Author: News Desk Benkiyabale

ತುಮಕೂರು ಅಕ್ಷರ ಕಲಿಕೆಯು ನಿಂತ ನೀರಾಗದೆ ಹರಿಯುವ ನೀರಿನಂತೆ ಮುಂದುವರೆಯುತ್ತಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಕೆ.ಬಿ.ಗೀತಾ ಅಭಿಪ್ರಾಯಪಟ್ಟರು. ಜಿಲ್ಲಾ ಕಾರಾಗೃಹ, ಲೋಕಶಿಕ್ಷಣ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಕಾರಾಗೃಹದ ಅನಕ್ಷರಸ್ಥ ಹಾಗೂ ಅರೆ ಅಕ್ಷರಸ್ಥ ಬಂಧಿಗಳಿಗಾಗಿ ಅಕ್ಟೋಬರ್ 2ರಂದು ಹಮ್ಮಿಕೊಂಡಿದ್ದ 2ನೇ ಹಂತದ ಸಾಕ್ಷರತಾ ಕಾರ್ಯಕ್ರಮ ಹಾಗೂ ಸಾಂಸ್ಕøತಿಕ ಮತ್ತು ಮನಃ ಪರಿವರ್ತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನವರಾತ್ರಿಯ ದೇವಿ ಸರಸ್ವತಿ ಪೂಜೆ ಸಂದರ್ಭದಲ್ಲಿ ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶುಭ ಸೂಚಕವಾಗಿದೆ ಎಂದರಲ್ಲದೆ, ಯಾವುದೋ ವಿಷಮ ಗಳಿಗೆಯಲ್ಲಿ ಕಾರಾಗೃಹ ವಾಸಿಗಳಾಗಿರುವ ನೀವು ಗಾಂಧೀಜಿ ಅವರ ಅಹಿಂಸಾ ತತ್ವಗಳನ್ನು ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕೆಂದು ತಿಳಿಸಿದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲಕ್ಷ್ಮೀಜನಾರ್ಧನ್ ಮಾತನಾಡಿ, ಅಕ್ಷರ ಕಲಿಕೆಯು ಒಂದು ಆಂದೋಲನವಾಗಬೇಕು. 21ನೆ ಶತಮಾನದಲ್ಲಿಯೂ ಜನರು ಇನ್ನೂ ಸಹಿ ಮಾಡದೆ ಹೆಬ್ಬೆಟ್ಟು ಹಾಕುತ್ತಿರುವುದು ದುರಂತ. ಈ ನಿಟ್ಟಿನಲ್ಲಿ ಎಲ್ಲರೂ ಅಕ್ಷರ ಕಲಿಯಲು…

