Author: News Desk Benkiyabale

ತುಮಕೂರು: ಭಾರತದ ಸ್ವಾತಂತ್ರ್ಯ ಹೋರಾಟ ಇಲ್ಲಿನ ಜನತೆಗೆ ಹೊಸ ರೀತಿಯ ಆಲೋಚನಾ ಕ್ರಮವಲ್ಲದೆ ಹೊಸ ಸಾಮಾಜಿಕ ಸಂಬಂಧಗಳನ್ನು ಸೃಷ್ಟಿಸಿತು. ಪೂರ್ವ ಮತ್ತು ಪಶ್ಚಿಮದ ಚಿಂತನಾ ಕ್ರಮಗಳು ಸಾಂಸ್ಕøತಿಕ ವೈರುಧ್ಯಗಳು ವ್ಯೆವಸ್ಥೆಯನ್ನುಕಟ್ಟುವ ತತ್ವಗಳು ಹೊಸ ನಿಷ್ಕರ್ಷೆಗೆ ಒಳಗಾದವು ಎಂದು ಸಂಶೋಧಕರಾದ ಡಾ.ಡಿ.ಎಸ್.ಯೋಗೀಶ್ವರಪ್ಪ ಅಭಿಪ್ರಾಯಪಟ್ಟರು. ಅವರು ನಗರದಶ್ರೀ ಸಿದ್ಧಗಂಗಾ ಕಲಾ,ವಿಜ್ಞಾನ ಮತ್ತು ವಾಣಿಜ್ಯಕಾಲೇಜಿನಲ್ಲಿ ಏರ್ಪಡಿಸಿದ್ದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕ್ವಿಟ್ ಇಂಡಿಯಾ ಚಳುವಳಿಯ ಸಂಸ್ಮರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಭಾರತ ಸ್ವಾತಂತ್ರ್ಯ ಹೋರಾಟದ ಅಂತಿಮ ಹಂತವಾದ ಕ್ವಿಟ್‍ಇಂಡಿಯಾ ಚಳುವಳಿಯಲ್ಲಿ ನೇತಾರರೆಲ್ಲಾ ಜೈಲು ಸೇರಿದ್ದರಿಂದ ನಾಯಕತ್ವವೇ ಇಲ್ಲವಾಗಿದ್ದರಿಂದ ದಿಕ್ಕು ತಪ್ಪಿದರೂ ತುಮಕೂರಿನಲ್ಲಿ ಅಭೂತಪೂರ್ವ ಯಶಸ್ಸನ್ನು ಕಂಡಿತು ಎಂದ ಅವರು ಇಂದಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣ, ನಗರದ ಚರ್ಚ್ ವೃತ್ತ ಮುಖ್ಯ ಕೇಂದ್ರಗಳಾಗಿದ್ದು ತಿಪಟೂರಿನಲ್ಲಿ ವಿದ್ಯಾರ್ಥಿ ಸಮುದಾಯದ ಮೇಲೆ ಪೋಲಿಸರು ಲಾಟಿಚಾರ್ಚ್ ಮಾಡಿದಾಗ ರೊಚ್ಚಿಗೆದ್ದ ಅವರು ಅಲ್ಲಿನ ರೈಲ್ವೆ ಸ್ಟೇಷನ್‍ಗೆ ಬೆಂಕಿ ಹಚ್ಚಿ ತಮ್ಮ ಕೋಪವನ್ನು ತೀರಿಸಿಕೊಂಡಿದ್ದು ಸ್ಮರಣೀಯವಾಗಿದೆಎಂದರು. ಆಗಸ್ಟ್…

