ಚಿಕ್ಕನಾಯಕನಹಳ್ಳಿ: ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಜೈನರು ಸೇರಿದಂತೆ ಸಮಾಜದಲ್ಲಿ ಜಾತಿ ಹೆಸರಿನ ಮನಸ್ಥಿತಿಯಲ್ಲಿ ಜನರಿದ್ದಾರೆ. ಊರಿನಲ್ಲಿ ಜಾತ್ರೆಗಳು, ಹಬ್ಬ-ಹರಿದಿನವೆಂದಾಗ ನಾವೆಲ್ಲರೂ ಒಂದಾಗಿ ಹೋಗುತ್ತೇವೆ. ಪ್ರತಿ ಮನೆಗಳಲ್ಲಿ ಹಬ್ಬವಾದರೆ ಅಕ್ಕಪಕ್ಕದಲ್ಲಿ, ಪರಿಚಯಸ್ಥರಲ್ಲಿ ಯಾವದೇ ಜಾತಿಯಾದರೂ ಹೋಗುತ್ತೇವೆ, ಕರೆದು ಉಪಚರಿಸುತ್ತೇವೆ. ಅಂತಹ ಸಂಪ್ರದಾಯವನ್ನು ಎಲ್ಲರಿಗೂ ತಿಳಿದಿದೆ ಆದರೆ ಆ ಸಂಪ್ರದಾಯಕ್ಕೆ ತಾಲ್ಲೂಕಿನ ಮೂಲಕ ಮುನ್ನುಡಿ ಬರೆಯಲು ಈಗ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹೊರಟಿದೆ. ಇಡೀ ರಾಜ್ಯದ ಎಲ್ಲಾ ಸಮುದಾಯದ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ನವಂಬರ್ ೨೬ ರಂದು ಭಾಗಿಯಾಗಿ ಸಾಕ್ಷಿಯಾಗಲಿದ್ದಾರೆ. ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸರ್ವಧರ್ಮ ದಾರ್ಶನಿಕರ ಜಯಂತ್ಯೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ರಾಜ್ಯದಲ್ಲಿರುವ ಇಡೀ ಎಲ್ಲಾ ಸಮುದಾಯದ ಮುಖಂಡರು ಒಂದೇ ವೇದಿಕೆಯಲ್ಲಿ ಕಾಣಸಿಗಲಿದ್ದಾರೆ. ಈ ಸಮಾರಂಭದ ಮೂಲಕ ಇಡೀ ರಾಜ್ಯಕ್ಕೆ ನಾವೆಲ್ಲರೂ ಒಂದೇ, ನಾಮ ಹಲವು ದೇವರೊಬ್ಬನೆ ಎಂಬ0ತೆ, ನೂರಾರು ಜಾತಿಗಳಿದ್ದರೂ ನಾವೆಲ್ಲರೂ ಒಂದೇ ಜಾತಿ ಮನುಷ್ಯ ಜಾತಿ ಎಂಬ ಸಂದೇಶ ರವಾನೆಯಾಗಲಿದೆ ಎನ್ನುತ್ತಾರೆ ಕಾರ್ಯಕ್ರಮದ ಆಯೋಜಕರಾದ ಶಾಸಕ ಸಿ.ಬಿ.ಸುರೇಶ್ ಬಾಬು. ಹಿಂದು, ಮುಸ್ಲಿಂ,…
Author: News Desk Benkiyabale
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬಡಕೆಗುಡ್ಲು ಗ್ರಾಮದ ಎ.ಕೆ.ಕಾಲೋನಿಯಲ್ಲಿ ನೀರಿನ ಸಮಸ್ಯೆ ನೀಗಿಸುವಂತೆ ನಿವಾಸಿಗರು ಒತ್ತಾಯಿಸಿದ್ದಾರೆ. ಬಡಕೆಗುಡ್ಲು ಗ್ರಾಮ ಹಿಂದುಳಿದ ಪ್ರದೇಶವಾಗಿದೆ. ಈ ಗ್ರಾಮದ ಎ.