Author: News Desk Benkiyabale

ತುಮಕೂರು: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ, ಅವರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿಯಾಗಿದೆ ಎಂದು ಶಾಸಕ ಬಿ.ಸುರೇಶ್‌ಗೌಡ ತಿಳಿಸಿದರು. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ. ಜಿಲ್ಲಾ ಕಸಾಪ ಹಾಗೂ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣಾ ಸಮಿತಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿ ದಕ್ಷ ಆಡಳಿತಗಾರರಾಗಿ ಅವರು ಮಾಡಿದ ಅಭಿವೃದ್ದಿ ಇಂದು ಬೆಂಗಳೂರನ್ನು ವಿಶ್ವ ಮಟ್ಟಕ್ಕೆ ಪರಿಚಯಿಸಿದೆ ಎಂದರು. ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಕೆಂಪೇಗೌಡರನ್ನು ಇಂದು ಕೇವಲ ಬೆಂಗಳೂರಿಗೆ ಸೀಮಿತಗೊಳಿಸಲಾಗಿದೆ. ಆದರೆ ಅವರು ಅಂದು ನೀಡಿದ ಯೋಜನೆಗಳನ್ನು ಹೇಗೆ ನಮ್ಮ ಜಿಲ್ಲೆಯ ಬೆಳವಣಿಗೆಗೆ ಬಳಕೆ ಮಾಡಬಹುದು ಎಂಬುದನ್ನು ಇಂದಿನ ಯುವಜನರು ಚಿಂತಿಸಬೇಕಿದೆ. ಅವರು ದೂರದೃಷ್ಟಿಯ ಯೋಜನೆಗಳು, ಅವುಗಳ ಉಪಯೋಗ ಕುರಿತು ಪುಸ್ತಕ ಮುದ್ರಿಸಿ ಎಲ್ಲರಿಗೂ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು. ಇಂದು ಸಾಂಕೇತಿಕವಾಗಿ ಜಿಲ್ಲಾಡಳಿತ ಜಯಂತಿಯನ್ನು ಆಚರಿಸುತ್ತಿದ್ದು, ಕೆಲವೇ…

Read More

ಕೊರಟಗೆರೆ: ತೋಟದ ಮನೆಯಲ್ಲಿದ್ದ ವೃದ್ದೆಯ ಕೈ ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಮಾಡಿ ಮೈಮೇಲಿದ್ದ ಚಿನ್ನಾಭರಣ ದೋಚಿದ್ದ ಕಳ್ಳರನ್ನು ಕೊರಟಗೆರೆ ಸಿಪಿಐ ಪುರುಷೋತ್ತಮ ಮತ್ತು ಪಿಎಸೈ ತಿರ್ಥೇಶ್ ನೇತೃತ್ವದ ಪೊಲೀಸರ ತಂಡ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬುಧವಾರ ನಡೆದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆಗ್ರಾಪA ವ್ಯಾಪ್ತಿಯ ದಾಸಾಲುಕುಂಟೆ ಗ್ರಾಮದ ಮುದ್ದಯ್ಯನ ಮದಡಿ ರತ್ನಮ್ಮ(೬೮) ಕೊಲೆಯ ಆರೋಪಿಗಳನ್ನು ಪೊಲೀಸರು ಎಡೆಮುರಿ ಕಟ್ಟಿ ಜೈಲಿಗೆ ರವಾನಿಸಿ ಕೃತ್ಯಕ್ಕೆ ಬಳಸಿದ ದ್ವೀಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಬೆ.ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಬೆಟ್ಟದ ಹೊಸಹಳ್ಳಿಯ ಗಂಗಾಧರ್ (೨೪) ಮತ್ತು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮರಾಠಿ ಪಾಳ್ಯದ ಸೂರ್ಯ(೨೫) ಕೊಲೆ ಪ್ರಕರಣದ ಆರೋಪಿಗಳಾಗಿದ್ದು ಹೆಚ್ಚಿನ ವಿಚಾರಣೆಗೆ ಇಬ್ಬರನ್ನು ನ್ಯಾಯಾಲಯದ ಆದೇಶದ ಮೇಲೆ ಪೊಲೀಸರು ಮರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ವಾಸವಾಗಿದ್ದ ಗಂಗಾಧರ್ ಮತ್ತು ಸೂರ್ಯ ಮೂಲತಃ ಬಟ್ಟೆ ವ್ಯಾಪಾರಿ.ಆರೋಪಿಗಳನ್ನು ಪತ್ತೇ ಹತ್ತಲು ಕೊರಟಗೆರೆ ಪಟ್ಟಣದ ಸಿಸಿಟಿವಿಯೇ ಪೊಲೀಸರಿಗೆ ಸಾಕ್ಷಿ ನೀಡಿದೆ. ಸಿಸಿಟಿವಿಯ ದೃಶ್ಯಾವಳಿ…

