ತುಮಕೂರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11ರಂದು ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡೀಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೃತ್ತಿಕೆ ಸಂಗ್ರಹಿಸಲು ಹಮ್ಮಿಕೊಂಡಿರುವ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದಡಿ ಈಗಾಗಲೇ ಅಕ್ಟೋಬರ್ 23 ರಿಂದ 2 ವಾಹನಗಳು ನಿಗಧಿಪಡಿಸಿದ ಮಾರ್ಗನಕ್ಷೆ ಪ್ರಕಾರ ಎಲ್ಲ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹಿಸಲಿವೆ. ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಮೃತ್ತಿಕೆ ಸಂಗ್ರಹ ಕಾರ್ಯವು ನವೆಂಬರ್ 7ಕ್ಕೆ ಪೂರ್ಣಗೊಂಡು ವಾಹನಗಳು ಜಿಲ್ಲಾಧಿಕಾರಿ ಕಚೇರಿಯನ್ನು ತಲುಪಲಿದ್ದು, ನವೆಂಬರ್ 8ರಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ವಾಹನಗಳಿಗೆ ಪೂಜೆ ಸಲ್ಲಿಸಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೌರವದಿಂದ ಬೀಳ್ಕೊಡಲಾಗುವುದು…
Author: News Desk Benkiyabale
ತುಮಕೂರು ಬೆಂಕಿಯೊಂದಿಗೆ ಸರಸ ಆಡಬೇಡಿ ಎಂದು ಆಗಾಗ ಹೇಳಲಾಗುತ್ತದೆ . ಆದರೆ , ಸಾಹಸದ ಹೆಸರಿನಲ್ಲಿ ಯುವಕರು ದುಸ್ಸಾಹಸಕ್ಕೆ ಇಳಿಯುವುದು ಮುಂದುವರಿಯುತ್ತಲೇ ಇದೆ . ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನಶಿವರದಲ್ಲಿ ಗಣಪತಿ ವಿಸರ್ಜನೆ ವೇಳೆ ಬಾಯಿಯಿಂದ ಬೆಂಕಿ ಉಗುಳಲು ಹೋಗಿ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ . ಮೆರವಣಿಗೆ ವೇಳೆ ಹೀಗೆ ಬೆಂಕಿಯಾಟ ಆಡುವುದು ಸಾಮಾನ್ಯ . ಆದರೆ , ಅದಕ್ಕೆ ಸಾಕಷ್ಟು ಪೂರ್ವ ಸಿದ್ಧತೆ , ತಾಲೀಮು ಬೇಕಾಗುತ್ತದೆ . ಈ ಯುವಕ ಬೆಂಕಿಯ ಪಂಜಿಗೆ ಪೆಟ್ರೋಲ್ ಉಗುಳುವ ವೇಳೆ ಅವಾಂತರ ಮಾಡಿಕೊಂಡಿದ್ದಾನೆ . ಬಾಯಿಯಿಂದ ಪೆಟ್ರೋಲ್ ಉಗುಳಿದಾಗ ಅದು ಬೆಂಕಿಗೆ ತಗುಲಿ ಮತ್ತೆ ಮುಖಕ್ಕೆ ಬಂದು ಬಡಿದಿದೆ . ಯುವಕನ ಮುಖ ಮತ್ತು ಎದೆಗೆ ಬೆಂಕಿ ತಗುಲಿದೆ . ಬೆಂಕಿ ಹೊತ್ತಿಕೊಳುತಿದ್ದಂತೆ ಸ್ಥಳೀಯರು ಧಾವಿಸಿದರು . ಯುವಕ ಕೂಡಾ ಕೂಡಲೇ ಪಂಜು ಎಸೆದಿದ್ದಾನೆ . ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ . ಗ್ರಾಮದ ಗಣಪತಿ ವಿಸರ್ಜನೆ ಮೆರವಣಿಗೆಗೆ ಕೀಲು…
