Author: News Desk Benkiyabale

ತುಮಕೂರು: ತುಮಕೂರು ನಗರ ಠಾಣೆಯ ಪಿಎಸ್‍ಐ ಮಂಜುನಾಥ್ ಅಮಾನತ್ತಾಗಿರುತ್ತಾರೆ. ನಗರದ ಸಬ್‍ಇನ್ಸ್‍ಪೆಕ್ಟರ್ ಮಂಜುನಾಥ್‍ರವರನ್ನು ಅಮಾನತ್ತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತ್ತು ಆದೇಶವನ್ನು ಹೊರಡಿಸಿರುತ್ತಾರೆ. ಕರ್ತವ್ಯ ಲೋಪ ಮತ್ತು ಅಧಿಕಾರ ದುರ್ಬಳಕೆ ಮಾಡಿಕೊಂಡ ಬಗ್ಗೆ ದೂರು ನೀಡಿದ ಹಿನ್ನೆಲೆಯಲ್ಲಿ ದೂರನ್ನು ಆಧರಿಸಿ ಪ್ರಾಥಮಿಕ ತನಿಖೆ ಕೈಗೊಂಡು ತನಿಖಾ ವರದಿಯ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್‍ರವರು ಅಮಾನತ್ತು ಮಾಡಿರುತ್ತಾರೆ. ನೂತನ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ನಂತರ ಪಿಎಸ್‍ಐರವರನ್ನು ಅಮಾನತ್ತು ಮಾಡುವ ಮುಖೇನ ಕಾನೂನಿಗೆ ಯಾರೂ ದೊಡ್ಡವರಲ್ಲ, ಇಲಾಖೆಯೊಳಗಿನ ಅಧಿಕಾರಿಗಳು ಸಹ ಯಾವುದೇ ತಪ್ಪು ಮಾಡಬಾರದು, ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂಬ ಸ್ಪಷ್ಟ ಸಂದೇಶವನ್ನು ಈ ಆದೇಶದ ಮುಖಾಂತರ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದೀಗ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಎಸ್ಪಿರವರ ಈ ಕಾರ್ಯ ಕ್ಷಮತೆಗೆ ಪ್ರಶಂಸನೀಯ ಮಾತುಗಳು ಕೇಳಿ ಬರುತ್ತವೆ.

Read More

ಹುಳಿಯಾರು: ಚೆನ್ನಾಗಿದ್ದ ಜಲ್ಲಿ ರಸ್ತೆಗೆ ಕೆರೆ ಮಣ್ಣು ಹಾಕಿ ಕೆಸರು ಗದ್ದೆ ಮಾಡಿ ಬಿಟ್ರು ಎಂದು ಹುಳಿಯಾರು ಹೋಬಳಿಯ ಬಿಳಿಕಲ್ಲು ಗೊಲ್ಲರಹಟ್ಟಿ ಗ್ರಾಮಸ್ಥರು ಆರೋಪಿಸಿದ್ದಾರೆ. ಯಳನಾಡು ಗ್ರಾಮ ಪಂಚಾಯ್ತಿಯ ತಮ್ಮಡಿಹಳ್ಳಿ ಗೊಲ್ಲರಹಟ್ಟಿ ವರೆವಿಗೂ ಉತ್ತಮವಾದ ಡಾಂಬಾರ್ ರಸ್ತೆ ಮಾಡಿದ್ದಾರೆ. ಅಲ್ಲಿಂದ ಕೇವಲ 2 ಕಿ.ಮೀ ದೂರದಲ್ಲಿ ಬಿಳಿಕಲ್ಲು ಗೊಲ್ಲರಹಟ್ಟಿಯಿದೆ. ಆದರೆ ಅಲ್ಲಿಗೆ ಡಾಂಬಾರ್ ರಸ್ತೆ ಮಾಡದೆ ನಿರ್ಲಕ್ಷ್ಯಿಸಿದ್ದಾರೆ. ಆದರೂ ಏಳೆಂಟು ವರ್ಷಗಳ ಹಿಂದೆ ಜಲ್ಲಿ ರಸ್ತೆ ಮಾಡಿದ್ದು ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಲ್ಲಿ ಎದ್ದು ಜನರ ಓಡಾಟಕ್ಕೆ ತೊಂದರೆಯಾಗಿತ್ತು. ಹಾಗಾಗಿ ಜನಪ್ರತಿನಿಧಿಗಳಿಗೆ ಬಿಳಿಕಲ್ಲು ಗೊಲ್ಲರಟ್ಟಿಯ ರಸ್ತೆಗೆ ಡಾಂಬಾರ್ ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಇಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ. ಆದರೂ ಏಳೆಂಟು ವರ್ಷ ಯಾರೊಬ್ಬರೂ ರಸ್ತೆ ದುರಸ್ಥಿಗಿ ಮುಂದಾಗಿರಲಿಲ್ಲ. ಆದರೆ ಇತ್ತೀಚೆಗಷ್ಟೆ ಜಿಪಂ ಸದಸ್ಯ ವೈ.ಸಿ.ಸಿದ್ಧರಾಮಯ್ಯ ಅವರು ರಸ್ತೆಗೆ ಮಣ್ಣು ಹಾಕಿದ್ದು ಹೇಗೋ ಓಡಾಡುವಂತಿದ್ದ ರಸ್ತೆ ಕೆಸರು ಗದ್ದೆಯಾಗಿದೆ. ಪರಿಣಾಮ ಈ ಭಾಗದ ಶಾಲಾ ವಿದ್ಯಾರ್ಥಿಗಳು, ಕೂಲಿಕಾರ್ಮಿಕರು ನಿತ್ಯ ಕೆಸರು…

