Author: News Desk Benkiyabale

ತುಮಕೂರು ಶಿಕ್ಷಣವೆಂದರೆ ಕೇವಲ ಅಕ್ಷರಗಳಲ್ಲ.ಮಗುವಿನ ಸಮಗ್ರ ವಿಕಾಶ ಎಂದು ತುಮಕೂರು ಮೇಯರ್ ಶ್ರೀಮತಿ ಪ್ರಭಾವತಿ ಎಂ.ಸುಧೀಶ್ವರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಬಾಲಭವನದಲ್ಲಿ ಸಿದ್ದಗಂಗಾ ಬಡಾವಣೆಯ 35ನೇ ಕ್ರಾಸ್‍ನಲ್ಲಿರುವ ಎಸ್.ಹೆಚ್.ವಿ.ವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮ “ಸ್ಪೂರ್ತಿ” ಉದ್ಘಾಟಿಸಿ ಮಾತನಾಡುತಿದ್ದ ಅವರು,ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆ ಎಂಬ ಮಾತಿದೆ. ಅದಕ್ಕೆ ಪೂರಕವೆಂಬಂತೆ ಶಾಲಾ ಪೂರ್ವ ಶಿಕ್ಷಣ ಮನೆಯಲ್ಲಿಯೇ ದೊರೆತರೆ ಮಕ್ಕಳಲ್ಲಿ ಹೆಚ್ಚು ಪ್ರಜ್ಞಾವಂತಿಕೆಯನ್ನು ಕಾಣಬಹುದೆಂದರು. ಶಿಕ್ಷಣ ಇಂದು ಎಲ್ಲರಿಗೂ ಅಗತ್ಯವಿದೆ.ಒಂದು ದೇಶದ ಬೆಳೆವಣಿಗೆಯನ್ನು ಅಲ್ಲಿನ ರಸ್ತೆ,ಕಟ್ಟಡಗಳಿಂತ ಜನರಿಗೆ ದೊರೆಯುತ್ತಿರುವ ಶಿಕ್ಷಣ ಹಾಗೂ ಅದರಿಂದ ಆಗುತ್ತಿರುವ ಪ್ರಯೋಜನಗಳ ಮೇಲೆ ಅಳೆಯಲಾಗುತ್ತಿದೆ.ಹಾಗಾಗಿ ಇಂದು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಬಂದಿದೆ.ಮಕ್ಕಳ ಮನಸ್ಸು ಅತ್ಯಂತ ಮೃದು,ಅದನ್ನು ಹಾಳು ಮಾಡದಂತೆ ಮಕ್ಕಳಲ್ಲಿ ಮಾನವೀಯ ಆಂತಃಕರಣ ತುಂಬುವ ಕೆಲಸವನ್ನು ಶಿಕ್ಷಕರು ಮಾಡುವ ಮೂಲಕ ಒರ್ವ ಉತ್ತಮ ಪ್ರಜೆಯಾಗಿ ರೂಪಿಸಬೇಕೆಂದು ಮೇಯರ್ ಪ್ರಭಾವತಿ ಸುಧೀಶ್ವರ ತಿಳಿಸಿದರು. ಮಕ್ಕಳ ತಜ್ಞ ಡಾ.ರಾಜಶೇಖರ್ ಮಾತನಾಡಿ,ಆರೋಗ್ಯವಂತ ಮಗುವಿನಲ್ಲಿ ಮಾತ್ರ,ಒಳ್ಳೆಯ ಮನಸ್ಸು ಇರಲು ಸಾಧ್ಯ ಹಾಗಾಗಿ ಶಿಕ್ಷಣ ಮಗುವಿನ ದೈಹಿಕ ಮತ್ತು ಮಾನಸಿಕ…

