Author: News Desk Benkiyabale

ತುಮಕೂರು:       ಸಾವಿರಾರು ಖಾಲಿ ನಿವೇಶನ. ಈ ನಿವೇಶನದಲ್ಲಿ ಬೆಳೆದ ಗಿಡ ಗಂಟಿಗಳಲ್ಲಿ ವಿಷಪೂರಿತ ಹಾವುಗಳು. ಜನವಸತಿ ಪ್ರದೇಶದ ಖಾಲಿ ನಿವೇಶನಗಳಲ್ಲಿಯೂ ತುಂಬಿ ಹೋಗಿರುವ ಕಸ, ಕಡ್ಡಿ ಕೋಳಿ ತ್ಯಾಜ್ಯ. ದುರ್ನಾತದ ಜತೆಯಲ್ಲೇ ಜನತೆಯ ನಿತ್ಯ ಜೀವನ? ಈ ಸಮಸ್ಯೆಗಳೆಲ್ಲಾ ಇರುವುದು ಬೇರೆಲ್ಲೂ ಅಲ್ಲ, ಶೈಕ್ಷಣಿಕ ನಗರ ಹಾಗೂ ಸ್ಮಾರ್ಟ್‍ಸಿಟಿ ನಗರಗಳ ಪಟ್ಟಿಗೆ ಸೇರ್ಪಡೆಯಾಗಿರುವ ತುಮಕೂರು ನಗರದಲ್ಲಿ. ರಾಜಧಾನಿ ಬೆಂಗಳೂರಿಗೆ ಹೆಬ್ಬಾಗಿಲಾಗಿರುವ ತುಮಕೂರು ನಗರ ಸ್ವತ್ಛತೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಈಗ ಮೊದಲನೇ ಸ್ಥಾನದ ಪ್ರಯತ್ನದಲ್ಲಿ ಇರುವ ಸ್ಮಾರ್ಟ್‍ಸಿಟಿ ನಗರದಲ್ಲಿನ ಖಾಲಿ ನಿವೇಶನ ಗಳು ಜನ ಸಾಮಾನ್ಯರಿಗೆ ಕಿರಿಕಿರಿಯನ್ನುಂಟು ಮಾಡಿವೆ. ನಗರ ಹೊರವಲಯದ ಜನವಸತಿ ಪ್ರದೇಶದ ಜನ ನಿತ್ಯವೂ ಸುಟ್ಟ ಕೆಟ್ಟ ವಾಸನೆ, ನಿವೇಶನಗಳಲ್ಲಿ ವಾಸವಾಗಿರುವ ಹಾವುಗಳು, ದುರ್ವಾಸನೆ ಒಂದಲ್ಲ, ಎರಡಲ್ಲ ಹತ್ತಾರು ಸಮಸ್ಯೆ ನಿತ್ಯಕಾಡುತ್ತಿದೆ. ಗಿಡ-ಗಂಟಿ:ಹಣವಂತರು ತಮ್ಮ ಹಣವನ್ನು ದ್ವಿಗುಣಗೊಳಿಸಲು ನಗರದ ವಿವಿಧ ಬಡಾವಣೆಗಳಲ್ಲಿ ನಿವೇಶನ ಖರೀದಿಸಿದ್ದಾರೆ. ಸರಸ್ವತಿ ಪುರಂ 2ನೇ ಹಂತದಲ್ಲಿ ನೀಲಗಿರಿ ಮರಗಳು ಬೆಳೆದು…

