ತುಮಕೂರು: ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್ಗಾರ್ ಯೋಜನೆ (Pಒ-ಗಿಃಖಙ)ಯ ಯಶಸ್ವಿ ಅನುಷಾನವನ್ನು ಗುರುತಿಸಲು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಜೂನ್ ೧೯ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ರಾಷ್ಟಿçÃಯ Pಒ ಗಿಇಖಙ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಭಾರತದ ಪ್ರಧಾನ ಮಂತ್ರಿಗಳು ನೇರ ಲಾಭ ವರ್ಗಾವಣೆ (ಆಃಖಿ) ಮೂಲಕ ಫಲಾನುಭವಿಗಳಿಗೆ ಸುಮಾರು ೨,೪೦೦ ಕೋಟಿ ಮೊತ್ತದ ಪ್ರೋತ್ಸಾಹ ಧನವನ್ನು ವಿತರಿಸಲಿದ್ದಾರೆ. Pಒ-ಗಿಃಖಙ ಅಡಿಯಲ್ಲಿ ಈ ಪ್ರೋತ್ಸಾಹ ಧನ ವಿತರಣೆಯು ೧೫ಲಕ್ಷಕ್ಕೂ ಹೆಚ್ಚು ಜನರಿಗೆ ಹೆಚ್ಚುವರಿ ಉದ್ಯೋಗವನ್ನು ಬೆಂಬಲಿಸುವ ನಿರೀಕ್ಷೆಯಿದೆ. ಉದ್ಯೋಗದಾತ ಮತ್ತು ಉದೋಗಿ ಫಲಾನುಭವಿಗಳು ಮತ್ತು ಇತರ ಗಣ್ಯ ಅತಿಥಿಗಳು ಸೇರಿದಂತೆ ಸುಮಾರು ೧,೨೦೦ ಆಹ್ವಾನಿತರು ನವದೆಹಲಿಯಲ್ಲಿ ನಡೆಯುವ ಮುಖ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ದೇಶದ ವಿವಿಧ ಪ್ರದೇಶಗಳನ್ನು ಪ್ರತಿನಿಧಿಸುವ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿಗಳು ಸಂವಹನ ನಡೆಸಲಿದ್ದಾರೆ. ಈ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುವುದು. ಈ ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ…
Author: News Desk Benkiyabale
ಹುಳಿಯಾರು: ಜೇವರ್ಗಿಯಿಂದ ಚಾಮರಾಜನಗರ ರಾಷ್ಟಿçÃಯ ಹೆದ್ದಾರಿ ೧೫೦ ಎ ರಸ್ತೆಯ ಹುಳಿಯಾರು-ಚಿಕ್ಕನಾಯಕನಹಳ್ಳಿ ಮಾರ್ಗದಲ್ಲಿನ ಬಳ್ಳೆಯಕಟ್ಟೆ ಬಳಿ ಇತ್ತೀಚೆಗೆ ಆರ್.ಎಂ.ಸಿ ಪ್ಲಾಂಟ್ ತಲೆಎತ್ತಿದೆ. ತಿಮ್ಮನಹಳ್ಳಿಗೆ ಸಿಸಿ ರಸ್ತೆ ಮಾಡುವ ಸಲುವಾಗಿ ಗುತ್ತಿಗೆದಾರರು ತಮ್ಮ ಅನುಕೂಲಕ್ಕಾಗಿ ಈ ಪ್ಲಾಂಟ್ ಹಾಕಿಕೊಂಡಿದ್ದಾರೆ. ಆದರೆ, ಸರ್ಕಾರಿ ಕಾಮಗಾರಿಯ ಹೆಸರಿನಲ್ಲಿ ಆರಂಭದಿAದಲೂ ಒಂದಲ್ಲ ಒಂದು ನಿಯಮಗಳ ಉಲ್ಲಂಘನೆ ಇಲ್ಲಿ ನಿರಂತರವಾಗಿ ನಡೆಯುತ್ತಲೇ ಬಂದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಧೂಳಿನ ಮಯ: ಹೆದ್ದಾರಿ ಪ್ರಯಾಣಿಕರ ಹೈರಾಣು: ಯಾವುದೇ ಆರ್.ಎಂ.ಸಿ ಪ್ಲಾಂಟ್ ಸ್ಥಾಪಿಸುವಾಗ ಸಿಮೆಂಟ್ ಮತ್ತು ಧೂಳು ಹೊರಗೆ ಹರಡದಂತೆ ತಡೆಯಲು ರಸ್ತೆಯ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ ನಿರ್ಮಿಸುವುದು ಕಡ್ಡಾಯವಾಗಿದೆ. ಆದರೆ, ಇಲ್ಲಿ ಕೇವಲ ತಾತ್ಕಾಲಿಕವಾಗಿ ಶೆಡ್ ನೆಟ್ ಮೆಸ್ ಅಳವಡಿಸಿ ಕೈತೊಳೆದುಕೊಳ್ಳಲಾಗಿತ್ತು. ಅದು ಕೂಡ ಈಗ ಬಿರುಗಾಳಿಗೆ ಸಿಲುಕಿ ಸಂಪೂರ್ಣವಾಗಿ ಹರಿದು ಹೋಗಿದೆ. ಇದರಿಂದಾಗಿ ಪ್ಲಾಂಟ್ನಿAದ ಏಳುವ ಭಾರೀ ಪ್ರಮಾಣದ ಸಿಮೆಂಟ್ ಮಿಶ್ರಿತ ಧೂಳು ನೇರವಾಗಿ ರಾಷ್ಟಿçÃಯ ಹೆದ್ದಾರಿಗೆ ಆವರಿಸುತ್ತಿದ್ದು, ಪಾದಚಾರಿಗಳು, ಬೈಕ್ ಸವಾರರು ಕಣ್ಣು ಕಾಣಿಸದೆ,…
