ತುಮಕೂರು: ಜಿಲ್ಲೆಯಲ್ಲಿರುವ ಅನರ್ಹ ಬಿಪಿಎಲ್ (ಪಿಹೆಚ್ಹೆಚ್) ಪಡಿತರ ಚೀಟಿದಾರರು ತಾವಾಗಿಯೇ ಎಪಿಎಲ್ (ಎನ್ಪಿಹೆಚ್ಹೆಚ್) ಪಡಿತರ ಚೀಟಿಗಳನ್ನಾಗಿ ಬದಲಾಯಿ ಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಸಲಹೆ ನೀಡಿದರು. ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವತಿಯಿಂದ ನಗರದ ದಿಬ್ಬೂರಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆಹಾರ ಅದಾಲತ್ ಕಾರ್ಯ ಕ್ರಮ ವನ್ನುದ್ದೇಶಿಸಿ ಮಾತ ನಾಡಿದ ಅವರು, ಅನರ್ಹರು ಬಿಪಿಎಲ್ ಕಾರ್ಡು ಹೊಂದುವುದರಿ0ದ ಅರ್ಹರು ಪಡಿತರ ಧಾನ್ಯ ವಿತರಣೆ ಯಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಪಡಿತರ ಚೀಟಿ ಹೊಂದಿಲ್ಲದೇ ಇರುವ ಅರ್ಹ ಬಡವರಿಗೆ ಪಡಿತರ ಚೀಟಿ ಹೊಂದಲು ಸಹಾಯ ಮಾಡುವ ಮೂಲಕ ಅಸಮಾನತೆಯನ್ನು ಹೋಗಲಾಡಿಸಲು ಸಹಕರಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಜಿಲ್ಲೆಯ ಪ್ರತಿ ತಾಲ್ಲೂಕಿನ ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಹಮ್ಮಿಕೊಳ್ಳಲಾಗಿದೆ. ಪಡಿತರ ಚೀಟಿದಾರರು ಜಿಲ್ಲಾ ಕೇಂದ್ರಕ್ಕೆ ಬರುವು ದನ್ನು ತಪ್ಪಿಸಲು ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಪಿಹೆಚ್ಹೆಚ್ ಪಡಿತರ ಚೀಟಿ…
Author: News Desk Benkiyabale
ತುಮಕೂರು: ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆಯ ಪ್ರಸ್ತಾವಿತ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಮಂಡಿಸಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ನ ಗೋ ರಕ್ಷಾ ವಿಭಾಗದ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ನಡೆದ ಪ್ರತಿಭಟನೆಯನ್ನು ಬೆಂಬಲಿಸಿ ಬಿಜೆಪಿ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ನಂತರ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಗರದ ಜಿಜಿಎಸ್ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಬಿಜೆಪಿ ಕಾರ್ಯಕರ್ತರು ಗೋ ಹತ್ಯೆ ತಡೆಯಲು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸಡಿಲಗೊಳಿಸಿ, ಗೋ ಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ಮುಂದಾಗಿರುವುದನ್ನು ವಿರೋಧಿಸಿ, ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ಘೋಷಣೆ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಕರೆತಂದಿದ್ದ ಗೋವುಗಳಿಗೆ ಕಾರ್ಯಕರ್ತರು ಪೂಜೆ ಸಲ್ಲಿಸಿ, ನಮಸ್ಕರಿಸಿದರು. ಈ ವೇಳೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಿ.ಜಿ. ಪ್ರದೀಪ್ಕುಮಾರ್, ಬಹುಸಂಖ್ಯಾತ ಹಿಂದೂಗಳು ಪೂಜಿಸುವ ಗೋ ಮಾತೆಯ ಹತ್ಯೆ ತಡೆಗೆ ಹಿಂದಿನ ಬಿಜೆಪಿ…
