Author: News Desk Benkiyabale

ಹುಳಿಯಾರು: ವಿದ್ಯಾರ್ಥಿಗಳು ಓದುವ ವಿಷಯದಲ್ಲಿ ಹಾಗೂ ಗುರಿ ಸಾಧಿಸುವಲ್ಲಿ ಸ್ವಾರ್ಥಿಗಳಾಗಬೇಕು, ಸದಾ ಕ್ರಿಯಾಶೀಲರಾಗಿರಬೇಕು, ಸ್ವಾವಲಂಭಿಗಳಾಗಿರಬೇಕು. ನಿಂತ ನೀರಿನಂತಾಗದೆ ಹರಿಯುವ ನೀರಿನಂತೆ ಪರಿಶುದ್ಧವಾದ ಮನಸ್ಸಿನಿಂದ ಇರಬೇಕು. ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವ ಬೆಳಸಿಕೊಳ್ಳಬೇಕು. ನಾನು ಎನ್ನುವ ಸ್ವಾರ್ಥ ಬಿಟ್ಟು ನಾವು ಎನ್ನುವ ನಿಸ್ವಾರ್ಥತೆಯನ್ನು ಬೆಳಸಿಕೊಂಡಾಗ ಸಮಾಜದಲ್ಲಿ ಅಜಾತಶತ್ರುವಾಗಿ ಬೆಳೆಯಬಹುದು ಎಂದು ಅಬ್ಯಾಕಸ್ ಶಿಕ್ಷಕಿ  ಮನೋಜ್ ಅವರು ತಿಳಿಸಿದರು. ಹುಳಿಯಾರಿನಲ್ಲಿ ತಾವು ನಡೆಸುತ್ತಿರುವ ಅಬ್ಯಾಕಸ್‌ನಿಂದ ಬಂದ ಲಾಭಾಂಶದಲ್ಲಿ ಹುಳಿಯಾರಿನ ಕೇಶವಾ ವಿದ್ಯಾ ಮಂದಿರದ ಎಲ್‌ಕೆಜಿಯಿಂದ ೭ ನೇ ತರಗತಿಯ ಅಷ್ಟೂ ವಿದ್ಯಾರ್ಥಿಗಳಿಗೆ ಹಾಟ್ ಅಂಡ್ ಕೋಲ್ಡ್ ವಾಟರ್ ಬಾಟಲ್‌ಗಳನ್ನು ಉಚಿತವಾಗಿ ವಿತರಿಸಿ ಅವರು ಮಾತನಾಡಿ ನಾವು ಹುಟ್ಟಿದಾಗ ಎನನ್ನೂ ತೆಗೆದುಕೊಂಡು ಬರಲಿಲ್ಲ, ಸತ್ತಾಗಲೂ ಎನ್ನನ್ನೂ ತೆಗೆದುಕೊಂಡು ಹೋಗುವುದಿಲ್ಲ. ಹಾಗಾಗಿ ದುಡಿದ ಅಷ್ಟೂ ಹಣವನ್ನು ಕೂಡಿಡದೆ ಸ್ವಲ್ಪ ಹಣವನ್ನು ಸೇವಾ ಕಾರ್ಯಗಳಿಗೆ ಬಳಸಬೇಕೆಂದು ನಿರ್ಧರಿಸಿ ವಿದ್ಯಾರ್ಥಿಗಳಿಗೆ ವಾಟರ್ ಬಾಟಲ್ ನೀಡುತ್ತಿರುವುದಾಗಿ ತಿಳಿಸಿದರು. ಮನುಷ್ಯನ ಆರೋಗ್ಯಕ್ಕೆ ನೀರು ಅತಿ ಮುಖ್ಯ. ಶುದ್ಧ ನೀರು ಕುಡಿಯುವ ಜೊತೆಗೆ…