Read More

ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯ ಕುರಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಗಿಡಕ್ಕೆ ನೀರೆರೆಯುವುದರ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಚಾಲನೆ ನೀಡಿದರು. ತರಬೇತಿ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಜುಲೈ ೦೧ ರಿಂದ ವಿಬಿ ಜಿ ರಾಮ್ ಜಿ ಯೋಜನೆ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ವಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ಉದ್ದೇಶದಿಂದ ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಸದರಿ ತರಬೇತಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಆಡಳಿತ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಹಾಜರಾಗಿದ್ದು, ತರಬೇತಿಯ ಎಲ್ಲಾ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನ ಮಾಡುವ ಉದ್ದೇಶದಿಂದ…

Read More

ಪಾವಗಡ: ಕರ್ನಾಟಕ ರಾಜ್ಯ ಪೊಲೀಸ್, ತುಮಕೂರು ಜಿಲ್ಲಾ ಪೊಲೀಸ್, ಪಾವಗಡ ಪೋಲೀಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸಲು ಬೃಹತ್ ಅರಿವು ಕಾರ್ಯಕ್ರಮವನ್ನು ಎಸ್.ಎಸ್.ಕೆ ಬಯಲು ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ವೃತ್ತ ನಿರೀಕ್ಷಕರಾದ ಸುರೇಶ್ ರವರು ಮಾದಕ ವಸ್ತುಗಳು ಔಷಧಿ ರೂಪ ಮತ್ತು ಮತ್ತೇರಿಸುವ ದುಶ್ಚಟ ಎಂಬ ಎರಡು ರೂಪಗಳಲ್ಲಿ ಲಭ್ಯವಿವೆ,ಯುವಕರೇ ಯಾವುದೇ ಕಾರಣಕ್ಕೂ ಮಾದಕ ವಸ್ತುಗಳಿಂದ ದೂರವಿರಿ. ಒಂದು ಬಾರಿ ಚಟಕ್ಕೆ ಒಳಗಾದರೆ ಹೊರಬರುವುದು ಕಷ್ಟ. ನಿಮ್ಮ ಜೀವನ ಕುಟುಂಬ ಹಾಗೂ ದೇಶದ ಭವಿಷ್ಯ ಹಾಳಾಗುತ್ತದೆ,ಆಂಧ್ರ, ಒರಿಸ್ಸಾ ದಿಂದ ಗಾಂಜಾ ಕಳ್ಳಸಾಗಣೆ ಮತ್ತು ಸ್ಥಳೀಯವಾಗಿ ಬೆಳೆಯುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಚಟುವಟಿಕೆಗಳು ಕಂಡುಬAದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು. ಜೊತೆಗೆ ೧೮ ವರ್ಷದೊಳಗಿನವರು ವಾಹನ ಚಲಾಯಿಸಿದರೆ ಪೋಷಕರಿಗೆ ?೨೫,೦೦೦ ದಂಡ ವಿಧಿಸಲಾಗುತ್ತದೆ ಎಂಬ ಕಾನೂನಿನ ಕುರಿತು ಮಾಹಿತಿ ನೀಡಿದರು. ಗ್ರಾಮೀಣ ವೃತ್ತ ನಿರೀಕ್ಷಕರಾದ ಕೊಟ್ರೇಶ್ ರವರು ಅಧ್ಯಕ್ಷತೆ…