Read More

ಮಧುಗಿರಿ :        ಮಧುಗಿರಿ ತಾಲೂಕು ಅತ್ಯಂತ ಬರಪಿಡಿತ ಪ್ರದೇಶವಾಗಿದ್ದು, ಮುಂದಿನ 3 ವರ್ಷದೊಳಗೆ ತಾಲೂಕಿನ 1100 ಎಕರೆ ಪ್ರದೇಶದಲ್ಲಿ 85 ಸಾವಿರ ಕೋಟಿ ವೆಚ್ಚದಲ್ಲಿ ಜವಳಿ ಪಾಕ್ ನಿರ್ಮಾಣ ಸೇರಿದಂತೆ ಜೊತೆಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ಭರವಸೆ ನಿಡಿದರು. ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ಮತ್ತು ತಾಲೂಕು ಆಡಳಿತ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದ ಅವರು ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಮಧುಗಿರಿ ತಾಲೂಕು ಅತೀ ಹಿಂದುಳಿದ ತಾಲೂಕಾಗಿದ್ದು, ಪ್ರತಿ ನಿತ್ಯ ಸಾವಿರಾರು ಕಾರ್ಮಿಕರು ಉದ್ಯೋಗ ಅರಸಿ ದೊಡ್ಡಬಳ್ಳಾಪುರ, ಬೆಂಗಳೂರು ಸೇರಿದಂತೆ ಸುತ್ತಮುತ್ತಲ ನಗರಗಳಿಗೆ ಕುಟುಂಬಗಳನ್ನು ತೊರೆದು ಹೋಗುತ್ತಿದ್ದಾರೆ. ಇದನ್ನು ಮನಗಂಡು ತಾಲುಕಿನ ಜನತೆಗೆ ಉದ್ಯೋಗ ಒದಗಿಸಿಕೊಡುವ ಉದ್ದೇಶದಿಂದ ಇಡೀ ರಾಜ್ಯದಲ್ಲೇ ಒಂದು ಜಿಲ್ಲೆಗೆ ಮಾತ್ರ ನೀಡುವ ಜವಳಿ…

Read More

ಚಿಕ್ಕನಾಯಕನಹಳ್ಳಿ:       ತಾಲ್ಲೂಕಿನಾದ್ಯಂತ ಈಗ ಮಲೇರಿಯಾ, ಡೆಂಗ್ಯು, ಚಿಕನ್ ಗುನ್ಯ ಮುಂತಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಜಾಗೃತಿ ಕಾರ್ಯಕ್ರಮಗಳು ನಡೆದಿದ್ದರೆ, ಪಟ್ಟಣದ 4ನೇ ವಾರ್ಡ್‍ನ ದಬ್ಬೆಗಟ್ಟ ಗ್ರಾಮದ ಮುಖ್ಯರಸ್ತೆಯೇ ಕೊಳಚೆಯಿಂದ ತುಂಬಿ ರೋಗವಾಹಕಗಳ ಆಶ್ರಯ ತಾಣವಾಗಿದ್ದು ಜನರು ಭಯದಿಂದ ಜೀವ ನಡೆಸುವಂತಾಗಿದೆ. ಪಟ್ಟಣದ ಪುರಸಭೆಗೆ ಸೇರಿದ ದಬ್ಬೆಘಟ್ಟ ಗ್ರಾಮದ ಶ್ರೀ ಮರುಳಪ್ಪ ದೇವಾಲಯದ ರಸ್ತೆಯಿಂದ ಶ್ರೀಕೆಂಪಮ್ಮ ದೇವಾಲಯದ ಮುಖ್ಯರಸ್ತೆ ಕೊಳಚೆ ನೀರಿನಿಂದ ಆವೃತಗೊಂಡಿದೆ. ಇದು ಗ್ರಾಮದ ಮುಖ್ಯ ರಸ್ತೆಯಾಗಿ ಬಳಕೆಯಾಗುತ್ತಿದ್ದು ಜನ ಜಾನುವಾರುಗಳ ಜೊತೆಗೆ ಧಾರ್ಮಿಕ ಉತ್ಸವಗಳು ಇದೇ ದಾರಿಯಲ್ಲಿ ಸಾಗಬೇಕಿದೆ. ಸದಾ ಕೊಳಚೆಯಿಂದ ಕೂಡಿರುವ ಈ ರಸ್ತೆಯ ಸನಿಹದಲ್ಲಿಯೇ ವಾಸದ ಮನೆಗಳಿದ್ದು, ಸೊಳ್ಳೆ ಹಾಗೂ ಕೊಳಚೆ ವಾಸನೆಯ ನಡುವೆಯೇ ವಾಸಿಸುತ್ತಿದ್ದಾರೆ. ಸದರಿ ರಸ್ತೆಯನ್ನು ಸರಿಪಡಿಸುವಂತೆ ಪುರಸಭೆಗೆ ಹಾಗೂ ವಾರ್ಡ್‍ನ ಸದಸ್ಯರಿಗೆ ಮನವಿ ಮಾಡಿದರೂ ಈ ಬಗ್ಗೆ ಈವರೆಗೂ ಗಮನ ಹರಿಸಿಲ್ಲ. ಮಳೆಗಾಲ ಆರಂಭಗೊಂಡಿದ್ದು, ಇನ್ನೂ ಹೆಚ್ಚಿನ ಕೊಳಚೆಯು ನಿರ್ಮಾಣವಾಗುವುದರಿಂದ ಗ್ರಾಮಸ್ಥರಿಗೆ ರೋಗ ಭೀತಿಯುಂಟಾಗಿದ್ದು, ಈಗಲಾದರೂ ಸಂಬಂಧಪಟ್ಟವರು ಶೀಘ್ರವಾಗಿ…