Read More

ತುಮಕೂರು: ಬಂಜಾರ ಸಮಾಜದ ಹಲವು ಆಚಾರ-ವಿಚಾರಗಳು ನಶಿಸಿ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇವುಗಳನ್ನು ಮುಂದಿನ ತಲೆಮಾರಿಗೆ ಕಾಪಾಡಿ ಉಳಿಸಲೆಂದು ನಿಗಮವು ಒಂದು ಕೋಟಿ ಇಪ್ಪತ್ತು ಲಕ್ಷ ರೂ. ವೆಚ್ಚ ಮಾಡಿ ರಾಜ್ಯದಾದ್ಯಂತ ಕಲಾ ಮೇಳಗಳನ್ನು ಆಯೋಜಿಸುತ್ತಿದೆ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷೆನ್.ಜಯದೇವ್ ನಾಯಕ್ ತಿಳಿಸಿದ್ದಾರೆ ನಗರದ ಬಂಜಾರ ಭವನದಲ್ಲಿ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಲಯ ಕಚೇರಿಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕಲಾ ಮೇಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಯುವಕರು ಈ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದರು ಕಾರ್ಯಕ್ರಮದಲ್ಲಿ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಡಿ. ನಾರಾಯಣ ನಾಯ್ಕ್, ಪ್ರಧಾನ ಕಾರ್ಯದರ್ಶಿ ಶಂಕರ್ ಬಿ, ತುಮಕೂರು ವಲಯ ಅಧಿಕಾರಿ ಸಂಗಮೇಶ, ಶ್ರೀ ಸೇವಾಲಾಲ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಬೇಂದ್ರ ನಾಯ್ಕ್, ನಿರ್ದೇಶಕರು ದೇಶ್ಯಾ ನಾಯ್ಕ್, ಸಕ್ರ ನಾಯ್ಕ್, ಮಾಜಿ ಜಿ.ಪಂ. ಸದಸ್ಯರು ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು…

Read More

ತುಮಕೂರು:ಕನ್ನಡ ನಾಡು ನುಡಿಗೆ ದುಡಿದವರನ್ನು ನವೆಂಬರ್ ಮಾಹೆಯಲ್ಲಿ ಇಡೀ ತಿಂಗಳು ಅವರುಗಳನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ,ನಗರದ ಸಂಘ-ಸ0ಸ್ಥೆಗಳು ಕನ್ನಡಕ್ಕಾಗಿ ದುಡಿದವರನ್ನು ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುತ್ತಿರುವುದು ನಮಗೆ ಸಂತಸ ತಂದಿದೆ,ತಾಯ0ದಿರು ತಮ್ಮ ಮಕ್ಕಳಿಗೆ ತಾಯಿ ಭಾಷೆ ಕನ್ನಡವನ್ನು ಹೇಳಿಕೊಡಿ,ನಿರ್ಭಯ ಮಹಿಳಾ ಜಾಗೃತಿ ವೇದಿಕೆ ಉತ್ತಮ ಕೆಲಸಗಳನ್ನು ಮಾಡುತ್ತಾ ಮಹಿಳೆಯರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದೆ ಅವರ ಸಂಸ್ಥೆಯ ಜೊತೆ ಶಾಸಕನಾಗಿ ನಾನು ಸದಾ ಇರುತ್ತೇನೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು. ಅವರು ನಗರದ ೩೧ನೇ ವಾರ್ಡಿನ ಜಯನಗರ ಮಾರ್ಕೆಟ್ ಪಕ್ಕದಲ್ಲಿ ಸಂಕಲ್ಪ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಘ,ಕನ್ನಡ ಸಾಹಿತ್ಯ ಪರಿಷತ್ತು ನಗರ ಘಟಕ,ನಿರ್ಭಯ ಮಹಿಳಾ ಜಾಗೃತಿ ವೇದಿಕೆಯಿಂದ ಹಮ್ಮಿಕೊಂಡಿದ್ದ ವೈಭವದ ಕನ್ನಡ ರಾಜ್ಯೋತ್ಸವನ್ನು ಉದ್ಘಾಟಿಸಿ ಮಾತನಾಡಿದರು. ಮಾಜಿ ಶಾಸಕ ಡಾ. ಎಸ್.ರಫೀಕ್ ಅಹಮದ್ ರವರು ಮಾತನಾಡುತ್ತಾ ಸಂಘ-ಸAಸ್ಥೆಗಳಿ0ದ ಕನ್ನಡ ಭಾಷೆಗಾಗಿ ಕನ್ನಡ ಉಳಿವಿಗಾಗಿ ಜಾಗೃತಿ ಮೂಡಿಸುತ್ತಿವೆ,ನಿರ್ಭಯ ಮಹಿಳಾ ವೇದಿಕೆಯು ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದೆ,ಮಹಿಳೆಯರಿಗೆ ಎಂತಹುದೇ…