Read More

ತುಮಕೂರು: ಕನ್ನಡ ಪುಸ್ತಕಲೋಕದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿರುವ ಭವ್ಯ ಸಾಹಿತ್ಯಿಕ ಹಬ್ಬ ವೀರಲೋಕ ಪುಸ್ತಕ ಸಂತೆಯ ಐದನೇ ಆವೃತ್ತಿಯು ಈ ಬಾರಿ ಜ್ಞಾನ ನಗರಿ ತುಮಕೂರಿನಲ್ಲಿ ಅತ್ಯಂತ ವೈಭವದಿಂದ ಆಯೋಜನೆಗೊಂಡಿದೆ. ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ದಿವ್ಯ ಆಶೀರ್ವಾದಗಳೊಂದಿಗೆ, ತುಮಕೂರು ಜಿಲ್ಲಾಡಳಿತ ಹಾಗೂ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಕ್ರಿಯ ಸಹಕಾರದಲ್ಲಿ, ಶ್ರೀ ಆರ್. ಕೆ. ಶ್ರೀನಿವಾಸ ಅವರ ನೇತೃತ್ವ ಹಾಗೂ ವೀರಕಪುತ್ರ ಶ್ರೀನಿವಾಸ ಅವರ ರೂವಾರಿತನದಲ್ಲಿ ಈ ಸಾಹಿತ್ಯದ ಬೃಹತ್ ಜಾತ್ರೆ ನಡೆಯಲಿದೆ. ದಿನಾಂಕ ೨೦೨೬ರ ಜೂನ್ ೨೬, ೨೭ ಮತ್ತು ೨೮ರಂದು ತುಮಕೂರಿನ ಪ್ರಸಿದ್ಧ ಅಮಾನಿಕೆರೆಯ ‘ಗಾಜಿನ ಮನೆ’ಯಲ್ಲಿ ಬೆಳಿಗ್ಗೆ ೧೦:೦೦ ಗಂಟೆಯಿAದ ರಾತ್ರಿ ೯:೦೦ ಗಂಟೆಯವರೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶದೊಂದಿಗೆ ಈ ಸಂತೆ ಜರುಗಲಿದೆ. ಈ ಹಿಂದಿನ ಆವೃತ್ತಿಯು ಬೆಂಗಳೂರಿನಲ್ಲಿ ಅಭೂತಪೂರ್ವ ಯಶಸ್ಸನ್ನು ಕಂಡಿದ್ದು, ಎರಡು ಲಕ್ಷಕ್ಕೂ ಹೆಚ್ಚು ಪುಸ್ತಕ ಪ್ರೇಮಿಗಳು ಭೇಟಿ ನೀಡಿ, ಬರೋಬ್ಬರಿ ಮೂರು ಕೋಟಿ ರೂಪಾಯಿಗಳಿಗೂ ಅಧಿಕ…