Read More

ತುಮಕೂರು ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ 46ನೇ ವರ್ಷದ ಗಣೇಶಮೂರ್ತಿಯನ್ನು ಇಂದು ಬೆಳಿಗ್ಗೆ ತುಮಕೂರು ಅಮಾನಿಕೆರೆಯಲ್ಲಿ ಅದ್ದೂರಿ ತೆಪೆÇ್ಪೀತ್ಸವದೊಂದಿಗೆ ವಿಸರ್ಜಿಸಲಾಯಿತು. ನಗರದ ಸಿದ್ದಿವಿನಾಯಕ ಸಮುದಾಯ ಭವನದಲ್ಲಿ 46ನೇ ಗಣೇಶೋತ್ಸವದ ಅಂಗವಾಗದಿ 35 ದಿನಗಳ ಕಾಲ ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿ ವಿಸರ್ಜನಾ ಮಹೋತ್ಸವಕ್ಕೆ ವಿಜಯದಶಮಿಯಂದು ಸಂಜೆ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ವಿದ್ಯುಕ್ತ ಚಾಲನೆ ನೀಡಿದರು. ಅಲಂಕೃತ ವಾಹನದಲ್ಲಿ ಕೂರಿಸಿದ್ದ ಗಣೇಶಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಶ್ರೀಗಳು ವೈಭವದ ಗಣೇಶೋತ್ಸವದ ಮೆರವಣಿಗೆಗೆಯನ್ನು ಉದ್ಘಾಟಿಸಿದರು. ಮೆರವಣಿಗೆಯು ಸಾಗಿದ ರಸ್ತೆಯುದ್ದಕ್ಕೂ ನಾಸಿಕ್ ಡೋಲುಸ ಮಂಗಳವಾದ್ಯ, ಕೋಲಾಟ, ಸೋಮನ ಕುಣಿತ, ವೀರಗಾಸೆ, ಪೂಜಾ ಕುಣಿತ, ಪಟದ ಕುಣಿತ, ಡಂಕವಾದ್ಯ, ಚಂಡೆ ವಾದ್ಯ, ಚಿಟ್ಟಿ ಮೇಳದಂತಹ ಜನಪದ ಕಲೆಗಳ ಪ್ರದರ್ಶನ ಸೇರಿದಂತೆ ವಿವಿಧ ಜಾನಪದ ಕಲಾ ತಂಡದ ಆಕರ್ಷಕ ಪ್ರದರ್ಶನ ನೋಡುಗರ ಗಮನ ಸೆಳೆದವು. ವಿನಾಯಕ ನಗರದಿಂದ ಹೊರಟ ಗಣೇಶಮೂರ್ತಿಯ ಮೆರವಣಿಗೆಯು ಬಿ.ಹೆಚ್. ರಸ್ತೆ ಮೂಲಕ ರಾತ್ರಿ 8 ಗಂಟೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ…

Read More

ತುಮಕೂರು ನಗರದ ಮಹಾನಗರ ಪಾಲಿಕೆವತಿಯಿಂದ 1927ರಲ್ಲಿ ಸ್ವಾತಂತ್ರ ಹೋರಾಟಕ್ಕೆ ಜನರು ಪಾಲ್ಗೊಳ್ಳುವಂತೆ ಮಾಡಲು ರಾಷ್ಟ್ರಪಿತ ಮಹಾತ್ಮಗಾಂಧಿ ತುಮಕೂರಿಗೆ ಆಗಮಿಸಿ,ವಿಶ್ರಾಂತಿ ಪಡೆದಿದ್ದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಗಾಂಧಿ ಭವನದ ನವೀಕರಣಕ್ಕೆ ಸಂಸದ ಜಿ.ಎಸ್.ಬಸವರಾಜು, ಮೇಯರ್ ಶ್ರೀಮತಿ ಪ್ರಭಾವತಿ ಸುಧೀಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಶಾಸಕರಾದ ಜಿ.ಬಿ.ಜೋತಿಗಣೇಶ್,ಉಪಮೇಯರ್ ನರಸಿಂಹಮೂರ್ತಿ, ಪಾಲಿಕೆ ಸದಸ್ಯರಾದ ನಯಾಜ್, ಧರಣೇಂದ್ರಕುಮಾರ್, ಮನು,ನರಸಿಂಹರಾಜು,ರೂಪಶ್ರೀಶೆಟ್ಟಾಳಯ್ಯ, ಶ್ರೀಮತಿ ಗಿರಿಜಾ ಧನಿಯಕುಮಾರ್,ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಇಇ ಶ್ರೀಮತಿ ಆಶಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ತುಮಕೂರು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 153ನೇ ಜನ್ಮ ಜಯಂತಿ ಅಂಗವಾಗಿ ತುಮಕೂರಿನ 15ನೇ ವಾರ್ಡಿನ ಕಾರ್ಪೋರೇಟರ್ ಗಿರಿಜಾ ಧನಿಯಕುಮಾರ್ ಅವರ ನೇತೃತ್ವದಲ್ಲಿ ರೌಂಡ್ ಟೇಬಲ್ ಟಿ.ಆರ್.ಟಿ 173 ಮತ್ತು ಜೆಡಿ ಸ್ಕೂಲ್ ಅಫ್ ಆಟ್ರ್ಸ್ ಇವರ ಸಹಕಾರದೊಂದಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಮಹಾತ್ಮಗಾಂಧಿ ಸ್ಮಾರಕದ ಬಳಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯನ್ನು ತುಮಕೂರು ಮಹಾನಗರಪಾಲಿಕೆಯ ಮೇಯರ್ ಶ್ರೀಮತಿ ಪ್ರಭಾವತಿ ಅವರು, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಅಗತ್ಯ ಪರಿಕರಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಮೇಯರ್ ಪ್ರಭಾವತಿ ಸುಧೀಶ್ವರ್,ಭಾರತದ ಸ್ವಾತಂತ್ರ ಹೋರಾಟದಲ್ಲಿ ಗಾಂಧೀಜಿ ಯವರ ಪ್ರವೇಶ ಒಂದು ಸುವರ್ಣ ಯುಗವಾಗಿದೆ.ಗಾಂಧೀಜಿ ಅವರ ಪ್ರವೇಶಕ್ಕು ಮುನ್ನ ಕುಂಟುತ್ತಾ ಸಾಗಿದ್ದ ಸ್ವಾತಂತ್ರ ಹೋರಾಟ ವೇಗ ಪಡೆದುಕೊಂಡಿತ್ತು.ಇದಕ್ಕೆ ಮೂಲ ಕಾರಣವಾದವುಗಳು,ಅವರ ನಡೆ,ನುಡಿ ಹಾಗೂ ಅಹಿಂಸೆ, ಸತ್ಯಾಗ್ರಹವೆಂಬ ಆಸ್ತ್ರಗಳು.ಹಲವಾರು ಹಂತದ ಹೋರಾಟಗಳ ಮೂಲಕ ಇಡೀ ದೇಶವೇ ಸ್ವಾತಂತ್ರ ಚಳವಳಿಯಲ್ಲಿ ಪಾಲ್ಗೊಳ್ಳುವಂತೆ ಮಾಡಿದ ಗಾಂಧಿಜೀಯವರ ಜೀವನವೇ ಒಂದು ಸಂದೇಶವಾಗಿದೆ ಎಂದರು.…

