ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಜೆ.ಸಿ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಪಾಳ್ಯದ ಶ್ರೀ ಸಿದ್ದರಾಮೇಶ್ವರ ಕಿವುಡು ಮಕ್ಕಳ ವಸತಿಶಾಲೆಯಲ್ಲಿ ಜೇನು ಕೃಷಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊ ಳ್ಳಲಾಯಿತು. ಬೆಂಗಳೂರಿನ ಜಿಕೆವಿಕೆ ಜೇನುಕೃಷಿ ವಿಭಾಗ ಹಾಗೂ ಬಿ.ಪಾಳ್ಯದ ಶ್ರೀಸಿದ್ದರಾಮೇಶ್ವರ ಕಿವುಡು ಮಕ್ಕಳ ವಸತಿ ಶಾಲೆಯ ಸಹಯೋಗದಲ್ಲಿ ನಡೆದ ಜೇನು ಕೃಷಿ ತರಬೇತಿ ಕಾರ್ಯಾಗಾರದಲ್ಲಿ ಬೆಂಗಳೂರಿನ ಜಿಕೆವಿಕೆಯ ಕೃಷಿ ವಿಜ್ಞಾನಿ ಕೆ.ಟಿ. ವಿಜಯ್ಕುಮಾರ್ ಮಾತನಾಡಿ ನಮ್ಮಲ್ಲಿ ನಾಲ್ಕು ವಿಧದ ಜೇನುಹುಳುಗಳಿದ್ದು, ಅವುಗಳಲ್ಲಿ ತುಡುವೆ ಹಾಗೂ ವೆಲ್ಲಿಫ್ರೆರ್ ಜೇನುಗಳು ಸಾಕಲಿಕ್ಕೆ ಯೋಗ್ಯವಾಗಿದೆ. ಜೇನುಹುಳುಗಳ ಗುಣಸ್ವಭಾವ, ಜೀವನಶೈಲಿ ಅರಿತಾಗ ಜೇನುಕೃಷಿ ಮಾಡಲು ಸಾಧ್ಯ, ಜೇನು ಸಾಕಾಣಿಕೆಯಿಂದ ಪರಾಗಸ್ಪರ್ಷ ಕ್ರಿಯೆಯು ಹೆಚ್ಚಿ ರೈತರ ಉತ್ಪನ್ನಗಳು ಹೆಚ್ಚಿನ ಇಳುವರಿ ನೀಡಲಿದೆ ಎಂದರು. ಕೃಷಿ ವಿಜ್ಞಾನಿ ಕೆ.ಎಸ್. ಜಗದೀಶ್ ಮಾಹಿತಿ ನೀಡಿ ಜೇನು ಸಾಕಾಣಿಕೆಯಲ್ಲಿ ಅದರ ಮೌಲ್ಯವರ್ಧನೆಗೆ ಅವಕಾಶವಿದೆ, ಇದರಿಂದ ಉಪ ಉತ್ಪನ್ನಗಳಾದ ಬಿ.ವಿನಮ್, ರಾಯಲ್ಜೆಲ್ಲಿ ಹಾಗೂ ಲಿಪ್ಸಿ÷್ಟಕ್ ಬಾಮ್ ತಯಾರಿಸಿ ಲಾಭಗಳಿಸಬಹುದೆಂದರು. ತಾಲೂಕಿನ ತೊರೆಮಾವಿನಲ್ಲಿ ಜೇನುಕೃಷಿ ಮಾಡಿ ಯಶಸ್ವಿಯಾಗಿರುವ ರೈತ ಪ್ರಭಾಕರ್ ಮಾತನಾ…
Author: News Desk Benkiyabale
ತುಮಕೂರು: ವಿಶ್ವವಿದ್ಯಾನಿಲಯವೆಂದರೆ ಕೇವಲ ಜ್ಞಾನವನ್ನು ವರ್ಗಾಯಿಸುವ ಕೇಂದ್ರವಲ್ಲ. ಅದು ಸುತ್ತಲಿನ ಸಮಾಜ ಹಾಗೂ ರಾಷ್ಟçದ ಭಾವನೆಗಳನ್ನು ಪ್ರತಿಬಿಂಬಿಸಬೇಕು. ಸಮಕಾಲೀನ ಜಗತ್ತಿನ ಅಗತ್ಯಗಳಿಗೆ ಸ್ಪಂದಿಸಬೇಕು ಎಂದು ಕುವೆಂಪು ವಿಶ್ವವಿದ್ಯಾನಿಲಯ ಹಾಗೂ ಗುಜರಾತ್ನ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್.