ತುಮಕೂರು ಬೆಂಗಳೂರು ಸೇರಿದಂತೆ ಹಲವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ , ಕೊಲೆ ಯತ್ನ , ಸುಲಿಗೆ ಪ್ರಕರಣಗಳನ್ನು ಎದುರಿಸುತ್ತಿದ್ದ ರೌಡಿಶೀಟರ್ ದಿವಾಕರ್ @ ಡಿಚ್ಚಿ ದಿವಾ ಎಂಬಾತನನ್ನು ತಿಪಟೂರು ತಾಲೂಕಿನ ಹೊಸಹಳ್ಳಿ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ . ದಿವಾಕರ್ ( 32 ) ತಿಪಟೂರು ತಾಲೂಕಿನ ಹುಚ್ಚನಹಳ್ಳಿ ನಿವಾಸಿಯಾಗಿದ್ದ . ಹಳೇ ವೈಷಮ್ಯಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ . ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ . ಸೋಮವಾರ ರಾತ್ರಿ ತಿಪಟೂರಿನಿಂದ ಹುಚ್ಚನಹಳ್ಳಿ ಕಡೆಗೆ ದಿವಾಕರ್ ಹೋಗುತ್ತಿದ್ದ ಎನ್ನಲಾಗಿದೆ . ಹೊಸಹಳ್ಳಿ ಬಳಿ ಬರುತ್ತಿದ್ದಾಗ ಮಾರ್ಗ ಮಧ್ಯೆ ನಾಲೈದು ಜನ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ . ಮಾರಕಾಸ್ತ್ರಗಳಿಂದ ದಿವಾಕರ್ ಮೇಲೆ ದಾಳಿ ನಡೆಸಿ , ಭೀಕರವಾಗಿ ಕೊಚ್ಚಿದ್ದಾರೆ . ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಅಲ್ಲಿಯೇ ಬಿಟ್ಟು , ಪರಾರಿಯಾಗಿದ್ದಾರೆ . ರಕ್ತದ ಮಡುವಿನಲ್ಲಿ…
ತುಮಕೂರು ಕೋಟಿ ಕಂಠ ಗಾಯನ ಕಾರ್ಯಕ್ರಮ ವಿನೂತನ ಪ್ರಯೋಗವಾಗಿದ್ದು, ಇದೊಂದು ಸಂಗೀತ ಕ್ಷೇತ್ರದಲ್ಲಿ ಕ್ರಾಂತಿಕಾರಿ ಮೈಲಿಗಲ್ಲಾಗಿದೆ ಎಂದು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ. ಚೇತನ್ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಆಡಿಟೋರಿಯಂನಲ್ಲಿ ಜಿಲ್ಲಾಸ್ಪತ್ರೆ, ಸ್ವರಸಿಂಚನ ಸುಗಮ ಸಂಗೀತ ಜಾನಪದ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು-ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕೋಟಿ ಕಂಠ ಗಾಯನದ ಪ್ರಯುಕ್ತ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋಟಿ ಕಂಠ ಗಾಯನ ಕಾರ್ಯಕ್ರಮದಂತಹ ವೇದಿಕೆಗಳ ಮೂಲಕ ಸಾವಿರಾರು ಪ್ರತಿಭಟನೆ ಹೊರಹೊಮ್ಮುತ್ತಾರೆ. ಈ ಕೋಟಿ ಕಂಠ ಗಾಯನ ಸಂಗೀತ ಪ್ರತಿಭೆಗಳಿಗೂ ಅತ್ಯಂತ ಉಪಯುಕ್ತವಾಗಿದೆ ಎಂದರು. ಸಂಗೀತ ಎಂಬುದು ನಮ್ಮ ನಾಡು, ಸಂಸ್ಕೃತಿಯಲ್ಲಿ ಬಂದಿರುವಂತಹ ಕಲೆ. ನಮಗೆ ಪ್ರತಿನಿತ್ಯ ಗಾಳಿ, ನೀರು, ನಿದ್ದೆ ಯಾವ ರೀತಿ ಅವಶ್ಯಕತೆ ಇದೆಯೋ ಅದೇ ರೀತಿ ಸಂಗೀತವೂ ಅಗತ್ಯವಾಗಿದೆ ಎಂದ ಅವರು, ಸಂಗೀತ ಮಾನಸಿಕವಾಗಿ ಶಕ್ತಿ ತುಂಬುವುದರ ಜತೆಗೆ ಹೃದಯವಂತಿಕೆಯನ್ನು ಗಟ್ಟಿಗೊಳಿಸುತ್ತದೆ ಎಂದು…