ತುಮಕೂರು: ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆಯ ಪ್ರಸ್ತಾವಿತ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಮಂಡಿಸಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ನ ಗೋ ರಕ್ಷಾ ವಿಭಾಗದ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ನಡೆದ ಪ್ರತಿಭಟನೆಯನ್ನು ಬೆಂಬಲಿಸಿ ಬಿಜೆಪಿ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ನಂತರ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಗರದ ಜಿಜಿಎಸ್ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಬಿಜೆಪಿ ಕಾರ್ಯಕರ್ತರು ಗೋ ಹತ್ಯೆ ತಡೆಯಲು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸಡಿಲಗೊಳಿಸಿ, ಗೋ ಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ಮುಂದಾಗಿರುವುದನ್ನು ವಿರೋಧಿಸಿ, ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ಘೋಷಣೆ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಕರೆತಂದಿದ್ದ ಗೋವುಗಳಿಗೆ ಕಾರ್ಯಕರ್ತರು ಪೂಜೆ ಸಲ್ಲಿಸಿ, ನಮಸ್ಕರಿಸಿದರು. ಈ ವೇಳೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಿ.ಜಿ. ಪ್ರದೀಪ್ಕುಮಾರ್, ಬಹುಸಂಖ್ಯಾತ ಹಿಂದೂಗಳು ಪೂಜಿಸುವ ಗೋ ಮಾತೆಯ ಹತ್ಯೆ ತಡೆಗೆ ಹಿಂದಿನ ಬಿಜೆಪಿ…
ತುಮಕೂರು: ಜಿಲ್ಲೆ ಸೇರಿದಂತೆ ಏಳು ಜಿಲ್ಲೆಗಳ ಜನರ ಕುಡಿಯುವ ನೀರಿನ ಬವಣೆ ತೀರಿಸುವ ಎತ್ತಿನಹೊಳೆ ಯೋಜನೆಯ ಶೇ೯೦ರಷ್ಟುç ಕಾಮಗಾರಿಗಳು ಪೂರ್ಣಗೊಂಡ ನಂತರ ಯೋಜನೆಗೆ ಕೇಂದ್ರ ಸರಕಾರ ಅಡ್ಡಿ ಪಡಿಸುತ್ತಿದ್ದು,ಈ ಬಗ್ಗೆ ಕೇಂದ್ರದ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಲು ಡಿಸೆಂಬರ್ ೧೩-೧೪ ರಂದು ರಾಜ್ಯ ಸರಕಾರದ ದೆಹಲಿ ನಿಯೋಗ ಕಂಡೊಯ್ಯಲಿದೆ ಎಂದು ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,೨೦೧೨ರಲ್ಲಿ ಆರಂಭವಾದ ಎತ್ತಿನಹೊಳೆ ಯೋಜನೆಯ ಶೇ೯೦ರಷ್ಟು ಕಾಮಗಾರಿ ಗಳು ಪೂರ್ಣಗೊಂಡಿದೆ.ಈಗ ಕೇಂದ್ರ ಸರಕಾರ ಯೋಜನೆಗೆ ನಿಗಧಿಗಿಂತ ಹೆಚ್ಚು ಭೂಮಿ ಬಳಕೆ ಮಾಡಲಾಗಿದೆ. ಹಸಿರು ಪೀಠದ ಅನುಮತಿ ಪಡೆದಿಲ್ಲ,ಇನ್ನಿತರ ಅನಗತ್ಯ ತರಕಾರುಗಳನ್ನು ತೆಗೆದು,ಯೋಜನೆ ವಿಳಂಭವಾಗಲು ಕಾರಣವಾಗುತ್ತದೆ. ಎತ್ತಿನ ಹೊಳೆ ಯೋಜನೆ ರಾಜ್ಯ ಸರಕಾರದ ಮಹಾತ್ವಕಾಂಕ್ಷೆಯ ಯೋಜನೆಯಾಗಿದ್ದು,ಜನರ ಕುಡಿಯುವ ನೀರಿನ ಬವಣೆ ತೀರಿಸಲು ಇರುವ ಮಹತ್ವದ ಯೋಜನೆಯಾಗಿದೆ.ಇದಕ್ಕೆ ಸಹಕಾರ ನೀಡುವ ಬದಲು,ಕೇಂದ್ರ ಸರಕಾರ ಯೋಜನೆ ಯನ್ನು ತಡೆಯಲು ಯತ್ನಿಸುತ್ತಿರುವುದು ಸರಿಯಲ್ಲ.ಇದರ ವಿರುದ್ದ ರಾಜ್ಯದ ಎಲ್ಲಾ ಸಂಸದರು ದ್ವನಿ ಎತ್ತಬೇಕಾಗಿದೆ ಎಂದರು. ಕೇAದ್ರ…
