Author: News Desk Benkiyabale

ತುಮಕೂರು: ನಿರ್ಲಕ್ಷಕ್ಕೆ ಒಳಗಾದ ವಿಕಲಚೇತನರಿಗೆ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ನೀಡಿ ಉತ್ತಮ ರೀತಿಯಲ್ಲಿ ಜೀವನ ನೆಡೆಸುವ ಹಾದಿಯನ್ನು ಕಲ್ಪಿಸುವ ಸಲುವಾಗಿ ವಿಕಲಚೇತನರ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದೇವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ನೂರುನ್ನೀಸ ರವರು ತಿಳಿಸಿದರು. ಮಂಗಳವಾರ ನಗರದ ಕೆ ಆರ್ ಬಡಾವಣೆಯಲ್ಲಿ ದಿಯಾ ಚಾರಿಟಬಲ್ ಟ್ರಸ್ಟ್ ಇಂಡಿಯಾ ಹಾಗೂ ದಿಯಾ ಚಾರಿಟಬಲ್ ಟ್ರಸ್ಟ್ ಇಂಡಿಯಾ ವೃದ್ಧಾಶ್ರಮ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು.ಇವರ ಸಹಯೋಗದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆ-೨೦೨೫ ಕಾರ್ಯಕ್ರಮದ ಅಂಗವಾಗಿ ವಿಶೇಷ ಚೇತನರಿಗೆ ಮತ್ತು ಹಿರಿಯ ನಾಗರೀಕರಿಗೆ ವೀಲ್‌ಚೇರ್, ಕಮೋಡ್ ಚೇರ್, ವಾಕರ್, ವಾಕಿಂಗ್ ಸ್ಟಿಕ್ ಕ್ರಚ್ಚಸ್, ಬ್ರೆಂಡ್‌ಸ್ಟಿಕ್ ಮತ್ತು ಕಂಬಳಿಗಳನ್ನು ೩೦೦ಕ್ಕೂ ಫಲಾನುಭವಿಗಳಿಗೆ ಉಚಿತವಾಗಿ ನೀಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಳೆದ ನಾಲ್ಕು ವರ್ಷಗಳಿಂದ ದಿಯಾ ಸಂಸ್ಥೆಯು ಸಾಮಾಜಿಕ ಕಾರ್ಯಕ್ರಮಗಳನ್ನು ಗಮನಿಸುತ್ತಾ ಬಂದಿದ್ದೇನೆ, ವಿಕಲಚೇತನರು,ಮಕ್ಕಳು, ಹಿರಿಯ ನಾಗರೀಕರಿಕರು ಹಾಗೂ ಸಮಾಜದಿಂದ ತುಳಿತಕ್ಕೆ ಒಳಗಾದವರಿಗೆ ತಮ್ಮ ಸ್ವಂತ ದುಡಿಮೆಯಲ್ಲಿ ಉಚಿತ ಸಲ್ಲಿಸುತ್ತಿರುವುದು ಶ್ಲಾಘನೆ ಎಂದುರು. ಹೆಚ್ಚುವರಿ…