Read More

ತುಮಕೂರು ಇಂದಿನ ಮಕ್ಕಳು ಗುರು-ಹಿರಿಯರನ್ನು ಗೌರವದಿಂದ ಕಾಣುವಂತಾಗಬೇಕು. ಬದಲಾಗುತ್ತಿರುವ ಜಗತ್ತಿನಲ್ಲಿ ಹಿರಿಯರ ಮಹತ್ವವನ್ನು ನಾವುಗಳು ಅರಿತು ಬದುಕಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನೂರುನ್ನೀಸಾ ಅವರು ತಿಳಿಸಿದರು. ನಗರದ ಬಾಲಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ‘ಹಿರಿಯ ನಾಗರಿಕರ ದಿನಾಚರಣೆ-2022’ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕುಟುಂಬದಲ್ಲಿ ಹಿರಿಯರಿಗೆ ವಯಸ್ಸಾಗುತ್ತಿದ್ದಂತೆ ಅವರಿಗೆ ಗೌರವ ಕಡಿಮೆ ಆಗುತ್ತಿದೆ. ಹಿರಿಯ ನಾಗರಿಕರ ದಿನಾಚರಣೆಯ ಮೂಲ ಉದ್ದೇಶ, ಹಿರಿಯ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸಿ ಒಳ್ಳೆಯ ಜೀವನ ಕಟ್ಟಿಕೊಡುವುದಾಗಿದೆ. ಇಂದಿನ ಸಮಾಜದಲ್ಲಿ ಆರ್ಥಿಕವಾಗಿ ನಾವೆಲ್ಲರೂ ಶ್ರೀಮಂತರಾಗಿದ್ದು, ಕೇವಲ ತೋರಿಕೆಗಾಗಿ ಬದುಕಿ, ನಮ್ಮ ಮಕ್ಕಳನ್ನು ಅನಾಗರೀಕತೆಯ ಕಡೆ ತಳ್ಳುತ್ತಿದ್ದೇವೆ. ಮಕ್ಕಳಿಗೆ ನೀಡುವ ಸಂಸ್ಕಾರದ…

