Author: News Desk Benkiyabale

ಪಾವಗಡ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಶಾಸಕರು ಎರಡನೇ ಬಾರಿಗೆ ಕರೆಯುತ್ತಿರುವುದರಿಂದ ನಾನು ಸಿದ್ದನಾಗಿ ದಾಖಲೆಗಳೊಂದಿಗೆ ಬರುತ್ತೇನೆ ಎಂದು ಜೆಡಿಎಸ್ ಪಕ್ಷದ ಮಾಜಿ ಶಾಸಕ ಕೆಎಂ ತಿಮ್ಮರಾಯಪ್ಪನವರು ತಿಳಿಸಿದರು. ಪಟ್ಟಣದ ಬನಶಂಕರಿಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನು ಕರೆದು ಮಾತನಾಡುತ್ತಾ, ಸಾರ್ವಜನಿಕ ಸಭೆಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಾದ ವೆಂಕಟರಮಣಪ್ಪನವರು ಪದೇ ಪದೇ ನನ್ನನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುತ್ತಿದ್ದಾರೆ ನಾನು ಸಹ ಸಿದ್ದನಾಗಿದ್ದೇನೆ. ಸ್ಥಳ ಮತ್ತು ದಿನವನ್ನು ಅವರೇ ನಿರ್ಧರಿಸಲಿ. 2012ರಲ್ಲಿ ನೀರಿಗಾಗಿ ಹಲವು ಸಂಘ ಸಂಸ್ಥೆಗಳ ಜೊತೆ ಪಾದಯಾತ್ರೆ ಮತ್ತು ಹಲವು ಹೋರಾಟದ ಫಲವಾಗಿ ಇಂದು ಪ್ರಗತಿಯಲ್ಲಿದೆ. ಕುರುಬರಹಳ್ಳಿ ಗೇಟ್ ನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ 2005ರಲ್ಲಿ ನಾನು ಮೊದಲನೇ ಬಾರಿಗೆ ಶಾಸಕನಾದಾಗ 8 ಪ್ರೌಢಶಾಲೆಗಳನ್ನು ಹಾಗೂ ಕೆಟಿ ಹಳ್ಳಿ ಮತ್ತು ಮರಿದಾಸನಹಳ್ಳಿ ಗ್ರಾಮಗಳಲ್ಲಿ ಎರಡು ಜೂನಿಯರ್ ಕಾಲೇಜುಗಳನ್ನು , ಪಟ್ಟಣದ ಜೂನಿಯರ್ ಕಾಲೇಜಿಗೆ ಒಂದು 1.60 ಕೋಟಿ ನೀಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ 3 ಮತ್ತು…

Read More

ತುಮಕೂರು ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮುತ್ತಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ರಾಜ್ಯದ 118ನೇ ಇಎಸ್‍ಐ ಚಿಕಿತ್ಸಾಲಯ ತೆರೆಯುವ ಮೂಲಕ ಕೈಗಾರಿಕೆಗಳ ಜೀವಾಳವಾಗಿರುವ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಇಲಾಖೆ ಮುಂದಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಮಿಕರ ವೈದ್ಯಕೀಯ ಇಲಾಖೆಯ ನಿರ್ದೇಶಕ ಡಾ.ಎನ್.ಜಿ.ರವಿಕುಮಾರ್ ತಿಳಿಸಿದ್ದಾರೆ. ನಗರದ ವಸಂತನರಸಾಪುರ ಮೊದಲ ಹಂತದ ಕೈಗಾರಿಕಾ ಪ್ರದೇಶ ಸೈಟ್ ಸಂಖ್ಯೆ 230-231ರಲ್ಲಿ ಇಎಸ್‍ಐ ಚಿಕಿತ್ಸಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಸದರಿ ಆಸ್ಪತ್ರೆಯಲ್ಲಿ ಮೊದಲ ಹಂತದ ಚಿಕಿತ್ಸೆಗಳು ದೊರೆಯಲಿದ್ದು,ಅತ್ಯಂತ ಗಂಭೀರ ಪ್ರಕರಣಗಳು ಕಂಡು ಬಂದರೆ ಈಗಾಗಲೇ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಸಿದ್ದಾರ್ಥ,ಸಿದ್ದಗಂಗಾ ಮತ್ತು ಶ್ರೀದೇವಿ ಮೆಡಿಕಲ್ ಕಾಲೇಜುಗಳಿಗೆ ಹೆಚ್ಚಿನ ಚಕಿತ್ಸೆಗೆ ರೇಪರ್ ಮಾಡಲಾಗುವುದು ಎಂದರು. ಈ ಹಿಂದೆ ಮಾತೃ, ಪಿತೃ, ಗುರುಗಳನ್ನು ದೈವ ಸಮಾನ ಎಂದು ಹೇಳಲಾಗುತ್ತಿತ್ತು. ಇಂದು ಅವರುಗಳ ಜೊತೆಗೆ ಅನ್ನ ನೀಡುವ ರೈತ,ವೈದ್ಯರು,ಗಡಿ ಕಾಯುವ ಯೋಧ ಹಾಗೆಯೇ, ತನ್ನ ಬೆವರಿನ ಮೂಲಕ ಕೈಗಾರಿಕೆಗಳಿಗೆ ಶಕ್ತಿ ತುಂಬ ಕಾರ್ಮಿಕರನ್ನು ಈ ಸಾಲಿನಲ್ಲಿ ಕಾಣಬೇಕಾಗಿದೆ.ಎಷ್ಟೇ ತಾಂತ್ರಿಕತೆ…