Read More

ತುಮಕೂರು ಜನ ಸಾಮಾನ್ಯರ ದುಃಖ ದುಮ್ಮಾನಗಳಿಗೆ ಸ್ಪಂದಿಸಿರುವ ಬಿಜೆಪಿ, ಎಲ್ಲರ ಕಲ್ಯಾಣ, ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮತ್ತು ತುಮಕೂರು ಜಿಲ್ಲಾ ಒಬಿಸಿ ಮೋರ್ಚಾ ಪ್ರಭಾರಿ ಪ್ರೇಮ ನಾಗಯ್ಯ ಅಭಿಪ್ರಾಯ ವ್ಯಕ್ತಪಡಿಸಿ, ಬಿಜೆಪಿ ಜನಪರ ಕಾರ್ಯಕ್ರಮಗಳಿಗೆ ಜನತೆಯ ಶ್ರೀರಕ್ಷೆ ಇದೆ ಎಂದರು. ಇವರು ಬಿಜೆಪಿ ಶಕ್ತಿ ಸೌಧದಲ್ಲಿ ನಡೆದ ಒಬಿಸಿ ಮೋರ್ಚಾದ ತುಮಕೂರು ಗ್ರಾಮಾಂತರ ಮಂಡಲದ ಕಾರ್ಯಕಾರಿಣಿ ಸಭೆಯಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಾ, ತುಮಕೂರು ಗ್ರಾಮಾಂತರದಲ್ಲಿ ಶಾಸಕರಾಗಿದ್ದ ಬಿ.ಸುರೇಶ್‍ಗೌಡರು ಈ ಹಿಂದೆ ಕ್ಷೇತ್ರದ ಅಭಿವೃದ್ಧಿಗೆ 2000ಕೋಟಿ ರೂ.ಗಳ ದಾಖಲೆಯ ಅನುದಾನ ತಂದಿದ್ದರು. ಇದೊಂದು ಸರ್ಕಾರದಿಂದ ಬಾರೀ ಅನುದಾನ ಪಡೆದ ಸರ್ವಕಾಲಿಕ ದಾಖಲೆಯಾಗಿತ್ತು. ಅಭಿವೃದ್ಧಿಯ ಹರಿಕಾರ ಬಿ.ಸುರೇಶ್‍ಗೌಡ ಎಂಬ ಪ್ರಶಸ್ತಿಗೂ ಭಾಜನರಾಗಿದ್ದರು. ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸುವಲ್ಲಿ ಕಾರ್ಯಕರ್ತರು ವಿಫಲರಾಗಿದ್ದರಿಂದ ಬಿ.ಸುರೇಶ್‍ಗೌಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ತುಮಕೂರು ಗ್ರಾಮಾಂತರ ಕ್ಷೇತ್ರ ಅಭಿವೃದ್ಧಿಯಾಗಬೇಕಾದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕೆಂದರು. ಸಭೆಯಲ್ಲಿ…

Read More

ತುಮಕೂರು ಕಳೆದ 45 ವರ್ಷಗಳಿಂದ ದೇಶದ ಯುವಸಮೂಹದಲ್ಲಿ ಭಾರತೀಯ ಪ್ರಾಚೀನ ಸಂಸ್ಕೃತಿ ಮತ್ತು ಏಕಾಗ್ರತೆ ಕಲೆಗಳ ಬಗ್ಗೆ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯ ಕ್ರಮವನ್ನು ಹಮ್ಮಿಕೊಂಡು ಸೇವೆ ಸಲ್ಲಿಸಲಾಗುತ್ತಿದೆ ಎಂದು SPIಅ ಒಂಅಂಙನ ಸಂಸ್ಥಾಪಕ, ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ಸೊಸೈಟಿ ಫಾರ್ ದಿ ಪ್ರಮೋಷನ್ ಆಫ್ ಇಂಡಿಯನ್ ಶಾಸ್ತ್ರೀಯ ಸಂಗೀತದ ಸಂಸ್ಥಾಪಕ ಪದ್ಮಶ್ರೀ ಪುರಸ್ಕøತ ಡಾ. ಕಿರಣ್ ಸೇಠ್ ಹೇಳಿದರು. ಮನುಷ್ಯನ ಉತ್ತಮ ಆರೋಗ್ಯ ಮತ್ತು ಮಹಾತ್ಮ ಗಾಂಧಿಯವರ ತತ್ವಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಅವರ 145 ದಿನಗಳ ಸೈಕಲ್ ಯಾತ್ರೆ ಕೈಗೊಂಡಿರುವ ಇವರು ಇಂದು ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಎಂಪ್ರೆಸ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ವಾಗತ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಭಾರತೀಯ ಕಲೆಗಳನ್ನು ಅಭ್ಯಸಿಸುವುದರ ಮೂಲಕ ವಿಧ್ಯಾರ್ಥಿಗಳು ತಮ್ಮ ಏಕಾಗ್ರತೆಯನ್ನು ವೃದ್ಧಿಸಿಕೊಳ್ಳಬಹುದು ಎಂದರು. ಸೈಕಲ್ ಯಾತ್ರೆ ಮೂಲಕ ದೇಶದ ಬುನಾದಿಯಾದ ಶಿಕ್ಷಣ ತಜ್ಞರನ್ನು ಶಿಕ್ಷಕ ವೃಂದ ಮತ್ತು ಯುವ…

Read More

ತುಮಕೂರು ಜಿಲ್ಲೆಗೆ ತನ್ನದೇ ಘನತೆ, ಗೌರವವಿದೆ. ಹೊರ ಜಿಲ್ಲೆಯಿಂದ ರೌಡಿಸಂ ಎಳೆದು ತರುವ ಜನರಿಗೆ ಇಲ್ಲಿಯ ಜನರೇ ಉತ್ತರ ನೀಡುಬೇಕು ಎಂದು ಸುರೇಶ್ ಗೌಡರು ತಿಳಿಸಿದರು. ಪಂಚರತ್ನ ರಥಯಾತ್ರೆಯ ವೇಳೆ ಪಕ್ಷದ ಕಾರ್ಯಕರ್ತನ ಮೇಲೆ ಶಾಸಕರಾದ ಗೌರಿಶಂಕರ್ ಅವರ ಕುಮ್ಮಕ್ಕಿನಿಂದ ಅವರ ಪಿಎ ಸುರೇಶ್ ಹಾಗೂ ಬೆಂಬಲಿಗರು ಹಿಗ್ಗಾಮಗ್ಗಾ ಥಳಿಸಿರುವುದನ್ನು ಖಂಡಿಸಿ ಮೌನ ಪ್ರತಿಭಟನೆಯ ನಂತರ ಕ್ಷೇತ್ರದ ಜನರಿಗೆ ಬಹಿರಂಗ ಪತ್ರವನ್ನು ಬಿಡುಗಡೆಗೊಳಿಸಿದರು. ಗ್ರಾಮಾಂತರ ಕ್ಷೇತ್ರವು ಶಾಂತಿಯ ಕೈತೋಟ, ಸಮೃದ್ಧಿಯ ನೆಲೆಯಾಗಿರಬೇಕೆಂದು ಹಗಲು ರಾತ್ರಿ ಕೆಲಸ ಮಾಡಿದ್ದೇನೆ.ಹೊರಗಿನಿಂದ ಬಂದಿರುವ ಕೆಲವು ಜನರು ಹಿಂಸೆಯನ್ನು ಪ್ರಚೋದಿಸಲು ಮಾಡುತ್ತಿರುವ ಪ್ರಯತ್ನವನ್ನು ಗ್ರಾಮಾಂತರದ ಜನರು ವಿಫಲಗೊಳಿಸುತ್ತಾರೆ ಎಂದರು. ಶಾಂತಿ, ಸೌಹಾರ್ದತೆ ಗ್ರಾಮಾಂತರ ಮಣ್ಣಿನ ಗುಣವಾಗಿದೆ. ಇಂಥ ನೆಲದಲ್ಲಿ ಕೊಲೆ, ಸುಲಿಗೆ, ಹಲ್ಲೆಗಳಿಗೆ ನಮ್ಮ ಜನರು ಅವಕಾಶ ಕೊಡಲಾರರು ಎಂದು ತಿಳಿಸಿದರು. ಹಿಂದಿನ ಹತ್ತು ವರ್ಷದ ಅವಧಿಯಲ್ಲಿ ಕ್ಷೇತ್ರ ಶಾಂತಿಯುತವಾಗಿತ್ತು. ಕಳೆದ ಐದು ವರ್ಷಗಳಿಂದ ಹಲ್ಲೆ,, ಅಧಿಕಾರಿಗಳಿಂದ ಸುಲಿಗೆ, ಬೆದರಿಕೆಗಳು, ಹಪ್ತಾ ವಸೂಲಿ ಮಾಡಲಾಗುತ್ತಿದೆ. ಹೊರಗಿನ ರೌಡಿಗಳನ್ನು…

