Author: News Desk Benkiyabale

ತುರುವೇಕೆರೆ: ತಾಲ್ಲೂಕಿನ ರಂಗನಾಥಪುರ ಗ್ರಾಮದ ದಲಿತ ಕುಟುಂಕ್ಕೆ ಸೇರಿದ ಗಂಗಣ್ಣನವರ ಜಮೀನನ್ನು ಬಲಮಾದಿಹಳ್ಳಿ ಗ್ರಾಮದ ಸವರ್ಣೀಯ ಕುಟುಂಬವೊಂದು ವಾಮ ಮಾರ್ಗದ ಮೂಲಕ ಆಕ್ರಮಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ ಎಂದು ದ.ಸಂ.ಸ. ತಾಲ್ಲೂಕು ಘಟಕದ ಅಧ್ಯಕ್ಷ ಕುಣಿಕೇನಹಳ್ಳಿ ಜಗಧೀಶ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಂಗನಾಥಪುರ ಗ್ರಾಮದ ಗಂಗಣ್ಣ ಎಂಬುವವರು ಬಲಮಾದಿಗಳ್ಳಿ ಗ್ರಾಮದ ಸರ್ವೆ ನಂಬರ್ 5ರಲ್ಲಿ 30ಗುಂಟ ಜಮೀನನ್ನು ಹೋದಿದ್ದು, ಸದರಿ ಜಮೀನು ಸರ್ಕಾರದಿಂದಲೇ ಇವರಿಗೆ ಮುಂಜೂರಾಗಿದ್ದು, ಜಮೀನಿಗೆ ಸಂಬಂದಿಸಿದ ಸಾಗುವಳಿ ಚೀಟಿಯನ್ನು ಬಗರ್‍ಹುಕ್ಕುಂ ಕಮಿಟಿಯಲ್ಲಿ ಅಧಿಕೃತವಾಗಿ ಪಡೆದಿದ್ದಾರೆ, ಅಲ್ಲದೆ ಸುಮಾರು ನವತ್ತು ವರ್ಷಗಳಿಂದ ಸದರಿ ಜಮೀನಿನಲ್ಲೆ ಅನುಭವದಲ್ಲಿದ್ದಾರಲ್ಲದೆ ಇಂದಿಗೂ ಇವರೇ ಅನುಭವದಲ್ಲಿದ್ದಾರೆ, ಆದರೂ ಬಲಮಾದಿಹಳ್ಳಿ ಗ್ರಾಮದ ಸವರ್ಣಿಯ ಕುಟುಂಬದವರೊಬ್ಬರು ಇವರನ್ನು ವಾಮ ಮಾರ್ಗದ ಮೂಲಕ ಒಕ್ಕಲೆಬ್ಬಿಸುವ ಹುನ್ನಾರಕ್ಕೆ ಮುಂದಾಗಿದ್ದಾರೆ, ಇದು ಖಂಡನೀಯ ವಿಚಾರ, ಕೂಡಲೇ ತಾಲ್ಲೂಕು ಆಡಳಿತ ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ಬಲಮಾದಿಹಳ್ಳಿ ಗ್ರಾಮದ ಸವರ್ಣಿಯರಿಗೆ ಸೇರಿದೆ ಎನ್ನಲಾದ ಸರ್ವೆ ನಂಬರ್ 40ರಲ್ಲಿನ…

Read More

ತುಮಕೂರು: ಭೀಕರ ರಣ ಮಳೆಯಿಂದ ಹಾನಿಗೊಳಗಾದ ನಗರದ ಕುರಿಪಾಳ್ಯ, ಲೇಬರ್ ಕಾಲೋನಿ, ನಜರಾಬಾದ್, ಪೂರ್‍ಹೌಸ್ ಕಾಲೋನಿ ಮುಂತಾದ ಹಲವು ಪ್ರದೇಶಗಳಿಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಗೋವಿಂದರಾಜು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ನಗರದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭೀಕರ ಮಳೆಗೆ ಈ ಭಾಗದಲ್ಲಿ ಕೆಲವು ಮನೆಗಳು, ಗೋಡಗಳು ಬಿದ್ದುಹೋಗಿವೆ, ಸರ್ಕಾರ ನೀಡಿರುವಂತಹ ಉಚಿತ ನಿವೇಶನಗಳಲ್ಲಿ ಸಾಲ ಮಾಡಿ 10-15 ವರ್ಷಗಳ ಹಿಂದೆ ಮಣ್ಣಿನಲ್ಲೇ ಮನೆಗಳನ್ನು ನಿರ್ಮಾಣ ಮಾಡಿಕೊಂಡಿರುವ ಹಿನ್ನಲೆಯಲ್ಲಿ ಸತತ ಸುರಿಯುತ್ತಿರುವ ಮಳೆಗೆ ಮನೆಗಳು ಕುಸಿದಿವೆ ಎಂದರು. ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಗೆ ಬರುವ ಈ ಪ್ರದೇಶಗಳ ಜನರಿಗೆ ಸರ್ಕಾರ ಗಮನ ಹರಿಸಿ, ಅವರಿಗೆ ಮನೆ ನಿರ್ಮಾಣಕ್ಕೆ ಅಗತ್ಯ ನೆರವು ನೀಡಬೇಕಿದೆ. ಜಿಲ್ಲಾಧಿಕಾರಿಗಳು, ಮಹಾನಗರಪಾಲಿಕೆ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಣ್ಣಿನಿಂದ ನಿರ್ಮಾಣ ಮಾಡಿರುವ ಮನೆಗಳನ್ನು ಪತ್ತೆ ಹಚ್ಚಿ ಅಂತಹವುಗಳಿಗೆ ಅನುದಾನ ಕಲ್ಪಿಸಬೇಕೆಂದು ಮನವಿ ಮಾಡಿದರು. ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಸತಿ ನಿರ್ಮಾಣಕ್ಕೆ…

Read More

ತುಮಕೂರು: ಧಾರಾಕಾರ ಮಳೆಯಿಂದ ಜಯಮಂಗಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನೀರು ನುಗ್ಗಿ ಜಲಾವೃತಗೊಂಡಿರುವ ಮಧುಗಿರಿ ತಾಲ್ಲೂಕು ಪುರವರ ಹೋಬಳಿ ಚನ್ನಸಾಗರ ಗ್ರಾಮಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ನದಿ ನೀರು ಹರಿಯುವ ಪ್ರಮಾಣ ಹೆಚ್ಚಾಗಿರುವುದರಿಂದ ಚನ್ನಸಾಗರ ಗ್ರಾಮದ ಕೆಲವು ಮನೆ, ಶಾಲೆ, ಜಮೀನುಗಳು ಜಲಾವೃತಗೊಂಡಿದ್ದು, ಜನ-ಜಾನುವಾರುಗಳಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳೆ ನೀರಿನಿಂದ ಬಾಧಿತರಾದವರಿಗೆ ಆಹಾರ ವ್ಯವಸ್ಥೆಗಾಗಿ ಜಿಲ್ಲಾಡಳಿತದ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ. ಕಾಳಜಿ ಕೇಂದ್ರದಲ್ಲಿ ಯಾವುದೇ ಸಮಸ್ಯೆ ಬಾರದಂತೆ ನಿಗಾ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಜಲಾವೃತವಾಗಿರುವ ಶಾಲೆಗಳಿಗೆ 2 ದಿನಗಳ ಕಾಲ ರಜೆ ಘೋಷಣೆ ಮಾಡಲು ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಗ್ರಾಮದ ರಸ್ತೆಯಲ್ಲಿ ಸಂಚರಿಸಲು ಅನುವಾಗುವಂತೆ ಈಗಾಗಲೇ ಜೆಸಿಬಿಯಿಂದ ಕಾರ್ಯಾಚರಣೆ ಕೈಗೊಂಡಿದ್ದು, ಮುಂಜಾನೆಗಿಂತ ನೀರಿನ ಹರಿವಿನ ಪ್ರಮಾಣ ಈಗ ಕಡಿಮೆಯಾಗಿದೆ. ಮಳೆ ನೀರಿನಿಂದ ಬಾಧಿತರಾದವರಿಗೆ ರಕ್ಷಣೆ ನೀಡುವಲ್ಲಿ ಸೂಕ್ತ…

