Author: News Desk Benkiyabale

ತುಮಕೂರು: ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬAಧಿಸಿದAತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೋಮವಾರ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಯಾವುದೇ ಇಂತಹ ಪ್ರಕರಣಗಳು ನಡೆದಿಲ್ಲ ಹಾಗೂ ಸಫಾಯಿ ಕರ್ಮಚಾರಿಗಳು ಇರುವುದಿಲ್ಲವೆಂದು ವರದಿ ನೀಡಿದ್ದಾರೆ. ಆದರೂ ಇಂತಹ ಘಟನೆ ನಡೆದಿರುವುದು ದುರಾದೃಷ್ಟಕರ, ಘಟನೆಗೆ ಸಂಬAಧಿಸಿದAತೆ ತಪ್ಪಿತಸ್ಥರ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಘಟನೆಯಲ್ಲಿ ನೊಂದಿರುವ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು. ಘಟನೆ ನಡೆದು ೩ ದಿನಗಳು ಆಗಿದ್ದರೂ, ತಪ್ಪಿತಸ್ಥರನ್ನು ಈವರೆಗೆ ಬಂಧಿಸಲಾಗಿಲ್ಲ ಹಾಗೂ ಅಧಿಕಾರಿಗಳು ಘಟನೆಗೆ ಸಂಬAಧಿಸಿದAತೆ ಸರಿಯಾದ ಕ್ರಮ ಜರುಗಿಸದ ಕಾರಣ ಆಯೋಗ ಮಧ್ಯ ಪ್ರವೇಶ ಮಾಡಿದೆ. ಈಗಾಗಲೇ ಪೊಲೀಸ್…

Read More

ಹುಳಿಯಾರು: ಖಾಸಗಿ ಶಾಲೆಗಳ ಮಿತಿಮೀರಿದ ಆರ್ಭಟ, ಸರ್ಕಾರಿ ಶಾಲೆಗಳು ಮಕ್ಕಳ ದಾಖಲಾತಿ ಇಲ್ಲದೆ ಮುಚ್ಚುತ್ತಿರುವ ಇಂದಿನ ಆತಂಕಕಾರಿ ದಿನಗಳ ನಡುವೆಯೂ, ಹುಳಿಯಾರಿನ ಕರ್ನಾಟಕ ಪಬ್ಲಿಕ್ ಶಾಲೆ (ಈಗ ಕೆಪಿಎಸ್, ಆಗ ಎಂಪಿಎಸ್) ಇಂದಿಗೂ ಪೋಷಕರು ಮತ್ತು ಮಕ್ಕಳ ಪಾಲಿಗೆ ಭರವಸೆಯ ಬೆಳಕಾಗಿ ನಿಂತಿದೆ. ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಈ ಹೆಮ್ಮೆಯ ವಿದ್ಯಾಕೇಂದ್ರ, ಕೇವಲ ಒಂದು ಕಟ್ಟಡವಲ್ಲ. ಇದು ಹುಳಿಯಾರಿನ ಸಾಂಸ್ಕöÈತಿಕ ಮತ್ತು ಶೈಕ್ಷಣಿಕ ಚರಿತ್ರೆಯ ಜೀವಂತ ಸಾಕ್ಷಿಯಾಗಿದೆ. ಲಕ್ಷಾಂತರ ಸಾಧಕರನ್ನು ರೂಪಿಸಿದ ಜ್ಞಾನ ದೇಗುಲ: ಶತಮಾನ ಕಂಡಿರುವ ಈ ಶಾಲೆಯಲ್ಲಿ ಓದಿ ಬೆಳೆದ ಲಕ್ಷಾಂತರ ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ಉನ್ನತ ಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೇಷ್ಠ ಸಾಹಿತಿಗಳು, ನುರಿತ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು, ರಾಜಕಾರಣಿಗಳು ಹಾಗೂ ದಕ್ಷ ಅಧಿಕಾರಿಗಳು ಬಹುಮುಖ್ಯವಾಗಿ ಸಾಮಾಜಿಕ ಕಳಕಳಿಯುಳ್ಳವರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ ಕೀರ್ತಿ ಈ ಜ್ಞಾನದೇಗುಲಕ್ಕೆ ಸಲ್ಲುತ್ತದೆ. ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ನಿರ್ಮಾಣಗೊಂಡ ಈ ಸುಂದರ ಕಟ್ಟಡವು ಹಿಂದೆ ತಾಲೂಕು ಕಚೇರಿಯಾಗಿಯೂ ಕಾರ್ಯನಿರ್ವಹಿಸುತ್ತಿತ್ತು…

