Author: News Desk Benkiyabale

ತುಮಕೂರು:     ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಅನಧಿಕೃತ ಪ್ರಾಣಿಹತ್ಯೆ, ಸಾಗಾಣಿಕೆ ತಡೆಗಟ್ಟುವ ಸಮತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅನಧಿಕೃತ ಪ್ರಾಣಿ ಹತ್ಯೆ ಹಾಗೂ ಸಾಗಾಣಿಕೆ ಬಗ್ಗೆ ದೂರು ಬಂದರೆ ತಕ್ಷಣವೇ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಜಂಟಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ನಿರ್ದೇಶಿಸಿದರು ಜಾನುವಾರು ಖರೀದಿಸಿದ್ದರೆ ಅದಕ್ಕೆ ಮಾಲಿಕತ್ವದ ದಾಖಲೆ ಪಡೆದುಕೊಳ್ಳಬೇಕು. ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗೆ ಸಂಪೂರ್ಣ ಕಡಿವಾಣ ಹಾಕಬೇಕು. ಮಾಲೀಕತ್ವ ಹಾಗೂ ಇಯರ್ ಟ್ಯಾಗ್ ಸೇರಿದಂತೆ ಜಾನುವಾರು ‘ನನ್ನ ಮಾಲಿಕತ್ವ’ದ್ದು ಎನ್ನುವುದಕ್ಕೆ ಜಾನುವಾರು ಮಾಲೀಕರ ಬಳಿ ದಾಖಲೆ ಇಲ್ಲದಿದ್ದರೆ ಹತ್ತಿರದ ಗೋಶಾಲೆ ವಶಕ್ಕೆ ಜಾನುವಾರುಗಳನ್ನು ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ಅನಧಿಕೃತ ಪ್ರಾಣಿಗಳ ಸಾಗಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಡಿ ಬಹುತೇಕ ವಾಹನಗಳು ಪದೇ ಪದೇ ಈ ಅನಧಿಕೃತ…

Read More

ತುಮಕೂರು :        ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಸದ್ಬಬಳಕೆಯಲ್ಲಿ ರಾಜ್ಯದಲ್ಲಿಯೇ ತುಮಕೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ನಾರಾಯಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಅನುದಾನ ಬಳಕೆ ವಿಚಾರದಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ. ಕೋವಿಡ್ ನಿಂದ ಲಾಕ್ ಡೌನ್ ಆಗಿದ್ದರೂ ಕೆಲಸ ವೇಗವಾಗಿ ನಡೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಆಸಕ್ತಿಯಿಂದ ಕೆಲಸ ಮಾಡಿದ್ದಾರೆ ಎಂದು ಪ್ರಶಂಸಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹತ್ವ ಏನು ಎನ್ನುವುದನ್ನು ರಾಜ್ಯಕ್ಕೇ ತೋರಿಸಿಕೊಡುತ್ತೇನೆ. ಹಿಂದೆಂದೂ ಆಗಿರದಂತಹ ಅಭಿವೃದ್ಧಿ ಕಾರ್ಯ ಮಾಡುತ್ತೇನೆ. ಪ್ರತಿ ತಾಲೂಕು, ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡುತ್ತೇನೆ. ಅದಕ್ಕಾಗಿಯೆ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ತುಮಕೂರಿನಲ್ಲಿ…

Read More

ತುಮಕೂರು :    ಜಿಲ್ಲೆಯಲ್ಲಿನ ಎಲ್ಲಾ ಗ್ರಂಥಾಲಯಗಳನ್ನು ಆಧುನಿಕ ಮತ್ತು ಸುಸಜ್ಜಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ನಿರ್ದೇಶಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಜಿಲ್ಲಾ ಕೇಂದ್ರ ಗ್ರಂಥಾಲಯದ 2021-22ನೇ ಸಾಲಿನ ಆಯ-ವ್ಯಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಹಂತ ಹಂತವಾಗಿ ಗ್ರಂಥಾಲಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿರುವ ಒಟ್ಟು 10 ಗ್ರಂಥಾಲಯಗಳ ಪೈಕಿ ಐದು ಗ್ರಂಥಾಲಯಗಳು ಸ್ವಂತ ಕಟ್ಟಡ ಹೊಂದಿದ್ದು, ಉಳಿದ ಗ್ರಂಥಾಲಯಗಳು ಪಟ್ಟಣ ಪಂಚಾಯತಿ ಹಾಗೂ ಪುರಸಭೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತವೆ. ಗ್ರಂಥಾಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣಕ್ಕೆ ಸ್ಥಳೀಯ ಯೋಜನಾ ಪ್ರಾಧಿಕಾರದಡಿ ಸಿ.ಎ. ಸೈಟ್ ಖರೀದಿಸಲು ಕ್ರಮ ವಹಿಸಬೇಕು ಎಂದರು. ಜಿಲ್ಲೆಯಲ್ಲಿ ಸುಮಾರು 327 ಗ್ರಂಥಾಲಯಗಳು ಗ್ರಾಮ ಪಂಚಾಯಿತಿಗಳ ನಿರ್ವಹಣೆಯಲ್ಲಿದ್ದು, ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಗ್ರಂಥಾಲಯದ ಮೇಲ್ವಿಚಾರಕರಿಗೆ ನಿರ್ದೇಶಿಸಿದರು. ಗ್ರಂಥಾಲಯದಲ್ಲಿರುವ ಹೆಚ್ಚುವರಿ ಪುಸ್ತಕಗಳನ್ನು ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಶಾಲಾ ಕಾಲೇಜುಗಳಿಗೆ ನೀಡಬೇಕು. ಸ್ವರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವಂತೆ ತರಬೇತಿಗಳನ್ನು ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.…

Read More

ಹುಳಿಯಾರು:      ಪ್ರತಿನಿತ್ಯ ಎಲ್ಲರಿಂದಲೂ ಪೂಜಿಸಲ್ಪಡುವ ನಾಗರಕಲ್ಲು ಹಾಗೂ ಅರಳಿಕಟ್ಟೆಯ ಪಕ್ಕದಲ್ಲಿ ಬಾರಿನ ತ್ಯಾಜ್ಯ ತಂದು ಸುರಿಯುತ್ತಿರುವ ಬಾರ್ ಅಂಗಡಿಯವರ ಮೇಲೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.       ಹುಳಿಯಾರಿನ ಬಸ್ ನಿಲ್ದಾಣದ ಬಳಿ ಇರುವ ಆಟೋ ಸ್ಟ್ಯಾಂಡ್ ಪಕ್ಕದ ನಾಗರ ಕಟ್ಟೆಯ ಬಳಿ ಮದ್ಯದ ಪಾಕೆಟ್‍ಗಳು ಎಲ್ಲೆಂದರಲ್ಲಿ ಹಾಕಲ್ಪಡುತ್ತಿದೆ. ಸ್ವಚ್ಛತೆಯನ್ನು ಸಂಪೂರ್ಣ ನಿರ್ಲಕ್ಷಿಸಿ ಎಲ್ಲೆಂದರಲ್ಲಿ ಕಸ ಚೆಲ್ಲುವ ಇವರಿಗೆ ತ್ಯಾಜ್ಯ ಎಲ್ಲಿ ಹಾಕಬೇಕೆಂಬ ಬಗ್ಗೆ ಕನಿಷ್ಠ ಪ್ರಜ್ಞೆ ಇಲ್ಲದಾಗಿದೆ ಎಂದು ಟೀಕಿಸಿದ್ದಾರೆ. ಪ್ರತಿನಿತ್ಯವೂ ಕೆರೆಗೆ, ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಮನಬಂದಂತೆ ತ್ಯಾಜ್ಯ ತಂದು ಸುರಿಯುವ ಇವರಿಗೆ ಈ ಹಿಂದೆ ಪಟ್ಟಣ ಪಂಚಾಯಿತಿಯವರು ನೋಟಿಸ್ ನೀಡಿದ್ದರು ಇವರು ಮಾತ್ರ ಬದಲಾಗಿಲ್ಲ. ಹಾಗಾಗಿ ಸ್ವಚ್ಚತೆಯ ಎಲ್ಲಾ ನಿಯಮಗಳನ್ನು ಗಾಳಿಗೆ ತೂರುವ ಇವರುಗಳ ಬಗ್ಗೆ ಪಟ್ಟಣ ಪಂಚಾಯಿತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