ಕೊರಟಗೆರೆ: ತಂದೆ-ತಾಯಿಗಳ ಆಸ್ತಿಗೆ ಮಾತ್ರ ವಾರಸುದಾರರಾಗು ವುದು ಸಾಕಾಗುವುದಿಲ್ಲ, ಅವರು ಬದುಕಿನಲ್ಲಿ ಅನುಸರಿಸಿದ ಆ ದರ್ಶಗಳು, ಮೌಲ್ಯಗಳು ಹಾಗೂ ಸಮಾಜಮುಖಿ ಚಿಂತನೆಗಳನ್ನು ಮುಂದುವರೆಸಿಕೊ0ಡು ಹೋಗುವುದು ಮಕ್ಕಳ ಪ್ರಮುಖ ಕರ್ತವ್ಯ ಎಂದು ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾಮಠದ ಪೀಠಾ ಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಕಾಮಧೇನು ಕನ್ವೆನ್ಷನ್ ಹಾಲ್ ನಲ್ಲಿ ಜಗ್ಗೇಶ್ ಅಭಿಮಾ ನಿಗಳ ಬಳಗ ಮತ್ತು ಫ್ರೆಂಡ್ಸ್ ಗ್ರೂಪ್ ಸೇವಾ ಸಮಿತಿ ವತಿಯಿಂದ ಸೋಮವಾರ ಆಯೋಜಿಸಿದ್ದ ಸಾಧಕರಿಗೆ ಅಭಿನಂದನಾ ಸಮಾರಂಭ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಪೋಷಕರು ನಡೆಸಿದ ಆದರ್ಶ ಜೀವನವನ್ನು ಮಕ್ಕಳು ತಮ್ಮ ಜೀವನ ದಲ್ಲಿ ಅಳವಡಿಸಿಕೊಂಡು,ಸಮಾಜಮುಖಿ ಯಾಗಿ ಬದುಕು ನಡೆಸಿದಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದು ಸ್ವಾಮೀಜಿ ಹೇಳಿದರು. ಸಾಧನೆ ಎಂಬುದು ಒಬ್ಬ ವ್ಯಕ್ತಿಯ ಪ್ರಯತ್ನ ಮಾತ್ರವಲ್ಲ, ಅನೇಕ ಮಂದಿಯ ಸಹಕಾರದ ಫಲ,‘ನಾನೊಬ್ಬನೇ ಸಾಧಿಸಿದ್ದೇನೆ’ ಎನ್ನುವು ದಕ್ಕಿಂತ, ‘ಎಲ್ಲರ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು ಎನ್ನುವ ಮನೋಭಾವವೇ ನಿಜವಾದ…
ತುಮಕೂರು: ಅಸಂಘಟಿತ ಕಾರ್ಮಿರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಾಣಿಕೆಯಲ್ಲಿ ಮಹತ್ವದ ಪಾತ್ರವಹಿಸುವ ಶ್ರಮಜೀವಿಗಳಾದ ಎಪಿಎಂಸಿ, ಮಿಲ್-ಗೋಡೌನ್-ವೇರಹೌಸ್, ನಗರ ಗ್ರಾಮೀಣ ಬಜಾರ, ರೈಲ್ವೆ ಸ್ಟೇಷನ್, ಬಂದರುಗಳಲ್ಲಿ ಲೋಡಿಂಗ್ ಅನ್ಲೋಡಿಂಗ ಕೆಲಸ ನಿರ್ವಹಿಸುವ ಹಮಾಲಿ ಕಾರ್ಮಿಕರ ಬದುಕಿನ ಪ್ರಮುಖ ಪ್ರಶ್ನೆಗಳಿಗಾಗಿ, ಪ್ರಮುಖ ಬೇಡಿಕೆಗಳಿಗಾಗಿ ಒತ್ತಾಯಿಸಿ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದರು ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್(ಸಿ.ಐ.ಟಿ.ಯು) ಪ್ರತಿಭಟನೆ ನಡೆಸಿ ಮನವಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ನಿಡಲಾಯಿತು. ಕರ್ನಾಟಕ ರಾಜ್ಯ ಸರಕಾರ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿ0ದ ಅಂಬೇಡ್ಕರ ಸಹಾಯ ಹಸ್ತ ಸ್ಮಾರ್ಟ ಪಡೆದ ಹಮಾಲಿ ಕಾರ್ಮಿಕರು ಸೇರಿದಂತೆ ೮೫ಕ್ಕೂ ಹೆಚ್ಚು ವಲಯದ ಅಸಂಘಟಿತ ಕಾರ್ಮಿಕರಿಗೆ ಕೇವಲ ಅಪಘಾತ ಸಂಬ0ಧಿಸಿದ ಕೆಲ ಪರಿಹಾರ ನೀಡುವ ಯೋಜನೆಗಳನ್ನು ಜಾರಿಮಾಡಲಾಗುತ್ತಿದೆ ಆ ದರೇ ಸರಕಾರ ನಿರ್ಧಿಷ್ಟವಾಗಿ ಯಾವುದೇ ಹಣಕಾಸಿನ ನೇರವು ನೀಡಿಲ್ಲ. ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬ0ಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕ್ಷೇಮಾಭಿವೃದ್ಧಿ…