Read More

ಹುಳಿಯಾರು: ದಶಕಗಳಿಂದ ತ್ಯಾಜ್ಯದ ಕೂಪವಾಗಿ ಮಾರ್ಪಟ್ಟು, ದುರ್ನಾಥ ಬೀರುತ್ತಿದ್ದ ಹುಳಿಯಾರು ಕೆರೆಗೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ. ಕೆರೆಯ ದುಸ್ಥಿತಿಯ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಹಾಗೂ ಸಾರ್ವಜನಿಕರ ದೂರಿನನ್ವಯ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಉಪ ಲೋಕಾಯುಕ್ತರು ತೀವ್ರ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಎಚ್ಚೆತ್ತ ಸಣ್ಣ ನೀರಾವರಿ ಇಲಾಖೆಯು ಕಳೆದ ಎರಡು ದಿನಗಳಿಂದ ಹಿಟಾಚಿ ಯಂತ್ರದ ಮೂಲಕ ಕೆರೆ ಅಂಗಳವನ್ನು ಕ್ಲೀನ್ ಮಾಡಲು ಮುಂದಾಗಿದೆ. ಕಲ್ಮಶವಾಗಿದ್ದ ಕೆರೆ: ಸಾರ್ವಜನಿಕರ ಆಕ್ರೋಶ: ಹುಳಿಯಾರು ಪಟ್ಟಣದ ಜೀವನಾಡಿಯಾಗಿದ್ದ ಈ ಇತಿಹಾಸ ಪ್ರಸಿದ್ಧ ಕೆರೆಯು ಇತ್ತೀಚಿನ ವರ್ಷಗಳಲ್ಲಿ ಸಂಪೂರ್ಣವಾಗಿ ಕಸದ ತೊಟ್ಟಿಯಾಗಿ ಮಾರ್ಪಟ್ಟಿತ್ತು. ಪಟ್ಟಣದ ಹೋಟೆಲ್‌ಗಳು, ಕೋಳಿ ಅಂಗಡಿಗಳು, ತರಕಾರಿ ಮಾರುಕಟ್ಟೆಯ ತ್ಯಾಜ್ಯಗಳನ್ನೆಲ್ಲಾ ನೇರವಾಗಿ ಕೆರೆಗೆ ಸುರಿಯಲಾಗುತ್ತಿತ್ತು. ಇದರ ಜೊತೆಗೆ, ಕೆರೆ ಅಂಗಳದ ಫುಟ್‌ಪಾತ್ ವ್ಯಾಪಾರಿಗಳು ಪಾನಿಪುರಿ, ಗೋಬಿ, ಟೀ ಹಾಗೂ ತಿಂಡಿ ಸೇರಿದಂತೆ ತಮ್ಮ ಅಂಗಡಿಯ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯಗಳನ್ನು ಕೆರೆಯೊಳಗೆ ಎಸೆಯುತ್ತಿದ್ದರು. ಇದರಿಂದ ಕೆರೆಯ ನೀರು ಸಂಪೂರ್ಣ ಕಲ್ಮಶಗೊಂಡು,…

Read More

ಚಿಕ್ಕನಾಯಕನಹಳ್ಳಿ: ತಿಪಟೂರಿಗೆ ಶೆಟ್ಟಿಕೆರೆ ಮಾರ್ಗವಾಗಿ ೨೪ ಕಿ.ಮೀ ಆಗಲಿದ್ದು ಈ ರಸ್ತೆ ನಮಗೆ ಹತ್ತಿರವಾಗಿದ್ದು ಪ್ರತಿದಿನ ನೂರಾರು ಜನರು ಓಡಾಡುವಂತಹ ಈ ರಸ್ತೆಯನ್ನು ಈಗಾಗಲೇ ಅಬಿವೃದ್ದಿ ಪಡಿಸಲಾಗುತ್ತಿದ್ದು ಇನ್ನು ಹೆಚ್ಚುವರಿಯಾಗಿ ೬ಕೋಟಿ ಅನುದಾನವನ್ನು ನೀಡುವ ಮೂಲಕ ಗೋಪಾಲನಹಳ್ಳಿಯವರೆಗೆ ವಿಸ್ತರಿಸಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು. ಪಟ್ಟಣದ ಕೇದಿಗೆಹಳ್ಳಿಬಳಿ ತಿಪಟೂರಿಗೆ ಸಂಪರ್ಕ ಕಲ್ಪಿಸುವ ರಾಜ್ಯಹೆದ್ದಾರಿಯಲ್ಲಿ ೨ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೆರಿಸಿ ಮಾತನಾಡಿದ ಅವರು ಸಾರ್ವಜನಿಕರು ಓಡಾಡುವಂತಹ ಈ ರಸ್ತೆಯಲ್ಲಿ ಮಳೆಗಾಲದಲ್ಲಿ ಸುಮಾರು ಮೂರನಾಲ್ಕು ತಿಂಗಳು ನೀರು ಹರಿಯುತ್ತಿದ್ದು ಇದರಿಂದ ತೊಂದರೆಯಾಗುತ್ತಿದ್ದು ಇದನ್ನರಿತು ೨ ಕೋಟಿ ವೆಚ್ಚದಲ್ಲಿ ಇಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಸು.೮೦ ಅಡಿ ಉದ್ದವಿದ್ದು ೪೦ ಅಡಿ ಅಗಲವಿರುವಂತಹ ಈ ಸೇತುವೆಯನ್ನು ಗುಣಮಟ್ಟದಲ್ಲಿ ನಿರ್ಮಿಸುವಂತೆ ಗುತ್ತಿಗೆದಾರರಿಗೆ ತಿಳಿಸಿದ ಅವರು ಪಟ್ಟಣದಲ್ಲಿ ಆಗಿದ್ದಾಂಗೆ ಅಪಘಾತಗಳು ನಡೆಯುತ್ತಿದ್ದು ವೇಗಮಿತಿಯಲ್ಲಿ ಕಡಿಮೆ ಮಾಡಲು ಹಾಗೂ ವಾಹನ ಚಲಾವಣೆಯಲ್ಲಿ ಎಚ್ಚರಿಕೆವಹಿಸುವಂತೆ ಚಾಲಕರಿಗೆ ತಿಳಿಸಿದ ಅವರು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ…