Read More

ಶಿರಾ: ರೈತರು ಭೂಮಿಯನ್ನು ಹೊಂದಿರುವುದಷ್ಟೇ ಅಲ್ಲ, ತಮ್ಮ ಜಮೀನುಗಳ ಬಗ್ಗೆ ಕಾನೂನು ಅರಿವು ಅವಶ್ಯಕವಾಗಿದೆ. ಹಕ್ಕುಗಳು ಮತ್ತು ದಾಖಲಾತಿಗಳ ಬಗ್ಗೆ ಸರ್ಕಾರ ಕೈಗೊಂಡಿರುವ ಯೋಜನೆಗಳ ಭೂ ಸುಧಾರಣೆ ಬಗ್ಗೆ ರೈತರು ತಿಳಿದುಕೊಳ್ಳುವುದಲ್ಲದೆ, ತಮ್ಮ ಹಕ್ಕನ್ನು ತಾವೇ ಪಡೆಯುವ ಜ್ಞಾನವನ್ನು ಪಡೆದಾಗ ಮಾತ್ರ ಭೂ ಒಡೆತನ ಹೊಂದಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎನ್.ಲಿಂಗಪ್ಪ ತಿಳಿಸಿದರು. ಶಿರಾ ತಾಲ್ಲೂಕಿನ ಗುಮ್ಮನಹಳ್ಳಿಯ ಲೋಹಿಯಾ ಸಮಾತಾ ವಿದ್ಯಾಲಯದಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ನಾಯಕತ್ವದ ಶಿಬಿರದಲ್ಲಿ ಭೂಮಿ ಮತ್ತು ಭೂ ಕಂದಾಯ ಕಾನೂನುಗಳು, ರೈತರ ಹಕ್ಕಗಳು ಮತ್ತು ಪರಿಹಾರ ವಿಷಯ ಕುರಿತು ಮಾತನಾಡಿದ ಅವರು, ಭೂಕಂದಾಯ ಇತಿಹಾಸವು ಕೇವಲ ತೆರಿಗೆಗಳ ಸಂಗ್ರಹಣೆಯ ಕಥಾನಕವಲ್ಲ ಅದು ಸಮಾಜದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ವಿಕಾಸಗೊಂಡಿದ್ದರ ಪ್ರತಿಬಿಂಬವಾಗಿದೆ. ಭೂಮಿ ಎಂಬ ಸಂಪತ್ತು ಮಾನವ ಸಂಸ್ಕೃತಿಯಲ್ಲಿ ಮಹತ್ವ ಹೊಂದಿದೆ. ಪ್ರಾಚೀನ ಕೃಷಿ ಆರ್ಥಿಕತೆಯಿಂದ ಪ್ರಸ್ತುತ ಆಡಳಿತ ವ್ಯವಸ್ಥೆಗಳವರೆಗೆ ಭೂಮಿ ಮತ್ತು ಭೂಕಂದಾಯ ವ್ಯವಸ್ಥೆಗಳ ನಿರ್ವಹಣೆ, ಆಳ್ವಿಕೆ, ನೀತಿಗಳು ಮತ್ತು…

Read More

ತುಮಕೂರು: ನಗರದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ಅಮಾಯಕ ದಲಿತ ಕಾರ್ಮಿಕರಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಹೇಯ ಕೃತ್ಯ ನಡೆದಿದೆ. ದಲಿತ ಸಮುದಾಯದಿಂದ ಮುಖ್ಯಮಂತ್ರಿ ಆಗಲು ಹೊರಟಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಇದೂವರೆಗೆ ಈ ಘಟನೆ ಬಗ್ಗೆ ಒಂದು ಹೇಳಿಕೆ ನೀಡಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಟೀಕಿಸಿದರು. ಮಲ ಬಾಚಿಸಿರುವ ಕೆಇಬಿ ಅಸೋಸಿಯೇಷನ್ ಪದಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ವೈ.ಹೆಚ್. ಹುಚ್ಚಯ್ಯ, ದಲಿತರ ಕೈಯ್ಯಲ್ಲಿ ಮಲ ಎತ್ತಿಸಿದ ಕೃತ್ಯ ಖಂಡನೀಯ. ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ, ಇದೇ ಸಮುದಾಯದಿಂದ ಮುಖ್ಯಮಂತ್ರಿ ಆಗಲು ಹೊರಟಿರುವ, ದಲಿತರ ರಕ್ಷಣೆ ಮಾಡುವಲ್ಲಿ ವಿಫಲರಾದ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.…

