ತುಮಕೂರು: ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ,ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ. ಆದರೆ ರಾಜಕೀಯವಾಗಿ ಮುಂದುವರೆಯಬೇಕಾದರೆ ಇತರೆ ಸಮುದಾಯಗಳ ಬೆಂಬಲದ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ತುಮಕೂರು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘ(ರಿ)ವತಿಯಿAದ ಆಯೋಜಿಸಿದ್ದ ತುಮಕೂರು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಸಮಾವೇಶ ಮತ್ತು ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಧರ್ಮಛತ್ರ, ಹಾಸ್ಟಲ್ಗಳು ಮತ್ತು ಮಠಗಳಲ್ಲಿ ಓದಿ ಸರಕಾರಿ ಉದ್ಯೋಗ ಪಡೆದು ಸಮಾಜದಲ್ಲಿ ವೀರಶೈವಲಿಂಗಾಯಿತ ಸಮಾಜ ತಮ್ಮ ಆಸ್ಥಿತ್ವವನ್ನು ಉಳಿಸಿಕೊಂಡಿದೆ.ಆದರೆ ರಾಜಕೀಯವಾಗಿ ಬೆಳೆಯಬೇಕಾದರೆ, ಅದರಲ್ಲಿಯೂ ವೀರಶೈವ ಲಿಂಗಾಯಿತರು ಕಡಿಮೆ ಸಂಖ್ಯೆಯಲ್ಲಿರುವ ಹಳೆ ಮೈಸೂರು ಭಾಗದಲ್ಲಿ ರಾಜಕೀಯ ಅಧಿಕಾರ ಸಿಗಬೇಕಾದರೆ ಓಬಿಸಿ, ಎಸ್ಸಿ,ಎಸ್ಟಿ ಸಮುದಾಯಗಳ ಜೊತೆಗೆ ಹೊಂದಿಕೊAಡು ಹೋಗಬೇಕಾದ ಅನಿವಾರ್ಯತೆ ಇದೆ ಎಂದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಬಸವರಾಜು ಮಾತನಾಡಿ,ಕರ್ನಾಟಕದ ಅಭಿವೃದ್ದಿ ಪಥದಲ್ಲಿದ್ದರೆ, ಅದಕ್ಕೆ ಮಠ ಮಾನ್ಯಗಳ…
Author: News Desk Benkiyabale
ಚಿಕ್ಕನಾಯಕನಹಳ್ಳಿ: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ ‘ವಿಬಿ-ಜಿ ರಾಮ್ ಜಿ’ ಯೋಜನೆಯು ಗ್ರಾಮಸ್ಥರಿಗೆ ಲಭ್ಯವಿರುವ ವಿವಿಧ ಆರ್ಥಿಕ ನೆರವು ಮತ್ತು ವೈಯಕ್ತಿಕ ಕಾಮಗಾರಿಗಳ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಪಡೆದುಕೊಳ್ಳಿ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮುದ್ದಲಿಂಗಯ್ಯ ಕರೆ ನೀಡಿದರು. ತಾಲ್ಲೂಕಿನ ದಸೂಡಿ ಗ್ರಾಮದ ಸಮೀಪ ಬಸ್ ನಿಲ್ದಾಣದಲ್ಲಿ ಕರಪತ್ರಗಳನ್ನು ನೀಡುವ ಮೂಲಕ ಬೀದಿನಾಟಕ ಮತ್ತು “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಸೆಪ್ಟಂಬರ್ 15 ರವರೆಗೆ ಉದ್ಯೋಗ ಚೀಟಿ ಇಲ್ಲದಾ ಎಲ್ಲಾ ರೈತರು ಮತ್ತು ಕೂಲಿಕಾರರು ಹಾಗೂ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಉದ್ಯೋಗ ಚೀಟಿ ಪಡೆಯಬಹುದು ತಪ್ಪದೇ ಅರ್ಹರು ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಮನವಿ ಮಾಡಿದರು. ಕಾರ್ಯದರ್ಶಿಗಳಾದ ಮಧುಸೂದನ್ ರವರು ಮಾತನಾಡಿ,…