Read More

ತುಮಕೂರು:       ಸುಮಾರು 40 ವರ್ಷಗಳಿಂದ ಸರಕಾರಿ ಗೋಮಾಳವನ್ನು ಉಳುಮೆ ಮಾಡುತ್ತಾ ಜೀವನ ನಡೆಸುತ್ತಾ ಇದ್ದ ಕುಟುಂಬವನ್ನು ಒಕ್ಕಲೆಬ್ಬಿಸಿ, ಸದರಿ ಜಾಗವನ್ನು ಶ್ರೀಮಂತ ಕುಟುಂಬವೊಂದಕ್ಕೆ ಸಾಗುವಳಿ ಚೀಟಿ ಮಾಡಿಕೊಟ್ಟಿರುವ ಕೊರಟಗೆರೆ ತಹಶೀಲ್ದಾರ ಅವರ ಕ್ರಮವನ್ನು ಖಂಡಿಸಿ ಸೋಮವಾರ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದಪಟೇಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಂತ್ರಸ್ತ ಕುಟುಂಬದೊಂದಿಗೆ ಸುರಿವ ಮಳೆಯ ನಡುವೆಯೂ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನಾನಿರತ ರೈತ ಸಂಘ ಮತ್ತು ಹಸಿರುಸೇನೆಯ ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ ಪಟೇಲ್,ಕೊರಟಗೆರೆ ತಾಲೂಕು ಅಕ್ಕಾಜಿಹಳ್ಳಿ ಸರ್ವೆ ನಂ 33 ರಲ್ಲಿ ಬರುವ 641 ಎಕರೆ ಸರಕಾರಿ ಗೋಮಾಳದಲ್ಲಿ ಕಾಮಣ್ಣ ಬಿನ್. ಲೇ ಚಿಕ್ಕನರಸಪ್ಪ ಮತ್ತು ದಾಳಿ ನರಸಪ್ಪ ಬಿನ್ ಲೇ ಚಿಕ್ಕನರಸಪ್ಪ ಎಂಬುವವರು ತಲಾ ಎರಡು ಎಕರೆಯಂತೆ ಕಳೆದ 35-40 ವರ್ಷಗಳಿಂದ ಉಳುಮೆ ಮಾಡಿ, ಮೆಕ್ಕೇಜೋಳ,ರಾಗಿ ಇನ್ನಿತರ ದಿನಸಿ,ಕಾಳು,…