ಎ. ಬಾರಿ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯ ಗುರುವಾರ ಆಯೋಜಿಸಿದ್ದ ೨೧ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ತಂತ್ರಜ್ಞಾನ ಬಹುವಾಗಿ ಬೆಳೆದಿದೆ. ನಾವೀಗ ಜಾಗತಿಕ ಮಟ್ಟದಲ್ಲೂ ಅಲ್ಲ, ಜಗತ್ತಿನಾಚೆಗಿನ ಬ್ರಹ್ಮಾಂಡದ ಕುರಿತು ಯೋಚಿಸಬೇಕಾಗಿದೆ ಎಂದರು. ಉನ್ನತ ಶಿಕ್ಷಣರಂಗದಲ್ಲಿ ಭಾರತದ ವಿಶ್ವವಿದ್ಯಾನಿಲಯಗಳ ಪಾತ್ರ ಏನು ಎಂದು ನಾವೀಗ ಪ್ರಶ್ನಿಸಿಕೊಳ್ಳಬೇಕಾಗಿದೆ. ದೇಶದಲ್ಲಿ ೧೬೦೦ ವಿಶ್ವವಿದ್ಯಾನಿಲಯಗಳಿವೆ. ಜಾಗತಿಕ ರ್ಯಾಂಕಿAಗ್ನಲ್ಲಿ ಶ್ರೇಷ್ಠ ೧೦೦ ವಿವಿಗಳ ಪೈಕಿ ಭಾರತದ ಒಂದು ವಿಶ್ವವಿದ್ಯಾನಿಲಯವೂ ಇಲ್ಲದಿರುವುದು ಯೋಚಿಸಬೇಕಾದ ಸಂಗತಿ ಎಂದರು. ಸಾಮಾನ್ಯರAತೆ ಇರುವ ವಿದೇಶಿ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ನೊಬೆಲ್ ಪ್ರಶಸ್ತಿ ಪಡೆದುಕೊಳ್ಳುತ್ತಾರೆ. ಏಕೆಂದರೆ ನೈಜ ಹೊಸ ಸಂಶೋಧನೆಗಳನ್ನು ಕೈಗೊಳ್ಳುತ್ತಾರೆ. ನಮ್ಮಲ್ಲಿ ಮಾಡಿದ ಸಂಶೋಧನೆಗಳದ್ದೇ ಪುನರಾವರ್ತನೆ ನಡೆಯುತ್ತದೆ. ಇದರಿಂದಾಗಿ ಭಾರತದ ವಿವಿಗಳಲ್ಲಿರುವ ಪ್ರಾಧ್ಯಾಪಕರಿಗೆ…
ತುಮಕೂರು: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ೨೦೧೩ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರಿ ಕಚೇರಿ ಮತ್ತು ಅಧೀನ ಕಚೇರಿ, ಸಾರ್ವಜನಿಕ ಉದ್ದಿಮೆಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಗಳನ್ನು ರಚಿಸಬೇಕೆಂದು ಕಚೇರಿ ಮುಖ್ಯಸ್ಥರಿಗೆ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೂಚನೆ ನೀಡಿದ್ದಾರೆ. ರಚಿಸಲಾದ ದೂರು ನಿವಾರಣಾ ಸಮಿತಿಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇ ಮಾಡುವುದು ಕಚೇರಿಯ ಮುಖ್ಯಸ್ಥರ ಕರ್ತವ್ಯವಾಗಿರುತ್ತದೆ. ಕಚೇರಿ ಮುಖ್ಯಸ್ಥರು, ಕಚೇರಿ ಮತ್ತು ಅಧೀನ ಕಚೇರಿ/ಖಾಸಗಿ ಸಂಸ್ಥೆ/ಕಾರ್ಖಾನೆ, ಶಾಲಾ-ಕಾಲೇಜುಗಳಲ್ಲಿ ೧೦ಕ್ಕಿಂತ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚನೆ ಮಾಡಬೇಕು. ಸಮಿತಿ ರಚನೆ ಮಾಡಿದ ಮಾಹಿತಿಯನ್ನು SHE-Box ವೆಬ್ಸೈಟ್ ವಿಳಾಸ: hಣಣಠಿs://shebox.