Read More

ತುಮಕೂರು: ಪ್ರಸ್ತುತ ಸಮಾಜದಲ್ಲಿ ಆದರ್ಶಗಳ ಕೊರತೆ ಕಾಡುತ್ತಿರುವ ನಡುವೆ ದೊಡ್ಡಲಿಂಗಪ್ಪನವರ ಸೇವೆ, ಆದರ್ಶ ಅನುಕರಣೀಯವಾದದ್ದು. ಸಾಧಕರ ಜೀವನ ಚರಿತ್ರೆ ಓದುವ ಮೂಲಕ ಮುಂದಿನ ಪೀಳಿಗೆಗೆ ದಿಶೆ ದೊರಕುತ್ತದೆ. ಸರಳತೆ ಹಾಗೂ ಸ್ನೇಹ ಜೀವ ತುಂಬ ಮುಖ್ಯವಾಗುತ್ತದೆ. ಒಳಿತು ಕೆಡಕು ಮಾಡಿಸುವುದು ಮನಸ್ಸು. ಆತ್ಮದ ಸ್ಥಿತಿಯಲ್ಲಿ ಎಲ್ಲರೂ ಒಂದೇ ಆದರೂ ವ್ಯಕ್ತಿತ್ವದಲ್ಲಿ ಭಿನ್ನತೆಯಿರುತ್ತದೆ. ಅದಕ್ಕೆ ಕಾರಣ ಮನಸ್ಸು. ವ್ಯಕ್ತಿ ಮನಸ್ಸು ಸರಿಯಾದ ರೀತಿಯಲ್ಲಿ ಕೆಲಸ ಮಾಡಿದರೆ ಉತ್ತಮ ಕಾರ್ಯಗಳು ಆಗುತ್ತವೆ. ಜ್ಞಾನೇಂದ್ರಿಯಗಳು, ಕಣೇರ್ಂದ್ರಗಳು ಕೆಲಸ ಮಾಡಬೇಕಾದರೆ ಅದಕ್ಕೆ ಮನಸ್ಸು ಎದ್ದಿರಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಾಲಾನಂದ ಸ್ವಾಮೀಜಿ ತಿಳಿಸಿದರು. ಅವರು ಒಕ್ಕಲಿಗರ ವಿಕಾಸ ವೇದಿಕೆ ತುಮಕೂರು, ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಮತ್ತು ಶಿಂಷಾ ಲಿಟರರಿ ಅಕಾಡೆಮಿ ಸಹಯೋಗದಲ್ಲಿ ಸಮುದಾಯ ಸೇವೆಯಲ್ಲಿ ಆರ್, ದೊಡ್ಡಲಿಂಗಪ್ಪನವರ ಬದುಕಿನ ಚಿತ್ರಣ “ನೋವುಂಡು ಬೆಳಕು ಬೀರುವ ದೀಪ’’ ಕೃತಿ ಲೋಕಾರ್ಪಣೆಗೊಳಿಸಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡುತ್ತಿದ್ದರು. ಧನಾತ್ಮಕ…

Read More

ಕುಣಿಗಲ್: ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ವಾಹನದಲ್ಲಿದ್ದ ಐವರ ಪೈಕಿ ಮೂವರು ತೀವ್ರವಾಗಿ ಗಾಯಗೊಂಡಿದ್ದರೆ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಹಾಗೂ ಬೆಳ್ಳಾರೆ ಗ್ರಾಮಗಳಿಗೆ ಭೇಟಿ ನೀಡಿ ಫಾಜಿಲ್ ಮಂಗಳಪೇಟೆ ಮತ್ತು ಪ್ರವೀಣ್ ನೆಟ್ಟಾರ್ ಕುಟುಂಬ ಸದಸ್ಯರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಬೆಂಗಾವಲು ವಾಹನದಲ್ಲಿದ್ದ ಪೆÇಲೀಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದಾರೆ. ಜಗದೀಶ್, ಆನಂದ್ ಮತ್ತು ಹರೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮತ್ತು ಸುರತ್ಕಲ್‍ನ ಪಾಝಿಲ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ ಕುಮಾರಸ್ವಾಮಿ ಹೆಲಿಕಾಪ್ಟರ್‍ನಲ್ಲಿ ಬೆಂಗಳೂರಿಗೆ ಹಿಂದಿರುಗಿದ್ದರು. ಮಾಜಿ ಮುಖ್ಯಮಂತ್ರಿಯ ಬೆಂಗಾವಲು ಕರ್ತವ್ಯಕ್ಕೆ ತೆರಳಿದ್ದ ಪೆÇಲೀಸ್ ಸಿಬ್ಬಂದಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಾಗ…

