Author: News Desk Benkiyabale

ಕುಣಿಗಲ್: ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಸಭೆ ಗುರುವಾರ ಜರುಗಿತು. ಸಭೆಯಲ್ಲಿ ತಾಸಿಲ್ದಾರ್ ರಶ್ಮಿಯು ರವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ತೆಗೆದುಕೊಂಡಿರುವ ಮುಂಜಾಗ್ರತೆ ಕ್ರಮಗಳ ವಿವರಗಳ ಸಂಪೂರ್ಣ ಮಾಹಿತಿಯನ್ನು ಟಿಹೆಚ್‌ಓ ರವರಲ್ಲಿ ಕೇಳಿದಾಗ ಟಿಎಚ್‌ಓ ಡಾ ಮರಿಯಪ್ಪನವರು ಮಾತನಾಡಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿಸೆಂಬರ್ ೨೧ರಿಂದ ಡಿಸೆಂಬರ್ ೨೪ರ ವರೆಗೆ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ  ಇಂದ೫ ವರ್ಷದ ಪ್ರತಿಯೊಂದು ಮಕ್ಕಳಿಗೆ ಲಸಿಕೆಯನ್ನು ಹಾಕಲಾಗುತ್ತದೆ ತಾಲೂಕಿನಲ್ಲಿ ಲಸಿಕೆಯನ್ನು ಪಡೆದುಕೊಳ್ಳುವ ಸುಮಾರು ಪಟ್ಟಣ ಸೇರಿದಂತೆ ೧೮೯೮೩ ಮಕ್ಕಳು ಇದ್ದು ಡಿಸೆಂಬರ್ ೨೧ರ ಭಾನುವಾರದಂದು ಒಟ್ಟು ೧೧೦ ಲಸಿಕಾ ಕೇಂದ್ರಗಳು ಇದ್ದು ಹೆಚ್ಚುವರಿಯಾಗಿ ನಗರದಲ್ಲಿ ೩ ಗ್ರಾಮಾಂತರದಲ್ಲಿ ೩ ಲಸಿಕ ಕೇಂದ್ರಗಳನ್ನು ತೆರೆಯಲಾಗಿದೆ ಈ ಸಂದರ್ಭದಲ್ಲಿ ೨೦ ವೈದ್ಯಾಧಿಕಾರಿಗಳು, ಲಸಿಕೆ ಹಾಕುವವರು ೪೦೧, ಮೇಲ್ವಿಚಾರಕರು ೨೦ ಮಂದಿ ಕೆಲಸ ನಿರ್ವಹಿಸಲಿದ್ದಾರೆ ನಮ್ಮ ತಾಲೂಕಿನಲ್ಲಿ ನಗರ ಪ್ರದೇಶದಲ್ಲಿ ೯೭೦೫ ಗ್ರಾಮಾಂತರದಲ್ಲಿ ೪೨೫೮೩ ಒಳಗೊಂಡ0ತೆ ಒಟ್ಟು…

