Author: News Desk Benkiyabale

ತುಮಕೂರು: ರಾಜ್ಯದ್ಯಂತ ಸೆ.೨೨ ರಿಂದ ಅ.೭ರವರೆಗೆ ಹಿಂದುಳಿದ ವರ್ಗಗಳ ಸಮೀಕ್ಷೆ ನಡೆಯಲಿದ್ದು. ರಾಜ್ಯದ ಕುರುಬ ಸಮುದಾಯದವರು ಕಾಲಂ ನಂ ೯,೧೦ ಮತ್ತು ೧೧ ರಲ್ಲಿ “ಕುರುಬ” ಎಂದು ನಮೂದಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ ಎಂ ರಾಮಚಂದ್ರಪ್ಪ ತಿಳಿಸಿದರು. ಮಂಗಳವಾರ ನಗರದ ಕುಣಿಗಲ್ ರಸ್ತೆಯಲ್ಲಿರುವ ಮಾರುತಿ ಕನ್ವೆನ್ಷನ್ ಹಾಲ್ ನಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ(ರಿ) ಗಾಂಧಿನಗರ ಬೆಂಗಳೂರು.ಜಿಲ್ಲಾ ಕುರುಬರ ಸಂಘ ತು. ಜಿಲ್ಲೆ. ಕಾಳಿದಾಸ ವಿದ್ಯಾವಧಕರ ಸಂಘ ತುಮಕೂರು ಹಾಗೂ ಜಿಲ್ಲಾ ಕುರುಬರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಕುರುಬ ಜನಾಂಗದ ಜಾಗೃತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಡಿಯಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ನಡೆಸುತ್ತಿದ್ದು. ಮೀಸಲಾತಿಯ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸಮೀಕ್ಷೆಯನ್ನು ನೆಡುಲು ನಿರ್ಣಯಿಸಿದ್ದಾರೆ. ಕಾಡು ಕುರುಬ, ಜೇನು ಕುರುಬ, ಬೆಟ್ಟ ಕುರುಬ, ಗೊಂಡ ಸಮುದಾಯದವರನ್ನು ಹೊರೆತುಪಡಿಸಿ. ಉಳಿದೆಲ್ಲ ಕುರುಬ ಜನಾಂಗದವರು ನಡೆಸುವ…

Read More

ತುರುವೇಕೆರೆ: ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದ ಟೀಕೆ ಟಿಪ್ಪಣಿಗಳಿದ್ದರು ಗ್ರಾರಂಟಿ ಯೋಜನೆಯಿಂದ ಲಕ್ಷಾಂತರ ಬಡಜನರಿಗೆ ಅನುಕೂಲವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿ ಆಚರಣದಲ್ಲಿ ಜಿಲ್ಲಾಡಳಿತ ಹಾಗೂ ಪಟ್ಟಣ ಪಂಚಾಯತಿ ವತಯಿಂದ ನೂತನವಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ರಾಜ್ಯ ಕಾಂಗ್ರೇಸ್ ಸರ್ಕಾರ ಬಡ ಜನತೆಯ ಅಭಿವೃದ್ದಿಗಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಬಡವ, ಶ್ರೀಮಂತ, ಜಾತಿ,ಧರ್ಮ ಹಾಗೂ ಪಕ್ಷ ರಹಿತವಾಗಿ ಗೃಹ ಲಕ್ಷ್ಮೀ ಹಣ ೨ ಸಾವಿರ ಹಣ ನೀಡುತ್ತಿದ್ದೇವೆ. ಹಣ ಉಳ್ಳುವರು ನಾವು ಕೇಳಿದ್ದೇವಾ ಎಂಬ ಮಾತಿ ಆಡಬಹುದು ಆದರೇ ಬಡ ಹೆಣ್ಣು ಮಕ್ಕಳಿಗೆ ಬಹಳ ಅನುಕೂಲವಾಗಿದೆ ಎಂದರು. ಮುಖ್ಯಮAತ್ರಿಯಾಗಿದ್ದ ಸಿದ್ದರಾಮಯ್ಯ ೨೦೧೩ರಲ್ಲಿ ಬಡ ಕೂಲಿ ಕಾರ್ಮಿಕರಿಗೆ ಹಾಘೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ನಗರದಲ್ಲಿ ೫ ರೂ ತಿಂಡಿ, ೧೦ ರೂ ಊಟ ನೀಡುವಂತಹ ಇಂದಿರಾ ಕ್ಯಾಂಟೀನ್ ತೆರೆಯಲಾಯಿತು. ನಂತರ ಶಾಸಕರ ಓತ್ತಾಯದ ಮೇರೆಗೆ ಜಿಲ್ಲಾ…