Read More

 ತುಮಕೂರು :       ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯಲ್ಲಿಂದು 2021-22ನೇ ಸಾಲಿನ ಲಿಂಕ್ ಡಾಕ್ಯುಮೆಂಡ್ ಕಾರ್ಯಕ್ರಮ, 15ನೇ ಹಣಕಾಸು ಯೋಜನೆ ಸೇರಿ ವಿವಿಧ ಕಾಮಗಾರಿಗಳಿಗೆ 540 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾಗಿ ಕಾರ್ಯದರ್ಶಿ ಡಾ. ರಾಜೇಶ್ ಸಿಂಗ್ ಅನಮೋದನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಿವಿಧ ಸ್ಥಾಯಿ ಸಮಿತಿ ಮತ್ತು ಸಾಮಾನ್ಯ ಸಭೆಯ ಅಧ್ಯಕ್ಷವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಯಡಿ ಕೈಗೊಂಡಿರುವ ಕಾರ್ಯಕ್ರಮಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಇಲಾಖಾವಾರು ರೂಪಿಸಿರುವ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುμÁ್ಟನಗೊಳಿಸಬೇಕು ಎಂದರು. ಶಾಲಾ ಮಕ್ಕಳಿಗಾಗಿ ರೂಪಿಸಿರುವ ಅಕ್ಷರ ದಾಸೋಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮಕ್ಕಳಿಗೆ ನೀಡಲಾಗುವ ಉಚಿತ ಆಹಾರ ಧಾನ್ಯಗಳ ವಿತರಣೆಗೆ ಸೂಕ್ತ ಕ್ರಮವಹಿಸಬೇಕು ಎಂದರಲ್ಲದೆ ಪರಿಶಿಷ್ಟ ಜಾತಿ/ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಸತಿ ನಿಲಯಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು, ಅಲ್ಲದೆ ಬಾಡಿಗೆ ಕಟ್ಟಡದಲ್ಲಿ ನಡೆಯುವ ಹಾಸ್ಟೆಲ್‍ಗಳ ಸ್ಥಿತಿ ಗತಿಗಳನ್ನು…