ತಿಛಿಜ.gov.iಟಿ/sigಟಿiಟಿನಲ್ಲಿ ಆಪ್ಲೋಡ್ ಮಾಡಲು ಕ್ರಮವಹಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಕಚೇರಿ, ನಿಗಮ-ಮಂಡಳಿ, ಸಾರ್ವಜನಿಕ ಉದ್ದಿಮೆ, ಕಾರ್ಖಾನೆ, ಗಾರ್ಮೆಂಟ್ಸ್, ವಿಶ್ವವಿದ್ಯಾಲಯ, ಶಾಲಾ-ಕಾಲೇಜು, ಸಂಘ-ಸAಸ್ಥೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ, ಖಾಸಗಿ ಸಂಸ್ಥೆ, ಅಂಚೆ ಕಚೇರಿ,…
ತುಮಕೂರು: ಕೇಂದ್ರ ರ್ಕಾರದ ಶಿಕ್ಷಣ ಇಲಾಖೆಯಡಿಯಲ್ಲಿ ಆಯಾ ರಾಜ್ಯಗಳಲ್ಲಿ ತಾಂತ್ರಿಕ ಶಿಕ್ಷಣವನ್ನು ಕಲಿಸುವ ಮತ್ತು ಬಲಪಡಿಸುವ ಸಲುವಾಗಿ ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಕರ್ಯಕ್ರಮದಡಿಯಲ್ಲಿ ಅತಿ ಹೆಚ್ಚು ವಿದ್ಯರ್ಥಿಗಳು ನೋಂದಾಯಿಸಿ-ಕಲಿಸುವಲ್ಲಿ ಸಾಧನೆ ಮಾಡಿದ ಸಾಹೆ ವಿಶ್ವವಿದ್ಯಾಲಯಕ್ಕೆ ಕೇಂದ್ರ ರ್ಕಾರದ ಶಿಕ್ಷಣ ಇಲಾಖೆ ಕೊಡಮಾಡುವ ೨೦೨೫ನೇ ರ್ಷದ ‘ಪ್ರೋಸ್ಪೆಕ್ಟ್ ರಾಷ್ಟ್ರೀಯ ಪ್ರಶಸ್ತಿ’ ಗೆ ಮತ್ತೊಮ್ಮೆ ಪಾತ್ರವಾಗಿದೆ. ಪ್ರಶಸ್ತಿ ಪಡೆದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಅದರಲ್ಲೂ ರ್ನಾಟಕದ ಬೆರಳೆಣಿಕೆಯಷ್ಟು ಕಾಲೇಜುಗಳಲ್ಲಿ ಸಿದ್ದರ್ಥ ಇಂಜಿನಿಯರಿಂಗ್ ಕಾಲೇಜು ಕೂಡ ಒಂದಾಗಿದೆ. ಈ ಸಾಲಿನ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕರ್ಯಕ್ರಮ ದಡಿಯಲ್ಲಿ ಸುಮಾರು ೧೩೦೦ ವಿದ್ಯರ್ಥಿಗಳು ನೋಂದಾಯಿಸಿ ಆನ್ಸೆನ್ ಮೂಲಕ ಪರೀಕ್ಷೆಯಲ್ಲಿ ಭಾಗವಹಿಸಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಶ್ರೀ ಸಿದ್ದರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತಿ ಹೆಚ್ಚಿನ ವಿದ್ಯರ್ಥಿಗಳು ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಯೋಜನೆಯಲ್ಲಿ ಭಾಗವಹಿಸಿರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ಖರಗಪುರದ ಐಐಟಿಯಲ್ಲಿ ನಡೆದ ರಾಷ್ಟ್ರೀಯ ಕರ್ಯಕ್ರಮದಲ್ಲಿ ಸಾಹೇ ನೋಡಲ್ ಅಧಿಕಾರಿ ಡಾ. ಪ್ರವೀಣ್…