Read More

ತುಮಕೂರು: ತುಮಕೂರು ನಗರ ವ್ಯಾಪ್ತಿಯಲ್ಲಿ ಅಧಿಕ ಮಳೆಯಿಂದಾಗಿ ರಸ್ತೆಗಳು ಕುಸಿಯುತ್ತಿರುವುದು, ಮನೆಗಳಿಗೆ ನೀರು ನುಗ್ಗುತ್ತಿರುವುದು, ರಾಜಕಾಲುವೆಗಳಲ್ಲಿ ಹೂಳು ತುಂಬಿ ಮಳೆ ನೀರು ಸರಾಗವಾಗಿ ಹರಿಯದೆ ಇರುವುದು, ಕೆರೆ ಕೋಡಿ ಒಡೆದು ರಸ್ತೆಗಳು ಜಲಾವೃತವಾಗಿರುವುದು ಹಾಗೂ ಅಧಿಕ ಮಳೆಯಿಂದಾಗಿ ಪ್ರಾಣಹಾನಿಯಾಗಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡೆಲ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಿಸಿಕೊಂಡು ಇಲಾಖಾ ಮುಖ್ಯಸ್ಥರು ಮುನ್ನೆಚ್ಚರಿಕೆ ವಹಿಸಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತುಮಕೂರು ಮಹಾನಗರಪಾಲಿಕೆ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್, ಸಣ್ಣ ನೀರಾವರಿ ಇಲಾಖೆ, ಅರಣ್ಯ ಇಲಾಖೆ, ಮತ್ತು ರಾಷ್ಟ್ರೀಯ ಹೆದ್ದಾರಿ-4 ತುಮಕೂರು ವಿಭಾಗ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ನೋಡೆಲ್ ಅಧಿಕಾರಿ…

Read More

ತುಮಕೂರು: ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಆಗ್ರಹಿಸಿ ಇಂದು ಅಖಿಲ ಭಾರತ ವೀರಶೈವ, ಲಿಂಗಾಯಿತ ಮಹಾಸಭಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ನಂದಿ ದ್ವಜ, ವೀರಗಾಸೆ ಕಲಾ ಪ್ರದರ್ಶನದ ಜೊತೆಗೆ,ಸಾವಿರಾರು ಸಂಖ್ಯೆಯಲ್ಲಿದ್ದ ಲಿಂಗಾಯಿತ,ವೀರಶೈವ ಸಮುದಾಯದ ಮುಖಂಡರುಗಳು ನಗರದ ಟೌನ್‍ಹಾಲ್ ವೃತ್ತದಿಂದ ಜಿಲ್ಲಾಧಿ ಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ,ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ಪ್ರತಿಭಟನಾನಿರತ ವೀರಶೈವ, ಲಿಂಗಾಯಿತ ಸಮುದಾಯದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕತೊಟ್ಲುಕೆರೆಯ ಶ್ರೀಅಟವಿ ಶಿವಲಿಂಗಸ್ವಾಮೀಜಿ, ಗೊಲ್ಲಹಳ್ಳಿಮಠದ ಶ್ರೀವೀಭವ ವಿದ್ಯಾಶಂಕರ ಸ್ವಾಮೀಜಿ, ಮಾಕನಹಳ್ಳಿ ಮಠದ ಶ್ರೀಗಂಗಾಧರ ಸ್ವಾಮೀಜಿ, ಬೆಳ್ಳಾವಿಯ ಶ್ರೀಕಾರದೇಶ್ವರ ಮಠದ ಶ್ರೀಕಾರದ ವೀರಬಸವಸ್ವಾಮೀಜಿ, ಶ್ರೀರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಹರಳೂರು ಮಠದ ಶ್ರೀ ಚನ್ನಬಸವಸ್ವಾಮೀಜಿಗಳು,ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ವೀರಶೈವ, ಲಿಂಗಾಯಿತರು ಸೇರಿದ್ದಾರೆ.ಆದರೆ ಕೇಂದ್ರದ ಪಟ್ಟಿಯಲ್ಲಿ ಇಲ್ಲ.…