Read More

ಪಾವಗಡ ತಾಲೂಕಿನಲ್ಲಿ ನಿರೀಕ್ಷಣ ಮಂದಿರದಿಂದ ದಲಿತ ಸಂಘಟನೆಗಳು ಒಕ್ಕೂಟದವರು ದಲಿತ ಮುಖಂಡರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ತಮಟೆ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ದಲಿತ ಸಂಘಟನೆ ಹೋರಾಟಗಾರರು ಮಾಲಾರ್ಪಣೆ ಮಾಡಿದರು. ನಂತರ ಶನೇಶ್ವರ ಸ್ವಾಮಿ ವೃತ್ತದ ಬಳಿ ಸರಪಳಿ ವೃತ್ತಾಕಾರದಲ್ಲಿ ನ್ಯಾಯ ಬೇಕು ಎಂದು ಘೋಷಣೆ ಕೂಗಿದರು. ಅಲ್ಲಿಂದ ತಹೀಸಿಲ್ದಾರ್ ಕಚೇರಿಯ ಆವರಣದವರೆಗೂ ನ್ಯಾಯ ಬೇಕು ಎಂದು ಘೋಷಣ ಕೂಗುತ್ತಾ ಮುಂದೆ ಸಾಗಿದರು. ಇದೇ ವೇಳೆ ಹನುಮಂತರಾಯಪ್ಪ ಸಿ ಕೆ ಪುರ ಕಲಾತಂಡ ಇವರ ಸಂಗಡಿಗರಿಂದ ಹಾಡಿನ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ಕೊಟ್ಟ ಶಂಕರ್ ಉಪನ್ಯಾಸಕರು ತುಮಕೂರು ಇವರು ಮಾತನಾಡಿ ನಮಗೆ ಈ ದೇಶದಲ್ಲಿ ಯಾವುದೇ ಸ್ವಾಮೀಜಿ ಅಥವಾ ರಾಜಕಾರಣಿಯು ಇಲ್ಲ. ಅವರು ಯಾರು ಇಲ್ಲ ಅಂದರು ಕೂಡ .ಈ ದೇಶದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಕೊಟ್ಟಂತಹ ಸಂವಿಧಾನವನ್ನು ನಮ್ಮ ಜೊತೆಯಲ್ಲೇ ಇರುತ್ತದೆ. ಆ ಸಂವಿಧಾನದ ಮೂಲಕವೇ ನಾವು ಹೋರಾಟ ಮಾಡಬೇಕು.…

