ತುಮಕೂರು ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ನಿಟ್ಟೂರು ಹೋಬಳಿ ಬಿದರೆಹಳ್ಳ ಕಾವಲ್ನಲ್ಲಿ ನಿರ್ಮಾಣಗೊಂಡಿರುವ ಹೆಚ್ಎಎಲ್ ಹೆಲಿಕಾಪ್ಟರ್ ಘಟಕವನ್ನು ಸನ್ಮಾನ್ಯ ಭಾರತದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಫೆಬ್ರವರಿ 13, 2023ರಂದು ಉದ್ಘಾಟಿಸಲಿದ್ದಾರೆ ಎಂದು ಸಂಸದರಾದ ಜಿ.ಎಸ್. ಬಸವರಾಜು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಸದರಿ ಹೆಚ್ಎಎಲ್ ಹೆಲಿಕಾಪ್ಟರ್ ಘಟಕವನ್ನು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ 2016ರಲ್ಲಿ ಶಂಕುಸ್ಥಾಪನೆಗೊಂಡು ಈಗ ನಮ್ಮ ಜನಪ್ರಿಯ ಪ್ರಧಾನಮಂತ್ರಿಗಳಿಂದಲೇ ಪ್ರಾರಂಭಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿರುತ್ತದೆ ಎಂದು ತಿಳಿಸಿದರು. ಸದರಿ ಹೆಚ್.ಎ.ಎಲ್. ಘಟಕವನ್ನು ವಿಸ್ತರಿಸಲು ಹೆಚ್ಎಎಲ್ನ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಇದನ್ನು ಕಾರೇಹಳ್ಳಿಯ ಹತ್ತಿರ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ. ಈ ಸ್ಥಳವು ಸೂಕ್ತವಾಗಿರುವುದಿಲ್ಲವಾದ್ದರಿಂದ ಬಿದರೇಹಳ್ಳ ಕಾವಲ್ ಹತ್ತಿರದ ಅರಣ್ಯ ಇಲಾಖೆಗೆ ಸೇರಿದ ಜಾಗವು ಸೂಕ್ತವಾಗಿರುವುದರಿಂದ ಅಲ್ಲಿ ಏರ್ ಪೋರ್ಸ್ಸಿಯನ್ನು ಪ್ರಾರಂಭಿಸಲು ಅರಣ್ಯ ಇಲಾಖೆಯಿಂದ 1300 ಎಕರೆ ಜಾಗವನ್ನು ಪಡೆದು ಅರಣ್ಯ ಇಲಾಖೆಗೆ ಪ್ರತಿಯಾಗಿ ಬೇರೆ ಪ್ರದೇಶವನ್ನು ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ. ಇದರಿಂದ ಇಲ್ಲಿ…
Author: News Desk Benkiyabale
ತುಮಕೂರು ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ನಾಗರಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ನಗರದಲ್ಲಿ ಕಾಲ್ನಡಿಗೆ ಜಾಥಾ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಪ್ರಾರಂಭವಾದ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಮಾತನಾಡಿ, ಈಗಾಗಲೇ ನಮ್ಮ ದೇಶದಲ್ಲಿ ಸಿರಿಧಾನ್ಯಗಳ ಮಹತ್ವನ್ನು ಜನರು ಬಹಳಷ್ಟು ಅರಿತುಕೊಂಡಿದ್ದಾರೆ. ಅದರಲ್ಲೂ ಕರ್ನಾಟಕ ಮುಂಚೂಣಿಯಲ್ಲಿದ್ದು, ಕಳೆದ 15 ವರ್ಷಗಳಿಂದ ರೈತರು, ಸರ್ಕಾರ ಮತ್ತು