Read More

ಕೊರಟಗೆರೆ ವಿಶ್ವನಾಯಕ ನರೇಂದ್ರಮೋದಿ ನಾಯಕತ್ವವು ಬಡಜನತೆ ಮತ್ತು ರೈತರ ಪರವಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳು ಪ್ರತಿಮನೆಗೂ ನೇರವಾಗಿ ತಲುಪಿವೆ. ಗ್ರಾಮೀಣ ಭಾಗದ ಯುವಕರೇ ಸ್ವಯಂ ಪ್ರೇರಿತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಕೊರಟಗೆರೆ ಕ್ಷೇತ್ರದಲ್ಲಿ 2023ಕ್ಕೆ ಬಿಜೆಪಿ ಪಕ್ಷದ ಗೆಲುವು ಖಚಿತವಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಬಿ.ಹೆಚ್.ಅನಿಲ್‍ಕುಮಾರ್ ತಿಳಿಸಿದರು. ಕೊರಟಗೆರೆ ತಾಲೂಕಿನ ಹುಲೀಕುಂಟೆ, ಬೈಚಾಪುರ ಮತ್ತು ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ಕತ್ತಿನಾಗೇನಹಳ್ಳಿ, ಹನುಮೇನಹಳ್ಳಿ, ಕೆರೆಯಾಗಳಹಳ್ಳಿ ಮತ್ತು ಬೋಡಬಂಡೇನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೊರಟಗೆರೆ ಕ್ಷೇತ್ರದ ಜನತೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದೀರಾ. 2023ಕ್ಕೆ ಬಿಜೆಪಿ ಪಕ್ಷಕ್ಕೆ ಒಮ್ಮೆ ಅಧಿಕಾರ ನೀಡಿದರೇ ಅಧಿವೃದ್ದಿ ಏನೆಂದು ಮಾಡಿ ತೋರಿಸ್ತೇನೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದೆ. ಕೊರಟಗೆರೆ ಕ್ಷೇತ್ರದಲ್ಲಿಯು ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೇ ಅಭಿವೃದ್ದಿ ತಾನಾಗಿಯೇ ಆಗಲಿದೆ. ನಾನು ಯಾರಿಗೂ ಕೇವಲ…

Read More

ತುಮಕೂರು ಕುವೆಂಪುರವರ ವೈಚಾರಿಕತೆ ಮತ್ತು ಸಂದೇಶವನ್ನು ಎಲ್ಲೆಡೆ ನಾಟಕಗಳ ಮೂಲಕ ಸಾರುವುದು ಸುಲಭದ ಮಾತಲ್ಲ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ. ಎಂ. ವೆಂಕಟೇಶ್ವರಲು ಹೇಳಿದರು. ನಗರದ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ರಂಗಕಹಳೆ, ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕುವೆಂಪುರವರ ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ 21ನೇ ಕುವೆಂಪು ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕುವೆಂಪು ಅವರ ಸಂದೇಶವನ್ನೊಳಗೊಂಡ ನಾಟಕವನ್ನು ಜನಭರಿತವಾಗಿ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಂಡು ಯಶಸ್ವಿಯಾಗಿ ಆಯೋಜಿಸಿದ ರಂಗಕಹಳೆ ಸಂಸ್ಥೆಯ ಸಂಚಾಲಕ ಓಹಿಲೇಶ ಲಕ್ಷ್ಮಣ ಕಾರ್ಯ ಶ್ಲಾಘನೀಯ ಎಂದರು. ಹಿರಿಯ ಸಂಸ್ಕೃತಿ ಚಿಂತಕ ಡಾ. ನಟರಾಜ್ ಬೂದಾಳ್ ಮಾತನಾಡಿದರು. ಪ್ರಗತಿಪರ ಚಿಂತಕ ಕೆ. ದೊರೈರಾಜ್ ಮಾತನಾಡಿ, ಮನಸ್ಸಿನ ಅಂತರಾಳದಲ್ಲಿ ಹೊಕ್ಕ ಕುವೆಂಪುರವರ ತತ್ವ ಹಾಗೂ ಅವರ ಪ್ರಕೃತಿಯ ಕಾಳಜಿ ಮತ್ತು ವೈಚಾರಿಕತೆ ಎಂದೆಂದಿಗೂ ಮುಂದಿನ ಪೀಳಿಗೆಗೆ ಪ್ರಸ್ತುತ. ಪ್ರತಿದಿನ ನಾನು ನಾಟಕ ವೀಕ್ಷಿಸಿದ್ದೇನೆ. ಕುವೆಂಪುರವರ ನಾಟಕಗಳು ಮನಃಕದಡಿದೆ. ಒಂದೊಂದು ನಾಟಕವೂ ವಿಭಿನ್ನ ಮತ್ತು ಮಕ್ಕಳು…

Read More

ತುಮಕೂರು ಪಂಚರತ್ನ ಯಾತ್ರೆ ಸಂದರ್ಭವೇ ಜೆಡಿಎಸ್ ಮುಖಭಂಗ ಅನುಭವಿಸಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಕಣಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡಿಸಿದ್ದ ಜೆಡಿಎಸ್ ಬೆಂಬಲಿತ ಸದಸ್ಯರಿಗೆ ಸೋಲಾಗಿದೆ. ಒಟ್ಟು 21 ಸದಸ್ಯ ಬಲದ ಗ್ರಾಮ ಪಂಚಾಯತಿ ಯಲ್ಲಿ ಬಿಜೆಪಿ ಬೆಂಬಲಿತ ಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬಿಜೆಪಿ ಕೈಯಿಂದ ಅಧಿಕಾರ ಕಸಿಯಲು ಯತ್ನಿಸಿದ್ದ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ಅವರೀಗ ಮುಖಭಂಗ ಅನುಭವಿಸುವಂತಾಗಿದೆ. ಬಿಜೆಪಿ ಯನ್ನು ಅಧಿಕಾರದಿಂದ ಕೆಳಗಿಳಿಸಲು ಜೆಡಿಎಸ್ ಮಾಡಿದ ತಂತ್ರಕ್ಕೆ ಮನ್ನಣೆ ಸಿಗಲಿಲ್ಲ. ಅಭಿವೃದ್ಧಿಗೆ ಸಂದ ಜಯ ಇದಾಗಿದೆ. ಬರದಲ್ಲಿ ಬೇಯುತ್ತಿದ್ದ ಕಣಕುಪ್ಪೆ ಕೆರೆಗೆ ಹೇಮಾವತಿ ನೀರನ್ನು ಹರಿಸಿದೆ. ಅಭಿವೃದ್ಧಿಯನ್ನು ಅಲ್ಲಿನ ಸದಸ್ಯರು ಬೆಂಬಲಿಸಿದ್ದಾರೆ. ಇಡೀ ಕಣಕುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಜನರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಹೆಂಡ, ಹಣಕ್ಕೆ ಜನರು ಬೆಲೆ ಕೊಡುವುದಿಲ್ಲ ಎಂಬುದನ್ನು ಅವಿಶ್ವಾಸ ಸೋಲಿಸುವ ಮೂಲಕ ನೀಡಿದ್ದಾರೆ ಎಂದು ಮಾಜಿ ಶಾಸಕ ಬಿ.ಸುರೇಶಗೌಡರು ತಿಳಿಸಿದ್ದಾರೆ.

