ತುಮಕೂರು: ನಾಡಿನ ಹಬ್ಬ-ಹುಣ್ಣಿಮೆಗಳ ಆಚರಣೆ, ಪೂಜಾ ವಿಧಾನ, ಗ್ರಾಮೀಣ ಜನರ ಅಡುಗೆ, ಉಡುಗೆ, ದಾರ್ಶನಿಕರು ಸಾರಿದ ಜೀವನ ಸಾರ, ನಾಡುನುಡಿಯ ಹಿರಿಮೆ ಒಳಗೊಂಡ ದೀರ್ಘ ಅಧ್ಯಯನದ ಪ್ರಬುದ್ಧ ಲೇಖನಗಳ ಜ್ಞಾನಗುಚ್ಛ ದೇವಕಣ ಕೃತಿ ಎಂದು ಪ್ರಾಚೀನ ವಚನಕಾರ ಟಿ.ಮುರಳಿಕೃಷ್ಣಪ್ಪ ಹೇಳಿದರು. ಜ್ಞಾನಬುತ್ತಿ ಸತ್ಸಂಗ ಕೇಂದ್ರ ಹಾಗೂ ಶಾಲ್ಮಲೀ ಪ್ರಕಾಶನದಿಂದ ನಗರದ ವಾಸವಿ ಸುಜ್ಞಾನ ಮಂದಿರ ಸಭಾಂಗಣದಲ್ಲಿ ಮಂಗಳ ವಾರ ಸಂಜೆ ನಡೆದ ಹಿರಿಯ ಸಾಹಿತಿ, ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಡಾ.ಗಂಗಾಧರ ಕೊಡ್ಲಿಯವರು ರಚಿಸಿರುವ ‘ದೇವಕಣ’ ಗ್ರಂಥ ಲೋಕಾರ್ಪಣೆ ಮಾಡಿ, ಗ್ರಂಥ ಕುರಿತು ಮಾತನಾಡಿದರು. ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ಡಾ.ಗಂಗಾಧರ ಕೊಡ್ಲಿ ಯರರು ಪ್ರವೃತ್ತಿಯಲ್ಲಿ ಉತ್ತಮ ಸಾಹಿತ್ಯ ರಚನಾಕಾರರು, ಇದೂವರೆಗೆ ಹತ್ತು ಕೃತಿಗಳನ್ನು ರಚಿಸಿದ್ದಾರೆ, ಇವರ ದೇವರಕಣ ಶ್ರೇಷ್ಠ ಕೃತಿಯಾಗಿ ಕನ್ನಡ ಸಾಹಿತ್ಯ ಸೇರಿದೆ. ಕೃತಿಯಲ್ಲಿರುವ ಎಲ್ಲಾ ೨೪ ಲೇಖನಗಳನ್ನು ಕೃತಿಕಾರರು ಅಪಾರ ಅಧ್ಯಯನ ಮಾಡಿ ರಚಿಸಿದ ಲೇಖನಗಳಲ್ಲಿ ವಿಷಯದ ಆಳ, ಗಟ್ಟಿತನ ಕಂಡುಬರುತ್ತದೆ ಎಂದರು. ನಮ್ಮ ಗ್ರಾಮೀಣ ಪ್ರದೇಶದ ಬದುಕನ್ನು ಕುತೂಹಲದಿಂದ…
Author: News Desk Benkiyabale
ವೈ.ಎನ್.ಹೊಸಕೋಟೆ: ಕನ್ನಡ ಸಾಹಿತ್ಯದ ಮೂಲಕ ವೈಚಾರಿಕ ಪ್ರಜ್ಞೆಯ ಕಟ್ಟಿಕೊಟ್ಟ ಶ್ರೇಷ್ಠ ಕವಿ ಕುವೆಂಪು ಎಂದು ಹಿರಿಯ ವಕೀಲ ಎಂ.ನಾಗೇ0ದ್ರಪ್ಪ ತಿಳಿಸಿದರು. ಹೋಬಳಿಯ ಪೋತಗಾನಹಳ್ಳಿ ಗ್ರಾಮದಲ್ಲಿ ಭಾನುವಾರದಂದು ಕುವೆಂಪು ಜನ್ಮದಿನಾಚರಣೆ ಸಮಿತಿಯು ಹಮ್ಮಿಕೊಂಡಿದ್ದ ಶತಮಾನ ಸಂಭ್ರಮದ ನಾಡಗೀತೆ ಜಾಗೃತಿ ಬೈಕ್ ಜಾಥವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕವಿ ಕುವೆಂಪು ವೈಚಾರಿಕ ಅರಿವಿನ ಮೂಲಕ ವಿಶ್ವಮಾನವ ಸಂದೇ ಶವನ್ನು ಕೊಟ್ಟವರು ಮತ್ತು ಮೌಢ್ಯಗಳನ್ನು ಮೀರಿ ಬೆಳಯಬೇಕು ಎಂದು ತಿಳುವಳಿಕೆ ನೀಡವರು. ಅಂತ ಮಹಾನ್ ಚೇತನದ ಚಿಂತನೆ ಗಳನ್ನು ಗ್ರಾಮೀಣ ಮಟ್ಟದಲ್ಲಿ ಪಸರಿಸುವ ಸಲುವಾಗಿ ಪೋತಗಾ ನಹಳ್ಳಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ತಾಲ್ಲೂಕಿನಲ್ಲಿರುವ ಯಾವುದೇ ಪಂಚಾಯಿತಿ ಮಟ್ಟದಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿಲ್ಲ. ಇದೊಂದು ವಿಶೇಷ ಕಾರ್ಯಕ್ರಮ. ಪ್ರತಿ ಪಂಚಾ ಯಿತಿಯಲ್ಲೂ ಇಂತಹ ಕಾರ್ಯಕ್ರಮಗಳು ನೆರವೇರಬೇಕು ಮತ್ತು ಈ ಕಾರ್ಯಕ್ರಮ ಗ್ರಾಮ ದಲ್ಲಿ ಹಿರಿಯರು, ಮಕ್ಕಳು ಎಲ್ಲರನ್ನೂ ಸೇರಿಸಿ ಕೊಂಡು ರೂಪುಗೊಳ್ಳಬೇಕು. ಕುವೆಂಪುರವರ ವಿಚಾರಧಾರೆ ಪ್ರತಿಯೊಬ್ಬರಿಗೂ ಮುಟ್ಟಬೇಕು ಎಂದರು. ನಿವೃತ್ತ ಉಪನಿರ್ದೇಶಕ ಬಸಲಿಂಗಪ್ಪ ಮಾತ ನಾಡಿ ಗ್ರಾಮೀಣ…
ತುಮಕೂರು: ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುರು ವೇಕೆರೆ ತಾಲೂಕುಗಳಿಗೆ ಸಂಬ0ಧಿಸಿದ0ತೆ ಲೋಕಾಯುಕ್ತದಲ್ಲಿ ದಾಖಲಾಗಿ ಬಾಕಿಯಿರುವ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ನಡೆಸಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ೭೭ ದೂರುಗಳ ವಿಚಾರಣೆ ನಡೆಸಿ, ಸ್ಥಳದಲ್ಲೇ ೫೬ ದೂರುಗಳನ್ನು ಇತ್ಯ ರ್ಥಪಡಿಸಿದರು. ಉಳಿದ ೨೧ ದೂರುಗಳಿಗೆ ಕಾನೂನಾತ್ಮಕ ಪರಿಹಾರ ಒದಗಿಸು ವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ನಿಗದಿತ ಕಾಲಮಿತಿಯಲ್ಲಿ ಕ್ರಮ ಕೈಗೊಂಡು ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರು. ನವೆಂಬರ್ ೨೮ರ ಭೇಟಿ: ಸಂಜೆ ತಿಪಟೂರು ನಗರದಲ್ಲಿರುವ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಡಾ: ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ಅಲ್ಲಿನ ಅವ್ಯವಸ್ಥೆಗಳನ್ನು ಪರಿಶೀಲಿಸಿ, ಕಂಡು ಬಂದ ಅವ್ಯವಸ್ಥೆಗಳನ್ನು ಸರಿಪಡಿಸಲು ಸಂಬ0ಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ರಲ್ಲದೆ, ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಅವ್ಯವಸ್ಥೆಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುತ್ತಾರೆ. ನವೆ0ಬರ್…
ತುಮಕೂರು: ಅಂಗನವಾಡಿ, ಬಿಸಿಊಟ, ಆಶಾ ನೌಕರರನ್ನು ಒಳಗೊಂಡ0ತೆ ದುಡಿವ ಜನರಿಗೆ ದ್ರೋಹ ಬಗೆಯುವ ೪ ಕಾರ್ಮಿಕ ಸಂಹಿತೆಗಳು ರದ್ದುಮಾಡಬೆಕು.. ದುಡಿವ ಜನರಿಗೆ ಶಾಸನ ಬದ್ದ ಸವಲತ್ತುಗಳನ್ನು ನಿರಾಕರಿಸುವ “ಶ್ರಮಶಕ್ತಿ ನೀತಿ” ೨೦೨೫ ಬೇಡವೇ ಬೇಡಾ.ಅಂಗನವಾಡಿಬಿಸಿಊಟ, ಆಶಾ, ನೌಕರರಿಗೂ ಮುಟ್ಟಿನ ರಜೆ ನೀಡಬೇಕು. ೫೬ ಲಕ್ಷ ಸ್ಕೀಮ್ ಕಾರ್ಮಿಕರ ಸೇವಾ ಷರತ್ತುಗಳ ಸುಧಾರಣೆಗೆ ಪ್ರತ್ಯೇಕ ವೇತನ ಆಯೋಗ ರಚಿಸಿ. ೨೦೧೮ ರಿಂದ ಅಂಗನವಾಡಿ, ಬಿಸಿಊಟ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ, ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ ೨೭೦೦ ರೂ., ಸಹಾಯಕಿಗೆ ೧೩೫೦ ರೂಗಳನ್ನು ಮಾತ್ರವೇ ನೀಡುತ್ತಿದೆ. ೨೦೦೯ ರಿಂದಬಿಸಿಊಟ ನೌಕರಿಗೆ ಕೇವಲ ೬೦೦ ರೂಗಳಿಗೆ ದುಡಿಸಲಾಗುತ್ತಿದೆ ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಕನಿಷ್ಠ ವೇತನವನ್ನಾದರೂ ಜಾರಿ ಮಾಡಬೇಕು. ಶಿಫಾರಸ್ಸಿನಂತೆ ಇವರನ್ನು ಉದ್ಯೋಗಸ್ಥರೆಂದೂ ಪರಿಗಣಿಸಿ ಶಾಸನ ಬದ್ಧಾ ಸೌಲಭ್ಯಗಳನ್ನು ಕೊಡಬೇಕು.ಅಂಗನವಾಡಿ ನೌಕರರನ್ನು ೩ ಮತ್ತು ೪ನೇ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು.ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿಪ್ರಾರಂಭಿಸಬೇಕು.ಎಲ್ಲಾ ಸ್ಕಿಮ್ ನೌಕರರಿಗೆ ಮಾಸಿಕ ೧೦,ಸಾವಿರ ನಿವೃತ್ತಿ ವೇತನ ನೀಡಬೇಕು.…
ತುಮಕೂರು: ಶನಿವಾರ ಬೆಳ್ಳಂ ಬೆಳಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಿಪಟೂರು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ವಿದ್ಯಾರ್ಥಿ ನಿಲಯಗಳು ಮತ್ತು ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ವಚ್ಛತೆ, ಮೂಲಸೌಕರ್ಯ ಮತ್ತು ಗುಣಮಟ್ಟ ಕುರಿತು ಅಧಿಕಾರಿಗಳಿಗೆ ಕಡಕ್ ಸೂಚನೆಗಳನ್ನು ನೀಡಿದರು. ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ: ಉಪಲೋಕಾಯುಕ್ತರ ಭೇಟಿ ಹಿನ್ನೆಲೆಯಲ್ಲಿ ಎಪಿಎಂಸಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿ, ಬೆಳ್ಳಂ ಬೆಳಗ್ಗೆ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದ್ದರು. ಉಪಲೋಕಾಯುಕ್ತರು ಸ್ಥಳಕ್ಕೆ ಭೇಟಿ ನೀಡಿದ ವೇಳೆ ರೈತರೊಂದಿಗೆ ಮಾತನಾಡಿದಾಗ ಮಾರುಕಟ್ಟೆಯ ಅವ್ಯವಸ್ಥೆ ಬಗ್ಗೆ ರೈತರು ತಮ್ಮ ಅಸಮಾಧಾನವನ್ನು ಹೊರಹಾಕುತ್ಥಾ ಇಂದು ಮಾತ್ರ ಸ್ವಚ್ಛತೆ ಇದೆ. ಉಳಿದ ದಿನಗಳಲ್ಲಿ ಇಲ್ಲಿಯ ಅನೈರ್ಮಲ್ಯತೆಯನ್ನು ಊಹಿಸಲೂ ಸಾಧ್ಯವಿಲ್ಲ. ಅಂಗಡಿಗಳನ್ನು ಅನುಕೂಲಕ್ಕೆ ತಕ್ಕಂತೆ ಹಂಚಿಕೆ ಮಾಡಿದ್ದು, ಅವರಿಗೆ ಇಷ್ಟ ಬಂದ ಹಾಗೆ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ರೈತರು ದೂರು ನೀಡಿದರು. ರೈತರ ಅಹವಾಲು ಆಲಿಸಿದ ಉಪಲೋಕಾಯುಕ್ತರು ತಕ್ಷಣವೇ ಎಪಿಎಂಸಿ ಅಧಿಕಾರಿಗಳಿಗೆ ಅಂಗಡಿಗಳ ಹಂಚಿಕೆ…