Read More

ತುಮಕೂರು: ತುಮಕೂರು ನಗರದ ಗಾರ್ಡನ್ ರಸ್ತೆಯಲ್ಲಿರುವ ಸವಿತಾ ಸಮಾಜ ಜಿಲ್ಲಾ ಸಂಪರ್ಕ ಕೇಂದ್ರದ ವತಿಯಿಂದ ಸವಿತಾ ಸಮಾಜದ ಅವಿವಾಹಿತರ ಅನುಕೂಲಕಕ್ಕಾಗಿ ವಧು-ವರರ ಅನ್ವೇಷಣಾ ಕೇಂದ್ರವನ್ನು ಸವಿತಾ ಸಮಾಜ ಯುವಪಡೆಯ ಜಿಲ್ಲಾಧ್ಯಕ್ಷರಾದ ಕಟ್‌ವೆಲ್ ರಂಗನಾಥ್ ಅವರ ನೇತೃತ್ವದಲ್ಲಿ ಉದ್ಘಾಟನೆಯನ್ನು ಮಾಡಲಾಯಿತು. ಕಟ್‌ವೆಲ್ ರಂಗನಾಥ್‌ರವರು ಮಾತನಾಡುತ್ತಾ ಪ್ರಸ್ತುತದ ದಿನಗಳಲ್ಲಿ ನಮ್ಮ ಸಮಾಜದಲ್ಲಿ ವಿವಾಹದ ವಯಸ್ಸಿಗೆ ಬಂದಿರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಜಾತಕ ಹೊಂದಾಣಿಕೆ, ಪರಸ್ಪರ ಅನ್ವೇಷಣೆ ಮಾಡುವುದು ತುಂಬಾ ಕಷ್ಟಕರವಾಗುತ್ತಿದೆ, ಸರಿಯಾದ ಜೋಡಿ ಸಿಗುವಲ್ಲಿ ಬಹಳ ಕಷ್ಟವನ್ನು ಅನುಭವಿಸುತ್ತಿರುವುದನ್ನು ಮನಗಂಡು ನಮ್ಮ ಸಮಾಜದ ಜಿಲ್ಲೆಯಲ್ಲಿನ ಹಲವಾರು ಹಿರಿಯರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಇಂದು ವಧು-ವರರ ಅನ್ವೇಷಣಾ ಕೇಂದ್ರವನ್ನು ತೆರೆಯಲಾಗಿದ್ದು, ಮದುವೆ ಅನ್ವೇಷಣೆ ಮಾಡುತ್ತಿರುವ ಸವಿತಾ ಸಮಾಜದ ಬಂಧುಗಳು ನಮ್ಮ ಕಛೇರಿಗೆ ಖುದ್ದು ಭೇಟಿ ನೀಡಿ ತಮ್ಮ ವಿವರಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ನಮ್ಮ ಸಂಪರ್ಕ ಕೇಂದ್ರದ ವತಿಯಿಂದ ಎರಡೂ ಕಡೆಯವರೊಟ್ಟಿಗೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವಂತಹ ಕಾರ್ಯಗಳನ್ನು ಮಾಡಲಾಗುವುದು ಎಂದು ತಿಳಿಸಿದರು. ಈ…

Read More

ತುಮಕೂರು: ತಾಂತ್ರಿಕವಾಗಿ ದೇಶ ಬೆಳೆಯುತ್ತಿದ್ದು “ಕೃತಕ ಬುದ್ಧಿಮತ್ತೆ’  ತಂತ್ರಜ್ಞಾನದಿ0ದಾಗಿ ಇನ್ಮಿಲ್ಲದ ಸಂಶೋಧ ನೆಗಳನ್ನು ನಡೆಯುತ್ತಿವೆ. ಬಾಹ್ಯಕಾಶ, ಆರೋಗ್ಯ, ತಂತ್ರಜ್ಞಾನ ಸೇರಿದಂತೆ ದೇಶದ ಭದ್ರತೆ ಮತ್ತು ಭವಿಷ್ಯಕ್ಕಾಗಿ ಇಂದಿನ ವಿದ್ಯಾರ್ಥಿ ಗಳು ಸಂಶೋಧನಾತ್ಮಕ ಅಧ್ಯಯನಗಳನ್ನು ನಡೆಸಬೇಕಾಗಿದೆ ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಶ್ರೀನಿವಾಸ ಅವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾ ನಿಕ್ ಅಂಡ್ ಟೆಲಿಕಮ್ಯುನಿಕೇಶನ್ ವಿಭಾಗ ಮತ್ತು ಬೆಂಗಳೂರಿನ  ಸಹಾಯೋಗದೊಂದಿಗೆ ಬುಧುವಾರದಂದು ಹಮ್ಮಿಕೊಳ್ಳಲಾಗಿದ್ದ ೫ನೇ ಅಂತರಾಷ್ಟ್ರೀಯ ಮೊಬೈಲ್ ನೆಟ್ವರ್ಕ್ ಅಂಡ್ ಟೆಲಿ ಕಮ್ಯುನಿಕೇಷನ್ಸ್-೨೦೨೫ ಸಮ್ಮೇಳನದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿದ ಅವರು, ದೇಶದಲ್ಲಿ ತಂತ್ರಜ್ಞಾನ ಬೆಳೆಯುತ್ತಿದ್ದರೂ ಅದರಲ್ಲಿನ ಲೋಪ ದೋಷಗಳು ಮತ್ತು ಸಮಸ್ಯೆ ಸವಾಲುಗಳು ಎದುರಾಗುತ್ತಿವೆ. ಸೈಬೈರ್ ಕ್ರೈಂ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಸುರಕ್ಷತಾ ಹಾದಿಯನ್ನು ಕಂಡುಕೊಳ್ಳುವ ಸಲುವಾಗಿ ವಿದ್ಯಾರ್ಥಿಗಳು ಕಲಿಯುವ ಹಂತದಲ್ಲಿಯೇ ಸಂಶೋಧನಾತ್ಮಕವಾಗಿ ಅಧ್ಯಯನಶೀಲರಾದರೆ ಮುಂದಿನ ದಿನಗಳಲ್ಲಿ ಅಂತಾರಾಷ್ಟಿಯ ಮಟ್ಟದಲ್ಲಿ ದೇಶೀಐ ತಂತ್ರಜ್ಞಾನವನ್ನು ಮುಂಚೂಣಿಗೆ ತರಬಹುದು ಎಂದರು. ಸಂಸ್ಥೆಯ ಉಪಾಧ್ಯಕ್ಷರಾದ ಡಾ.ಚಂಗಪ್ಪ…

Read More

ಕುಣಿಗಲ್: ಎಡೆಯೂರು ಸಿದ್ಧಲಿಂಗೇಶ್ವರ ಸ್ವಾಮಿಗಳನ್ನು ಬರಿ ಪವಾಡಪುರುಷರಾಗಿ ನೋಡಿ ದ್ದೇವೆ ಆದರೆ ಅವರ ಜ್ಞಾನಶಕ್ತಿ ಸಮಾಜದ ಡೊಂಕು ತಿದ್ದುವ ಭಂಡಾರವಾಗಿತ್ತು ಎಂದು ತುಮಕೂರು ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ಧಲಿಂಗಪ್ಪ ತಿಳಿಸಿದರು. ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂ ಗೇಶ್ವರ ದೇಗುಲದ ಸಮೀಪವಿರುವ ಶ್ರೀ ಸಿದ್ಧ ಲಿಂಗೇಶ್ವರ ಪ್ರೌಢಶಾಲೆಯಲ್ಲಿ ಕುಣಿಗಲ್ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಾಗಡಿ ಕಸಾಪ ಸಹಯೋಗದಲ್ಲಿ ನಡೆದ ಶ್ರೀ ಗುರು ಸಿದ್ಧಲಿಂಗೇಶ್ವರ ಸಮಗ್ರ ವಚನಗಳ ಸಂಗ್ರಹ ಮತ್ತು ಅರ್ಥ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಸಿದ್ಧಲಿಂಗೇಶ್ವರ ತತ್ವಗಳು ಮತ್ತು ಅವರ ಆ ಧ್ಯಾತ್ಮ ಸಿದ್ಧಾಂತ ಬದುಕಿನ ದಿಕ್ಕನ್ನು ಬದಲಿಸುತ್ತದೆ ಯೋಗಶಕ್ತಿ, ತಪಶಕ್ತಿಯಿಂದ ಇಂದಿಗೂ ಸಾಕಷ್ಟು ಭಕ್ತರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ಇವರು ಬರೆದಿರುವ ಅಮೂಲ್ಯ ವಚನಗಳ ಸಂಗ್ರಹವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡಿದೆ ವಚನಗಳಿಗೆ ಭಾವಾರ್ಥಗಳನ್ನು ಬರೆದು ಪುಸ್ತಕ ಹೊರತಂದು ಸಿದ್ಧಲಿಂಗೇಶ್ವರರ ವಚನಗಳನ್ನು ಉಳಿಸುವ ಕೆಲಸವಾಗಿದೆ. ಸಿದ್ಧಲಿಂಗೇಶ್ವರ ಸ್ವಾಮಿಗಳ ಗದ್ದಿಗೆ ದರ್ಶನ ಪಡೆಯುವವರು ಪುಸ್ತಕವನ್ನು ಓದಬೇಕು ಮತ್ತು ಎಡೆಯೂರು ಇತಿಹಾಸ…

Read More

ತುಮಕೂರು: ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಸಂಬ0ಧ ಕೈಗೊಂಡಿದ್ದ ಪೂರ್ವಭಾವಿ ಚಟುವಟಿಕೆಯಲ್ಲಿ ಶೇ. ೬೦.೭೧ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಮಹಾನಗರ ಪಾಲಿಕೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ-೨೦೨೬ರ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ೨೦೦೨ರ ಮತದಾರರ ಪಟ್ಟಿಯನ್ನು ಆಧಾರವಾಗಿಟ್ಟುಕೊಂಡು ಪ್ರಸ್ತುತ ೨೦೨೫ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಮ್ಯಾಪಿಂಗ್ ಪ್ರಕ್ರಿಯೆಯ ಮೂಲಕ ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ನಿವಾರಿಸಿ, ನಿಖರ ಮತ್ತು ದೋಷರಹಿತ ಪಟ್ಟಿಯನ್ನು ಸಿದ್ಧಪಡಿಸುವುದು ಅರಿವು ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ ಎಂದರು. ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ಕ್ಕೆ ಸಂಬAಧಿಸಿದAತೆ ಈವರೆಗೆ ಶೇ. ೬೦.೭೧ರಷ್ಟು ಪ್ರಗತಿಯನ್ನು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.…