Read More

ತುಮಕೂರು ಬಿಜೆಪಿಯು ಪ್ರತಿ ಮತಗಟ್ಟೆಗಳಲ್ಲಿ ಪೇಜ್ ಹಾಗೂ ವಾರ್ಡ್ ಸಮಿತಿ ರಚನೆ, ಬೂತ್ ಪದಾಧಿಕಾರಿಗಳ ಹಾಗೂ ಪಂಚರತ್ನಗಳ ಕಾರ್ಯನಿರ್ವಹಣೆ, ವಾಟ್ಸ್ಯಾಪ್ ಗ್ರೂಪ್ ರಚನೆ, ಕೀವೋಟರ್ಸ್, ಪ್ರತೀ ತಿಂಗಳ ಅಂತ್ಯದಲ್ಲಿ ಪ್ರಧಾನಿ ನರೇಂದ್ರಮೋದಿರವರ ಮನ್ ಕೀ ಬಾತ್ ಕಾರ್ಯಕ್ರಮ ಆಯೋಜನೆ ಮತ್ತು ಎಲ್ಲಾ ವರ್ಗ, ಸಮುದಾಯಗಳ ಮತದಾರರನ್ನು ವಿಶ್ವಾಸಕ್ಕೆ ಪಡೆಯುವ ದೃಷ್ಠಿಯಿಂದ ಬೂತ್ ವಿಜಯ್ ಅಭಿಯಾನವನ್ನು ನಡೆಸುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಾಗೂ ಸೋಮೇಶ್ವರ ಶಕ್ತಿಕೇಂದ್ರದ ವಾರ್ಡ್ 25ರ ಪ್ರಭಾರಿ ಕೆ.ಪಿ.ಮಹೇಶ ತಿಳಿಸಿದರು. ಇವರು ಇಂದು ನಗರದ ಸೋಮೇಶ್ವರಪುರಂನ ವಾರ್ಡ್ 25ರ ಮತಗಟ್ಟೆ ಸಂಖ್ಯೆ 167ರ ವಾರ್ಡ್ ಅಧ್ಯಕ್ಷ ರಾಜ್‍ಕುಮಾರ್ ಗುಪ್ತರವರ ಮನೆ ಮೇಲೆ ಬಿಜೆಪಿ ಧ್ವಜವನ್ನು ಹಾರಿಸುವ ಸಂಧರ್ಭದಲ್ಲಿ ಮಾತನಾಡುತ್ತಾ, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಮತ್ತು ವಿಧಾನಸಭೆ- 2023ರ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ಣ ಸ್ಪಷ್ಟ ಬಹುಮತಕ್ಕೆ ಬೂತ್ ಮಟ್ಟದಲ್ಲಿ ಅತ್ಯಧಿಕ ಮತ ಪಡೆಯುವ ದೃಷ್ಠಿಯಿಂದ ಹಾಗೂ ಕೇಂದ್ರ, ರಾಜ್ಯ ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರಗಳು ನೀಡಿರುವ ಕೊಡುಗೆ…

Read More

ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜನವರಿ 26ರಂದು ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನವರಿ 26ರ ಗಣರಾಜ್ಯೋತ್ಸವದಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದ್ದು, ಧ್ವಜಾರೋಹಣ ಮಾಡುವ ಸ್ಥಳದ ಸುತ್ತಮುತ್ತ ಸ್ವಚ್ಛತೆ ಕೈಗೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಎನ್‍ಸಿಸಿ, ಅಗ್ನಿಶಾಮಕ, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಅರಣ್ಯ ಇಲಾಖೆ, ಗೃಹರಕ್ಷಕದಳದವರಿಂದ ಆಕರ್ಷಕ ಕವಾಯತು ಏರ್ಪಡಿಸಬೇಕು. ಕವಾಯತಿಗಾಗಿ ತಾಲೀಮು ನಡೆಸಲು ಅನುವಾಗುವಂತೆ ಧೂಳು ಬಾರದ ರೀತಿಯಲ್ಲಿ ನೀರು ಸಿಂಪಡಿಸಿ ಮೈದಾನವನ್ನು ಅಣಿಗೊಳಿಸಬೇಕು ಎಂದು ಸೂಚನೆ ನೀಡಿದರು. ವೇದಿಕೆ ನಿರ್ಮಾಣ, ಬ್ಯಾರಿಕೇಡ್, ಬ್ಯಾಕ್ ಡ್ರಾಪ್, ಧ್ವಜ ಸ್ತಂಭ ನಿರ್ಮಾಣವನ್ನು ಲೋಕೋಪಯೋಗಿ ಇಲಾಖೆಗೆ ಹಾಗೂ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ…