ತೋವಿನಕೆರೆ ತೋವಿನಕೆರೆ ಇಡೀ ಗ್ರಾಮವೇ ಸಂಭ್ರಮದಲ್ಲಿ ಮುಳುಗಿತ್ತು, ಗ್ರಾಮದ ದೇವರುಗಳೆಲ್ಲಾ ಬೆಳ್ಳಿ ರಥದಲ್ಲಿ ಸಾಲು ಸಾಲಾಗಿ ಮೆರವಣಿಗೆ ಹೊರಟಿದ್ದವು ನೋಡಲು ಅದೆಷ್ಟು ಸಂಭ್ರಮ ಸಂತಸ ನಮ್ಮೂರ ಹಬ್ಬದಲ್ಲಿ ಸಾಲುಗಟ್ಟಿನಿಂತ ದೇವರುಗಳ ಮೆರವಣಿಗೆಯ ಸಾಲು, ಕುಣಿದು ಕುಪ್ಪಳಿಸಿದ ಯುವ ಪೀಳಿಗೆ, ಜಾನಪದ ಕಲಾ ತಂಡಗಳ ವೈಭವ, ಸಾಗರದಂತೆ ಹರಿದು ಬಂದ ಭಕ್ತ ವೃಂದ ಇಂತಹದೊಂದು ದೃಶ್ಯ ಕಂಡು ಬಂದಿದ್ದು ಕೊರಟಗೆರೆ ತಾಲೂಕಿನ ತೋವಿನಕೆರೆಯ ನಮ್ಮೂರ ಹಬ್ಬ ಕಾರ್ಯಕ್ರಮದಲ್ಲಿ. ತೋವಿನಕೆರೆಯ ಸನ್ಮಿತ್ರ ಸಹಕಾರ ವೇದಿಕೆಯ ದಶಮಾನೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಹತ್ತು ದೇವರುಗಳನ್ನು ತೋವಿನಕೆರೆ ಗ್ರಾಮದ ರಾಜಬೀದಿಯಲ್ಲಿ ಜಾನಪದ ಕಲಾ ತಂಡಗಳಾದ ನಂದಿಧ್ವಜ, ವೀರಗಾಸೆ, ಡೊಳ್ಳು ಕುಣಿತ, ಕೀಲುಗೊಂಬೆ ಕುಣಿತಗಳ ಮೂಲಕ ಮೆರವಣಿಗೆ ನಡೆಸಲಾಯಿತು. ನಂತರ ನಡೆದ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಕ್ಷೇತ್ರ ಸಿದ್ದರಬೆಟ್ಟ ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹತ್ತು ದೇವರುಗಳನ್ನ ಒಂದೆಡೆ ನೋಡುವ ಸೌಭಾಗ್ಯ ಇಂದು ತೋವಿನಕೆರೆ ಜನತೆಗೆ ಒದಗಿ ಬಂದಿದ್ದು ಗ್ರಾಮೀಣ ಭಾಗದ ಯುವಕರು…
ಪಾವಗಡ ತಾಲೂಕಿನ ಮಡಿವಾಳ ಸಮುದಾಯಕ್ಕೆ ಮೂರು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಈ ಭಾರಿ ಅಧ್ಯಕ್ಷ ಸ್ಥಾನಕ್ಕೆ ತಿಪ್ಪೇಸ್ವಾಮಿ.ಕಾರ್ಯದರ್ಶಿಯಾಗಿ ಮುರಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ತಿಪ್ಪೇಸ್ವಾಮಿ ಮಾಧ್ಯಮರ ಬಳಿ ಮಾತನಾಡಿ ನನ್ನ ಸಮುದಾಯದವರು ಇಚ್ಛೆಯಂತೆ ನನ್ನನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಮೂಲಕ ನನ್ನ ಸಮುದಾಯಕ್ಕೆ ಅಭಿವೃದ್ಧಿ ಹಂತಕ್ಕೆ ಕೊಂಡೋಗುವ ಕೆಲಸವನ್ನು ಪ್ರಮಾಣಿಕವಾಗಿ ಮಾಡುತ್ತೇನೆ ಹಾಗೂ ಸಮುದಾಯದ ಮಕ್ಕಳ ಅಭಿವೃದ್ಧಿಗೆ ಹಾಗೂ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಹೊತ್ತು ನೀಡುವ ಕೆಲಸ ಮಾಡುತ್ತೇನೆ. ಬಹಳ ವರ್ಷದ ಬೇಡಿಕೆಯಂತೆ ಮಕ್ಕಳ ವಸತಿ ನಿಲಯ ಹಾಗೂ ಮಡಿವಾಳ ಭವನ ನಿರ್ಮಾಣ ಮಾಡುವ ಮೂಲಕ ಸಮುದಾಯಕ್ಕೆ ದುಡಿಯುತ್ತೇನೆ ಎಂದರು. ನಂತರ ಮಾತನಾಡಿ ಕಾರ್ಯದರ್ಶಿ ಮುರಳಿ ನಮ್ಮ ಸಮುದಾಯದಲ್ಲಿ ಉತ್ತಮ ವ್ಯಕ್ತಿತ್ವವುಳ್ಳಂತಹ ವ್ಯಕ್ತಿ ತಿಪ್ಪೆಸ್ವಾಮಿಯವರಿಗೆ ಅಧ್ಯಕ್ಷ ಮಾಡಿರೋದು ನನಗೆ ಸಂತೋಷದ ವಿಷಯ ನಾವೆಲ್ಲರೂ ಸಮುದಾಯದ ಹೆಚ್ಚಿನ ಹೊತ್ತು ನೀಡಿ ಅಭಿವೃದ್ಧಿ ಹಂತಕ್ಕೆ ಕೊಂಡಯುವ ಕೆಲಸ ಮಾಡುತ್ತೇವೆ ಎಂಬುದಾಗಿ ಈ ವೇಳೆ ತಿಳಿಸಿದರು ಈಗಾಗಲೇ ತಾಲೂಕಿನಲ್ಲಿ ಮಡಿವಾಳದ ಸುಮಾರು…
ತುಮಕೂರು ಸಹಕಾರ ಕ್ಷೇತ್ರಕ್ಕೆ ಮಹಿಳೆಯರು ಹೆಚ್ಚು ಪಾಲ್ಗೊಳ್ಳುವ ಮೂಲಕ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ರೇಣುಕ ಪ್ರಸಾದ್ ಕರೆ ನೀಡಿದರು. ತುಮಕೂರು ತಾಲ್ಲೂಕು ದೊಡ್ಡವೀರನಹಳ್ಳಿಯಲ್ಲಿ ಹಾಲು ಒಕ್ಕೂಟದ ಕ್ಷೀರ ಸಂಜೀವಿನಿ ಯೋಜನೆಯಡಿಯಲ್ಲಿ ಸ್ಥಳೀಯ ಮಹಿಳಾ ಸಹಕಾರ ಸಂಘದ ಸದಸ್ಯರುಗಳಿಗಾಗಿ ಆಯೋಜಿಸಿದ್ದ ಅರಿವು ಕಾರ್ಯಕ್ರಮ ಹಾಗೂ ರಾಸುಗಳ ಖರೀದಿಗೆ ಚೆಕ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹೈನುಗಾರಿಕೆಯಲ್ಲಿ ಮಹಿಳೆಯರ ಪಾತ್ರ ಅತಿ ದೊಡ್ಡದಿದೆ. ಸಹಕಾರ ಕ್ಷೇತ್ರಕ್ಕೆ ಮಹಿಳೆಯರು ಪಾದಾರ್ಪಣೆ ಮಾಡುತ್ತಿರುವುದರಿಂದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮುನ್ನಡೆಯಲು ಸಾಧ್ಯವಾಗಿದೆ. ಹೈನುಗಾರಿಕೆಯು ಅಭಿವೃದ್ಧಿ ಪಥದಲ್ಲಿ ಸಾಗಿದೆ ಎಂದರು. ತುಮಕೂರು ಸಾಂತ್ವನ ಕೇಂದ್ರದ ಸಲಹೆಗಾರ ಸಾ.ಚಿ.ರಾಜಕುಮಾರ ಮಹಿಳೆ ಮತ್ತು ಕಾನೂನು ಕುರಿತು ಮಾತನಾಡಿ ಬಹಳ ಹಿಂದಿನಿಂದ ಮಹಿಳೆಯನ್ನು ಕೆಲವು ಕಟ್ಟುಪಾಡುಗಳಲ್ಲಿ ಬಂಧಿಸಲಾಗಿತ್ತು. ನಮ್ಮ ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು ಎಂಬ ಅಂಶ ಹಾಗೂ ವಿವಿಧ ವಿಶೇಷ ಕಾನೂನುಗಳು ಜಾರಿಯಾದ ನಂತರ ಮಹಿಳೆಯರ ಶೋಷಣೆಯನ್ನು ತಪ್ಪಿಸಲು ಸಾಧ್ಯವಾಗಿದೆ. ಆದರೂ ಕೆಲವೊಂದು…
