Author: News Desk Benkiyabale

ತುಮಕೂರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಒಂದು ರಾಜ್ಯ ಮಟ್ಟದ ವಿಶ್ವವಿದ್ಯಾಲಯವಾಗಿದ್ದು , ಲಕ್ಷಾಂತರ ವಿದ್ಯಾರ್ಥಿಗಳು ಈ ವಿ.ವಿ ಅಧೀನ ಕಾಲೇಜುಗಳಲ್ಲಿ ವಿದ್ಯಾಭ್ಯಾಸವನ್ನು ನಡೆಸುತ್ತಿದ್ದಾರೆ . ಈ ಸಮಾಜದಲ್ಲಿ ಹಲವಾರು ಉತ್ತಮ ಗುಣಮಟ್ಟದ ಅಭಿಯಂತರರು ಈ ವಿ.ವಿ ಯಿಂದ ಪದವಿಯನ್ನು ಹೊಂದಿದ್ದು ವಿ.ವಿ ಯು ಉತ್ತಮವಾದ ಹೆಸರನ್ನು ಹೊಂದಿದೆ. ವಿ.ಟಿ.ಯು ವಿ.ವಿ ಯು ಕಾನೂನು ಬದ್ಧವಾಗಿ 10% ಶುಲ್ಕವನ್ನು ಏರಿಕೆ ಮಾಡಬೇಕಾಗಿತ್ತು , ಆದರೆ ಯಾವುದೇ ಪರಿಮಿತಿಯನ್ನು ಅನುಸರಿಸದೆ ವಿ.ವಿ ಯು ಶುಲ್ಕವನ್ನು ಏರಿಕೆ ಮಾಡಿರುತ್ತದೆ , ವಿ.ವಿ ಯ ಈ ನಡೆಯನ್ನು ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ . ಇಂಜಿನಿಯರಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು 25%, ಅಂಕಪಟ್ಟಿ ಶುಲ್ಕವನ್ನು 100% , ಡಿಗ್ರಿ ಸರ್ಟಿಫಿಕೇಟ್ ನೀಡಲು 50% ಶುಲ್ಕ ಏರಿಕೆ . ಈ ರೀತಿಯಾಗಿ ಎಲ್ಲಾ ವಿಭಾಗದ ನೂತನವಾದ ಶುಲ್ಕ ಪಟ್ಟಿಯನ್ನು ವಿ.ವಿ ಯು ಹೊರಡಿಸಿದ್ದು , ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಕಾನೂನು ಬದ್ಧವಲ್ಲದ ಈ ರೀತಿಯ…

Read More

ಗುಬ್ಬಿ ತಾಲೂಕಿನಲ್ಲಿ ಬಡ ರೈತನೋರ್ವ ಸಾಲಬಾಧೆ ತಾಳಲಾರದೆ ಹೇಮಾವತಿ ಚಾನೆಲ್ ಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಚೇಳೂರು ಹೋಬಳಿಯ ಪಂಚಾಕ್ಷರಯ್ಯ 35 ವರ್ಷ ಹಿತ ತುಮಕೂರಿನ ಇಕ್ವಿಟಾಸ್ ಕಂಪನಿಯಲ್ಲಿ ಸಾಲ ಪಡೆದಿದ್ದು ಈತ ಸಾಲವನ್ನು ತೀರಿಸಲಾಗದೆ ಚಾನಲ್ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದು ಸುಮಾರು ಒಂದು ಲಕ್ಷ ಸಾಲವನ್ನು ತೀರಿಸಿದ್ದು ಬಾಕಿ ಹಣವನ್ನು ಹಂತ ಹಂತವಾಗಿ ತೀರಿಸುತ್ತೇನೆ ಎಂದು ಫೈನಾನ್ಸ್ ಕಂಪನಿಯವರಿಗೆ ಮನವರಿಕೆ ಮಾಡಿಕೊಂಡರು ಸಹ ಬ್ಯಾಂಕ್ ಮ್ಯಾನೇಜರ್ ದೌರ್ಜನ್ಯದಿಂದ ಒಂದು ತಿಂಗಳ ಹಿಂದೆ ಈತನ ಮನೆಯನ್ನು ಸೀಸ್ ಮಾಡಿ ಒಬ್ಬ ರೈತನನ್ನು ಬೀದಿ ಪಾಲು ಮಾಡಿರುವುದು ಎಷ್ಟು ಸಮಂಜಸ ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ. ರೈತ ಸಂಘಟನೆಗಳು ಭಾರತೀಯ ಜನತಾ ಪಕ್ಷದ ಮುಖಂಡರುಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಸರಿಯಾದ ಪರಿಹಾರ ನೀಡಬೇಕು ಹಾಗೂ ಸ್ಥಳಕ್ಕೆ ಲೀಡ್ ಬ್ಯಾಂಕಿನ ವ್ಯವಸ್ಥಾಪಕರನ್ನು ಕರೆಸಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಒಬ್ಬ ರೈತನ ಸಾವಿಗೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತಪಡಿಸಿದ ರಾಜಕೀಯ ಮುಖಂಡರುಗಳು ಪ್ರತಿಭಟನೆಯಲ್ಲಿ…