Read More

ತುಮಕೂರು: ದಿವಂಗತ ರಾಜೀವ್ ಗಾಂಧಿಯವರ ಸ್ಮರಣಾರ್ಥ ತಮಿಳುನಾಡಿನ ಶ್ರೀ ಪೆರಂಬುದೂರಿನ ಶ್ರೀ ರಾಜೀವ್ ಗಾಂಧಿ ಸ್ವಾರಕದ ಬಳಿ ಜ್ಯೋತಿ ಉದ್ಘಾಟಿಸಿ ವಿವಿಧ ರಾಜ್ಯಗಳ ಮಾರ್ಗವಾಗಿ ನವದೆಹಲಿಯ ವೀರಭೂಮಿಗೆ ತಲುಪಲಿದೆ. ಕಳೆದ 31 ವರ್ಷಗಳಿಂದ ರಾಜೀವ್‍ಗಾಂಧಿ ಸದ್ಭಾವನಾ ಜ್ಯೋತಿಯಾತ್ರೆ ಹಮ್ಮಿಕೊಳ್ಳುತ್ತಿರುವುದು ವಿಶೇಷವಾಗಿದೆ. ಅದರಂತೆ ಈ ವರ್ಷದ ಜ್ಯೋತಿಯಾತ್ರೆ ಸಾಗುವ ಮಾರ್ಗಮಧ್ಯೆ ಇಂದು ತುಮಕೂರು ನಗರಕ್ಕೆ ಆಗಮಿಸಿದ ಸಂದರ್ಭ ಮಾಜಿ ಶಾಸಕರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಫೀಕ್ ಅಹ್ಮದ್ ರವರು ಜ್ಯೋತಿಯನ್ನು ಸ್ವಾಗತಿಸಿ, ರಾಜೀವ್‍ಗಾಂಧಿ ಸದ್ಭಾವನಾ ಜ್ಯೋತಿಯಾತ್ರೆ ಸಮಿತಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಡಾ.ರಫೀಕ್ ಅಹ್ಮದ್ ರವರು ಮಾತನಾಡಿ ರಾಜೀವ್ ಗಾಂಧಿಯವರ ವಿಚಾರಧಾರೆಗಳನ್ನು ಪಸರಿಸುವ ಉದ್ದೇಶದಿಂದ ಈ ಯಾತ್ರೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು ಸಂತಸದ ವಿಷಯ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಈ ಜ್ಯೋತಿಯನ್ನು ಸ್ವಾಗತಿಸಿ ಈ ಯಾತ್ರೆ ಯಶಸ್ವಿಯಾಗಿ ಸಾಗಲಿ ಎಂದು ಶುಭ ಕೋರಿದರು. ಸಮಿತಿಯ ಕಾರ್ಯಾಧ್ಯಕ್ಷರಾದ ದೊರೈ, ಪದಾಧಿಕಾರಿಗಳಾದ ಮಾಣಿಕ್ಯ ರೆಡ್ಡಿ, ಗೊಮತೇಶನ್ ಮತ್ತಿತರರು ಈ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

Read More

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ತ್ಯಾಗ ಟೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭೈರಮ್ಮ ಈಶ್ವರಯ್ಯ ಅವಿರೋಧವಾಗಿ ಬುಧವಾರ ಆಯ್ಕೆಯಾದರು. ತ್ಯಾಗಟೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಉಪ ತಹಸೀಲ್ದಾರ್ ಶ್ರೀನಿವಾಸ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಎಸ್.ಸಿ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ವಿಜಯ ಲಕ್ಷ್ಮಮ್ಮ ರಾಜೀನಾಮೆ ಸಲ್ಲಿಸಿದ ಹಿನ್ನಲೆ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತ್ಯಾಗ ಟೂರು ಗ್ರಾಮ ಪಂಚಾಯಿತಿ ಸದಸ್ಯೆ ಭೈರಮ್ಮ ನಾಮಪತ್ರ ಸಲ್ಲಿಸಿದ್ದರು. ಏಕೈಕ ನಾಮಪತ್ರ ಹಿನ್ನಲೆ ಅಧ್ಯಕ್ಷ ಸ್ಥಾನ ಅವಿರೋಧ ಆಯ್ಕೆ ಎಂದು ಘೋಷಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಭೈರಮ್ಮ, ತಾಲ್ಲೂಕಿನ ಪ್ರಮುಖ ಗ್ರಾಮ ಪಂಚಾಯಿತಿ ಎನಿಸಿದ ತ್ಯಾಗ ಟೂರು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸರ್ವ ಸದಸ್ಯರ ಸಹಕಾರ ಪಡೆಯಲಾಗುವುದು. ಈ ಜತೆಗೆ ಚುನಾಯಿತ ಜನಪ್ರತಿನಿಧಿಗಳ ಮೂಲಕ ಸರ್ಕಾರದಿಂದ ವಿಶೇಷ ಅನುದಾನ ತಂದು ಮೂಲಭೂತ ಸವಲತ್ತು ಒದಗಿಸಲು ಬದ್ಧನಾಗಿರುತ್ತೇನೆ. ಜಿಲ್ಲೆಯಲ್ಲೇ ಮಾದರಿ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಪಡೆಯಲು ಪ್ರಾಮಾಣಿಕ…