Read More

ತುಮಕೂರು: ದೋಷಪೂರಿತದತ್ತಾಂಶವನ್ನು ಪರಿಗಣಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ರಾಜ್ಯ ಸರ್ಕಾರ ಅವೈಜ್ಙಾನಿಕವಾಗಿ ವರ್ಗೀಕರಣ ಮಾಡಿದೆ ಎಂದು ಆಪಾದಿಸಿ, ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸೆ.೧೦ ರಂದು ಭೋವಿ, ಬಂಜಾರ, ಕೊರಚ, ಕೊರಮ ಹಾಗೂ ಅಲೆಮಾರಿ ಸಮುದಾಯಗಳಿಂದ ಬೆಂಗಳೂರು ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾರಾಜ್ಯ ಕಾರ್ಯದರ್ಶಿ ಹಾಗೂ ಭೋವಿ ಸಂಘದಜಿಲ್ಲಾಧ್ಯಕ್ಷ ಓ0ಕಾರ್ ತಿಳಿಸಿದರು. ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.೧೫ರಿಂದ ಶೇ.೧೭ಕ್ಕೆ ಏರಿಕೆ ಮಾಡಿಐತಿಹಾಸಿಕ ತೀರ್ಮಾನಕೈಗೊಂಡಿತ್ತು. ಈ ತೀರ್ಮಾನದಿಂದ ಇ0ದು ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿ0ಗ್, ಮೆಡಿಕಲ್ ಸೇರಿದಂತೆ ಅನೇಕ ಕೋರ್ಸ್ಗಳಿಗೆ ಪ್ರವೇಶ ಪಡೆದಿದ್ದಾರೆ.ದಲಿತರಕಲ್ಯಾಣಕ್ಕಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದ ಬಿಜೆಪಿ ಸರ್ಕಾರದ ವಿರುದ್ಧ ಅಂದಿನ ವಿರೋಧ ಪಕ್ಷವಾಗಿದ್ದಕಾಂಗ್ರೆಸ್‌ಇದು ಕೇವಲ ಆಶ್ವಾಸನೆಜಾರಿಗೆ ಬರುವುದಿಲ್ಲ ಎಂದುಟೀಕೆ ಮಾಡಿತ್ತು, ಆದರೆಇಂದುಅದೇ ಮೀಸಲಾತಿ ಪ್ರಮಾಣದಲ್ಲಿತಮ್ಮ ಪಕ್ಷದ ನಾಯಕರನ್ನು ಮೆಚ್ಚಿಸಲುಅವೈಜ್ಙಾನಿಕವಾಗಿ ವರ್ಗೀಕರಣ ಮಾಡಿಗೊಂದಲ ಸೃಷ್ಠಿಸಿದ್ದಾರೆ ಎಂದು ಸರ್ಕಾರದ ವಿರುದ್ಧಕಿಡಿಕಾರಿದರು. ಪರಿಶಿಷ್ಟ ಜಾತಿಯ…