ತುಮಕೂರು: ಮಹಾಡ್ ಕೆರೆ ನೀರು ಮುಟ್ಟಿದ ದಿನ, ದಲಿತರ ಅರಿವಿನ ಪ್ರಜ್ಞೆ ವಿಸ್ತರಣೆಯಾದ ದಿನ ಎಂದು ತುಮಕೂರು ವಿವಿ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ಅಭಿಪ್ರಾಯಪಟ್ಟರು. ತುಮಕೂರು ನಗರದ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ರ್ನಾಟಕ ದಲಿತ ಸಂರ್ಷ ಸಮಿತಿ(ರಿ), ಅಂಬೇಡ್ಕರ್ ವಾದ ತುಮಕೂರು ಜಿಲ್ಲಾ ಸಮಿತಿ, ರಾಜ್ಯ ಸಮಿತಿಯ ಸದಸ್ಯರಾದ ಕುಂದೂರು ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಭಾರತದ ಅಸ್ಪೃಷ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹ ನೆನಪು ಕರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾಡ್ ಸತ್ಯಾಗ್ರಹದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ರಕ್ತ ರಹಿತ ಕ್ರಾಂತಿಯ ಮೂಲಕ ಪ್ರಕೃತಿಯ ಮೇಲೆ ದಲಿತ ಸಮುದಾಯದ ಹಕ್ಕು ಪ್ರತಿಪಾದಿಸಿದರು. ಭಾರತದ ದಲಿತರ ಪಾಲಿಗೆ ೧೯೨೭ರ ಮರ್ಚ್ ೨೦ ರಂದು ಮಹಾಡ್ನ ಚೌದರ ಕೆರೆ ನೀರು ಮುಟ್ಟುವುದು ಮತ್ತು ಡಿಸೆಂಬರ್ ೨೭ ರಂದು ಮನುಸೃತಿಯನ್ನು ಸುಟ್ಟು ಹಾಕುವ ಮೂಲಕ ಭೌತಿಕವಾಗಿ ಮತ್ತು ಬೌದ್ಧಿಕವಾಗಿ ದಲಿತರನ್ನು ಎಚ್ಚರಿಸಿದ ರ್ಷವಾಗಿದೆ.ಈ ಘಟನೆ ನಡೆದು ಸುಮಾರು ೯೮ ರ್ಷಗಳು…
ತುಮಕೂರು ಮತ್ತು ಬೆಂಗಳೂರು ಮಧ್ಯಭಾಗದಲ್ಲಿ ದೇವರಹೊಸಹಳ್ಳಿ ನೆಡೆದ ಇತಿಹಾಸ ಪ್ರಸಿದ್ಧ , ಭದ್ರಕಾಳಿ ಅಮ್ಮ ಸಮೇತ ಶ್ರೀ ವೀರಭದ್ರಸ್ವಾಮಿಯ ಜಾತ್ರೆ ರಥೋತ್ಸವದಲ್ಲಿ ಸಹಸ್ಥ್ರರು ಭಕ್ತಾದಿಗಳ ಸಮ್ಮಖದಲ್ಲಿ ಅತ್ಯಂತ ವಿಜೃಭಣೆಯಿಂದ ನಡೆಯಿತು, ನೆರೆದಿದ್ದ ಜನರಿಗೆ ಪಾನಕ, ಮಜ್ಜಿಗೆ,ಹೆಸರುಬೇಳೆ ಮತ್ತು ಪ್ರಸಾದ ವಿನಿಯೋಗ ನೀಡಲಾಗಿತ್ತು.