ತುಮಕೂರು: ಶಿಲ್ಪಕಲೆಗಳಿಂದ ನಾವು ಇತಿಹಾಸವನ್ನು ಸ್ಪಷ್ಟವಾಗಿ ಅರ್ಥೆÊಸಿಕೊಳ್ಳಬಹುದು. ಧಾರ್ಮಿಕ ಆಚಾರ ವಿಚಾರಗಳು ಹಾಗೂ ಹಿಂದೆ ನಡೆದ ಪ್ರಮುಖ ಐತಿಹಾಸಿಕ ಘಟನೆಗಳನ್ನು ನಮ್ಮ ನೆನಪಿನಲ್ಲಿ ಉಳಿಸಿಕೊಳ್ಳುವಲ್ಲಿ ಇವು ಪ್ರಮುಖ ಪಾತ್ರವಹಿಸುತ್ತವೆ. ಇತಿಹಾಸವನ್ನು ಮರು ನಿರ್ಮಾಣ ಮಾಡುವಲ್ಲಿ ಶಿಲ್ಪಿಗಳ ಶ್ರಮ ಹಾಗೂ ಪಾತ್ರ ಅತ್ಯಂತ ಮಹತ್ವವಾದದ್ದು ಎಂದು ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ. ಆರ್. ಹುಲಿನಾಯ್ಕರ್ ಹೇಳಿದರು. ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಶಾಸ್ತç ಅಧ್ಯಯನ ಮತ್ತು ಸಂಶೋಧನಾ ವಿಭಾಗ, ತುಮಕೂರು ವಿವಿ ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಯೋಗದಲ್ಲಿ ಸೆ. ೦೭, ಸೋಮವಾರದಂದು ಹಮ್ಮಿಕೊಳ್ಳಲಾಗಿದ್ದ ಹಿರಿಯ ಶಿಲ್ಪಿ ವಿಶ್ವನಾಥ್ ರವರ ಏಕವ್ಯಕ್ತಿ ಶಿಲ್ಪಕಲಾ ಕೃತಿಗಳ ಪ್ರದರ್ಶನ “ಕಲ್ಲರಳಿ ಹೂವಾಗಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಒಬ್ಬ ಶಿಲ್ಪಿ ಕೇವಲ ಕಲ್ಲು ಕೆತ್ತುವವನಷ್ಟೇ ಅಲ್ಲ, ಆತ ಅಚ್ಚುಕಟ್ಟಾದ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಾನೆ. ಹೀಗಾಗಿ ಇಂತಹ ಪ್ರತಿಭಾವಂತ ಶಿಲ್ಪಿಗಳ ನೆರವಿಗೆ ಸರ್ಕಾರಗಳು ರಾಜಾಶ್ರಯದೋಪಾದಿಯಲ್ಲಿ ಧಾವಿಸಿ ಸೂಕ್ತ ಸಹಕಾರ…
ತುಮಕೂರು: ಸಮಾಜದ ಅತ್ಯಂತ ಗೌರವಾನ್ವಿತ ಹುದ್ದೆ ಶಿಕ್ಷಕನಾಗಿದ್ದು ಆತ ವಿದ್ಯಾರ್ಥಿಗಳ ಭವಿಷ್ಯದ ದಾರಿದೀಪವಾಗಿದ್ದು ಆತನಿಗೆ ತನ್ನನ್ನು ತಾನು ಅರಿತುಕೊಳ್ಳಲು ಸಹಾಯ ಮಾಡುವ ರಾಷ್ಟç ನಿರ್ಮಾಣದ ಶಿಲ್ಪಿ ಎನಿಸಿಕೊಂಡಿದ್ದಾನೆ ಎಂದು ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಜಂಟಿ ಕರ್ಯದರ್ಶಿಗಳಾದ ಡಾ. ಶಿವಕುಮಾರಯ್ಯ ಅಭಿಪ್ರಾಯಪಟ್ಟರು. ಅವರು ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಪದವಿ ಕಾಲೇಜುಗಳ ಆಶ್ರಯದಲ್ಲಿ ನಗರದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಗುರಿಯಾಗಬೇಕು. ಶಿಕ್ಷಕ ಸದಾ ಅಧ್ಯಯನಶೀಲನಾಗಿರಬೇಕು. ತನ್ನ ವಿದ್ಯಾರ್ಥಿಯಲ್ಲಿರುವ ಸಾಮರ್ಥ್ಯವನ್ನು ಹೊರತೆಗೆಯುವ ಶಕ್ತಿ ಶಿಕ್ಷಕನಿಗಿದೆ. ಆತ ಕೇವಲ ಪಠ್ಯಕ್ರಮಕ್ಕೆ ತನ್ನ ತರಗತಿಯನ್ನು ಸೀಮಿತಗೊಳಿಸಿಕೊಳ್ಳದೆ ಪಠ್ಯದಿಂದಾಚೆಗಿನ ವಿದ್ಯಾರ್ಥಿಯ ಚಿಂತನೆಯ ಚೇತನವನ್ನು ಜಾಗೃತಿಗೊಳಿಸಿ ಆತನ ವ್ಯಕ್ತಿತ್ವವನ್ನು ವಿಕಸನಗೊಳಿಸಬೇಕು ಎಂದರು. ವಿಶೇಷ ಉಪನ್ಯಾಸ ನೀಡಿದ ವಿಶ್ರಾಂತ ಪ್ರಾಂಶುಪಾಲರು ಚಿಂತಕರೂ ಆದ ಡಾ. ಹೆಚ್.ಎಸ್. ನಿರಂಜನಾರಾಧ್ಯ ಮಾತನಾಡಿ ಭಾರತದ ಗುರು ಶಿಷ್ಯ ಸಂಪ್ರದಾಯವು ವಿಶ್ವಾದ್ಯಂತ ಪ್ರಸಿದ್ಧವಾಗಿತ್ತು. ಆದರೆ ಕ್ರಮೇಣ ಈ ಸಂಪ್ರದಾಯ ಎಷ್ಟೋ ಕಡಿಮೆಯಾಗಿದೆ. ಇಂದು ಭಾರತವನ್ನು…
ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು. ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ತಾಲ್ಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿಸುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಪ್ರಜಾ ಸೇವಾ ಇಲಾಖೆಯನ್ನು ಇಂದಿನಿAದ ಹೊಸದಾಗಿ ಆರಂಭಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ.ಪರಮೇಶ್ವರ ಹೇಳಿದರು. ಜಿಲ್ಲಾಡಳಿತದ ವತಿಯಿಂದ ಶನಿವಾರ ಗುಬ್ಬಿ ಪಟ್ಟಣದಲ್ಲಿ ಆಯೋಜಿಸಿದ್ದ ಮೊದಲ ಪ್ರಜಾ ಸೇವಾ ಅಭಿಯಾನ ಜನಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸೆಪ್ಟೆಂಬರ್ ೫ ನಮ್ಮೆಲ್ಲರಿಗೂ ಆದರ್ಶಪ್ರಾಯರಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ಇಡೀ ದೇಶದಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಅದೇ ದಿನ ಪ್ರಜಾ ಸೇವಾ ಅಭಿಯಾನ ಆಚರಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಕರೆಯಂತೆ ಇಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಈ ನೂತನ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದಾರೆ…