Read More

ತುಮಕೂರು ಇಂದಿನ ಸಮಾಜಕ್ಕೆ ಕುವೆಂಪುರವರ ಸಾಹಿತ್ಯ ಮತ್ತು ನಾಟಕಗಳು ಅತ್ಯಂತ ಪ್ರಸ್ತುತ ಹಾಗೂ ಅತ್ಯಗತ್ಯವಾಗಿವೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ರಂಗ ಕಹಳೆ, ಬೆಂಗಳೂರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಏರ್ಪಡಿಸಲಾಗಿರುವ 21ನೇ ಕುವೆಂಪು ನಾಟಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಮನೋವಿಕಾಸಕ್ಕಾಗಿ ಕುವೆಂಪುರವರ ಮಕ್ಕಳ ನಾಟಕಗಳು ಶಾಲಾ ಪಠ್ಯದಲ್ಲೂ ಸೇರಬೇಕು. ರಂಗ ಕಹಳೆ ಸಂಸ್ಥೆಯ ಬಗ್ಗೆ ಸುಮಾರು ವರ್ಷಗಳಿಂದ ತಿಳಿದಿದ್ದೇನೆ. ಭಾರತದಾದ್ಯಂತ ಪ್ರತಿ ರಾಜ್ಯ, ಜಿಲ್ಲೆಯಲ್ಲೂ ಕುವೆಂಪುರವರ ನಾಟಕೋತ್ಸವದ ಮೂಲಕ ವಿಶ್ವಮಾನವ ಸಂದೇಶ ಸಾರುತ್ತಿರುವುದು ಒಂದು ಹೆಗ್ಗಳಿಕೆಯ ವಿಷಯ ಎಂದರು. ನಾಟಕ ತಂಡದವರು ಮಕ್ಕಳ ಮೂಲಕ ಕುವೆಂಪು ನಾಟಕಗಳನ್ನು ಅಭ್ಯಾಸ ಮಾಡಿ ಪ್ರದರ್ಶಿಸುತ್ತಿರುವುದು ಹೆಮ್ಮೆಯ ಸಂಗತಿ. ತುಮಕೂರು ಜಿಲ್ಲೆಯಲ್ಲಿ ರಂಗಕಲೆಗೆ ಸಾಕಷ್ಟು ಪೆÇ್ರೀತ್ಸಾಹವಿದ್ದು, ತುಮಕೂರಿನ ಜನ ಕುವೆಂಪು ನಾಟಕಗಳನ್ನು ಹೆಚ್ಚು ವೀಕ್ಷಿಸಲಿ ಎಂದರು. ಆಶಯ ನುಡಿಗಳನ್ನಾಡಿದ ಜಿಲ್ಲಾ ಕನ್ನಡ ಸಾಹಿತ್ಯ…

Read More

ತುಮಕೂರು ಇತ್ತೀಚೆಗೆ ತುಮಕೂರು ನಗರ ಜೆಡಿಎಸ್ ಹಾಟ್ ಹಾಟ್ ಸುದ್ದಿಗಳಿಗೆ ಹೆಸರುವಾಸಿಯಾಗಿದೆ, ಇದಕ್ಕೆ ಕಾರಣ ಬಹುಕೋಟಿಗಳ ಸರದಾರ ಅಟ್ಟಿಕಾ ಬಾಬು @ ಬೊಮ್ಮನಹಳ್ಳಿ ಬಾಬು ರವರು ತಾವು ತುಮಕೂರಿನ ಜೆಡಿಎಸ್ ಅಭ್ಯರ್ಥಿ ಎಂದು ಘಂಟಾಘೋಷವಾಗಿ ಹೇಳಿಕೆಗಳನ್ನು ನೀಡಿರುವುದೇ ಈ ಎಲ್ಲಾ ಗೊಂದಲಗಳಿಗೆ ಮುಖ್ಯ ಕಾರಣವೆನ್ನಬಹುದು. ಹೌದು!!! ಕಳೆದ ಒಂದು ತಿಂಗಳಿಂದ ತುಮಕೂರು ನಗರ ಜೆಡಿಎಸ್‍ನಲ್ಲಿ ಗೊಂದಲ ಸೃಷ್ಠಿಯಾಗಿದ್ದು ಇದಕ್ಕೆ ತಾರ್ಕಿಕ ಅಂತ್ಯ ಕಾಣಬೇಕಿದೆ, ಏಕೆಂದರೆ ಕಳೆದ 15 ದಿನಗಳ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷರಿಂದ ರಾಜ್ಯದ ವಿವಿಧ ಕ್ಷೇತ್ರಗಳ ಶಾಸಕ ಸ್ಥಾನದ ಪಟ್ಟಿಯೂ ಸಹ ರಿಲೀಸ್ ಆಗಿತ್ತು, ಅದರಕ್ಕ ತುಮಕೂರು ನಗರ ಕ್ಷೇತ್ರದಿಂದ ಎನ್.ಗೋವಿಂದರಾಜುರವರ ಹೆಸರು ಸಹ ಪ್ರಸ್ತಾಪವಾಗಿತ್ತು, ಇದರ ಬೆನ್ನಲ್ಲೇ ಅಟ್ಟಿಕಾ ಬಾಬು ಸಹ ತುಮಕೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಪ್ರಸ್ ಮೀಟ್ ಮಾಡಿ ತಾವು ಸಹ ತುಮಕೂರು ನಗರ ಕ್ಷೇತ್ರದಿಂದ ಶಾಸಕ ಅಭ್ಯರ್ಥಿ ಎಂದು ಹೇಳಿಕೆಯನ್ನು ನೀಡಿದರು. ಈ ಹೇಳಿಕೆಯೊಂದಿಗೆ ಒಂದು ಸ್ಫೋಟಕ ಮಾಹಿತಿಯನ್ನೂ ಸಹ ಹೊರ ಹಾಕಿದರು, ಏನಪ್ಪಾ…