ತುಮಕೂರು: ಶ್ರೀ ಹೊನ್ನಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಂಡಿನಶಿವರ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ರೋವರ್ಸ್ ಮತ್ತು ರೇಂಜರ್ಸ್, ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ಇತರ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ ಎನ್ಎಸ್ಎಸ್ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಶನಿವಾರದಂದು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೊಫೆಸರ್ ಜಿ.ಬಿ. ಶಿವರಾಜು ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತರು, ನಿರ್ದೇಶಕರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ಗಾಂಧೀ ವಿಚಾರಧಾರೆ ಅಧ್ಯಯನ ಇಂದಿನ ಪೀಳಿಗೆಗೆ ಅವಶ್ಯಕ ಎಂದು ಹೇಳಿದರು. ಅಲ್ಲದೆ ವಿದ್ಯಾ ರ್ಥಿಗಳಿಗೆ ಗಾಂಧೀಜಿಯವರ ವಿಚಾರಧಾರೆಗಳನ್ನು ಅಳವಡಿಸಿಕೊ ಳ್ಳುವಂತೆ ಕಿವಿ ಮಾತನ್ನು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯದುನಂದನ್ ಎಂ.ಸಿ. ಮತ್ತು ಅವರ ಸಿಬ್ಬಂದಿಗಳ ನೇತೃತ್ವದಲ್ಲಿ ಕಾಲೇಜಿನಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಕುರಿತು ಶ್ಲಾಘಿಸಿದರು. ಮತ್ತೋರ್ವ ಅತಿಥಿಗಳಾದ ಶ್ರೀ ಹೆಚ್.ಬಿ. ದಿನೇಶ್ ಜಂಟಿ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ…
ತುಮಕೂರು: ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಬಿಸಿಯೂಟ ಅಕ್ಷರದಾಸೋಹ ನೌಕರರನ್ನು ಸ್ಕಿಂ ನೌಕರರೆಂದು ಪರಿಗಣಿಸದೆ ಸರಕಾರದ ಕಾರ್ಮಿಕರೆಂದು ಪರಿಗಣಿಸಬೇಕು.ಕನಿಷ್ಠ ವೇತನ ಜಾರಿ ಮಾಡಬೇಕೆಂದು ಒತ್ತಾಯಿಸಿ ಇಂದು ಸಂಸದ ವಿ.ಸೋಮಣ್ಣ ಅವರಿಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ವತಿಯಿಂದ ಮನವ ಸಲ್ಲಿಸಲಾಯಿತು. ಎ.ಐ.ಟಿ.ಯು.