Read More

ತುಮಕೂರು: ಕಳೆದ ೨೦ ವರ್ಷಗಳಿಂದ ರಾಜ್ಯದಲ್ಲಿ ಅಸಹಾಯಕರು,ತುಳಿತಕ್ಕೆ ಒಳಗಾದವರ ಹಕ್ಕುಗಳ ಪರವಾಗಿ ಕೆಲಸ ಮಾಡುತ್ತಿರುವ ಅಸೋಸಿಯೇಷನ್ ಫಾರ್ ಪ್ರೊಟಕ್ಷನ್ ಅಫ್ ಸಿವಿಲ್ ರೈಟ್ ಸಂಸ್ಥೆಯ ಜಿಲ್ಲಾ ಮಟ್ಟದ ಸಭೆಯನ್ನು ಹಿರಿಯರಾದ ಪಿಯುಸಿಎಲ್‌ನ ತುಮಕೂರು ಅಧ್ಯಕ್ಷ ಕೆ.ದೊರೆರಾಜು ಅವರ ಅಧ್ಯಕ್ಷತೆಯಲ್ಲಿ ನಗರದ ಧ್ಹಾನಾ ಪ್ಯಾಲೆಸ್‌ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಕೀಲರಾದ ಬಿ.ಟಿ.ವೆಂಕಟೇಶ ಮಾತನಾಡಿ, ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಅಸಹಜ ಸಾವು, ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ, ಕೊಲೆ ಸೇರಿದಂತೆ ದೇಶದ ವಿವಿದೆಡೆ ನಡೆದಿರುವ ಇಂತಹ ಪ್ರಕರಣಗಳಲ್ಲಿ ಸಮರ್ಪಕ ತನಿಖೆ ನಡೆದು, ಸತ್ಯ ಹೊರಬರಬೇಕೆಂಬುದು ಎಪಿಸಿಆರ್‌ನ ಒತ್ತಾಯವಾಗಿದೆ.ಎಪಿಸಿಆರ್ ಯಾವುದೇ ರಾಜಕೀಯ ಪಕ್ಷಕ್ಕೆ, ಒಂದು ಧರ್ಮಕ್ಕೆ, ಜಾತಿಗೆ ಸೇರಿದ ಸಂಘಟನೆಯಲ್ಲಿ ಜನರ ಹಕ್ಕುಗಳನ್ನು ರಕ್ಷಿಸುವ ಕೆಲಸವನ್ನು ಮಾಡುತ್ತಿರುವ ಸಮಾನ ಮನಸ್ಕರ ಸಂಘಟನೆಯಾಗಿದೆ.ಸತ್ಯವನ್ನು ಜನರಿಗೆ ತಿಳಿಸುವುದೇ ಇದರ ಮುಖ್ಯ ಉದ್ದೇಶ. ನುರಿತ ವಕೀಲರ ತಂಡವೇ ನಮ್ಮೊಂದಿಗೆ ಕೆಲಸ ಮಾಡುತ್ತಿದೆ.ಒಂದು ಪ್ರಕರಣದ ಬಗ್ಗೆ ಸಮಗ್ರ ಅಧ್ಯಯನ ನಡೆಸಿ,ಸತ್ಯಾಸತ್ಯತೆಗಳನ್ನು ಜನತೆಯ ಮುಂದಿಡುವ ಕೆಲಸ ಮಾಡಲಿದ್ದೇವೆ.ತನಿಖೆ ಪೂರ್ಣಗೊಂಡು ವರದಿ ಬರುವ ಮೊದಲೇ ಪೂರ್ವಾಗ್ರಹ…