Read More

ಕುಣಿಗಲ್: ಭಾರತೀಯ ಸಂಸ್ಕೃತಿಯ ಪ್ರತೀಕವಾದ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದೆ. ಪ್ರತಿಯೊಬ್ಬ ನಾಗರೀಕರ ಹಕ್ಕುಗಳನ್ನು ಗೌರವಿಸಬೇಕು. ಭಾರತೀಯ ಸಂವಿಧಾನವು ಮಾನವನ ಘನತೆ ಎತ್ತಿ ಹಿಡಿಯುವ ಹಲವಾರು ಮೌಲ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ಮಾನವ ಹಕ್ಕುಗಳ ಪಾವಿತ್ರ‍್ಯತೆಯನ್ನು ಅರಿಯಬೇಕೆಂದು ಸಂಪನ್ಮೂಲ ವ್ಯಕ್ತಿಗಳಾದ ಡಾ.ಎಂ.ಎಸ್.ನಾಗರಾಜು ಕರೆ ನೀಡಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಏರ್ಪಡಿಸಿದ್ದ ಭಾರತೀಯ ಸಂವಿಧಾನ ಮತ್ತು ಮಾನವೀಯ ಮೌಲ್ಯಗಳು ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಭಾರತೀಯ ಸಂವಿಧಾನವು ಮೂಲಭೂತ ಹಕ್ಕುಗಳನ್ನು ನೀಡುವ ಜೊತೆಗೆ ಎಲ್ಲರಿಗೂ ನ್ಯಾಯ, ಸಮಾನತೆ, ಸ್ವಾತಂತ್ರ‍್ಯ, ಭ್ರಾತೃತ್ವ, ಮಾನವ ಘನತೆ, ಧರ್ಮ ನಿರಪೇಕ್ಷತೆಯನ್ನು ಪ್ರತಿಪಾದಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ವ್ಯಕ್ತಿ ಸಹ ಉನ್ನತ ರಾಜಕೀಯ ಅಧಿಕಾರ ಪಡೆಯುವ ಅವಕಾಶ ನೀಡಿದೆ, ಯುವಜನರು ಸಂವಿಧಾನದತ್ತ ಮೌಲ್ಯಗಳ ಪಾಲಿಸಿ ಜವಾಬ್ದಾರಿಯುತ ಪ್ರಜೆಗಳಾಗಿ ಎಂದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಧಾಕೃಷ್ಣ ಮಾತನಾಡಿ ಮಾನವಹಕ್ಕುಗಳನ್ನು ಎಲ್ಲರೂ ಗೌರವಿಸಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನ…

