Author: News Desk Benkiyabale

ತುಮಕೂರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದರಿಂದ ನಮ್ಮ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಎಸ್ಸಿ ಘಟಕ ಹಾಗೂ ಮುಂಚೂಣಿ ಘಟಕಗಳ ಸಹಯೋಗದೊಂದಿಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ ನಿಷ್ಠರಾಗಿ ಶ್ರಮಿಸಿದರೆ ಯಾವ ಹಂತದವರೆಗಾದರೂ ಬೆಳೆಯಬಹುದು ಎಂಬುದಕ್ಕೆ ಮಲ್ಲಿಕಾರ್ಜುನ ಖರ್ಗೆಯವರೇ ಸಾಕ್ಷಿ ಎಂದರು. ಹಿರಿಯ ಮುತ್ಸದ್ದಿತನ ಮತ್ತು ಜನಪರ ಕಾಳಜಿಯ ಮೇರು ವ್ಯಕ್ತಿತ್ವದ ಖರ್ಗೆಯವರು ಕಾಂಗ್ರೆಸ್ ಪಕ್ಷವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸಲಿದ್ದಾರೆ. ಕರುನಾಡಿನ ನಾಯಕರೊಬ್ಬರು ಪಕ್ಷದ ಉನ್ನತ ಹುದ್ದೆ ಅಲಂಕರಿಸಿದ್ದು ನಮಗೆ ಸಂತಸ ತಂದಿದೆ ಎಂದು ತಿಳಿಸಿದರು. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು 1968ರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಸಾರಥ್ಯ ವಹಿಸಿದ ರಾಜ್ಯದ ಮೊದಲ ನಾಯಕರಾಗಿ ಗುರುತಿಸಿಕೊಂಡಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ…

Read More

ಹಾಸನ ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಕೆಂಡೋತ್ಸವ ನಡೆದಿದೆ. ಕೆಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಸಿದ ಬಳಿಕ ಕೆಂಡೋತ್ಸವ ನಡೆದಿದೆ. ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಂದ್ ಆಗಿದೆ. ಪುರೋಹಿತರು ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಜಿಲ್ಲಾಧಿಕಾರಿ, ಪೆÇಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಕ್ಲೋಸ್ ಆಗಲಿದೆ. ಹಾಸನದ ಅಧಿ ದೇವತೆ ಹಾಸನಾಂಬೆಯ ದರ್ಶನೋತ್ಸವದ ಜೊತೆಗೇ ನಡೆಯುವ ಸಿದ್ದೇಶ್ವರ ಜಾತ್ರೋ ಮಹೋತ್ಸವ ಹಾಗೂ ಕೆಂಡೋತ್ಸವ ಜರುಗಿದೆ. ಮಧ್ಯ ರಾತ್ರಿ ಸಹಸ್ರಾರು ಭಕ್ತರು, ಮಂಗಳವಾದ್ಯ, ನಂದಿಕೋಲು ಕುಣಿತದ ಜೊತೆಗೆ ಹಾಸನಾಂಬೆ ದೇಗುಲದ ಆವರಣದಲ್ಲಿ ನಡೆದ ರಥೋತ್ಸವ ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಕಳೆದ ಹದಿನೈದು ದಿನಗಳಿಂದ ಹಾಸನದ ಅಧಿ ದೇವತೆ ಹಾಸನಾಂಬೆ ದರ್ಶಣೋತ್ಸವ ಹಾಗು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಅ.26ರ ಮಧ್ಯ…