Read More

ಮಧುಗಿರಿ :       ತಾಲೂಕಿನ ಸಸ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರದಿಂದ ಅಗತ್ಯ ಅನುದಾನ ಕೊಡಿಸಿಕೊಡಲಾಗುವುದು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ಪಟ್ಟಣದ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಸಿ ನೆಟ್ಟು ಮಾತನಾಡಿದ ಅವರು ತಾಲೂಕಿನಲ್ಲಿ ಅಪಾರ ಗುಡ್ಡಗಾಡಿನ ಸಂಪತ್ತಿದ್ದು, ಅವುಗಳ ಒಡಲಲ್ಲಿ ಸಸ್ಯವನ್ನು ಬೆಳೆಸಿದರೆ ಸಮೃದ್ಧಿ ಅಂತರ್ಜಲ ಹಾಗೂ ಸುಸ್ಥಿರ ವಾರಾವರಣವನ್ನು ಸೃಷ್ಟಿಸಬಹುದು. ಈ ಗುಡ್ಡಗಾಡು ಪ್ರದೇಶದಲ್ಲಿ ನೀರನ್ನು ಹಿಡಿದಿಡುವ ಹಾಗೂ ಸೌಂದರ್ಯ ಹೆಚ್ಚಿಸುವ ಬಿದಿರನ್ನು ಹೆಚ್ಚಾಗಿ ಬೆಳಸಬೇಕು. ಅದಕ್ಕಾಗಿ ವಿಶೇಷ ಕಾರ್ಯ ಯೋಜನೆಯನ್ನು ಸಿದ್ಧಪಡಿಸಿದರೆ ಸರ್ಕಾರದಿಂದ ಅಗತ್ಯ ಅನುದಾನ ಕೊಡಿಸುತ್ತೇನೆ. ಇಂದು ಭೂಮಿಯ ಬೌಗೋಳಿಕ ಕ್ಷೇತ್ರ ಕಡಿಮೆಯಾಗುತ್ತಿದ್ದು, ಜನಸಂಖ್ಯೆ ಹೆಚ್ಚಾಗುತ್ತಿದೆ. ನೀರಿಗಾಗಿ ಬವಣೆ ಹಿಂದಿನ ಮಾತಾಗಿದ್ದು, ಪ್ರಸ್ತುತ ಉತ್ತಮ ಗಾಳಿಗಾಗಿ ಬವಣೆ ಎಂಬಂತಾಗಿದೆ. ಮರಗಳ ವೃದ್ಧಿಯಾಗದೆ ಉತ್ತಮ ಗಾಳಿಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಮರಗಳನ್ನು ಬೆಳೆಸಿ ಉಳಿಸುವುದು ಕೇವಲ ಸರ್ಕಾರ ಹಾಗೂ ಇಲಾಖೆಗಳ ಕರ್ತವ್ಯವಲ್ಲ. ಅದನ್ನು ಪ್ರತಿಯೊಬ್ಬ ಜವಾಬ್ದಾರಿಯುತ ನಾಗರೀಕನ ಕೆಲಸವಾಗಬೇಕು. ಇಲಾಖೆಯಿಂದ…

Read More

ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಂದ ವಿಶೇಷ ಮುತುವರ್ಜಿ, ಜಿಲ್ಲಾಡಳಿಕ್ಕೆ ಸದಾ ಮಾರ್ಗದರ್ಶನ, ಸೋಂಕಿನಿಂದ ಮಕ್ಕಳ ರಕ್ಷಣೆಗೆ ಪಣ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಣಕ್ಕೆ ತಂದಿರುವ ತುಮಕೂರು ಜಿಲ್ಲಾಡಳಿತ ಈಗ ಸಂಭಾವ್ಯ ಮೂರನೇ ಅಲೆ ನಿಯಂತ್ರಣಕ್ಕೆ ಸಕಲ ರೀತಿಯಲ್ಲಿಯೂ ಸನ್ನದ್ಧವಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ ಮೂರನೇ ಅಲೆ ತಡೆಗೆ ವಿಶೇಷ ಯೋಜನೆಗಳನ್ನು ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಂಭಾವ್ಯ ಮೂರನೆ ಅಲೆಯ ಸೋಂಕಿನಿಂದ ಮಕ್ಕಳ ರಕ್ಷಣೆಗೆ ವಿಶೇಷ ಮುತುವರ್ಜಿ ವಹಿಸಿದೆ. ಅಪೌಷ್ಟಿಕತೆಯುಳ್ಳ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕ್ರಮ ವಹಿಸಿರುವ ಜಿಲ್ಲಾಡಳಿತ ಈಗಾಗಲೇ ಮಕ್ಕಳ ರಕ್ಷಣೆ ಕುರಿತು ವೈದ್ಯರಿಗೆ ವಿಶೇಷ ಕಾರ್ಯಾಗಾರ ನಡೆಸಿದೆ. ಇದರ ಜೊತೆಗೆ ಆಮ್ಲಜನಕ, ಹಾಸಿಗೆ ಸೇರಿದಂತೆ ಚಿಕಿತ್ಸಾ ಸೌಲಭ್ಯಗಳ ಸಿದ್ಧತೆಗೆ ಸಂಪೂರ್ಣ ವ್ಯವಸ್ಥೆ ಮಾಡಿಕೊಂಡಿದೆ. ವಿಶೇಷ ಕಾರ್ಯಾಗಾರ: ಸಂಭಾವ್ಯ ಕೋವಿಡ್ ಮೂರನೇ ಅಲೆಯು ಮಕ್ಕಳನ್ನು ಕಾಡುವ ನಿರೀಕ್ಷೆ ಹಿನ್ನೆಲೆಯಲ್ಲಿ ಕೋವಿಡ್ ಮೂರನೆ ಅಲೆ ನಿಯಂತ್ರಣಕ್ಕೆ ಪೂರ್ವ ಸಿದ್ಧತೆ ಮತ್ತು ಮಕ್ಕಳ ರಕ್ಷಣೆ, ಆರೈಕೆ ಹಾಗೂ…