Read More

ತುಮಕೂರು: ಜಿಲ್ಲೆಯಾದ್ಯಂತ 2022ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು 13 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 12, 2022ರಿಂದ ಆಗಸ್ಟ್ 25, 2022ರವರೆಗೆ (ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ನಡೆಯಲಿದ್ದು, ಪರೀಕ್ಷೆಯು ಲೋಪದೋóಷವಿಲ್ಲದೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಆದೇಶಿಸಿದ್ದಾರೆ. ನಿಷೇಧಾಜ್ಞೆಯು ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ eóÉರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚುವುದು, ನಿಷೇಧಾಜ್ಞೆಯು ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸದ್ದಾರೆ. ಪರೀಕ್ಷೆಯ ಮುಖ್ಯ ಅಧೀಕ್ಷಕರಿಗೆ ಕ್ಯಾಮರಾ ಹೊಂದಿರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲ ಪರೀಕ್ಷಾ ಸಿಬ್ಬಂದಿ/ವಿದ್ಯಾರ್ಥಿಗಳು ಮೊಬೈಲ್…

Read More

ತುಮಕೂರು: ಗ್ರಾಮಾಂತರ ಪನ್ನಸಂದ್ರ ಗ್ರಾಮದಲ್ಲಿ ನೂತನ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಬಿ.ಸುರೇಶ್ ಗೌಡ ಭಾಗವಹಿಸಿ ದೇವಾಲಯದ ಅಭಿವೃದ್ಧಿಗೆ 2,00,000 ಲಕ್ಷ ಹಣವನ್ನು ವೈಯಕ್ತಿಕವಾಗಿ ನೀಡಿದರು. ಈ ಹಿಂದೆ ದೇವಾಲಯದ ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ 2,00,000 ಲಕ್ಷ ಹಣವನ್ನು ಸಹ ವೈಯಕ್ತಿಕವಾಗಿ ಗ್ರಾಮಸ್ಥರ ಸಮ್ಮುಖದಲ್ಲಿ ಈ ದೇವಾಲಯಕ್ಕೆ ಮಾನ್ಯ ಸುರೇಶ್ ಗೌಡರು ನೀಡಿರುತ್ತಾರೆ. ಅದೇ ರೀತಿ ಈ ಗ್ರಾಮಕ್ಕೆ ಶಾಸಕರಾಗಿದ್ದ ಸಂದರ್ಭದಲ್ಲಿ 40,00000 ಲಕ್ಷ ಸ್ವಂತ ಹಣದಿಂದ ಸಿ.ಸಿ ರಸ್ತೆ ಮತ್ತು ಚರಂಡಿಯನ್ನು ನಿರ್ಮಾಣ ಮಾಡಿಸಿ ಜನರ ಮನ ಗೆದ್ದ ಸುರೇಶ್ ಗೌಡರವರಿಗೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಹೊನ್ನುಡಿಕೆ ಜಿಲ್ಲಾ ಪಂಚಾಯಿತಿ ಬಿಜೆಪಿ ಮುಖಂಡರಾದ ಸಿದ್ದೇಗೌಡ್ರು, ಸುಮಿತ್ರಾ ಅಕ್ಕ, ಪಾಪಣ್ಣ, ಮಂಜಣ್ಣ, ಸುರೇಶ್, ಪ್ರಕಾಶ್, ಪಟೇಲರು ರಂಗಸ್ವಾಮಯ್ಯ, ಶ್ರೀನಿವಾಸ್, ಜಯಕ್ಕ ಗ್ರಾಮದ ಹಿರಿಯ ಮುಖಂಡರು, ತಾಯಂದಿರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ತುಮಕೂರು: ಎಲ್ಲಾ ಮಕ್ಕಳು ಜಂತು ನಿವಾರಣಾ ಮಾತ್ರೆಗಳನ್ನು ಸೇವಿಸುವಂತೆ ಹೆಚ್ಚಿನ ಜವಾಬ್ದಾರಿ ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ|| ಕೆ. ವಿದ್ಯಾಕುಮಾರಿ ತಿಳಿಸಿದರು. ಶಿರಾಗೇಟ್‍ನ ಅರಳಿಮರಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಇಂದು ‘ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಮಕ್ಕಳು ಜಂತು ನಿವಾರಣಾ ಮಾತ್ರೆಗಳನ್ನು ಸೇವಿಸುವಂತೆ ಜವಾಬ್ದಾರಿ ವಹಿಸಬೇಕೆಂದು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಸಾಂಕೇತಿಕವಾಗಿ ಮಕ್ಕಳಿಗೆ ಮಾತ್ರೆ ವಿತರಿಸಿ ಚೀಪಿ ಸೇವಿಸುವಂತೆ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ 86 ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಯನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ||ಮಂಜುನಾಥ ಡಿ.ಎನ್. ರವರು ಮಾತನಾಡಿ, ಜಿಲ್ಲೆಯಲ್ಲಿ 1 ರಿಂದ 19 ವರ್ಷದೊಳಗಿನ 813162 ಮಕ್ಕಳಿದ್ದು, ಅಂಗನವಾಡಿ ಕೇಂದ್ರ, ಶಾಲೆಗಳು, ಪದವಿ ಪೂರ್ವ ಕಾಲೇಜು, ತಾಂತ್ರಿಕ ಕಾಲೇಜು…