Read More

 ತುಮಕೂರು :       ಜಿಲ್ಲೆಯಲ್ಲಿ ಏಳು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು ಉನ್ನತೀಕರಣಕ್ಕೆ ಆಯ್ಕೆಯಾಗಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ‘ವಿಶ್ವ ಯುವ ಕೌಶಲ್ಯ ದಿನಾಚರಣೆ’ ಅಂಗವಾಗಿ ನಡೆದ ವಚ್ರ್ಯುಯಲ್ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೈಗಾರಿಕಾ ಸಂಸ್ಥೆಗಳು ಮತ್ತು ಉದ್ಯಮಗಳ ನಡುವಿನ ಸ್ಕಿಲ್ ಗ್ಯಾಪ್‍ನ್ನು ಹೊಂದಿಸಿಕೊಳ್ಳಲು ಅಗತ್ಯವಾದ ಕೌಶಲ್ಯ ಅಭಿವೃದ್ಧಿ ಪಡಿಸುವ ಸಲುವಾಗಿ ಟಾಟಾ ಟೆಕ್ನಾಲಜಿ ಲಿಮಿಟೆಡ್ ಸಹಭಾಗಿತ್ವದೊಂದಿಗೆ ಪ್ರಥಮ ಹಂತದಲ್ಲಿ ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣ ಕಾರ್ಯ ಪಾರಂಭವಾಗಿದ್ದು, ಜಿಲ್ಲೆಯ 7 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು ಉನ್ನತೀಕರಣಕ್ಕೆ ಆಯ್ಕೆಯಾಗಿವೆ ಎಂದರು. ಸ್ವಾತಂತ್ರ್ಯ ಪೂರ್ವದಿಂದಲೂ ಕೌಶಲ್ಯ ತರಬೇತಿ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರಸ್ತುತ ದಿನಗಳಲ್ಲಿ ಕೌಶಲ್ಯ ಸಂಬಂಧಿತ ಚಟುವಟಿಕೆಗಳಿಗಿರುವ ಮಹತ್ವವನ್ನು ಅರಿತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೌಶಲ್ಯಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಗಳನ್ನು ಪ್ರಾರಂಭಿಸಿವೆ ಎಂದು ತಿಳಿಸಿದರು. ಜಿಲ್ಲಾ ಉದ್ಯೋಗಾಧಿಕಾರಿ ಕವಿತಾ ಹಾಗೂ ಜಿಟಿಟಿಸಿ ಪ್ರಾಂಶುಪಾಲ ಗುರುಪ್ರಸನ್ನ. ಜಿಲ್ಲಾ…

Read More

 ತುಮಕೂರು :      ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ನೀಡಲು ಹೆಚ್ಚು ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯಿತಿಯಲ್ಲಿಂದು ಎಸ್‍ಬಿಐ ಪ್ರಾಯೋಜಿಸಲ್ಪಟ್ಟ ಗ್ರಾಮೀಣ ಅಭಿವೃದ್ಧಿ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ನಡೆದ ಲೋಕಲ್ ಅಡ್ವೈಸರಿ ಕಮಿಟಿ ಮೀಟಿಂಗ್‍ನ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿವಿಧ ವಾಹನಗಳಿಗೆ ಮಹಿಳಾ ಚಾಲಕಿಯರನ್ನು ನೇಮಿಸುವ ಸಲುವಾಗಿ ಜಿಲ್ಲಾ ಪಂಚಾಯತ್‍ನಿಂದ ಮಹಿಳಾ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಈ ಅಭ್ಯರ್ಥಿಗಳಿಗೆ ಸೂಕ್ತ ಚಾಲನಾ ತರಬೇತಿ ನೀಡಬೇಕು ಎಂದು ನಿರ್zೀಶಿಸಿದರು. ತರಬೇತಿ ಸಂಸ್ಥೆಯಿಂದ ಕೌಶಲ್ಯ ಪಡೆದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ಜೊತೆಗೆ ಮಾರುಕಟ್ಟೆ, ಬ್ರಾಂಡಿಂಗ್ ಮತ್ತು ಲೇಬಲಿಂಗ್ ಕೌಶಲ್ಯತೆಯ ಬಗ್ಗೆಯೂ ತರಬೇತಿ ನೀಡಬೇಕು. ತರಬೇತಿ ಪಡೆದ ಬಳಿಕ ಅವರು ಸ್ವಯಂ ಉದ್ಯೋಗ ಕಟ್ಟಿಕೊಳ್ಳಲು ಸಾಧ್ಯವಾದಷ್ಟು ಸಹಕಾರ ನೀಡಬೇಕು. ತರಬೇತಿ ಪಡೆದ ಬಳಿಕ ಅವರು ಸ್ವಯಂ ಉದ್ಯೋಗದಲ್ಲಿ ತೊಡಗಿದ್ದಾರೆಂಬುದನ್ನೂ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದರು. ಗ್ರಾಮೀಣ ಭಾಗದಲ್ಲಿ ಶಾಲಾ-ಕಾಲೇಜು ಬಿಟ್ಟಿರುವವರಿಗೆ…