Read More

ತುಮಕೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಎಂಬುದು ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಸಂವಿಧಾನದತ್ತವಾಗಿ ಪಡೆದಿರುವ ಮತದಾನದ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರವಾಗಿದ್ದು, ಇದನ್ನು ಎಲ್ಲರೂ ಒಗ್ಗೂಡಿ, ಹಿಮ್ಮೆಟ್ಟಿಸುವ ಕೆಲಸ ಆಗಬೇಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ತಿಳಿಸಿದ್ದಾರೆ. ನಗರದ ಮದರ್ ಷಾ ಷಾದಿ ಮಹಲ್‌ನಲ್ಲಿ ಜಿಲ್ಲಾ ಕಾಂಗ್ರೆಸ್‌ನ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ೧ ಮತ್ತು ೨ರ ಬಿ.ಎಲ್.ಎ-೨ ಗಳಿಗೆ ಹಮ್ಮಿಕೊಂಡಿದ್ದ ಎಸ್.ಐ.ಆರ್. ಕುರಿತ ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಇದೇ ಜೂನ್ ೩೦ರಿಂದ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಬಿಲ್.ಎಲ್.ಓಗಳು ಪ್ರತಿ ಮನೆ ಮನೆಗೆ ಬಂದು ಮತದಾರರ ನೊಂದಣಿ ಅರ್ಜಿ ಭರ್ತಿ ಮಾಡಿಸುವ ಕೆಲಸ ಮಾಡಲಿದ್ದು, ಈ ವೇಳೆ ಪಕ್ಷದ ವತಿಯಿಂದ ನೇಮಕಗೊಂಡಿರುವ ಬಿಎಲ್‌ಎ-೦೨ಗಳು ಹೆಚ್ಚಿನ ನಿಗಾವಹಿಸಿ, ಯಾವೊಬ್ಬ ಅರ್ಹ ಮತದಾರನು ಮತದಾರರ ಪಟ್ಟಿಯಿಂದ ಕೈ ಬಿಡದಂತೆ ನೋಡಿಕೊಳ್ಳಬೇಕು. ಇದು ನಿಮಗೆ ಪಕ್ಷ ವಹಿಸಿರುವ ಗುರುತರ ಜವಾಬ್ದಾರಿಯಾಗಿದೆ ಎಂದರು. ಮುAದಿನ…