Read More

ತುಮಕೂರು: ಹತ್ತಾರು ವರ್ಷಗಳಿಂದ ಕಡಿಮೆ ವೇತನಕ್ಕೆ ಗುತ್ತಿಗೆ ನೌಕರರಾಗಿ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ಸರಕಾರ ನೇರಪಾವತಿಗೆ ಒಳಪಡಿಸುವಂತೆ ಹಲವಾರು ಮನವಿಗಳನ್ನು ಸರಕಾರಕ್ಕೆ ನೀಡಿದ್ದರೂ ಸರಕಾರ ನಿರ್ಲಕ್ಷಿಸುತ್ತಾ ಬಂದಿದೆ. ಸರಕಾರದ ಮೇಲೆ ಒತ್ತಡ ತರುವ ಹಿನ್ನೆಲೆಯಲ್ಲಿ ಆಕ್ಟೋಬರ್ ೦೬ ರಿಂದ ನೀರು ಸರಬರಾಜು ನೌಕರರು ಅನಿರ್ಧಿಷ್ಠಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಪೌರ ನೀರು ಸರಬರಾಜು ನೌಕರರ ಮಹಾಸಂಘದ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್ ತಿಳಿಸಿದ್ದಾರೆ. ನಗರದ ಎಂ.ಜಿ.ರಸ್ತೆಯ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಪೌರ ನೀರು ಸರಬರಾಜು ನೌಕರರ ಮಹಾಸಂಘದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಕಳೆದ ೨೦ ವರ್ಷಗಳಿಂದ ಏಜೆನ್ಸಿಗಳ ಅಡಿಯಲ್ಲಿ ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೀರು ಸರಬರಾಜು ನೌಕರರು ನಮ್ಮನ್ನು ಏಜೆನ್ಸಿಗಳ ಕಪಿಮುಷ್ಠಿಯಿಂದ ತಪ್ಪಿಸಿ, ನೇರ ಪಾವತಿ ಯೋಜನೆಗೆ ಒಳಪಡಿಸುವಂತೆ ಮುಖ್ಯಮಂತ್ರಿಗಳಿಗೆ,ಸAಬAಧಪಟ್ಟ ಇಲಾಖೆ ಯ ಸಚಿವರು,ಎಲ್ಲಾ ಮಂತ್ರಿಗಳು, ಇಲಾಖೆಯ ಪ್ರಧಾನ ಕಾರ್ಯದರ್ಶಿಯಿಂದ ತಳಹಂತದ ಅಧಿಕಾರಿಗಳವರೆಗೆ ಮನವಿ ಸಲ್ಲಿಸಿದ್ದರೂ ಇದುವರೆಗೂ ಪ್ರಯೋಜನವಾಗಿಲ್ಲ. ಸರಕಾರದ ಈ ನಿರ್ಲಕ್ಷ ಖಂಡಿಸಿ,…

Read More

ತುಮಕೂರು: ತುಳಿತಕ್ಕೆ ಒಳಗಾದ ಸಮಾಜಗಳ ಜನರ ಏಳಿಗೆಗಾಗಿ, ಸಮ ಸಮಾಜದ ಕನಸು ಹೊತ್ತು ದುಡಿದ ಮಹನೀಯರಲ್ಲಿ ಬ್ರಹ್ಮರ್ಷಿ ನಾರಾಯಣಗುರುಗಳು ಅಗ್ರಗಣ್ಯರು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್,ಜಿಲ್ಲಾ ಆರ್ಯ ಈಡಿಗರ ಸಂಘ ಹಾಗೂ ಬ್ರಹ್ಮರ್ಷಿ ನಾರಾಯಣಗುರು ಸಮಾಜ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಬ್ರಹ್ಮರ್ಷಿ ನಾರಾಯಣಗುರುಗಳ ೧೭೧ನೇ ಜನ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಸಮಾಜದಲ್ಲಿನ ಮೇಳು, ಕೀಳು, ಜಾತಿ, ಧರ್ಮಗಳ ನಡುವಿನ ತಾರತಮ್ಯ ಹೋಗಿ, ಸಮ ಸಮಾಜ ನಿರ್ಮಾಣವಾಗಬೇಕೆಂಬುದು ಬ್ರಹ್ಮಶ್ರೀ ನಾರಾಯಣಗುರುಗಳ ಕನಸಾಗಿತ್ತು ಎಂದರು. ದೇವರನಾಡು ಎಂದು ಕರೆಯಿಸಿಕೊಳ್ಳುತ್ತಿದ್ದ ಕೇರಳದಲ್ಲಿ ೧೮೫೫ರಲ್ಲಿ ಹುಟ್ಟಿದ ನಾರಾಯಣಗುರುಗಳು, ಸಮಾಜದಲ್ಲಿದ್ದ ಮೂಡನಂಬಿಕೆ,ಅಶಕ್ತರು, ದೀನ ದಲಿತರು, ಬಡವರ ಮೇಲಿನ ಮೇಲ್ವರ್ಗಗಳ ದಬ್ಬಾಳಿಕೆ, ದೇವಾಲಯ ಪ್ರವೇಶ ನಿರಾಕರಣೆ ಇವುಗಳ ವಿರುದ್ದ ರಕ್ತ ರಹಿತ ಕ್ರಾಂತಿ ಮಾಡಿದವರು, ದೇವರು, ಧರ್ಮ, ಸಮಾಜ ಈ ಮೂರು ವಿಚಾರಗಳು ಅವರ ಸಮಾಜ…