ಅಧಿಕಾರಿಗಳು ಸಿರಿಧಾನ್ಯಗಳ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಜಿಲ್ಲೆಯಲ್ಲಿ ಸಿರಿಧಾನ್ಯಗಳ ಮಹತ್ವ ತಿಳಿಸುವ ಸಲುವಾಗಿ ಈ ಜಾಥಾ ಮಾಡಲಾಗುತ್ತಿದೆ ಎಂದ ಅವರು, ಸಿರಿಧಾನ್ಯಗಳು ಆರೋಗ್ಯಕ್ಕೆ ಬಹಳ ಒಳ್ಳೆಯ ಆಹಾರವಾಗಿದೆ. ಜತೆಗೆ ಈ ಸಿರಿಧಾನ್ಯಗಳು ಅತ್ಯಂತ ಕಡಿಮೆ ನೀರಿನಲ್ಲಿ ಬೆಳೆಯುವ ಬೆಳೆಯಾಗಿವೆ ಎಂದು ಅವರು ಹೇಳಿದರು. ತುಮಕೂರು ಕಡಿಮೆ ಮಳೆಯಾಗುವ ಜಿಲ್ಲೆ. ಹಾಗಾಗಿ ಈ ಪ್ರದೇಶದ ಮಣ್ಣಿನಲ್ಲಿ…
ತುಮಕೂರು ಹಣದುಬ್ಬರ ಪ್ರಮಾಣ ಹೆಚ್ಚಾಗಿ ಇಡೀ ವಿಶ್ವವೇ ಆರ್ಥಿಕ ಅಸ್ಥಿರತೆ ಎದುರಿಸುತ್ತಿದೆ. ಭಾರತದಲ್ಲೂ ಹಣದುಬ್ಬರ ಪ್ರಮಾಣ ಏರಿದರೂ ಮುಂದುವರಿದ ರಾಷ್ಟ್ರಗಳಾದ ಇಂಗ್ಲೆಂಡ್, ಯೂರೋಪ್ ಒಕ್ಕೂಟ, ಆಮೇರಿಕಾ, ರಷ್ಯ ಚೀನಾದಷ್ಟು ವೇಗಗತಿಯಲ್ಲಿ ಹಣದುಬ್ಬರ ಏರಲು ಪ್ರಧಾನಿ ಮೋದಿ ಅವರ ಆಡಳಿತ ಅವಕಾಶ ಮಾಡಿಕೊಟ್ಟಿಲ್ಲ. ಪ್ರಧಾನಿಯಾಗಿರುವುದರಿಂದಲೇ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರವಾಗಿ ಭಾರತ ಹೊರಹೊಮ್ಮಲು ಸಾಧ್ಯವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಭಿಪ್ರಾಯಪಟ್ಟರು. ಅವರು ಸಮುದಾಯ ಜಿಲ್ಲಾ ಬಿಜೆಪಿಯಿಂದ ಏರ್ಪಡಿಸಿದ್ದ ಶಕ್ತಿ ಕೇಂದ್ರ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೋದಿಯವರು ಈ ದೇಶದ ಪ್ರಧಾನಿಯಾದ ಮೇಲೆ ದೇಶದ ರಾಜಕೀಯ, ರಾಜಕಾರಣದ ಸ್ವರೂಪವೇ ಬದಲಾಯಿತು ಎಂದರು. ಶಕ್ತಿ ಕೇಂದ್ರದ ಸಭೆ ಪ್ರಮುಖರ ಸರ್ವರನ್ನು ಒಳಗೊಂಡ ಉತ್ತಮ ಆಡಳಿತ ನೀಡುತ್ತಿದ್ದಾರೆ. ಕೋವಿಡ್ನಲ್ಲಿ ಎರಡು ಡೋಸ್ ಲಸಿಕೆಯನ್ನು ಪೂರ್ಣಗೊಳಿಸಿದ ಏಕೈಕ ರಾಷ್ಟ್ರ ಭಾರತವಾಗಿದ್ದು, ಲಸಿಕೆಯನ್ನೇ ದಾನ ಮಾಡುವ ಮಟ್ಟಿಗೆ ಬೆಳೆದಿದೆ. ದಲಿತರು, ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿಯಾಗಿಸಿದ ಹಿರಿಮೆ ಬಿಜೆಪಿಗಿದ್ದು, ಮತದಾರರ ಬಳಿಹೋಗಲು ಪ್ರಮುಖರು…
ಗುಬ್ಬಿ ಪಕ್ಷದಿಂದ ಹುಚ್ಚಾಟಿದ ಶಾಸಕ ತಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೆ ಎಂಬ ಪರಿಜ್ಞಾನವಿಲ್ಲದೆ ಮತದಾರರ ಬಳಿ ಹೋಗಿ ಮತಯಾಚಿಸುತ್ತಿರುವುದು ಎಷ್ಟು ಸಮಂಜಸ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ವಕೀಲ ಪ್ರಸನ್ನ ಕುಮಾರ್ ಪ್ರಶ್ನಿಸಿದರು. ಅವರು ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ತಳ ಸಮುದಾಯದ ಜನರ ಆಶೋತ್ತರಗಳಿಗೆ ಸ್ಪಂದಿಸದಂತಹ ಶಾಸಕ ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂದು ತಿಳಿಯದೆ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮುಡಿಸುತ್ತಿರುವುದು ಎಷ್ಟು ಸಮಂಜಸ ಎಂದವರು ಕಾಂಗ್ರೆಸ್ ನಾಯಕರುಗಳ ವಿರೋಧವಿದ್ದರೂ ಸಹ ಮುಖಂಡರುಗಳ ಮನೆ ಬಾಗಿಲುಗಳಿಗೆ ಎಡತಾಗುತ್ತಿರುವುದು ಇವರಿಗೆ ಸೋಲಿನ ಭಯ ಬಂದಿರುವುದು ಸಹಜ ಮೊದಲು ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷದ ಕಾರ್ಯಕರ್ತನಾಗಿ ಬಾವುಟ ಹಿಡಿಯಲ್ಲಿ ಪಕ್ಷವನ್ನು ಸಂಘಟಿಸಿ ಆಮೇಲೆ ಟಿಕೆಟ್ ಆಕಾಂಕ್ಷಿಯಾಗಲಿ ಎಂದು ದೂರಿದರು . ಈಗಾಗಲೇ ಜನರ ಭಾವನೆಗಳಿಗೆ ಧಕ್ಕೆ ತರುವಂತ ಕೆಲಸವನ್ನು ಕುಕ್ಕರ್ ನೀಡುವ ಮುಖಾಂತರ ಮಾಡುತ್ತಿರುವುದು ಇವರ ಘನತೆಗೆ ತಕ್ಕದ್ದಲ್ಲ ಇದರಿಂದ ಸಾರ್ವಜನಿಕರ ನಂಬಿಕೆಗೆ ದ್ರೋಹವೆಸಗಿದ್ದಂತಾಗುತ್ತದೆ…
ತುಮಕೂರು ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ವತಿಯಿಂದ ರಾಜ್ಯಾಧ್ಯಕ್ಷರಾದ ಡಿ.ಕೆಂಪಣ್ಣ ಅವರ ನೇತೃತ್ವದಲ್ಲಿ ರಾಜ್ಯ ಗುತ್ತಿಗೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜನವರಿ 10 ರಂದು ಬೆಂಗಳೂರು ಚಲೋ ಬೃಹತ್ ಪ್ರತಿಭಟನೆಯನ್ನು ಪ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಎ.ಡಿ.ಬಲರಾಮಯ್ಯ ತಿಳಿಸಿದರು. ನಗರದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿರುವ ಗುತ್ತಿಗೆದಾರರ ಸಂಘದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಡಿ.ಕೆಂಪಣ್ಣ ಅವರ ಮೇಲೆ ವಿನಾಃ ಕಾರಣ ಮಾನನಷ್ಟ ಮೊಕದ್ದಮೆ ದಾಖಲಿಸಿ ಬಂಧಿಸಿದ್ದು, ಖಂಡನೀಯ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಅವರನ್ನು ಬಂಧಿಸುವ ಅಗತ್ಯವಿರಲಿಲ್ಲ, ಜಾಮೀನು ಪಡೆಯುವಂತಹ ಪ್ರಕರಣವನ್ನು ಜಾಮೀನು ರಹಿತ ಪ್ರಕರಣವೆಂದು ಬಿಂಬಿಸಿ ಅವರನ್ನು ಬಂಧಿಸಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಿ.ಕೆಂಪಣ್ಣ ಅವರ ಬಂಧನ ವಿಷಯ ತಿಳಿಯುತ್ತಿದ್ದಂತೆ ಸುಮಾರು 150 ಮಂದಿ ವಕೀಲರು ತೆರಳಿ ನಮ್ಮ ರಾಜ್ಯಾಧ್ಯಕ್ಷರನ್ನು ಬಿಡಿಸಿಕೊಂಡು ಬಂದಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಅವರನ್ನು ಬಂಧಿಸುವ ಕ್ರಮ ಕೈಗೊಂಡು ಬೆದರಿಕೆ…