Read More

ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಸುಮಾರು ೨೯ ಕೆರೆಗಳಿಗೆ ನೀರು ಬಿಡುವ ಏತ ನೀರಾವರಿ ಯೋಜನೆಗೆ ಸರ್ಕಾರ ಹೆಚ್ಚುವರಿ ಅನುದಾನ ಮಂಜೂರು ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರ ಅವರು ನೀರಾವರಿಯಿಂದ ವಂಚಿತರಾಗಿರುವ ದಬ್ಬೇಘಟ್ಟ ಹೋಬಳಿಯ ಜನರಿಗೆ ಈ ಕಾಮಗಾರಿ ಆದಲ್ಲಿ ಬಹುಪಾಲು ನೀರಿನ ಸಮಸ್ಯೆಯನ್ನು ಬಗೆಹರಿಸಿದಂತಾಗುತ್ತದೆ. ಈಗಾಗಲೇ ಮಲ್ಲಾಘಟ್ಟ ಕೆರೆಯಿಂದ ಕಾಮಗಾರಿ ಆರಂಭವಾಗಿದೆ. ಮಲ್ಲಾಘಟ್ಟದ ಬಳಿ ಜಾಕ್ವೆಲ್ ನಿರ್ಮಿಸಲಾಗಿದೆ. ಅಲ್ಲಿಂದ ನೀರು ಹರಿಸುವ ಸಲುವಾಗಿ ಪೈಪ್ ಲೈನ್ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಈಗಾಗಲೇ ವೈಟಿ ರಸ್ತೆ ವರೆಗೆ ಪೈಪ್ ಲೈನ್ ಕಾಮಗಾರಿ ಮುಗಿದಿದೆ. ಒಟ್ಟು ೪೮ ಕೋಟಿ ಯೋಜನೆಗೆ ಸರ್ಕಾರ ಕೇವಲ ೯ ಕೋಟಿಯಷ್ಟು ಹಣ ಮಾತ್ರ ಬಿಡುಗಡೆಗೊಳಿಸಿದೆ. ಉಳಿದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆ ಚಾಲನೆಯಲ್ಲಿದೆ. ತಿಪಟೂರು, ಗುಬ್ಬಿ ತಾಲ್ಲೂಕಿನಲ್ಲಿ ಕಾಮಗಾರಿ ಮಾಡಲು ತಲಾ…

Read More

ಚಿಕ್ಕನಾಯಕನಹಳ್ಳಿ: ನಮ್ಮ ದೇಸಿ ಕ್ರೀಡೆಗಳಿಗೆ ಅವಕಾಶಗಳನ್ನು ನೀಡಿ ಅವುಗಳನ್ನು ಉಳಿಸಿ ಬೆಳೆಸುತ್ತಿರುವುದು ನಮ್ಮ ಗ್ರಾಮೀಣ ಭಾಗದಲ್ಲಿ ಅಂತಹ ಕೆಲಸವನ್ನು ಗೋಡೆಕೆರೆಯ ಶ್ರೀಲಾಲ್ಬಹದ್ದೂರ್ಶಾಸ್ತ್ರೀ ಕ್ರೀಡಾ ಸಂಘ ಕಳೆದ ೪೯ ವರ್ಷಗಳಿಂದ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ತಿಳಿಸಿದರು. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆಯಲ್ಲಿ ಗೋಡೆಕೆರೆ ಮಠದ ಶ್ರೀ ಮೃತ್ಯುಂಜಯ ದೇಶೀಕೇಂದ್ರ ಸ್ವಾಮಿ ದಿವ್ಯ ಸಾನಿದ್ಯದಲ್ಲಿ ಸೋವವಾರ ರಾತ್ರಿ ಶ್ರೀ ಸಿದ್ದರಾಮೇಶ್ವರ ಸ್ವಾಮಿಯ ಲಕ್ಷ ದೀಪೋತ್ಸವದ ಅಂಗವಾಗಿ ಶ್ರೀಲಾಲ್ ಬಹದ್ದೂರ್ಶಾಸ್ತ್ರೀ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಜಗೋಸಿರಾ ಕಪ್ನ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದೆ ಗುರು ಮುಂದೆ ಗುರಿ ಇಟ್ಟುಕೊಂಡರೆ ನಮ್ಮ ಸಾಧನೆ ಸಾದ್ಯ ಎಂಬುದಕ್ಕೆ ಕಳೆದ ೪೯ ವರ್ಷಗಳಿಂದ ಈ ದೇಸಿ ಕ್ರೀಡೆಯನ್ನು ಏರ್ಪಡಿಸುತ್ತಾ ಈ ಕ್ಷೇತ್ರದ ಇಬ್ಬರು ಗುರುಗಳ ನೇತೃತ್ವದಲ್ಲಿ ನಡೆಯುತ್ತಿದೆ ಈ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಾ ಇಲ್ಲಿಗೆ ೨ ಕೋಟಿ ವೆಚ್ಚವನ್ನು ನೀಡಲಾಗಿದ್ದು ಈ ಸುಕ್ಷೇತ್ರದಲ್ಲಿನ ಮೃತ್ಯುಂಜಯಸ್ವಾಮಿಗಳು ನಿತ್ಯ ದಾಸೋಹವನ್ನು…