ತುಮಕೂರು: ತುಮಕೂರು ತಾಲ್ಲೂಕು ಕೋರ ಹೋಬಳಿ ಬೆಳಧರ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಸ್ತಳೀಯರು ಒತ್ತಾಯಿಸಿದ್ದಾರೆ. ಕೋರ ಹೋಬಳಿ ನರಸೀಪುರ,ಕಂಬದ ರಂಗದಸ್ವಾಮಿ ದೇವಾಲಯ, ಚನ್ನಪಟ್ಟಣದ, ಅಕ್ಕ ಪಕ್ಕದ ಸರ್ಕಾರಿ ಹಾಗೂ ಗೋಮಾಳ ಜಮೀನುಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದೆ,ಕಂದಾಯ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದರೆ,ಗಣಿ ಮತ್ತು ಭೂ ವಿಜ್ಙಾನ ಇಲಾಖೆ ನಿದ್ದೆಗೆ ಜಾರಿರುವುದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಕಂದಾಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ: ಬೆಳಧರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಸಹ ಕಂದಾಯ ಇಲಾಖೆ ಕ್ರಮ ಜರುಗಿಸದಿರುವುದು ಸ್ತಳೀಯರಲ್ಲಿ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ,ಸರ್ಕಾರಕ್ಕೆ ರಾಜಧನ ಪಾವತಿಸದೆ ಅಕ್ರಮವಾಗಿ ಸೈಜು ಗಲ್ಲುಗಳನ್ನು ತೆಗೆಯುತ್ತಿದ್ದು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ,ಕಲ್ಲುಗಣಿಗಾರಿಕೆಗೆ ಅನುಮತಿ ಪಡೆದವರು ಬೀದಿಗೆ ಬೀಳುವ ಸ್ತಿತಿ ನಿರ್ಮಾಣವಾಗಿದೆ,ಕಂದಾಯ ಇಲಾಖೆ ಅಧಿಕಾರಿಗಳಿಗೆ ಅಕ್ರಮ ಗೊತ್ತಿದ್ದರೂ ನೋಟೀಸ್ ಜಾರಿಗೊಳಿಸಿ ಕ್ರಮಕ್ಕೆ ಮುಂದಾಗದಿರುವುದು ಹಲವು ಅನುಮಾನಕ್ಕೆಡೆಮಾಡಿದೆ. ಗಣಿ ಮತ್ತು ಭೂ ವಿಜ್ಙಾನ…
ಕೊರಟಗೆರೆ: ಪ್ರತಿನಿತ್ಯದಂತೆ ತನ್ನ ತೋಟ ನೋಡಿಕೊಂಡು ಬರಲು ಹೋದ ವೃದ್ದೆಗೆ ಅಪರಿಚಿತ ವ್ಯಕ್ತಿಗಳು ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಮೈ ಮೇಲಿದ್ದ ಒಡವೆಗಳು ದೋಚಿ ಪರಾರಿಯಾಗಿದ್ದು, ಉಸಿರಾಟದ ಸಮಸ್ಯೆಯಿಂದ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ತಾಲ್ಲೂಕಿನ ಸಿಎನ್ ದುರ್ಗಾ ಹೋಬಳಿ ಸಿಎನ್ ದುರ್ಗಾ ಹೋಬಳಿ ದಾಸಲುಕುಂಟೆ ಗ್ರಾಮದಲ್ಲಿ ನಡೆದಿದ್ದು, ಪ್ರತಿನಿತ್ಯದಂತೆ ತೋಟಕ್ಕೆ ಹೋದ ರತ್ನಮ್ಮ (೬೫)ತೋಟದ ಮನೆಯಲ್ಲಿ ಒಂಟಿ ಇರುವುದನ್ನು ಗಮನಿಸಿದ ಕಳ್ಳರು ವೃದ್ಧೆಯನ್ನು ನಿಯಂತ್ರಿಸಲು ಕೈ ಕಾಲುಗಳನ್ನು ಕಟ್ಟಿ, ಬಾಯಿಗೆ ಬಿಳಿ ಬಟ್ಟೆ ತುರುಕಿದ್ದು ಉಸಿರಾಟದ ಸಮಸ್ಯೆಯಿಂದ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ವೃದ್ಧೆಯ ಕುತ್ತಿಗೆಯಲ್ಲಿ ಕೆಂಪು ಹವಳದ ೮ಗ್ರಾಂ ಚಿನ್ನದ ಗುಂಡು, ಕಿವಿಯಲ್ಲಿದ್ದ ೬.ಗ್ರಾಂ ಒಂದು ಜೊತೆ ಓಲೆ, ಬಿಳಿ ಕಲ್ಲಿನ ೨ಗ್ರಾಂ ತೂಕದ ಮೂಗನತ್ತು ದೋಚಿ ಪರಾರಿಯಾಗಿದ್ದು, ಒಟ್ಟು ೮೦ ಸಾವಿರ ಮೌಲ್ಯದ ಒಡವೆಗಳು ಕಳ್ಳತನವಾಗಿದೆ ಎನ್ನಲಾಗಿದೆ. ‘‘ವೃದ್ಧೆ ಒಬ್ಬರೇ ವಾಸಿಸುತ್ತಿದ್ದುದನ್ನು ಗಮನಿಸಿ ಕಳ್ಳರು ಈ ಕೃತ್ಯ ಎಸಗಿರುವ…