ಕೆ. ಕಾಲೋನಿಯಲ್ಲಿ ಸುಮಾರು ೨೫ ಬಡಕುಟುಂಬಗಳು ವಾಸಿಸುತ್ತಿದೆ. ಕೂಲಿ ಮಾಡಿಕೊಂಡು ಜೀವಿಸುತ್ತಿರುವ ಈ ಕಾಲೋ ನಿಯಲ್ಲಿ ವೃದ್ದರು, ಬಾಣಂತಿಯರು ಹಾಗೂ ಚಿಕ್ಕ ಮಕ್ಕಳಿದ್ದು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಳೆದ ಎರಡು ವರ್ಷದಿಂದ ಕಾಡುತ್ತಿದೆ, ಇದಲ್ಲದೆ ಉತ್ತಮ ರಸ್ತೆಯಾಗಲಿ, ಚರಂಡಿ ವ್ಯವಸ್ಥೆಯಾಗಲಿ ಈ ಕಾಲೋನಿಗಿಲ್ಲದೆ ಅನೈರ್ಮಲ್ಯದ ವಾತಾವರಣದಲ್ಲಿ ಬದುಕುತ್ತಿ ದ್ದಾರೆ. ಹಲವು ಬಾರಿ ಪಂಚಾಯಿತಿಗೆ ದೂರು ನೀಡಿದ್ದರೂ ಅಧಿಕಾರಿಗಳಾಗಲಿ, ಜನ ಪ್ರತಿನಿಧಿ ಗಳಾಗಲಿ ಗಮನಹರಿಸಿಲ್ಲ, ಪಂಚಾಯಿತಿ ಅಭಿ ವೃದ್ದಿ ಅಧಿಕಾರಿ ಎರಡು ದಿನದಲ್ಲಿ ಸಮಸ್ಯೆ ನಿವಾ ರಣೆ ಮಾಡಲಾಗುತ್ತದೆ ಎಂದು ಹೇಳಿ ಹೋಗಿ ತಿಂಗಳಾದರೂ ಈ ಕಡೆ ತಿರುಗಿ ನೋಡಿಲ್ಲ ಎಂದು ಗ್ರಾಮದ ಮಹಿಳೆಯರು ಹಾಗೂ ಸ್ಥಳೀಯರು ಪಂಚಾಯಿತಿ ಕಾರ್ಯಾಲಯದ ಮುಂದೆ ಖಾಲಿಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಹಕ್ಕುಗಳು ಈಡೇರದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದೆಂದು ನಿವಾಸಿಗಳು ಎಚ್ಚರಿಸಿದ್ದಾರೆ.
ಪಾವಗಡ: ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ದೊರಕುತ್ತಿಲ್ಲ. ಈ ನಿಟ್ಟಿನಲ್ಲಿ ಯೋಜನೆಗಳ ಬಗ್ಗೆ ಪ್ರಚಾರ ಕೈಗೊಂಡು ಯೋಜನೆಗಳು ದೊರಕಿಸಿಕೊಡುವ ಕೆಲಸ ಆಗಬೇಕಾಗಿದೆ ಎಂದು ಶಾಸಕರಾದ ಹೆಚ್.ವಿ.ವೆಂಕಟೇಶ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಲಜೀವನ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು, ಬಾಕಿ ಉಳಿದ ಕಾಮಗಾರಿಗಳು ಗುಣಮಟ್ಟ ಕಾಯ್ದುಕೊಂಡು ಶೀಘ್ರ ಪೂರ್ಣಗೊಳಿಸುವಂತೆ ಸಂಬ0ಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಸೋಲಾರ್ ಕಂಪನಿಗಳು ನಮ್ಮ ನೆಲ, ಜಲವನ್ನು ಬಳಸಿಕೊಂಡು ಸ್ಥಳೀಯರಿಗೆ ಉದ್ಯೋಗ ನೀಡದೆ ಇರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕಂಪನಿಗಳ ಬಗ್ಗೆ ವರದಿ ತಯಾರಿಸಿ ಉದ್ಯೋಗ ಪಟ್ಟಿಯನ್ನು ತಕ್ಷಣ ನೀಡಬೇಕು. ನಮ್ಮಲ್ಲಿ ಸಾಕಷ್ಟು ಪ್ರತಿಭಾನ್ವಿತರಿದ್ದಾರೆ. ಇಂತವರಿಗೆ ಉದ್ಯೋಗ ದೊರಕಬೇಕು ಎಂದರು. ಶೈಕ್ಷಣಿಕ, ಆರೋಗ್ಯ ಹಾಗೂ ಮೂಲ ಸೌಕರ್ಯ ಕಲ್ಪಿಸುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಸಾಮಾಜಿಕ ಅರಣ್ಯ ಪ್ರಗತಿಯ ಬಗ್ಗೆ ವಿವರ ಕೇಳಿದ…
ತುಮಕೂರು: ಗುಬ್ಬಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಅನುಮೋದನೆ ನೀಡದೆ, ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ತುಮುಲ್ ನಿರ್ದೇಶಕರಾದ ಭಾರತಿ ಶ್ರೀನಿವಾಸ್ ನೇತೃತ್ವದಲ್ಲಿ ಗುಬ್ಬಿ ತಾಲೂಕಿನ ವಿವಿಧ ಗ್ರಾಮಗಳ ಜನರು ಪ್ರತಿಭಟನೆ ನಡೆಸಿದರು. ನಗರದ ಟೌನ್ಹಾಲ್ ಬಳಿಯ ಅಂಬೇಡ್ಕರ್ ಪ್ರತಿಮೆಯ ಬಳಿ ಸಮಾವೇಶಗೊಂಡ ಗುಬ್ಬಿ ತಾಲೂಕಿನ ವಿವಿಧ ಗ್ರಾಮಗಳ ಜನರು ಎ.ಆರ್. ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೂಡಲೇ ಗುಬ್ಬಿ ತಾಲೂಕಿನಲ್ಲಿ ಪ್ರಾಸ್ತಾವನೆ ಸಲ್ಲಿಸಿರುವ ಗ್ರಾಮಗಳಲ್ಲಿ ಹಾಲಿನ ಡೈರಿ ಸ್ಥಾಪಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದ ಮನವಿಯನ್ನು ಸಲ್ಲಿಸಿದರು. ಈ ವೇಳೆ ಮಾತನಾಡಿದ ತುಮುಲ್ ನಿರ್ದೇಶಕರಾದ ಶ್ರೀಮತಿ ಭಾರತಿ ಶ್ರೀನಿವಾಸ್, ತುಮಕೂರು ಡೈರಿಗೆ ಬರುವ ಹಾಲಿನಲ್ಲಿ ಗುಬ್ಬಿ ತಾಲೂಕಿನ ಹಾಲಿನ ಪ್ರಮಾಣ ಹೆಚ್ಚಾಗಿದೆ. ಹೆಚ್ಚು ಹಾಲು ಉತ್ಪಾಧಿಸುತ್ತಿರುವ ಸುಮಾರು ೩೨ ಉಪಕೇಂದ್ರಗಳಲ್ಲಿ ೯ ಕೇಂದ್ರಗಳಲ್ಲಿ ಮುಖ್ಯ ಡೈರಿಗಳಾಗಿ ಪರಿವರ್ತಿಸಲು ಅನುಮತಿ ಕೋರಿ ೬ ತಿಂಗಳ ಹಿಂದೆಯೇ ಸಹಕಾರ ಇಲಾಖೆಗಳ…
ತುಮಕೂರು: ಮಾದಾವರದಿಂದ – ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ. ಮಾದಾವರದಿಂದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆ ಯೋಜನೆಗೆ ಸ್ವಾಗತಿಸುತ್ತೇನೆ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಅವಧಿಯಲ್ಲಿ ಶ್ರಮಿಸಿದ್ದರೂ ಈ ಹಂತಕ್ಕೆ ಹೋಗಿರಲಿಲ್ಲ. ಈಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಸರ್ಕಾರದ ವಿಶೇಷ ಆಸಕ್ತಿ ಮೆಚ್ಚುವಂತದ್ದು. ಭವಿಷ್ಯದ ದೃಷ್ಟಿಯಿಂದ ವಸಂತನರಸಾಪುರದವರೆಗೂ ವಿಸ್ತರಣೆ ಮಾಡುವುದು ಸೂಕ್ತವಾಗಿದೆ ಎಂದರು. ಯೋಜನೆಯ ಬಗ್ಗೆ ಬಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಸಂಸದ ತೇಜಸ್ವಿ ಸೂರ್ಯರವರನ್ನು ತುಮಕೂರಿಗೆ ಆಹ್ವಾನಿಸಿ, ಒಂದು ಸಂವಾದ ನಡೆಸುವುದು ಅಗತ್ಯವಾಗಿದೆ. ಕೇಂದ್ರ ಸಚಿವರಾದ ವಿ.ಸೋಮಣ್ಣ, ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ತುಮಕೂರು ಗ್ರಾಮಾಂತರದ ಶಾಸಕ ಸುರೇಶ್ ಗೌಡ ಮತ್ತು ತುಮಕೂರು ನಗರದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಶ್ರಮಿಸುವ ಭರವಸೆ ಇದೆ ಎಂದಿದ್ದಾರೆ. ಬೆಂಗಳೂರಿನ ೨ ನೇ ಅಂತರರಾಷ್ಟಿçÃಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯಲ್ಲಿ ನಿರ್ಮಾಣ ಮಾಡಲು ನನ್ನ ಅವಧಿಯಲ್ಲಿ ಆರಂಭಿಸಲಾಗಿತ್ತು. ಈಗ ಬೆಂಗಳೂರಿನ ಅಕ್ಕ-ಪಕ್ಕದ ಸ್ಥಳಗಳಿಗೆ, ಏರ್ ಪೋರ್ಟ್ ಆಥಾರಿಟಿ ಆಫ್ ಇಂಡಿಯಾ ನೀಡಿರುವ…
ತುಮಕೂರು: ಇತಿಹಾಸ ಪ್ರಸಿದ್ದ ಗೂಳೂರು ಗಣೇಶಮೂರ್ತಿಯ ವಿಸರ್ಜನಾ ಮಹೋತ್ಸವ ಇಂದು ಮತ್ತು ನಾಳೆ ಅತ್ಯಂತ ವೈಭವಯುತವಾಗಿ ನಡೆಯಲಿದೆ ಎಂದು ಗೂಳೂರು ಶ್ರೀ ಮಹಾಗಣಪತಿ ಭಕ್ತ ಮಂಡಳಿಯ ಅಧ್ಯಕ್ಷರಾದ ಜಿ.ಎಸ್. ಶಿವಕುಮಾರ್ ತಿಳಿಸಿದ್ದಾರೆ. ಬಲಿಪಾಢ್ಯಮಿಯ ದಿನ ಸ್ಥಾಪಿಸಲಾಗುವ ಗಣೇಶ ಮೂರ್ತಿಗೆ ಕಾರ್ತಿಕ ಮಾಸದಲ್ಲಿ ೧ ತಿಂಗಳ ಕಾಲ ಪ್ರತಿನಿತ್ಯ ವಿಶೇಷ ಪೂಜಾ ಕೈಂಕರ್ಯಗಳೊ0ದಿಗೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬೃಹತ್ ಗಣೇಶ ಮೂರ್ತಿಗೆ ವಿಶೇಷ ಐತಿಹ್ಯವಿದ್ದು, ೧ ತಿಂಗಳ ಕಾಲ ಗ್ರಾಮದ ಪ್ರತಿಯೊಂದು ಮನೆಯವರು ನಿತ್ಯ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಸಮರ್ಪಿಸುವರು. ಪ್ರತಿದಿನ ರಾತ್ರಿ ೯ ಗಂಟೆಗೆ ಮಹಾಮಂಗಳಾರತಿ ನಡೆದಿದ್ದು, ೧೮ ಕೋಮಿನವರು ಗೂಳೂರು