Read More

ತುಮಕೂರು: ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ, ಶ್ರೀರಾಮ ಸೇನೆವತಿಯಿಂದ ಆಯೋಜಿಸಿರುವ ದತ್ತ ಜಯಂತಿಯಲ್ಲಿ ಪಾಲ್ಗೊಳ್ಳಲು ಗುರುವಾರ ನಗರದಿಂದ ನೂರಾರು ದತ್ತ ಮಾಲಾಧಾರಿ ಭಕ್ತರು ತೆರಳಿದರು. ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮಾಲಾಧಾರಿಗಳು ಗುಬ್ಬಿ ವೃತ್ತದ ಕುಂಟಮ್ಮನ ತೋಟದ ಆಂಜನೇಯ ದೇವಸ್ಥಾನದವರೆಗೆ ಪಾದಯತ್ರೆ ಸಾಗಿ, ಅಲ್ಲಿ ಪೂಜೆ ಸಲ್ಲಿಸಿ ನಂತರ ಆರು ಬಸ್‌ಗಳಲ್ಲಿ ದತ್ತಪೀಠದತ್ತ ಪ್ರಯಾಣ ಬೆಳೆಸಿದರು. ನಾಗರಕಟ್ಟೆ ಗಣಪತಿ ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೊರಟಗೆರೆ ತಾಲ್ಲೂಕು ತಂಗನಹಳ್ಳಿ ಕಾಶಿ ಅನ್ನಪೂರ್ಣೇಶ್ವರಿ ಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ದತ್ತಪೀಠ ಹಿಂದೂಗಳ ಪವಿತ್ರ ಧಾರ್ಮಿಕ ಕೇಂದ್ರ, ಇದಕ್ಕೆ ಪೌರಾಣಿಕ ಹಿನ್ನೆಲೆ ಇದೆ. ಅನೇಕ ಋಷಿಮುನಿಗಳು ತಪಸ್ಸು, ಧಾನ್ಯ ಮಾಡಿದ್ದ ಶ್ರದ್ಧಾ ಕೇಂದ್ರ. ಭಕ್ತರು ಪ್ರತಿ ವರ್ಷ ಮಾಲೆ ಧರಿಸಿ ದತ್ತ ಪೀಠಕ್ಕೆ ಯಾತ್ರೆ ತೆರಳಿ ದತ್ತತ್ರೇಯರ ಪಾದುಕೆ ದರ್ಶನ, ಸ್ಪರ್ಶ ಮಾಡಿ ಭಕ್ತಿ ಸಮರ್ಪಿಸುವ ಆಚರಣೆ ಅನಾದಿ ಕಾಲದಿಂದಲೂ ನಡೆದುಬರುತ್ತಿದೆ ಎಂದು ಹೇಳಿದರು.…

Read More

ತುಮಕೂರು: ಸಮಾಜದಲ್ಲಿ ವಿಕಲಚೇತನರಿಗೆ ಬೇಕಾದುದು ಕೇವಲ ಸಹಾನುಭೂತಿ ಅಲ್ಲ. ಬದಲಾಗಿ ಎಲ್ಲ ಸಮಾನ ಅವಕಾಶಗಳು ಸಿಗಬೇಕು. ಅವಕಾಶಗಳು ನೀಡಿದರೆ ಅವರಲ್ಲಿರುವ ಪ್ರತಿಭೆಯನ್ನು ಹೊರತರಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅಭಿಪ್ರಾಯ ವ್ಯಕ್ತಪಡಿಸಿದರು. ಬುಧವಾರ ನಗರದ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರ ಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿದ ಅವರು, ವಿಕಲಚೇತನರು ವಿಶೇಷ ಚೇತನರು. ಸಮಾಜ ದಲ್ಲಿ ಅವರಿಗೆ ಸಮಾನವಾಗಿ ಅವಕಾಶಗಳು ತಲುಪಿದ್ದಲ್ಲಿ, ಅವರು ಇನ್ನಷ್ಟು ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಮನೆ, ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ವಿಕಲಚೇತನರು ಅಥವಾ ಬುದ್ಧಿಮಾಂದ್ಯತೆ ಹೊಂದಿರುವವರನ್ನು ಮೂಢನಂಬಿಕೆಗಳ ಕಾರಣದಿಂದ ಸಂಕೋಲೆಗಳಲ್ಲಿ ಸಿಲುಕಿಸಿ ಹಿಂಸೆ ನೀಡುವುದು…

Read More

ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆ ಮಿಯ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ ೫ರಂದು ಸಂಜೆ ೪ ಗಂಟೆಗೆ ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿರುವ ಡಾ. ಗುಬ್ಬಿ ವೀರಣ್ಣ ರಂಗಮ0ದಿರದಲ್ಲಿ ನಡೆಯಲಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಅವರು ಹೇಳಿದರು. ಬುಧವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ೨೦೨೪ನೇ ಸಾಲಿನ ಗೌರವ ಪ್ರಶಸ್ತಿ, ಸಾಹಿತ್ಯಶ್ರೀ ಪ್ರಶಸ್ತಿ ಹಾಗೂ ೨೦೨೩ನೇ ಸಾಲಿನ ಪುಸ್ತಕ ಬಹುಮಾನ ಮತ್ತು ದತ್ತಿ ಬಹುಮಾನ ಪ್ರದಾನ ನಡೆಯಲಿದೆ. ಡಾ. ಎಂ. ಬಸವಣ್ಣ, ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್, ಡಾ. ಡಿ.ಬಿ. ನಾಯಕ ಹಾಗೂ ಡಾ: ವಿಶ್ವನಾಥ್ ಕಾರ್ನಾಡ್ ಸೇರಿದಂತೆ ೪೧ ಜನರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು. ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರ ಉಪಸ್ಥಿ ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ…