ಚಿಕ್ಕನಾಯಕನಹಳ್ಳಿ: ಜಿಲ್ಲೆಯ ಗಡಿ ಭಾಗದ ತಾಲೂಕಾದ ಚಿಕ್ಕನಾಯಕನಹಳ್ಳಿಯಲ್ಲಿರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರವಾಗಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸುವಲ್ಲಿ ವಿದ್ಯಾರ್ಥಿ ನಿಲಯ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಎಬಿವಿಪಿ ಮುಖಂಡರು, ಸರ್ಕಾರದಿಂದ ಸಾಕಷ್ಟು ಅನುದಾನ ಹಾಗೂ ಯೋಜನೆಗಳು ಜಾರಿಯಾದರೂ ಅವುಗಳ ಪ್ರಯೋಜನ ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ಪೌಷ್ಟಿಕ ಆಹಾರ ವಿತರಿಸುವಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. ತಕ್ಷಣವೇ ಗುಣಮಟ್ಟದ ಮತ್ತು ಪೌಷ್ಟಿಕ ಆಹಾರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು. ಇನ್ನೊಂದೆಡೆ, ವಿದ್ಯಾರ್ಥಿ ನಿಲಯದಲ್ಲಿ ಸುರಕ್ಷತೆಯ ಕೊರತೆ ಕೂಡ ಕಂಡುಬAದಿದೆ. ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸದಿರುವುದು ಹಾಗೂ ವಾಚ್ಮನ್ ಇಲ್ಲದಿರುವುದರಿಂದ ವಿದ್ಯಾರ್ಥಿಗಳಲ್ಲಿ ಭಯದ…
ತುಮಕೂರು: ಸಾರ್ವಜನಿಕ ಉದ್ಯಮವಾದ ಕರ್ನಾಟಕ ವಿದ್ಯುತ್ ವಿತರಣಾ ಸಂಸ್ಥೆಯಾದ ಕೆಪಿಟಿಸಿಎಲ್ ಮತ್ತು ಬೆಸ್ಕಾಂ, ಎಸ್ಕಾಂಗೆ ಸಂಬAಧಿಸಿದ ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಪವರ್ ಕಂಪೆನಿಗೆ ನೀಡಬಾರದು ಎಂದು ಆಗ್ರಹಿಸಿ ನಗರದ ಕೋತಿತೋಪಿನಲ್ಲಿರುವ ಬೆಸ್ಕಾಂ ಕಚೇರಿ ಮುಂಭಾಗ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿದರು. ಬೆಸ್ಕಾಂ ಕಚೇರಿ ಮುಂಭಾಗ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಹಾಗೂ ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಜಮಾಯಿಸಿ ಕೆಪಿಟಿಸಿಎಲ್ ಮತ್ತು ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳನ್ನು ಉಳಿಸಿ-ನಮ್ಮ ಹಕ್ಕನ್ನು ರಕ್ಷಿಸಿ ಎಂಬ ಕರಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಮಾತನಾಡಿ, ಸರ್ಕಾರಿ ಸ್ವಾಮ್ಯದ ಬೆಸ್ಕಾಂ ಇಲಾಖೆ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದು ಆತಂಕ ಮೂಡಿಸಿದೆ. ಖಾಸಗಿ ಕಂಪೆನಿಯಾದ ಟಾಟಾ ಪವರ್ ಕಂಪೆನಿಗೆ ವಿದ್ಯುತ್…
ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ-ಪೌತಿ ಖಾತಾ ಆಂದೋಲನ-೨ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರಿಂದ ವಿವಿಧ ಕಂದಾಯ ಸೇವೆಗಳಿಗೆ ಸಂಬAಧಿಸಿದ ಅರ್ಜಿಗಳನ್ನು ಸ್ವೀಕರಿಸಿದರು. ನಂತರ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಕಂದಾಯ ಇಲಾಖೆಯ ಸೇವೆಗಳ ಕುರಿತು ಮಾಹಿತಿ ಪಡೆದು ಸಂಬAಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಸಿದ್ದಾಪುರ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಕಂದಾಯ ಸೌಲಭ್ಯಗಳ ಕುರಿತು ಚರ್ಚಿಸಿದ ಸಂದರ್ಭದಲ್ಲಿ, ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಆರ್ಆರ್ಟಿ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ದೂರಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಬಾಕಿ ಇರುವ ಅರ್ಜಿಗಳನ್ನು ನಿಯಮಾನುಸಾರ ಆದ್ಯತೆಯ ಮೇರೆಗೆ ಶೀಘ್ರವಾಗಿ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಧುಗಿರಿ ಪಟ್ಟಣದ ಸರ್ಕಾರಿ ಪಿಎಂಶ್ರೀ ಪ್ರಾಥಮಿಕ ಪಾಠಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಪಠ್ಯಪುಸ್ತಕಗಳ ಲಭ್ಯತೆ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ…
ತುಮಕೂರು: ಭೂಮಿಯ ಫಲವತ್ತತೆ ಕಾಪಾಡಲು ಕ್ರಿಮಿನಾಶಕ ಮತ್ತು ರಸಗೊಬ್ಬರಗಳ ಬಳಕೆ ಬದಲು ಸಾವಯವ ಗೊಬ್ಬರ ಬಳಕೆಯಿಂದ ಆಗುವ ಪ್ರಯೋಜನಗಳ ಬಗ್ಗೆ ಕೃಷಿ ಅಧಿಕಾರಿಗಳು ರೈತರಿಗೆ ಮನವರಿಕೆ ಮಾಡಿಕೊಟ್ಟು ಪರಿಸರ ಸ್ನೇಹಿ, ಸಾಂಪ್ರದಾಯಕ ಕೃಷಿ ಪದ್ದತಿ ಅನುಸರಿಸಲು ಪ್ರೋತ್ಸಾಹಿಸಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು. ನರೇಂದ್ರ ಮೋದಿಯವರು ಪ್ರಧಾನಿಯಾಗಿ ೧೨ ವರ್ಷ ಪೂರೈಸಿದ್ದರ ಹಿನ್ನೆಲೆಯಲ್ಲಿ ತಾಲ್ಲೂಕಿನ ಹಿರೇಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಹಮ್ಮಿಕೊಂಡಿದ್ದ ಖೇತ್ ಬಚಾವೋ ಅಭಿಯಾನ್ ಕಾರ್ಯಕ್ರಮದಲ್ಲಿ ನೈಸರ್ಗಿಕ ಕೃಷಿ ಉತ್ತೇಜಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಶಾಸಕರು, ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಭೂಮಿಯ ಫಲವತ್ತತೆ ಹಾಳಾಗುವುದನ್ನು ತಪ್ಪಿಸಲು ರೈತರು ನೈಸರ್ಗಿಕ ಕೃಷಿ ಪದ್ದತಿ ಅನುಸರಿಸಬೇಕು. ಸಾವಯವ ಕೃಷಿ ಪ್ರೋತ್ಸಾಹಿಸಲು ನರೇಂದ್ರ ಮೋದಿಯವರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ರೈತರು ಯೋಜನೆಗಳ ಪ್ರಯೋಜನ ಪಡೆದು ದೇಶದ ಆಹಾರ ಧಾನ್ಯ ಉತ್ಪಾದನೆ ಹೆಚ್ಚಾಗಲು ಕೈ ಜೋಡಿಸಬೇಕು ಎಂದರು. ಕೃಷಿ ಅಧಿಕಾರಿಗಳು, ರೈತ ಮೋರ್ಚಾಗಳು…