ಗಣಪನಿಗೆ ವಿವಿಧ ಸೇವೆ ಸಲ್ಲಿಸಿ, ವಿಸರ್ಜನೆಯಲ್ಲಿಯೂ ಪಾಲ್ಗೊಳ್ಳಲಿದ್ದಾರೆ ಎಂದರು. ಇAದು ರಾತ್ರಿ ೧೦ ಗಂಟೆಗೆ ವಿದ್ಯುತ್ ಅಲಂಕಾರ ಮತ್ತು ಹೂವಿನಿಂದ ಅಲಂಕೃತಗೊ0ಡ ಮಂಟಪದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಶ್ರೀ ಮಹಾಗಣಪತಿ ಉತ್ಸವವನ್ನು ನಾದಸ್ವರ, ಕರಡಿ ಮಜಲು, ನಾಸಿಕ್ ಡೋಲ್, ಕೇರಳದ ಜಾನಪದ ನೃತ್ಯ, ಮಂಡ್ಯದ ಕಲಾ…
ಪಾವಗಡ: ಇತ್ತೀಚೆಗೆ ಏಕೋ ಪಟ್ಟಣ ಹಾಗೂ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಕಳ್ಳತನಗಳು ಹೆಚ್ಚಾಗುತ್ತಿದೆ ಗುರುವಾರ ಮಧ್ಯರಾತ್ರಿ ಒಂದು ಗಂಟೆಯಿ0ದ ೩ ಗಂಟೆ ಸಮಯದೊಳಗೆ ಮೂರು ಅಂಗಡಿಗಳ ಮೇಲ್ಚಾವಣಿಯನ್ನು ಕತ್ತರಿಸಿ ಕೆಳಗಿಳಿದ ಕಳ್ಳರು ಸುಮಾರು ೨.೬ ಲಕ್ಷ ನಗದು ದೋಚಿರುತ್ತಾರೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ ಅಶ್ವಿನಿ ಮಾರ್ಕೆಟಿಂಗ್. ಆರ್ ಎಸ್ ಮೆಗಾ ಹೋಲ್ಸೇಲ್. ಲಕ್ಷ್ಮಿ ಮಾರ್ಕೆಟಿಂಗ್ ಸರ್ವಿಸ್. ಮೂರು ಸಗಟು ವ್ಯಾಪಾರಿಗಳ ಅಂಗಡಿಗಳಲ್ಲಿ ರಾತ್ರಿ ಕಳ್ಳತನವಾಗಿರುವುದು ಬೆಳಗಿನ ಜಾವ ಬೆಳಕಿಗೆ ಬಂದಿದೆ ವಿಷಯ ತಿಳಿದು ಮಾಲೀಕರು ಅಂಗಡಿಗಳಿಗೆ ಬಂದ ನೋಡಿದಾಗ ಮೇಲ್ಚಾವಣಿಯನ್ನು ಕತ್ತರಿಸಿ ಒಳಗಿಳಿದಿರುವುದು ಸಿಸಿ ಕ್ಯಾಮೆರಾ ಗಳಲ್ಲಿ ರೆಕಾರ್ಡ್ ರೆಕಾರ್ಡ್ ಆಗಿರುವುದು ತಿಳಿದು ಬಂದಿದೆ ಸ್ಥಳಕ್ಕೆ ಪೊಲೀಸರು ಭೇಟಿ ಮುಂದಿನ ಕ್ರಮಕ್ಕೆ ಪರಿಶೀಲನೆ ಸೋಲಾರ್ ಖ್ಯಾತಿಯಾದ ಪಾವಗಡ ಇತ್ತೀಚಿನ ದಿನಗಳಲ್ಲಿ ಕಳ್ಳತನಕ್ಕೆ ರಾಕೆಟ್ ವೇಗದಲ್ಲಿ ಖ್ಯಾತಿ ಹೊಂದಲು ಮುಂದುವರಿಯುತ್ತಿದೆ ಸಾರ್ವಜನಿಕ ವಲಯದಲ್ಲಿ ಅತಿ ಹೆಚ್ಚು ಆತಂಕಗಳು ಉಂಟಾಗುತ್ತಿದ್ದು ಸಾರ್ವಜನಿಕರು ತಾಲೂಕು ಆಡಳಿತ ಮತ್ತು ಜಿಲ್ಲಾ ಆಡಳಿತಕ್ಕೆ ಇಡಿ ಶಾಪ…