Read More

ತುಮಕೂರು: ನ್ಯಾಯ ಇರುವಡೆ ಶಾಂತಿ, ನೆಮ್ಮದಿ, ಸಮಾಧಾನ,ಸೌಹಾರ್ಧತೆ,ಸಾಮರಸ್ಯದ ಬದುಕು ಸಾಧ್ಯ ಎಂದು ಹಿರಿಯ ಪ್ರಾಧ್ಯಾಪಕ ಹಾಗು ಪ್ರವಾಚಕ ಲಾಲ್ ಹುಸೇನ್ ಕುಂದಗಲ್ ತಿಳಿಸಿದ್ದಾರೆ. ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಜಮಾಆತೆ ಇಸ್ಲಾಮಿ ಹಿಂದ್ ವತಿಯಿಂದ ಆಯೋಜಿಸಿದ್ದ ನ್ಯಾಯದ ಹರಿಕಾರ ಪ್ರವಾದಿ ಮಹಮದ್(ಸ), ಸಿರತ್ ಅಭಿಯಾನದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು,ನಿಜವಾದ ಧರ್ಮನಿಷ್ಠೆ ಎಂದರೆ ದೇವರ ಆರಾಧನೆಯಲ್ಲಿ ತೊಡಗುವುದಲ್ಲ,ನ್ಯಾಯದ ಪರ ನಿಲ್ಲುವುದು.ಇದನ್ನು ಪ್ರವಾದಿ ಮಹಮದ(ಸ)ಅವರು ಬದುಕಿನ ಲ್ಲಿಯೂ ಕಾಣಬಹುದಾಗಿದೆ ಎಂದರು. ನ್ಯಾಯ ನೀಡುವಾಗ ಬಡವರು,ಶ್ರೀಮಂತರು, ಮೇಲು, ಕೀಳು ಎಂಬ ಭಾವನೆ ಬಂದರೆ ಅದು ಅರಾಜಕತೆಗೆ ದಾರಿ ಮಾಡಿಕೊಡುತ್ತದೆ.ತನ್ನ ಹೆತ್ತವರು,ಒಡಹುಟ್ಟಿದವರು ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ವಿಧಿಸುವುದೇ ನಿಜವಾದ ನ್ಯಾಯ ಎಂದು ಪ್ರವಾದಿ ಮಹಮದ್(ಸ) ಅವರು ಪ್ರತಿಪಾದಿಸಿದ್ದಾರೆ. ಧರ್ಮ, ಜಾತಿ ಮೀರಿ ನ್ಯಾಯ ಕೆಲಸ ಮಾಡಬೇಕು.ನಿನ್ನೆಲ್ಲಾ ತಪ್ಪುಗಳ ಲೆಕ್ಕ ಭಗವಂತನ ಬಳಿ ಇವೆ.ಅವನಿಂದ ಎನ್ನನ್ನು ಮುಚ್ಚಿಡಲು ಸಾಧ್ಯವಿಲ್ಲ ಎನ್ನುವ ಮೂಲಕ ೧೨ನೇ ಶತಮಾನದಲ್ಲಿ ಬಸವಣ್ಣವರು ಪ್ರತಿಪಾದಿಸಿದ ದೇವರ ಕಲ್ಪನೆಯನ್ನು ೧೫೦೦ ವರ್ಷಗಳ ಹಿಂದೆ ಪ್ರವಾದಿ…