Read More

ತುಮಕೂರು ರಾಜ್ಯಾಂದ್ಯಂತ ಇಂದು ಡಾ|| ಬಿ.ಆರ್ ಅಮಬೇಡ್ಕರ್ 1927 ಡಿಸೆಂಬರ್ 25 ರಂದು ಮನಸ್ಮøತಿಯನ್ನು ಸುಟ್ಟ 95 ವರ್ಷಗಳ ನೆನಪಿಗಾಗಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ ಮನುಸ್ಮøತಿಗೆ ಕೊಳ್ಳಿ ಇಡೋಣ ಕಾರ್ಯಕ್ರಮದ ಭಾಗವಾಗಿ ಇಂದು ಅಂಬೇಡ್ಕರ್ ಭವನದಲ್ಲಿ ಸಮಾವೇಶಗೊಂಡ ದಲಿತ ಸಂಘಟನೆಗಳು ಮನಸ್ಮøತಿ ಪ್ರತಿಯನ್ನು ಸುಟ್ಟು ದೇಶದ ಅಲಿಖಿತ ಸಂವಿಧಾನವನ್ನು ಬಹಿಷ್ಕರಿಸುವಂತೆ ಕರೆ ನೀಡಲಾಯಿತು. ಚಾಲನಾ ಸಮಿತಿಯ ಪರವಾಗಿ ಮಾತನಾಡಿದ ಕೆ.ದೊರೈರಾಜ್ ಇಂದು ದೇಶದಲ್ಲಿ ಜಾರಿಯಲ್ಲಿರುವ ಅಲಿಖಿತ ಸಂವಿಧಾನ ಜಾತಿ ವ್ಯವಸ್ಥೆಯನ್ನು ಮಹಿಳಾ ಶೋಷಣೆಯನ್ನು ಶ್ರೇಣೀಕರಣವನ್ನು ಪ್ರತಿಪಾಧಿಸುತ್ತಿದೆ, ಇದಕ್ಕೆ ವಿರುದ್ದವಾಗಿ ಭಾರತ ಸಂವಿಧಾನ ಸಮಾನತೆ ಬ್ರಾತೃತ್ವ ಪ್ರತಿಪಾಧಿಸುತ್ತದೆ, ಆದರೆ ಇಂದು ಆಡಳಿತದಲ್ಲಿರುವ ಸರ್ಕಾರಗಳು ಬಡತನ, ಮೌಢ್ಯ, ಅನಕ್ಷರತೆ, ಅಸ್ಪøಶ್ಯತೆ ಅತ್ಯಾಚಾರ, ಕೊಲೆ ಸುಲಿಗೆಗಳಿಂದ ಜಾರಿಯಲ್ಲಿರುವ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತೇವೆ. ಆದ್ದರಿಂದ ಮಾನವ ವಿರೋಧಿ ಮನುಸ್ಮøತಿಯನ್ನು ದಿಕ್ಕರಿಸಿ ಸಂವಿಧಾನವನ್ನು ಎದೆಗಪ್ಪಿಕೊಳ್ಳುವುದು ಇಂದು ಮುಖ್ಯವಾಗಿದೆ. ನಾವು ಸುಡುತ್ತಿರುವುದು ಮನುಷ್ಯ ವಿರೋಧಿ ಮೇಲು ಕೀಳು ಲಿಂಗ ತಾರತಮ್ಯ ಅಸಮಾನತೆಯ…

Read More

ತುಮಕೂರು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಂವಿಧಾನದ ಆಶಯವನ್ನು ಪ್ರತಿಪಾದಿಸುವ ಅಣ್ಣ ಬಸವಣ್ಣ ಅವರ ವಚನಗಳು ಇಂದಿಗೂ ಪ್ರಸ್ತುತ ಎಂದು ಬೀರನಕಲ್ಲು ಗ್ರಾಮದ ಕಲಾಪ್ರೇಕ್ಷಕ ಈರಣ್ಣ ತಿಳಿಸಿದ್ದಾರೆ. ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ(ರಿ) ಬೆಳ್ಳಾವೆ ವತಿಯಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ತುಮಕೂರು ಗ್ರಾಮಾಂತರದ ಬೀರನಕಲ್ಲು ಗ್ರಾಮದ ವೀರಭದ್ರಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ನಾಟಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 12 ನೇ ಶತಮಾನದಲ್ಲಿಯೇ ನಾಡಿನ ಎಲ್ಲಾ ಸಮುದಾಯಗಳು ಶಾಂತಿ, ಸೌಹಾರ್ಧತೆ, ಸಹೋದರತ್ವದಿಂದ ಬದುಕುವ ಕನಸು ಕಂಡಿದ್ದ ಬಸವಣ್ಣ, ಕಾಯಕವೇ ಕೈಲಾಸ ಎಂಬ ತತ್ವದ ಮೂಲಕ ಉಳ್ಳುವರಿಂದ ಇಲ್ಲದವರಿಗೆ ಸಂಪತ್ತಿನ ಕೊಡಿಸುವ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದರು ಎಂದರು. ಬಸವಣ್ಣನವರು ಕೈಗೊಂಡ ಜಾತಿ ನಿಮೂರ್ಲನೆ, ಅಂತರಜಾತಿಯ ವಿವಾಹ,ಕುಲಕಸುಬುಗಳಿಗೆ ಮನ್ನಣೆ ನೀಡುವ ಮೂಲಕ ಕಾಯಕ ಶ್ರೇಷ್ಠ ಎಂಬ ಸಂದೇಶವನ್ನು ಹೊತ್ತ ಸಂಗಮ ಎಂಬ ನಾಟಕವನ್ನು ಪ್ರದರ್ಶಿಸುವ ಮೂಲಕ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡದ ಕಲಾವಿದರು, ಅನುಭವ ಮಂಟಪದ ಸಾಮಾನ್ಯ…