ಹುಳಿಯಾರು: ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲ್ಪಟ್ಟಿತÀÄ. ಆಧ್ಯಾತ್ಮಿಕ ವಾತಾವರಣದೊಂದಿಗೆ ಪುಟಾಣಿ ಮಕ್ಕಳ ಕೇಕೆ, ನಗು ಹಾಗೂ ಕೃಷ್ಣನ ಲೀಲೆಗಳ ಕಲರವ ಎಲ್ಲರಮನಸೂರೆಗೊಂಡಿತು. ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ಆಧ್ಯಾತ್ಮ ಶಿಕ್ಷಕಿ ಬಿ.ಕೆ.ಗೀತಕ್ಕ ಅವರು ಮಾತನಾಡಿ ಮಕ್ಕಳಿಗೆ ಬಿಡುವಿನ ವೇಳೆಯಲ್ಲಿ ಭಗವದ್ಗೀತೆ, ಶ್ರೀಕೃಷ್ಣನ ವಿಚಾರಧಾರೆ ಬೋಧಿಸಬೇಕು ಎಂದು ಹೇಳಿದರು. ಶ್ರೀಕೃಷ್ಣ ಮಹಾಪುರುಷ. ಲೋಕ ಕಲ್ಯಾಣಕ್ಕಾಗಿ ಹಾಗೂ ಮಾನವೀಯ ಧರ್ಮದ ಉಳಿವಿಗಾಗಿ ಹಲವಾರು ಸಂದೇಶಗಳನ್ನು ನೀಡಿದ್ದಾರೆ. ಪೋಷಕರು ಭಗವದ್ಗೀತೆ ಮತ್ತು ಮಹಾಭಾರತ ದಲ್ಲಿನ ವಿಚಾರಧಾರೆಗಳನ್ನು ಮಕ್ಕಳಿಗೆ ತಿಳಿಸುವುದು ಅಗತ್ಯವಿದೆ. ಇದರಿಂದ ಮುಂದಿನ ಪೀಳಿಗೆ ಸನ್ಮಾರ್ಗದಲ್ಲಿ ಸಾಗುತ್ತದೆ ಎಂದು ತಿಳಿಸಿದರು. ತಮ್ಮ ಮನೆಯ ಪುಟಾಣಿ ಮಕ್ಕಳಿಗೆ ಕೃಷ್ಣ ರಾಧೆಯರ ವೇಷ ತೊಡಿಸಿ ಕಾರ್ಯಕ್ರಮಕ್ಕೆ ಕರೆತಂದು ಪಾಲಕರು ಖುಷಿ ಪಟ್ಟರು. ಪುಟ್ಟ ಮಕ್ಕಳು ಕೊಳಲು ಕೈಯಲ್ಲಿ ಹಿಡಿದು, ಕಿರೀಟ ತೊಟ್ಟು, ಪೀರಾಂಬರಿ ಧರಿಸಿ ಸಂಭ್ರಮಿಸಿದರು. ಬಾಲಕಿಯರೂ ಉದ್ದ ಜಡೆ, ಬಣ್ಣಬಣ್ಣದ…
ಪಾವಗಡ: ಧಾರ್ಮಿಕ ಭಾವನೆಗಳ ಹಾಗೂ ಸಾಂಸ್ಕöÈತಿಕ ಪರಂಪರೆಯ ಸಂಕೇತವಾಗಿರುವ ಗೌರಿ-ಗಣೇಶ ಹಬ್ಬದ ಆಚರಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಹಬ್ಬವನ್ನು ಸರ್ಕಾರದ ನಿಯಮಾವಳಿಗಳಿಗೆ ಒಳಪಟ್ಟು ಕಾನೂನುಬದ್ಧವಾಗಿ ಹಾಗೂ ಶಾಂತಿಯುತ ಸೌಹಾರ್ದಯುತವಾಗಿ ಆಚರಿಸಲು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ವೈ ರವಿ ಯವರ ನಾಯಕತ್ವದಲ್ಲಿ ಅಧಿಕಾರಿಗಳ ಸಭೆ ಜರುಗಿತು. ಸಭೆಯಲ್ಲಿ ಹಬ್ಬದ ಆಯೋಜಕರಿಗೆ ಮಾರ್ಗದರ್ಶನ ನೀಡುವುದು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು. ನಂತರ ತಹಶೀಲ್ದಾರ್ ರವರು ಮಾಧ್ಯಮದವರೊಂದಿಗೆ ಮಾತನಾಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಆಯೋಜಕರು ಅರ್ಜಿ ಸಲ್ಲಿಸಿದರೆ, ಸಂಬAಧಪಟ್ಟ ಅಧಿಕಾರಿಗಳು ಕಛೇರಿಯಲ್ಲೇ ಇದ್ದು ಪರಿಶೀಲಿಸಿ ತಕ್ಷಣ ಪರ್ಮಿಷನ್ ನೀಡಬೇಕು.ಪುರಸಭೆ ಅಥವಾ ಗ್ರಾಮ ಪಂಚಾಯಿತಿಯ ಮುಂಜಾಗ್ರತಾ ಅನುಮತಿ ಇಲ್ಲದೆ ಯಾವುದೇ ಫ್ಲೆಕ್ಸ್ ಅಥವಾ ಬ್ಯಾನರ್ಗಳನ್ನು ಹಾಕುವಂತಿಲ್ಲ.ಮೂರ್ತಿ ವಿಸರ್ಜನೆಯ ದಿನದಂದು ಅನಧಿಕೃತ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಗಣಪತಿ ಪ್ರತಿಷ್ಠಾಪನೆಯಿಂದ ಹಿಡಿದು ವಿಸರ್ಜನೆಯವರೆಗೆ ಯಾವುದೇ ರೀತಿಯ ಗಲಾಟೆ, ಘರ್ಷಣೆಗಳು ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಮುನ್ನೆಚ್ಚರಿಕೆ…