ತುಮಕೂರು: ಸಮಾಜದಲ್ಲಿ ಕ್ರೌರ್ಯ, ಅಹಿಂಸೆಯ ವಾತಾ ವರಣ ಹೆಚ್ಚುತ್ತಿದ್ದು, ಹಲವರು ಅಸುರಕ್ಷಿತ ವಾತಾವರಣದಲ್ಲಿ ಬದುಕು ತ್ತಿದ್ದಾರೆ. ಅಭದ್ರತೆಯಲ್ಲಿರುವ ಎಲ್ಲರಿಗೆ ಸುರಕ್ಷಿತ ವಾತಾವರಣ ಮೂಡಿಸಬೇಕಾಗಿದೆ ಎಂದು ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷೆ ಎಂ.ಸಿ.ಲಲಿತ ಪ್ರತಿಪಾದಿಸಿದರು. ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರ, ಜನಶಿಕ್ಷಣ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಅಂಗವಾಗಿ ಸರಸ್ವತಿಪುರಂನ ಜೋಹ ಮಹಿಳಾ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಿತ್ಯವೂ ಒಂದಲ್ಲಾ ಒಂದು ಕಡೆ ಅತ್ಯಾಚಾರ ಪ್ರಕರಣ, ಹೆಣ್ಣು ಮಕ್ಕಳ ಕೊಲೆ, ದೌರ್ಜನ್ಯ, ಶೋಷಣೆ ವರದಿಯಾಗುತ್ತಲೇ ಇವೆ. ಇವುಗಳಿಗೆ ಕಡಿವಾಣ ಹಾಕಬೇಕಾದರೆ ಸಾಮಾಜಿಕವಾಗಿ ಚರ್ಚೆ ಮತ್ತು ಅರಿವಿನ ಕಾರ್ಯಕ್ರಮಗಳು ಹೆಚ್ಚಬೇಕಾಗಿದೆ ಎಂದರು. ಭ್ರೂಣಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ನಿರಂತರವಾಗಿ ಹೆಣ್ಣು ಮಕ್ಕಳ ಬಗ್ಗೆ ತಾತ್ಸಾರ ಮನೋಭಾವ ಹೊಂದಿದ ಪರಿಣಾಮ ಸಮಾಜದಲ್ಲಿ ಇಂದು ಲಿಂಗ ಅಸಮಾನತೆ ಮುಂದುವರಿದೇ ಇದೆ. ಕೆಲವು ವಾತಾವರಣದಲ್ಲಿ, ವರ್ಗಗಳಲ್ಲಿ ಹೆಣ್ಣು ಮಕ್ಕಳು…
ಕೊರಟಗೆರೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿ ಸಾವಿರಾರು ಸಂಖ್ಯೆ ಡಾ.ಜಿ.ಪರಮೇಶ್ವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯ ಕರ್ತರು, ಮಠಾಧೀಶರುಗಳು, ಸಾರ್ವಜನಿಕರು ಬೃಹತ್ ಪ್ರತಿಭಟನಾ ರ್ಯಾಲಿ ಪಟ್ಟಣದಲ್ಲಿ ನಡೆಸಿದರು. ಕರ್ನಾಟಕ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗು ತ್ತಿದ್ದಂತೆ ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಸಾವಿರಾರು ಡಾ.ಜಿ. ಪರಮೇಶ್ವರ ಅಭಿಮಾನಿಗಳು ಬೃಹತ್ ಮೆರವಣಿಗೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊ0ದಿಗೆ ಕೊರಟಗೆರೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರಧಾನ ರಸ್ತೆ ಮೂಲಕ ಮುಖ್ಯ ಬಸ್ಸ್ಟಾöಂಡ್ ವೃತ್ತದವರೆಗೆ ಘೊಷನೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು, ಯುವಕರು ಬೈಕ್ ರ್ಯಾಲಿಯೊಂದಿಗೆ ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ರವರೆ ಅಗಬೇಕು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೆ ಮೊದಲ ಆಧ್ಯತೆ ಡಾ.ಜಿ.ಪರಮೇಶ್ವರ್ ರವರಿಗೆ ನೀಡಬೇಕೆಂದು ಘೋಷಣೆ ಕೊಗಿದರು, ಮೆರವಣಿಗೆಯಲ್ಲಿ ಮಹಿಳೆಯರು ಬಹುದೊಡ್ಡ ಸಂಖ್ಯೆಯಲ್ಲಿ ಭಾಗ ವಹಿಸಿ ಡಾ.ಜಿ.ಪರಮೇಶ್ವರರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇ ಬೇಕು, ಕಾಂಗ್ರೆಸ್ ಪಕ್ಷಕ್ಕಾಗಿ ಅವರು ಸಾಕಷ್ಟು ದುಡಿದಿದ್ದಾರೆ, ತ್ಯಾಗ ಮಾಡಿದ್ದಾರೆ, ಸಜ್ಜನ ರಾಜಕಾರಣಿಯಾದ ಅವರನ್ನು ದಲಿತ…