Read More

ತುಮಕೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಮೇಲೆ ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವ ಪ್ರಕರಣಗಳು ನಡೆಯುತ್ತಿದ್ದು, ಸೂಕ್ತ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಆರ್. ನಾಗರಾಜು ನೇತೃತ್ವದಲ್ಲಿ ಪಿಡಿಒಗಳು ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಆರ್. ನಾಗರಾಜು, ಪಂಚಾಯ್ತಿಗಳಲ್ಲಿರುವ ಹಾಲಿ ಮತ್ತು ಮಾಜಿ ಸದಸ್ಯರು, ಅಧ್ಯಕ್ಷರು, ಸಾರ್ವಜನಿಕರು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅವ್ಯಾಚ್ಯವಾಗಿ ನಿಂದಿಸುವಂತಹ ಮತ್ತು ಅವರ ಮೇಲೆ ಹಲ್ಲೆಗಳನ್ನು ಮಾಡಿ, ಸುಖಾ ಸುಮ್ಮನೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವಂತಹ ಕೆಲಸಗಳು ನಡೆಯುತ್ತಿವೆ. ಕೆಲವು ಪತ್ರಿಕೆಗಳವರು ಚಂದಾದಾರರಾಗಿ ಎಂದು ಹೇಳಿ ಬರುತ್ತಿದ್ದು, ಇದಕ್ಕೆ ಒಪ್ಪದಿದ್ದಾಗ ಅವರ ಮೇಲೆ ಆರ್‍ಟಿಐ ಹಾಕಿ ಲೋಕಾಯುಕ್ತಕ್ಕೆ ದೂರು ನೀಡಿ ಮಾನಸಿಕವಾಗಿ ಮನೋಸ್ಥೈರ್ಯವನ್ನು ಕುಗ್ಗಿಸುವಂತ ಕೆಲಸಗಳನ್ನು ಮಾಡುತ್ತಿದ್ದಾರೆ. ಇದರಿಂದ ಪಂಚಾಯ್ತಿ ಅಭಿವೃದ್ಧಿ…

Read More

ತುಮಕೂರು ಅಹಿಂಸಾ ತತ್ವದ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟಂತಹ ಮಹಾನ್ ಚೇತನ, ಮಹಾತ್ಮಗಾಂಧೀಜಿಯವರು ನಡೆದಂತಹ ದಾರಿ, ನೀಡಿದ ಮಾರ್ಗದರ್ಶನ ನಮ್ಮೆಲ್ಲರಿಗೂ ಆದರ್ಶವಾಗಬೇಕಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಮಾಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾತ್ಮಗಾಂಧೀಜಿ ಭಾವಚಿತ್ರಕ್ಕೆ ಮಾತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದ ಅವರು, ಗಾಂಧೀಜಿ ಹೇಳುವಂತೆ ಅಹಿಂಸೆ ಹೇಡಿತನವಲ್ಲ. ಅವರು ಪ್ರತಿಪಾದಿಸಿದ ಅಹಿಂಸಾ ತತ್ವವನ್ನು ನಾವುಗಳು ಸರಿಯಾಗಿ ಅರ್ಥೈಸಿಕೊಳ್ಳಬೇಕಿದೆ ಎಂದರು. ಗಾಂಧೀಜಿಯವರ ಕೇವಲ ಒಂದೆರಡು ಬರಹಗಳನ್ನು ಓದಿ ಅವರನ್ನು ಅರ್ಥೈಸಲಾಗದು. ಮಹಾತ್ಮಗಾಂಧೀಜಿ ಕೇವಲ ಭಾರತಕ್ಕೆ ಸೀಮಿತವಲ್ಲ, ಅವರು ವಿಶ್ವದ ನಾಯಕ. ಅಮೇರಿಕಾದಲ್ಲಿ ವರ್ಣಭೇಧ ನೀತಿಯ ವಿರುದ್ಧ ಹೋರಾಡಿದ ಮಾರ್ಟಿನ್ ಲೂಥರ್ ಕಿಂಗ್ ಅವರು, ಗಾಂಧೀಜಿ ಕುರಿತು ‘ಕ್ರೈಸ್ತ ನಮಗೆ ಬದುಕು ಕೊಟ್ಟರೆ, ಗಾಂಧೀಜಿಯವರು ಹೇಗೆ ಬದುಕಬೇಕು’ ಎಂದು ನುಡಿದಿದ್ದರು ಜಿಲ್ಲಾಧಿಕಾರಿಗಳು ತಿಳಿಸಿದರು. ಗಾಂಧೀಜಿಯವರು ಸತ್ಯ, ಅಹಿಂಸೆಯ ದಾರಿಯಲ್ಲಿ ನಡೆದಂತೆ ಒಳ್ಳೆಯ ಶಿಕ್ಷಣವನ್ನು…