Read More

ತುಮಕೂರು: ಯುವಕರ ಕಣ್ಣಿನಲ್ಲಿ ಭಾರತದ ಭವಿಷ್ಯ ಅಡಗಿದೆ. ದೇಶದ ಸಾಮಾನ್ಯ ಜನರಿಗೂ ಅಗತ್ಯ ವಸ್ತುಗಳನ್ನು ಕೊಳ್ಳುವ ಹಾಗೂ ಹಸಿವನ್ನು ನೀಗಿಸಿಕೊಳ್ಳುವ ಶಕ್ತಿ ಬಂದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ. ಇವೆಲ್ಲವೂ ಸಾಕಾರಗೊಳ್ಳಲು ಕೇಂದ್ರ ಸರ್ಕಾರದ ಪಿಎಂ ಉಷಾ ಯೋಜನೆ ಅತ್ಯಂತ ಸಹಕಾರಿಯಾಗಲಿದೆ ಎಂದು ತುಮಕೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಹೆಚ್. ಎಸ್. ಮೋಹನ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ವ್ಯಾವಹಾರ ಆಡಳಿತ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ, ಪಿಎಂ ಉಷಾ ಯೋಜನೆಯಡಿ ವಿಶ್ವವಿದ್ಯಾನಿಲಯದ ಜ್ಞಾನಸಿರಿ ಆವರಣದಲ್ಲಿ ಜೂ. ೨೪ ಬುಧವಾರ ದಂದು ಹಮ್ಮಿಕೊಳ್ಳಲಾಗಿದ್ದ “ಸುಸ್ಥಿರ ಅಭಿವೃದ್ಧಿ ಗುರಿಗಳು” ಎಂಬ ವಿಷಯದ ಕುರಿತ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೌಶಲ್ಯಗಳನ್ನು ರೂಢಿಸಿಕೊಂಡಾಗ ಮಾತ್ರ ಸಾಧನೆಯ ಹಾದಿಯಲ್ಲಿ ಸಾಗಲು ಸಾಧ್ಯ. ನಿರಂತರ ಪ್ರಯತ್ನ, ಕಠಿಣ ಶ್ರಮ ಹಾಗೂ ಕಲಿಕೆಯ ಜೊತೆಗೆ ಜೀವನದ ನೋವು-ನಲಿವುಗಳ ಅನುಭವಗಳ ಬಗ್ಗೆ ಅರಿವು ಮೂಡಿಸಿಕೊಂಡಾಗ ಮಾತ್ರ ಯಶಸ್ಸು ಲಭಿಸುತ್ತದೆ. ಸರಿಯಾದ ಬುನಾದಿ ಮತ್ತು ಗುರಿ…