Read More

ತುಮಕೂರು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದ ಸ್ವೀಕೃತ ಅರ್ಜಿಗಳನ್ನು ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಪಂಕಜ್ ಕುಮಾರ್ ಪಾಂಡೆ ಅವರು ಸೂಪರ್ ಚೆಕಿಂಗ್ ಕಾರ್ಯ ನಿರ್ವಹಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ 2023ರ ಜನವರಿ 1ಕ್ಕೆ ಅರ್ಹತಾ ದಿನಾಂಕವೆಂದು ಪರಿಗಣಿಸಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ಸ್ವೀಕೃತ ಅರ್ಜಿಗಳ ಬಗ್ಗೆ ಪರಿಶೀಲಿಸಿ ಆಯಾ ತಹಶೀಲ್ದಾರರಿಂದ ಮಾಹಿತಿ ಪಡೆದರು. ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು ವೀಕ್ಷಕರಿಗೆ ಮಾಹಿತಿ ನೀಡುತ್ತಾ, ತಮ್ಮ ಉಪವಿಭಾಗ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸಂಬಂಧ ಸ್ವೀಕೃತವಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಶೇ. 100ರಷ್ಟು ವಿಲೇವಾರಿ ಮಾಡಲಾಗಿದ್ದು, 2023ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಮತದಾರರ ಪಟ್ಟಿಯಲ್ಲಿ ಡಿಸೆಂಬರ್ 27ರವರೆಗೆ 1098754 ಪುರುಷರು, 1100722 ಮಹಿಳೆಯರು ಹಾಗೂ 100 ಮಂದಿ ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ…

Read More

ತುಮಕೂರು ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಜಿದ್ದಾ ಜಿದ್ದಾ ಬಲ ಪ್ರದರ್ಶನ ಮಾಡುತ್ತಿದ್ದು, ಜಿಲ್ಲೆಯ 11ವಿಧಾನಸಭಾ ಕ್ಷೇತ್ರಗಳಲ್ಲೂ ಚುನಾವಣೆಯ ಕಣ ರಂಗೇರಿದೆ. ತುಮಕೂರು ನಗರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಯನ್ನು ಘೋಷಣೆ ಮಾಡಿದ್ದು, ಉಳಿದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಘೋಷಣೆಯಷ್ಟೇ ಬಾಕಿ ಉಳಿದಿದೆ. ಅಭ್ಯರ್ಥಿ ಘೋಷಣೆಗೂ ಮುಂಚೆಯಿಂದಲೇ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಜನ ಸಂಪರ್ಕದಲ್ಲಿದ್ದು, ಜನರ ವಿಶ್ವಾಸಗಳಿಸುತ್ತಿದ್ದಾರೆ. ಇನ್ನು ಬಿಜೆಪಿಯಲ್ಲಿ ಹಾಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಟಿಕೇಟ್ ಗಾಗಿ ಭಾರಿ ಕಸರತ್ತು ನಡೆಸುತ್ತಿದ್ದಾರೆ. ಇನ್ನು ಕಾಂಗ್ರೆಸ್ ನಿಂದ ಟಿಕೇಟ್ ಪಡೆಯಬೇಕೆಂದು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್, ಮಾಜಿ ಶಾಸಕ ಡಾ.ರಫೀಕ್ ಅಹಮದ್, ಇಕ್ಬಾಲ್ ಅಹಮದ್ ಮತ್ತು ಶಶಿ ಹುಲಿಕುಂಟೆ ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಜೆಡಿಎಸ್ ನಿಂದ ಟಿಕೇಟ್ ವಂಚಿತರಾದ ಅಟ್ಟಿಕಾ ಗೋಲ್ಡ್ ಕಂಪನಿಯ ಬೊಮ್ಮನಹಳ್ಳಿ ಬಾಬು ಮಾಜಿ ಶಾಸಕರಾದ…