Read More

ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಹಿತ್ತಲಪುರ ಗ್ರಾಮದ ಸರ್ವೆ ನಂ ೫೨ ರಲ್ಲಿರುವ ಅಯ್ಯನಗುಡ್ಡೆಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅಧಿಕಾರಿಗಳು ರಾತ್ರಿ ಏಳುಗಂಟೆ ಸಮಯದಲ್ಲಿ ಬಂದು ಸ್ಥಳ ಪರಿಶೀಲನೆ ನಡೆಸಿ ಸ್ಥಳದಲ್ಲಿ ಗುರುತು ಮಾಡಿ ಹೊಗಿರುವುದು ಇದೀಗ ಗ್ರಾಮದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ, ಶನಿವಾರ ರಂದು ತುಮಕೂರು ಉಪ ವಿಭಾಗಧಿಕಾರಿ,ತಹಶೀಲ್ದಾರ್,ಅರಣ್ಯ ಇಲಾಖೆಯ ಅಧಿಕಾರಿಗಳು ಕಂದಾಯ ಇಲಾಖೆಯ ಹಾಗೂ ಗಣಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಹಿತ್ತಲಪುರ ಗ್ರಾಮದ ಅಯ್ಯನಗುಡ್ಡೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳದಲ್ಲಿ ಗುರುತು ಮಾಡಿರುವುದು ಇದೀಗ ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ ಬುಧವಾರ ಉಜ್ಜನಿ, ಹಿತ್ತಲಪುರ, ಹಾಗೂ ಬಿ.ಜಿ ಕೋಪ್ಪಲು ಗ್ರಾಮಸ್ಥರು ಅಯ್ಯನಗುಡ್ಡೆ ಯಲ್ಲಿರುವ ಸಾಧು ಸಂತರು ವಾಸಿಸುವ ಗುಹೆಗೆ ಬೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಕಲ್ಲು ಗಣಿಗಾರಿಕೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದರು, ಬಳಿಕ ಮಾಧ್ಯಮದವರೊಂದಿಗೆ ಗ್ರಾಮಸ್ಥರು ಮಾತನಾಡಿ ಶನಿವಾರ ರಾತ್ರಿ ಏಳು ಗಂಟೆಯ ಸಮಯದಲ್ಲಿ ಅಧಿಕಾರಿಗಳು ಬಂದು ಗಣಿಗಾರಿಕೆ ನಡೆಸಲು…

Read More

ಸಿರಾ: ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ದಾಸರಾಗಿ ತಮ್ಮ ಮುಂದಿನ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಹಾಗಾಗಿ ಪ್ರಬುದ್ಧ ದೇಶದ ಆಸ್ತಿಯಾಗಬಲ್ಲ ಯುವಕರು ಇಂತಹ ದುಶ್ಚಟಗಳ ದಾಸರಾಗದೆ ತಮ್ಮ ಅಕ್ಕ ಪಕ್ಕದಲ್ಲಿ ಒಡನಾಟದಲ್ಲಿ ಇರುವವರನ್ನು ಸಹ ನಶೆಯಿಂದ ಮುಕ್ತಗೊಳಿಸಲು ಸಹಕರಿಸಬೇಕಾಗಿ ಶಿರಾ ನಗರ ಪಿಎಸ್‌ಐ ರೇಣುಕಾ ಯಾದವ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಬುಧವಾರ ಬುಕ್ಕಾಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಅಪರಾಧ ತಡೆ ಮಾಸಾಚರಣೆ ಹಾಗೂ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಆರೋಗ್ಯವಂತ ಯುವ ಸಮೂಹ ದೇಶದ ಆಸ್ತಿಯಾ ಗುತ್ತದೆ ಒಂದು ದೇಶ ಮುನ್ನಡೆಯಬೇಕಾದರೆ ದುಡಿಯುವ ಕೈಗಳ ಸಂಖ್ಯೆ ಹೆಚ್ಚಾಗಬೇಕು ಅವುಗಳು ಆರೋಗ್ಯವಂತವಾಗಿ ಶಕ್ತಿಯು ತವಾಗಬೇಕಾದರೆ ನಶೆ ಎಂಬ ಪಾಶದಿಂದ ಅವುಗಳನ್ನು ದೂರ ಮಾಡ ಬೇಕು ಹಾಗಾಗಿ ಯುವಕರು ಧೂಮಪಾನ, ಮಧ್ಯಪಾನ, ಇದ್ದಂತಹ ದುಶ್ಚಟಗಳಿಂದ ದೂರವಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ದೇಶದ ಪ್ರಗತಿಗೆ ನಿಮ್ಮಿಂದ ಆಗುವಂತಹ ಕಾಣಿಕೆಗಳನ್ನು ನೀಡುವಂತಹ ಪ್ರಯತ್ನ ಮಾಡಬೇಕು ಎಂದರು. ಅಪರಾಧ ನಡೆದ…