Read More

ತುಮಕೂರು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ಬೃಹತ್ ಸಮಾವೇಶ ಕಲಬುರ್ಗಿಯಲ್ಲಿ ಇದೇ ಅಕ್ಟೋಬರ್ 30 ರಂದು ನಡೆಯಲಿದ್ದು ತುಮಕೂರು ಸಂಘಟನಾತ್ಮಕ ಜಿಲ್ಲೆಯಿಂದ 30 ಸಾವಿರ ಮಂದಿ ಭಾಗವಹಿಸುತ್ತಿದ್ದು, ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಕಾರ್ಯಕರ್ತರಿಗೆ ಕರೆ ನೀಡಿದರು. ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಮಾವೇಶದ ಸಂಬಂಧದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಹಿಂದುಳಿದ ವರ್ಗಗಳ ಅಭಿವೃದ್ಧಿ-ಶ್ರೇಯಾಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಡಬ್ಬಲ್ ಇಂಜಿನ್ ಸರ್ಕಾರಗಳು ಬಾರೀ ಅನುಧಾನಗಳನ್ನು ಕಾರ್ಯಕ್ರಮಗಳ ಮೂಲಕ ನೀಡುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಪ್ರತಿ ಗ್ರಾಮಗಳಿಗೂ ತಲುಪಿಸುವ ಕೆಲಸವನ್ನು ಕಾರ್ಯಕರ್ತರು, ಮುಖಂಡರು ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು. ರಾಜ್ಯದಲ್ಲಿ ಹಿಂದುಳಿದ ವರ್ಗಗಳು ಬಿಜೆಪಿಗೆ ಶಕ್ತಿ ತುಂಬಿವೆ. ಇದರಿಂದಲೇ ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಲು ಸಾಧ್ಯವಾಗಿದೆ. ಸರ್ಕಾರವೂ ಸಹ ಹಿಂದುಳಿದ ವರ್ಗದ ಸಮುದಾಯಕ್ಕೆ…