Read More

ತುಮಕೂರು ನಾನು ಸ್ಲಂ ನಿವಾಸಿಗಳ, ಪೌರಕಾರ್ಮಿಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದೇನೆ, ನನ್ನ ಆಯೋಗದ ವರದಿಯಲ್ಲೂ ಉಲ್ಲೇಖಿಸಿದ್ದೇನೆ, ನಗರದಲ್ಲಿ ಶೇಕಡ 48 ರಷ್ಟು ಜನ ಸ್ಲಂಗಳಲ್ಲಿ ವಾಸಿಸುತ್ತಿದ್ದಾರೆ. ಕೊಳಗೇರಿ ಜನರಿಗೆ ಭೂಮಿ ಒಡೆತನ ಜನಸಂಖ್ಯೆಗೆ ಅನುಗುಣವಾಗಿ ಪಾಲು ನೀಡಬೇಕು. ಸಂವಿಧಾನದ ಸಿದ್ದಾಂತದಲ್ಲಿ ನೀವು ಸಂಘಟನೆ ಮಾಡುತ್ತಿದ್ದು ನಿಮ್ಮ ಹೋರಾಟದಲ್ಲಿ ನಾನು ಬಾಗಿಯಾಗಿದ್ದೇನೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಾದೀಶರಾದ ಹೆಚ್.ಎನ್ ನಾಗಮೋಹನ್‍ದಾಸ್‍ಹೇಳಿದರು. ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯು ಸಾವಿತ್ರಿ ಬಾಪುಲೆ ಯರವ 192ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದು “ವರ್ತಮಾನದಲ್ಲಿ ಸ್ಲಂ ಜನರು ಮತ್ತು ಸಂವಿಧಾನ” ಕುರಿತು ರಾಜ್ಯ ಪ್ರತಿನಿಧಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ನಿಮ್ಮ ಸ್ಥಿತಿಗತಿಗಳು,ಸಮಸ್ಯೆಗಳು ನಮಗೆ ಅರ್ಥವಾಗುತ್ತವೆ, ಇವತ್ತು ನೀವು ಇಟ್ಟಿರುವ ಬೇಡಿಕೆಗಳು ಸಂವಿಧಾನಬದ್ದ ನ್ಯಾಯ ಸಮ್ಮತವಾದ ಬೇಡಿಕೆಗಳು, ಕಿವಿ ಕಣ್ಣು ಹೃದಯ ಇರುವಂತಹ ಯಾವುದೇ ಸರ್ಕಾರ ನಿಮ್ಮ ಬೇಡಿಕೆಗಳನ್ನು ಈಡೇರಿಸಬೇಕು, ಎರಡು ವರ್ಷಗಳ ಹಿಂದೆ ಎಸ್.ಸಿ/ಎಸ್,ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ನನ್ನ ನೇತೃತ್ವದಲ್ಲಿ ಆಯೋಗದವನ್ನು ರಚಿಸಲಾಯಿತು. ಕಳೆದ 73 ವರ್ಷಗಳಿಂದ ಮೀಸಲಾತಿ…