ತಿಪಟೂರು: ಡಿ.೧೩ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ತುಮಕೂರಿನ ಸರಸ್ವತಿ ಪುರಂನಲ್ಲಿ,ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ತುಮಕೂರು ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘ ಸಂಘದ ಸಂಯುಕ್ತಾಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜಿಲ್ಲಾ ಬಂಜಾರ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘದ ಜಿಲ್ಲಾಧ್ಯಕ್ಷ ಡಿ. ನಾರಾಯಣ್ ನಾಯಕ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಯಲ್ಲಿ,ಉದ್ಘಾಟನಾ ಕಾರ್ಯಕ್ರಮದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಶ್ರೀ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಶ್ರೀ ಸೇವಾಲಾಲ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಭವನದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ನೆರವೇರಿಸಲಿದ್ದು, ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ತಾಂಡಾಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ ನಾಯಕ್ ಸಮಾರಂಭವನ್ನು ಉದ್ಘಾಟಿಸಲಿದ್ದು,ಉಪ ಸಭಾಪತಿ ರುದ್ರಪ್ಪ ಲಮಾಣಿ,…
ತಿಪಟೂರು: ಪತ್ರಿಕಾ ವೃತ್ತಿಯಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಮಾತ್ರ ಸಮಾಜ ಗೌರವ ನೀಡುತ್ತದೆ. ವೃತ್ತಿ ಬದ್ದತೆಯೊಂದಿಗೆ ಕೆಲಮಾಡಿ ಆಡಳಿತದಲ್ಲಿ ತಪ್ಪುಗಳಾದಾಗ ಸರಿದಾರಿಗೆ ತರುವ ಕೆಲಸ ಮಾಡಬೇಕು ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ ಕಲ್ಪತರು ಕ್ರಾಂತಿ ಕನ್ನಡ ವಾರಪತ್ರಿಕೆ ೧೩ನೇ ವಾರ್ಷಿಕೋತ್ಸವ, ವಿಶೇಷ ಸಂಚಿಕೆ ಬಿಡುಗಡೆ, ಸಾಧಕರಿಗೆ ಸನ್ಮಾನ, ಭಾವಗೀತೆ ಗಾಯನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಂವಿಧಾನದಲ್ಲಿ ಶಾಸಕಾಂಗ ಕಾರ್ಯಾಂಗ ನ್ಯಾಯಾಂಗಗಳ ಜೊತೆ ಪತ್ರಿಕಾರಂಗವನ್ನು ನಾಲ್ಕು ಅಂಗವಾಗಿ ಭಾವಿಸಿದ್ದೇನೆ. ಸಮಾಜದಲ್ಲಿ ನೈಜ ನೈತಿಕ ಹೊಣೆ ಹೊತ್ತ ಪತ್ರಿಕಾ ಅಂಗ ಪಾರದರ್ಶಕವಾಗಿ ಸತ್ಯದ ಹಾದಿಯಲ್ಲಿ ಸಾಗಬೇಕು ಅಲ್ಲದೆ ಪತ್ರಕರ್ತರು ಯಾವುದೇ ಸುದ್ದಿಯನ್ನು ನಿಖರವಾಗಿ ಮಾಡಿಬೇಕು. ಸಕಾರತ್ಮಕ ವಿಚಾರಗಳಿರಲಿ, ನಕಾರಾತ್ಮಕ ವಿಚಾರಗಳಿರಲಿ ವಸ್ತು ನಿಷ್ಠವಾಗಿ ವರದಿಮಾಡಿ, ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾಗ ಪ್ರೋತ್ಸಹಿಸಿ ಬೆನ್ನು ತಟ್ಟುವ ಕೆಲಸ ಮಾಡಿ, ಯಾವುದೇ ಕಾರಣಕ್ಕೂ ತಾರತಮ್ಯ ಮಾಡ ಮಾಡಬಾರದು. ನಡೆಯುವ ಮನುಷ್ಯ ಎಡವುದು ಸಹಜ, ಹಾಗೆ ಆಡಳಿತ ಮಾಡುವವರು ತಪ್ಪುಗಳನ್ನು…