Read More

ತುಮಕೂರು: ಹೊರಗಿನ ಯಶಸ್ಸನ್ನು ಹುಡುಕುವ ಆತುರದಲ್ಲಿ ನಾವಿಂದು ಅಂತರ್ಯದಲ್ಲಿರುವ ನಿಜವಾದ ಯಶಸ್ಸನ್ನು ಕಂಡುಕೊಳ್ಳುವುದರಲ್ಲಿ ವಿಫಲರಾಗುತ್ತಿದ್ದೇವೆ. ಹಾಗಾಗಿ, ಪ್ರತಿಯೊಬ್ಬರೂ ಮೊದಲು ತಮ್ಮ ಅಂತರಳವನ್ನು ಗೆಲ್ಲಲು ಕಲಿಯಬೇಕು ಎಂದು ಬೆಂಗಳೂರಿನ ಕರ್ನಾಟಕ ಸಂಸ್ಕöÈತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಡಾ. ಪಿ. ಸದಾನಂದ ಮಯ್ಯ ಸ್ಕೂಲ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್ ವತಿಯಿಂದ ಜೂ. ೨೯ ಸೋಮವಾರದಂದು ಎಂ.ಕಾA ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ‘ಆಂತರ್ಯ’ ವಿದಾಯ ಸಮಾರಂಭದಲ್ಲಿ ಮಾತನಾಡಿದರು. ಕೃತಕ ಬುದ್ಧಿಮತ್ತೆಯ ಇಂದಿನ ಯುಗದಲ್ಲಿ ಉದ್ಯೋಗಾವಕಾಶಗಳ ಕುರಿತು ಆತಂಕ ಮೂಡುವುದು ಸಹಜ. ಆದರೆ ತಂತ್ರಜ್ಞಾನ ಅಥವಾ ಯಂತ್ರಗಳು ಬಂದ ತಕ್ಷಣವೇ ಎಲ್ಲವೂ ಮುಗಿಯುವುದಿಲ್ಲ. ಬದಲಿಗೆ ಅದಕ್ಕೆ ಪೂರಕವಾದ ಹೊಸ ಕೆಲಸಗಳು ಮತ್ತು ಅವಕಾಶಗಳು ಸೃಷ್ಟಿಯಾಗುತ್ತವೆ. ನಾವೀಗ ಬದಲಾವಣೆಯ ಸುನಾಮಿಯಲ್ಲಿ ಸಿಲುಕಿದ್ದೇವೆ. ಈ ಅನಿವಾರ್ಯ ಪರಿಸ್ಥಿತಿಯಲ್ಲಿ ಬಿದ್ದು, ಎದ್ದು, ಈಜಿ ದಡ ಸೇರುವುದನ್ನು ನಾವೆಲ್ಲರೂ ಕಲಿಯಬೇಕಾಗಿದೆ ಎಂದರು. ದೇಶದ ಸರ್ವಾಂಗೀಣ ಬೆಳವಣಿಗೆಯಿಂದ…

Read More

ಕೊರಟಗೆರೆ: ಈ ವೇಳೆ ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕೆ ಉದ್ಯಮಿಗಳಿಂದ ಒಟ್ಟು ೧ ಕೋಟಿ ೧ ಲಕ್ಷ ರೂಪಾಯಿ ನೆರವಿನ ಘೋಷಣೆ ಗಮನ ಸೆಳೆಯಿತು. ಈ ಕುರಿತು ವರದಿ ಇಲ್ಲಿದೆ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತಿಯನ್ನು ಕೊರಟಗೆರೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ಸಂಯುಕ್ತಾಶ್ರ ಯದಲ್ಲಿ ಪಟ್ಟಣದ ಸಾದರ ಸಮುದಾಯ ಭವನ ದಲ್ಲಿ ವಿಜೃಂಭಣೆಯಿAದ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿ ಮಂಜುನಾಥ್ ಕೆ.ಎಂ., ಕೆಂಪೇಗೌಡರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಎಲ್ಲಾ ಜಾತಿ-ಧರ್ಮದ ಜನರನ್ನು ಒಗ್ಗೂಡಿಸಿ ಕೆರೆ, ಕಟ್ಟೆ, ದೇವಾಲಯ ಹಾಗೂ ಮಾರುಕಟ್ಟೆಗಳನ್ನು ನಿರ್ಮಿಸುವ ಮೂಲಕ ಬೆಂಗಳೂರಿಗೆ ಭದ್ರ ಅಡಿಪಾಯ ಹಾಕಿದ ದೂರದೃಷ್ಟಿಯ ಆಡಳಿತಗಾರ ಎಂದು ಬಣ್ಣಿಸಿದರು. ಯುವಜನತೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಂಎನ್‌ಜೆ ಗ್ರೂಪ್‌ನ ಸಂಸ್ಥಾಪಕ ಎಂ.ಎನ್.ಜೆ. ಮಂಜುನಾಥ್, ಕೆಂಪೇಗೌಡರ ವ್ಯಾಪಾರ ಹಾಗೂ ಅಭಿವೃದ್ಧಿ ದೃಷ್ಟಿಕೋನವೇ ಬೆಂಗಳೂರು…