Read More

 ತುಮಕೂರು :       ಪಡಿತರ ಚೀಟಿದಾರರಿಗೆ ಪಡಿತರ ವಿತರಣೆಯಲ್ಲಿ ಸಮಸ್ಯೆ/ಲೋಪದೋಷಗಳು ಉಂಟಾದಲ್ಲಿ ಆಯಾ ತಾಲ್ಲೂಕಿನ ತಹಸೀಲ್ದಾರ್/ಆಹಾರ ಇಲಾಖೆಯ ಆಹಾರ ಶಿರಸ್ತೇದಾರ್/ಆಹಾರ ನಿರೀಕ್ಷಕರಿಗೆ ಲಿಖಿತವಾಗಿ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ. ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ಪಡಿತರ ವಿತರಣೆ, ಕಾರ್ಡುದಾರದಿಂದ ಹಣ ಪಡೆಯುವಿಕೆ, ನಿಗದಿತ ಸಮಯಕ್ಕೆ ನ್ಯಾಯಬೆಲೆ ಅಂಗಡಿ ಬಾಗಿಲು ತೆರೆಯದೇ ಇರುವುದು, ಒಂದೆರಡು ದಿನ ಮಾತ್ರ್ರ ಪಡಿತರ ವಿತರಣೆ ಮಾಡಿ ನಂತರ ಬಂದವರಿಗೆ ಪಡಿತರ ಇಲ್ಲವೆಂದು ನಿರಾಕರಿಸುವುದು, ಪಡಿತರ ಪದಾರ್ಥಗಳ ಜೊತೆಗೆ ಮುಕ್ತ ಮಾರುಕಟ್ಟೆ ವಸ್ತುಗಳನ್ನು ಖರೀದಿಸುವಂತೆ ಒತ್ತಾಯಿಸುವುದು, ಕಾರ್ಡುದಾರರೊಂದಿಗೆ ಅಸಭ್ಯವಾಗಿ ವರ್ತಿಸುವುದು, ಬಯೋಮೆಟ್ರಿಕ್ ಪಡೆದು ಮರುದಿನ ಪಡಿತರ ವಿತರಿಸುವುದು, ಒಂದು ದಿನ ಟೋಕನ್ ವಿತರಣೆ ಮಾಡಿ ಮತ್ತೊಂದು ದಿನ ಪಡಿತರ ವಿತರಿಸುವುದು, ಕಳಪೆ ಗುಣಮಟ್ಟದ ಪಡಿತರ ವಿತರಣೆ ಸೇರಿದಂತೆ ಇನ್ನಿತರ ಸಮಸ್ಯೆಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ಸಲ್ಲಿಸಬಹುದಾಗಿದೆ ಅಥವಾ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಲು…