Read More

ತುಮಕೂರು ಕ್ರೈಸ್ತ ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್‍ಮಸ್ ಹಬ್ಬವನ್ನು ನಗರ ಸೇರಿದತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ಚರ್ಚ್ ಸರ್ಕಲ್‍ನಲ್ಲಿರುವ ಸಿಎಸ್‍ಐ ವೆಸ್ಲಿ ದೇವಾಲಯ, ಹೊರಪೇಟೆಯ ಸಂತ ಲೂರ್ದು ಮಾತೆ ದೇವಾಲಯ, ಸಿಎಸ್‍ಐ ಲೇಔಟ್‍ನ ಚರ್ಚ್, ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಚರ್ಚ್, ದೇವನೂರು ಚರ್ಚ್, ಸಿರಾಗೇಟ್‍ನಲ್ಲಿರುವ ಚರ್ಚ್ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿರುವ ಚರ್ಚ್‍ಗಳಲ್ಲಿ ಕ್ರೈಸ್ತ ಬಾಂಧವರು ಬೆಳಿಗ್ಗೆಯೇ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಹಬ್ಬದ ಪ್ರಯುಕ್ತ ಎಲ್ಲ ಚರ್ಚ್‍ಗಳನ್ನು ವಿಶೇಷವಾಗಿ ವಿದ್ಯುದ್ದೀಪಾಲಂಕಾರ ಮಾಡಲಾಗಿದ್ದು, ಬಣ್ಣಬಣ್ಣದ ಚಿತ್ತಾರಗಳಿಂದ ಕಂಗೊಳಿಸುತ್ತಿದ್ದವು. ಕ್ರೈಸ್ತ ಬಾಂಧವರು ಹೊಸ ಉಡುಪುಗಳನ್ನು ಧರಿಸಿ ಚರ್ಚ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ನಂತರ ಒಬ್ಬರಿಗೊಬ್ಬರ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಹಬ್ಬದ ವಿಶೇಷವಾಗಿ ತಯಾರಿಸಿದ್ದ ಸಿಹಿ ತಿಂಡಿಗಳನ್ನು ಸಹ ಕ್ರೈಸ್ತ ಬಾಂಧವರು ಪರಸ್ಪರ ಹಂಚಿ ತಿನ್ನುವ ಮೂಲಕ ಈ ಹಬ್ಬ ಶಾಂತಿ ಸೌಹಾರ್ದತೆ ಸಂಕೇತ ಎಂಬ ಸಂದೇಶವನ್ನು ಸಾರಿದರು. ಕ್ರೈಸ್ತ ಬಾಂಧವರು ಪರಸ್ಪರ ಹಬ್ಬದ…

Read More

ತುಮಕೂರು ಪರಿಶಿಷ್ಟ ಜಾತಿಯ ಶೇ 99 ಜಾತಿಗಳಿಗೆ ಮರಣ ಶಾಸನವಾಗಿರುವ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯ ಯಥಾವತ್ತು ಜಾರಿಗೆ ವಿರೋಧಿಸಿ ಮಾಡು,ಇಲ್ಲವೆ ಮಡಿ ಹೋರಾಟವನ್ನು ಮೀಸಲಾತಿ ಸಂರಕ್ಷಣಾ ವೇದಿಕೆ ವತಿಯಿಂದ 2023 ರ ಜನವರಿ 10 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ಬು ಹಮ್ಮಿಕೊಂಡಿದ್ದು, ಮೀಸಲಾತಿ ಪಡೆಯುತ್ತಿರುವ ಎಲ್ಲಾ ಜಾತಿಗಳ ಜನರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರಮಹಾಸ್ವಾಮೀಜಿ ಕರೆ ನೀಡಿದ್ದಾರೆ ನಗರದ ಭೋವಿ ಹಾಸ್ಟಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು,ಕೊರಮ, ಕೊರಚ, ಲಂಬಾಣಿ,ಬೋವಿ ಸಮುದಾಯಗಳಿಗೆ ಶಾಪಗ್ರಸ್ತವಾಗಿರುವ ಸಂವಿಧಾನ ಬಾಹಿರ ನ್ಯಾ.ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಬೇಕು,ಹಾಗೆಯೇ ವರದಿಯನ್ನು ಬಹಿರಂಗ ಚರ್ಚೆಗೆ ತಂದು ಅದರ ಸಾಧಕ, ಭಾದಕಗಳ ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು. ಸರಕಾರದ ಅಂಕಿ ಅಂಶಗಳೇ ನೀಡಿರುವಂತೆ ಕಳೆದ 73 ವರ್ಷಗಳ ಮೀಸಲಾತಿಯಿಂದ ಪರಿಶಿಷ್ಟ ಜಾತಿಗಳು ಶೇ11ರಷ್ಟು ಬೆಳವಣಿಗೆ ಹೊಂದಬೇಕಿತ್ತು.ಆದರೆ ಅಭಿವೃದ್ದಿಯಾಗಿರುವುದು ಕೇವಲ ಶೇ03ರಷ್ಟು ಮಾತ್ರ. ಪರಿಸ್ಥಿತಿ ಹೀಗಿರುವಾಗ ಇನ್ನೂ ಮೀಸಲಾತಿಯಿಂದಲೇ ಹೊರಗಿಟ್ಟರೆ ನಮ್ಮ…

