ತುಮಕೂರು: ನಗರಕ್ಕೆ ಸಮೀಪವಿರುವ ಮಂಚಕಲ್ಲುಕುಪ್ಪೆ ಗ್ರಾಮದ ಶ್ರೀಕಂಬದ ರಂಗನಾಥಸ್ವಾಮಿ ದೇವಾಲಯದ ಜಮೀನಿನನ್ನು ಕೆಲವರು ಒತ್ತುವರಿ ಮಾಡಿಕೊಂಡು ತಮ್ಮ ಸ್ವಂತ ಆಸ್ತಿಯಾಗಿಸಲು ಪ್ರಯತ್ನಿಸುತ್ತಿದ್ದು,ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆ ಕೂಡಲೇ ಕ್ರಮ ಕೈಗೊಂಡು,ದೇವಾಲಯದ ಜಾಗ ಉಳಿಸಿಕೊಡಬೇಕೆಂದು ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಮಂಚಕಲ್ ಕುಪ್ಪೆ ಗ್ರಾಮದ ಶ್ರೀಕಂಬದ ರಂಗನಾಥಸ್ವಾಮಿ ದೇವಾಲಯ ಮುಜರಾಯಿ ಇಲಾಖೆಯ ಸಿ.ದರ್ಜೆ ದೇವಾಲಯ ವಾಗಿದೆ. ವಾರ್ಷಿಕ ತಸ್ಥಿಕೆಯನ್ನು ನಿಗಧಿಪಡಿಸಲಾಗಿದೆ.ಗ್ರಾಮಸ್ಥರು ಶುಭ ಕಾರ್ಯಕ್ರಮಗಳಿಗಾಗಿ ಒಂದು ಸಮುದಾಯ ಭವನವನ್ನು ನಿರ್ಮಿಸಿಕೊಂಡಿದ್ದು, ಸದರಿ ಸಮುದಾಯಭವನವನ್ನು ದೇವಾಲಯ ಅಭಿವೃದ್ದಿ ಸಮಿತಿಯಲ್ಲಿದ್ದ ಕೆಲವರು ತಮ್ಮ ಸ್ವಂತ ಹೆಸರಿಗೆ ಮಾಡಿಕೊಂಡು, ಕಲ್ಯಾಣ ಮಂಟಪ ಮಾಡಿಕೊಂಡು ಅದರ ಆದಾಯವನ್ನು ದೇವಾಲಯ ಸಮಿತಿಗೆ ನೀಡದೆ, ಮೋಸ ಮಾಡಿಕೊಂಡು ಬರುತ್ತಿರುವುದಲ್ಲದೆ,ದೇವಾಲಯದ ಆಸ್ತಿ ಹೊಡೆಯಲು ಸಂಚು ರೂಪಿಸಿದ್ದಾರೆ ಎಂದು ಮನವಿ ಯಲ್ಲಿ ತಿಳಿಸಿದ್ದಾರೆ. ತುಮಕೂರು ತಹಶೀಲ್ದಾರರ ಅವರು 2002ರಲ್ಲಿ ಸದರಿ ದೇವಾಲಯದ ಮತ್ತು ಅದರ ಪ್ರಾಂಗಣದಲ್ಲಿರುವ ಕಟ್ಟಡಗಳು ದೇವಾಲಯಕ್ಕೆ ಸೇರಿದ್ದು ಎಂದು ಆದೇಶ ಮಾಡಿರುತ್ತಾರೆ.ಅಲ್ಲದೆ ಆರ್.ಟಿ.ಐ.ಕಾರ್ಯಕರ್ತರೊಬ್ಬರು ಲೋಕಾಯುಕ್ತಕ್ಕೆ 2002ರಲ್ಲಿ ಸಲ್ಲಿಸಿದ ದೂರಿನ ಅನ್ವಯ ಜಿಲ್ಲಾಧಿಕಾರಿಗಳು…
Author: News Desk Benkiyabale
ತುಮಕೂರು : ವೈದ್ಯಕೀಯ ಪೂರ್ವ ಅನುಮತಿಯಿಲ್ಲದೆ ಅನಗತ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಗಳನ್ನು ಮಾಡದೇ, ಸಹಜ ಹೆರಿಗೆ ಪ್ರಮಾಣವನ್ನು ಹೆಚ್ಚಿಸಬೇಕು, ತಾಯಿ ಮಕ್ಕಳ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಬೇಕು ಹಾಗೂ ಎಲ್ಲ ತಾಲ್ಲೂಕುಗಳಲ್ಲಿಯೂ ಗರ್ಭಿಣಿ ಮಹಿಳೆಯರ ನೋಂದಣಿ ಕಡ್ಡಾಯ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಆರೋಗ್ಯ ಇಲಾಖೆಯ ಎಲ್ಲ ವೈದ್ಯರುಗಳು ಮತ್ತು ನೌಕರರು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿ ಲಭ್ಯವಿರಬೇಕು ಮತ್ತು ಈ ಮೂಲಕ ಸದಾಕಾಲ ಜನರ ಸೇವೆಗೆ ಸಿದ್ಧರಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ತಮ್ಮ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಭೇಟಿ ನೀಡಿ ಗರ್ಭಿಣಿ ಸ್ತ್ರೀಯರ ಆರೋಗ್ಯ ತಪಾಸಣೆ ನಡೆಸಬೇಕು. ಸಮಸ್ಯೆಗಳು ಕಂಡು ಬಂದಲ್ಲಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೆ ಸೇರಿಸಬೇಕು. ಈ ನಿಟ್ಟಿನಲ್ಲಿ ಡಿಹೆಚ್ಓ ತಮ್ಮ ಅಧೀನ ಅಧಿಕಾರಿಗಳಿಗೆ…
ತುಮಕೂರು: ಕರ್ನಾಟಕ ಪ್ರಸಿದ್ಧ ಮತ್ತು ಪ್ರಭಾವಶಾಲಿ ಮಠಗಳಲ್ಲಿ ಒಂದಾಗಿರುವ ಶ್ರೀ ಮುರುಘಾಮಠದ ಶ್ರೀಗಳಾದ ಶಿವಮೂರ್ತಿ ಶರಣರು ತಮ್ಮ ಕ್ರಾಂತಿಕಾರಿ ವಿಚಾರಧಾರೆಯಿಂದ, ವೈಜ್ಞಾನಿಕ ಚಿಂತನೆಗಳಿಂದ ಮತ್ತು ಶೋಷಿತರ ಪರ ಕಾಳಜಿಯಿಂದಾಗಿ ನಾಡಿನಾದ್ಯಂತ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದಾರೆ. ಹೀಗಿರುವಾಗ ಶ್ರೀಗಳ ವಿರುದ್ಧ ಕೇಳಿ ಬಂದಿರುವ ಇಂತಹ ಭೀಕರ ಆರೋಪದಿಂದ ಕನ್ನಡನಾಡು ಬೆಚ್ಚಿಬಿದ್ದಿದೆ. ಶ್ರೀಗಳ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪಕ್ಕೆ ಒಳಗಾಗಿರುವ ಶ್ರೀಗಳ ವಿರುದ್ಧ ಫೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿರುವುದು ಎಲ್ಲರಿಗೂ ತಿಳಿದಿದೆ. ಅಲ್ಲದೆ ಸಂತ್ರಸ್ತ ವಿದ್ಯಾರ್ಥಿನಿಯರ ಪೈಕಿ ಒಬ್ಬ ಪರಿಶಿಷ್ಟಜಾತಿಯ ವಿದ್ಯಾರ್ಥಿನಿಯೂ ಇರುವುದರಿಂದಾಗಿ ಶ್ರೀಗಳ ವಿರುದ್ಧ ಎಸ್.ಸಿ. ಮತ್ತು ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅನ್ವಯ ದೂರು ದಾಖಲಾಗಿದೆ. ಈ ಎರಡು ಕಾಯ್ದೆಗಳಡಿ ಎಫ್.ಐ.ಆರ್. ದಾಖಲಿಸಿದ ಕೂಡಲೇ ಆರೋಪಿಗಳನ್ನು ಬಂಧಿಸಬೇಕಾಗಿದ್ದ ಪೊಲೀಸರು ಒಂದು ವಾರ ವಿಳಂಬ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಒಂದು ಕೆಟ್ಟ ಪರಂಪರೆಗೆ ನಾಂದಿ ಹಾಡಿದ್ದಾರೆ. ಈ…
ತುಮಕೂರು: ಸಾರ್ವಕರ್ ಅಧ್ಯಯನ ಪೀಠ ಸ್ಥಾಪನೆ ವಿರೋಧಿಸಿ ಎಸ್.ಎಫ್.ಐ ಮತ್ತು ಪ್ರಗತಿಪರ ಸಂಘಟನೆಗಳು ಪ್ರತಿಭಟಿಸುತ್ತಿರುವುದನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಮತ್ತು ವಿವಿಯಲ್ಲಿ ವಿದ್ಯಾರ್ಥಿ ವಿರೋಧಿಯಾದ ಯಾವುದೇ ನಿಲುವುಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೆಂಕಟೇಶ್ವರಲು ತಿಳಿಸಿದ್ದಾರೆ. ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ವಿರೋಧಿಸಿ ಎಸ್.ಎಫ್.ಐ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಕುಲಪತಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ವಿವಿಯಲ್ಲಿ ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಬಾರದು. ಮಾಡಿದರೆ ಜಿಲ್ಲೆಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಲಾಗುವುದು ಎಂಬುದನ್ನು ಕುಲಪತಿಗಳ ಗಮನಕ್ಕೆ ತರಲಾಯಿತು. ಈ ಹಿನ್ನೆಲೆಯಲ್ಲಿ ಕುಲಪತಿಗಳು ವಿದ್ಯಾರ್ಥಿ ವಿರೋಧಿ ಪೀಠಗಳನ್ನು ವಿವಿಯಲ್ಲಿ ಜಾರಿಗೊಳಿಸುವುದಿಲ್ಲ ಎಂದು ಭರವಸೆ ನೀಡಿದರು. ಭಾರತೀಯ ಶರಣ ಸೇನಾ ಜಿಲ್ಲಾಧ್ಯಕ್ಷ ರವಿಕುಮಾರ ರಾಯಸಂದ್ರ ಮಾತನಾಡಿ, ವಿವಿಯು ಸಾವರ್ಕರ್ ಅಧ್ಯಯನ ಪೀಠದಿಂದ ಹಿಂದೆ ಸರಿಯದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು. ವಿಶ್ವವಿದ್ಯಾಲಯದಲ್ಲಿ ಯಾವುದೇ ಕಾರಣಕ್ಕೂ ವಿಷಬೀಜ ಬಿತ್ತಲು ಬಿಡುವುದಿಲ್ಲ.…
ತುಮಕೂರು: ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ಸೇತುವೆಯಾಗಿ ಉದ್ಯೋಗ ಮೇಳಗಳು ಕಾರ್ಯನಿರ್ವಹಿಸುತ್ತವೆ ಎಂದು ತುಮಕೂರು ನಗರ ಶಾಸಕ ಡಾ.ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಎಂಪ್ರೆಸ್ ಶಾಲೆಯ ಆವರಣದಲ್ಲಿ ರೆಡ್ಡಿ ಫೌಂಡೇಷನ್, ಟೀಮ್ ಲೀವ್ ಸಂಸ್ಥೆ ಹಾಗು ಜಿ.ಬಿ.ಜೋತಿಗಣೇಶ್ ಅಭಿಮಾನಿ ಬಳಗ ಆಯೋಜಿಸಿದ್ದ ಉಚಿತ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸರಕಾರಿ ಸಂಸ್ಥೆ ಗಳಾದ ಉದ್ಯೋಗ ವಿನಿಮಯ ಕಚೇರಿ ಹಾಗು ಕೌಶಲ್ಯಾಭಿವೃದ್ದಿ ಸಂಸ್ಥೆ ಯ ಜೊತೆಗೆ ಸೇರಿ ಪ್ರತಿ 40-50 ದಿನಗಳಿಗೊಮ್ಮೆ ಇಂತಹ ಉದ್ಯೋಗ ಮೇಳಗಳನ್ನು ತುಮಕೂರು ನಗರದಲ್ಲಿ. ಆಯೋಜಿಸಲಾಗುವುದೆಂದರು ಹೊಸ ಶಿಕ್ಷಣ ನೀತಿ-2020ರ ಪ್ರಕಾರ ಅನುತ್ತೀರ್ಣ ಎಂಬುದು ಇರುವುದಿಲ್ಲ. ಕೋರ್ಸ್ ಕಂಪ್ಲೀಲೆಡ್ ,ನಾನ್ ಕಂಪ್ಲಿಟೆಂಡ್ ಎಂಬಷ್ಟೇ ಪರಿಗಣಿಸಲಾಗುತ್ತದೆ.ಇದು ಅಯಾಯ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ.ನಿಮಗೆ ಉದ್ಯೋಗ ನೀಡುವ ಕಂಪನಿ ನಿಮ್ಮಂದ ನಿಷ್ಠೆಯನ್ನು ಬಯಸುತ್ತದೆ. ಹಾಗಾಗಿ ಕೆಲಸ ನೀಡುವ ಸಂಸ್ಥೆಗಾಗಿ ದುಡಿಯುವ ಕೆಲಸ ಮಾಡಿ,ನೀವು ಕಂಪನಿಯನ್ನು ಪ್ರೀತಿಸಿದರೆ, ಅವರು ನಿಮ್ಮನ್ನು ಗೌರವದಿಂದ ಕಾಣುತ್ತಾರೆ ಎಂದು ಶಾಸಕ…