Read More

ತುಮಕೂರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಎರಡು ವರ್ಷಗಳ ಆಡಳಿತಾವಧಿಯಲ್ಲಿ ಹಲವಾರು ಜನಪ್ರಿಯ-ಜನಪರ ಕಾರ್ಯಕ್ರಮಗಳ ಮಹಾಪೂರಗಳನ್ನೇ ನೀಡಿದ್ದು, ಜನರಿಗೆ ತಲುಪಿಸುವ-ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡುವಂತೆ ಇಂಧನ ಖಾತೆ ಮತ್ತು ಕನ್ನಡ ಸಂಸ್ಕøತಿ ಇಲಾಖೆ ಸಚಿವರಾದ ಸುನೀಲ್ ಕುಮಾರ್ ಕರೆ ನೀಡಿದರು. ಇವರು ಇಂದು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ಕಳೆದ 2 ವರ್ಷಗಳಲ್ಲಿ ಇಂಧನ ಖಾತೆಯಲ್ಲಿ ಪ್ರಮುಖವಾದ ಬೆಳಕು ಯೋಜನೆಯಡಿಯಲ್ಲಿ ತುಮಕೂರು ಜಿಲ್ಲೆಯ 8500 ಮನೆಗಳಿಗೆ ವಿದ್ಯುತ್, ಅಮೃತ ಯೋಜನೆಯಡಿಯಲ್ಲಿ ಎಸ್.ಸಿ./ಎಸ್.ಟಿಯ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ 75 ಯೂನಿಟ್ ವಿದ್ಯುತ್ ಮತ್ತು ರೈತರ ಟಿ.ಸಿ. ಸುಟ್ಟ 24 ಘಂಟೆಗಳಲ್ಲಿ ಟಿ.ಸಿ.ಅಳವಡಿಕೆ ಮಾಡಲಾಗುತ್ತಿದೆ ಎಂದರು. ಇದಲ್ಲದೆ, ರಾಜ್ಯ ಸರ್ಕಾರವು ರೈತರು ಐ.ಪಿ.ಸೆಟ್ ಅಳವಡಿಕೆ ಮಾಡಿಕೊಳ್ಳಲು ಹಲವಾರು ವರ್ಷಗಳಿಂದ ಅರ್ಜಿ ಹಾಕಿದ್ದವರಿಗೆ ಐಪಿ ಸೆಟ್ ಅಳವಡಿಕೆ ಕ್ರಮ ಆರಂಭಿಸಿದ್ದು, ತುಮಕೂರು ಜಿಲ್ಲೆಯ 65,000 ಐಪಿ ಸೆಟ್ ಅಳವಡಿಕೆಗೆ ಕ್ರಮ ಕೈಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಇದೇ ರೀತಿ…

Read More

ತುಮಕೂರು ದಂತ ಗೋಪುರದಲ್ಲಿ ನಿಂತುಕೊಂಡು ಸಾಹಿತ್ಯ ರಚನೆಯಿಂದ ಸಮಾಜಕ್ಕೆ ಉಪಯೋಗವಿಲ್ಲ. ಜನ ಪರವಾಗಿ, ಸಾಮಾಜಿಕವಾಗಿ ಚಿಂತಿಸಿ ಸಾಹಿತ್ಯ ರಚನೆ ಮಾಡಿದಾಗ ಜೀವಂತವಾಗಿರುತ್ತದೆ. ಈ ನಿಟ್ಟಿನಲ್ಲಿ ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಬೆಂಗಳೂರಿನ ಎಂ.ಎಲ್.ಎ ಕಾಲೇಜಿನ ತೇಜಸ್ವಿ ಕನ್ನಡ ಸಂಶೋಧನಾ ಕೇಂದ್ರದ ನಿದೇರ್ಶಕರಾಧ ಡಾ.ಬಿ.ಎ.ಅನ್ನದಾನೇಶ ಅವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಕನ್ನಡ ವಿಭಾಗ ಮತ್ತು ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಣ ಶಿಲ್ಪಿ ಡಾ.ಹೆಚ್.ಎಂ.ಗಂಗಾಧರಯ್ಯ ಸ್ಮಾರಕ ಉಪನ್ಯಾಸ ಮಾಲೆ -6ರಲ್ಲಿ ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಯವರ ಜನ್ಮದಿನಾಚರಣೆಯ ಅಂಗವಾಗಿ ‘ತೇಜಸ್ವಿ ವಿಚಾರಗಳು’ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು. ಮೂಡಿಗರೆಯಿಂದ ವಿಶ್ವಮಟ್ಟಕ್ಕೆ ಕಾದಂಬರಿ ಕ್ಷೇತ್ರವನ್ನು ಕೊಂಡೋಯ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರು ಒಬ್ಬ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಮೊನುಚಾದ ಮತ್ತು ಆಕರ್ಷಕ ಬರವಣಿಗೆಯನ್ನು ನೀಡಿದ್ದಾರೆ. ಅವರು ಸಾಹಿತ್ಯ ಓದುಗರಿಗೆ ಮುದ ನೀಡುತ್ತದೆ ಎಂದು ಡಾ.ಬಿ.ಎ.ಅನ್ನದಾನೇಶ ನುಡಿದರು.…

Read More