ತುಮಕೂರು: ತುಮಕೂರು ಸೇರಿದಂತೆ ರಾಜ್ಯದ ಬಯಲು ಸೀಮೆಯ ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ವಿಳಂಬಕ್ಕೆ ನಿಜವಾದ ಕಾರಣಗಳೇನು ಎಂದು ತಿಳಿಸುವ ನಿಟ್ಟಿನಲ್ಲಿ ಡಿಸೆಂಬರ್ 18ರ ಗುರುವಾರ ಬೆಳಗ್ಗೆ 10 ಗಂಟೆಗೆ ತುಮಕೂರಿನ ಅಮರಜೋತಿ ನಗರದಲ್ಲಿರುವ ಎತ್ತಿನಹೊಳೆ ಕಚೇರಿಗೆ ಸಾರ್ವಜನಿಕರೊಂದಿಗೆ ಭೇಟಿ ನೀಡಿ ಚರ್ಚೆ ನಡೆಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರದ ಸುಧಾ ಟೀ ಹೌಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಎತ್ತಿನಹೊಳೆ ಯೋಜನೆ ವಿಳಂ ಭಕ್ಕೆ ಕಾರಣಗಳು ಮತ್ತು ಪರಿಹಾರ ಎಂಬ ವಿಷಯ ಕುರಿತ ಸಮಾಲೋಚನಾ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಕಳೆದ ಸಭೆಯ ನಿಗಧಿಯಂತೆ ದೆಹಲಿಯಲ್ಲಿ ಸಚಿವರಾದ ಸಿ.ಆರ್.ಪಾಟೀಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ.ಆದರೆ ಸಚಿವಾಲಯ ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳಿಂದ ವಿಳಂಬವಾಗಿದೆ ಎಂದು ಹೇಳುತಿದ್ದಾರೆ. ಹಾಗಾಗಿ ನಿಜವಾದ ಅಡೆ,ತೆಡೆ ಯಾರಿಂದ ಆಗಿದೆ.ಇದರ ಹಿಂದಿನ ಉದ್ದೇಶವೇನು ಎಂದು ಜಿಲ್ಲೆಯ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಡಿಸೆಂಬರ್ ೧೮ರ ಗುರುವಾರ ಎತ್ತಿನಹೊಳೆ ಯೋಜನೆಯ ಹಿರಿಯ ಅಧಿಕಾರಿಗ ಳನ್ನು…
Author: News Desk Benkiyabale
ತುಮಕೂರು: ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನವಿರೋಧಿ ಧೋರಣೆ ಹೊಂದಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ಜನಪರ ಅಂಶಗಳನ್ನು ಒಳಗೊಂಡ ರಾಜಕೀಯ ಆಂದೋಲನ ರೂಪಿಸುವ ನಿಟ್ಟಿನಲ್ಲಿ ಸಿಪಿಐ(ಎಂ) ರಾಜ್ಯದಾದ್ಯಂತ ಕೈಗೊಂಡಿರುವ ಪರ್ಯಾಯ ರಾಜಕಾರಣಕ್ಕಾಗಿ ಜನದನಿಯ ರ್ಯಾಲಿ ಎಂಬ ಬೃಹತ್ ಪ್ರತಿಭಟನಾ ಕಾರ್ಯಕ್ರಮದ ಸಮಾರೋಪ ಸಮಾರಂಭ ಡಿಸೆಂಬರ್ ೨೧ ರಂದು ಬೆಂಗಳೂರಿನಲ್ಲಿ ಜರಗಲಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಡಾ.ಪ್ರಕಾಶ್ ತಿಳಿಸಿದರು. ಜನಚಳವಳಿ ಕೇಂದ್ರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,೨೦೨೫ರ ನವೆಂಬರ್ ೦೧ ರಿಂದ ಡಿಸೆಂಬರ್ ೨೦ ರವರೆಗೆ ನಡೆದಿರುವ ಕಾರ್ಯಕರ್ತರ ಮನೆ ಮನೆ ಭೇಟಿ, ಕಿರುಪತ್ರ ಹಂಚುವಿಕೆ ಮೂಲಕ ಜನರಿಗೆ ಆಳುವ ಪಕ್ಷಗಳ ದುರಾಡಳಿತದ ಬಗ್ಗೆ ಮನವರಿಕೆ ಮಾಡಿಕೊಡುವುದಲ್ಲದೆ, ಹೊಸ ರಾಜಕೀಯ ಶಕ್ತಿಯ ಉದಯಕ್ಕೆ ನಾಂದಿ ಹಾಡುವಂತೆ ಮನವೊ ಲಿಸುವ ಪ್ರಯತ್ನ ನಡೆದಿದೆ.ಇದರ ಸಮಾರೋಪ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಡಿಸೆಂಬರ್ ೨೧ ರಂದು ಸುಮಾರು ೩೦ ಸಾವಿರಕ್ಕೂ ಅಧಿಕ ರೈತರು, ಕಾರ್ಮಿಕರು, ಯುವಜನರು ಭಾಗವಹಿಸಲಿದ್ದಾರೆ ಎಂದರು. ಕೇ0ದ್ರದ ಎಡಿಎ…
ತುಮಕೂರು: ಸಂಘಟನೆಯಲ್ಲಿ ಗುರುತಿಸಿಕೊಂಡವರು ಜನಪ ರವಾಗಿ ರಬೇಕು. ಅವರ ಹೋರಾಟ ಪಾರದರ್ಶಕವಾಗಿದ್ದರೆ ಜನರ ಬೆಂಬಲ ದೊರೆಯುತ್ತದೆ. ನೇರ ಪ್ರಶ್ನೆ ಮಾಡುವ, ನ್ಯಾಯ ಕೇಳುವ ಶಕ್ತಿ ಸಂಘಟನೆಯಿ0ದ ಬರುತ್ತದೆ, ಮಾಡುವ ಕೆಲಸದಲ್ಲಿ ಪ್ರಾಮಾ ಣಿಕತೆ ಇದ್ದರೆ ಸಮಾಜದಲ್ಲಿ ಗೌರವವೂ ದೊರೆಯುತ್ತದೆ ಎಂದು ವಿಜಯಸೇನೆ ರಾಜ್ಯಾಧ್ಯಕ್ಷ ಹೆಚ್.ಎನ್.ದೀಪಕ್ ಹೇಳಿದರು. ಸೋಮವಾರ ನಗರದಲ್ಲಿ ವಿಜಯಸೇನೆಯ ನಗರ ಮಹಿಳಾ ಘಟಕ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾ ಡಿದ ಅವರು, ರಾಜಕೀಯ ಪಕ್ಷಗಳಲ್ಲಿ ಸ್ಥಾನಮಾನಗಳು ಬದಲಾಗ ಬಹುದು, ಆ ದರೆ ಬಲಿಷ್ಠವಾದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡವರಿಗೆ ಅವರದ್ದೇ ಆದ ಸ್ಥಾನ ಉಳಿದಿರುತ್ತದೆ. ನ್ಯಾಯದ ಪರ ಪ್ರಶ್ನೆ ಮಾಡುವ ಶಕ್ತಿ ಬೆಳೆಯುತ್ತದೆ. ಈ ಮೂಲಕ ನಾಯಕತ್ವ ಬೆಳೆಸಿಕೊಳ್ಳಬಹುದು ಎಂದರು. ಸಂಘಟನೆಯವರು ಯಾವತ್ತೂ ನೊಂದವರ ಧ್ವನಿಯಾಗಿ, ನ್ಯಾಯಕ್ಕಾಗಿ ಹೋರಾಟ ಮಾಡುವ ಮನೋಭಾವ ಹೊಂದಿ ರಬೇಕು. ಭ್ರಷ್ಟರಿಗೆ ಸಿಂಹಸ್ವಪ್ನವಾಗಿ ಹೋರಾಟ ಮಾಡಿ ನ್ಯಾಯ ಕೊಡಿಸಬೇಕು. ಹೋರಾಟದಲ್ಲಿ ಪ್ರಾಮಾಣಿಕತೆ ಇದ್ದರೆ ಯಶಸ್ವಿ ಯಾಗಬಹುದು. ಸಂಘಟನೆಯಲ್ಲಿ ಹೋರಾಟ, ನಾಯಕತ್ವ ರೂಪಿಸಿಕೊಂಡರೆ ರಾಜಕೀಯ ಸ್ಥಾನಮಾನಗಳನ್ನು ಪಡೆಯಲೂ ಅವಕಾಶವಾಗುತ್ತದೆ…