ತುಮಕೂರು: ನಗರದ ಹಳೆಯ ಪ್ರದೇಶವಾದ ಚಿಕ್ಕಪೇಟೆ ವೃತ್ತಕ್ಕೆ “ವಿಶ್ವಕರ್ಮ ವೃತ್ತ” ಎಂದು ನಾಮಕರಣ ಮಾಡುವ ಬಗ್ಗೆ ತುಮಕೂರು ಮಹಾನಗರ ಪಾಲಿಕೆ ಕೈಗೊಂಡ ನಿರ್ಧಾರಕ್ಕೆ ಚಿಕ್ಕಪೇಟೆ ನಾಗರೀಕರ ಹಿತ ಸಂರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸಿದೆ. ಈ ಬಗ್ಗೆ ಜು. 25 ರಂದು ಪಾಲಿಕೆ ಪ್ರಕಟಿಸಿರುವ ಸಾರ್ವಜನಿಕ ಪ್ರಕಟಣೆ ಗೆ ಚಿಕ್ಕಪೇಟೆ ನಾಗರೀಕರು ಆಕ್ಷೇಪ ವ್ಯಕ್ಕಪಡಿಸಿ ತಮ್ಮ ತಕರಾರು ಪತ್ರವನ್ನು ಪಾಲಿಕೆಗೆ ಸಲ್ಲಿಸಿದ್ದಾರೆ. ತುಮಕೂರು ಪ್ರಾರಂಭವಾಗಿ ಹಳೆಯ ಕಾಲದಿಂದಲೂ ಚಿಕ್ಕಪೇಟೆಯ ಈ ವೃತ್ತಕ್ಕೆ ಚಿಕ್ಕಪೇಟೆ ವೃತ್ತ ಎಂದೇ ಪ್ರಖ್ಯಾತಿ ಹೊಂದಿದೆ. ಸಾರ್ವಜನಿಕ ಸರ್ಕಾರಿ ದಾಖಲೆಗಳಲ್ಲೂ ಸಹ ನಮೂದಾಗಿರುತ್ತದೆ. ಮುಖ್ಯವಾಗಿ ಚಿಕ್ಕಪೇಟೆ ವೃತ್ತವು ಹಳೆಯ ವ್ಯವಹಾರಿಕ ವ್ಯಾಪಾರ ಸ್ಥಳವಾಗಿದ್ದು ಇದು ಚಿಕ್ಕಪೇಟೆ ಎಂಬ ಹೆಸರಿನಿಂದ ಪ್ರಖ್ಯಾತವಾಗಿರುತ್ತದೆ. ಈ ಚಿಕ್ಕಪೇಟೆ ವೃತ್ತವು ಮುಖ್ಯವಾಗಿ ಮಂಡಿಪೇಟೆ ಚಿಕ್ಕಪೇಟೆ ರಸ್ತೆ, ಚಿಕ್ಕಪೇಟೆ ಅಗ್ರಹಾರ ರಸ್ತೆ, ಚಿಕ್ಕಪೇಟೆ-ಆಚಾರ್ಯರ ಬೀದಿ ರಸ್ತೆ, ಚಿಕ್ಕಪೇಟೆ-ಅರಸಿಂಗರ ಬೀದಿ, ಚಿಕ್ಕಪೇಟೆ-ಗಾರ್ಡನ್ ರಸ್ತೆ, ಚಿಕ್ಕಪೇಟೆ-ಯಜಮಾನರ ಬೀದಿ ಎಂದು ಪ್ರಖ್ಯಾತ ಹೊಂದಿರುತ್ತದೆ. ಚಿಕ್ಕಪೇಟೆ ವೃತ್ತದ ಹಾಜು-ಬಾಜುವಿನ ಲಿಂಕ್ರಸ್ತೆಗಳಲ್ಲಿ ಹೊಂದಿಕೊಂಡಂತೆ ಶ್ರೀಲಕ್ಷ್ಮೀಕಾಂತಸ್ವಾಮಿ…
ತುಮಕೂರು: ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮಳೆಯು ತೀವ್ರಗತಿಯನ್ನು ಪಡೆದುಕೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಆಲರ್ಟ್ ಘೋಷಿಸಲಾಗಿರುವ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯ ಬಹುತೇಕ ಕೆರೆಕಟ್ಟೆ ಹಾಗೂ ಇತರೆ ಜಲಕಾಯಗಳು ಭರ್ತಿಯಾಗಿರುವುದರಿಂದ ಸಾರ್ವಜನಿಕರು ಜಲಕಾಯಗಳ ಬಳಿ ತೆರಳದಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮನವಿ ಮಾಡಿರುತ್ತಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯ ಕೆರೆ-ಕಟ್ಟೆ ಹಾಗೂ ಇತರೆ ಜಲಕಾಯಗಳು ಭರ್ತಿಯಾಗಿರುವುದರಿದ ವೀಕ್ಷಣೆಗೆಂದು