಮೇಲೆ ಆರೋಪ ಉಳಿಸುವುದು ಸರಿಯಲ್ಲ ರೈತರ ಪರವಾಗಿ ನಿಲ್ಲುವಂತಹ ಸಮಿತಿಯ ಸದಸ್ಯರುಗಳು ಶಾಸಕರ ಅಣತಿಯಂತೆ ನಡೆಯದೆ ಕೇವಲ 10 ನಿಮಿಷ ತಡವಾಗಿ ಬಂದಿರುವುದಕ್ಕೆ ತಾವು ಸಾರ್ವಜನಿಕರ ಹಾಗೂ ರೈತರ ಎದುರಿನಲ್ಲಿ ನಿಷ್ಠಾವಂತನಾಗಿದ್ದೇನೆ ಎಂದು ತೋರಿಸಿಕೊಳ್ಳಲು ಈ ರೀತಿಯ ನಾಟಕವಾಡಿದ್ದು ಈ ನಾಟಕವು ಹೆಚ್ಚು ದಿನಗಳ ಕಾಲ ನಡೆಯುವುದಿಲ್ಲ ಎಂದು ತಿಳಿಸಿದರು. ಒಂದು ಕಾಲದಲ್ಲಿ ನಾನೇ ಕರೆದುಕೊಂಡು ಬಂದು ಶಾಸಕರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿಕೊಂಡು ಬಂದಿದ್ದೇನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ತಾವು ಮತ ಗಳಿಸಬಹುದೆಂಬ ಕಲ್ಪನೆಯಿಂದ ಹೊರಬರುವುದು…

Read More

ತುಮಕೂರು ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಯಾವುದೇ ಬಾಲ್ಯ ವಿವಾಹ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗೌರವಾನ್ವಿತ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ನೂರುನ್ನೀಸಾ ಅವರು ಕರೆ ನೀಡಿದರು. ಮಧುವೆಯಾಗಬೇಕಾದರೆ ಹೆಣ್ಣಿಗೆ 18 ವರ್ಷ ಹಾಗೂ ಗಂಡಿಗೆ 21ವರ್ಷ ಪೂರ್ಣಗೊಂಡಿರತಕ್ಕದ್ದು. ಮೂಢನಂಬಿಕೆ ಹಾಗೂ ಶಿಕ್ಷಣದ ಕೊರತೆ ಬಾಲ್ಯ ವಿವಾಹಕ್ಕೆ ಕಾರಣವಾಗಿದೆ ಎಂದು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಹಯೋಗದಲ್ಲಿ ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಕುರಿತು ನಿಷೇದಾಧಿಕಾರಿಗಳಿಗೆ ಕ್ರಮಬದ್ಧ ಕಾರ್ಯವಿಧಾನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಅಂಜಲಿ ರಾಮಣ್ಣ ಅವರು ಮಾತನಾಡುತ್ತಾ, ಬಾಲ್ಯ ವಿವಾಹ ನಿಷೇಧ ಕಾಯ್ದೆಯ ನಿಷೇದಾಧಿಕಾರಿಗಳು ಪರಸ್ಪರ ಸಹಕಾರ ಮತ್ತು ಸಮನ್ವಯತೆ ಸಾಧಿಸಿ ಬಾಲ್ಯ…

Read More

ಕೊರಟಗೆರೆ ರೈತನಾಯಕ ಕುಮಾರಣ್ಣನ ಕನಸಿನ ಯೋಜನೆಯಾದ ಪಂಚರತ್ನದ ಮಹತ್ವವನ್ನು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮನೆಮನೆಗೆ ತಲುಪಿಸುವುದೇ ಗ್ರಾಮವಾಸ್ತವ್ಯದ ಪ್ರಮುಖ ಉದ್ದೇಶವಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಪಂ ವ್ಯಾಪ್ತಿಯ ಕಾಶಾಪುರ ಗ್ರಾಮದಲ್ಲಿ ಜಾತ್ಯಾತೀತಾ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಕುಟುಂಬಕ್ಕೆ ಶಿಕ್ಷಣವೇ ಶಕ್ತಿ, ಬಡಜನತೆಗೆ ವಸತಿಯ ಆಸರೆ, ಗ್ರಾಪಂ ಮಟ್ಟದಲ್ಲೇ ಆರೋಗ್ಯವೇ ಸಂಪತ್ತು, ರೈತರ ಆಸರೆಗಾಗಿ ರೈತ ಚೈತನ್ಯ, ಉದ್ಯೋಗ ಸೃಷ್ಟಿಗಾಗಿ ಯುವಜನ ಮತ್ತು ಮಹಿಳಾ ಸಬಲೀಕರಣದ ಪಂಚರತ್ನ ಯೋಜನೆಯು ಕರ್ನಾಟಕ ರಾಜ್ಯ ಮತ್ತು ಕೊರಟಗೆರೆ ಕ್ಷೇತ್ರದ ಅಭಿವೃದ್ದಿಗೆ ಪೂರಕವಾಗಲಿದೆ ಎಂದು ತಿಳಿಸಿದರು. ಕೋಡ್ಲಾಪುರ ಮತ್ತು ಅರಸಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಈಗಾಗಲೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮಾಡಿದ್ದೇನೆ. ಕೊರಟಗೆರೆ ಕ್ಷೇತ್ರದಲ್ಲಿ ಪ್ರತಿ ಹೋಬಳಿಯಲ್ಲೂ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕವೆ ಪಂಚರತ್ನ ಯೋಜನೆಯ ಅರಿವು ಮೂಡಿಸುತ್ತೇನೆ. ಸ್ತ್ರೀಶಕ್ತಿ ಸಂಘಗಳ ಸಾಲಮನ್ನ ಮತ್ತು ಹಿರಿಯ ನಾಗರೀಕರ…