ಕೊರಟಗೆರೆ: ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತಿಮುಖ್ಯ. ಕ್ರೀಡಾಂಗಣವು ಮಕ್ಕಳಿಗೆ ಗೆಲುವು ಮತ್ತು ಸೋಲಿನ ಜೀವನದ ಪಾಠ ಕಲಿಸುತ್ತದೆ. ನಮ್ಮ ದೇಶದ ದ್ಯಾನ್ಚಂದ್, ಸಚಿನ್, ಪಿ.ವಿ.ಸಿಂಧು ಅಂತಹ ಕ್ರೀಡಾಪಟುಗಳೇ ನನ್ನ ಶಾಲೆಯ ಮಕ್ಕಳ ಸಾಧನೆಗೆ ಸ್ಪೂರ್ತಿ ಎಂದು ಸಾರಂಗ ಅಕಾಡೆಮಿ ಅಧ್ಯಕ್ಷ ಅಜಯ್ಕುಮಾರ್ ತಿಳಿಸಿದರು. ಕೊರಟಗೆರೆ ಪಟ್ಟಣದ ಶ್ರೀರಾಘವೇಂದ್ರ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ವಾರ್ಷಿಕ ಕ್ರೀಡಾ ಕಾರ್ಯಕ್ರಮದಡಿ ಸೋಮವಾರ ಏರ್ಪಡಿಸಲಾಗಿದ್ದ ರಾಘಕ್ರೀಡೆ-೨೦೨೫ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಶಿಕ್ಷಕರ ಜೊತೆ ಪೋಷಕರ ಪಾತ್ರ ಬಹುಮುಖ್ಯ. ಟಿವಿ ಮತ್ತು ಮೊಬೈಲ್ ಮಕ್ಕಳ ಶೈಕ್ಷಣಿಕ ಜೀವನಕ್ಕೆ ಅಪಾಯ. ಪೋಷಕರು ಮಕ್ಕಳ ಶೈಕ್ಷಣಿಕ ಜೀವನದ ಬಗ್ಗೆ ಕಡ್ಡಾಯವಾಗಿ ಶಾಲೆಗೆ ಬೇಟಿನೀಡಿ ಪರಿಶೀಲನೆ ನಡೆಸಬೇಕಿದೆ. ಕ್ರೀಡಾಕೂಟ ಯಶಸ್ವಿಗೆ ಕಾರಣರಾದ ಪೋಷಕರು ಮತ್ತು ಶಿಕ್ಷಕರಿಗೆ ಧನ್ಯವಾದ ಎಂದರು. ರಾಘವೇ0ದ್ರ ಶಾಲೆ ಆಡಳಿತ ಅಧಿಕಾರಿ ಕೆ.ಎನ್.ರುದ್ರೇಶ್ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಕ್ರೀಡಾ ಚಟುವಟಿಕೆ ಬಹುಮುಖ್ಯ. ನಮ್ಮ ಶಾಲೆಯಲ್ಲಿ ಚಿಣ್ಣರಸಂತೆ, ಪುಡ್ಪೇಸ್ಟ್, ಜಂಗಲ್ ಡೇ,…
ತುಮಕೂರು: ತುಮಕೂರು ನಗರದ ಎಂ.ಜಿ.ರಸ್ತೆಯಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಅವರ ಪರಿನಿರ್ವಾಣ ದಿವಸ್ ಕಾರ್ಯಕ್ರಮದಲ್ಲಿ ಅಂಬೇಡ್ಕರ್ರವರ ಆಶಯದಂತೆ ವಿದ್ಯೆ ಎನ್ನುವುದು ಸಾಧಕನ ಸ್ವತ್ತೇ ವಿನಹ ಸೋಮಾರಿಗಳ ಸ್ವತ್ತಲ್ಲ ಎಂಬ ನಾನ್ನುಡಿಯಂತೆ ಬಾಬಾ ಸಾಹೇಬರು ನಡೆದು ಬಂದ ದಾರಿ ಅವರ ಜೀವನ ಚರಿತ್ರೆಯನ್ನು ಹಬ್ಬತ್ತನಹಳ್ಳಿ ಶ್ರೀನಿವಾಸ್ ವಿವರಿಸಿದರು. ಮತ್ತೊಬ್ಬ ಹಿರಿಯ ಹೋರಾಟಗಾರರಾದ ಎಂ.