ಪ್ರವಾಸಿಗರು/ಸಾರ್ವಜನಿಕರು ಹೋಗುತ್ತಿರುವುದು ಕಂಡುಬರುತ್ತಿದ್ದು, ಕೆರೆಯ ಪಕ್ಕದ ರಸ್ತೆಯನ್ನು ಬಂದ್ ಮಾಡಿ ಪರ್ಯಾಯ ರಸ್ತೆ ಮಾರ್ಗದಲ್ಲಿ ಸಂಚರಿಸುವಂತೆ ಅನುವು ಮಾಡಿಕೊಡಬೇಕು ಎಂದು ತಾಲ್ಲೂಕು ಆಡಳಿತಗಳಿಗೆ ಅವರು ಸೂಚಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ವ್ಯಾಪ್ತಿಯ ನದಿ/ಕೆರೆ/ಕುಂಟೆ/ಹಳ್ಳ/ಜಲಕಾಯಗಳ ದಡದಲ್ಲಿ ಸಾರ್ವಜನಿಕರು ಬಟ್ಟೆ ತೊಳೆಯುವುದು, ಈಜಾಡುವುದು, ದನ-ಕರುಗಳನ್ನು ಮೈ ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರೆ ಚಟುವಟಿಕೆಗಳನ್ನು ಮಾಡುವುದು ಸಂಪೂರ್ಣವಾಗಿ ನಿರ್ಭಂದಿಸಬೇಕು ಎಂದರು. ಮಳೆಯಿಂದಾಗುವ ಅವಘಡಗಳನ್ನು…
ತುಮಕೂರು: ಕಾಯಕ ಸಮಾಜವಾದ ಭೋವಿ ಅಭಿವೃದ್ಧಿ ನಿಗಮಕ್ಕೆ 175 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ವರ್ಷ ನಿಗಮಕ್ಕೆ ನೀಡಿರುವ 110 ಕೋಟಿ ರೂ. ಅನುದಾನವನ್ನು ಸಮರ್ಪಕವಾಗಿ ಬಳಸಿ ಕಾರ್ಯಕ್ರಮ ರೂಪಿಸಿದರೆ ಮುಂದಿನ ವರ್ಷ ನಿಗಮಕ್ಕೆ 175 ಕೋಟಿ ರೂ. ಅನುದಾನ ನೀಡುವುದಾಗಿ ತಿಳಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ರಾಷ್ಟ್ರೀಯ ಶ್ರೀ ಸಿದ್ದರಾಮೇಶ್ವರ ಓಡ್ಸ್ (ಭೋವಿ) ಯುವ ವೇದಿಕೆ ವತಿಯಿಂದ ಏರ್ಪಡಿಸಿದ್ದ ರಾಜ್ಯಮಟ್ಟದ ಭೋವಿ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭೋವಿ ಅಭಿವೃದ್ಧಿ ನಿಗಮಕ್ಕೆ ದೊಡ್ಡ ಮೊತ್ತದ ಅನುದಾನ ನೀಡುವ ಯೋಜನೆ ರೂಪಿಸಿದ ಮೇಲೆ ಈ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕಾದರೆ ದಕ್ಷ ಅಧ್ಯಕ್ಷರ ನೇಮಕ ಅಗತ್ಯವಿದೆ. ಹಾಗಾಗಿ ಇನ್ನೊಂದು ವಾರದೊಳಗೆ ನಿಗಮಕ್ಕೆ ದಕ್ಷ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದರು. ಬದುಕಿನಲ್ಲಿ ಕಷ್ಟಕಾರ್ಪಣ್ಯ ಬಹಳ ಸಹಜ. ಯಾರ ಬದುಕಿನಲ್ಲಿ ಕಷ್ಟಕಾರ್ಪಣ್ಯ, ಸವಾಲು, ದುಡಿಮೆ ಇರುವುದಿಲ್ಲವೋ ಅಂತಹ ಬದುಕು ಬದುಕೇ ಅಲ್ಲ. ಕಷ್ಟಪಟ್ಟು…
ತುಮಕೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಮೀಷನ್ ದಂಧೆ ನಡೆದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕಾಂಗ್ರೆಸ್ ಸಚಿವರ್ಯಾರೂ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಡೆದ ದಿ. ಸೂಲಗಿತ್ತಿ ನರಸಮ್ಮನವರ 102ನೇ ಜಯಂತ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಅವಧಿಯಲ್ಲಿ ಪರ್ಸಂಟೆಜ್ ದಂಧೆ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಈಗ ಹೇಳಿದ್ದರೆ ಯಾವ ಸಚಿವಾಲಯದಲ್ಲಿ, ಯಾವ ಸಚಿವರು ಮಾಡಿದ್ದಾರೆ ಎಂಬುದನ್ನು ಅವರೇ ಹೇಳಬೇಕಿದೆ. ಏಕೆಂದರೆ ಮುಖ್ಯಮಂತ್ರಿಯಾಗಿದ್ದವರು ಅವರು, ಹಾಗಾಗಿ ಜವಾಬ್ದಾರಿಯಿಂದ ಈ ಹೇಳಿಕೆ ನೀಡಿದ್ದಾರೆ ಎಂದೆನಿಸುತ್ತದೆ. ಆದರೆ ನಮ್ಮ ಕಾಂಗ್ರೆಸ್ನ ಸಚಿವರು ಯಾರೂ ಸಹ ಈ ಪರ್ಸಂಟೆಜ್ ದಂಧೆಯಲ್ಲಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯ ಬಿಜೆಪಿ ಸರ್ಕಾರ ಗುತ್ತಿಗೆದಾರರಿಂದ 40 ಪರ್ಸಂಟೆಜ್ ಕಮೀಷನ್…
ಗುಬ್ಬಿ; ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸುತ್ತೇನೆ ಎಂದು ಮತ ಪಡೆದ ರಾಜಕಾರಣಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವುದು ವಿಷಾದನೀಯ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು. ಗುಬ್ಬಿ ತಾಲೂಕಿನ ಎಂ.ಎಚ್. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೂಹ ಸಂಪನ್ಮೂಲ ಕೇಂದ್ರ ನವೀಕೃತ ಕಟ್ಟಡ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾಲೂಕಿನಲ್ಲಿ ಭೂ ಹಗರಣವು ಬಗೆದಷ್ಟು ಆಳವಾಗುತ್ತಾ ಇದ್ದು,ರಾಜಕೀಯ ವ್ಯಕ್ತಿಗಳೇ ಈ ದಂಧೆಯ ವ್ಯವಹಾರದಲ್ಲಿ ಭಾಗಿಯಾಗಿರುವುದು ಕಂಡುಬಂದಿದ್ದು, ಇದನ್ನು ಸರಿಪಡಿಸಲು ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮೀಸಲಾಗಿದೆ ಎಂದು ತಿಳಿಸಿದ ಅವರು ಈ ವಿಷಯದಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ನಡೆಸುವುದಿಲ್ಲ, ಇದರಿಂದ ತಾಲೂಕಿನ ಬಡ ರೈತಾಪಿ ವರ್ಗದವರ ಶಾಪ ತಟ್ಟುತ್ತದೆ ಎಂದು ತಿಳಿಸಿದರು. ಬಾಗರು ಹೂಕ್ಕುಮ್ ಸಮಿತಿಯಲ್ಲಿ ಅನ್ಯಾಯ ನಡೆದಿದೆ ಎಂದು ಬೊಬ್ಬೆ ನೀಡುತ್ತಿರುವ ವಿರೋಧಿಗಳು ಸಾಕಷ್ಟು ಇದ್ದರೂ ಸರಿಯಾದ ಮಾಹಿತಿಯನ್ನು ಪಡೆಯದೇ ಸಾರ್ವಜನಿಕರಿಗೆ ತಪ್ಪು ಸಂದೇಶವನ್ನು ನೀಡಿ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕೆಲ ವ್ಯಕ್ತಿಗಳಿಗೆ ಸಮಯವೇ ಪಾಠ ಕಲಿಸುತ್ತದೆ ಎಂದ…