ತುರುವೇಕೆರೆ: ತಾಲ್ಲೂಕಿನ ಸೂಳೇಕೆರೆ ಗ್ರಾಮದ ಇತಿಹಾಸ ಪ್ರಸಿದ್ದ ಭದ್ರಕಾಳಿ ಮತ್ತು ವೀರಭದ್ರಸ್ವಾಮಿಯ ಅಗ್ನಿಕೊಂಡ ಜಾತ್ರಾ ಮಹೋತ್ಸವವು ಸಾವಿ ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಬೆಳ ಗಿನ ಜಾವದಲ್ಲಿ ಬಹಳ ವಿಜೃಂಭಣೆಯಿAದ ನಡೆ ಯಿತು. ಅಗ್ನಿಕೊಂಡದ ಅಂಗವಾಗಿ ಮಂಗಳವಾರ ಸಂಜೆ ಮೂಲದೇವರಿಗೆ ಅಕ್ಕಿಪೂಜೆ ಜರುಗಿತು. ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ಕುಂಕುಮಾರ್ಚನೆಯೊAದಿಗೆ ಕಳಸ ಪೂಜೆ, ಗಂಗಾಪೂಜೆ, ಮಡಿ ಸಂತರ್ಪಣೆ ನೆರವೇರಿತು. ವೀರಭದ್ರ ಸ್ವಾಮಿಗೆ ಬೆಳ್ಳಿ ಕಿರೀಟಧಾರಣೆಯನ್ನು ಧಾರ್ಮಿಕ ವಿದಿವಿಧಾನಗಳೊಂದಿಗೆ ಭಕ್ತರು ನೆರ ವೇರಿಸಿದರು. ನಂತರ ವಿದ್ಯುತ್ ದೀಪಗಳಿಂದ ಅಲಂಕೃತವಾದ ಮುತ್ತಿನ ಪಲ್ಲಕ್ಕಿಯಲ್ಲಿ ದೇವರನ್ನು ಕೂರಿಸಿ ಧ್ವಜಕುಣಿತ, ಲಿಂಗದ ವೀರರ ಕುಣಿತ, ವೀರಗಾಸೆ, ಕಹಳೆವಾದ್ಯ ಸೇರಿದಂತೆ ವಿಭಿನ್ನ ಜಾನಪದ ಕಲಾ ತಂಡಗಳೊAದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯನ್ನು ಅದ್ದೂ ರಿಯಿಂದ ಸಾಗಿಸಲಾಯಿತು. ಬುಧವಾರ ಮುಂಜಾನೆ ೫ ಗಂಟೆಗೆ ಅಗ್ನಿಕೊಂಡ ಪ್ರಾರಂಭವಾಗಿ ಮೊದಲು ವೀರಭ ದ್ರಸ್ವಾಮಿ ಹಾಗೂ ಭದ್ರಕಾಳಿದೇವಿಯನ್ನು ಸಾವಿರಾರು ಭಕ್ತರ ಜಯಘೋಷದೊಂದಿಗೆ ಅಗ್ನಿಕೊಂಡ ಹಾಯಿಸಲಾಯಿತು. ಅಗ್ನಿಕೊಂಡ ಮಹೋತ್ಸವಕ್ಕೆ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್…
ತುಮಕೂರು: ಜಿಲ್ಲೆಯಲ್ಲಿ ೨೦೨೪-೨೫ನ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಇಂದಿನಿAದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ತುಮಕೂರು ಶೈಕ್ಷಣಿಕ ಹಾಗ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಲಲಿತವಾಗಿ ನಡೆಯಿತು. ಜಿಲ್ಲೆಯ ತುಮಕೂರು ಶೈಕ್ಷಣಿಕ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು ೩೫,೬೩೬ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸುಸೂತ್ರವಾಗಿ ಬರೆದಿದ್ದಾರೆ. ತುಮಕೂರು (ದ) ಶೈಕ್ಷಣಿಕ ಜಿಲ್ಲೆಯಿಂದ ೧೨,೨೨೭ ವಿದ್ಯಾರ್ಥಿಗಳು, ೧೦,೨೪೬ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ೨೨,೪೭೩ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ೬,೮೯೭ ವಿದ್ಯಾರ್ಥಿಗಳು, ೬,೨೬೬ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ೧೩, ೧೬೩ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಸೌಲಭ್ಯಗಳನ್ನು ಒದಗಿಸಲಾಗಿದೆ. ಜಿಲ್ಲೆಯಲ್ಲಿ ತುಮಕೂರು (ದ) ೮೦ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ೪೯ ಸೇರಿ ಒಟ್ಟು ೧೨೯ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇಂದು ಬೆಳಿಗ್ಗೆ ೮ ಗಂಟೆಯಿAದಲೇ ವಿದ್ಯಾರ್ಥಿ ಗಳು ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳ…