Read More

ತುಮಕೂರು ಹಿಂದುಗಳು ಗೋವುಗಳಿಗೆ ಪೂಜೆ ಸಲ್ಲಿಸುವುದು ಪುರಾತನ ಕಾಲದಿಂದ ನಡೆದು ಬಂದಿರುವ ಸಂಸ್ಕøತಿಯ ಆಚರಣೆ ಎಂದು ಮಲ್ಲಸಂದ್ರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಆರ್ ಚಿಕ್ಕೇಗೌಡ ತಿಳಿಸಿದರು. ತಾಲೂಕಿನ ಹಾಲನೂರು ಇತಿಹಾಸ ಪ್ರಸಿದ್ಧ ಮಲ್ಲೇಶ್ವರ ಸ್ವಾಮಿ ಮತ್ತು ಶ್ರೀ ಪಾರ್ವತಿ ದೇವಿ ದೇವಾಯದಲ್ಲಿ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇಗುಲದ ಆಡಳಿತ ಮಂಡಳಿ ವತಿಯಿಂದ ಬುಧವಾರ ಬಲಿಪಾಂಡ್ಯಮಿಯಂದು ಗೋವುಗಳಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು,ಹಿಂದುಗಳ ಮನೆ ದೇವರು ಗೋವುಗಳು,ಹಲವಾರು ಸಮುದಾಯಗಳು ಪ್ರತಿ ಹಬ್ಬದಲ್ಲೂ ಇಂದಿಗೂ ಕೂಡ ಗೋವುಗಳನ್ನು ಪೂಜಿಸಿಕೊಂಡು ಬರುತ್ತಿದ್ದಾರೆ ಎಂದರು. ಗೋವು ಪೂಜೆ ಮಾಡುವುದರಿಂದ ಮನೆಯಲ್ಲಿ ಧನ ಪ್ರಾಪ್ತಿ ಮತ್ತು ಮನೆಗಳಿಗೆ ಏಳಿಗೆ ಬರುತ್ತದೆ ಎಂಬುದು ಹಿರಿಯ ಅಭಿಪ್ರಾಯವಾಗಿದೆ.ಪುರಾತನ ಕಾಲದಿಂದಲೂ ಗೋವುಗಳಿಗೆ ಪೂಜೆ ಸಲ್ಲಿಸಿಕೊಂಡು ಬರಲಾಗುತ್ತಿದೆ . ಬಸವನ ಜಯಂತಿ,ಕಾರ ಹುಣ್ಣಿಮೆ ಸೇರಿದಂತೆ ಕೆಲ ಹಬ್ಬಗಳಲ್ಲಿ ಗೋವುಗಳನ್ನು ವಿಶೇಷವಾಗಿ ಪೂಜಿಸಲಾಗುತ್ತಿದೆ. ವಿಶೇಷವಾಗಿ ಧಾರ್ಮಿಕ ದತ್ತಿ ಇಲಾಖೆಯಿಂದ ದೇಗುಲದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸುವಂತೆ ಸೂಚಿಸಲಾಗಿದೆ.ಆದೇಶದಂತೆ ಮಲ್ಲೇಶ್ವರ ಸ್ವಾಮಿ ದೇಗುಲದಲ್ಲಿ…

Read More

ತುಮಕೂರು ಇವರು ಇಂದು ತುಮಕೂರಿನ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಡಬ್ಬಲ್ ಇಂಜಿನ್ ಸರ್ಕಾರಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಶೇಕಡ 3 ರಿಂದ 7ಕ್ಕೆ ಏರಿಸಿದೆ. ಪರಿಶಿಷ್ಟ ಪಂಗಡಕ್ಕೆ ಭರಪೂರ ಸೌಲಭ್ಯಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಪರಿಶಿಷ್ಟ ಪಂಗಡದ ಜಾಗೃತ ಸಮಾವೇಶಗಳನ್ನು ಬಿಜೆಪಿ ಪ್ರತಿ ಜಿಲ್ಲೆಯಲ್ಲೂ ನಡೆಸುತ್ತಿದ್ದು, ತುಮಕೂರಿನಲ್ಲಿ ಶುಕ್ರವಾರ ನಡೆಸಲಿರುವ ಪರಿಶಿಷ್ಟ ಪಂಗಡದ ಸಮಾವೇಶಕ್ಕೆ ಸಚಿವರಾದ ಬಿ.ಶ್ರೀರಾಮುಲು, ಬಿ.ಸಿ.ನಾಗೇಶ್, ಜೆ.ಸಿ.ಮಾಧುಸ್ವಾಮಿ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಮಾಜಿ ಸಚಿವರಾದ ರಮೇಶ್ ಜಾರಕೀಹೊಳಿ, ರಾಜೂಗೌಡ, ಶಿವನಗೌಡ ನಾಯಕ್, ರಾಜ್ಯ ಎಸ್.ಟಿ.ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ರಾಜೇಶ್‍ಗೌಡ, ಮಸಾಲೆ ಜಯರಾಂ, ಚಿದಾನಂದ ಬಿ.ಗೌಡ, ವೈ.ಎ.ನಾರಾಯಣಸ್ವಾಮಿ, ಮಾಜಿ ಸಚಿವರು, ಶಾಸಕರು ಮತ್ತು ವಿಧಾನಸಭೆ/ ವಿಧಾನಪರಿಷತ್ ಚುನಾವಣೆಗಳಿಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಇನ್ನು ಮುಂತಾದ ಪ್ರಮುಖರು ಭಾಗವಹಿಸಲಿದ್ದಾರೆ.…