Read More

ತುಮಕೂರು: ದಿನಾಂಕ 18-7-2022ರಂದು ಕರ್ನಾಟಕ ಸರ್ಕಾರವು ಜನನ ಮತ್ತು ಮರಣ ಸಮರ್ಥನಾ ಪತ್ರಗಳನ್ನು ಪಡೆಯಲು ಕಾಯ್ದೆಗೆ ತಿದ್ದುಪಡಿ ತಂದು ಅಧಿಸೂಚನೆ ಹೊರಡಿಸಿದ್ದು ಸದರಿ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಲಯದ ಕಾರ್ಯವ್ಯಾಪ್ತಿಯಿಂದ ಕಂದಾಯ ಇಲಾಖೆಯ ಉಪವಿಭಾಗಾಧಿಕಾರಿಗಳಿಗೆ ಅಧಿಕಾರವನ್ನು ನೀಡಿರುವುದರಿಂದ ಸದರಿ ಕಾಯ್ದೆಯು ಸಾರ್ವಜನಿಕರಿಗೆ ಮತ್ತು ವಕೀಲ ಸಮುದಾಯಕ್ಕೆ ಮಾರಕ ಕಾಯ್ದೆಯಾಗಿರುತ್ತದೆ. ಈಗಾಗಲೇ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಕಂದಾಯ ಪ್ರಕರಣಗಳು ಸಾಕಷ್ಟು ಪ್ರಮಾಣದಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇದ್ದು,ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಬಹಳ ಕಾಲ ವಿಳಂಬವಾಗಿರುತ್ತದೆ. ಸದರಿ ಕಾಯ್ದೆಯು ಜಾರಿಗೊಂಡರೆ ಜನನ ಮತ್ತು ಮರಣ ಸಮರ್ಥನಾ ಪ್ರಮಾಣಪತ್ರ ಪಡೆಯಲು ಸಾಕಷ್ಟು ವಿಳಂಬವಾಗುವುದರ ಜೊತೆಗೆ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಜೊತೆಗೆ ಮಧ್ಯವರ್ತಿಗಳ ಹಾವಳಿಗೆ ಸಾರ್ವಜನಿಕರು ತುತ್ತಾಗುವ ಸಾಧ್ಯತೆ ಹೆಚ್ಚುವುದರ ಜೊತೆಗೆ ಈ ಕಾಯ್ದೆಯು ದುರುಪಯೋಗವಾಗುತ್ತದೆ. ಆದ್ದರಿಂದ ಈ ಕಾಯ್ದೆಗೆ ಸರ್ಕಾರವು ಹಸ್ತಕ್ಷೇಪ ಮಾಡದೇ ಜನನ ಮತ್ತು ಮರಣ ಸಮರ್ಥನಾ ಪ್ರಮಾಣಪತ್ರ ಪಡೆಯಲು ಕಾಯ್ದೆಯ ಕಾರ್ಯವ್ಯಾಪ್ತಿಯನ್ನು ಹಿಂದಿನಂತೆಯೇ ಸಿವಿಲ್ ನ್ಯಾಯಾಲಯದ ವ್ಯಾಪ್ತಿಯಲ್ಲಿಯೇ ಉಳಿಸಿಕೊಂಡು ಈ ಕಾಯ್ದೆಯ ತಿದ್ದುಪಡಿ ಮತ್ತು ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕೆಂದು…

