ತುಮಕೂರು: ನಗರದಲ್ಲಿ ಕಳೆದ 10 ದಿನಗಳಿಂದ ಸುರಿದ ಮಳೆಯಿಂದ ಮನೆ, ರಸ್ತೆಗಳಿಗೆ ಹಾನಿಯಾಗಿದ್ದು, ಸರ್ಕಾರ ತುರ್ತು ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಜಿ ಸಚಿವ ಸೊಗಡು ಶಿವಣ್ಣ ಪತ್ರ ಬರೆದು ಒತ್ತಾಯಿಸಿದ್ದಾರೆ. ನಗರದಲ್ಲಿ ಕಳೆದ 10 ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವುದು ಸರಿಯಷ್ಟೆ. ಇದು ಅತಿದೃಷ್ಟೀಯಾಗಿದ್ದು ನಗರದಲ್ಲಿನ ಬಡಾವಣೆಗಳ ತಗ್ಗು ಪ್ರದೇಶದಲ್ಲಿ ನೀರು ಮುಂದಕ್ಕೆ ಹರಿಯದೇ ಅಲ್ಲಿ ನಿಂತು ಅತಿ ಹೆಚ್ಚು ಹಾನಿಯುಂಟುಮಾಡಿದೆ. ಇದರಿಂದ ಬಹಳಷ್ಟು ಮನೆಗಳಿಗೂ ತೊಂದರೆಯಾಗಿದೆ, ನಗರ ಪಾಲಿಕೆ ಆಯುಕ್ತರು ಶಿಥಿಲ ಕಟ್ಟಡ ತೆರವುಗೊಳಿಸಲು ಸೂಚಿಸಿರುವುದು ಸರಿಯೇ? ಎಂಬ ಚರ್ಚೆ ನಾಗರೀಕರಲ್ಲಿ ಮೂಡಿದೆ. ತುಮಕೂರು ನಗರದಲ್ಲಿರುವ ಮಳೆ ನೀರಿನ ಚರಂಡಿಗಳು ಹೂಳುವಿನಿಂದ ತುಂಬಿದ್ದು, ಕಾಲಕಾಲಕ್ಕೆ ಅದರಲ್ಲಿಯೂ ಮಳೆಗಾಲ ಬರುವ ಮುಂಚೆಯೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಿಲ್ಲ. ತುಮಕೂರು ನಗರದ ಮಧ್ಯಭಾಗದಲ್ಲಿರುವ ದೊಡ್ಡಚರಂಡಿಯನ್ನು ಸೇರುವ ಪ್ರಮುಖ ಚರಂಡಿಗಳ ಹೂಳು ತೆಗೆಯದ ಕಾರಣ ಬಡಾವಣೆಗಳಲ್ಲಿನ ಮನೆಗಳಿಗೆ ನೀರು ನುಗ್ಗಲು ಕಾರಣವಾಯಿತು, ಉದಾ: ಸಿದ್ದಗಂಗಾ ಬಡಾವಣೆ, ಗುಬ್ಬಿ ಗೇಟ್, ಆಗ್ರಹಾರ ಇತ್ಯಾದಿ ನಗರದ…
Author: News Desk Benkiyabale
ತುಮಕೂರು: ಸತತವಾಗಿ ಬೀಳುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದಲ್ಲಿ ಅನೇಕ ಕಡೆ ಬಡವರಿಗೆ ಸೇರಿದ ಹೆಂಚಿನ ಮನೆಗಳಿಗೆ ಹಾನಿಯಾಗಿದೆ ಹಾಗೂ ಕೆಲವು ಮನೆಗಳು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ ಹೀಗೆ ನಗರದ ಗೂಡ್ಸ್ ಶೆಡ್ ಕಾಲೋನಿಯಲ್ಲೂ ಬಡ ಕುಟುಂಬಕ್ಕೆ ಸೇರಿದ ಮನೆಯ ಅರ್ಧ ಭಾಗ ಕುಸಿದು ಉಳಿದ ಭಾಗ ಶಿಥಿಲಗೊಂಡಿದ್ದು ಆರ್ಥಿಕವಾಗಿ ಹಿಂದುಳಿದವರಾದ ಇವರು ಬಾಡಿಗೆ ಮನೆಗೆ ಮುಂಗಡ ಹಣ ಕೊಡಲು ಅಶಕ್ತರಾಗಿದ್ದು ಅದೇ ಮನೆಯಲ್ಲಿ ವಾಸ ಮಾಡುವ ಸ್ಥಿತಿ ಇರುವದರಿಂದ ಶಿಥಿಲಗೊಂಡ ಗೋಡೆ ಬೀಳುವ ಶಂಕೆ ಇದ್ದು ಹೆಚ್ಚಿನ ಪ್ರಾಣಹಾನಿ ಆಗುವ ಸಂಭವವಿದೆ ಸಂತ್ರಸ್ತರ ಕುಟುಂಬ ಸದಸ್ಯರು ಸಹಾಯಕ್ಕಾಗಿ ಇಕ್ಬಾಲ್ ಅಹ್ಮದ್ ರವರಿಗೆ ಕರೆ ಮಾಡಿ ವಸ್ತು ಸ್ಥಿತಿ ತಿಳಿಸಿದ ಮೇರೆ ಸ್ಥಳಕ್ಕೆ ಭೇಟಿ ಕೊಟ್ಟ ಇಕ್ಬಾಲ್ ಅಹ್ಮದ್ ರವರ ಸ್ಥಳೀಯ ಮುಖಂಡರ ಜೊತೆಗೂಡಿ ಆರ್ಥಿಕ ಸಹಾಯ ಮಾಡಿದರು ಮಳೆಯ ಆರ್ಭಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ನೆರೆಹೊರೆಯ ಸ್ಥಿತಿವಂತರು ಕೈಲಾದ ಸಹಾಯ ಮಾಡುವ ಮೂಲಕ ಸಂಕಷ್ಟಕ್ಕೊಳಗಾದ ಬಡ ಜನರಿಗೂ ಜೀವನ ನಡೆಸುವ ಹಕ್ಕು ಒದಗಿಸಿ…
ಕೊರಟಗೆರೆ: ಪ್ರವಾಹ ಪರಿಹಾರ ಯೋಜನೆ ಮುಂದುವರಿದ ಭಾಗದಂತೆ ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಹುಲ್ಲಿಕುಂಟೆ, ಚನ್ನಗಾನಹಳ್ಳಿ ಗ್ರಾಮಗಳಲ್ಲಿ ಪರಿಹಾರ ಯೋಜನೆಯನ್ನು ಕೈಗೊಳ್ಳಲಾಯಿತು. ಸುರಿಯುತ್ತಿರುವ ಬಾರಿ ಮಳೆಗೆ ಈ ಭಾಗ ಸಂಪೂರ್ಣವಾಗಿ ನೀರಿನಿಂದ ಮುಳುಗಡೆಯಾಗಿದೆ.ಇದರಿಂದ ಜನರು ತುಂಬಾ ಸಂಕಷ್ಟಕ್ಕೆ ಸಿಲುಕಿದ್ದರು.ಮಳೆ ನೀರು ಮನೆಯ ಹೊರಗೆ ಮತ್ತು ಒಳಗಡೆಯಲ್ಲೆಲ್ಲ ನಿಂತಿದ್ದನ್ನು ಕಾಣಬಹುದಾಗಿತ್ತು. ಅನೇಕ ಮನೆಗಳು ಶಿಥಿಲವಾಗಿದ್ದು ಸಣ್ಣ ಮಳೆ ಬಂದರೂ ನೀರು ಸೋರುವಿಕೆಯಿಂದ ಜನರು ತತ್ತರಿಸುತ್ತಿದ್ದರು. ಈ ನಿಟ್ಟಿನಲ್ಲಿ ಶ್ರೀರಾಮಕೃಷ್ಣ ಸೇವಾಶ್ರಮ, ಇನ್ಫೋಸಿಸ್ ಫೌಂಡೇಷನ್ ಹಾಗೂ ರೆಡ್ ಕ್ರಾಸ್ ಸಹಕಾರದಿಂದ ಸುತ್ತಮುತ್ತಲಿನ ಪ್ರದೇಶದ ಜನರಿಗೂ ದಿನಸಿ (ಅಕ್ಕಿ, ಬೇಳೆ, ಗೋಧಿ ಹಿಟ್ಟು, ಉಪ್ಪು, ಸಕ್ಕರೆ, ಸಾಂಬಾರ್ ಪದಾರ್ಥಗಳನ್ನೊಳಗೊಂಡ ಕಿಟ್), ಶುಚಿತ್ವದ ಕಿಟ್ (ಸೋಪು, ಟೂಥ್ ಪೇಸ್ಟ್, ಬ್ರಷ್, ಕೊಬ್ಬರಿ ಎಣ್ಣೆ ಇತ್ಯಾದಿಗಳು) ಶುಚಿತ್ವದ ಸ್ಯಾನಿಟೈಸರ್ ಹಾಗೂ ಮಹಿಳೆಯರಿಗೆ ಸೀರೆ, ಪುರುಷರಿಗೆ ಪಂಚೆ ಹಾಗೂ ವಯೋವೃದ್ಧರಿಗೆ ಸೊಳ್ಳೆ ಪರದೆಯನ್ನು ವಿತರಿಸಿದರು. ಈ ಗ್ರಾಮಗಳ ಸ್ಥಿತಿ ಅತ್ಯಂತ ಶೋಚನೀಯವಾಗಿದ್ದು, ಪೂಜ್ಯ ಸ್ವಾಮಿ ಜಪಾನಂದಜೀ ಅವರು ಹಾಗೂ…
ತುಮಕೂರು: ಕ್ವಿಟ್ ಇಂಡಿಯಾ ಚಳವಳಿಯ ಸವಿನೆನಪಿಗಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಸಿ ಉಪಾಧ್ಯಕ್ಷ ಹೆಚ್.ಸಿ.ಹನುಮಂತಯ್ಯ ಅವರ ನೇತೃತ್ವದಲ್ಲಿ ಕ್ವಿಟ್ ಇಂಡಿಯಾ ಚಳವಳಿಯ ಸಂಸ್ಮರಣ ದಿನವನ್ನು ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ ಚಳವಳಿಯ ನೇತಾರ ಮಹಾತ್ಮಗಾಂಧಿ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಪುಷ್ಪನಮನ ಸಲ್ಲಿಸುವ ಮೂಲಕ 1942ರ ಆಗಸ್ಟ್ 09 ರಂದು ಆರಂಭಗೊಂಡ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಮಾಡು, ಇಲ್ಲವೇ ಮಡಿ ಹೋರಾಟಕ್ಕೆ ಚಾಲನೆಯಾದ ದಿನವನ್ನು ಸ್ಮರಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಮಾತನಾಡಿ, ಭಾರತದ ಸ್ವಾತಂತ್ರ ಇತಿಹಾಸದಲ್ಲಿಯೇ ಕ್ವಿಟ್ ಇಂಡಿಯಾ ಚಳವಳಿ ಒಂದು ಮಹತ್ತರ ಘಟ್ಟ. ಮಹಾತ್ಮಗಾಂಧಿ ನೇತೃತ್ವದ ಹಲವಾರು ಮಾದರಿ ಹೋರಾಟಗಳಿಗೆ ಬ್ರಿಟಿಷರು ಬಗ್ಗದೆ ಇದ್ದ ಸಂದರ್ಭದಲ್ಲಿ ಅಂದಿನ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ನೆಹರು, ಪಟೇಲ್ ಸೇರಿದಂತೆ ಹಲವರೊಂದಿಗೆ ಸೇರಿ, ಹೇಗಾದರೂ ಮಾಡಿ ಬ್ರಿಟಿಷರನ್ನು ಭಾರತದಿಂದ ಹೋಡಿಸಬೇಕೆಂಬ ಪಣತೊಟ್ಟ ಮುಖಂಡರು, 1942ರ ಆಗಸ್ಟ್ 08 ರಂದು ಕ್ವಿಟ್…
ಗುಬ್ಬಿ 75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಲು ತಾಲ್ಲೂಕಿನ ಜನತೆ ದೇಶಭಕ್ತಿ ಜೊತೆ ಭಾಗಿ ಆಗುವಂತೆ ತಹಸೀಲ್ದಾರ್ ಬಿ ಆರತಿ ಅವರು ಕರೆ ನೀಡಿದರು. ಪಟ್ಟಣದ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಈಗಾಗಲೇ ಹರ ಘರ್ ತಿರಂಗಾ ರಾಷ್ಟ್ರ ಧ್ವಜಗಳನ್ನ ಪಟ್ಟಣ ಪಂಚಾಯಿತಿ ವತಿಯಿಂದ ಎರಡು ಸಾವಿರ ಧ್ವಜಗಳನ್ನು ವಿತರಿಸಲಾಗುತ್ತಿದೆ ಎಂದರು. ಪ್ರತಿ ಗ್ರಾಮ ಪಂಚಾಯಿತಿಗಳಿಗೆ 450 ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶಾಲೆ, ಅಂಗನವಾಡಿ, ಆಸ್ಪತ್ರೆ ಸೇರಿ ಎಲ್ಲಾ ಕಟ್ಟಡಗಳಲ್ಲಿ ಧ್ವಜ ಹಾಕುವ ಜೊತೆಗೆ ಪ್ರತಿ ಮನೆಯ ಮೇಲೂ ರಾಷ್ಟ್ರ ಧ್ವಜ ಹಾಕುವಂತೆ ಸೂಚನೆ ಇದೆ. ಗ್ರಾಮೀಣಾ ಭಾಗದಲ್ಲಿ 487 ನಗರದಲ್ಲಿ 15 ಶಾಲೆಗಳು ಬರಲಿದ್ದು, ರಾಷ್ಟ್ರ ಧ್ವಜವನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ನಗರಸಭೆ ವತಿಯಿಂದ ಅಮೃತ ಮಹೋತ್ಸವ…