Read More

ತುಮಕೂರು ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪರಿಶಿಷ್ಟ ವರ್ಗದ ಯುವಜನರನ್ನು ಸಂಘಟನೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬಲ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಪರಿಶಿಷ್ಟ ಪಂಗಡದ ಕಾಂಗ್ರೆಸ್ ಮುಖಂಡರಿಗೆ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಪಂಗಡದ ಮುಖಂಡರುಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ತುಮಕೂರು ಜಿಲ್ಲಾ ಘಟಕದಲ್ಲಿ ಪರಿಶಿಷ್ಟ ಪಂಗಡ ವಿಭಾಗದ ಪದಾಧಿಕಾರಿಗಳ ಪರಿಷ್ಕರಣೆಯ ಜೊತೆಗೆ,ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿರುವವರಿಗೆ ಸ್ಥಾನಮಾನ ನೀಡಿರುವುದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಎಂದರು. ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿಯೂ ಪರಿಶಿಷ್ಟ ಪಂಗಡದ ಮತದಾರರ ಸಂಖ್ಯೆ ಸಾಕಷ್ಟಿದೆ.ಕೆಲವು ಕ್ಷೇತ್ರಗಳಲ್ಲಿ ನಿರ್ಣಾಯಕ ಸ್ಥಾನದಲ್ಲಿದ್ದಾರೆ.ಬಿಜೆಪಿ ಸರಕಾರದ ಬಡವರ ವಿರೋಧಿ ನೀತಿಗಳ ವಿರುದ್ದ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡುವ ಮೂಲಕ ಭ್ರಷ್ಟಾಚಾರವನ್ನೇ ಬಂಡವಾಳ ಮಾಡಿಕೊಂಡಿರುವ ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ಯುವಜನತೆ ಮುಂದಾಗಬೇಕೆಂದು ಆರ್.ರಾಮಕೃಷ್ಣ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷ ನರಸಿಂಹಯ್ಯ…

Read More

ತುಮಕೂರು ಇತಿಹಾಸ ಪ್ರಸಿದ್ದ ಗೂಳೂರು ಮಹಾ ಗಣಪತಿ ಮೂರ್ತಿಯನ್ನು ಬಲಿಪಾಢ್ಯಮಿಯಂದು ವಿವಿಧ ಧಾರ್ಮಿಕ ವಿಧಿ ವಿಧಾನ ಹಾಗೂ ಸಂಪ್ರದಾಯದೊಂದಿಗೆ ಪ್ರತಿಷ್ಠಾಪಿಸಿದ್ದು, ಒಂದು ತಿಂಗಳ ಕಾಲ ಭಕ್ತರಿಗೆ ಇತಿಹಾಸ ಪ್ರಸಿದ್ದ ಗಣೇಶಮೂರ್ತಿಯ ದರ್ಶನ ಭಾಗ್ಯ ದೊರೆಯಲಿದೆ. ಐತಿಹಾಸಿಕ ಹಿನ್ನೆಲೆ ಹೊಂದಿರುವ ಗೂಳೂರು ಮಹಾಗಣಪತಿಯನ್ನು ಕಾರ್ತಿಕ ಮಾಸದಲ್ಲಿ 1 ತಿಂಗಳ ಕಾಲ ಪ್ರತಿಷ್ಠಾಪಿಸಿ ಪ್ರತಿನಿತ್ಯ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಭಕ್ತರ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಬಲಿಪಾಡ್ಯಮಿ ದಿನದಂದು ಗಣೇಶಮೂರ್ತಿಗೆ ವಿಶೇಷ ಪೂಜೆಯೊಂದಿಗೆ ಕಣ್ಣುಧಾರಣೆ ಮಾಡಲಾಯಿತು. ನಿನ್ನೆಯಿಂದ ಆರಂಭವಾಗಿರುವ ಗಣೇಶಮೂರ್ತಿಯ ವಿಶೇಷ ಪೂಜಾ ಕೈಂಕರ್ಯ ಇನ್ನು ಒಂದು ತಿಂಗಳ ಕಾಲ ಪ್ರತಿನಿತ್ಯ ನೆರವೇರಲಿದೆ. ಈ ಬೃಹತ್ ಗಣೇಶ ಮೂರ್ತಿಗೆ ವಿಶೇಷ ಐತಿಹ್ಯವಿದ್ದು, 1 ತಿಂಗಳ ಕಾಲ ಗ್ರಾಮದ ಪ್ರತಿಯೊಂದು ಮನೆಯವರು ನಿತ್ಯ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಸಮರ್ಪಿಸುವರು. ಪ್ರತಿದಿನ ರಾತ್ರಿ 9 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ. 18 ಕೋಮಿನವರು ಗೂಳೂರು ಗಣಪನಿಗೆ ವಿವಿಧ ಸೇವೆ ಸಲ್ಲಿಸಲಿದ್ದಾರೆ.…