ತುಮಕೂರು: ೨೦೨೬ರ ಮರು ಪರೀಕ್ಷೆಯನ್ನು ಜೂನ್ ೨೧ರಂದು ತುಮಕೂರು ಜಿಲ್ಲೆಯ ವಿವಿಧ ೧೩ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆ ಹಾಗೂ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಓಇಇಖಿ ಪರೀಕ್ಷೆಯು ರಾಷ್ಟç ಮಟ್ಟದಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ರೀತಿಯ ನಿರ್ಲಕ್ಷö್ಯ ಅಥವಾ ಲೋಪಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪ್ರಶ್ನೆಪತ್ರಿಕೆಗಳನ್ನು ಏರ್ಫೋರ್ಸ್ ಭದ್ರತೆಯಲ್ಲಿ ತರಲಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು. ಇತ್ತೀಚಿನ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಶ್ನೆಪತ್ರಿಕೆ ಸೋರಿಕೆ ಮುಂತಾದ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಟೆಲಿಗ್ರಾಂ ಸೇರಿದಂತೆ ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆಯ ಮೇಲೂ ನಿಯಂತ್ರಣ ಹೇರಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ದಿನದಂದು ಎಲ್ಲಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ಕಡ್ಡಾಯವಾಗಿ…
ಚಿಕ್ಕನಾಯಕನಹಳ್ಳಿ: ಹುಳಿಯಾರು ರಾಜ್ಯ ಸರ್ಕಾರಿ ನೌಕರರು ಪ್ರತಿದಿನ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಲು ಇ-ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿರುವ ನೂತನ “ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ” ಹಾಗೂ ‘ಕರ್ತವ್ಯ’ ಸಾಫ್ಟ್ವೇರ್ ಅಪ್ಲಿಕೇಶನ್ ಅನ್ನು ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲೂ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕುರಿತು ಮಾಹಿತಿ ನೀಡಿರುವ ಹುಳಿಯಾರು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎಲ್.ವಿ. ಮಂಜುನಾಥ್ ಅವರು, ಕಚೇರಿಯ ಎಲ್ಲಾ ಸಿಬ್ಬಂದಿಗಳು ಪ್ರತಿದಿನ ಬೆಳಗ್ಗೆ ೧೦:೦೦ ಗಂಟೆಯೊಳಗೆ ಕಚೇರಿಗೆ ಕಡ್ಡಾಯವಾಗಿ ಬಂದು ಲಾಗಿನ್ ಆಗಬೇಕು” ಎಂದು ಕಡಕ್ ನಿರ್ದೇಶನ ನೀಡಿದ್ದಾರೆ. ನಿನ್ನೆ ಸೋಮವಾರವಷ್ಟೇ ತಾಲೂಕು ಕಚೇರಿಯಲ್ಲಿ ನಡೆದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಈ ನೂತನ ತಂತ್ರಜ್ಞಾನದ ಕಡ್ಡಾಯ ಜಾರಿ ಬಗ್ಗೆ ಹಿರಿಯ ಅಧಿಕಾರಿಗಳಿಂದ ಸ್ಪಷ್ಟ ಮಾಹಿತಿ ನೀಡಲಾಗಿದೆ ಎಂದರು. ಜಿಯೋ ಟ್ಯಾಗ್ ವ್ಯವಸ್ಥೆ; ಸುಳ್ಳು ಹಾಜರಾತಿಗೆ ಬ್ರೇಕ್: ‘ಕರ್ತವ್ಯ’ ಆಪ್ ಸಂಪೂರ್ಣವಾಗಿ ಜಿಯೋ ಟ್ಯಾಗಿಂಗ್ ತಂತ್ರಜ್ಞಾನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತದೆ. ಇದು ನೌಕರರ ಭೌತಿಕ ಉಪಸ್ಥಿತಿ ಮತ್ತು ಕಚೇರಿಯ ನಿಖರವಾದ ಭೌಗೋಳಿಕ…