Read More

ತುಮಕೂರು: ಜಿಲ್ಲೆಯ ತೆಂಗು ಬೆಳೆಗೆ ತಗುಲಿರುವ ನುಸಿಪೀಡೆ ಹಾಗೂ ಬಿಳತಲೆ ಹುಳು ನಿಯಂತ್ರಣದಲ್ಲಿ ಕೃಷಿ ಹಾಗು ತೊಟಗಾರಿಕೆ ಇಲಾಖೆ ವೈಫಲ್ಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ನಿವಾರಣೆ ಮಾಡುವಲ್ಲಿ ನಿರ್ಲಕ್ಷö್ಯವಹಿಸಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ ಮುಖಂಡರು ಬುಧವಾರ ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ನುಸಿಪೀಡಿತ ತೆಂಗು ಹಿಡಿದು ಸ್ವಾತಂತ್ರö್ಯ ಚೌಕದಿಂದ ಕೃಷಿ ಇಲಾಖೆ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಮುಖಂಡರು ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯಿಂದ ರೈತರು ಜೀವನ ಅರಸಿ ಗುಳೆ ಹೋಗುವ ಪರಿಸ್ಥಿತಿ ಬಂದಿದೆ. ಅನ್ನಭಾಗ್ಯ ಕೊಡುತ್ತೇವೆ, ಅಕ್ಕಿ, ಸಕ್ಕರೆ ಕೊಡುತ್ತೇವೆ ಎನ್ನುವ ಕಾಂಗ್ರೆಸ್ ನಾಯಕರು, ಅದನ್ನು ಬೆಳೆಯುವ ರೈತರ ಕಷ್ಟವನ್ನು ಕೇಳುತ್ತಿಲ್ಲ. ಯಾವುದೇ ನೀರಾವರಿ ಯೋಜನೆಗೆ ಹಣ ನೀಡಿಲ್ಲ, ರಸ್ತೆಗಳ ಗುಂಡಿ ಮುಚ್ಚಲೂ ದುಡ್ಡು ಕೊಟ್ಟಿಲ್ಲ. ಬಿಜೆಪಿ ಸರ್ಕಾರದ ಅನೇಕ…