ತುಮಕೂರು: ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಿಕೆ ಮುಖ್ಯವೇ ಹೊರತು ಪ್ರಶಸ್ತಿ ಮುಖ್ಯವಲ್ಲ ಕ್ರೀಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶಾಲೆಯನ್ನು ಪ್ರತಿನಿಧಿಸುವ ಹಾಗೆ ನೀವು ಆಯ್ಕೆಯಾದಾಗಲೇ ವಿಜೇತರಾಗಿದ್ದೀರಿ ವೇದಿಕೆ ನಿಮಗೆ ಸಿಕ್ಕ ಅವಕಾಶವೆಂದು ತಿಳಿಯಿರಿ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್ ರವರು ಅಭಿಪ್ರಾಯಪಟ್ಟರು ಶಿರ ತಾಲೂಕು ಬುಕ್ಕಾಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕುರಿತು ಅವರು ಮಾತನಾಡಿದರು ಶಿಕ್ಷಣವೆಂದರೆ ಕೇವಲ ಅಂಕಗಳಿಗೆ ಸೀಮಿತವಾಗಿ ಯಾಂಕಗಳು ಪಡೆಯುವುದು ಮಾತ್ರವಲ್ಲ ಶಿಕ್ಷಣವೆಂದರೆ ಮಗುವಿನಲ್ಲಿರುವ ಸೂಕ್ತ ಪ್ರತಿಭೆಗಳನ್ನು ಹೊರ ಚೆಲ್ಲುವುದೇ ಆಗಿದೆ ಮಗುವನ್ನು ಯಾವ ವಿಷಯದಲ್ಲಿ ಅತಿ ಪ್ರಾಮುಖ್ಯತೆ ಪಡೆದಿದೆ ಯಾವ ಕಲೆ ಮೈಗೂಡಿಸಿಕೊಂಡಿದೆ ಯಾವ ಕಲೆ ಸಂಸ್ಕೃತಿ ನೃತ್ಯ ನಾಟಕ ಆ ಮಗುವಿನಲ್ಲಿ ಆಸಕ್ತಿ ಹೊಂದಿದೆ ಎಂಬುದನ್ನು ಅರಿತು ಆ ಮಗುವಿಗೆ ಪ್ರೋತ್ಸಾಹ ನೀಡಿದಾಗ ಆ ಮಗು ಹೋಬಳಿ ತಾಲೂಕು ಜಿಲ್ಲೆ ರಾಜ್ಯ ರಾಷ್ಟ್ರಮಟ್ಟದಲ್ಲಿ ಕೀರ್ತಿ ಗಳಿಸುತ್ತದೆ ಮಗುವಿಗೆ ಸೂಕ್ತ ವೇದಿಕೆ ಅವಶ್ಯಕತೆ ಇದೆ ಇದನ್ನು ಅರಿತ ಸರ್ಕಾರ ಮಗುವಿನ ಸರ್ವತೋಮುಖ…
ತುಮಕೂರು: ಐಕ್ಯ ಫೌಂಡೇಶನ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆವತಿಯಿ0ದ ಈ ತಿಂಗಳ ೨೨ ಮತ್ತು ೨೩ರಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕಲ್ಪತರು ಉತ್ಸವ ಏರ್ಪಡಿಸಲಾಗಿದೆ. ಈ ವೇಳೆ ಜಿಲ್ಲೆಯ ೫೮ ಮಂದಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಐಕ್ಯ ಫೌಂಡೇಶನ್ ಅಧ್ಯಕ್ಷೆ ರೇಖಾ ಶಿವಕುಮಾರ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ ಲೋಕೇಶ್ ತಿಳಿಸಿದರು. ಗುರುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಉತ್ಪನ್ನಗಳ ಮಾರಾಟ ಮಳಿಗೆಗ ಳನ್ನು ಉತ್ಸವದಲ್ಲಿ ತೆರೆಯಲಾಗುವುದು. ಈ ಮೂಲಕ ರೈತರ ಉತ್ಪನ್ನಗಳನ್ನು ಗ್ರಾಹಕರು ರೈತರಿಂದ ನೇರ ಖರೀದಿ ಮಾಡ ಬಹುದು ಎಂದರು. ೨೨ರAದು ಸಂಜೆ ೪.