Read More

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ.ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ತುಮಕೂರು ಜಿಲ್ಲಾ ವಾಲ್ಮೀಕಿ ನಾಯಕರ ಕ್ಷೇಮಾಭಿವೃದ್ದಿ ಸಂಘ(ರಿ), ಶಬರಿ ಮಹಿಳಾ ಪತ್ತಿನ ಸಹಕಾರ ಸಂಘ, ನಿ. ತುಮಕೂರು ವಾಲ್ಮೀಕಿ ಸಹಕಾರ ಸಂಘ(ರಿ).ನಿ, ಶ್ರೀವಾಲ್ಮೀಕಿ ವಿದ್ಯಾವರ್ಧಕ ಸಂಘ(ರಿ), ಮತ್ತು ಜಿಲ್ಲಾ ನಾಯಕ ಮಹಿಳಾ ಸಮಾಜ ಆಯೋಜಿಸಿದ್ದ ೨೦೨೫-೨೬ನೇ ಸಾಲಿನ ಎಸ್.ಎಸ್.ಎಲ್.ಸಿ., ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ೪ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಶಿಕ್ಷಣದ ಮೂಲಕ ಯಾರ ಮೇಲೂ ಅವಲಂಬನೆಯಾಗದೆ, ಆತ್ಮಸ್ಥೆöÊರ್ಯದಿಂದ ಬದುಕುವ ವಾತಾವರಣವನ್ನು ಸಮುದಾಯದ ಯುವಜನರು ರೂಢಿಸಿಕೊಳ್ಳಬೇಕೆಂದರು. ಸಮುದಾಯದ ಸಂಘಟನೆಗೆ ಪ್ರತಿಭಾ ಪುರಸ್ಕಾರವೆಂಬುದು ಒಂದು ಕಾರಣ. ಪ್ರತಿಭೆ ಪ್ರೋತ್ಸಾಯಿಸುವುದು ಒಂದು ಕಡೆಗೆ ಹೆಮ್ಮೆ ಮತ್ತು ಮತ್ತೊಂದು ಕಡೆಗೆ ಜವಾಬ್ದಾರಿ ಕೂಡ ಆಗಿದೆ. ಇಂತಹ ಕಾರ್ಯಕ್ರಮಗಳು ಪ್ರತಿ ತಾಲೂಕು ಹಂತದಲ್ಲಿಯೂ ನಡೆದರೆ…

Read More

ಕೊರಟಗೆರೆ: ಮೀಸಲಾತಿ ಆರಿಗುವ ಕೊರಟಗೆರೆ ವಿಧಾನಸಭಾ ಕ್ಷೇತ್ರವು ಸಾಮಾನ್ಯ ಕ್ಷೇತ್ರವಾದರೇ ೨೦೨೮ಕ್ಕೆ ಮತದಾರರು ಸೂಚಿಸುವ ಪಕ್ಷದಿಂದ ನಾನೇ ಶಾಸಕ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಕೋಳಾಲ ಜಿಪಂ ಮಾಜಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ತಿಳಿಸಿದರು. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಮಾವತ್ತೂರು ಗ್ರಾಪಂ ವ್ಯಾಪ್ತಿಯ ವಿಶ್ವಜ್ಞಾನ ಭಾರತಿ ಪ್ರೌಢ ಶಾಲೆಯಲ್ಲಿ ಪಿಎನ್‌ಕೆ ಅಭಿಮಾನಿ ಬಳಗದಿಂದ ಶುಕ್ರವಾರ ಏರ್ಪಡಿಸಲಾಗಿದ್ದ ಸಮವಸ್ತç ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನನ್ನ ರಾಜಕೀಯ ಜನ್ಮ ಭೂಮಿ ಕೊರಟಗೆರೆ ಕ್ಷೇತ್ರ. ೨೦೦೮ರಲ್ಲಿ ಮೀಸಲಾತಿ ಬರದೇ ಇದ್ದಿದ್ದರೇ ನಾನು ಶಾಸಕನಾಗಿ ಆಯ್ಕೆ ಆಗ್ತಿದ್ದೆ. ಯಾರೇ ಬಂದರೂ ಚುನಾವಣೆಗೆ ನಿಲ್ಲೂದು ಖಚಿತ.ಕೊರಟಗೆರೆ ಕ್ಷೇತ್ರದ ಜನತೆ ನನ್ನ ಕೈ ಹಿಡಿತಾರೆ ಎಂಬ ಭರವಸೆ ನನಗಿದೆ. ಜಿಪಂ ಸದಸ್ಯನಾಗಿ ೫ವರ್ಷ ಮತ್ತು ೨೦ವರ್ಷ ಕೊರಟಗೆರೆ ಕ್ಷೇತ್ರದಲ್ಲಿ ನನ್ನ ಕೈಲಾದ ಬಡವರ ಪರವಾಗಿ ಜನಸೇವೆ ಮಾಡಿದ್ದೇನೆ ಎಂದರು. ಬೆAಗಳೂರಿನ ಉದ್ಯಮಿ ಪರಮೇಶ್ ಮಾತನಾಡಿ ಪಿಎನ್‌ಕೆ ಅವರ ಜೊತೆ ನನಗೇ ೪ ದಶಕಗಳ ಒಡನಾಟವಿದೆ. ಕೋವಿಡ್ ವೇಳೆ ನಿರಾಶ್ರಿತರಿಗೆ…