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಮಲ್ಲೂರು ಗ್ರಾಮದಲ್ಲಿ ಸತತ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಪೂರ್ಣ ಮಳೆ ಅವಾಂತರ ಸೃಷ್ಟಿಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಪರೀತ ಮಳೆಯಿಂದಾಗಿ ಮಲ್ಲೂರು ಗ್ರಾಮದ ಸರ್ಕಾರಿ ಶಾಲಾ ಕಾಂಪೌಂಡ್ ಕುಸಿದು ನೆಲಕ್ಕುರುಳಿದೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದಷ್ಟೇ ನಿರ್ಮಾಣವಾದ ಕಾಂಪೌಂಡ್ ಮಳೆಯ ರಭಸಕ್ಕೆ ಸಿಲುಕಿ ಕುಸಿದಿರುವುದು ಒಂಡೆದೆಯಾದರೆ ಕೆಲವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನು ಇದಿಷ್ಟೇ ಅಲ್ಲದೆ ಗ್ರಾಮದ ಅಮಾನಿಕೆರೆ ಕೋಡಿ ಬಿದ್ದಿದ್ದು, ಕೆರೆಯ ಏರಿ ಬಿರುಕು ಬಿಟ್ಟು ಅಪಾಯದ ಅಂಚಿನಲ್ಲಿದೆ. ಇನ್ನು ಮಳೆಯ ಆರ್ಭಟ ಇದೇ ರೀತಿ ಮುಂದುವರೆದರೆ ಗ್ರಾಮಕ್ಕೆ ಸಂಕಷ್ಟ ಎದುರಾಗುವಂತಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕೊರಟಗೆರೆ: ಸತತವಾಗಿ ಒಂದು ವಾರದಿಂದ ಬೊಬ್ಬಿರಿದು ಅಬ್ಬರಿಸುತ್ತಿರುವ ಮಳೆಯಿಂದಾಗಿ ಕೊರಟಗೆರೆ ಪಟ್ಟಣ ನೀರಿನಿಂದ ಆವೃತವಾಗಿ ಕೆರೆ, ಕಟ್ಟೆಗಳು ತುಂಬಿ ಕೋಡಿ ಬಿದ್ದಿವೆ. ಇನ್ನೂ ನೀರು ಹೆಚ್ಚಾಗಿ ಹೊಲ, ಗದ್ದೆ, ಗ್ರಾಮದ ಅನೇಕ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಹೆಚ್ಚಿದ ಮಳೆಯಿಂದಾಗಿ ಜನರ ದೈನಂದಿನ ವಹಿವಾಟಿಗೆ ಸಮಸ್ಯೆ ಆಗಿದ್ದಲ್ಲದೇ ಜಾನುವಾರುಗಳು ಕೂಡಾ ಮಳೆಯಿಂದ ತತ್ತರಿಸಿವೆ. ಪ್ರಸ್ತುತ ಘಟ್ಟದಲ್ಲಿ ಕೊರಟಗೆರೆ ತಾಲ್ಲೂಕು ಮಲೆನಾಡಿನ ಕಳೆಯನ್ನು ಹೊಂದಿದೆ. ತಾಲ್ಲೂಕಿನ ಪ್ರತಿಯೊಂದು ಹಳ್ಳಿಯೂ ಮಲೆನಾಡಿನ ರೀತಿ ಕಾಣುತ್ತಿದೆ. ಪ್ರತಿ ಗ್ರಾಮದಲ್ಲಿರುವ ಕೆರೆ-ಕಟ್ಟೆಗಳು ತುಂಬಿ ಕೋಡಿ ಹರಿಯುತ್ತಿವೆ. ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಮಳೆಯ ನೀರು ನುಗ್ಗಿದೆ. ಅಂತಹ ಕಡೆ ಇರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು. ಗುರುವಾರ ಬೆಳಿಗ್ಗೆ 7 ಗಂಟೆಯಿಂದಲೇ ಪ್ರತಿ ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್, ಎ.ಸಿ ಸೋಮಪ್ಪ ಕಾಡುಗೊಳ ಇವರುಗಳ ಸಹಕಾರದೊಂದಿಗೆ ತಾಲ್ಲೂಕಿನ ತಹಶೀಲ್ದಾರ್ ನಾಹಿದಾ ಜಮ್ ಜಮ್ ಹಾಗೂ…
ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಕೆರೆ ಗ್ರಾಮದ ಮುಖ್ಯ ಸಂಪರ್ಕ ರಸ್ತೆ ಸ್ಥಗಿತಗೊಂಡಿದ್ದು, ರಸ್ತೆ ಸಂಪೂರ್ಣ ಹಾಳಾಗಿದೆ. ನರೇಗಾ ಯೋಜನೆಯಡಿಯಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆಯೆಂದು ಸ್ಥಳೀಯರು ಆರೋಪಿಸಿದ್ದಾರೆ. ಗ್ರಾಮದ ಪ್ರಮುಖ ರಸ್ತೆ ಇದಾಗಿದ್ದು, ಸಾರ್ವಜನಿಕರು ನಾಗರಿಕರು ಗ್ರಾಮಕ್ಕೆ ತೆರಳದಂತಹ ಸನ್ನಿವೇಶ ಉಲ್ಬಣವಾಗಿದೆ. ಡ್ರೈನೇಜ್ ಮಾಡಲು ಹೋಗಿ ರಸ್ತೆಯನ್ನು ಹಾಳು ಮಾಡಲಾಗಿದೆ. ರಸ್ತೆಯ ಮಧ್ಯಭಾಗದಲ್ಲಿ ಅಗೆದು ಸೀಮೆಂಟ್ ಪೈಪ್ ಹಾಕಲಾಗಿತ್ತು. ಈ ಅವೈಜ್ಞಾನಿಕ ಕಾಮಗಾರಿಯಿಂದ ಓಡಾಟಕ್ಕೆ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸಂಬಂಧಪಟ್ಟ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವರಾಜು ಮತ್ತು ಇಂಜಿನಿಯರ್ ಲೋಕೇಶ್ ಹಾಗೂ ತಾಲೂಕಿ ಇ.ಓ ಸತೀಶ್ ಅವರಿಗೆ ಗ್ರಾಮಸ್ಥರು ಹಲವು ಸಾರಿ ಮನವಿ ಮಾಡಿದರೂ ಸ್ಪಂದಿಸದ ಅಧಿಕಾರಿಗಳು ಲಂಚದ ಹಣಕ್ಕೆ ಆಸೆಗೆ ಬಿದ್ದು ಕಳಪೆ ಕಾಮಗಾರಿಗೆ ಬಿಲ್ ಪಾವತಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಗುತ್ತಿಗೆದಾರ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಇಬ್ಬರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಸಾರ್ವಜನಿಕರ ಮನವಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ…
ತುಮಕೂರು: ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಮೃತಪಟ್ಟಿದ್ದ ಈರಣ್ಣನವರ ಪತ್ನಿ ಭಾಗ್ಯರತ್ನ ಅವರಿಗೆ ಸರ್ಕಾರದ ವತಿಯಿಂದ 5 ಲಕ್ಷ ರೂ. ಪರಿಹಾರವನ್ನು ಶಾಸಕ ಜ್ಯೋತಿಗಣೇಶ್ ವಿತರಿಸಿದರು. ನಗರದ ಉಪ್ಪಾರಹಳ್ಳಿಯ ಶಿವಮೂಕಾಂಬಿಕ ನಗರದಲ್ಲಿ ವಾಸವಾಗಿದ್ದ ಈರಣ್ಣನವರು ಕಳೆದ ಮೂರು ದಿನಗಳ ಹಿಂದೆ ಮಳೆ ನೀರು ಮನೆ ನುಗ್ಗಿ ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ್ದರು. ಇವರ ಕುಟುಂಬಕ್ಕೆ ಶಾಸಕ ಜ್ಯೋತಿಗಣೇಶ್ ಅವರು ಸಾಂತ್ವನ ಹೇಳಿ, ಸರ್ಕಾರದ ವತಿಯಿಂದ ವಿತರಿಸುವ 5 ಲಕ್ಷ ರೂ. ಪರಿಹಾರ ಚೆಕ್ನ್ನು ಕುಟುಂಬದವರಿಗೆ ವಿತರಿಸಿ ಧೈರ್ಯ ತುಂಬಿದರು. ನಂತರ ಮಾತನಾಡಿದ ಶಾಸಕ ಜ್ಯೋತಿಗಣೇಶ್ ಅವರು, ಮಳೆಯಲ್ಲಿ ಉಪ್ಪಾರಹಳ್ಳಿ ಶಿವಮೂಕಾಬಿಂಕ ನಗರದಲ್ಲಿನ ಈರಣ್ಣನವರ ಮನೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ಉಂಟಾದ ವಿದ್ಯುತ್ ಅವಘಡದಿಂದ ಈರಣ್ಣನವರು ಸಾವನ್ನಪ್ಪಿದ್ದಾರೆ. ಇದು ಅತ್ಯಂತ ದುಃಖಕರ ಸಂಗತಿ. ಅತಿಯಾದ ಮಳೆಯಿಂದಾಗಿ ಅವಾಂತರ, ಅವಘಡಗಳು ಸಂಭವಿಸುತ್ತಲೇ ಇವೆ. ಅವಘಡಗಳು ಆಗದಂತೆ ಅಧಿಕಾರಿಗಳು ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿದ್ದಾರೆ ಎಂದರು.…
ತುಮಕೂರು: ನಗರದಲ್ಲಿ ವರುಣನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಅಕ್ಕತಂಗಿಯರ ಕಟ್ಟೆಯ ಸಮೀಪವಿರುವ ಭಾರತೀ ನಗರಕ್ಕೆ ನೀರು ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ನಿವಾಸಿಗಳು ಒತ್ತುವರಿಯಾಗಿರುವ ರಾಜಗಾಲುವೆಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಅಕ್ಕತಂಗಿಯರ ಕಟ್ಟೆ ಅಕ್ಕಪಕ್ಕದಲ್ಲಿರುವ ಬಡಾವಣೆಗಳಲ್ಲಿ ಹಾದು ಹೋಗಿದ್ದ ರಾಜಗಾಲುವೆ, ಚರಂಡಿಗಳು ನಾಪತ್ತೆಯಾಗಿರುವುದೇ ಇಂದು ನಮ್ಮ ಮನೆಗಳು ಮಳೆ ನೀರಿನಲ್ಲಿ ಮುಳುಗಡೆಯಾಗಲು ಕಾರಣವಾಗಿದೆ. ಇದಕ್ಕೆ ಅಧಿಕಾರಿಗಳು ರಾಜಗಾಲುವೆಗಳನ್ನು ಲೆಕ್ಕಿಸದೆ ಲೇಔಟ್ಗಳ ನರ್ಮಾಣಕ್ಕೆ ಅನುಮತಿ ನೀಡಿರುವುದು ಪ್ರಮುಖ ಕಾರಣ. ಅಧಿಕಾರಿಗಳ ಲಂಚಬಾಕತನ ಹಾಗೂ ಬೇಜವಾಬ್ದಾರಿಯಿಂದಾಗಿ ಇಂದು ನಾವುಗಳು ಸೂರು ಕಳೆದುಕೊಳ್ಳುವಂತಹ ಪರಿಸ್ಥಿತಿ ಬಂದೊದಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮನೆಗಳು ಮಳೆ ನೀರಿನಲ್ಲಿ ಮುಳುಗಡೆಯಾಗುವುದರಿಂದ ಸ್ಥಳಕ್ಕೆ ಶಾಸಕರು, ಅಧಿಕಾರಿಗಳು ಬಂದು ತಾತ್ಕಾಲಿಕವಾಗಿ 3 ಅಥವಾ 5 ಸಾವಿರ ಪರಿಹಾರ, ದಿನಸಿ, ಊಟ ಕೊಡಬಹುದು. ಆದರೆ ನಿಮಗೆ ಈ ರೀತಿಯ ಪರಿಹಾರ ಬೇಕಾಗಿಲ್ಲ. ನಮಗೇನಿದ್ದರೂ ಶಾಶ್ವತವಾದ ಪರಿಹಾರ ಒದಗಿಸಬೇಕು. ಮುಚ್ಚಿ ಹೋಗಿರುವ ರಾಜಗಾಲುವೆಗಳನ್ನು ತೆರೆದು ಮಳೆ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಬೇಕು ಎಂದು ಅಲ್ಲಿನ…