Read More

ತುಮಕೂರು: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಸಮರ್ಥರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ತಾಜುದ್ದೀನ್ ಶರೀಫ್ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಅರಗ ಜ್ಞಾನೇಂದ್ರ ಅವರು ಗೃಹ ಮಂತ್ರಿಯಾದ ನಂತರ ಹಿಂದು, ಮುಸ್ಲಿಂ ಎನ್ನದೆ ಸಾಲು ಸಾಲು ಹೆಣಗಳು ಉರುಳುತ್ತಿವೆ. ಅದರಲ್ಲಿಯೂ ಕುಟುಂಬಕ್ಕೆ ಆಧಾರಸ್ತಂಬವಾಗಿದ್ದ ಹದಿ ಹರೆಯದ ಯುವಕರು ಕೊಲೆಗೀಡಾಡುತ್ತಿರುವುದು ತುಂಬಾ ಆತಂಕಕಾರಿ ವಿಚಾರವಾಗಿದೆ. ಈ ಹಿಂದಿನ ಘಟನೆಗಳಲ್ಲಿ ಸರಿಯಾದ ಕ್ರಮವನ್ನು ತೆಗೆದುಕೊಂಡಿದ್ದರೆ, ಇಂದು ಬೆಳ್ಳಾರದಲ್ಲಿ ಎರಡು ಹೆಣಗಳು ಬೀಳುತ್ತಿರಲಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಜವಾಬ್ದಾರಿ ನಿಭಾಯಿಸಲು ಅಸಮರ್ಥರಾಗಿದ್ದಾರೆ ಎಂಬುದನ್ನು ಈ ಎರಡು ಘಟನೆಗಳು ಮತ್ತೆ ಸಾಬೀತು ಪಡಿಸಿವೆ.ಮÀುತ್ತಷ್ಟು ಯುವಕರ ಹತ್ಯೆ ಆಗುವುದಕ್ಕೂ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದು ವೆಲ್ಪೇರ್ ಪಾರ್ಟಿ ಅಪ್ ಇಂಡಿಯಾದ ಒತ್ತಾಯವಾಗಿದೆ ಎಂದು ತಾಜುದ್ದೀನ್ ಷರೀಫ್ ತಿಳಿಸಿದ್ದಾರೆ. ಯುವಕರಿಗೆ ಪ್ರಚೋದನಕಾರಿ ಭಾಷಣದ ಮೂಲಕ…

Read More

ತುಮಕೂರು: 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಭಾರತದ ಪ್ರಜೆಗಳಾದ ನಾವೆಲ್ಲರೂ ಒಗ್ಗೂಡಿ ರಾಷ್ಟ್ರಪ್ರೇಮ ಮತ್ತು ರಾಷ್ಟ್ರಭಕ್ತಿಯನ್ನು ಬಿಂಬಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಕರೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಎಲ್ಲರೂ ಸೇರಿ ಒಳ್ಳೆಯ ರೀತಿಯಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಚರಿಸೋಣ ಎಂದು ಅಧಿಕಾರಿಗಳಿಗೆ ತಿಳಿಸಿದರು. ಅಂದು ನಗರದ ಪ್ರಮುಖ ವೃತ್ತಗಳಲ್ಲಿ ರಾಷ್ಟ್ರಧ್ವಜ, ದೀಪಾಲಂಕಾರ, ಬಾಳೆಕಂದು, ತಳಿರು ತೋರಣ, ದೇಶಭಕ್ತಿ ಗೀತೆಗಳನ್ನು ಎಲ್ಲರಿಗೂ ಕೇಳಿಸುವ ಮೂಲಕ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದು ತಿಳಿಸಿದರು. ಸಂಜೆ ಸಾಂಸ್ಕøತಿಕ ಕಾರ್ಯಕ್ರದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದ ಅವರು, ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಹ್ವಾನಿತರಿಗೆ ವೇದಿಕೆ ವ್ಯವಸ್ಥೆಯನ್ನು…

Read More