Read More

ಬೆಂಗಳೂರು ಕರ್ನಾಟಕ ವಿಧಾನಸಭೆ ಚುನಾವಣೆ (ಏಚಿಡಿಟಿಚಿಣಚಿಞಚಿ ಂssembಟಥಿ ಇಟeಛಿಣioಟಿ 2023) ಸಮೀಪಿಸುತ್ತಿದ್ದಂತೆಯೇ ಜೆಡಿಎಸ್? ಸಹ ಎಲ್ಲಾ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದಕ್ಕೆ ಪೂಕರವೆಂಬಂತೆ ಪಂಚರತ್ನ ಎನ್ನುವ ವಿನೂತನ ಕಾರ್ಯಕ್ರಮ ಕೈಗೊಂಡಿದೆ. ಈ ಬಗ್ಗೆ ಚರ್ಚೆ ನಡೆಸಲು ಅ.27 ಹಾಗೂ ಅ.28ರಂದು ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಜೆಡಿಎಸ್? ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗಲಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್?ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಜೆಪಿ ಭವನದಲ್ಲಿ ಅ.26 ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪಕ್ಷದ ನಾಳೆ, ನಾಡಿದ್ದು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಇದೆ. 13 ರಾಜ್ಯಗಳಿಂದ ಕಾರ್ಯಕಾರಿ ಸಮಿತಿಯ ಸದಸ್ಯರು ಆಗಮಿಸಲಿದ್ದಾರೆ. ಜೆಡಿಎಸ್ ಕಾರ್ಯಕಾರಿ ಸಮಿತಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಆಗಲಿದೆ ಎಂದು ಸ್ಪಷ್ಟಪಡಿಸಿದರು. ಈಗಿರುವ ಜೆಡಿಎಸ್? ರಾಷ್ಟ್ರೀಯ ಅಧ್ಯಕ್ಷ ಎಚ್?ಡಿ ದೇವೇಗೌಡ ಅವರನ್ನೇ ಮರುನೇಮಕ ಮಾಡಲಾಗುತ್ತೆ ಎನ್ನುವುದು ತಿಳಿದುಬಂದಿದೆ. ದೇವೇಗೌಡ್ರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೇರೆಯವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತಾರೆ ಎನ್ನುವ ಚರ್ಚೆಗಳು…