Read More

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ, ಸರ್ಕಾರಿ ಶಾಲೆ, ಅಂಗನವಾಡಿ ಸೇರಿದಂತೆ ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆ ಭೇಟಿ: ವೈದ್ಯರ ಗೈರು: ತಾಲೂಕಿನ ಬಿದರೆ ಗ್ರಾಮದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದಾಗ ವೈದ್ಯರು ಗೈರಾಗಿರುವುದನ್ನು ಗಮನಿಸಿದ ಅವರು ಸರ್ಕಾರಿ ಆಸ್ಪತ್ರೆಗೆ ಗ್ರಾಮಾಂತರ ಪ್ರದೇಶದ ಬಡಜನರೇ ಹೆಚ್ಚಾಗಿ ಬರುವುದರಿಂದ ವೈದ್ಯರು ಸಮಯಕ್ಕೆ ಸರಿಯಾಗಿ ಲಭ್ಯವಿರಬೇಕು. ಮನಸ್ಸಿಗೆ ತೋಚಿದಂತೆ ಬಂದರೆ ಹಳ್ಳಿಯ ಜನರ ಕಥೆ ಏನಾಗಬೇಕು? ರೋಗಿಗಳ ಚಿಕಿತ್ಸೆ ಸೇರಿದಂತೆ ಎಲ್ಲಾ ಕೆಲಸವನ್ನು ಆಸ್ಪತ್ರೆಯಲ್ಲಿರುವ ಶುಶ್ರೂಷಕಿ ಒಬ್ಬರೇ ಮಾಡುತ್ತಿದ್ದಾರಾ ಎಂದು ಕ್ಲಾಸ್ ತೆಗೆದುಕೊಂಡರು. ಆಸ್ಪತ್ರೆ ನೋಡಿದರೆ ಇಷ್ಟು ಚಿಕ್ಕದಾಗಿದ್ದು, ಇಲ್ಲಿ ಹೇಗೆ ಚಿಕಿತ್ಸೆ ನೀಡುತ್ತೀರಾ? ಆಸ್ಪತ್ರೆಯಲ್ಲಿ ಚಿಕಿತ್ಸೆ, ಔಷಧೋಪಚಾರ ನೀಡುವುದು ಸಮಾಧಾನ ತಂದಿದೆಯೇ ಎಂದು ಅಲ್ಲಿಗೆ ಬಂದಿದ್ದ0ತಹ ರೋಗಿಗಳನ್ನೇ ಪ್ರಶ್ನಿಸಿದರು. ಹೊಸ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ೩ ಕೋಟಿ ರೂ. ಹಣ ಬಿಡುಗಡೆಯಾಗಿದೆ. ಹಣ ಬಿಡುಗಡೆಯಾಗಿದ್ದರೂ ಏಕೆ ಕಾಮಗಾರಿಯನ್ನು ಆರಂಭಿಸಿಲ್ಲವೆ0ದು ಸಂಬ0ಧಪಟ್ಟ…

Read More

ಗುಬ್ಬಿ: ಎಚ್ ಎ ಎಲ್ ನಲ್ಲಿ ಸೈನಿಕರಿಗೆ ಆರು ಎಕರೆ ಜಮೀನು ಮೀಸಲು ಇರಿಸಿದ್ದು ಹಸ್ತಾಂತರಿಸುವ0ತೆ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಎಸ್ಸಿಎಸ್ ಕಲ್ಯಾಣ ಮಂಟಪದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ನಡೆದ ನಿವೃತ ಸೈನಿಕ ದಿವಾಕರ್ ಬಿ ಟಿ ರವರಿಗೆ ಸ್ವಾಗತ ಹಾಗೂ ಅಭಿನಂದನಾ ಸಮಾರಂಭ ಮತ್ತು ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರೈತ ದೇಶಕ್ಕೆ ಅನ್ನವನ್ನು ನೀಡಿದರೆ ದೇಶವನ್ನು ಕಾಯುವಲ್ಲಿ ಸೈನಿಕರ ಪಾತ್ರ ಮಹತ್ತರವಾದದ್ದು. ಪ್ರತಿಯೊಬ್ಬರೂ ಸೈನಿಕರಿಗೆ ಗೌರವ ನೀಡುವ ಮೂಲಕ ಅವರನ್ನು ಗೌರವಿಸಬೇಕು. ಭಾರತದಲ್ಲಿ ಮಿಲಿಟರಿ ವ್ಯವಸ್ಥೆ ಸುಭದ್ರವಾಗಿದ್ದು ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಭಾರತದ ಸೈನಿಕರ ಶೌರ್ಯ, ಧೈರ್ಯ ಎಂತದು ಎಂಬುದನ್ನು ಸಾಬೀತು ಪಡಿಸಿದ್ದಾರೆ. ಹಿಂದಿನ ಯುವ ಪೀಳಿಗೆಗೆ ದೇಶ ಹಾಗೂ ಸೈನಿಕರ ಮೇಲೆ ಅಭಿಮಾನ ಗೌರವವನ್ನು ಬೆಳೆಸಿಕೊಳ್ಳಬೇಕು. ನಾವು ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬ ತುಡಿತ…