Read More

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್ ಮ್ಯಾನೇಜರ್ ಹುದ್ದೆ ಪದೋನ್ನತಿ ಪರೀಕ್ಷೆಯನ್ನು ಕನ್ನಡಕ್ಕೆ ಅವಕಾಶ ನೀಡದೆ, ಹಿಂದಿ, ಇಂಗ್ಲೀಷ್ ಭಾಷೆಗೆ ಮಾನ್ಯತೆ ನೀಡಿದೆ. ರೈಲ್ವೆ ಇಲಾಖೆ ಈ ಮೂಲಕ ಕನ್ನಡಗರಿಗೆ ದ್ರೋಹ ಮಾಡಲು ಹೊರಟಿದೆ ಎಂದು ಟೀಕಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ, ಇಲಾಖೆ ಧೋರಣೆ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿರುವ ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಈ ವಿಚಾರ ಗಮನಕ್ಕೆ ತಂದರೂ ಅವರು ಇಲಾಖೆ ಕ್ರಮವನ್ನು ಸಮರ್ಥಿಸಿಕೊಂಡಿರುವುದು ದುರಾದೃಷ್ಟಕರ.ಕೇಂದ್ರ ಸರ್ಕಾರದ ಇಲಾಖೆಗಳ ಕನ್ನಡ ನಿರ್ಲಕ್ಷದ ಬಗ್ಗೆ ಸಂಘಟನೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರು ರಾಜ್ಯದ ಎಲ್ಲಾ ಸಂಸದರು, ಸಂಬAಧಿಸಿದ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದರೂ ಕೇಂದ್ರ ಸರ್ಕಾರ ತನ್ನ ಕನ್ನಡ ವಿರೋಧಿ ಚಾಳಿ ಮುಂದುವರೆಸಿದೆ…

Read More

ತುಮಕೂರು: ರಾಜ್ಯಾದ್ಯಂತ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಂಭವವಿರುವುದಾಗಿ ತಜ್ಞರು ಅಭಿಪ್ರಾಯಿಸಿರುತ್ತಾರೆ. ಫೆಸಿಫಿಕ್ ಮಹಾಸಾಗರದ ಮೇಲ್ಮೈ ತಾಪಮಾನವು ಸರಾಸರಿ ತಾಪಮಾನಕ್ಕಿಂತ ಹೆಚ್ಚಿರುವುದು ಎಂದರೆ ಎಲ್ ನಿನೋ ಇದಕ್ಕೆ ಕಾರಣವಾಗಿರುತ್ತದೆ. ಆದ್ದರಿಂದ ರೈತ ಬಾಂಧವರು ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಮಳೆಯನ್ನು ಆಧರಿಸಿ ತಳಿಗಳನ್ನು ಆಯ್ಕೆ ಮಾಡಿ ಬಿತ್ತನೆ ಕೈಗೊಳ್ಳಬೇಕಾಗಿ ಜಂಟಿ ಕೃಷಿ ನಿರ್ದೇಶಕ ಲಕ್ಷö್ಮಣ ಎಸ್.ಕಳ್ಳೆನ್ನವರ ಮನವಿ ಮಾಡಿದ್ದಾರೆ. ಜಿಲ್ಲೆಯ ರೈತರು ವಿವಿಧ ಬೆಳೆಗಳಲ್ಲಿ ಈ ಕೆಳಕಂಡAತೆ ತಳಿಗಳನ್ನು ಆಯ್ಕೆ ಮಾಡಿ ತಾಂತ್ರಿಕತೆಗಳನ್ನು ಅನುಸರಿಸಬೇಕು. ಖುಷ್ಕಿ ಬೆಳೆಗಳನ್ನು ಬೆಳೆಯುವ ಸಂದರ್ಭದಲ್ಲಿ ೫೦ ರಿಂದ ೬೦ ಮಿಲಿ ಮೀಟರ್ ಮಳೆ ಬಂದ ನಂತರ ಬಿತ್ತನೆ ಮಾಡುವುದು ಸೂಕ್ತ. ಕಳೆ ನಿಯಂತ್ರಣ ಹಾಗೂ ಮಣ್ಣಿನ ತೇವಾಂಶ ಸಂರಕ್ಷಣೆಗಾಗಿ ಅಂತರ ಬೇಸಾಯ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆಗಳ ಸಾಲುಗಳ ನಡುವೆ ಕೃಷಿ ತ್ಯಾಜ್ಯಗಳನ್ನು ಹೊದಿಕೆಯಾಗಿ ಬಳಸಬೇಕು. ಮಧ್ಯಂತರ ಬರ ಪರಿಸ್ಥಿತಿಯಲ್ಲಿ ಹಾಗೂ ಮಳೆಯ ನಂತರ ಬೆಳೆ ಚೇತರಿಕೆಗೆ ೧% ರಿಂದ ೩% ಯೂರಿಯಾವನ್ನು ೦.೫%…

Read More