Read More

ತುಮಕೂರು ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಬಂಡೆಮಠದಲ್ಲಿ ವೀರಶೈವ ಸಮುದಾಯ ಮುಖಂಡರ ಸಭೆ ಕರೆಯಲಾಗಿದೆ. ಮಠಕ್ಕೆ ಸೇರಿದ ಆಸ್ತಿ, ಬ್ಯಾಂಕ್ ಲಾಕರ್ ನಲ್ಲಿ ಏನೆಲ್ಲ ಇದೆ. ಹಣಕಾಸು, ಮಠದ ಕಾರ್ಯನಿರ್ವಹಣೆ ಯಾರಿಗೆ ವಹಿಸಬೇಕುಮಠಕ್ಕೆ ಸಂಬಂಧಿಸಿದ ಇತರೆ ವಿಷಯಗಳ ಬಗ್ಗೆ ಚರ್ಚೆ ಮಾಡಲು ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀ ಸೂಚನೆ ಮೇರೆಗೆ ಸಭೆ ಆಯೋಜಿಸಲಾಗಿದೆ. ಬೆಂಗಳೂರು ಗುರುವಣ್ಣದೇವರ ಮಠದ ನಿಜಗುಣ ಸ್ವಾಮೀಜಿ, ನೆಲಮಂಗಲ ಪವಾಡ ಬಸವಣ್ಣ ದೇವರ ಮಠದ ಸ್ವಾಮೀಜಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ, ಕೆಆರ್ ಐಡಿಎಲ್ ಅಧ್ಯಕ್ಷ ಎಂ.ರುದ್ರೇಶ್ ಸೇರಿ ಹಲವರು ಭಾಗಿಯಾಗಲಿದ್ದಾರೆ. ಸಿಎಸ್ ಪುಟ್ಟರಾಜು, ಮಾಜಿ ಉಪಪೌರರು, ಕೆಪಿ ಆನಂದ್ ನೆಲಮಂಗಲ ಪ್ರಾಧಿಕಾರ ಮಾಜಿ ಅಧ್ಯಕ್ಷ, ಹೇಮಂತ್ ಕುಮಾರ್ ಗ್ರಾಂ ಪಂ ಮಾಜಿ ಅಧ್ಯಕ್ಷ, ಬಿಎಂಟಿಸಿ ನಿರ್ದೇಶಕ ಕೆಪಿ ಭೃಗೇಶ್, ಮಠದ ಶಿಕ್ಷಕರು, ಅಕೌಂಟ್ ನೋಡುಕೊಳ್ಳುವವರು ಸಹ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಿದ್ದಗಂಗಾ ಶ್ರೀಗಳಿಗೆ ಹೇಗೆ ಮುಖ ತೋರಿಸಬೇಕು ಅಂತಾ ಹೀಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

Read More

ತುಮಕೂರು ವಿದ್ಯಾರ್ಥಿಗಳು ಹಾಗೂ ಪುಸ್ತಕ ಪ್ರಿಯರ ದೂರಿನ ಹಿನ್ನೆಲೆಯಲ್ಲಿ ಬುಧವಾರ ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಪ್ರಭಾವತಿ ಎಂ.ಸುಧೀಶ್ವರ್,ಪಾಲಿಕೆಯ ವಿರೋಧಪಕ್ಷದ ನಾಯಕ ಜೆ.ಕುಮಾರ್ ಹಾಗೂ ಸ್ಥಾಯಿ ಸಮಿತಿ ಸದಸ್ಯ ಸೈಯದ್ ನಯಾಜ್ ಅವರುಗಳು ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ನಗರದ ಟೌನ್‍ಹಾಲ್ ಸರ್ಕಲ್‍ನಲ್ಲಿರುವ ಕೇಂದ್ರ ಗ್ರಂಥಾಲಯದ ವಾಚನಾಲಯ, ಪುಸ್ತಕಗಳ ವಿಭಾಗ ಹಾಗೂ ಇನ್ನಿತರ ವಿಭಾಗಗಳು ಸರಕಾರಿ ರಜಾದಿನಗಳಲ್ಲಿ ತೆರೆಯದೆ ಇರುವ ಕಾರಣ ವೃತ್ತಪತ್ರಿಕೆಗಳು, ನಿಯತಕಾಲಿಕೆಗಳು ಹಾಗೂ ವಿವಿಧ ಪುಸ್ತಕಗಳನ್ನು ಒದಲು ತೊಂದರೆಯಾಗುತ್ತಿದೆ.ಅದರಲ್ಲಿಯೂ ಅಕ್ಟೋಬರ್ ತಿಂಗಳಲ್ಲಿ ಸಾಲು,ಸಾಲು ರಜೆಗಳು ಬಂದಿರುವ ಕಾರಣ,ನಿರಂತರವಾಗಿ ಓದುತ್ತಿರುವ ವಿವಿಧ ಪರೀಕ್ಷಾರ್ಥಿಗಳು,ಪುಸ್ತಕ ಪ್ರಿಯರಿಗೆ ತೊಂದರೆಯಾಗುತ್ತಿದೆ.ಕೇಂದ್ರ ಗ್ರಂಥಾಲಯ ಸಮಿತಿಯ ಅಧ್ಯಕ್ಷರು ಆಗಿರುವ ಮೇಯರ್ ಅವರು,ಗ್ರಂಥಾಲಯದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ,ರಜಾ ದಿನಗಳಲ್ಲಿಯೂ ಗ್ರಂಥಾಲಯದ ಬಾಗಿಲು ತೆರೆದು ಒದುಗರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದ್ದರು. ಸದರಿ ಮನವಿಯ ಹಿನ್ನೆಲೆಯಲ್ಲಿ ಬುಧವಾರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿದ್ದ ಮೇಯರ್ ಪ್ರಭಾವತಿ ಎಂ.ಸುಧೀಶ್ವರ್, ವಿರೋಧಪಕ್ಷದ ನಾಯಕ ಜೆ.ಕುಮಾರ್ ಹಾಗೂ…

Read More

ತುಮಕೂರು ಕರ್ನಾಟಕ ಸರ್ಕಾರ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣದ ಪ್ರಯುಕ್ತ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನದ ರಥಕ್ಕೆ ಎರಡನೇ ದಿನವಾದ ಬುಧವಾರ ತುಮಕೂರು ಗ್ರಾಮಾಂತರ ಬೆಳಗುಂಬ ಗ್ರಾಮದ ಇತಿಹಾಸ ಪ್ರಸಿದ್ಧವಾದ ಶ್ರೀ ಗುರುಸಿದ್ದರಾಮೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ತುಮಕೂರು ಗ್ರಾಮಾಂತರ ಮಾಜಿ ಶಾಸಕರಾದ ಶ್ರೀ ಬಿ.ಸುರೇಶ್ ಗೌಡರವರು ಚಾಲನೆ ನೀಡಿದರು. ಬೆಳಗುಂಬ ದೇವಾಲಯದ ಬಳಿ ಹೂವಿನಿಂದ ಅಲಂಕೃತವಾದ ಮೃತ್ತಿಕೆ ಸಂಗ್ರಹಿಸುವ ಕೆಂಪೇಗೌಡ ರಥಕ್ಕೆ ಗ್ರಾಮದವರು ಪೂಜೆ ಸಲ್ಲಿಸಿದರು. ಬನ್ನಿ ನಾಡ ಕಟ್ಟೋಣ ಎಂಬ ಸಂದೇಶ ಹೊತ್ತು ಬಂದ ರಥವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ಗಳಾದ ಸಿದ್ದರಾಜು,ಮಂಜಣ್ಣ ಸಿದ್ದೇಗೌಡ್ರು, ಲೋಕೇಶ್, ಗಂಗಾಂಜುನಯ್ಯ,ಚಿಗರಿ, ಸುರೇಶ್, ರಾಮಚಂದ್ರಯ್ಯ,ಇನ್ನೂ ಮುಂತಾದ ಮುಖಂಡರು ಮತ್ತು ತುಮಕೂರು ಗ್ರಾಮಾಂತರ ಆರಕ್ಷಕ ನಿರೀಕ್ಷಕ ಪ್ರಸನ್ನ ಕುಮಾರ್ ಮತ್ತು ತಾಲ್ಲೂಕು ಪಂಚಾಯತಿ ಅಧಿಕಾರಿ ಜೈಪಾಲ್ ಇಲಾಖೆಯ ಸಿಬ್ಬಂದಿ ಗಳು,ಕಂದಾಯ ಇಲಾಖೆಯ ಅಧಿಕಾರಿಗಳು , ಸಮುದಾಯದ ಮಹಿಳೆಯರು,ಪುಟಾಣಿ ಮಕ್ಕಳು, ಸಾರ್ವಜನಿಕರು ಭವ್ಯವಾಗಿ ಪೂರ್ಣ ಕುಂಬದೊಂದಿಗೆ ರಥವನ್ನು ಸ್ವಾಗತಿಸಿದರು.…

Read More