ತುಮಕೂರು ತುಮಕೂರಿನಲ್ಲಿ ಬಹು ಸಂಖ್ಯಾತರಾಗಿರುವ ದಲಿತರ ಹಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದ್ದು ಈ ಕುರಿತು ಸಾಕಷ್ಟು ಬಾರಿ ಮನವಿ ಪ್ರತಿಭಟನೆ ನಡೆಸಿದರು ಪ್ರಯೋಜನವಾಗಿಲ್ಲ ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ ನಡೆಯಿತು. ಡಿ ಎಸ್ಎಸ್ತುಮಕೂರು ಜಿಲ್ಲಾ ಘಟಕದ ವತಿಯಿಂದ ನೂರಾರು ದಲಿತರು ನೀಲಿ ಬಾವುಟಗಳನ್ನು ಹಿಡಿದು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಯತ್ನ ನಡೆಸಿದರು ನಗರದ ಟೌನ್ ಹಾಲ್ ವೃತ್ತದಿಂದ ಮೆರವಣಿಗೆಯಲ್ಲಿ ಸಾಗಿ ಬಂದ ಮುಖಂಡರು ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಹೋಗಿ ಕೂಡಲೇ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ತುಮಕೂರು ನಗರದಲ್ಲಿರುವ ಡಾಕ್ಟರ್ ಬಾಬು ದೊಡ್ ಜೀವನ ರಾಮ್ ಭವನವನ್ನು ಶೀಘ್ರವಾಗಿ ನಿರ್ಮಾಣ ಮಾಡಬೇಕು. ತುಮಕೂರು ನಗರದಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆ ಅಥವಾ ಪುತ್ತಳಿಯನ್ನು ಶೀಘ್ರವಾಗಿ ಸ್ಥಾಪಿಸಬೇಕು, ಅಂಬೇಡ್ಕರ್ ಭವನವನ್ನ ಪುನರ್ ನವೀಕರಣ ಮಾಡಬೇಕು ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಯನ್ನು ಕೂಡ ನಿರ್ಮಾಣ ಮಾಡಬೇಕು ತೆಗೆರೆಯ ದಲಿತ…
ತುಮಕೂರು ನಗರದ ಹೊರವಲಯದಲ್ಲಿರುವ ಬಡಾವಣೆಗಳ ಅಭಿವೃದ್ದಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಅನುದಾನ ಬಳಕೆ ಮಾಡುತ್ತಿದ್ದು,ಸಿದ್ದರಾಮೇಶ್ವರ್ ಬಡಾವಣೆ ಒಂದಕ್ಕೆ ಸರಕಾರದ ವಿವಿಧ ಇಲಾಖೆಯಗಳು ಹಾಗೂ ಲೆಕ್ಕಶೀರ್ಷಿಕೆಯಲ್ಲಿ ಸುಮಾರು 10 ಕೋಟಿ ರೂಗಳಿಗೆ ಹೆಚ್ಚಿನ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ಶಾಸಕರ ವಿವೇಚನಾ ಕೋಟಾ ಆಡಿಯಲ್ಲಿ ನೀಡಲಾಗಿದ್ದ ಸುಮಾರು 50 ಕೋಟಿ ರೂಗಳ ಅನುದಾನದಲ್ಲಿ 1.60 ಕೋಟಿ ರೂಗಳ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡುತ್ತಿದ್ದ ಅವರು, ಲೋಕೋಪಯೋಗಿ ಇಲಾಖೆಯ ಅಡಿಯಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದು,ಹಂತ ಹಂತವಾಗಿ ಬಡಾವಣೆಯ ಒಳಭಾಗದ ರಸ್ತೆಗಳನ್ನು ಅಭಿವೃದ್ದಿ ಪಡಿಸಲಾಗುತ್ತಿದೆ ಎಂದರು. ಕಳೆದ 22 ವರ್ಷಗಳ ಹಿಂದೆ ನಗರಸಭೆಗೆ ಸೇರಿಕೊಂಡ ಮರಳೂರು,ದಿಬ್ಬೂರು,ಡಿ.