ರಾಮಯ್ಯ ಮಾತನಾಡಿ ತುಮಕೂರು ಜಿಲ್ಲೆಯ ದಲಿತಪರ ಹೋರಾಟಕ್ಕೆ ಮೆರುಗು ನೀಡಿದವರು ಧೀಮಂತ ನಾಯಕ ದಿವಂಗತ ಎಂ.ಸಿ ರಾಜು ರವರು ಇಂದು ನಮ್ಮೊಟ್ಟಿಗೆ ಇಲ್ಲ, ಆದರೆ ಅವರ ಆದರ್ಶಗಳು ಹಾಗೂ ಹೋರಾಟ ಮನೋಭಾವವನ್ನು ಎಲ್ಲರೂ ಅನುಸರಿಸಬೇಕು ಅವರು ದೀನ ದಲಿತರ ಪರವಾಗಿ ಅದೇಷ್ಟೋ ಧ್ವನಿ ಎತ್ತಿದ್ದಾರೆ, ಅವರನ್ನು ಮಾದರಿಯಾಗಿ ನಾವುಗಳು ಅನುಸರಿಸಬೇಕು ಎಂದು. ಮತ್ತೊಬ್ಬ ಹಿರಿಯ ಮುಖಂಡರು ಹಾಗೂ ಜಯನುಡಿ ಪತ್ರಿಕೆ ಸಂಪಾದಕರಾದ ಜಯನುಡಿ ಜಯಣ್ಣ ಮಾತನಾಡಿ ಬಾಬಾ ಸಾಹೇಬರ ವಿಚಾರಧಾರೆಗಳನ್ನು ಕಾಲಕಾಲಕ್ಕೆ ಸ್ಮರಿಸಿಕೊಂಡು. ವಿದ್ಯೆಗೆ ಒತ್ತು ನೀಡಿದರೆ ನಮ್ಮ ಜೀವನ ಪಾವನವಾಗುತ್ತಿದೆ ಅದೂ ಅಲ್ಲದೆ ಪ್ರತಿಯೊಬ್ಬ ದಲಿತ ಮುಖಂಡರು…
ಕೊರಟಗೆರೆ: ತಾಲೂಕಿನ ತಣ್ಣೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ಆಂಜನೇಯಸ್ವಾಮಿ ಸೇವಾ ಟ್ರಸ್ಟ್ ಹಾಗೂ ಸಪ್ತಗಿರಿ ಆಸ್ಪತ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿಗೊಳಿಸಿದರು. ಟ್ರಸ್ಟ್ ಅಧ್ಯಕ್ಷ ಗೋವಿಂದಯ್ಯ ಮಾತನಾಡಿ ಗ್ರಾಮೀಣ ಭಾಗದಲ್ಲಿ ಬಡತನದಿಂದ ಅನೇಕ ಯುವಕರು ಹಾಗೂ ವಯೋವೃದ್ಧರು ಪಟ್ಟಣಕ್ಕೆ ಹೋಗಿ ಚಿಕಿತ್ಸೆ ಪಡೆಯಲು ಆಗದಂತಹ ಪರಿಸ್ಥಿತಿ ಇನ್ನೂ ಹಳ್ಳಿಗಳಲ್ಲಿ ಇದ್ದಾರೆ. ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯದ ರಕ್ಷಣೆ ಬಹು ಮುಖ್ಯ ಆದ್ದರಿಂದ ನಮ್ಮ ಸೇವಾ ಟ್ರಸ್ಟ್ ಪದಾಧಿಕಾರಿಗಳು ನಮ್ಮ ತಾಲೂಕಿನ ಬಡ ಜನರಿಗೆ ಅನುಕೂಲವಾಗಲಿ ಎಂದು ಈ ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದೇವೆ ಇದರ ಸದುಪಯೋಗವನ್ನು ಪಡೆದುಕೊಂಡು ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಪ್ತಗಿರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಧನುಷ್ ಮಾತನಾಡಿ , ನಮ್ಮ ಆಸ್ಪತ್ರೆಯ ನುರಿತ ವೈದ್ಯಾಧಿಕಾರಿಗಳು ತಣ್ಣೇನಹಳ್ಳಿ ಗ್ರಾಮಕ್ಕೆ ಬಂದಿದ್ದಾರೆ. ನಿಮ್ಮ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಆಂಜನೇಯಸ್ವಾಮಿ ಸೇವಾ ಟ್ರಸ್ಟ್ನ ಮುಖಂಡರು…