Read More

ತುಮಕೂರು ತುಮಕೂರು ಮಹಾನಗರಪಾಲಿಕೆಗೆ ಕಸವಿಲೇವಾರಿಗಾಗಿ 2022ರಲ್ಲಿ ಸ್ವಚ್ಚ ಭಾರತ್ ವಿಷನ್ ಯೋಜನೆಯಡಿ 93 ಮಿನಿ ಟಿಪ್ಪರ್‍ಗಳ ಖರೀದಿಯಲ್ಲಿ ನಿಯಮ ಬಾಹಿರ ವ್ಯವಹಾರ ನಡೆದಿದ್ದು, ಸಾಕಷ್ಟು ಅವ್ಯವಹಾರ ನಡೆದಿರುವ ಶಂಕೆಯಿದ್ದು, ಇಡೀ ಪ್ರಕರಣವನ್ನು ಜಿಲ್ಲಾಡಳಿತ ಲೋಕಾಯುಕ್ತ ತನಿಖೆಗೆ ಒಳಪಡಿಸುವಂತೆ ರಾಷ್ಟ್ರೀಯ ಮಾನವ ಹಕ್ಕು ಮತ್ತು ಪರಿಸರ ಸಂರಕ್ಷಣಾ ಪಡೆಯ ಅಧ್ಯಕ್ಷರಾದ ಜಿ.ಎಸ್.ಬಸವರಾಜು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 2021 – 22ನೇ ಸಾಲಿನಲ್ಲಿ ಐಎನ್‍ಡಿ 12289ರ ಅಡಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರತಿ ಮನೆಯಿಂದ ಕಸ ಎತ್ತಲು ಸುಮಾರು 93 ಮಿನಿ ಟಿಪ್ಪರ್ ಖರೀದಿಗೆ ಟೆಂಡರ್ ಕರೆದಿದ್ದು, ಪಾಲಿಕೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಪ್ರೇರಣಾ ಮೋಟಾರ್ಸ್ ಸಂಸ್ಥೆಯವರು ಶಾಮೀಲಾಗಿ, ಕರ್ನಾಟಕ ಪಾರದರ್ಶಕ ಅಧಿನಿಯಮದ ನಿಯಮಗಳನ್ನು ಗಾಳಿಗೆ ತೂರಿ ಕೋಟ್ಯಾಂತರ ರೂ ಅವ್ಯವಹಾರ ನಡೆಸಿದ್ದಾರೆ. 20 ಸಾವಿರಕ್ಕಿಂತ ಅಧಿಕ ಖರೀದಿಗೆ ಕನಿಷ್ಠ ಮೂರು ಕಂಪನಿಗಳಿಂದ ಕೊಟೇಷನ್ ಪಡೆಯಬೇಕು ಎಂಬ ನಿಯಮವಿದ್ದರೂ ಟಾಟಾ ವಾಹನಗಳನ್ನು ಮಾರಾಟ ಮಾಡುವ ದಾಬಸ್‍ಪೇಟೆಯಲ್ಲಿರುವ ಪ್ರೇರಣಾ ಮೋಟಾರ್ ಸಂಸ್ಥೆಗೆ ಮಾತ್ರ ನೆರವಾಗುವಂತೆ…

Read More

ತುಮಕೂರು ತುಮಕೂರು ನಗರದಲ್ಲೇ ಹುಟ್ಟಿ ಬೆಳೆದು, ತುಮಕೂರು ನಗರದಲ್ಲೇ ವಾಸವಿರುವ ನನ್ನನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ತು ಜಿಲ್ಲಾಧ್ಯಕ್ಷ ಉಮಾಶಂಕರ್ (ಉಮೇಶ್) ಮಹಾನಗರ ಪಾಲಿಕೆ ಚುನಾವಣಾಧಿಕಾರಿಗಳ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಅವರು, ತುಮಕೂರು ನಗರದಲ್ಲಿ ಕೆಲವರು ಮತದಾರರ ಪಟ್ಟಿಯಲ್ಲಿ ಹೆಸರು ಡಿಲೀಟ್ ಮಾಡಿದ್ದಾರೆ ಎಂದು ನಗರದ ಕೆಲವರು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ತಿಗೆ ಮೌಖಿಕವಾಗಿ ದೂರು ನೀಡಿದ್ದಾರೆ. ಈ ಸಂಬಂಧ ನಾನು ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾ ಶಾಖೆಗೆ ತೆರಳಿ ವಿಚಾರಿಸಿದಾಗ ನನ್ನ ಹೆಸರನ್ನೇ ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ಕಿಡಿಕಾರಿದರು. ಇದು ನನ್ನ ಒಬ್ಬನ ಸಮಸ್ಯೆಯಲ್ಲ ತುಮಕೂರು ನಗರದ 35 ವಾರ್ಡುಗಳಲ್ಲೂ ಇದೇ ರೀತಿ ಆಗಿವೆ ಎಂಬುದು ತಿಳಿದು ಬಂದಿದೆ. ಹೋರಾಟಗಾರನಾದ ನಾನು ನನ್ನ ಹೆಸರನ್ನೇ…