Read More

ಚಿಕ್ಕನಾಯಕನಹಳ್ಳಿ : ನನ್ನ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ವಿವಿಧ ಇಲಾಖೆಗಳ ಲ್ಲಿನ ಮದ್ಯವರ್ತಿ ಗಳ ಹಾವಳಿ ತಪ್ಪಿಸಲು ನೇರವಾಗಿ ಜನರ ಮನೆಬಾಗಿಲಿಗೆ ಮನೆ ಮಗನಾಗಿ ಬಂದಿದ್ದು ನಿಮ್ಮ ಸಮಸ್ಯೆಗಳನ್ನು ಸಾಧ್ಯವದಷ್ಟು ಸ್ಥಳದಲ್ಲೇ ಬಗೆ ಹರಿಸಲಾಗುವುದು ಎಂದು ಶಾಸಕ ಸಿ. ಬಿ. ಸುರೇಶ್ ಬಾಬು ತಿಳಿಸದರು. ತಾಲ್ಲೋಕಿನ ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆ ಗ್ರಾಮ ಪಂಚಾಯಿತಿವ್ಯಾಪ್ತಿಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ೧೪ನೇ ವಾರದ ಮನೆಬಾಗಿಲಿಗೆ ಮನೆ ಮಗ ಶೀರ್ಷಿಕೆ ಯ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತಾಡಿದ ಅವರು ಎಲ್ಲಾ ಇಲಾಖೆ ಗಳ ಅಧಿಕಾರಿಗಳು ಇಂದು ನಿಮ್ಮ ಗ್ರಾಮ ಗಳಿಗೆ ಬಂದಿದ್ದು ನಿಮ್ಮ ಯಾವುದೇ ವೈಯಕ್ತಿಕ ಇಲ್ಲವೇ ಸಾಮಾಜಿಕ ಸಮಸ್ಯೆ ಗಳಿದ್ದರು ಲಿಖಿತದ ಮೂಲಕ ಅರ್ಜಿ ನೀಡಿ ಅದರಲ್ಲಿ ನಿಮ್ಮ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ನಮೂದಿಸಿ ನಿಮ್ಮ ಅರ್ಜಿಗಳ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸಲಾಗುವುದು ಹಾಗೂ ಸಾಧ್ಯವದಷ್ಟು ಸ್ಥಳದಲ್ಲೇ ನಿಮ್ಮ ಸಮಸ್ಯೆ ಗಳನ್ನು ಬಗೆ ಹರಿಸಲಾಗುವುದು. ಎಂದ ಅವರು ಪಿ ಡಿ ಒ…