Read More

ಶಿರಾ: ಹೈನುಗಾರಿಕೆ ರೈತರ ಜೀವನಕ್ಕೆ ವರದಾನವಾಗಿದ್ದು, ರೈತರು ಕೃಷಿ ಜೊತೆಗೆ ಹೆಚ್ಚು ಹೆಚ್ಚು ಹೈನುಗಾರಿಕೆಯಲ್ಲಿ ತೊಡಗಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಶಿರಾ ನಗರದ ನಂದಿನಿ ಕ್ಷೀರ ಭವನ ಆವರಣದಲ್ಲಿ ತುಮಕೂರು ಹಾಲು ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ೨.೫ ಕೋಟಿ ರೂಪಾಯಿ ಅನುದಾನದ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ ಹಾಗೂ ಅಂಧರ ಟಿ೨೦ ಕ್ರಿಕೇಟ್‌ನಲ್ಲಿ ನಾಯಕಿಯಾಗಿದ್ದ ಶಿರಾ ತಾಲೂಕಿನ ಕುಮಾರಿ ದೀಪಿಕಾ ಅವರಿಗೆ ಸನ್ಮಾನ, ಹಾಗೂ ವಿವಿಧ ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಸ್ವತಃ ಇಷ್ಟ ಪಟ್ಟು ಕೃಷಿ ಮಂತ್ರಿ, ಪಶು ಸಂಗೋಪನೆ, ನೀರಾವರಿ ಖಾತೆ ಕೇಳಿ ಪಡೆದಿದ್ದೆ. ಸಚಿವನಾಗಿದ್ದ ಸಂದರ್ಭದಲ್ಲಿ ಹೈನುಗಾರಿಕೆಗೆ ಪ್ರೋತ್ಸಾಹ ನೀಡಿದ್ದೇನೆ ಎಂದ ಅವರು ಶಿರಾ ತಾಲೂಕಿನಲ್ಲಿ ನಂದಿನಿ ಉತ್ಪನ್ನಗಳ ತಯಾರಿಕಾ ಘಟಕ ಸ್ಥಾಪಿ ಸಲು ೪.ಎಕರೆ ಜಮೀನನ್ನು ಮಂಜೂರು ಮಾಡಲಾಗುವುದು ಎಂದರು. ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ ಶಿರಾದಲ್ಲಿ ಶಾಸಕ ಟಿ.ಬಿ.ಜಯಚಂದ್ರ ಅವರು ನೀರನ ಹೊಳೆ ಹರಿಸಿದ್ದಾರೆ. ಎಸ್.ಆರ್.ಗೌಡ ಅವರು…

Read More

ತುಮಕೂರು: ಸುಪ್ರಿಂ ಕೋರ್ಟಿನ ತೀರ್ಪಿನ ನಡುವೆಯೂ ಒಳಮೀಸಲಾತಿ ಜಾರಿಗೆ ವಿವಿಧ ಕಾರಣಗಳನ್ನು ನೀಡಿ ನಿರ್ಲಕ್ಷ ತೋರಿರುವ ರಾಜ್ಯ ಸರಕಾರದ ವಿರುದ್ದ ಅಂಬೇಡ್ಕರ್ ಪರಿನಿಬ್ಬಾಣದ ದಿನವಾದ ಡಿಸೆಂಬರ್ ೦೬ ರಿಂದ ೧೧ರವರೆಗೆ ಮೈಸೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಕೈಗೊಳ್ಳಲಾಗಿದೆ ಎಂದು ಸಮಿತಿ ರಾಜ್ಯ ಸಂಚಾಲಕರಾದ ಕೇಶವಮೂರ್ತಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಡಿಸೆಂಬರ್ ೬ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನ ಹುಂಡಿಯಿ0ದ “ಪೂರ್ಣ ಪ್ರಮಾಣದ ಒಳಮೀ ಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ”ಎಂಬ ಘೋಷ ವಾಕ್ಯ ದೊಂದಿಗೆ ಮೈಸೂರು ಚಲೋ ಜಾಥಾ ಆರಂಭಿಸಿ,ಡಿಸೆ0ಬರ್ ೧೧ ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಮುಕ್ತಾಯಗೊಳಿಸಲಾಗುವುದು ಎಂದರು. ಸರಕಾರ ಹೇಳುತ್ತಿರುವಂತೆ ಒಳಮೀಸಲಾತಿ ಯನ್ನು ಕೇವಲ ಉದ್ಯೋಗ ಮತ್ತು ಶಿಕ್ಷಣಕ್ಕೆ ಸಮಿತಗೊಳಿಸುವುದು ಸರಿಯಲ್ಲ. ರಾಜಕೀಯ ಸೇರಿದಂತೆ ಎಲ್ಲಾ ರಂಗದಲ್ಲಿಯೂ ಒಳಮೀಸಲಾತಿ ಪರಿಪೂರ್ಣವಾಗಿ ಜಾರಿಗೆ ಬರಬೇಕು ಎಂಬುದು ಪರಿಶಿಷ್ಟ ಜಾತಿಯಲ್ಲಿರುವ ೧೦೧ ಜಾತಿಗಳ…