Read More

ಕೊರಟಗೆರೆ:       ಅಲೆಮಾರಿ ಕೂಲಿ ಕಾರ್ಮಿಕ ಕುಟುಂಬ ವಾಸಿಸುತ್ತಿರುವ ಗುಡಿಸಲಿನಲ್ಲಿ ಯಾರು ಇಲ್ಲದ ವೇಳೆ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂರು ಗುಡಿಸಲು, ದ್ವಿಚಕ್ರ ವಾಹನ ಮತ್ತು ದವಸದಾನ್ಯ ಬೆಂಕಿಗೆ ಆಹುತಿ ಆಗಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದ ಸಮೀಪ ಅಲೆಮಾರಿ ಕೂಲಿ ಕಾರ್ಮಿಕ ಕುಟುಂಬ ವಾಸಿಸುತ್ತಿರುವ ಗುಡಿಸಲಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ 1ಲಕ್ಷ ಮೌಲ್ಯದ ದವಸದಾನ್ಯ ನಾಶವಾಗಿದೆ. ಚಿಂಪುಗಾನಹಳ್ಳಿ ಕೂಲಿ ಕಾರ್ಮಿಕ ಹನುಮಂತರಾಯಪ್ಪ ಮಾತನಾಡಿ, ನಮಗೆ ಸ್ವಂತ ಮನೆಯೇ ಇಲ್ಲ. ಕಳೆದ 20ವರ್ಷದಿಂದ ಗುಡಿಸಲಿನ ಗುಡಾರವೇ ನಮ್ಮ ಅರಮನೆ ಆಗಿದೆ. ನಾವು ವಾಸಿಸುವ ಕುಟುಂಬ ಮತ್ತು ನಮ್ಮ ಮಕ್ಕಳಿಗೆ ಸಮರ್ಪಕ ಭದ್ರತೆ ಇಲ್ಲದಿರುವ ಪರಿಣಾಮ ಆಕಸ್ಮಿಕವಾಗಿ ಗ್ಯಾಸ್ ನಿಲಿಂಡರ್ ಸಿಡಿದು 3 ಗುಡಿಸಲು ಸುಟ್ಟು ಭಸ್ಮವಾಗಿ 1 ಲಕ್ಷಕ್ಕೂ ಅಧಿಕ ನಮಗೆ ನಷ್ಟವಾಗಿದೆ ಎಂದು ತಿಳಿಸಿದರು. ಕೊರಟಗೆರೆ ಎಂಎನ್‍ಜೆ ಗ್ರೂಪ್ ಮಾಲೀಕ ಮಂಜುನಾಥ ಮಾತನಾಡಿ…

Read More

ಕೊರಟಗೆರೆ:       ತಾಲ್ಲೂಕಿನ ಕಸಬಾ ಹೋಬಳಿಯ ಬೋಡಬಂಡೇನಹಳ್ಳಿ ಗ್ರಾಮದ ಯುವಕರಿಂದ ಕಸಾಯಿ ಖಾನೆಗೆ ಹೋಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ.       ಮಲ್ಲೇಶ್ವರ ಗ್ರಾಮದಿಂದ ಬೋಡಬಂಡೇನಹಳ್ಳಿ ಮಾರ್ಗವಾಗಿ ಎರಡು ಹಸುವಿನ ಕರುಗಳನ್ನು ಕಸಾಯಿಖಾನೆಗೆ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿರುವುದನ್ನು ಸ್ಥಳೀಯ ಯುವಕರು ಕಂಡು ನಿಲ್ಲಿಸಿ ವಿಚಾರಿಸಿದಾಗ ಅವುಗಳನ್ನು ಸಾಕಲು ತೆಗೆದುಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಅನುಮಾನಗೊಂಡ ಯುವಕರು ಸ್ಥಳೀಯ ಪತ್ರಕರ್ತರಾದ ಹರೀಶ್‍ರವರಿಗೆ ಕರೆ ಮಾಡಿದ್ದಾರೆ. ಕರೆ ಮಾಡಿದ ತಕ್ಷಣ ಅಲ್ಲಿಗೆ ತೆರಳುವಷ್ಟರಲ್ಲಿ ಕಸಾಯಿ ಖಾನೆಯ ಕಟುಕರು ಕರುಗಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.       ಕರುಗಳು ಸದ್ಯಕ್ಕೆ ಪತ್ರಕರ್ತರಾದ ಹರೀಶ್ ಅವರ ಮನೆಯ ಬಳಿ ಇದ್ದು ಮರುದಿನ ಬೆಳಿಗ್ಗೆ ಆ ಕರುಗಳನ್ನು ಸ್ಥಳಿಯ ಯಾವುದಾದರೂ ಮಠಕ್ಕೆ ಬಿಟ್ಟು ಬರುವುದಾಗಿ ಅವರು ತಿಳಿಸಿದ್ದಾರೆ. ಕರುಗಳನ್ನು ರಕ್ಷಿಸಿರುವ ಯುವಕರನ್ನು ಗ್ರಾಮಸ್ಥರು ಹಾಗೂ ಗೋ ಪ್ರಿಯರು ಹರ್ಷಿಸಿದರು.