Read More

ತುಮಕೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಶಿಕ್ಷಣ ನೀತಿಯ (ಓಇP) ಸ್ನಾತಕ ಪದವಿ ವಿದ್ಯಾರ್ಥಿಗಳಾದ ಪ್ರಥಮ ವರ್ಷದ ಪ್ರಥಮ ಸೆಮಿಸ್ಟರ್‍ನ ಜನವರಿ 12ರಿಂದ ಪರೀಕ್ಷೆ ಪ್ರಾರಂಭವಾಗಲಿದೆ ಎಂದು ಸುತ್ತೋಲೆ ಹೊರಡಿಸಿದೆ. ತುಮಕೂರು ವಿಶ್ವ ವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪದವಿ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ಪಠ್ಯಕ್ರಮ ಮುಗಿಯದ ಕಾರಣ ವಿದ್ಯಾರ್ಥಿಗಳು ತೊಂದರೆ ಉಂಟಾಗುತ್ತಿದೆ. ಪ್ರಥಮ ಸೆಮಿಸ್ಟರ್‍ನ ಶೈಕ್ಷಣಿಕೆ ವೇಳಾಪಟ್ಟಿಯು ಡಿಸೆಂಬರ್ 31ರಂದು ಮುಗಿಯಲಿದೆ. ನವೆಂಬರ್ ತಿಂಗಳಲ್ಲಿ 4ನೇ ಹಾಗೂ 6ನೇ ಸೆಮಿಸ್ಟರ್‍ನ ಮೌಲ್ಯಮಾಪನ ನಡೆದಿತ್ತು. ಹಾಗೂ 2ನೇ ಸೆಮಿಸ್ಟರ್ ಪರೀಕ್ಷೆ ಕೂಡ ನಡೆದಿತ್ತು, ಇದರ ಜೊತೆಗೆ ಪ್ರಥಮ ಸೆಮಿಸ್ಟರ್‍ನ ತರಗತಿಗಳು ಕೂಡ ನಡೆದಿದೆ. ಆದರೆ ನವೆಂಬರ್ ತಿಂಗಳಲ್ಲಿ ಪೂರ್ಣ ಪ್ರಮಾಣದ ತರಗತಿಗಳು ನಡೆದಿಲ್ಲ ಇದರ ಮಧ್ಯೆ ನವೆಂಬರ್ ತಿಂಗಳಲ್ಲಿ ಮೌಲ್ಯಮಾಪನ ಇದ್ದುದರಿಂದ 10ದಿನಗಳ ಕಾಲ ರಜೆ ಕೊಟ್ಟಿರುತ್ತಾರೆ. ಈ ಎಲ್ಲಾ ಕಾರಣಕ್ಕಾಗಿ ಪೂರ್ಣ ಪ್ರಮಾಣದ ಪಠ್ಯಕ್ರಮ ಮುಗಿದಿರುವುದಿಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರಥಮ ಸೆಮಿಸ್ಟರ್ ಶೈಕ್ಷಣಿಕ ವೇಳಾಪಟ್ಟಿಯನ್ನು ವಿಸ್ತರಣೆ ಮಾಡಬೇಕು. 2021-22ನೇ ಸಾಲಿನ 2ನೇ…

Read More