Read More

ತುಮಕೂರು: ಕೇಂದ್ರ ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆಂದು ಕಲ್ಯಾಣ ಯೋಜನೆಗಳನ್ನು ರೂಪಿಸಿದ್ದು, ಅಧಿಕಾರಿಗಳು ಹೆಚ್ಚಿನ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕಾರ್ಡುಗಳನ್ನು ವಿತರಿಸಿ ಸಾಲಸೌಲಭ್ಯ ಒದಗಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ರಸ್ತೆ ಬದಿಯಲ್ಲಿ, ಕೈಗಾಡಿಗಳಲ್ಲಿ ವ್ಯಾಪಾರ ಮಾಡಿ ತಮ್ಮ ಕುಟುಂಬವನ್ನು ನಿರ್ವಹಿಸುವ ವ್ಯಾಪಾರಿಗಳಿಗೆ ಸಹಾಯ ಮಾಡಲು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಅರ್ಹರಿಗೆ ಸಾಲದ ವ್ಯವಸ್ಥೆ ಕಲ್ಪಿಸಬೇಕೆಂದು ತಿಳಿಸಿದರು. ತಮ್ಮ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಸಮಿತಿ ಸಭೆ ನಡೆಸಿ ಜೂನ್ 2022ರ ಅಂತ್ಯಕ್ಕೆ ಸಾಧಿಸಲಾದ ಕೌಶಲ್ಯ ಸಂಬಂಧಿತ ಇಲಾಖಾವಾರು ಕಾರ್ಯಕ್ರಮಗಳ ಪ್ರಗತಿ ವರದಿ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ ದೀನ್ ದಯಾಳ್ ಉಪಾಧ್ಯಾಯ್ ಗ್ರಾಮೀಣ ಕೌಶಲ್ಯ ಯೋಜನೆ( ಡಿಡಿಯುಜಿಕೆವೈ) ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ) ಪ್ರಧಾನಮಂತ್ರಿ ಕೌಶಲ್ಯ ವಿಕಾಸ್ ಯೋಜನೆ ( ಪಿಎಂಕೆವಿವೈ) ಗಳನ್ನು ಜಾರಿಗೊಳಿಸಿದ್ದು ಅರ್ಹರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ವೃತ್ತಿ…