Read More

ತುಮಕೂರು: ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ ೫೦ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ೨೮ರಂದು ಬೆಂಗಳೂರಿನಲ್ಲಿ ನಡೆಯುಲಿರುವ ಕಾರ್ಯಕ್ರಮದಲ್ಲಿ ಐದು ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಜಿಜಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದೂ ಸೇರಿದಂತೆ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಪೂರಕ ಮಹತ್ತರ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕಪಡೆ ಲೋಕಾರ್ಪಣೆ ಹಾಗೂ ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತ ರಾಜ್ಯ ಮಟ್ಟದ ಸಮಾವೇಶಕ್ಕೆ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಮಾಜಿ ಪ್ರಧಾನಿ ಇಂದಿರಾಗಾ0ಧಿಯವರು ಬಲಿಷ್ಠ ಭಾರತ ನಿರ್ಮಾಣದ ಕನಸು ಹೊತ್ತು ೧೯೭೫ರಲ್ಲಿ ಆರಂಭಿಸಿದ ಸಮಗ್ರ ಶಿಶು ಅಭಿವದ್ಧಿ ಸೇವೆಗಳ ಯೋಜನೆ ಐಸಿಡಿಎಸ್‌ಗೆ ೫೦ ವರ್ಷ ತುಂಬಿದ ಹಿನ್ನೆಲೆಯಲ್ಲಿ ಇದೇ ೨೮ರಂದು ಬೆಂಗಳೂರಿನಲ್ಲಿ ಬೃಹತ್…

Read More

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಇ-ಸ್ವತ್ತು ದಾಖಲೆಗಳನ್ನು ನೀಡುವಲ್ಲಿ ನಡೆಯುತ್ತಿರುವ ವಿಳಂಬ ಮತ್ತು ಅವ್ಯವಸ್ಥೆ ಕುರಿತು ನಾಗರಿಕರಿಂದ ಜಿಲ್ಲಾಧಿಕಾರಿಗಳಿಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ದಿಢೀರ್ ಪಾಲಿಕೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾಲಿಕೆಯ ಆಸ್ತಿ ದಾಖಲಾತಿ ವಿಭಾಗದಲ್ಲಿ ಆನ್‌ಲೈನ್ ಮೂಲಕ ಸಲ್ಲಿಕೆಯಾದ ಹಲವು ಅರ್ಜಿಗಳು ಕಂದಾಯ ನಿರೀಕ್ಷಕರ ಹಂತದಲ್ಲೇ ದೊಡ್ಡ ಪ್ರಮಾಣದಲ್ಲಿ ಬಾಕಿ ಉಳಿಸಿರುವುದು, ದಾಖಲೆಗಳ ಪರಿಶೀಲನೆಗೆ ತಿಂಗಳುಗಟ್ಟಲೆ ಕಾಯುವ ಅನಿವಾರ್ಯ ಪರಿಸ್ಥಿತಿ ಮತ್ತು ಕೆಲ ಕಡೆಗಳಲ್ಲಿ ಅಧಿಕಾರಿಗಳ ಅಸಮರ್ಪಕ ಸೇವಾ ಮನೋಭಾವ ಕಂಡು ಬಂದ ಕಾರಣ ಜಿಲ್ಲಾಧಿಕಾರಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಸಲ್ಲಿಸಿದ ಅಂಕಿ-ಅ0ಶಗಳ ಪ್ರಕಾರ ನೂರಾರು ಇ-ಸ್ವತ್ತು ಅರ್ಜಿಗಳು ಕಂದಾಯ ನಿರೀಕ್ಷಕರ ಮಟ್ಟದಲ್ಲಿ ಬಾಕಿ ಉಳಿದಿದ್ದು, ಸಾರ್ವಜನಿಕರು ಸಮಯಕ್ಕೆ ದಾಖಲೆಗಳನ್ನು ಪಡೆಯಲು ಸಾಧ್ಯವಾಗದೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಸಾರ್ವಜನಿಕರನ್ನು ದಿನಗಟ್ಟಲೆ ಕಚೇರಿಯ ಸುತ್ತ ಸುತ್ತಿಸುವುದು ಅಧಿಕಾರಿಗಳ ನಿರ್ಲಕ್ಷö್ಯವನ್ನೇ ತೋರಿಸುತ್ತದೆ ಎಂದು ಜಿಲ್ಲಾಧಿಕಾರಿ ಆಕ್ರೋಶ ವ್ಯಕ್ತಪಡಿಸಿ, ಇದೇ ರೀತಿಯ…