ಕೊರಟಗೆರೆ: ನಾನು ಕೊರಟಗೆರೆ ಕ್ಷೇತ್ರದಲ್ಲಿ ಶಾಸಕನಾಗಿ ನೂರು ವರ್ಷ ಇರೋದಿಲ್ಲ. ಆದರೇ ನಾನು ಮಾಡಿದ ಅಭಿವೃದ್ಧಿ ಕೆಲಸಗಳೇ ಶಾಶ್ವತವಾಗಿ ಉಳಿಯುತ್ತೇ. ೨೦೨೬ರ ಮಳೆಗಾಲಕ್ಕೆ ಎತ್ತಿನಹೊಳೆ ನೀರು ತುಮಕೂರಿಗೆ ಬರುತ್ತೇ. ಕೊರಟಗೆರೆ ಕ್ಷೇತ್ರದ ೭೦ಕೆರೆಗಳಿಗೆ ಹರಿಯುತ್ತೇ. ರೈತ ಸಮುದಾಯದ ಅಭಿವೃದ್ಧಿಗೆ ನಾನು ಯಾವ ತ್ಯಾಗಕ್ಕೂ ಸಿದ್ದನಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಭರವಸೆ ನೀಡಿದರು. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಎತ್ತಿನಹೊಳೆ ಯೋಜನೆಯಿಂದ ಭೂ ಸ್ವಾಧೀನವಾದ ಜಮೀನಿನ ರೈತರಿಗೆ ಪರಿಹಾರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೆಡಿಎಸ್ ಮತ್ತು ಬಿಜೆಪಿ ನಾಯಕರ ಹುನ್ನಾರದಿಂದ ಬೈರಗೊಂಡ್ಲು ಬಫರ್ಡ್ಯಾಂ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರ ಆಯ್ತು. ರೈತರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸವನ್ನು ವಿರೋಧ ಪಕ್ಷದವ್ರು ಮಾಡಿದ್ರು. ರೈತರ ಜೊತೆ ಅಧಿಕಾರಿವರ್ಗ ಸಭೆ ನಡೆಸಿ ಮನವೋಲಿಸಲು ಪ್ರಯತ್ನಪಟ್ರು. ನಾನು ೩ಸಲ ರೈತ ಮುಖಂಡರ ಸಭೆ ನಡೆಸಿ ಮನವಿ ಮಾಡಿದ್ರು ಪ್ರಯೋಜನಾ ಆಗದೇ ಈಗ ನಮ್ಮ ರೈತರಿಗೆ ನಷ್ಟವಾಯ್ತು ಎಂದರು. ಎತ್ತಿನಹೊಳೆ ಯೋಜನೆಯಡಿ…
ತುಮಕೂರು: ಇಂದಿನ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ಪರಿಚಯದಿಂದ ಸಾಕಷ್ಟು ಅನುಭವಗಳು, ಉತ್ತಮ ಸಂಪರ್ಕ ಹಾಗೂ ಉದ್ಯೋಗಾವಕಾಶಗಳ ಲಭ್ಯತೆ ಹೆಚ್ಚಾಗಿರುತ್ತದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ ಅಶೋಕ್ ಮೆಹ್ತ ಅಭಿಪ್ರಾಯ ಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದ ಚಾಣುಕ್ಯ ಬ್ಲಾಕ್ ಲ್ಲಿ ನಡೆದ ಹಳೇ ವಿದ್ಯಾರ್ಥಿಗಳ ಸಮಾಗಮ ಕೂಟ “ಸೇತುಬಂದ-೨೦೨೫” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಹಳೆ ವಿದ್ಯಾರ್ಥಿಗಳು ಪರಿಚಯವನ್ನು ಇಂದಿನ ವಿದ್ಯಾರ್ಥಿಗಳು ಮಾಡಿಕೊಳ್ಳಿ, ಅವರ ಸಂಪರ್ಕವನ್ನು ನಿರಂತರವಾಗಿ ಇಟ್ಟುಕೊಳ್ಳಿ ಇವರೊಂದಿಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಿ ಈ ಮೂಲಕ ಕಾಲೇಜಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮವಾದ ಅವಕಾಶಗಳು ದೊರೆಯುತ್ತದೆ. ಹಳೇ ವಿದ್ಯಾರ್ಥಿಗಳು ಕಾಲೇಜಿನೊಂದಿಗೆ ಯಾವಾಗಲೂ ನಿಕಟ ಸಂಪರ್ಕವನ್ನು ಹೊಂದುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ಸಹಕರಿಸುತ್ತಿರಬೇಕು ಎಂದು ತಿಳಿಸಿದರು. ಎಸ್ ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಎಸ್ ರವಿಪ್ರಾಕಾಶ್ ಮಾತನಾಡಿ ಹಳೇ ವಿದ್ಯಾರ್ಥಿಗಳು ಕಾಲೇಜಿನ ರಾಯಭಾರಿಗಳಿದ್ದ ಹಾಗೆ ಹಳೇ ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಎತ್ತರಕ್ಕೆ ಏರುತ್ತಿದ್ದರೆ ಕಾಲೇಜಿಗೆ…
ಪಾವಗಡ: ಪಟ್ಟಣದ ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವದ ಅಂಗವಾಗಿ ಏರ್ಪ ಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಸಿದ್ದ ನಂಜನಗೂಡು ನಂಜು0ಡೇ ಶ್ವರಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ನೀಲಕಂಠ ಧೀಕ್ಷಿತ್ ಭಾಗಿಯಾಗಿ ಜಪಾನಂದ ಶ್ರೀಗಳನ್ನು ಗೌರವಿಸಿ ಆಶೀರ್ವಾದ ಪಡೆದರು. ಗುರುವಾರ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವದ ಅಂಗವಾಗಿ ಆಶ್ರಮದಲ್ಲಿ ಭಕ್ತರಿಗೆ ಶ್ರೀರುದ್ರಪ್ರಶ್ನ ಹಾಗೂ ಚಮಕ ಪಾಠಗಳ ಭೋಧನೆಯ ಅಂತಿಮಘಟ್ಟದಲ್ಲಿ ಶ್ರೀನಂಜುAಡೇಶ್ವರ ಸ್ವಾಮಿಯ ವಸ್ತç, ಬಿಲ್ವಪತ್ರೆ ಹಾಗೂ ಪ್ರಸಾದಗಳೊಂದಿಗೆ ಆಗಮಿಸಿದ ನೀಲಕಂಠ ಧೀಕ್ಷಿತ್ ರವರು ಆಶ್ರಮದ ಬೆಳವಣಿಗೆ, ನಿರಂತರ ಸೇವಾಕಾರ್ಯಗಳು ಹಾಗೂ ಮತ್ತಿತರ ವಿಷಯಗಳ ಕುರಿತು ಸುಧೀರ್ಘ ಮಾತುಕತೆ ನಡೆಸಿದರು. ಇದೇ ವೇಳೆ ಶ್ರೀರುದ್ರ ಪಾಠವನ್ನು ನಂಜು0ಡೇಶ್ವರಸ್ವಾಮಿ ಪಾದಾರವಿಂದಗಳಿಗೆ ಮಸರ್ಪಿಸಬೇಕೆಂಬ ಬಯಕೆ ವ್ಯಕ್ತಪಡಿಸಿದ ಶ್ರೀಗಳಿಗೆ ಹೊಸವರ್ಷದ ಏಪ್ರಿಲ್ ೧೮ರಂದು ನಂಜನಗೂಡಿನ ಶಂಕರಮಠದ ಸಹಕಾರದಿಂದ ದೇವಸ್ಥಾನದಲ್ಲಿ ಸಲಕ ಏರ್ಪಾಟು ಮಾಡುವ ಭರವಸೆಯೊಂದಿಗೆ ಪ್ರಕಟಣೆ ನೀಡಿದರು. ಈ ವೇಳೆ ಎಸ್ಎಸ್ಕೆ ಸಂಘದ ಅಧ್ಯಕ್ಷ ಜಿ.ಎಸ್.ಅನಿಲ್ ಕುಮಾರ್, ಜಗದೀಶ್, ರಾಮನಾಥ್, ರಾಮಮೂರ್ತಿ, ಚೈತ್ರ, ಭರತ್, ಸ್ಥಳೀಯ ಅರ್ಚಕ ಸೋಮಸುಂದರA…
ತುಮಕೂರು: ಸಣ್ಣ ಉದ್ದಿಮೆದಾರರೊಬ್ಬರಿಗೆ ಸಹಾಯ ಧನ ಮಂಜೂರು ಮಾಡಲು ೧.೧೫ ಲಕ್ಷ ಲಂಚದ ಹಣ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಸಹಾಯಕ ಎನ್.ಎಸ್.ಪ್ರಸಾದ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಒಟ್ಟು ೧.೨೫ ಲಕ್ಷ ಲಂಚಕ್ಕೆ ಒತ್ತಾಯಿಸಿದ್ದು. ಮುಂಗಡವಾಗಿ ೧೦ ಸಾವಿರ ಹಣ ಪಡೆದುಕೊಂಡಿದ್ದರು. ಗುರುವಾರ ಮಧ್ಯಾಹ್ನ ಉಳಿದ ೧.೧೫ ಲಕ್ಷ ಹಣ ತೆಗೆದುಕೊಳ್ಳುವ ಸಮಯದಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ. ನಗರದ ವಿಜಯನಗರ ಬಡಾವಣೆಯ ಎಂ.ಎಸ್.ಚನ್ನಬಸವೇಶ್ವರ ಅವರು ತಾಲ್ಲೂಕಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಶಿವಲಿಂಗ ಇಂಡಸ್ಟ್ರೀಸ್ ಸ್ಥಾಪಿಸಿ ಸಣ್ಣ ಉದ್ದಿಮೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಎಲೆಕ್ಟ್ರಿಕಲ್ ಕಂಟ್ರೋಲ್ ಪ್ಯಾನಲ್ ತಯಾರಿಸುತ್ತಿದ್ದಾರೆ. ಮೊದಲ ಬಾರಿಗೆ ಸಣ್ಣ ಉದ್ದಿಮೆ ಆರಂಭಿಸಿದವರಿಗೆ ರಾಜ್ಯ ಸರ್ಕಾರದಿಂದ ಸಹಾಯ ಧನ ನೀಡಲಾಗುತ್ತಿದೆ. ಹಾಗಾಗಿ ಸಹಾಯ ಧನ ಮಂಜೂರು ಮಾಡುವಂತೆ ಕೋರಿ ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ) ಜಂಟಿ ನಿರ್ದೇಶಕರಿಗೆ ಅರ್ಜಿ ಸಲ್ಲಿಸಿದ್ದರು. ಚನ್ನಬಸವೇಶ್ವರ ಅವರಿಗೆ ೧೮.೭೫ ಲಕ್ಷ ಸಹಾಯ ಧನ ಮಂಜೂರು ಮಾಡಬೇಕಿತ್ತು. ಈ…