Read More

ತುಮಕೂರು: ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಮನೆಗಳು, ವಾಣಿಜ್ಯ ಕಟ್ಟಡಗಳು ಮತ್ತು ಉಪಯೋಗಕ್ಕೆ ಯೋಗ್ಯವಲ್ಲದ ಕಟ್ಟಡಗಳನ್ನು ಕೆ.ಎಂ.ಸಿಕಾಯ್ದೆ 1976 ಕಲಂ 338ರಂತೆ ಕೆಡವಿ ಹಾಕತಕ್ಕದ್ದು ಎಂದು ತುಮಕೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತುಮಕೂರು ನಗರ ಸೇರಿದಂತೆ ರಾಜ್ಯದಲ್ಲಿ ಧಾರಕಾರವಾಗಿ ಮಳೆಯಾಗುತ್ತಿದ್ದು, ಇದರಿಂದ ಚರಂಡಿ, ಹಳ್ಳ, ಕೆರೆಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿರುತ್ತವೆ. ನಗರದ ಕೆಲವು ಕೊಳಚೆ ಪ್ರದೇಶಗಳಲ್ಲಿ ಹಾಗೂ ಬಡಾವಣೆಗಳಲ್ಲಿ ಸಾಕಷ್ಟು ವರ್ಷಗಳ ಹಿಂದೆ ನಿರ್ಮಿಸಿರುವ ಮನೆಗಳು ಬೀಳುವ ಸ್ಥಿತಿಯಲ್ಲಿದ್ದರೂ ಅಂತಹ ಮನೆಗಳಲ್ಲಿಯೇ ವಾಸ ಮಾಡುತ್ತಿರುವುದು ಹಾಗೂ ನಗರದ ಕೆಲವು ಬಡಾವಣೆಗಳಲ್ಲಿ ಮನೆಗಳು / ವಾಣಿಜ್ಯ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಬೀಳುವ ಹಂತದಲ್ಲಿದ್ದರೂ/ ಉಪಯೋಗಕ್ಕೆ ಯೋಗ್ಯವಲ್ಲದಿದ್ದರೂ ಸಹ ಅಂತಹ ಕಟ್ಟಡಗಳನ್ನು ಉಪಯೋಗಿಸುತ್ತಿರುವುದು ಪಾಲಿಕೆ ಗಮನಕ್ಕೆ ಬಂದಿರುತ್ತದೆ. ಇಂತಹ ಕಟ್ಟಡಗಳನ್ನು ಸ್ವತಃ ಕಟ್ಟಡ ಮಾಲೀಕರೇ ತೆರವುಪಡಿಸಿಕೊಳ್ಳಲು ಈ ಹಿಂದೆಯೇ ತಿಳಿಸಲಾಗಿದ್ದರೂ ಸಹ ಕಟ್ಟಡ ಮಾಲೀಕರೂ ತೆರವುಪಡಿಸಿಕೊಳ್ಳದೇ ಇರುವುದು ಕಂಡು ಬಂದಿರುತ್ತದೆ. ಆದ್ದರಿಂದ ದಯಮಾಡಿ ಶಿಥಿಲಾವಸ್ಥೆಯಲ್ಲಿರುವ / ಉಪಯೋಗಕ್ಕೆ ಯೋಗ್ಯವಲ್ಲದ ಕಟ್ಟಡಗಳನ್ನು ಕೂಡಲೇ ಖಾಲಿ…

