ತುಮಕೂರು ಕಾರ್ಲ್ ಮಾಕ್ಸ್ ಅವರಿಗಿಂತ ಮೊದಲೇ 12ನೇ ಶತಮಾನದಲ್ಲಿಯೇ ವರ್ಗ,ವರ್ಣ,ಲಿಂಗಭೇಧ ರಹಿತ ಸಮ ಸಮಾಜದ ಕನಸಿನೊಂದಿಗೆ, ಸಾಮಾಜಿಕ ನ್ಯಾಯದ ಪರಿಕಲ್ಪನೆ ಬಿತ್ತಿದವರು ಅಣ್ಣ ಬಸವಣ್ಣ ಅವರು, ವೀರಶೈವ,ಲಿಂಗಾಯಿತರು ಇಂತಹ ಸಮುದಾಯದಲ್ಲಿ ಹುಟ್ಟಿದವರೆಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದು ಶಾಸಕ ಹಾಗೂ ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಸಿದ್ದಗಂಗಾ ಮಠದ ವಸ್ತುಪ್ರದರ್ಶನದ ಆವರಣದಲ್ಲಿ ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾವತಿಯಿಂದ ಆಯೋಜಿಸಿದ್ದ ಬೆಂಗಳೂರು ವಿಭಾಗೀಯ ಮಟ್ಟದ ಮಹಿಳಾ ಮತ್ತು ಯುವ ಕಾರ್ಯಕರ್ತರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಎಲ್ಲಾ ಧರ್ಮ, ಜಾತಿಗಳಿಗೂ ಪ್ರಪಂಚದ ಮೊದಲ ಸಂಸತ್ತು ಎನಿಸಿಕೊಂಡಿರುವ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದವರು ಬಸವೇಶ್ವರರು.ಮೌಡ್ಯದಿಂದ ಸಮಾಜವನ್ನು ಹೊರತರಬೇಕೆಂಬುದು ಅವರ ಕನಸಾಗಿತ್ತು. ಇಂತಹ ಕನಸನ್ನು ನನಸು ಮಾಡಲು ನಾವೆಲ್ಲರೂ ಕಟಿಬದ್ದರಾಗಬೇಕಿದೆ ಎಂದರು. ಹಾಗನಲ್ ಕುಮಾರಸ್ವಾಮಿಗಳಿಂದ ಸಮಾಜದ ಐಕ್ಯತೆ ಮತ್ತು ಅಭಿವೃದ್ದಿಯ ಮಂತ್ರದೊಂದಿಗೆ ಆರಂಭವಾದ ಅಖಿಲ ಭಾರತ ಲಿಂಗಾಯಿತ ಮಹಾಸಭಾ ಅಲ್ಪಸಂಖ್ಯಾತರನ್ನು ಒಳಗೊಂಡಂತೆ ಎಲ್ಲಾ ಧರ್ಮಿಯರಿಗೂ ಮಾರ್ಗದರ್ಶನ ಮಾಡುತ್ತಾ…
Author: News Desk Benkiyabale
ಗುಬ್ಬಿ ಇತಿಹಾಸ ಪ್ರಸಿದ್ಧ ಗೋಸಲ ಚನ್ನಬಸವೇಶ್ವರರ ಕಾರ್ತಿಕ ಮಾಸದ ಹೂವಿನ ವಾಹನವು ವಿಜೃಂಭಣೆಯಿಂದ ನೆಡೆಯಲು ಹಿಂದಿನಿಂದಲೂ 18 ಕೋಮಿನ ಮುಖಂಡರುಗಳ ಸಭೆ ಕರೆದು ರಾತ್ರಿಯೆಲ್ಲಾ ನೆಡೆಯುವ ಈ ಉತ್ಸವಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ವರೆಗೆ ಯಾವ ಯಾವ ರೀತಿ ಸೌಲಭ್ಯಗಳನ್ನು ಒದಗಿಸಲು ಹದಿನೆಂಟು ಕೋಮಿನ ಮುಖಂಡರನ್ನು ಸಭೆ ಕರೆದು ಚರ್ಚಿಸುತ್ತಿದ್ದು ಹಿಂದಿನಿಂದ ಬಂದ ಪದ್ಧತಿ ಕಳೆದ 2ವರ್ಷಗಳಿಂದ ದೇವಾಲಯಕ್ಕೆ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕಗೊಂಡಿರುವ ಹೆಚ್ ಜೆ ಶ್ವೇತಾರವರ ಏಕ ಚಕ್ರಾಧಿಪತ್ಯದ ನಿರ್ಣಯದಿಂದ ಮುಖಂಡರುಗಳು ಬೇಸತ್ತಿದ್ದಾರೆ. ಈ ಬಗ್ಗೆ ದೇವಾಲಯದ ಆಡಳಿತಾಧಿಕಾರಿಯಾಗಿ ಉಪವಿಭಾಗಾಧಿಕಾರಿ ವಿ ಅಜಯ್ ರವರಿಗೆ ಸಾಕಷ್ಟು ಬಾರಿ ದೇವಾಲಯದ ನ್ಯೂನ್ಯತೆ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿ ತೋರಿದ ಕಾರಣ ಗುಬ್ಬಿಯ ಹದಿನೆಂಟು ಕೋಮಿನ ಜನ ಇಂದು ಕಿಡಿಕಾರಲು ಕಾರಣವಾಗಿದೆ ಗುಬ್ಬಿ ಪ್ರವಾಸಿ ಮಂದಿರದಲ್ಲಿ ಹದಿನೆಂಟು ಕೋಮಿನ ಮುಖಂಡರ ಗಳು ಸಭೆ ಸೇರಿ ಪತ್ರಿಕಾಗೋಷ್ಠಿಯನ್ನು ನಡೆಸಿ ಉಪವಿಭಾಗಾಧಿಕಾರಿಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು ಕಾರಣ…
ತುಮಕೂರು ಕರ್ನಾಟಕ ರಾಜ್ಯದಲ್ಲಿ ಲಿಂಗಾಯಿತ, ವೀರಶೈವರು ಒಂದೇ ಎಂಬ ಪ್ರತಿಪಾದನೆಯೊಂದಿಗೆ ಎಲ್ಲರನ್ನೂ ಒಗ್ಗೂಡಿಸುವ ಉದ್ದೇಶದಿಂದ ನವೆಂಬರ್ 12 ಮತ್ತು 13 ರಂದು ಸಿದ್ದಗಂಗಾ ಮಠದ ವಸ್ತು ಪ್ರದರ್ಶನದ ಆವರಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಬೆಂಗಳೂರು ವಿಭಾಗೀಯ ಮಟ್ಟದ ಕಾರ್ಯಾಗಾರ ಮತ್ತು ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶ ಮತ್ತು ಕಾರ್ಯಾಗಾರ ಸಮಿತಿ ಪ್ರಧಾನ ಕಾರ್ಯದರ್ಶಿ ನಟರಾಜು ಸಾಗರನಹಳ್ಳಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ ಅವರು,ವೀರಶೈವ ಲಿಂಗಾಯಿತರಲ್ಲಿ ಸಂಘಟನೆ ಮತ್ತು ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ 1904ರಲ್ಲಿ ಅನಗಲ್ ಶ್ರೀಕುಮಾರಸ್ವಾಮೀಜಿ ಅವರು ಸ್ಥಾಪಿಸಿದ ಅಖಿಲ ಭಾರತ ವೀರಶೈವ ಮಹಾಸಭಾ, ಇಂದು ವೀರಶೈವ ಲಿಂಗಾಯಿತ ಮಹಾಸಭಾ ಆಗಿ ಪರಿವರ್ತನೆಗೊಂಡು, ರಾಜ್ಯದ ಪ್ರವರ್ಗ 3 ರಲ್ಲಿರುವ ಲಿಂಗಾಯಿತ, ವೀರಶೈವ ಮತ್ತು ಅದರ ಉಪಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದ್ದು, ಈ ನಿಟ್ಟಿನಲ್ಲಿ ಸಮಾವೇಷದಲ್ಲಿ ಚರ್ಚೆಗಳು ನಡೆಯಲಿವೆ ಎಂದರು. ನವೆಂಬರ್ 12ರ ಶನಿವಾರ ಬೆಳಗ್ಗೆ 7 ಗಂಟೆಗೆ ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಗದ್ದುಗೆ…
ಚಿಕ್ಕನಾಯಕನಹಳ್ಳಿ ರಾಜ್ಯದಲ್ಲಿ ಅರಣ್ಯ ಪ್ರದೇಶಕ್ಕೆ ಸೇರಿದೆ ಎನ್ನಲಾಗಿದ್ದ 11 ಲಕ್ಷ ಯೆಟ್ಟೆರ್ ಭೂಮಿಯಲ್ಲಿ ಮೂರು ಲಕ್ಷದ ಮೂವತ್ತು ಸಾವಿರ ಎಕ್ಟರ್ ಪ್ರದೇಶವನ್ನು ಅರಣ್ಯ ಪ್ರದೇಶಕ್ಕೆ ರಕ್ಷಣೆ ಮಾಡಲು ಕಾನೂನು ತರುವ ಮೂಲಕ ಉಳಿದ ಭೂಮಿಯನ್ನು ರಾಜ್ಯದ ಜನರಿಗೆ ಹಂಚಲಾಗಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆಸಿ ಮಾಧುಸ್ವಾಮಿ ಹೇಳಿದರು ಪಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ನೂತನ ಅರಣ್ಯ ರಕ್ಷಕರ ವಸತಿಗೃಹ ಉದ್ಘಾಟನೆ ಹಾಗೂ ಬಗರ್ ಹುಕ್ಕುಂ ಸಾಗುವಳಿ ಚೀಟಿ ವಿತರಣಾ ಸಮಾರಂಭದಲ್ಲಿ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ ಇಲ್ಲಿಯವರೆಗೂ ಮೂರು ಹಂತದಲ್ಲಿ ಅರ್ಜಿ ಪಡೆದಿರುವ ಸರ್ಕಾರದಲ್ಲಿ ಈ ಹಿಂದೆ ಸೇಂದಿವನಕ್ಕೆ ಭೂಮಿ ಮಂಜೂರು ಮಾಡುವಂತಿಲ್ಲ ಎಂದು ಕಾನೂನು ಅನ್ನು ಬದಲಿಸಿ ರೈತರ ಅನುಕೂಲಕ್ಕೆ ಸಿಂಧೀವನವನ್ನು ಅವಕಾಶ ಮಾಡಿಕೊಡಲಾಗಿದೆ ಒಂದು ವೇಳೆ ಸೇಂದಿ ವನ ಎಂದು ಅರ್ಜಿ ತಿರಸ್ಕೃತಗೊಂಡಿರುವ ರೈತರು ಇದ್ದರೆ ಅಂತವರು ತಹಶೀಲ್ದಾರ್ ಅವರನ್ನು ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಅಂತಹ ಅರ್ಜಿಯನ್ನು ಸರ್ಕಾರ ಪರಿಗಣಿಸುತ್ತದೆ ಹಾಗೆಂದು…
ತುಮಕೂರು ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸಗಳು ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಬೇಕು ಎಂದು ತುಮಕೂರು ಮೇಯರ್ ಪ್ರಭಾವತಿ ಸುಧೀಶ್ವರ್ ತಿಳಿಸಿದ್ದಾರೆ. ನಗರದ ಟೌನ್ಹಾಲ್ ಮುಂಭಾಗದಲ್ಲಿ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಸಂಸ ಜಂಟಿಯಾಗಿ ಆಯೋಜಿಸಿದ್ದ ಕನಕದಾಸರು ಹಾಗೂ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರು ಮಹನೀಯರಿಗೆ ಪುಷ್ಪ ನಮನ ಸಲ್ಲಿಸಿದ ಮಾತನಾಡಿ ಅವರು,ಎದುರಾಳಿ ಸೈನಿಕರು ಕೋಟೆಯನ್ನು ಮುತ್ತಿದಾಗ ತನ್ನ ಮನೆಯಲ್ಲಿ ಆಹಾರ ಸಂಸ್ಕøರಣೆಗೆ ಬಳಸುವಂತಹ ಒನಕೆಯನ್ನೇ ಆಯುಧವಾಗಿ ಬಳಸಿ ನೂರಾರು ಸೈನಿಕರ ರುಂಡಗಳನ್ನು ಚಂಡಾಡಿ,ಕೋಟೆಯನ್ನು ರಕ್ಷಿಸಿ ಮಹಾಮಾತೆ ನಮ್ಮ ಓಬವ್ವ,ಇಂತಹವರ ಚರಿತ್ರೆಗಳು ನಾಡಿನಾಚೆಗೂ ಪ್ರಸರಿಸುವಂತಹ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ,ಎದುರಾಳಿ ಸೈನಿಕರು ಕೋಟೆಯನ್ನು ಸುತ್ತುವರಿದಿದ್ದರೂ ಎದೆಗುಂದದೆ ದಿಟ್ಟತನದಿಂದ ಹೋರಾಡಿ,ಕೋಟೆಯನ್ನು ರಕ್ಷಿಸಿದ ವೀರ ವಿನಿತೆ ಒನಕೆ ಓಬವ್ವ ನಮಗೆಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ.ಮಹಿಳೆಯರು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ನಾಡಿನ…