Read More

ತುಮಕೂರು:       ಕಾಂಗ್ರೆಸ್‍ನಲ್ಲಿ ಭವಿಷ್ಯದ ಸಿಎಂ ಅಭ್ಯರ್ಥಿ ಬಗ್ಗೆ ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಪ್ರತಿಕ್ರಿಯಿಸಿ, ಕೈ ಹೈಕಮಾಂಡ್ ಒಪ್ಪಿದರೆ ಡಿ.ಕೆ.ಶಿವಕುಮಾರ್ ಕೂಡಾ ಮುಖ್ಯಮಂತ್ರಿ ಆಗಬಹುದು ಎಂದಿದ್ದಾರೆ. ಜೊತೆಗೆ ಜಿ.ಪರಮೇಶ್ವರ್ ಡಿಸಿಎಂ ಆಗಿದ್ದಾಗಲೇ ಝೀರೋ ಟ್ರಾಫಿಕ್ ಮಾಡಿಕೊಂಡು ಓಡಾಡುತಿದ್ದರು. ಮುಖ್ಯಮಂತ್ರಿಯಾದರೆ ಇಡೀ ತುಮಕೂರು ಜಿಲ್ಲೆಯನ್ನೇ ಝೀರೋ ಮಾಡುತ್ತಾರೆ ಎಂದು ಸಂಸದ ಬಸವರಾಜು ಹೇಳಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ನಡುವಿನ ಮಾತಿನ ಸಮರಕ್ಕೆ ಪ್ರತಿಕ್ರಿಯಿಸಿದ ಬಸವರಾಜು, ಸುಮಲತಾ ಒಬ್ಬ ಡಿಗ್ನಿಪೈಡ್ ಮಹಿಳಾ ಸಂಸದೆ. ಅವರು ಸಂಸತ್ತಿನಲ್ಲಿ ಮಾತನಾಡುವ ಗಾಂಭೀರ್ಯತೆ ನೋಡಿದರೆ ನಾವು ಹೆಮ್ಮೆ ಪಡಬೇಕು. ಆದರೆ ಕುಮಾರಸ್ವಾಮಿ ಹೆಣ್ಣು ಮಗಳ ಬಗ್ಗೆ ಹಾಗೆ ಹೇಳಬಾರದಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಜ್ವಲ್ ರೇವಣ್ಣರನ್ನ ಕೇವಲ ಸುಮಲತಾ ಮಾತ್ರ ಹೊಗಳಲಿಲ್ಲ. ನಾನು ಹೊಗಳಿದ್ದೇನೆ. ಆತ ಸಂಸತ್ತಿನಲ್ಲಿ ಮಾತಾಡಿದ್ದು ನೋಡಿ ನಾನು ಬೆನ್ನು ತಟ್ಟಿ ಬಂದಿದ್ದೇನೆ. ಇದನ್ನೇ ಮುಂದುವರಿಸಿ ಎಂದಿದ್ದೇನೆ. ಪ್ರಜ್ವಲ್‍ಗೆ ಉತ್ತಮ ರಾಜಕೀಯ ಭವಿಷ್ಯ ಇದೆ ಎಂದು ಸಂಸದ ಬಸವರಾಜು…

Read More

  ತುಮಕೂರು :      ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ಹಾಗೂ ನವ್ಯದಿಶಾ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಜಿಲ್ಲೆಯ 4000 ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ಇಂದು ವಿತರಿಸಲಾಯಿತು. ಮಾಸ್ಕ್ ವಿತರಿಸಿದ ನಂತರ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ಸಂಚಾಲಕ ಶಿವಲಿಂಗಯ್ಯ ಮಾತನಾಡಿ ಕೋವಿಡ್-19ರ ಫ್ರೆಂಟ್‍ಲೈನ್ ಕಾರ್ಯಕರ್ತೆಯರಾದ ಅಂಗನವಾಡಿ ಸಿಬ್ಬಂದಿಗಳು ತಮ್ಮ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಕೋವಿಡ್ ಸೋಂಕು ಹರಡದಂತೆ ಹಾಗೂ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವುದರಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ನಟರಾಜ್ ಮಾತನಾಡಿ ಕೋವಿಡ್-19ರ ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಈ ಸೇವೆಯನ್ನು ಗಮನಿಸಿ ಗ್ರಾಮೀಣ ಕೂಟದಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಇನ್ನೂ ಹೆಚ್ಚು ಸಕ್ರಿಯವಾಗಿ ಸೇವೆ ಸಲ್ಲಿಸುವಂತೆ ಕರೆ ನೀಡಿದರು.      …