Read More

ತುಮಕೂರು: ನಾಡಿನ ಹಬ್ಬ-ಹುಣ್ಣಿಮೆಗಳ ಆಚರಣೆ, ಪೂಜಾ ವಿಧಾನ, ಗ್ರಾಮೀಣ ಜನರ ಅಡುಗೆ, ಉಡುಗೆ, ದಾರ್ಶನಿಕರು ಸಾರಿದ ಜೀವನ ಸಾರ, ನಾಡುನುಡಿಯ ಹಿರಿಮೆ ಒಳಗೊಂಡ ದೀರ್ಘ ಅಧ್ಯಯನದ ಪ್ರಬುದ್ಧ ಲೇಖನಗಳ ಜ್ಞಾನಗುಚ್ಛ ದೇವಕಣ ಕೃತಿ ಎಂದು ಪ್ರಾಚೀನ ವಚನಕಾರ ಟಿ.ಮುರಳಿಕೃಷ್ಣಪ್ಪ ಹೇಳಿದರು. ಜ್ಞಾನಬುತ್ತಿ ಸತ್ಸಂಗ ಕೇಂದ್ರ ಹಾಗೂ ಶಾಲ್ಮಲೀ ಪ್ರಕಾಶನದಿಂದ ನಗರದ ವಾಸವಿ ಸುಜ್ಞಾನ ಮಂದಿರ ಸಭಾಂಗಣದಲ್ಲಿ ಮಂಗಳ ವಾರ ಸಂಜೆ ನಡೆದ ಹಿರಿಯ ಸಾಹಿತಿ, ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಡಾ.ಗಂಗಾಧರ ಕೊಡ್ಲಿಯವರು ರಚಿಸಿರುವ ‘ದೇವಕಣ’ ಗ್ರಂಥ ಲೋಕಾರ್ಪಣೆ ಮಾಡಿ, ಗ್ರಂಥ ಕುರಿತು ಮಾತನಾಡಿದರು. ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ಡಾ.ಗಂಗಾಧರ ಕೊಡ್ಲಿ ಯರರು ಪ್ರವೃತ್ತಿಯಲ್ಲಿ ಉತ್ತಮ ಸಾಹಿತ್ಯ ರಚನಾಕಾರರು, ಇದೂವರೆಗೆ ಹತ್ತು ಕೃತಿಗಳನ್ನು ರಚಿಸಿದ್ದಾರೆ, ಇವರ ದೇವರಕಣ ಶ್ರೇಷ್ಠ ಕೃತಿಯಾಗಿ ಕನ್ನಡ ಸಾಹಿತ್ಯ ಸೇರಿದೆ. ಕೃತಿಯಲ್ಲಿರುವ ಎಲ್ಲಾ ೨೪ ಲೇಖನಗಳನ್ನು ಕೃತಿಕಾರರು ಅಪಾರ ಅಧ್ಯಯನ ಮಾಡಿ ರಚಿಸಿದ ಲೇಖನಗಳಲ್ಲಿ ವಿಷಯದ ಆಳ, ಗಟ್ಟಿತನ ಕಂಡುಬರುತ್ತದೆ ಎಂದರು. ನಮ್ಮ ಗ್ರಾಮೀಣ ಪ್ರದೇಶದ ಬದುಕನ್ನು ಕುತೂಹಲದಿಂದ…

Read More