Read More

ತುಮಕೂರು ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಶ್ರೀ ಸಿದ್ಧಾರ್ಥ ವೈದ್ಯಕೀಯ ಮತ್ತು ಕಾಲೇಜಿನಲ್ಲಿ ಯಶಸ್ವಿಯಾಗಿ ಅಂಗಾಂಗ ಕಸಿ ಮಾಡಲಾಗಿದೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು, ಆಸ್ಪತ್ರೆಯ ನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಆಯೋಜಿಸಿರುವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ವಿಜ್ಞಾನ ಬೆಳೆಯುತ್ತಿದ್ದಂತೆ ನೇತ್ರದಾನ, ದೇಹ ದಾನ, ಅಂಗಾಂಗ ದಾನಗಳೂ ತಮ್ಮ ಮಹತ್ವ ಹೆಚ್ಚಿಸಿಕೊಳ್ಳುತ್ತವೆ. ಜೀವ ಉಳಿಸುವುದಕ್ಕಿಂತ ದೊಡ್ಡ ದಾನ ಬೇರಿಲ್ಲ. ಗ್ರಾಮೀಣ ಜನರಿಗೆ ಅಂಗಾಂಗ ದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದರು. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ರೈತ ದಿವಂಗತ ಬಲರಾಮ್(47) ಅವರು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರೀಯೆಗೊಂಡಿತು. ಈ ವಿಷಯವನ್ನು ತುಮಕೂರು ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ಶ್ರೀ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಸಹಾಯಕ ಕುಲಸಚಿವರಾದ ಡಾ. ಪವನ್ ಆರ್ ಅವರ ಗಮನಕ್ಕೆ ತಂದರು. ಆಗ ಮೆದುಳು…

Read More

ತುಮಕೂರು ಸರ್ಕಾರಿ ನೌಕರರ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ನೌಕರರ ಒತ್ತಡವನ್ನು ಕಡಿಮೆ ಮಾಡಿ ಕೆಲಸದಲ್ಲಿ ಹುಮ್ಮಸ್ಸನ್ನು ಹೆಚ್ಚಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದರು. ಅವರಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಕುಣಿಗಲ್ ರಸ್ತೆಯ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ “ತುಮಕೂರು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ”ಯನ್ನು ಭಾಗವಹಿಸಿ ಮಾತನಾಡಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘವು ಸುಸಜ್ಜಿತವಾಗಿ ಕ್ರೀಡಾಕೂಟವನ್ನು ಆಯೋಜಿಸಿದೆ. ಪ್ರತಿಯೊಬ್ಬ ಕ್ರೀಡಾಪಟುವು ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಕರೆ ನೀಡಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ನರಸಿಂಹರಾಜು ಮಾತನಾಡಿ, 2023ರ ಫೆಬ್ರವರಿ ಮಾಹೆಯಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಲಾಗುವುದು. ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಶ್ರದ್ಧೆ ಮತ್ತು…

Read More