Read More

ತುರುವೇಕೆರೆ: ಎಸ್.ಐ.ಆರ್ ಬಗ್ಗೆ ಗೊಂದಲ, ತಪುö್ಪ ತಿಳುವಳಿಯಿಂದ ವಿರೋಧ ಪಕ್ಷಗಳು ಆರೋಪಗಳನ್ನು ಮಾಡುತ್ತಿವೆ ಎಂದು ಬಿಜೆಪಿ ಮುಖಂಡ ಸಚ್ಚಿದಾನ ಮೂರ್ತಿ ತಿಳಿಸಿದರು. ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ತಾಲ್ಲೂಕು ಬಿಜೆಪಿ ಘಟಕದಿಂದ ಆಯೋಜಿಸಿದ ಭೂತ್ ಮಟ್ಟದ ಅದ್ಯಕ್ಷರು, ಎಸ್.ಐ.ಆರ್ ಬಗ್ಗೆ ಕಾರ್ಯಗಾರ ಹಾಗೂ ಬಿಎಲ್.ಒ ೨ ಸಮಾವೇಶ ಸಭೆಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಬಿಎಲ್.ಓ ೨ ಗಳ ಮೇಲೆ ಗುರುತರವಾದ ಜವಬ್ದಾರಿ ಇದೆ. ೨೦೨೩ಚುನಾವಣೆಯಲ್ಲಿ ಮಾಡಿದ ತಪುö್ಪ ೨೦೨೮ ರ ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬಾರದು ಎಂದರು. ಎಸ್.ಐ.ಆರ್ ಜಾರಿಯಿಂದ ನೈಜ ಮತದಾರರನ್ನು ತೆಗೆಯುವ ಸಾದ್ಯವಿಲ್ಲ. ಇದರ ಬಗ್ಗೆ ಜನರಿಗೆ ತಿಳಿಸಬೇಕಿದೆ. ಈಗಾಗಲೇ ರಾಜ್ಯದಲ್ಲಿ ೧೩ ಸಲ ಮತದಾನ ಪರೀಕ್ಷರಣೆ ಅಂದರೆ ಎಸ್.ಐ.ಆರ್ ಹಾಗಿದೆ. ಯಾವುದೇ ಅಂತAಕ ಬೇಡ. ದೇಶದಲ್ಲಿ ೧೩ರಾಜ್ಯಗಳಲ್ಲಿ ಎಸ್.ಐ.ಆರ್ ಮಾಡಲಾಗಿದೆ ಉಳಿದ ೧೨ರಾಜ್ಯಗಳಲ್ಲಿ ಪ್ರಾರಂಭವಾಗಿದ್ದು ಕರ್ನಾಟಕದಲ್ಲಿ ಇದೇ ತಿಂಗಳ ೩೦ರಿಂದ ಎಸ್.ಐ.ರ್ ಅಧಿಕಾರಿಗಳು ಪ್ರಾರಂಭಿಸಲಿದ್ದು ಈಗಾಗಲೇ ತರಬೇತಿ ನೀಡಲಾಗಿದೆ. ತಾಲೂಕಿನ ೨೨೪ ಭೂತ್ ಗಳಲ್ಲಿ ಸರ್ಕಾರಿ ಅಧಿಕಾರಿ ನೇಮಿಸಿದ್ದು…

Read More