Read More

ತುಮಕೂರು: ವಿಶ್ವವಿದ್ಯಾನಿಲಯದಲ್ಲಿನ ಅನೇಕ ಸಮಸ್ಯೆಗಳ ಬಗ್ಗೆ ನೂತನ ಕುಲಪತಿಗಳಾದ ಪ್ರೊ. ಎಂ ವೆಂಕಟೇಶ್ವರಲು ಅವರ ಸಮ್ಮುಖದಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಶಿವಚಿತ್ತಪ್ಪ ಅವರಿಗೆ ಈ ಕೆಳಕಂಡ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ವಿಶ್ವವಿದ್ಯಾನಿಲಯದ ಎಬಿವಿಪಿ ಕಾರ್ಯಕರ್ತರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹಲವಾರು ಶೈಕ್ಷಣಿಕ ಸಮಸ್ಯೆಗಳಿಂದ ಎದುರಿಸುತ್ತಿದ್ದು, ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ 30,000 ಗಿಂತ ಅಧಿಕ ವಿದ್ಯಾರ್ಥಿಗಳಿದ್ದು, ಕ್ಯಾಂಪಸ್‍ನಲ್ಲಿ ಜಿಲ್ಲೆಯ ಗ್ರಾಮಾಂತರದಿಂದ 4,000 ವಿದ್ಯಾರ್ಥಿಗಳು ಓದುತ್ತಿದ್ದು, ಈ ಕೆಳಗಿನ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ 150 ಕ್ಕಿಂತ ಅಧಿಕ ಕಾಲೇಜುಗಳಿದ್ದು, 30,000 ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಮಾಡುತ್ತಿದಾರೆ. ಕೊರೋನಾ ಕಾರಣಾಂತರದಿಂದ ಕಳೆದ ಮೂರು ವರ್ಷಗಳಿಂದ ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಪೂರ್ಣ ಪ್ರಮಾಣದ ಕ್ರೀಡಾ ಚಟುವಟಿಕೆ ನಡೆದಿರುವುದಿಲ್ಲ. ಇದರಿಂದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅನ್ಯಾಯವಾಗುತ್ತಿದೆ. ಅಂತರ ವಿಶ್ವವಿದ್ಯಾನಿಲಯ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸ್ಪಂದನೆ ಸಿಗುತ್ತಿರುವುದಿಲ್ಲ. ಯಾವುದೇ ರೀತಿಯ ಕ್ರೀಡಾ ಸಮವಸ್ತ್ರವನ್ನು ಕೊಟ್ಟಿರುವುದಿಲ್ಲ. ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಕ್ರೀಡಾ ಶುಲ್ಕ 1000…

Read More

ತುಮಕೂರು: ಭಾರತ ಸ್ವಾತಂತ್ರ್ಯ 75ನೇ ಅಮೃತ ಮಹೋತ್ಸವದ ಪ್ರಯುಕ್ತ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ನಗರದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ನಗರದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಉಪವಿಭಾಗಾಧಿಕಾರಿ ವಿ. ಅಜಯ್, ತಹಶೀಲ್ದಾರ್ ಮೋಹನ್‍ಕುಮಾರ್ ಅವರು ತೆರಳಿ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು. ನಗರದ ಉಪ್ಪಾರಹಳ್ಳಿಯ ವಾಸವಾಗಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಆರ್. ರೇವಣ್ಣ, ಬಿ.ಜಿ. ಪಾಳ್ಯ ವೃತ್ತದಲ್ಲಿರುವ ಟಿ.ಸಿ. ಜಯರಾಮ್ ಹಾಗೂ ಚಿಕ್ಕಪೇಟೆಯಲ್ಲಿರುವ ಟಿ.ಕೆ. ರಾಜಣ್ಣ ಅವರ ಮನೆಗಳಿಗೆ ತೆರಳಿದ ಅಧಿಕಾರಿಗಳ ತಂಡ ಪ್ರತ್ಯೇಕವಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ ಅಜಯ್, ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾಗಿದೆ. ಹೀಗಾಗಿ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರದ ನಿರ್ದೇಶನದಂತೆ ನಗರ ಹಾಗೂ ಎಲ್ಲ ತಾಲ್ಲೂಕಿನಲ್ಲಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಗೌರವ ಸಲ್ಲಿಸುವ ಕೆಲಸವನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗುತ್ತಿದೆ…

Read More