Read More

ಗುಬ್ಬಿ: ಮಾನವನ ಮೂಲಭೂತ ಹಕ್ಕುಗಳನ್ನು ಪ್ರತಿಯೊಬ್ಬರು ಪರಸ್ಪರ ಗೌರವಿಸಬೇಕು ಎಂದು ಪಿಎಸ್‌ಐ ಧರ್ಮಾಂಜಿ ತಿಳಿಸಿದರು. ತಾಲ್ಲೂಕಿನ ಕೆ ಜಿ ಟೆಂಪಲ್ ನ ಬೃಂದಾವನ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ನ್ಯಾಯಾಂಗ ಸುರಕ್ಷಾ ಪರಿಷದ್ ವತಿಯಿಂದ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಆರೋಗ್ಯ ಜಾಗೃತಿ ಮತ್ತು ರಕ್ತ ತಪಾಸಣೆ ಶಿಬಿರ ಉದ್ಘಾಟನೆ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು, ಮಾತನಾಡುವ ಹಕ್ಕು, ಸಂರಕ್ಷಣೆ ಹಕ್ಕು, ಭಾಗವಹಿಸುವಿಕೆ ಹಕ್ಕುಗಳಿಗೆವೆ. ಯಾರು ಯಾರಿಗೂ ನೋವುಂಟು ಮಾಡದೆ ಉತ್ತಮ ಮಾರ್ಗದಲ್ಲಿ ನಡೆಯಬೇಕು. ಇತ್ತೀಚಿಗೆ ಜನರು ಕುಟುಂಬದಲ್ಲಿ ಉತ್ತಮ ಸಂಸಾರಿಯೂಯಾಗದೆ ಹಾಗೂ ಸಂಸ್ಕಾರವನ್ನು ಬೆಳೆಸಿಕೊಳ್ಳದೆ ದಾರಿ ತಪ್ಪುತ್ತಿದ್ದಾರೆ. ಉತ್ತಮ ಸಂಸ್ಕಾರವನ್ನು ತಮ್ಮ ಜೀವನದಲ್ಲಿ ಬೆಳೆಸಿಕೊಳ್ಳುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಿದೆ. ಈ ನಿಟ್ಟಿನಲ್ಲಿ ಯಾರು ದುಶ್ಚಟಗಳಿಗೆ ಬಲಿಯಾಗದೆ ವ್ಯಸನ ಮುಕ್ತ ಸಮಾಜವನ್ನು ಕಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಇದರ ಜೊತೆಗೆ ಕಾನೂನು ಪರಿಪಾಲನೆ ಅತ್ಯಗತ್ಯ ಎಂದು ತಿಳಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ ಮಾತನಾಡಿ ಮಕ್ಕಳಿಗೆ…

Read More

ಪಾವಗಡ: ಪ್ರಧಾನ ಮಂತ್ರಿಗಳ ಆತ್ಮ ನಿರ್ಭರ ಯೋಜನೆಯನ್ನು ಪಿ.ಎಂ.ಸ್ವ ನಿಧಿ ಯೋಜನೆ ಅಡಿಯಲ್ಲಿ ಹಂತ ಹಂತವಾಗಿ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದು ತುಮಕೂರಿನ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ದೊಡ್ಡ ಆವಲಪ್ಪ ತಿಳಿಸಿದರು. ಬೀದಿಬದಿ ವ್ಯಾಪಾರಿಗಳ ಸಂಘದ ವತಿಯಿಂದ ಹೊಸ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬ ಬೀದಿಬದಿ ವ್ಯಾಪಾರಿಗಳು ಸಹ ಕಾರ್ಮಿಕ ಇಲಾಖೆ ಯಲ್ಲಿ ನೊಂದಾಯಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಬದ್ರೆಗೌಡ ಮಾತನಾಡಿ ಬೀದಿ ಬದಿ ವ್ಯಾಪಾರಿಗಳಿಗೆ ಕಾರ್ಮಿಕ ಇಲಾಖೆಯಲ್ಲಿ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಲ್ಲಿ ನೋಂದಾಯಿಸಿ ಕೊಳ್ಳಲಾಗುತ್ತಿದ್ದು, ಮರಣ ಅಪಘಾತ ಅಂತ್ಯಸ0ಸ್ಕಾರ ಮತ್ತಿತರ ಯೋಜನೆಗಳಲ್ಲಿ ಫಲಾನುಭವಗಳಿಗೆ ಸರ್ಕಾರದಿಂದ ಹಣವನ್ನ ನೀಡಲಾಗುತ್ತದೆ ಎಂದು ತಿಳಿಸಿದರು. ಪಟ್ಟಣದ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಗೇಟ್ ಕುಮಾರ್ ಮಾತನಾಡಿ ಪಟ್ಟ ಣದಲ್ಲಿ ಸುಮಾರು ೫೦೦ ಬೀದಿ ಬದಿ ವ್ಯಾಪಾ ರಿಗಳು ಈಗಾಗಲೇ ನೋಂದಾಯಿಸಿ ಕೊಂಡಿದ್ದು…

Read More