ಸಿ ಸಂಯೋಜಿತ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಊಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿಯ ಕರೆ ಮೇರೆಗೆ ತುಮಕೂರು ಜಿಲ್ಲೆಯ ಬಿಸಿಊಟ ತಯಾರಕರ ಸಂಘಟನೆಯಿ0ದ ಬಿಸಿ ಊಟ ತಯಾರಕರಿಗೆ ವೇತನ ಹೆಚ್ಚಿಸುವಂತೆ ಮತ್ತು ಇತರೆ ಸೌಲತ್ತುಗಳನ್ನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿದ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಎಐಟಿಯುಸಿಯ ಗಿರೀಶ್, ಕಳೆದ ೨೪ ವರ್ಷಗಳಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳ ಅನುದಾನದ ಅಡಿಯಲ್ಲಿ ಬಿಸಿಊಟ ತಯಾರಕರಿಗೆ ಗೌರವ ಅನುಪಾತದ ಸಂಭಾವನೆಯಾಗಿ ಕೇಂದ್ರ ಸರಕಾರ ರೂ.೬೦೦/- ಹಾಗೂ ರಾಜ್ಯ ಸರಕಾರ…
ಮಧುಗಿರಿ: ಶಿಕ್ಷಣ ಕ್ಷೇತ್ರವೂ ಇಂದು ಉದ್ಯಮ ಕ್ಷೇತ್ರವಾಗುತ್ತಿದ್ದು ಶಿಕ್ಷಣ ತಜ್ಞರ ಜಾಗವನ್ನು ಶಿಕ್ಷಣೋದ್ಯಮಿಗಳು ಅಕ್ರಮಿಸಿಕೊಂಡು ವ್ಯಾಪಾರ ಕ್ಷೇತ್ರವಾಗಿ ಶಿಕ್ಷಣದ ಸಂವೇದನೆ ಲಕ್ಷಣಗಳು ಗಣನೀಯವಾಗಿ ಕೆಳಹಂತಕ್ಕೆ ಇಳಿಯಲ್ಪಿಟ್ಟಿರುವುದು ಅಘಾತಕಾರಿ ಸಂಗತಿ ಎಂದು ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ನಮ್ಮ ಕನ್ನಡಿಗರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗ ಸಿಗಬೇಕಾದರೆ ಕನ್ನಡ ಭಾಷೆಯನ್ನೇ ಮುಖ್ಯವಾಗಿಸಿ ಉದ್ಯೋಗ ದೊರಕುವಂತೆ ಮಾಡುವ ಕೆಲಸವಾಗಬೇಕು ಕನ್ನಡ ದಿಂದ ಬದುಕು ಕಟ್ಟಿಕೊಳ್ಳಬಹುದೆಂಬ ದೃಢವಾದ ವಿಶ್ವಾಸವನ್ನ ಸರ್ಕಾರಗಳು ಕೈಗೆತ್ತಿಕೊಂಡು ಕನ್ನಡಿಗರಿಗೆ ನಂಬಿಕೆಯ ಶಕ್ತಿ ತುಂಬುವ ಅಗತ್ಯವಿದೆ,ನವೆಂಬರ್ ಕನ್ನಡ ನಾಯಕರು ನಮ್ಮಲ್ಲಿ ಹೆಚ್ಚಾಗುತ್ತಿದ್ದಾರೆ ನಮ್ಮ ಉಸಿರು ಇರುವವರೆಗೂ ಕನ್ನಡಕ್ಕಾಗಿ ದಿನನಿತ್ಯದ ನಾಯಕರಾಗಬೇಕು,ನಾಡಿನ ಜನಸಾಮಾನ್ಯರು ಕನ್ನಡ ಭಾಷೆಯನ್ನು ಬಳಸುತ್ತ ಉಳಿಸುತ್ತ ಬಂದಿದ್ದಾರೆ ಅವರಿಂದಲೇ ನಾಡು ನುಡಿ ಗಟ್ಟಿಯಾಗಿರುವುದು,ಕನ್ನಡ ಭಾಷೆಯ ಸಂವೇದನೆಯಲ್ಲಿ ಸಮಾನತೆ, ಸೌಹಾರ್ದತೆ,ಜಾತ್ಯಾತೀತತೆ ಎಲ್ಲವೂ ಇದೆ, ಸಾಂಸ್ಕೃತಿಕ ಸ್ಪರ್ಧೆಗಳಿಂದ…