ಬೆಂಗಳೂರು ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ನಗರದಲ್ಲಿ ಇಂದು ಬೆಂಗಳೂರಿನ ನಿರ್ಮಾರ್ತೃ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣ ಮತ್ತು ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಕೆಂಪೇಗೌಡರ ದೂರದೃಷ್ಟಿ ಅತ್ಯದ್ಭುತವಾಗಿತ್ತು. ವ್ಯಾಪಾರದ ವ್ಯವಸ್ಥೆ ಬದಲಾಗಿದೆ. ನಾಡಪ್ರಭು ಕೆಂಪೇಗೌಡರ ಕೊಡುಗೆ ದೊಡ್ಡದು. ಗವಿ ಗಂಗಾಧರೇಶ್ವರ ಮಂದಿರ, ಬಸವನಗುಡಿಯ ಮಂದಿರ ಸೇರಿ ಬೆಂಗಳೂರಿನ ಸಾಂಸ್ಕøತಿಕತೆಯನ್ನು ಬಿಂಬಿಸುತ್ತದೆ ಎಂದು ತಿಳಿಸಿದರು. ಬೆಂಗಳೂರು ಅಂತರರಾಷ್ಟ್ರೀಯ ನಗರವಾಗಿದೆ. ಆಧುನಿಕ ಮೂಲಸೌಕರ್ಯದ ಮೂಲಕ ನಗರವನ್ನು ಸಜ್ಜುಗೊಳಿಸಬೇಕಿದೆ ಎಂದು ಅವರು ತಿಳಿಸಿದರು. ಸಂಚಾರದ ವಿವಿಧ ಮಾಧ್ಯಮಗಳು ಒಂದಕ್ಕೊಂದು ಪೂರಕವಾಗಿರಬೇಕು. ಅದನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಭಾರತದ ವಿಕಾಸಕ್ಕೆ ಗರಿಷ್ಠ ಪ್ರಯತ್ನ ನಡೆಸಿದ್ದೇವೆ. ಇದಕ್ಕೆ ಕರ್ನಾಟಕದ ಡಬಲ್ ಎಂಜಿನ್ ಸರಕಾರವು ತನ್ನದೇ ಆದ ಕೊಡುಗೆ ನೀಡಿದೆ ಎಂದರು. ಕರ್ನಾಟಕದಲ್ಲಿ 8 ಲಕ್ಷ ಮನೆ ನಿರ್ಮಿಸಿ ಕೊಟ್ಟಿದ್ದೇವೆ. ಜಲಜೀವನ್ ಮಿಷನ್ ಅಡಿ ಕರ್ನಾಟಕದಲ್ಲಿ 30…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ನಗರದಲ್ಲಿ ಇಂದು ಬೆಂಗಳೂರಿನ ನಿರ್ಮಾರ್ತೃ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣ ಮತ್ತು ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಕೆಂಪೇಗೌಡರ ದೂರದೃಷ್ಟಿ ಅತ್ಯದ್ಭುತವಾಗಿತ್ತು. ವ್ಯಾಪಾರದ ವ್ಯವಸ್ಥೆ ಬದಲಾಗಿದೆ. ನಾಡಪ್ರಭು ಕೆಂಪೇಗೌಡರ ಕೊಡುಗೆ ದೊಡ್ಡದು. ಗವಿ ಗಂಗಾಧರೇಶ್ವರ ಮಂದಿರ, ಬಸವನಗುಡಿಯ ಮಂದಿರ ಸೇರಿ ಬೆಂಗಳೂರಿನ ಸಾಂಸ್ಕøತಿಕತೆಯನ್ನು ಬಿಂಬಿಸುತ್ತದೆ ಎಂದು ತಿಳಿಸಿದರು. ಈ ನಡುವೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನ ಮಾಡದೇ ಇರುವುದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಟ್ವಿಟ್ ಮಾಡಿದೆ. ಟ್ವಿಟ್ನಲ್ಲಿ ಇರೋದು ಏನು? ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಕೆಂಪೇಗೌಡರು ಆಸ್ತಿಯಲ್ಲ, ಕೆಲ…