ತುಮಕೂರು ರಾಜ್ಯ ಸರ್ಕಾರ ಎಸ್ಸಿ-ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿ ಸುಗ್ರೀವಾಜ್ಞೆ ಹೊರಡಿಸಿರುವ ಹಿನ್ನೆಲೆಯಲ್ಲಿ ಎಸ್ಸಿ ಎಸ್ಟಿ ಸಮುದಾಯಗಳ ಒಕ್ಕೂಟದ ವತಿಯಿಂದ ನಗರದ ಟೌನ್ ಹಾಲ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಸಮುದಾಯದ ಮುಖಂಡ ಕುಪ್ಪೂರು ಶ್ರೀಧರನಾಯಕ ಮಾತನಾಡಿ, ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿಯಂತೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ 40 ವರ್ಷದಿಂದ ಹೋರಾಟ ನಡೆಸುತ್ತಿದ್ದೆವು. ಇದಕ್ಕೆ ಪೂರಕವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಹೋರಾಟ ಮಾಡುತ್ತಿದ್ದರು. ಈ ಎಲ್ಲ ಹೋರಾಟಗಳಿಂದ ಸರ್ಕಾರ ಎಚ್ಚೆತ್ತುಕೊಂಡು ಮೀಸಲಾತಿ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವುದು ನಮಗೆಲ್ಲ ಸಂತಸ ತಂದಿದೆ ಎಂದರು. ಎಸ್ಸಿ-ಎಸ್ಟಿ ಸಮುದಾಯಗಳಿಗೆ ಸಂಬಂಧಿಸಿದಂತೆ ನಕಲಿ ಪ್ರಮಾಣ ಪತ್ರ ಹಾವಳಿ ತಡೆಯುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಮೀಸಲಾತಿ ಹೆಚ್ಚಳ ಮಾಡಿದ ಸರ್ಕಾರಕ್ಕೆ ಹಾಗೂ ಹೋರಾಟ ಮಾಡಲು ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ…
ತುಮಕೂರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸುಗಳನ್ನು ವಿತರಿಸಲಾಯಿತು. ಕಟ್ಟಡ ಕಾರ್ಮಿಕರ ಬಸ್ ಪಾಸುಗಳನ್ನು ಆಯಾ ತಾಲ್ಲೂಕಿನ ಸ್ಥಳೀಯ ಶಾಸಕರಿಂದ ಅರ್ಹ ಫಲಾನುಭವಿಗಳಿಗೆ ಇತ್ತೀಚೆಗೆ ವಿತರಿಸಲಾಯಿತು. ತಿಪಟೂರು ಕ್ಷೇತ್ರದ ಶಾಸಕ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್, ಕುಣಿಗಲ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ಹಾಗೂ ಮಧುಗಿರಿ ಶಾಸಕ ಎಂ.ವಿ. ವೀರಭದ್ರಯ್ಯ ಅವರು ತಮ್ಮ ಕ್ಷೇತ್ರದ ಕಾರ್ಮಿಕರಿಗೆ ರಸ್ತೆ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ಬಸ್ ಪಾಸುಗಳನ್ನು ವಿತರಿಸಿದರು. ಹೆಚ್ಚಿನ ಸಂಖ್ಯೆಯ ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಗ್ರಾಮೀಣ ಭಾಗದವರಾಗಿರುವುದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಉಚಿತ ಬಸ್ ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎನ್. ಗಜೇಂದ್ರ ಕುಮಾರ್ ತಿಳಿಸಿದ್ದಾರೆ.