ತುಮಕೂರು: ಜಿಲ್ಲೆಯಲ್ಲಿ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಂಬ0ಧಿಸಿದ0ತೆ ಮತದಾರರ ಪಟ್ಟಿಗೆ ೨೩,೦೮೦ ಪುರುಷ ಹಾಗೂ ೧೬, ೯೭೧ ಮಹಿಳಾ ಪದವೀಧರರು ಸೇರಿ ಒಟ್ಟು ೪೦,೦೫೧ ಸೇರ್ಪಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪದವೀಧರ ಕ್ಷೇತ್ರದ ಚುನಾವಣೆ ಮತದಾರರ ಪಟ್ಟಿ ತಯಾರಿಕೆ ಹಾಗೂ ಇತರೆ ಚುನಾವಣಾ ಕುರಿತು ಮಾನ್ಯತೆ ಪಡೆದ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಆಗ್ನೇಯ ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿ ಈಗಾಗಲೇ ಪ್ರಕಟಿಸಲಾಗಿದೆ ಎಂದರು. ಈ ಕರಡು ಪಟ್ಟಿಯಲ್ಲಿ ಸೇರ್ಪಡೆ ಹಾಗೂ ತಿರಸ್ಕೃತ ವಾಗಿರುವ ಪದವೀಧರರ ಅರ್ಜಿಗಳನ್ನು ಪುನಃ ಪರಿಶೀ ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಮಾಹಿತಿ ತಿದ್ದುಪಡಿ ಅಥವಾ ಪೂರಕ ದಾಖಲೆಗಳ ತಿದ್ದುಪಡಿ ಮಾಡಿ ಸಲು ಹಾಗೂ ಹೊಸದಾಗಿ ನೋಂದಾಯಿಸಿಕೊಳ್ಳಲು ಡಿ. ೧೦ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಪ್ರಭಾರ ಚುನಾವಣಾ ತಹಶೀಲ್ದಾರ್ …
ತುಮಕೂರು: ತುಮಕೂರು, ತಿಪಟೂರು ಮಾರ್ಗವಾಗಿ ಮಂಗಳೂರಿಗೆ ನೇರ ರೈಲು ಸಂಪರ್ಕ ಕಲ್ಪಿಸಲು ಮೈಸೂರು ವಿಭಾಗದವರು ಒಪ್ಪಿಗೆ ಕೊಡಬೇಕಿದೆ. ಮಂಗಳೂರು-ಹಾಸನ-ಯಶವ0ತಪುರ ಮಾರ್ಗದಲ್ಲಿ ಸಾಗುವ ರೈಲುಗಳ ಒತ್ತಡದ ನಡುವೆ ತುಮಕೂರು ಮೂಲಕ ತೆರಳುವ ರೈಲಿಗೆ ಅನುವು ಮಾಡಿಕೊಡುವುದಾದರೆ ರೈಲು ಓಡಿಸಲು ಸಾಧ್ಯವಿದೆ ಎಂದು ನೈಋತ್ಯ ರೈಲ್ವೇ ಬೆಂಗಳೂರು ವಿಭಾಗದ ಹಿರಿಯ ಅಧಿಕಾರಿಗಳು ಭರವಸೆ ನೀಡಿದರು. ಬೆಂಗಳೂರಿನ ಡಿಆರ್ಎಂ ಕಚೇರಿಯಲ್ಲಿ ಬುಧವಾರ ನಡೆದ ನೈಋತ್ಯ ರೈಲ್ವೇ ಬೆಂಗಳೂರು ವಿಭಾಗದ ರೈಲು ಬಳಕೆದಾರರ ಸಲಹಾ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯ, ತುಮಕೂರು ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆ ಅಧ್ಯಕ್ಷ ಕರಣಂ ರಮೇಶ್, ತುಮಕೂರು, ತಿಪಟೂರು ಮೂಲಕ ಮಂಗಳೂರಿಗೆ ತೆರಳಲು ಅನುಕೂಲವಾಗುವಂತೆ ಯಶವಂತಪುರ-ಹಾಸನ-ಮ0ಗಳೂರು ರೈಲಿಗೆ ಸಂಪರ್ಕ ಕಲ್ಪಿಸುವಂತೆ ತುಮಕೂರಿನಿಂದ ಹಾಸನಕ್ಕೆ ರೈಲು ಸಂಪರ್ಕ ಕಲ್ಪಿಸಬೇಕೆಂದು ಮಾಡಿದ ಮನವಿಗೆ ಅಧಿಕಾರಿಗಳು ಪ್ರತಿಕ್ರಿಯಿಸಿದರು. ಈ ವಿಷಯಕ್ಕೆ ಸ್ಪಂದಿಸಿದ ಸೀನಿಯರ್ ಡಿಓಎಂ ಪ್ರಿಯಾ ಅವರು, ಪ್ರಸ್ತುತ ಸಂಚರಿಸುತ್ತಿರುವ ಯಶವಂತಪುರ-ಹಾಸನ-ಮ0ಗಳೂರು ರೈಲಿಗೆ ಈಗಾಗಲೇ ಶೇ. ೧೫೦ರಷ್ಟು ಪ್ರಯಾಣಿಕರ ಒತ್ತಡವಿದ್ದು, ಅದೇ ರೈಲಿಗೆ ಸಂಪರ್ಕ ಕಲ್ಪಿಸಿದರೆ…