ತುಮಕೂರು ಅತ್ಯಂತ ಹಿಂದುಳಿದಿರುವ ನೇಕಾರರ ಸಮುದಾಯಗಳಲ್ಲಿ ಜಾಗೃತಿ ಮೂಡಿಸಿ,ಅವರಿಗೆ ಸರಕಾರದ ಸವಲತ್ತುಗಳು ದೊರೆಯುವಂತೆ ಮಾಡುವ ಉದ್ದೇಶದಿಂದ ಎಲ್ಲಾ ನೇಕಾರರ ಸಮುದಾಯಗಳನ್ನು ಒಂದು ಸೂರಿನಡಿ ತರುವ ಉದ್ದೇಶದಿಂದ ನವೆಂಬರ್ 13ರಂದು ತುಮಕೂರು ಜಿಲ್ಲಾ ನೇಕಾರರ ಒಕ್ಕೂಟದಿಂದ ನೇಕಾರರ ಸಮಾವೇಶ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಧನಿಯಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಜಿಲ್ಲೆಯಲ್ಲಿ ಸುಮಾರು 60 ಸಾವಿರ ಜನರ ಸಂಖ್ಯೆಯನ್ನು ಹೊಂದಿರುವ, ರಾಜ್ಯದಲ್ಲಿ ಸುಮಾರು 45-50 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ನೇಕಾರರ ಸಮುದಾಯಗಳು ಅರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ,ರಾಜಕೀಯವಾಗಿ ಸಾಕಷ್ಟು ಹಿಂದುಳಿದಿವೆ.ರಾಜಕೀಯ ಸ್ಥಾನಮಾನವೆಂಬುದು ಮರೀಚಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ 2023ರ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಕನಿಷ್ಠ 5 ಕ್ಷೇತ್ರಗಳಲ್ಲಿ ಈ ಸಮುದಾಯ ಗಳಿಗೆ ಎಲಾ ರಾಜಕೀಯ ಪಕ್ಷಗಳು ಟಿಕೇಟ್ ನೀಡಿ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು.ಹಾಗೆಯೇ ಶಿಕ್ಷಣದಲ್ಲಿ ಸಮುದಾಯದ ಅಭಿವೃದ್ದಿಗೆ ಹೆಚ್ಚಿನ ಹಾಸ್ಟಲ್ ತೆರೆದು ಅವಕಾಶ ಕಲ್ಪಿಸಬೇಕೆಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ತರಲು ಈ ಸಮಾವೇಶ ಆಯೋಜಿಸಲಾಗಿದೆ…
ತುಮಕೂರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ರಿ) ಸಿ.ಐ.ಟಿ.ಯು. ತುಮಕೂರು ಜಿಲ್ಲಾ ಸಮಿತಿ ಹಾಗು ಭಾರತ ವಿಧ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ಗುರುವಾರ ತುಮಕೂರು ಜಿಲ್ಲಾ ಕಾರ್ಮಿಕರ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು . ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಮಂಡಳಿಗೆ ನಿಜವಾದ ಕಟ್ಟಡಕಾರ್ಮಿಕರು ಅರ್ಜಿಸಲ್ಲಿಸಿದವರಿಗೆ ಹಣಬಂದಿಲ್ಲ ಆದರೆ ಕಾರ್ಮಿಕರಲ್ಲದ ಮಕ್ಕಳಿಗೆ ಹಣ ಬಂದಿರುವುದು ಕಾರ್ಮಿಕ ಸಚಿವರ ದೊಡ್ಡ ಸಾದನೆಯಾಗಿದೆ ಎಸ್.ಎಸ್.