Read More

ತುಮಕೂರು:      ನಗರದ ಸರಸ್ವತಿಪುರಂ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ರಸ್ತೆಯಲ್ಲಿ ಕರ್ನಾಟಕ ಬ್ಯಾಂಕ್‍ನ ತುಮಕೂರು ಪ್ರಾದೇಶಿಕ ಕಚೇರಿ ಕಟ್ಟಡಕ್ಕೆ ಕರ್ನಾಟಕ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ್ ಅವರು ಪೂಜೆ ಸಲ್ಲಿಸುವ ಮೂಲಕ ಮೂಲಕ ಗುರುವಾರ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ್ ಅವರು, ಜುಲೈ 15 ಕರ್ನಾಟಕ ಬ್ಯಾಂಕಿಗೆ ಸ್ಮರಣೀಯವಾದ ದಿನ. ಕಾರಣ ತುಮಕೂರು ವಲಯದ ರಚನೆ ನಂತರ ಪ್ರಥಮ ಭಾರಿಗೆ ಈ ವಲಯಕ್ಕೆ ವಲಯ ಕಚೇರಿ ನಮ್ಮದೇ ಸ್ವಂತ ಕಟ್ಟಡ ಕಟ್ಟುವಂತಹ ಕಾರ್ಯದ ಶಿಲಾನ್ಯಾಸ ನೆರವೇರಿದೆ. ಈ ಕಟ್ಟಡ ನಿರ್ಮಾಣ 15ರಿಂದ 18 ತಿಂಗಳಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂಬ ಭರವಸೆಯನ್ನು ನೀಡಿದರು. ಬೆಂಗಳೂರಿನ ಪ್ರಾದೇಶಿಕ ಕಚೇರಿ, ಮೈಸೂರಿನ ಪ್ರಾದೇಶಿಕ ಕಚೇರಿಯ ನಂತರ ತುಮಕೂರಿನಲ್ಲಿ ನಿರ್ಮಾಣವಾಗುತ್ತಿರುವುದು ಮೂರನೇ ಪ್ರಾದೇಶಿಕ ಕಚೇರಿಯಾಗಿದ್ದು, ಪ್ರದಾನಿಯವರ ಆತ್ಮನಿರ್ಭರ ಭಾರತವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಪ್ರಯತ್ನ ಸಾಗಿದೆ ಎಂದರು. ಕರ್ನಾಟಕ ಬ್ಯಾಂಕ್ ಇನ್ನೆರಡು…

Read More

ತುಮಕೂರು:       ಎಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಕಟ್ಟಿದ ಭಾರತವನ್ನು ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಮಾರಾಟ ಮಾಡಿದ್ದು, ಕೇಂದ್ರ ಸ್ವಾಮ್ಯದ ಕೈಗಾರಿಕೆಗಳ ಖಾಸಗೀಕರಣ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಹೈರಾಣಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಶಫೀವುಲ್ಲಾ ಅಭಿಪ್ರಾಯಪಟ್ಟರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಕಾರ್ಮಿಕ ಘಟಕ, ಎಸ್ಸಿ ಘಟಕ, ಕಿಸಾನ್ ಘಟಕ ಸೇರಿದಂತೆ ವಿವಿಧ ಮಂಚೂಣಿ ಘಟಕಗಳೊಂದಿಗೆ ತೈಲಬೆಲೆ ಏರಿಕೆ ವಿರೋಧಿಸಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಹಮ್ಮಿಕೊಂಡಿದ್ದ ಸೈಕಲ್ ಜಾಥಾವನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸರ್ಕಾರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಿರುವುದರಿಂದ ಜನಸಾಮಾನ್ಯರ ಕೊಳ್ಳುವ ಶಕ್ತಿಯನ್ನು ಕಿತ್ತುಕೊಂಡಂತೆ ಆಗಿದೆ, ಯುಪಿಎ ಸರ್ಕಾರದ ಅವಧಿಯಲ್ಲಿದ್ದ ತೆರಿಗೆಯನ್ನು ದುಪ್ಪಟ್ಟು ಮಾಡುವ ಮೂಲಕ ಜನರ ಜೇಬನ್ನು ಲೂಟಿ ಮಾಡುತ್ತಿದ್ದು, ಜನ ವಿರೋಧಿ ಧೋರಣೆ ಹೊಂದಿರುವ ಕೇಂದ್ರ ಸರ್ಕಾರ ಬೆಲೆ ಏರಿಕೆಗೆ ನಿಯಂತ್ರಣ ಹಾಕದೇ ಇದ್ದರೆ ಜನರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಅದಾನಿ, ಅಂಬಾನಿಗೆ ರಿಸರ್ವ್…