Read More

ತುಮಕೂರು ಜವಾಬ್ದಾರಿಯುತ ನಾಗರಿಕರಾಗಿ ಸಮುದಾಯಗಳ ಆರೋಗ್ಯ, ಸುರಕ್ಷತೆ ಮತ್ತು ನೈರ್ಮಲ್ಯವನ್ನು ಕಾಪಾಡಲು ಹಾಗೂ ಸಮಾಜದ ಅಗತ್ಯತೆಗಳನ್ನು ಅರ್ಥಮಾಡಿಕೊಂಡು ಅಗತ್ಯ ನೆರವು ನೀಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ಇಂದು ನಗರದ ಎಂಪ್ರೆಸ್ ಕಾಲೇಜ್‍ನ ಆವರಣದಲ್ಲಿ, ದಿ ಪಾರ್ವಡ್ ಪೌಂಡೇಷನ್ ಬೆಂಗಳೂರು ಇವರು ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದ ಅವರು, ಶುದ್ಧ ಕುಡಿಯುವ ನೀರನ್ನು ಪಡೆಯುವುದು ಮನುಷ್ಯನ ಮೂಲಭೂತ ಅಗತ್ಯಗಳಲ್ಲಿ ಪ್ರಮುಖವಾದದ್ದು, ಈ ಸರ್ಕಾರಿ ಕಾಲೇಜ್‍ಗೆ ಜಿಲ್ಲೆಯ ವಿವಿಧ ಭಾಗಗಳÀ 3 ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಈ ನೀರಿನ ಘಟಕದ ಸ್ಥಾಪನೆಯಿಂದ ವಿಧ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಾಗಿದೆ, ಶುದ್ದ ನೀರಿನ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಬಹುದಾಗಿದ್ದು, ಇದಕ್ಕಾಗಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದ ದಿ ಪಾರ್ವಡ್ ಪೌಂಡೇಷನ್…

Read More

ತುಮಕೂರು ನಾಲ್ಕು ಗೋಡೆಗಳ ನಡುವಿನ ಜೀವನ ಮುಗಿಸಿ ಮಾಸ್ಟರ್ಸ್ ಆಗಲು ಹೊರಟಿರುವ ವಿದ್ಯಾರ್ಥಿಗಳು ಅಬ್ದುಲ್ ಕಲಾಂ, ಸ್ವಾಮಿ ವಿವೇಕಾನಂದರ ಜೀವನಾದರ್ಶ, ವ್ಯಕ್ತಿತ್ವ, ತತ್ವ್ತ, ಆತ್ಮವಿಶ್ವಾಸ, ನಡವಳಿಕೆ, ಆಲೋಚನೆ, ಸರಿ ಆಯ್ಕೆಗಳನ್ನು ಅಳವಡಿಸಿಕೊಂಡರೆ ಅದುವೇ ನಿಮ್ಮ ಬೆಳವಣಿಗೆಯ ಮೇಲೆ ಪ್ರಭಾವ ಬೀರಲಿದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಗಳು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನ ಘಟಕ ಐ.ಕ್ಯೂ.ಎ.ಸಿ. ಮತ್ತು ಪಿ.ಎಂ.ಇ.ಬಿ. ವಿಭಾಗಗಳ ವತಿಯಿಂದ ಬುಧವಾರ ಆಯೋಜಿಸಿದ್ದ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ‘ಅನಿಕೇತನ’ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು. ಸಮಾಜ ಸೇವೆ ಎಂಬುದು ಋಣಸಂದಾಯವಿದ್ದಂತೆ ಎಂಬ ವಿವೇಕಾನಂದರ ಮಾತುಗಳನ್ನು ನಾವು ಮರೆಯಬಾರದು. ಯೌವ್ವನ ಎಂದರೆ ಶಾರೀರಿಕ, ಮಾನಸಿಕ, ಬೌದ್ಧಿಕ ಮತ್ತು ನೈತಿಕವಾಗಿ ಸದೃಢರೂ ಸಬಲರೂ ಆಗಿರುವ ವಯೋಮಾನ. ಇವೆಲ್ಲವೂ ಸಕಾರಾತ್ಮಕವಾಗಿ ಬಳಕೆಯಾಗುವುದು ಶಿಕ್ಷಣದಿಂದ. ಪ್ರಬುದ್ಧ ಹಾಗೂ ಪ್ರಜಾಪ್ರಭುತ್ವ ರಾಷ್ಟ್ರ ಕಟ್ಟಲು ಶಿಕ್ಷಣದಿಂದ ಮಾತ್ರವೇ ಸಾಧ್ಯ ಎಂದರು. ಸಕಾರಾತ್ಮಕ ಚಿಂತನೆಗಳಿಂದಷ್ಟೇ ಬದುಕು ಕಟ್ಟಲು ಸಾಧ್ಯ.…

Read More