Read More

 ತುಮಕೂರು :       ಜಿಲ್ಲೆಯಲ್ಲಿ ಜುಲೈ 19 ರಿಂದ 22ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆ ತುಮಕೂರು(ದ) ಜಿಲ್ಲೆ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ನಡೆಯಲಿರುವ ಪರೀಕ್ಷೆಯನ್ನು ಶಿಕ್ಷಣ ಇಲಾಖೆಯೊಂದಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕು. ಯಾವುದೇ ಕಾರಣಕ್ಕೂ ಎಲ್ಲಿಯೂ ಸಮಸ್ಯೆಯಾಗದಂತೆ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು ಎಂದು ನಿರ್ದೇಶಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಪರೀಕ್ಷೆಯ ಮುನ್ನ ಮತ್ತು ನಂತರ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳು, ಪೀಠೋಪಕರಣ ಹಾಗೂ ಇನ್ನಿತರ ವಸ್ತುಗಳನ್ನು ಸ್ಯಾನಿಟೈಜ್ ಮಾಡಲು ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಅಗತ್ಯವಿರುವಷ್ಟು ಮಾಸ್ಕ್‍ಗಳ ವ್ಯವಸ್ಥೆಯನ್ನೂ…

Read More

ಹುಳಿಯಾರು: ಹುಳಿಯಾರು ಹೋಬಳಿ ವ್ಯಾಪ್ತಿಯ ದೊಡ್ಡಬಿದರೆ ಗ್ರಾಮ ಪಂಚಾಯಿತಿಯ ಪೋಚಕಟ್ಟೆ ಭಾಗದ ರೈತರ ಹೆಸರು ಬೆಳೆ ತಾಕಿನಲ್ಲಿ ಕಾಯಿ ತಿನ್ನುವ ಮಿಡತೆ ಕಾಟ ಕಂಡು ಬಂದಿದ್ದು ಕೃಷಿ ಅಧಿಕಾರಿಗಳು ಬೇಟಿ ನೀಡಿ ಬೆಳೆಗಾರರಿಗೆ ಹತೋಟಿಯ ಮಾರ್ಗದರ್ಶನ ನೀಡಿದರು. ಸಾಮಾನ್ಯವಾಗಿ ಹೆಸರು ಹೂ ಬಿಡುವ ಹಂತದಲ್ಲಿಯೇ ಕಂಬಳಿ ಹುಳುಗಳ ಕಾಟ ಕಾಣಿಸಿಕೊಳ್ಳುತ್ತಿತ್ತು. ಅಲ್ಲದೆ ಹಳದಿ ಎಲೆ ರೋಗವೂ ಕಾಣಿಸಿಕೊಂಡು ರೈತರನ್ನು ಕಂಗೆಡಿಸುತ್ತಿತ್ತು. ಆದರೆ ಈ ಬಾರಿ ಹೆಸರು ಕಾಯಿ ತಿನ್ನುವ ಮಿಡತೆ ಕಂಡು ಬಂದಿದ್ದು ರೈತರಲ್ಲಿ ಆತಂಕ ಸೃಷ್ಠಿಸಿತ್ತು. ವಿಷಯ ತಿಳಿದ ಹುಳಿಯಾರು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಲ್ಲಿಕಾರ್ಜುನ್ ಅವರು ಹೆಸರು ಬೆಳೆ ತಾಕಿಗೆ ಭೇಟಿ ನೀಡಿ ತಾಲೂಕಿನಲ್ಲಿ ಎಲ್ಲೂ ಈ ರೀತಿ ಮಿಡತೆ ಕಾಟ ಕಂಡು ಬಂದಿಲ್ಲ. ಹಾಗಾಗಿ ರೈತರು ಭಯಪಡುವ ಅಗತ್ಯವಿಲ್ಲ. ಇಲ್ಲಿರುವ ಬೆರಳೆಣಿಕೆಯಷ್ಟು ಮಿಡತೆಗಳಿದ್ದು ಇವುಗಳಿಂದ ಯಾವುದೇ ಹಾನಿ ಯಾಗಿಲ್ಲ. ಎಲೆ ಹಾಗೂ ಕಾಯಿ ಚೆನ್ನಾಗಿದ್ದು ರೈತರು ಭಯ ಪಡುವ ಅಗತ್ಯವಿಲ್ಲ ಎಂದರು. ಕಂಬಳಿಹುಳು ಹಲವಾರು…

Read More