Read More

ತುಮಕೂರು:       ಯಾವೊಬ್ಬ ವಿದ್ಯಾರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗದಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.        ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ತುಮಕೂರು ತಾಲೂಕಿಗೆ ಸಂಬಂಧಿಸಿದಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಎಲ್ಲಾ ವಿದ್ಯಾರ್ಥಿಗಳು ಬೆಳಿಗ್ಗೆ 8 ಗಂಟೆಯೊಳಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕು. ನಿಗದಿತ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶಿಸಿದರು. ಕಾರಣಾಂತರಗಳಿಂದ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸಮಸ್ಯೆ ಉಂಟಾದ ಮಕ್ಕಳನ್ನು ಸರ್ಕಾರಿ ವಾಹನದಲ್ಲಿಯೇ ಕೇಂದ್ರಕ್ಕೆ ಕರೆತರಬೇಕು. ಸಕಾರಣವಿಲ್ಲದೆ ಮಕ್ಕಳು ಪರೀಕ್ಷೆಗೆ ಗೈರು ಹಾಜರಾದರೆ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಗೈರು ಹಾಜರಾಗಲು ಸಕಾರಣ ಇದ್ದರೆ ಅಂತಹ ಮಕ್ಕಳ ಪಟ್ಟಿಯನ್ನು ಡಿಡಿಪಿಐ ಅಥವಾ ಬಿಇಒಗಳಿಗೆ ಒದಗಿಸಬೇಕು. ಇಂತಹ ಮಕ್ಕಳು ಹಾಗೂ ಅವರ ಪೋಷಕರಿಗೆ ಮನವರಿಕೆ ಮಾಡಿ ವಿದ್ಯಾರ್ಥಿಗಳನ್ನು ಪರೀಕ್ಷೆ…

Read More

ತುಮಕೂರು:      ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್‍ಅನ್ನು ಹಿಂದಿನ ವರ್ಷಗಳಂತೆ ನೀಡಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) ಒತ್ತಾಯಿಸಿದೆ. ಪ್ರಸಕ್ತ ಸಾಲಿನಲ್ಲಿ ಶಾಲಾ, ಕಾಲೇಜುಗಳನ್ನು ತೆರೆದರೆ ಬಸ್ ಪಾಸ್ ರಿಯಾಯಿತಿ ವೆಚ್ಚವನ್ನು ಸರ್ಕಾರ ಭರಿಸುವುದಿಲ್ಲ ಎಂದು ನಿರ್ಧಾರ ಕೈಗೊಂಡಿರುವುದು ವಿದ್ಯಾರ್ಥಿ ಹಾಗೂ ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದು ಎಐಡಿಎಸ್‍ಒ ಜಿಲ್ಲಾ ಸಂಚಾಲಕಿ ಟಿ.ಇ.ಅಶ್ವಿನಿ ಖಂಡಿಸಿದ್ದಾರೆ. ಈಗಾಗಲೇ ಕೋವಿಡ್‍ನಿಂದ ಜನಸಾಮಾನ್ಯರು ತತ್ತರಿಸಿದ್ದು, ಆರ್ಥಿಕ ಸಮಸ್ಯೆಗಳಿಂದ ನಲುಗಿದ್ದಾರೆ. ಅದೆಷ್ಟೋ ಕುಟುಂಬಗಳಿಗೆ ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಉದ್ಯೋಗವಿಲ್ಲದೆ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮಾನಸಿಕ ಒತ್ತಡ ಸೃಷ್ಟಿಸುವಂತಹ ಹಾಗೂ ಅವೈಜ್ಞಾನಿಕವಾಗಿ ‘ಒಂದು ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ’ ನಡೆಸಲು ಸರ್ಕಾರ ಮುಂದಾಗಿದೆ. ಅದರ ಜತೆಗೆ ಈಗ ರಿಯಾಯಿತಿ ದರದಲ್ಲಿ ಬಸ್ ಪಾಸ್ ನೀಡುವುದಿಲ್ಲ. ಪೂರ್ಣ ಹಣ ಭರಿಸಬೇಕು ಎಂದು ಹೇಳುತ್ತಿರುವುದು ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿಕ್ಷಣ, ವೈದ್ಯಕೀಯ, ಸಾರಿಗೆ- ಇವು ಸೇವಾ ಕ್ಷೇತ್ರಗಳು.…