Read More

ಹುಳಿಯಾರು: ಹುಳಿಯಾರಿನ ಬಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪುನಶ್ಚೇತನ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ವೇಳೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮಿಡಿಗೇಶಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿಯಾದ ಮಂಜು ಭಾರ್ಗವಿಯವರು ಮಾತನಾಡುತ್ತ ರಾಷ್ಟ್ರೀಯ ಸೇವಾ ಯೋಜನೆಯು ಸೆ.೨೪ ೧೯೬೯ ರಲ್ಲಿ ಮಹಾ ತ್ಮಗಾಂಧಿ ಜನ್ಮ ಶತಮಾನೋತ್ಸವ ಸ್ಮರಣಾ ರ್ಥವಾಗಿ ಜಾರಿಯಾಗಿ ದೇಶದಾದ್ಯಂತ ಸೇವಾ ಮನೋಭಾವವನ್ನು ಬೆಳೆಸಿ ಆ ಮೂಲಕ ದೇಶ ನಿರ್ಮಾಣ ಮತ್ತು ಸಮಾಜ ಹಿತ ಕಾಯುವ ಒಂದು ಕಲ್ಯಾಣ ಕಾರ್ಯಕ್ರಮವಾಗಿದ್ದು ಯುವ ಮನಸ್ಸಿನಲ್ಲಿ ಸಾವಿರಕ್ಕೂ ಹೆಚ್ಚು ಕ್ರಿಯಾಶೀಲ ಕಾರ್ಯಗಳನ್ನು ಈ ಯೋಜನೆಯ ಮೂಲಕ ಸೇವೆ ಮಾಡಬಹುದಾಗಿದ್ದು  ಸಮಾಜದ ಕನಸನ್ನು ನನಸು ಮಾಡಲು ಈ ಯೋಜನೆ ಸಹಾಯಕವಾಗಿದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ ವೀರಣ್ಣ ಎಸ್.ಸಿ ರವರು ಈ ಯೋಜನೆ ಯುವ ಮನಸ್ಸುಗಳಲ್ಲಿ ಉತ್ಸಾಹದ ಬುಗ್ಗೆಯನ್ನು ತುಂಬುವ, ನಾಯಕತ್ವದ ಗುಣಗಳನ್ನು ಬೆಳೆಸುವ, ಜಾಗೃತಿ ಮೂಡಿಸುವ ಮುಂದಾಳು, ಈ ಯೋಜನೆ ಯಾಗಿದ್ದು ಬದುಕಿನ ಭಾಗವಾದಾಗ ಮಾತ್ರ…