ಎಂ.ಪಾಳ್ಯ, ಸತ್ಯಮಂಗಲ ಸೇರಿದಂತೆ ಹಲವಾರು ಬಡಾವಣೆಗಳು ಅನುದಾನದ ಕೊರತೆಯಿಂದ ಇದುವರೆಗೂ ಸುಸಜ್ಜಿತ ರಸ್ತೆ, ಚರಂಡಿ ಕಾಣಲು ಸಾಧ್ಯವಾಗಿರಲಿಲ್ಲ. ಆದರೆ ಇತ್ತೀಚಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ನೀಡಿದ ವಿವಿಧ ಅನುದಾನಗಳಲ್ಲಿ ಸಿದ್ದರಾಮೇಶ್ವರ್ ಬಡಾವಣೆ ಮತ್ತು ಪಕ್ಕದ…
ತುಮಕೂರು ಮುಂದಿನ 2023 ರ ವಿಧಾನಸಭೆ ಹಾಗು 2024 ರ ಲೋಕಾಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಹಾಗು ವಿಧಾನಪರಿಷತ್ ಸದಸ್ಯ ನವೀನ್ ಅವರ ನೇತೃತ್ವದಲ್ಲಿ ಇಂದಿನಿಂದ ಜನವರಿ 12 ರವರೆಗೆ ಬೂತ್ ವಿಜಯ ಅಭಿಯಾನವನ್ನು ಇಂದಿನಿಂದ ಆರಂಭಿಸಿತ್ತು ಸಿದ್ಧರಾಮೇಶ್ವರ ಬಡಾವಣೆ ಪಶ್ಚಿಮ 3ನೇ ಕ್ರಾಸ್ ನಲ್ಲಿರುವ 224ನೇ ಬೂತ್ ಅಧ್ಯಕ್ಷ ಜಗದೀಶ್ ಅವರ ಮನೆಯಿಂದ ಬೂತ್ ವಿಜಯ ಅಭಿಯಾನವನ್ನು ಅರಂಭಿಸಲಾಯಿತು.ಬೂತ್ ಕಮಿಟಿಯ ಸದಸ್ಯರು ಗಳ ಪರಿಶೀಲನೆ, ಅವರನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಯಿತು ಸಿದ್ದರಾಮೇಶ್ವರ ಬಡಾವಣೆಯ ವಾರ್ಡ್ ನಂ 35ಕ್ಕೆ ಒಳಪಟ್ಟ 224 ನೇ ಬೂತ್ ಅಧ್ಯಕ್ಷ ಜಗದೀಶ್ ಅವರ ಮನೆಯಲ್ಲಿ ಬೂತ್ ವಿಜಯ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಮಾತನಾಡಿ, ಜನವರಿ 02 ರಿಂದ 12 ವರೆಗೆ ಹತ್ತು ದಿನಗಳ ಕಾಲ ನಡೆಯುವ ಈ ಆಭಿಯಾನದಲ್ಲಿ 5 ಪ್ರಮುಖ ಕಾರ್ಯಕ್ರಮಗಳನ್ಬು ಹಾಕಿಕೊಂಡಿದೆ. ಬೂತ್ ಮಟ್ಟದ ಸದಸ್ಯರ ಕಾರ್ಯವೈಖರಿ,ಪಂಚರತ್ನ ತಂಡದ…
ತುಮಕೂರು ವಾಸ್ತುಶಿಲ್ಪಕ್ಕೆ ವಿಶ್ವಕರ್ಮ ಜನಾಂಗದ ಶಿಲ್ಪಿಗಳ ಕೊಡುಗೆ ಅಪಾರವಾಗಿದ್ದು, ಅಮರಶಿಲ್ಪಿ ಜಕಣಾಚಾರಿ ಕಾಲ್ಪನಿಕ ವ್ಯಕ್ತಿಯಾಗದೆ ಜನಸಾಮಾನ್ಯರ ಮನದಾಳದಲ್ಲಿ ಬೇರೂರುವ ಕೊಡುಗೆಯನ್ನು ಶಿಲ್ಪಕ್ಷೇತ್ರದಲ್ಲಿ ನೀಡಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ಅವರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ವಿಶ್ವಕರ್ಮ ಸಮಾಜದ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ಧ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಯಾವುದೇ ಆಧುನಿಕ ಆರ್ಕಿಟೆಕ್ಚರ್ ಮಾದರಿಗಳು, ಕಟ್ಟಡ ನಿರ್ಮಾಣ ಉಪಕರಣ, ಕೌಶಲಗಳು ವಿಶ್ವದ ಜನರಿಗೆ ಲಭ್ಯವಿಲ್ಲದ ಸಂದರ್ಭದಲ್ಲಿ ಅತ್ಯುತ್ತಮ ವಾಸ್ತುವಿನ್ಯಾಸವನ್ನು ಜನಾಂಗದ ಶಿಲ್ಪಿಗಳು ಜಗತ್ತಿಗೆ ಪರಿಚಯಿಸಿರುವುದು ವಿಸ್ಮಯವೇ ಸರಿ. ಶಿಲ್ಪಕಲಾ ಕೌಶಲ್ಯ ಕುರಿತಂತೆ ಕನ್ನಡ ಸಾಹಿತ್ಯ ಪರಿಷತ್ನವರೇ ನೇತೃತ್ವ ವಹಿಸಿ ಕನ್ನಡಭವನದಲ್ಲಿ ಸಮುದಾಯ ಶಿಲ್ಪಿಗಳು ಇತರೆ ಕಲಾವಿದರನ್ನು ಕರೆಸಿ ಕಾರ್ಯಗಾರ ಏರ್ಪಡಿಸಿ.ಅದಕ್ಕಾಗುವ ವ್ಯವಸ್ಥೆಯನ್ನು ತಾವೇ ಮಾಡಿಕೊಡುವುದಾಗಿ ತಿಳಿಸಿದರು. ನಿವೃತ್ತ ಪ್ರಾಧ್ಯಾಪಕರಾದ ಡಾ.ಕೆ.ವಿ.ಕೃಷ್ಣಮೂರ್ತಿ ಅವರು ಮುಖ್ಯ ಭಾಷಣ ಮಾಡಿ ಅಮರಶಿಲ್ಪಿ ಜಕಣಾಚಾರಿ ಜನಪದೀಯ ದಂತ ಕಥೆಯಾಗಿ ಮೇರುಶಿಲ್ಪಿಯಾಗಿ ನಾಡಿಗೆ ಭವ್ಯ ಕೊಡುಗೆ ನೀಡಿದ್ದಾರೆ. ಅವರು…
ತುಮಕೂರು ಕಲ್ಪತರುನಾಡಿನಲ್ಲಿ ವೈಕುಂಠ ಏಕಾದಶಿಯನ್ನು ಸಡಗರ ಸಂಭ್ರದೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗಿದ್ದು, ನಗರದ ವಿವಿಧ ಬಡಾವಣೆಗಳಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಇಲ್ಲಿನ ಬಟವಾಡಿಯ ವೆಂಕಟೇಶ್ವರ ಸ್ವಾಮಿ ದೇವಾಲಯ, ಜಯನಗರ ರಿಂಗ್ ರಸ್ತೆಯ ತಿರುಮಲ ನಗರ ದಕ್ಷಿಣದ ಕೆ.ಹೆಚ್.ಬಿ. ಕಾಲೋನಿಯಲ್ಲಿರುವ ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ, ಸರಸ್ವತಿ ಪುರಂನ ವೆಂಕಟೇಶ್ವರ ಸ್ವಾಮಿ ದೇಗುಲ, ಜಯನಗರದ ಪದ್ಮಾವತಿ ವೆಂಕಟೇಶ್ವರಸ್ವಾಮಿ ದೇವಾಲಯ, ಟಿಜಿಎಂಸಿ ಬ್ಯಾಂಕ್ ಮುಂಭಾಗದ ಮಹಾಲಕ್ಷ್ಮಿ ದೇವಾಲಯ, ಸಿರಾಗೇಟ್ನ ದೇವಾಲಯ, ಸೋಮೇಶ್ವರ ಪುರಂನ ಗೋಪಾಲಕೃಷ್ಣ ದೇವಾಲಯ, ಶಾಂತಿನಗರದ ಲಕ್ಷ್ಮೀವೆಂಕಟೇಶ್ವರಸ್ವಾಮಿ ದೇವಾಲಯ, ತುರುವೇಕೆರೆ ತಾಲ್ಲೂಕಿನ ಮುದುಗೆರೆ ಸಮೀಪದ ಶ್ರೀ ಕೋಡಿ ರಂಗನಾಥಸ್ವಾಮಿ ದೇವಾಲಯ, ಸಂಪಿಗೆಯ ವೆಂಕಟೇಶ್ವರ ಸ್ವಾಮಿ ದೇವಾಲಯ ಹಾಗೂ ಗುಬ್ಬಿಯ ಬೇಟೆರಾಯಸ್ವಾಮಿ ದೇವಾಲಯ, ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯಾದ್ಯಂತ ವೈಕುಂಠ ಏಕಾದಶಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಇಂದು ಮುಂಜಾನೆಯಿಂದಲೇ ಭಕ್ತಾದಿಗಳು ವೆಂಕಟೇಶ್ವರ ಸ್ವಾಮಿ…