Read More

ಚಿಕ್ಕನಾಯಕನಹಳ್ಳಿ:       ಜನಸಾಮಾನ್ಯರ ಬದುಕನ್ನು ಬೀದಿಗೆ ತಂದ ಬಿಜೆಪಿ ಸರ್ಕಾರ ಕೆಳಗಿಳಿಯುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಮಾಜಿ ಸಚಿವ ಟಿ. ಬಿ.ಜಯಚಂದ್ರ ತಿಳಿಸಿದರು. ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರ ಕರೆಯ ಮೇರೆಗೆ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರಿಂದ ಪಟ್ಟಣದ ಶ್ರೀ ಹಳೆಯೂರು ಆಂಜನೇಯಸ್ವಾಮಿ ದೇವಾಲಯದಿಂದ ಎತ್ತಿನಗಾಡಿ ಹಾಗೂ ಸೈಕಲ್ ಜಾಥಾದೊಂದಿಗೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಟಿ.ಬಿ. ಜಯಚಂದ್ರ ಮಾತನಾಡಿ ಪೆಟ್ರೋಲ್, ಡೀಸೆಲ್, ಗ್ಯಾಸ್‍ಗಳ ಬೆಲೆ ಗಗನಕ್ಕೆ ಏರಿದೆ, ಇದರ ಜೊತೆ ಅಗತ್ಯ ವಸ್ತುಗಳ ಬೆಲೆಯೂ ಎರಿದ್ದು ಜನಸಾಮಾನ್ಯರ ಬದುಕು ಅತಂತ್ರವಾಗಿದೆ. ಕೋವಿಡ್ ನಿಯಂತ್ರಣದಲ್ಲಿ ವಿಫಲವಾದ ಬಿಜೆಪಿ ಸರ್ಕಾರ ಕೇವಲ ಅಂಬಾನಿ, ಅದಾನಿಯಂತಹವರ ಬೃಹತ್ ಉದ್ಯಮಿಗಳ ಕೈಗೆ ದೇಶದ ಆರ್ಥಿಕತೆ ನೀಡುವ ಮೂಲಕ ಸರ್ಕಾರ ಉದ್ಯಮಿಗಳ ಕೈಗೊಂಬೆಯಾಗಿದೆ. ಇದರಿಂದ ಎಲ್ಲಾ ಶ್ರಮಿಕ ವರ್ಗಗಳ ಬದುಕು ಡೋಲಾಯಮಾನವೆನಿಸಿದೆ ಎಂದರು. ಎಂಎಲ್‍ಸಿ ರಮೇಶ್‍ಬಾಬು ಮಾತನಾಡಿ, ಕಾರ್ಪೊರೇಟ್ ಸರ್ಕಾರದ ಅಧೀನದಲ್ಲಿರುವ ಈ ಕ್ಷೇತ್ರ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತೊಲಗುವವರೆಗೂ ಹೋರಾಟ ನಿಲ್ಲದು, ಜನ ವಿರೋಧಿ…

Read More