ತುಮಕೂರು: ಕಣ್ಣು ದೇಹದ ಬಹು ಮುಖ್ಯ ಅಂಗ,ಅದನ್ನು ಕಾಲ ಕಾಲಕ್ಕೆ ಸರಿಯಾಗಿ ಪರೀಕ್ಷೆ ನಡೆಸಿ ಉತ್ತಮ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು,ವರ್ಷಕ್ಕೆ ಒಮ್ಮೆಯಾದರೂ ಆರೋ ಗ್ಯವನ್ನು ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಪಡೆಯಬೇಕು,ಆರೋಗ್ಯವೇ ಭಾಗ್ಯ ಎಂದು ೩೧ನೇ ವಾರ್ಡಿನ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಸಿ.ಎನ್.ರಮೇಶ್ ರವರು ತಿಳಿಸಿದರು. ಶುಕ್ರವಾರ ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯಲ್ಲಿರುವ ಜಿಲ್ಲಾ ಬ್ರಾಹ್ಮಣಸಭಾದ ವಿಪ್ರಭವನದಲ್ಲಿ ಸಂಕಲ್ಪ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಎನ್.ಜಿ.ಓ ಮತ್ತು ವಾಸನ್ ಐ-ಕೇರ್ ಸಂಸ್ಥೆ ಇವರುಗಳು ಸಹಯೋಗದಲ್ಲಿ ಉಚಿತ ಕಣ್ಣು ಪರೀಕ್ಷೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಂಕಲ್ಪ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಎನ್.ಜಿ.ಓದ ಅಧ್ಯಕ್ಷರಾದ ರಮೇಶ್ ರವರು ಮಾತನಾಡುತ್ತಾ ಮನುಷ್ಯನಿಗೆ ಹಣ ಎಷ್ಟಿದ್ದರೂ ಸಾಲುವುದಿಲ್ಲ,ಒಮ್ಮೆ ಆರೋಗ್ಯ ಕೈ ಕೊಟ್ಟರೆ ಹಣ ಯಾವ ಪ್ರಯೋಜನಕ್ಕೂ ಬಾರದು,ಎಲ್ಲರೂ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕೆಂದು ಸದುದ್ದೇಶದಿಂದ ನಮ್ಮ ಸಂಸ್ಥೆ ವತಿಯಿಂದ ಇಂದು ನಗರದ ಜನರಿಗೆ ಉಚಿತ ಕಣ್ಣು ತಪಾಸಣೆ,ವೈದ್ಯರ ಸಲಹೆ,ಆರೋಗ್ಯ ಶಿಬಿರವನ್ನು…
ತುಮಕೂರು: ಜಿಲ್ಲೆಯ ಶಿರಾ ನಗರದ ಕಲ್ಲುಕೋಟೆಯ ಸ್ಲಂ ಬೋರ್ಡ್ ಹಾಗೂ ಆಶ್ರಯ ಬಡಾವಣೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯಿAದ ಸರ್ವೆ ನಂಬರ್ ೧೦೩/೨Pಯ ೮ ಎಕರೆ ಜಾಗದಲ್ಲಿ ಉ೨ ಮಾದರಿಯ ೧೦೦೮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ಈ ಪೈಕಿ ೨೫೨ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು. ಆಶ್ರಯ ಬಡಾವಣೆಯಲ್ಲಿ ಸುಮಾರು ೪೦೦೦ ನಿವೇಶನಗಳ ಅಭಿವೃದ್ಧಿ ಕಾರ್ಯ ಪ್ರಗತಿ ಯಲ್ಲಿದ್ದು, ಶಿರಾ ನಗರದ ಕಲ್ಲುಕೋಟೆಯ ಸರ್ವೆ ನಂಬರ್ ೧೦೦ರ ೨೦ ಎಕರೆ ಜಾಗದಲ್ಲಿ ನಿವೇಶನಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳ ಲಾಗಿದೆ ಎಂದು ತಿಳಿಸಿದರಲ್ಲದೆ, ಶಿರಾ ತಾಲೂ ಕಿನ ಎಮ್ಮೇರಹಳ್ಳಿಯಲ್ಲಿ ೯೦ ಎಕರೆ ಜಾಗದಲ್ಲಿ ನಿವೇಶನಗಳನ್ನು ಅಭಿವೃದ್ಧಿ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಿರಾ ತಾಲೂಕಿನ ತಹ ಶೀಲ್ದಾರ್ ರೇಷ್ಮ ಹಾಗೂ ನಗರ ಸಭೆ ಆಯುಕ್ತ ರುದ್ರೇಶ್,…