ತುಮಕೂರು ಉತ್ತಮ ಆಡಳಿತ ಸುಸ್ಥಿತಿಯಲ್ಲಿರಲು ಮಾಹಿತಿ ಹಕ್ಕು ಕಾಯ್ದೆ ಜನರಿಗೆ ಸಿಕ್ಕಿರುವ ಪ್ರಮುಖ ಅಸ್ತ್ರ ಎಂದು ಎಸ್ಪಿ ರಾಹುಲ್ ಕುಮಾರ್ ಶಹಪೂರವಾಡ್ ತಿಳಿಸಿದರು. ಕನ್ನಡಭವನದಲ್ಲಿ ನಡೆದ ಮಾಹಿತಿ ಹಕ್ಕು ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಆಡಳಿತದಲ್ಲಿ ಜನರ ಸಹಭಾಗಿತ್ವದಿಂದ ಆಡಳಿತದಲ್ಲಿದ್ದ ಕತ್ತಲನ್ನು ದೂರ ಮಾಡಲು ಮಾಹಿತಿ ಹಕ್ಕು ಕಾರಣವಾಗಿದೆ ಎನ್ನುವುದು ಸತ್ಯ ಎಂದರು. ಪ್ರಜಾಪ್ರಭುತ್ವದ ಯಶಸ್ವಿಗೊಳಿಸಲು ಜನರ ಸಹಭಾಗಿತ್ವ ಅವಶ್ಯಕ, ಸಹಭಾಗಿತ್ವ ಇಲ್ಲದೇ ಪ್ರಜಾಪ್ರಭುತ್ವ ಯಶಸ್ವಿಯಾಗಿಲ್ಲ ಅದೇ ಕಾರಣಕ್ಕಾಗಿ ಮಾಹಿತಿ ಹಕ್ಕು ಅಧಿನಿಯಮವನ್ನು ಜಾರಿಗೆ ತರಲಾಯಿತು, ಆಡಳಿತದ ಯಂತ್ರ ಪಾರದರ್ಶಕತೆ ಕಾಯ್ದುಕೊಳ್ಳಲು ಮಾಹಿತಿ ಹಕ್ಕು ನೆರವಾಗಿದೆ ಎಂದರು. ಲೋಕಾಯುಕ್ತ ವಲೀಬಾಷ ಅವರು ಮಾತನಾಡಿ, ಮಾಹಿತಿ ಹಕ್ಕು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿಯೂ ಅರಿವು ಮೂಡಿಸುವ ಮೂಲಕ ಮಾಹಿತಿ ಹಕ್ಕನ್ನು ಬಲಪಡಿಸಬೇಕು, ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಅರಿವು ಮೂಡಿದಾಗ ಮಾತ್ರ ಪಾರದರ್ಶಕ ಆಡಳಿತ ಸಾಮಾನ್ಯರಿಗೆ ದೊರೆಯಲಿದೆ ಎಂದರು. ಮಾಹಿತಿ ಹಕ್ಕು ಕಾರ್ಯಕರ್ತರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ…