Read More

ತುಮಕೂರು: ನಗರದ ಮರಳೂರಿನ ಎಸ್.ಎಸ್. ಐ.ಟಿ ಹಿಂಭಾಗದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಅವರ ೧೦೮ನೇ ಜನ್ಮಜಯಂತಿ ಕಾರ್ಯಕ್ರಮವನ್ನು ಡಿಸಿಸಿ ಅಧ್ಯಕ್ಷ ಚಂದ್ರ ಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಇಂದಿರಾಗಾ0ಧಿ ಅವರ ಭಾವಚಿತ್ರಕ್ಕೆ ಹಿರಿಯಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪುಷ್ಪ ನಮನ ಸಲ್ಲಿಸುವ ಮೂಲಕ ಇಂದಿರಾಗಾ0ಧಿ ಯವರ ಆಡಳಿತದ ಕಾಲಾವಧಿಯಲಿ ್ಲತೆಗೆದುಕೊಂಡ ನಿರ್ಧಾರಗಳು, ಅದರಿಂದಜನರಿಗೆಆದ ಅನುಕೂಲಗಳ ಕುರಿತುಗುಣಗಾನ ಮಾಡಿದರು. ಮಾಜಿ ಶಾಸಕ ಡಾ.ಎಸ್.ಷಪಿ ಅಹಮದ್ ಮಾತನಾಡಿ,ತಮ್ಮ ಹುಟ್ಟಿನಿಂದ ಜೀವಿತದ ಅವಧಿಯವರೆಗೂ ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾಗಾ0ಧಿ ಅವರು ಜಾರಿಗೆ ತಂದ ರೀಬೋ ಹಠಾವೋ,೨೦ ಅಂಶಗಳ ಕಾರ್ಯಕ್ರಮಗಳು ಭಾರತದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಅಂತರಕಡಿಮೆ ಮಾಡಿ, ದೇಶದ ಅರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿ ಕವಾಗಿ, ಕೈಗಾರಿಕೆಯಲ್ಲಿ ಅಭಿವೃದ್ದಿ ಹೊಂದಲು ಭದ್ರ ಬುನಾದಿಯನ್ನು ಹಾಕಿದರು ಎಂದರು. ಡಿಸಿಸಿ ಮಾಜಿ ಅಧ್ಯಕ್ಷ ಹಾಗೂ ಜಿ.ಪಂ.ಸದಸ್ಯ ಕೆಂಚಮಾರಯ್ಯ ಮಾತನಾಡಿ, ಭಕ್ತರಿಂದ ವಿಶ್ವಗುರು ಎಂದು ಕರೆಯಿಸಿಕೊಳ್ಳುವ ಇಂದಿನ ಪ್ರಧಾನಿ ನರೇಂದ್ರ ಮೋದಿ ಅವರಿಗೂ, ವಿರೋಧ…

Read More

ಶಿರಾ: ಗ್ರಾಮಸ್ವರಾಜ್ ಕನಸು ಕೈಗೂಡಬೇಕೆಂದರೆ, ಗ್ರಾಮ ಪಂಚಾ ಯಿತಿ ಹಾಗೂ ಸ್ಥಳೀಯ ಆಡಳಿತ ಸ್ವ ಕಾರ್ಯನಿರ್ವ ಹಿಸುವಂ ತಾಗಬೇಕು. ಶಿರಾ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಮಾದರಿಯಾದ ಗ್ರಾಮ ಪಂಚಾಯಿತಿ ಕಟ್ಟಡಗಳು ಅತ್ಯಂತ ಗುಣ ಮಟ್ಟದಲ್ಲಿ ನಿರ್ಮಾಣವಾಗುತ್ತಿವೆ. ಇದು ಗ್ರಾಮ ಸ್ವರಾಜ್ ಯಶಸ್ವಿಯಾಗಲು ಉತ್ತಮ ಕಟ್ಟಡ ಅಗತ್ಯ ಎಂದು ವಿಧಾನ ಪರಿಷತ್ ಶಾಸಕ ಚಿದಾನಂದ ಎಂ ಗೌಡ ತಿಳಿಸಿದರು. ಅವರು ಶಿರಾ ತಾಲೂಕು ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸ್ಥಳೀಯ ಸಂಪನ್ಮೂಲಕ್ಕೆ ಹೆಚ್ಚಿಗೆ ಆದ್ಯತೆ ನೀಡಿ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು. ನೂತನವಾಗಿ ಉದ್ಘಾಟನೆಯಾಗಿರುವ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಗೆ ಮೂಲಭೂತ ಸೌಲಭ್ಯಗಳಿಗೆ ೫ ಲಕ್ಷ ರೂ. ಅನುದಾನ ನೀಡುತ್ತೇನೆ. ಇದನ್ನು ಮೂಲಭೂತ ಸೌಲಭ್ಯ ಮಾಡಲು ಬಳಸಿಕೊಳ್ಳಿ ಎಂದರು. ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್ ಆರ್ ಗೌಡ ಅವರು ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ಗ್ರಾಮ ಪಂಚಾಯಿತಿಯದ್ದು…

Read More