Read More

ಕೊರಟಗೆರೆ: ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕತೆಯಿದೆ. ವಿದ್ಯುತ್‌ನಿಂತ ಉಪಯೋಗವೂ ಇದೆ, ಅಪಾಯವು ಇದೆ. ಇದಕ್ಕೆ ಯಾವುದೇ ಜಾತಿ, ಧರ್ಮ, ಬೇದವಿಲ್ಲ ಎಂದು ಎಲೆರಾಂಪುರ ಶ್ರೀಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ಪಟ್ಟಣದ ಬೆಸ್ಕಾಂ ಕಚೇರಿ ಪಕ್ಕದಲ್ಲಿನ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ನೂತನ ಕಛೇರಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಗುತ್ತಿಗೆದಾರರ ನಡುವೆ ಉತ್ತಮ ಬಾಂಧವ್ಯ ಇರಬೇಕು, ಗುತ್ತಿಗೆದಾರರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಬೇಕಿದೆ ಎಂದರು. ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ವಿದ್ಯುತ್ ಗುತ್ತಿಗೆದಾರರು ಸಂಘಟನೆ ಸ್ಥಾಪನೆ ಮೂಲಕ ಸಾಧಕ ಬಾದಕಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಕೂಡ ವಿದ್ಯುತ್ ಗುತ್ತಿಗೆದಾರರ ಬೇಡಿಗಳನ್ನು ಆದಷ್ಟು ಬೇಗ ಈಡೇರಿಸಬೇಕಿದೆ. ಖಾಸಗಿ ಸ್ಥಳದಲ್ಲಿ ಕಚೇರಿ ತಾತ್ಕಲಿಕವಾಗಿರಲಿದ್ದು ಶಾಸಕರು ಈ ಬಗ್ಗೆ ಗಮನಹರಿಸಿ ಗುತ್ತಿಗೆದಾರರ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ, ಉದ್ಘಾಟನೆ ಮಾಡಬೇಕಿದೆ ಎಂದು ಒತ್ತಾಯ ಮಾಡಿದರು. ಕೇಂದ್ರ…

Read More

ಕೊರಟಗೆರೆ: ಸನಾತನ ಧರ್ಮ, ಸಂಸ್ಕೃತಿ, ಆಚಾರ ವಿಚಾರಗಳು ಉಳಿಯಬೇಕಾದರೆ ಪ್ರತಿಯೊಂದು ಗ್ರಾಮದಲ್ಲಿ ದೇವಾಲಯ, ಧಾರ್ಮಿಕ ಕ್ಷೇತ್ರಗಳು ನಿರ್ಮಾಣಗೊಳ್ಳಬೇಕು. ವರ್ಣರಹಿತವಾಗಿ ಬದುಕು ಕಟ್ಟಿಕೊಳ್ಳಬೇಕಾದರೆ ಇಂತಹ ಹಬ್ಬಗಳು, ಜಾತ್ರೆಗಳು ಅವಕಾಶ ಮಾಡಿಕೊಡುತ್ತವೆ ಎಂದು ಎಲೆರಾಂಪುರ ನರಸಿಂಹಗಿರಿ ಸುಕ್ಷೇತ್ರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ಕರಿದುಗ್ಗನಹಳ್ಳಿ ಮತ್ತು ಹನುಮಂತಯ್ಯನಪಾಳ್ಯ ಗ್ರಾಮದೇವತೆ ಶ್ರೀದೊಡ್ಡಮ್ಮ ದೇವಿ ದೇವಾಲಯದ ಆವರಣದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ೧ ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾದ ಶ್ರೀದೊಡ್ಡಮ್ಮದೇವಿಯ ಸ್ಥಿರಬಿಂಬ ಪ್ರತಿಷ್ಠಾಪನಾ ಕುಂಭಾಭಿಷೇಕ ಮಹೋತ್ಸವ ಹಾಗೂ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮವು ಆ.೨೯ ರಿಂದ ೩೧ ರವರೆಗೆ ನಡೆಯಲಿದೆ ಎಂದು ಹೇಳಿದರು. ದೇವಾಲಯದ ಧಾರ್ಮಿಕ ಕಾರ್ಯಕ್ರಮ ಸಿಂಹಪಾಲು ಉದ್ಯಮಿ ನಿಲೇಶ್‌ಗೆ ಸಲ್ಲಬೇಕು. ರಸ್ತೆ ಮತ್ತು ಮೂಲಭೂತ ಸೌಕರ್ಯದಿಂದ ವಂಚಿತಗೊAಡ ಈ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಆ.೩೧ಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಮತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್‌ರವರು ಆಗಮಿಸಲಿದ್ದು, ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳು ಸೇರಿದಂತೆ…

Read More