Read More

ತುಮಕೂರು:       ಕಟ್ಟಡ ಕಾರ್ಮಿಕರಿಗೆ ಲಾಕ್‍ಡೌನ್ ಪರಿಹಾರವಾಗಿ 10 ಸಾವಿರ ಹಾಗೂ ಕಟ್ಟಡ ಕಾರ್ಮಿಕರಿಗೆ ವಿತರಿಸಿರುವ ಕಳಪೆ ಪಡಿತರ ಕಿಟ್ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಸಂಘಟನೆಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕ ಮುಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಅವರು, ಕೊರೋನಾ ಎರಡನೇ ಅಲೆಯಿಂದಾಗಿ ಸರ್ಕಾರ ಲಾಕ್‍ಡೌನ್ ಘೋಷಿಸಿತು, ಈ ಲಾಕ್‍ಡೌನ್‍ನಿಂದಾಗಿ ಅಸಂಘಟಿತ ವಲಯದ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಟ್ಟಡ ಕಾರ್ಮಿಕರಿಗೆ ಕೆಲಸ ದೊರೆಯದೇ ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿ ಕಟ್ಟಡ ಕಾರ್ಮಿಕರಿಗೆ 10 ಸಾವಿರ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.       ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೂ ಶಾಸಕರಿಗೂ ಏನು ಸಂಬಂಧ, ನೈಜ ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ದೊರೆಯಬೇಕಾದರೆ, ಶಾಸಕರ ಮಧ್ಯ ಪ್ರವೇಶವನ್ನು ನಿಲ್ಲಿಸಬೇಕು, ಸಂಘಟನೆಯ ಮೂಲಕವೇ ಸೌಲಭ್ಯವನ್ನು ನೀಡಲು ಕ್ರಮವಹಿಸಬೇಕು, ಮೊದಲನೇ ಅಲೆಯ ಅವಧಿಯಲ್ಲಿ ಘೋಷಿಸಿರುವ…

Read More

ತುಮಕೂರು :       ಜಿಲ್ಲೆಯಲ್ಲಿ ಮಾತ್ರವಲ್ಲದೆ ಹೊರ ಜಿಲ್ಲೆಗಳಲ್ಲೂ ಸಹ ಕೋವಿಡ್‍ನಿಂದ ಸಂಕಷ್ಟಕ್ಕೊಳಗಾದವರಿಗೆ ಆಹಾರದ ಕಿಟ್‍ಗಳನ್ನು ವಿತರಿಸಲಾಗುತ್ತಿದೆ ಎಂದು ಪಾವಗಡ ರಾಮಕೃಷ್ಣ ಸೇವಾಶ್ರಮದ ಮುಖ್ಯಸ್ಥರಾದ ಸ್ವಾಮಿ ಜಪಾನಂದಾಜೀ ತಿಳಿಸಿದರು.       ನಗರದ ಪತ್ರಿಕಾ ಭವನದಲ್ಲಿ ಗುರುವಾರ ಜಿಲ್ಲಾ ಮುದ್ರಣಕಾರರ ಸಂಘದಿಂದ ನಗರದಲ್ಲಿರುವ ಮುದ್ರಣಕಾರರಿಗೆ ಆಹಾರದ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೂ ಸುಮಾರು 20 ಸಾವಿರಕ್ಕೂ ಅಧಿಕ ಆಹಾರದ ಕಿಟ್‍ಗಳನ್ನು ವಿತರಿಸಲಾಗಿದ್ದು, ಇಂದೂ ಕೂಡ ಮಧುಗಿರಿಯಲ್ಲಿ ಕುಂಚ ಕಲಾವಿದರು ಮತ್ತು ಛಾಯಾಗ್ರಾಹಕರಿಗೆ ಆಹಾರದ ಕಿಟ್‍ಗಳನ್ನು ವಿತರಿಸಿ ಬಂದಿದ್ದೇನೆ ಎಂದರು.       ಕೊರೊನಾ ಸೋಂಕು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ರಾಜ್ಯ ಸರ್ಕಾರಗಳು ಲಾಕ್‍ಡೌನ್ ಜಾರಿಗೊಳಿಸಿದ ಪರಿಣಾಮ ಮುದ್ರಣ ಕೆಲಸಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಮಧುವೆ, ನಾಮಕರಣ, ಗೃಹಪ್ರವೇಶ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳು ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳಲ್ಲೇ ಹೆಚ್ಚು ನಡೆಯುತ್ತಿದ್ದವು, ಆದರೆ ಕಳೆದ ವರ್ಷವೂ ಇದೇ ಸಮಯಕ್ಕೆ ಲಾಕ್‍ಡೌನ್ ಮಾಡಲಾಗಿತ್ತು, ಈ ವರ್ಷವೂ ಸಹ…

Read More

 ತುಮಕೂರು  :      ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಕ್ಚೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಆಯಾ ತಾಲ್ಲೂಕು ಕಚೇರಿಯಲ್ಲಿ ಪ್ರಕಟಿಸಲಾಗಿದೆ.       ಅರ್ಹ ಮತದಾರರು ತಮ್ಮ ವಿವರಗಳನ್ನು ಈ ಅಂತಿಮ ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿ ಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದ್ದಾರೆ.

Read More