ಪೋರ್ಟಲ್ ತಂತ್ರಾಂಶದಲ್ಲಿ ಆರ್ಜಿ ಹಾಕುವುದರಿಂದ ಪಾರದರ್ಶಕ ಇರುವುದಿಲ್ಲ ಸೇವಾಸಿಂಧುವಿನಲ್ಲಿ ಆಗಿರುವ ಸಣ್ಣ ಪುಟ್ಟ ದೋಷಗಳನ್ನು ಸರಿಪಡಿಸಿ ಮುಂದುವರಿಯಬೇಕೆಂದು ಕಟ್ಟಡ ಕಾರ್ಮಿಕ ಸಂಘಟನೆಗಳ ರಾಜ್ಯ ಸಮನ್ವಯ ಸಮಿತಿ ಮನವಿನೀಡಿ ಒತ್ತಾಯಿಸಿದರು. ಅಂದಿನ ಮಂಡಳಿಯ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳು ಹಟಕ್ಕೆಬಿದ್ದು ಜಾರಿಮಾಡಿದ್ದರಿಂದ ದೊಡ್ಡ ಹಗರಣ ನಡೆದಿದೆ. 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಪಡೆಯಲು ಅರ್ಜಿ ಹಾಕಲು ಸಹ ಅವಕಾಶ ನೀಡದೆ ಕಾರ್ಮಿಕರಿಗೆ ವಂಚನೆ ಯಾಗಿರುವುದನ್ನು ಖಂಡಿಸಿ ಪರಿಹಾಕೆ ಇಂದು ರಾಜ್ಯದಾದ್ಯಂತ ಜಂಟಿ ಹೋರಾಟ ರೂಪಿಸಲಾಗಿತ್ತು. ಹೋರಾಟವನ್ನು…
ತಿಪಟೂರು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿರುವ ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿ ಆಯೋಜಿಸಿದ್ದ ನವಜಾಗರಣ ಕಲಾಕೃತಿ ಪ್ರದರ್ಶನಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಚಾಲನೆ ನೀಡಿ, ಮೆಚ್ಚುಗೆ ಸೂಚಿಸಿದರು. ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕ್ಯಾನ್ವಾಸ್ ಹಾಳೆಯ ಮೇಲೆ ಸಹಿ ಮಾಡುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದ ಡಿಕೆಶಿ, ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿರುವ ತಿಪಟೂರಿನ ಕಾಂಗ್ರೆಸ್ ಮುಖಂಡ ಟೂಡಾ ಶಶಿಧರ್ ಬೆನ್ನುತಟ್ಟಿದರು. ದೇಶದಲ್ಲಿ ಸಾಮರಸ್ಯ ಸಂಪ್ರದಾಯವನ್ನು ಪುನರುಜ್ಜೀವನಗೊಳಿಸುವ ಅಭಿಯಾನ ಅಂಗವಾಗಿ ನಡೆಯುವ ಭಾರತ್ ಜೋಡೋ ಯಾತ್ರೆಯನ್ನು ಒಗ್ಗಟ್ಟಿನಿಂದ ಬೆಂಬಲಿಸಿರುವ ರಾಜ್ಯದ ಸುಪ್ರಸಿದ್ಧ ಕಲಾವಿದರ ಕಲಾಕೃತಿಗಳು ಪ್ರದರ್ಶನದಲ್ಲಿರುವುದು ವಿಶೇಷ ಎನ್ನಿಸಿದೆ. `ದಿ ರೆನೈಸನ್ಸ್’ ವರ್ಣಚಿತ್ರ ಮತ್ತು ಪೆÇೀಟೋಗ್ರಫಿಮೂಲಕ ಬೆಂಬಲಿಸಿ ವರ್ಣರಂಜಿತವಾಗಿಸುತ್ತಿರವ ನವಜಾಗರಣ ಕಲಾಕೃತಿ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಸಿಕೆಪಿ ಅಧ್ಯಕ್ಷ ಬಿ.ಎಲ್.ಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್, ಮುಖಂಡರಾಡ ಡಾ.ಧ್ವಾಕರನಾಥ್, ದೊಡ್ಡಿಪಾಳ್ಯ ನರಸಿಂಹಮೂರ್ತಿ ಮತ್ತಿತರರು ಇದ್ದರು.