೩೦ಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಳಿಗೆಗಳ ಉದ್ಘಾಟನೆ ನೆರವೇರಿಸಿ ನಂತರ ನಡೆಯುವ ಸಮಾರಂ ಭದಲ್ಲಿ ಪ್ರಗತಿಪರ ರೈತನ್ನು ಸನ್ಮಾನಿಸಿ ಗೌರವಿಸುವರು. ರೈತಪರ ಹೋರಾಟಗಾರ ಗಂಗಾಧರ ಕಾಸರಘಟ್ಟ, ಚಲನಚಿತ್ರ ನಟ ಹನುಮಂತೇಗೌಡ, ಕಿರುತೆರೆ ನಟರಾದ ಶಿಲ್ಪ ಶೈಲೇಶ್. ಅರ್ಜುನ್ ಯೋಗೇಶ್ರಾಜ್ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.…
ತುಮಕೂರು: ಜಾಗತೀಕರಣದ ಹೆಸರಿನಲ್ಲಿ ಭೂಮಿಯನ್ನು ವ್ಯಾಪಾರ ವಸ್ತುವನ್ನಾಗಿ ಮಾಡಿದರೆ ಮಾನವನ ಅಂತ್ಯ ಕಟ್ಟಿಟ್ಟ ಬುತ್ತಿ ಎಂದು ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ರಾಜೇಂದ್ರ ಚೆನ್ನಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಪ್ರೊ. ಎಂ. ಡಿ.ನಂಜು0ಡಸ್ವಾಮಿ ಅಧ್ಯಯನ ಪೀಠ ಹಾಗೂ ಸ್ನಾತಕೋತ್ತರ ಅರ್ಥಶಾಸ್ತç ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಜಾಗತೀಕರಣ- ಪ್ರತಿರೋಧ ಮತ್ತು ಪರ್ಯಾಯ: ನಂಜು0ಡಸ್ವಾಮಿಯವರ ಚಿಂತನೆ’ ಕುರಿತು ಮಾತನಾಡಿದರು. ಜಾಗತೀಕರಣವು ೯೦ರ ದಶಕದಲ್ಲಿ ಅನಿವಾರ್ಯವಾಯಿತು. ಆರ್ಥಿಕವಾಗಿ ದೇಶವು ಪ್ರಬಲಗೊಳ್ಳಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವಸಾಹತುಶಾಹಿಯನ್ನು ಕೊನೆಗೊಳಿಸಿ, ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆಯನ್ನು ಕಾಣಬೇಕೆಂಬುದು ಪ್ರೊ. ಎಂ. ಡಿ. ನಂಜು0ಡಸ್ವಾಮಿಯವರ ಚಿಂತನೆಯಾಗಿತ್ತು. ಅವರು ರೈತ ಸಂಘದ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿ ಅವರ ಧ್ವನಿಯಾಗಿದ್ದರು ಎಂದರು. ಯಾವುದೇ ನಿಬಂಧನೆಗಳಿಲ್ಲದೆ ನಮ್ಮ ವಸ್ತುಗಳ ವ್ಯಾಪಾರ ಮಾಡುವುದಕ್ಕೆ ಮುಕ್ತ ಮಾರುಕಟ್ಟೆ ಸಹಾಯವಾಗುತ್ತದೆ. ಸುಂಕರಹಿತ ಮಾರುಕಟ್ಟೆ ಅರ್ಥಶಾಸ್ತçದ ಬೆಳವಣಿಗೆಗೆ ಮುಖ್ಯವಾದದ್ದು. ಅರ್ಥವ್ಯವಸ್ಥೆಯು ರಾಷ್ಟç್ರದ ಗಡಿಗಳನ್ನು ದಾಟಬೇಕು. ಇದರಿಂದ ಹೊಸ…