ಬೆಂಗಳೂರು/ತುಮಕೂರು: “ಭಾರತ್ ಜೋಡೋ” ಲೋಗೋವನ್ನು ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಶುಕ್ರವಾರ ಅಧಿಕೃತವಾಗಿ ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ಲೋಗೋ ಅನಾವರಣವು ರಾಜ್ಯಾದ್ಯಂತ “ಭಾರತ್ ಜೋಡೋ” ಕಾರ್ಯಕ್ರಮದ ಅನುಷ್ಠಾನದ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಹೊಸ ಲೋಗೋವು ಏಕತೆ, ಒಗ್ಗಟ್ಟು, ಯುವಜನರ ಸಕ್ರಿಯ ಪಾಲ್ಗೊಳ್ಳುವಿಕೆ ಹಾಗೂ ಕರ್ನಾಟಕದ ಜನತೆಯ ಸಾಮೂಹಿಕ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. “ಭಾರತ್ ಜೋಡೋ” ಕಾರ್ಯಕ್ರಮದ ಮೂಲ ಆಶಯ ಹಾಗೂ ದೂರದೃಷ್ಟಿಯನ್ನು ಪ್ರತಿನಿಧಿಸುವ ರೀತಿಯಲ್ಲಿ ಲೋಗೋವನ್ನು ವಿನ್ಯಾಸಗೊಳಿಸಲಾಗಿದೆ ಎಂದು ತಿಳಿಸಿದರು. ಯುವಜನರನ್ನು ಒಗ್ಗೂಡಿಸಿ, ಏಕತೆ, ಸಾಮಾಜಿಕ ಸಾಮರಸ್ಯ, ಜವಾಬ್ದಾರಿಯುತ ನಾಗರಿಕತ್ವ ಹಾಗೂ ರಾಷ್ಟç ನಿರ್ಮಾಣದಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ರೂಪಿಸಲಾಗಿರುವ ಮಹತ್ವಾಕಾಂಕ್ಷಿ ಕಾರ್ಯಕ್ರಮವೇ “ಭಾರತ್ ಜೋಡೋ” ಎಂದು ಹೇಳಿದರು. ಈ ಮಹತ್ವದ ಕಾರ್ಯಕ್ರಮಕ್ಕೆ ವಿಶಿಷ್ಟ ಗುರುತನ್ನು ರೂಪಿಸುವ ನಿಟ್ಟಿನಲ್ಲಿ “ಭಾರತ್ ಜೋಡೋ” ಲೋಗೋ ವಿನ್ಯಾಸಕ್ಕಾಗಿ ಸಾರ್ವಜನಿಕರಿಂದ ವಿನ್ಯಾಸಗಳನ್ನು ಆಹ್ವಾನಿಸಲಾಗಿತ್ತು. ಇದಕ್ಕೆ ರಾಜ್ಯದಾದ್ಯಂತ ಉತ್ತಮ ಸ್ಪಂದನೆ ದೊರೆತಿದ್ದು, ಒಟ್ಟು ೨೫೫ ಲೋಗೋ ವಿನ್ಯಾಸಗಳು ಸಲ್ಲಿಕೆಯಾಗಿದ್ದವು ಎಂದು ತಿಳಿಸಿದರು. ಲೋಗೋ ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ,…
ಕೊರಟಗೆರೆ: ತಾಲೂಕಿನ ಜಿ. ನಾಗೇನಹಳ್ಳಿ ಸಮೀಪದ ಶ್ರೀ ಬಯಲು ಆಂಜನೇಯ ಸ್ವಾಮಿ ಹಾಗೂ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ನಾಲ್ಕನೇ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ಹಾಗೂ ಹೂವಿನ ಅಲಂಕಾರ ನೆರವೇರಿತು. ಭಕ್ತರಾದ ನಲ್ಲಮಂಜು ಹಾಗೂ ಸ್ನೇಹಿತರ ನೇತೃತ್ವದಲ್ಲಿ ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ನೆರವೇರಿಸಿ, ವಿವಿಧ ಬಗೆಯ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಯಿತು. ಬೆಳಗ್ಗಿನಿಂದಲೇ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಅಲಂಕಾರವನ್ನು ಕಣ್ತುಂಬಿಕೊAಡರು. ವಿಶೇಷ ಪೂಜೆ, ಮಂಗಳಾರತಿ ಹಾಗೂ ಪ್ರಸಾದ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಪ್ರಸಾದ ಸೇವೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡರು. ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಹತ್ತು ವರ್ಷಗಳಿಂದ ಸೇವೆ: ಭಕ್ತ ನಲ್ಲಮಂಜು ಮಾತನಾಡಿ, ಸುಮಾರು ಹತ್ತು ವರ್ಷಗಳಿಂದ ಪ್ರತಿ ಶ್ರಾವಣ ಶನಿವಾರದಂದು ಬಯಲು ಆಂಜನೇಯ ಸ್ವಾಮಿ ಹಾಗೂ ಶನೇಶ್ವರ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮತ್ತು ಪ್ರಸಾದ ಸೇವೆ ನಡೆಸಿಕೊಂಡು…
ತುಮಕೂರು: ಕೇವಲ ಶೇ. ೧೦೦ ರಷ್ಟು ಫಲಿತಾಂಶದ ಹಿಂದೆ ಬೀಳದೆ, ಶೇ. ೧೦೦ ರಷ್ಟು ಪ್ರಾಮಾಣಿಕ ಪರಿಶ್ರಮವನ್ನು ಹಾಕಿ ವಿದ್ಯಾರ್ಥಿಗಳಲ್ಲಿ ನೈತಿಕತೆ ಮತ್ತು ಕೌಶಲ್ಯ ಬೆಳೆಸುವ ಕಾಯಕವೇ ನಿಜವಾದ ಶಿಕ್ಷಕ ವೃತ್ತಿ ಎಂದು ವಿ ಆರ್ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಡಾ. ರಘು ವಿ. ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸೆ. ೫ ರಂದು ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳನ್ನು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತಗೊಳಿಸದೆ, ಅವರಲ್ಲಿ ಜೀವನೋಪಯುಕ್ತ ಕೌಶಲ್ಯಗಳನ್ನು ತುಂಬುವ ಜವಾಬ್ದಾರಿ ಶಿಕ್ಷಕರ ಮೇಲಿದೆ.ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿದಾಗ ಅವರಿಗೆ ಧೈರ್ಯ ತುಂಬಿ, ಸರಿಯಾದ ಮಾರ್ಗದರ್ಶನ ನೀಡುವುದೇ ನಿಜವಾದ ಗುರುವಿನ ಲಕ್ಷಣ ಎಂದರು. ಕೇವಲ ಪಾಠ ಮಾಡಿ ಮುಗಿಸುವುದಷ್ಟೇ ಅಲ್ಲದೆ, ವಿದ್ಯಾರ್ಥಿಗಳ ವೈಯಕ್ತಿಕ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಗುಣವನ್ನು ಶಿಕ್ಷಕರು ರೂಢಿಸಿಕೊಳ್ಳಬೇಕು. ಕೇವಲ ಅಂತಿಮ ಫಲಿತಾಂಶದ…