Read More

ಗುಬ್ಬಿ ಯಾವುದೇ ಕಾಂಗ್ರೆಸ್ ಪಕ್ಷದ ನಾಯಕರ ಮನೆ ಬಾಗಿಲಿಗೆ ಹೋಗಿಲ್ಲ ಕೇವಲ ಊಹಪಹಗಳು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು. ಅವರು ಎಂಎಚ್ ಪಟ್ನಾ ಹಾಗೂ ಸಿಂಗೋನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿಗೆ ಪೂಜೆ ಸಲ್ಲಿಸಿ ಮಾತನಾಡಿ ನಾನು ಪ್ರತಿ ಹಳ್ಳಿ ಭೇಟಿ ನೀಡಿದಾಗ ಎಲ್ಲರ ಮನೆ ಬಾಗಿಲಿಗೆ ಹೋಗುತ್ತೇನೆ ಕೇವಲ ನನ್ನ ವಿರೋಧಿಗಳು ಕಾಂಗ್ರೆಸ್ ಪಕ್ಷದ ಮುಖಂಡರು ಮನಗಳಿಗೆ ಎಂದು ಹೇಳುವುದು ಸತ್ಯಕ್ಕೆ ದೂರವಾದ ಮಾತು ಎಂದು ತಿಳಿಸಿದರು. ಭಾರತೀಯ ಜನತಾ ಪಕ್ಷದ ಆಡಳಿತದಲ್ಲಿ ಗುತ್ತೇಗೆದಾರರು ಆತ್ಮಹತ್ಯೆಯ ಕೇಸ್ಗಳು ಸಾಕಷ್ಟು ಸಂಭವಿಸಿದ್ದು ಈ ಸಾವಿಗೆ ಸರ್ಕಾರವೇ ಹೊಣೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು. ಕಾರ್ಯಕರ್ತರು ಗುತ್ತಿಗೆದಾರರಿಗೆ ಕೆಲಸದ ಅನುಮೋದನೆ ನೀಡಿ ಹಣ ಬಿಡುಗಡೆ ಮಾಡದೆ ಅವರ ಸಂಸಾರವನ್ನು ಬೀದಿಗೆ ತಂದಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದರು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿ ಹಾ ಗಲವಾಡಿಕೆರೆಗೆ ಈಗಾಗಲೇ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿದ್ದು ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಂದುವರೆದಿದ್ದು ಕಾಮಗಾರಿಯನ್ನು ಶೀಘ್ರವೇ ಮುಗಿಸುತ್ತೇನೆ…

Read More

ತುಮಕೂರು ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಅಧಿಕಾರಿಗಳು ಸರಿಯಾಗಿ ಅರ್ಥೈಸಿಕೊಂಡು ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ತರಬೇಕೆಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷ ನ್ಯಾ|| ಬಿ.ಎ.ಪಾಟೀಲ್ ಕರೆ ನೀಡಿದರು. ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ, ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ‘ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆ’ಗಳ ಬಗ್ಗೆ ಕಂದಾಯ, ಮುಜರಾಯಿ, ನಗರ ಸ್ಥಳೀಯ ಸಂಸ್ಥೆ, ಪೊಲೀಸ್, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗಾಗಿ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಯಾವುದೇ ಕಾಯ್ದೆ/ನಿಯಮಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕಾದರೆ ಅನುಷ್ಠಾನ ಮಾಡುವ ಅಧಿಕಾರಿಗಳು ಕಾಯ್ದೆಯ ಉದ್ದೇಶ ಹಾಗೂ ಕಾಯ್ದೆಗಳ ಬಗ್ಗೆ ಪೂರ್ಣ ಅರಿವು ಹೊಂದಿರಬೇಕು ಎಂದು ತಿಳಿಸಿದರು. ಸರ್ಕಾರಿ/ಸ್ಥಳೀಯ ಸಂಸ್ಥೆಗಳು/ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ/ ವಕ್ಫ್/ ಸರ್ಕಾರದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಭೂಮಿಯನ್ನು…

Read More